ಮಡಿಕೇರಿ ಏ.24 NEWS DESK : ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ನಡೆದ ಅಪಘಾತದ ಪ್ರಕರಣದ ವಿಚಾರದಲ್ಲಿ ಮಡಿಕೇರಿ ಕ್ಷೇತ್ರದಸ ಶಾಸಕರ ಹೆಸರನ್ನು ಎಳೆದು ತರುವ ಮೂಲಕ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ದುರುದ್ದೇಶಪೂರಿತ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್ ಸುಂಟಿಕೊಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗದ್ದೆಹಳ್ಳದಲ್ಲಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡಿದ್ದಾರೆಯೇ ಹೊರತು ಯಾವುದೇ ರೀತಿಯಲ್ಲಿ ಕರ್ತವ್ಯಲೋಪ ಮಾಡಿಲ್ಲ. ಮಡಿಕೇರಿ ಶಾಸಕರು ಕಾನೂನು ಏನು ಹೇಳುತ್ತದೆ ಅದನ್ನು ಮಾಡಿ ಎಂದು ಕಾನೂನಿಗೆ ಗೌರವ ನೀಡಿ ಮಾತನಾಡಿದ್ದಾರೆಯೇ ಹೊರತು ಎಲ್ಲೂ ತಪ್ಪಾಗಿ ನಡೆದುಕೊಂಡಿಲ್ಲವೆಂದು ಸ್ಪಷ್ಟಪಡಿಸಿದರು. ಪ್ರತಿ ಚುನಾವಣೆ ಸಂದರ್ಭ ಎಸ್ಡಿಪಿಐ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಅಪಘಾತ ನಡೆದ ಸಂದರ್ಭ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳಾದ ನಮಗೆ ಸತ್ಯ ಏನು ಎನ್ನುವುದು ತಿಳಿದಿದೆ. ವಿನಾಕಾರಣ ಪ್ರಚಾರಕ್ಕಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರ ಹಾದಿ ತಪ್ಪಿಸುವುದನ್ನು…
ಲೇಖಕ: admin
ಮಡಿಕೇರಿ ಏ.24 NEWS DESK : ಕಲಬುರ್ಗಿಯಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಮುಸಲ್ಮಾನರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರಿಗೆ ದೂರು ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಎಂ.ಎ.ಕಲೀಲ್ ಬಾಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ಉಪಾಧ್ಯಕ್ಷ ಎಂ.ಬಿ.ಕೌಸರ್, ಖಜಾಂಚಿ ಎಂ.ಹೆಚ್.ಅಜೀಜ್ ಹಾಗೂ ನಗರ ಸಂಘಟನಾ ಕಾರ್ಯದರ್ಶಿ ಎಂ.ಎಂ.ಅಬ್ದುಲ್ ಅಜೀಜ್ ಅವರುಗಳು ದೂರು ನೀಡಿ ಯತ್ನಾಳ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮುಸ್ಲಿಮರನ್ನು ಕಲ್ಲಿನಿಂದ ಹೊಡೆಯಿರಿ ಎಂದು ಪ್ರಚೋದನಾಕಾರಿ ಭಾಷಣ ಮಾಡಿರುವ ಯತ್ನಾಳ್ ಅವರು ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು…
ಮಡಿಕೇರಿ ಏ.24 NEWS DESK : ಬ್ರೈನೋಬೈನ್ ಇಂಟರ್ನ್ಯಾಷನಲ್ ವತಿಯಿಂದ ದೆಹಲಿಯ ತ್ಯಾಗ ರಾಜ್ ಸ್ಟೇಡಿಯಂನಲ್ಲಿ ನಡೆದ 43ನೇ ರಾಷ್ಟ್ರಮಟ್ಟದ ಬ್ರೈನೋಬೈನ್ ಅಬಕಾಸ್ ಸ್ಪರ್ಧೆ-2024 ರಲ್ಲಿ ಮಡಿಕೇರಿಯ ಬ್ರೈನೋಬೈನ್ ಕೇಂದ್ರದ ನುಷ್ಕಾ ಕಾವೇರಮ್ಮ ಕೊಡಂದೇರ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾಳೆ. ಬ್ರೈನೋಬೈನ್ ಇಂಟರ್ ನ್ಯಾಷನಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಮ್, ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರು ನುಷ್ಕಾಳಿಗೆ ಪದಕ ಪ್ರದಾನ ಮಾಡಿದರು. ನುಷ್ಕಾ ಕೊಡಂದೇರ ಬ್ರೈನೋಬೈನ್ ಮಡಿಕೇರಿ ಕೇಂದ್ರದ ಮುಖ್ಯಸ್ಥರು ಹಾಗೂ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರಿಂದ ತರಬೇತಿ ಪಡೆದಿದ್ದಾಳೆ. ಮೈಸೂರಿನ ಐ ಕೇನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ 6 ವರ್ಷದ ನುಷ್ಕಾ ಕೊಡಂದೇರ ವಿಕ್ರಮ್ ಕುಟ್ಟಯ್ಯ ಹಾಗೂ ಕಾವ್ಯ ದಂಪತಿ ಪುತ್ರಿ. ಚಾಂಪಿಯನ್ ಟ್ರೋಫಿ ಗಳಿಸಿರುವ ವಿದ್ಯಾರ್ಥಿನಿಯ ಸಾಧನೆ ಅಮೋಘ ಎಂದು ಹರ್ಷ ವ್ಯಕ್ತಪಡಿಸಿರುವ ಕವಿತಾ ಕರುಂಬಯ್ಯ ಅವರು, ವಿದ್ಯಾರ್ಥಿನಿಯ ಸಾಧನೆಯ ಹೆಗ್ಗಳಿಕೆ ಪೋಷಕರಿಗೆ ಸಲ್ಲಬೇಕು ಎಂದು ಹೇಳಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ದೇಶದ…
ಮಡಿಕೇರಿ ಏ.24 NEWS DESK : ವಿರಾಜಪೇಟೆಯ ತೋರ ಗ್ರಾಮದಲ್ಲಿ ಹಾಕಿ ಮೈದಾನಕ್ಕಾಗಿ ಸುಮಾರು ಐದೂವರೆ ಎಕರೆ ಭೂಮಿ ಕಾಯ್ದಿರಿಸಿ ಮಂಜೂರಾತಿಗಾಗಿ ಸಹಕಾರ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೊಡವ ಹಾಕಿ ಹಾಕಿ ಅಕಾಡೆಮಿ ಸನ್ಮಾನಿಸಿ ಗೌರವಿಸಿತು ವಿರಾಜಪೇಟೆಯಲ್ಲಿ ಶಾಸಕರ ಗೃಹ ಕಚೇರಿಯಲ್ಲಿ ಭೇಟಿಯಾದ ಹಾಕಿ ಅಕಾಡೆಮಿ ಪ್ರಮುಖರು ಪೊನ್ನಣ್ಣ ಅವರಿಗೆ ಧನ್ಯವಾದ ಪತ್ರ ಸಲ್ಲಿಸಿ ಅಭಿನಂದಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೊಡಗಿನ ಕ್ರೀಡಾ ಪ್ರತಿಭೆಗಳು ಐದೂವರೆ ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುವ ಮೈದಾನದ ಸದುಪಯೋಗ ಪಡೆದುಕೊಂಡು ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಲಿ ಎಂದು ಶುಭ ಹಾರೈಸಿದರು. ಕೊಡವ ಹಾಕಿ ಅಕಾಡೆಮಿಯ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರು ಮಾತನಾಡಿ 1997 ರಲ್ಲಿ ಸ್ಥಾಪಿಸಲ್ಪಟ್ಟ ಕೊಡವ ಹಾಕಿ ಅಕಾಡೆಮಿ ಸಾವಿರಾರು ಹಾಕಿ ಪ್ರತಿಭೆಗಳನ್ನು ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡುವಲ್ಲಿ ಯಶಸ್ವಿಯಾಗಿದೆ…
ಮಡಿಕೇರಿ ಏ.24 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರು ಕೊಡಗು ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಅರಿತಿದ್ದು, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಗುಣ ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಇವರ ಗೆಲುವು ನಿಶ್ಚಿತವಾಗಿದೆ ಎಂದು ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನಸಾಮಾನ್ಯರೊಂದಿಗೆ ಬೆರೆತು ಕಷ್ಟಗಳನ್ನು ಅರಿಯುವ ಮತ್ತು ಸುಲಭವಾಗಿ ಸಿಗಬಲ್ಲ ಸಂಸದರೊಬ್ಬರು ಕೊಡಗು ಜಿಲ್ಲೆಗೆ ಬೇಕಾಗಿದ್ದಾರೆ. ಈ ಗುಣವನ್ನು ಜಿಲ್ಲೆಯ ಜನ ಲಕ್ಷ್ಮಣ್ ವರಲ್ಲಿ ಕಂಡಿದ್ದಾರೆ, ಆದ್ದರಿಂದ ಅತ್ಯಧಿಕ ಮತಗಳು ಅವರ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಲಕ್ಷ್ಮಣ್ ಅವರು ಕೊಡಗಿನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದೀಗ ಇಬ್ಬರು ಶಾಸಕರೊಂದಿಗೆ ಸಮನ್ವಯತೆಯನ್ನು ಕಾಯ್ದುಕೊಂಡಿದ್ದು, ಸಂಸದರಾಗಿ ಆಯ್ಕೆಯಾದರೆ ಜಿಲ್ಲೆ ಮತ್ತಷ್ಟು ಪ್ರಗತಿಯನ್ನು ಸಾಧಿಸಲಿದೆ ಎಂದು ತಿಳಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ,…
ಮಡಿಕೇರಿ NEWS DESK ಏ.24 : ಸ್ವಾಮಿ ವಿವೇಕಾನಂದ ಯುವಕ ಸಂಘ ಮತ್ತು ಜಂಕ್ಷನ್ ರಾಯಲ್ ಕೊಂಡಂಗೇರಿ ಆಶ್ರಯದಲ್ಲಿ ಏ.27 ರಿಂದ ಮೇ 1ರ ವರೆಗೆ 13ನೇ ವರ್ಷದ ಕೊಂಡಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಕೊಂಡಂಗೇರಿ ಶಾಲಾ ಮೈದಾನದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ 33,333, ದ್ವಿತೀಯ ಬಹುಮಾನ 22,222 ,ತೃತೀಯ ಮತ್ತು 4ನೇ ಬಹುಮಾನ ಆಕರ್ಷಕ ಟ್ರೋಫಿ ನೀಡಲಾಗುವುದೆಂದು ಆಯೋಜಕರು ತಿಳಿಸಿದ್ದಾರೆ. ಅದಲ್ಲದೇ ವಿವಿಧ ಕ್ರೀಡಾ ಮತ್ತು ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದೆಂದು ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9535782783,966338006, 87626743996 ಸಂಪರ್ಕಿಸಬಹುದು.
ಮಡಿಕೇರಿ ಏ.24 NEWS DESK : ಮತದಾನ ನಮ್ಮ ಹಕ್ಕು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುಖ ಅಂಶವಾಗಿದೆ. ಆದ್ದರಿಂದ ಏ.26 ರಂದು ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸುವ ಮೂಲಕ ತಮ್ಮ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕೆಂದು ಮದನೀಸ್ ಅಸೋಸಿಯೇಷನ್ ನ ಕೊಡಗು ಜಿಲ್ಲಾಧ್ಯಕ್ಷ ಹಮೀದ್ ಮದನಿ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಂಪರಾಗತ ಜಾತ್ಯಾತೀತ, ಸೌಹಾರ್ಧಯುತ ಭಾರತವೇ ನಮ್ಮ ಗುರಿ. ಜಾತ್ಯಾತೀತ ಮನೋಭಾವವುಳ್ಳ ಪಕ್ಷಗಳನ್ನು ಮತ್ತು ವ್ಯಕ್ತಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಆಡಳಿತವನ್ನು ಅಸ್ತಿತ್ವಕ್ಕೆ ತರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆೆ. ಆದ್ದರಿಂದ ಚುನಾವಣಾ ದಿನದಂದು ಎಲ್ಲಾ ಕಾರ್ಯಗಳನ್ನು ಬದಿಗಿಟ್ಟು ಮತದಾನ ಮಾಡಲು ಪ್ರತಿಜ್ಞಾಬದ್ಧರಾಗಬೇಕು ಎಂದು ತಿಳಿಸಿದ್ದಾರೆ.
ಮಡಿಕೇರಿ ಏ.24 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿ, ಕುಶಾಲನಗರ ಸೇರಿದಂತೆ ಕೊಡಗಿನ ವಿವಿಧೆಡೆ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಯಿತು. ಮಡಿಕೇರಿ ನನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಪೊಲೀಸ್ ಉಪವಿಭಾಗ, ಜಿಲ್ಲಾ ಶಸಸ್ತ್ರ ದಳ(ಡಿ.ಎ.ಆರ್) ಗುಜರಾತ್ ರಿಸರ್ವ್ ಫೋರ್ಸ್ ಸಿಬ್ಬಂದಿಗಳು ಶಸ್ತ್ರಸಜ್ಜಿತರಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಸ್ಥೈರ್ಯ ತುಂಬಿದರು. ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಮಡಿಕೇರಿ ಡಿ.ವೈ.ಎಸ್.ಪಿ.ಮಹೇಶ್, ನಗರ ವೃತ್ತ ನಿರೀಕ್ಷಕ ಪಿ.ಕೆ.ರಾಜು, ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜು, ಸೆನ್ ಸ್ಟೇಷನ್ ಇನ್ಸ್ಪೆಕ್ಟರ್ ಶ್ರೀಕಾಂತ್, ಗ್ರಾಮಾಂತರ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಡಿಎಆರ್ ಇನ್ಸ್ಪೆಕ್ಟರ್ ಚನ್ನನಾಯಕ ಸೇರಿದಂತೆ ಇನ್ನಿತರರು ಹಾಜರಿದ್ದರು. ಕುಶಾಲನಗರ ಬೈಚನಹಳ್ಳಿ ಪೆಟ್ರೋಲ್ ಬಂಕ್ ಬಳಿಯಿಂದ ಹೊರಟ ಪಥ ಸಂಚಲನಕ್ಕೆ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ರಾಜ್ ಚಾಲನೆ ನೀಡಿದರು. ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ನೇತೃತ್ವದಲ್ಲಿ ಏಳು ಮಂದಿ ಇನ್ಸ್ಪೆಕ್ಟರ್ಗಳು, ಉಪ…
ನಾಪೋಕ್ಲು ಏ.24 NEWS DESK : ಬೇಂಗೂರು ಗ್ರಾಮದ ಶ್ರೀ ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಅರ್ಚಕ ರಾಧಾಕೃಷ್ಣ ಭಟ್ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಕಳತೂರು ವೇದಮೂರ್ತಿ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ರಂಜಾಳ ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಿತು. ಪ್ರತಿಷ್ಠಾಪನೆಯ ಬಳಿಕ ಮಧ್ಯಾಹ್ನ ಹೂವಿನಿಂದ ಅಲಂಕೃತ ದೇವರ ಬಿಂಬಕ್ಕೆ ವಿಶೇಷ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ತೇಲಪಂಡ ನಂದ ಮಂದಣ್ಣ, ಉಪಾಧ್ಯಕ್ಷ ಕುಂಚೆಟ್ಟಿರ ಸುಬ್ಬಯ್ಯ, ಕಾರ್ಯದರ್ಶಿ ಕುಂಚೆಟ್ಟಿರ ಗೋಪಾಲ,ಖಜಾಂಚಿ ಪಟ್ಟಮಾಡ ಅಶೋಕ್, ಸದಸ್ಯರಾದ ಕಲ್ಲು ಮಾಡಂಡ ವಾಸು, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕಲ್ಲು ಮಾಡಂಡ ಅಶೋಕ್, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕೀಪಾಡಂಡ ವಾಸು, ಬೊಳ್ಳಾರ್ಪಂಡ ಚಂಗಪ್ಪ, ತಕ್ಕಮುಖ್ಯಸ್ಥರು, ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು…
ನಾಪೋಕ್ಲು ಏ.23 NEWS DESK : ಜೀವನದಲ್ಲಿ ನಾವು ಸುಖ, ಶಾಂತಿ, ನೆಮ್ಮದಿಯನ್ನು ಬಯಸುತ್ತೇವೆ. ನಾವು ಬಯಸಿದ ಕ್ಷಣ ಎಲ್ಲವೂ ನಮ್ಮ ಬಳಿಗೆ ಬರುವುದಿಲ್ಲ. ಅವುಗಳನ್ನು ಪಡೆಯಲು ಸತತ ಶ್ರಮಬೇಕು. ಶ್ರಮದ ಜೊತೆಗೆ ದೇವರ ಅನುಗ್ರಹ ಇದ್ದರಷ್ಟೇ ಸುಖ, ಶಾಂತಿ, ನೆಮ್ಮದಿಯನ್ನು ಗಳಿಸಲು ಸಾಧ್ಯ ಎಂದು ಉಡುಪಿ ಪೇಜಾವರ ಅದೋಕ್ಷಜ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಬೇಂಗೂರು ಗ್ರಾಮದ ಶ್ರೀ ನಾಡುಕಡಪಾಲಪ್ಪ ದೇವಾಲಯದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಆಶೀರ್ವಚನ ನೀಡಿದರು. ದೇವರು ಗುಡಿಯಲ್ಲಿ ಮಾತ್ರ ನೆಲೆಸಿರುವುದಲ್ಲ. ಸಮಾಜದ ಎಲ್ಲರ ಹೃದಯದಲ್ಲೂ ನೆಲೆಸಿದ್ದಾರೆ. ಬದುಕಿಗಾಗಿ ನಾವು ಒಂದು ಬುತ್ತಿಯನ್ನು ಆಯ್ದುಕೊಂಡಿರುತ್ತೇವೆ. ಅದು ಬರೀ ಹಣ ಸಂಪಾದನೆಗಾಗಿ ಮಾತ್ರ ಅಲ್ಲ. ಆ ವೃತ್ತಿಯ ಮೂಲಕ ಸಮಾಜದ ಸೇವೆ ಮಾಡುತ್ತಿದ್ದೇವೆ ಎನ್ನುವ ಅರಿವು ನಮ್ಮಲ್ಲಿದ್ದರೆ ವೃತ್ತಿಗೆ ಗೌರವವಿರುತ್ತದೆ. ವೃತ್ತಿಯಲ್ಲಿ ಮೋಸ, ಅವ್ಯವಹಾರಕ್ಕೆ ಎಡೆ ಇರಬಾರದು, ಮೋಸ ಅವ್ಯವಹಾರ ರಹಿತವೃತ್ತಿಯೇ ದೇವರ ಪೂಜೆ. ಭಗವಂತನ ಆರಾಧನೆ ಎಂಬುದು…






