ಲೇಖಕ: admin

ಮಡಿಕೇರಿ ಏ.25 NEWS DESK : ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಡಾ.ರಾಜ್‍ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ  ಸರಳವಾಗಿ ನಡೆಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಮಡ್ಲೂರು ಅವರು ಡಾ.ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳಾದ ದೇವಕಿ, ಪ್ರೀತಂ ಇದ್ದರು.

Read More

ಮಡಿಕೇರಿ ಏ.24 NEWS DESK : ಜಾತ್ಯತೀತ ಜನತಾದಳದ ರಾಜ್ಯ ಉಪಾಧ್ಯಕ್ಷ ಹಾಗೂ ಖ್ಯಾತ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ಅವರು ಇಂದು ತಮ್ಮ ಬೆಂಬಲಗರೊAದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಿರಾಜಪೇಟೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಮ್ಮುಖದಲ್ಲಿ ಮನೋಜ್ ಬೋಪಯ್ಯ ಅವರು ತಮ್ಮ ಪುತ್ರ ಅನೀಶ್ ಹಾಗೂ ವಕೀಲ ಸ್ನೇಹಿತರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಕಾಂಗ್ರೆಸ್ ಶಲ್ಯವನ್ನು ನೀಡಿ ಬರಮಾಡಿಕೊಂಡ ಪೊನ್ನಣ್ಣ ಅವರು ಮನೋಜ್ ಬೋಪಯ್ಯರಿಗೆ ಶುಭ ಕೋರಿದರು. ಈ ಸಂದರ್ಭ ಮಾತನಾಡಿದ ಡಾ.ಯಾಲದಾಳು ಮನೋಜ್ ಬೋಪಯ್ಯ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳು ಸಿಗಲಿದೆ, ಪೊನ್ನಣ್ಣ ಅವರು ಸಚಿವರಾಗಬೇಕು ಮತ್ತು ರಾಜಕೀಯವಾಗಿ ಬೆಳೆಯಬೇಕು ಎನ್ನುವ ಉದ್ದೇಶದಿಂದ ಅವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡಿರ ಪವನ್ ಪೆಮ್ಮಯ್ಯ ಸೇರಿದಂತೆ ವಿರಾಜಪೇಟೆ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.24 NEWS DESK : ಖಾಸಗಿ ಬಸ್ ಮತ್ತು ಕಾರೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಡಿಕೇರಿ ಸಮೀಪ ಮೇಕೇರಿ ಗ್ರಾಮದಲ್ಲಿ ನಡೆದಿದೆ. ಮಡಿಕೇರಿಯಿಂದ ಮೂರ್ನಾಡಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ವಿರಾಜಪೇಟೆ ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಸಂದರ್ಭ ಕಾರು ಚಾಲಕ, ಮೂಲತಃ ವಿರಾಜಪೇಟೆ ಸಮೀಪದ ಪೆರುಂಬಾಡಿ ಗ್ರಾಮದ ಅಶ್ವತ್ಥ್ ಎಂಬವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಏ.24 NEWS DESK : ಪ್ರತಿಷ್ಠಿತ ಮೈಸೂರು-ಕೊಡಗು ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ, ಬಿಜೆಪಿ ಅಭ್ಯರ್ಥಿ ಯದುವೀರ್ ಅವರ ‘ರೋಡ್ ಶೋ’ ನಡೆಯಿತು. ಬಿಜೆಪಿಯ ತಾರಾ ಪ್ರಚಾರಕಿ ಸಿನಿಮಾ ನಟಿ ತಾರಾ ಅನುರಾಧ ಹಾಗೂ ಜಿಲ್ಲೆಯ ಬಿಜೆಪಿ ಮುಖಂಡರು ಪಾಲ್ಗೊಂಡು ಬಿಜೆಪಿ ಪರ ಮತಯಾಚಿಸಿದರು. ನಗರದ ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಯದುವೀರ್ ಅವರು ಪಕ್ಷದ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ರೋಡ್ ಶೋ ನಡೆಸಿದರು. ಶ್ರೀಚೌಡೇಶ್ವರಿ ದೇವಾಲಯದಿಂದ ಆರಂಭಗೊಂಡ ಮೆರವಣಿಗೆ, ಮಹದೇವಪೇಟೆ, ಹಳೆಯ ಖಾಸಗಿ ಬಸ್ ನಿಲ್ದಾಣವನ್ನು ಹಾದು ಕೋಟೆಯ ಮುಖ್ಯ ಬೀದಿಗಳಲ್ಲಿ ಸಾಗಿತು. ರೋಡ್ ಶೋ ಆರಂಭಕ್ಕೂ ಮೊದಲು ತಾರಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಪರವಾಗಿ ರಾಜ್ಯ ಮತ್ತು ದೇಶದಲ್ಲಿ ಉತ್ತಮ ವಾತಾವರಣವಿದೆ. ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರ ಬಗ್ಗೆ ಕ್ಷೇತ್ರದಾದ್ಯಂತ ಜನರ ಒಲವು ಕಂಡು ಬರುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಹಿಂದಿನಿಂದಲು ಮೈಸೂರು ರಾಜವಂಶಸ್ಥರು ಮತ್ತು…

Read More

ಮಡಿಕೇರಿ ಏ.24 NEWS DESK : ಯಾವುದೇ ರಾಜಕೀಯ ಪಕ್ಷಗಳು ಅಥವಾ ವ್ಯಕ್ತಿಗಳು ಚುನಾವಣೆ ಪ್ರಚಾರ ಕೈಗೊಳ್ಳುವ ಸಂದರ್ಭ ಮತದಾನ ಮಾಡುವ ಸಲುವಾಗಿ ಹಣ ಅಥವಾ ಇತರೇ ವಸ್ತುಗಳನ್ನು ಹಂಚುತ್ತಿರುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300 ಮತ್ತು 9480804900 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸುವಂತೆ ಎಸ್‍ಪಿ ರಾಮರಾಜನ್ ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read More

ಮಡಿಕೇರಿ ಏ.24 NEWS DESK : ಚುನಾವಣಾ ಮತದಾನದ ಸಂದರ್ಭ ಸಾರ್ವಜನಿಕರೊಂದಿಗೆ ಅತ್ಯಂತ ಸೌಜನ್ಯಯುತವಾಗಿ ವರ್ತಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಗಳಿಂದ ಚುನಾವಣಾ ಸಂದರ್ಭ ತೊಂದರೆಯಾಗ ಕೂಡದೆಂದು ಸ್ಪಷ್ಟಪಡಿಸಿ, ಜಿಲ್ಲೆಯ ಜನತೆ ಶಿಕ್ಷಣವಂತರು ಮತ್ತು ಸೌಜನ್ಯಪರರು ಹೌದು. ಇವರೊಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯುಕ್ತರಾದ ಪೊಲೀಸ್ ಸಿಬ್ಬಂದಿಗಳು ಗೌರವಯುತವಾಗಿ ನಡೆದುಕೊಳ್ಳಬೇಕೆಂದು ಸ್ಪಷ್ಟಪಡಿಸಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯ ಸಮಸ್ಯೆಗಳಿಗೆ ನಾವು ಸ್ಪಂದಿಸುತ್ತೇವೆ. ಆದರೆ, ನಿಮ್ಮಿಂದ ಯಾವುದೇ ತೊಂದರೆಗಳು ಉಂಟಾಗಕೂಡದು. ಆ ರೀತಿಯಲ್ಲಿ ಕಾನೂನಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

Read More

ಮಡಿಕೇರಿ ಏ.24 NEWS DESK : ಲೋಕಸಭಾ ಚುನಾವಣೆಯನ್ನು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸಲು ಕೊಡಗು ಜಿಲ್ಲಾ ವ್ಯಾಪಿ 1600 ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯುಕ್ತರಾದ ಪೊಲೀಸ್ ಸಿಬ್ಬಂದಿಗಳಿಗೆ, ಚುನಾವಣಾ ಸಂದರ್ಭ ಕರ್ತವ್ಯ ನಿರ್ವಹಿಸುವ ಬಗ್ಗೆ ಅಗತ್ಯ ಮಾಹಿತಿಗಳನ್ನು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬವಾಗಿದ್ದು, ಇದನ್ನು ಅತ್ಯಂತ ಶಾಂತಿಯುತವಾಗಿ ನಡೆಸುವುದಕ್ಕೆ ನಡೆಸುವುದಕ್ಕೆ ಪೂರಕವಾಗಿ ಈ ಬಾರಿ ಒಬ್ಬರು ಎಸ್‍ಪಿ, ಆರು ಡಿವೈಎಸ್‍ಪಿ, 14, ವೃತ್ತ ನಿರೀಕ್ಷಕರು, 45 ಎಸ್‍ಐ, 59 ಎಎಸ್‍ಐ, 678 ಸಿಬ್ಬಂದಿಗಳು, 280 ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು. ::: ಗುಜರಾತ್ ಪೊಲೀಸರ ನೆರವು ::: ಈ ಬಾರಿ ಗುಜರಾತ್‍ನ 2 ಕಂಪೆನಿ (180 ಮಂದಿ) ಪಲೀಸ್ ಸಿಬ್ಬಂದಿಗಳನ್ನು, 8 ಕೆಎಸ್‌ಆರ್‌ಪಿ, ಜಿಲ್ಲಾ ಸಶಸ್ತ್ರ ಪೊಲೀಸ್ ದಳವನ್ನು ಬಂದೋಬಸ್ತ್ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು…

Read More

ವಿರಾಜಪೇಟೆ ಏ.24 NEWS DESK : ಮೈಸೂರು ನಾರಾಯಣ ಆಸ್ಪತ್ರೆ ವತಿಯಿಂದ ವಿರಾಜಪೇಟೆಯ ಕ್ರೆಡೋ ಮೆಡಿಕಲ್ ಕೇಂದ್ರದಲ್ಲಿ 24*7 ಮೀಸಲಾದ ಆ್ಯಂಬುಲೆನ್ಸ್ ಸೇವೆಯೊಂದಿಗೆ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಮತ್ತು ತುರ್ತು ವೈದ್ಯಕೀಯ ಸೇವೆಗಳಿಗೆ ಚಾಲನೆ ನೀಡಲಾಯಿತು. ಮೈಸೂರಿನ ನಾರಾಯಣ ಆಸ್ಪತ್ರೆಯಲ್ಲಿ ಕಾರ್ಡಿಯಾಲಜಿ ಸೇವೆಗಳು ಮತ್ತು ಕ್ಲಿನಿಕಲ್ ಅಲಯನ್ಸ್ನ ನಿರ್ದೇಶಕರಾದ ಡಾ. ವಿ.ಕೇಶವಮೂರ್ತಿ, ವಿರಾಜಪೇಟೆ ನಗರ ಠಾಣಾಧಿಕಾರಿ ರವೀಂದ್ರ, ಕ್ರೆಡೋ ಮೆಡಿಕಲ್ ಸೆಂಟರ್ನ ಡಾ. ಕಟ್ಟೇರ ಪೂಣಚ್ಚ ವೈದ್ಯಕೀಯ ಸೇವೆಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರಿನ ನಾರಾಯಣ ಆಸ್ಪತ್ರೆಯ ಕಾರ್ಡಿಯಾಲಜಿ ಸೇವೆಗಳು ಮತ್ತು ಕ್ಲಿನಿಕಲ್ ಅಲಯನ್ಸ್ ನಿರ್ದೇಶಕ ಡಾ.ಕೇಶವಮೂರ್ತಿ, ವಿರಾಜಪೇಟೆಯಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಲಭ್ಯವಾಗುವಂತೆ ಮಾಡುವ ನಮ್ಮ ಬದ್ಧತೆಯನ್ನು ಈ ಹೊಸ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಹೊಸದಾಗಿ ಪ್ರಾರಂಭಿಸಲಾದ ತುರ್ತು ವೈದ್ಯಕೀಯ ಸೇವಾ ಕೇಂದ್ರವು ಅಗತ್ಯ ತುರ್ತು ಸೇವೆಗಳನ್ನು ಒದಗಿಸುತ್ತದೆ ಮತ್ತು ತುರ್ತು ಪರಿಸ್ಥಿತಿಗಳಿಗಾಗಿ 24/7 ಆಂಬ್ಯುಲೆನ್ಸ್ ಸೇವೆಯನ್ನು ಒದಗಿಸುತ್ತದೆ, ಈ ಸೇವೆಯಿಂದ ಜೀವ ಉಳಿಸುವ ಚಿಕಿತ್ಸೆಗಳಿಗಾಗಿ…

Read More

ಮಡಿಕೇರಿ ಏ.24 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಏ.26 ರಿಂದ ಮೇ 3ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಅಬೂಬಕ್ಕರ್ ಸಖಾಫಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯಿದ್ ಹಸನ್ ಸಖಾಫ್ ಅಲ್ ಹಳ್ರಮಿ(ರ) ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಎಮ್ಮೆಮಾಡಿನಲ್ಲಿ ವರ್ಷಂಪ್ರತಿ ನಡೆಯುವ ವಾರ್ಷಿಕ ಉರೂಸ್ ಸಮಾರಂಭದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆಯನ್ನು ಅನುಸರಿಸಲಾಗುವುದೆಂದು ಹೇಳಿದರು. ಏ.26 ರಂದು ಬೆಳ್ತಂಗಡಿ ದಾರುಸ್ಸಲಾಂ ಚೇರ್ಮೆನ್ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಅವರ ನೇತೃತ್ವದಲ್ಲಿ ಮಖಾಂ ಝಿಯಾರತ್ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಅಬೂಬಕ್ಕರ್ ಸಖಾಫಿ ಧ್ವಜಾರೋಗಣದ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ರಾತ್ರಿ 8 ಗಂಟೆಗೆ ಕೊಡಗು ನಾಇಬ್ ಖಾಝಿ ಅಬ್ದುಲ್ಲ…

Read More

ಮಡಿಕೇರಿ ಏ.24 NEWS DESK : ಗ್ಯಾರಂಟಿ ಯೋಜನೆಗಳು ಕೆಲವೇ ತಿಂಗಳಿನಲ್ಲಿ ಸ್ಥಗಿತಗೊಳ್ಳಲಿದ್ದು, ಯಾರು ಕೂಡ ಗ್ಯಾರಂಟಿ ಯೋಜನೆಗಳಿಗೆ ಮರುಳಾಗಬೇಡಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಹೇಳಿದರು. ಕೊಡಗು ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚದಿಂದ ವಿರಾಜಪೇಟೆ ಕ್ಷೇತ್ರದ ತಿತಿಮತಿ, ಗಂಧದ ಕಾಡು, ಚೆನ್ನಯ್ಯನ ಕೋಟೆ ಪರಿಶಿಷ್ಟ ಜಾತಿಯ ಕಾಲೋನಿಗಳಿಗೆ ಭೇಟಿ ನೀಡಿದ ಶ್ರೀನಿವಾಸ್, ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದ ಭದ್ರತೆಗಾಗಿ ಮತ್ತು ಎಲ್ಲ ವರ್ಗದ ಕಲ್ಯಾಣಕ್ಕಾಗಿ ಮೋದಿ ಸರ್ಕಾರವು ಹಲವಾರು ಶಾಶ್ವತ ಯೋಜನೆಗಳನ್ನು ತಂದಿದ್ದು, ಅದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಪರಿಶಿಷ್ಟ ಜನಾಂಗದ ಏಳಿಗೆಗೆ ಹಲವಾರು ಯೋಜನೆಗಳಿದ್ದು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ತಾವುಗಳು ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ತಿಳಿಸಿದರು. ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾದ ಅಧ್ಯಕ್ಷ ಪಿ.ಎಂ.ರವಿ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದು, ನಮ್ಮ ಸಮುದಾಯದಲ್ಲಿ ಇತ್ತೀಚಿನ ದಿನದಲ್ಲಿ ಎಲ್ಲರೂ ವಿದ್ಯಾವಂತರಾಗಿದ್ದಾರೆ. ನಾವು ದೇಶದ ಸುಭದ್ರತೆಗೆ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು. ರಾಜಕೀಯದಲ್ಲಿ ನಾವುಗಳು ಬೆಳೆಯಬೇಕೆಂದರೆ ಬಿಜೆಪಿ…

Read More