ಪುತ್ತೂರು ಡಿ.16 NEWS DESK : ಪುತ್ತೂರು ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ಅವರು ಉತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ವಜ್ರಾಭರಣಗಳನ್ನು ಖರೀದಿಸುವುದು ಮತ್ತು ಧರಿಸುವುದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ವಜ್ರವು ಕೇವಲ ಒಂದು ಕಲ್ಲಲ್ಲ: ಅದು ಶುದ್ಧತೆ, ಶಕ್ತಿ, ಪ್ರೇಮ ಮತ್ತು ವಿಶ್ವಾಸದ ಸಂಕೇತವಾಗಿದೆ. ಜಿ.ಎಲ್ ಆಚಾರ್ಯ ಸಂಸ್ಥೆಯು ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ವೈವಿಧ್ಯಮಯ ವಿನ್ಯಾಸಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದೆ,” ವಜ್ರಗಳಲ್ಲಿ ಎರಡು ವಿಧಗಳಿವೆ ಜಿ.ಎಲ್ ನಲ್ಲಿ ಮಾರಟವಾಗೋದು ಪ್ರಕೃತಿಯಲ್ಲಿ ಸಿಗುವ ನೈಜ ವಜ್ರ ಅದರ ಮೌಲ್ಯ ಏರುತ್ತಲೇ ಇದೆ; ನನ್ನ ತಾಯಿ ಮದುವೆಗೆ ಮೊದಲು ಜಿ.ಎಲ್ ನಲ್ಲಿ ಖರೀದಿಸಿದ ಉಂಗುರವನ್ನು ಇವತ್ತೂ ಬದಲಿಸಲು ಬಿಡುವುದಿಲ್ಲ ಅದಕ್ಕೆ ಕಾರಣ ಇಲ್ಲಿಯ ಪ್ಯೂರಿಟಿ ಎಂದು ಮೆಚ್ಚುಗೆ…
ಲೇಖಕ: admin
ಕುಶಾಲನಗರ ಡಿ.16 NEWS DESK : ಶಿಕ್ಷಣ ಮತ್ತು ಆರೋಗ್ಯ ಇವೆರಡು ದೇಶದ ಅಭಿವೃದ್ದಿಯಲ್ಲಿ ಮಹತ್ವ ಪಾತ್ರ ವಹಿಸುತ್ತವೆ ಎಂದು ಡಾ. ಜಮೀರ್ಅಹಮದ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜ್ಞಾನದಿಂದ ಮಾತ್ರ ವ್ಯಕ್ತಿವಿಕಸನ ಸಾಧ್ಯ, ಸಾಮಾಜಿಕ ಬದ್ಧತೆ ಮತ್ತು ಮಾನವೀಯತೆ ಮೌಲ್ಯಗಳನ್ನು, ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು. ಪ್ಯಾರಾಮೆಡಿಕಲ್ಕೋರ್ಸುಗಳಿಗೆ ಇತ್ತೀಚಿನ ದಿನಗಳಲ್ಲಿ ವಿಪುಲ ಉದ್ಯೋಗಅವಕಾಶಗಳಿವೆ ಎಂದು ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸಾಮಾಜಿಕ ಜಾಲತಾಣಗಳ ಸದ್ಭಳಕೆ ಅಗತ್ಯ ಹಾಗೂ ಅವಶ್ಯತೆಗಳಿಗೆ ಮಾತ್ರ ಬಳಸಿಕೊಳ್ಳುವಂತೆ ತಿಳಿಸಿದ ಅವರು ಉದ್ಯೋಗದಲ್ಲಿ ಆಮಿಷಗಳಿಗೆ ಬಲಿಯಾಗದೆ ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಕಿವಿ ಮಾತು ಹೇಳಿದರು. ಸಮಾರಂಭದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಅತಿಥಿ ಗಣ್ಯರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಅನಿಶಾ…
ಕುಶಾಲನಗರ ಡಿ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ಭಾಷಾ ಅಭಿವೃದ್ಧಿಯೊಂದಿಗೆ ಅನ್ಯಭಾಷಿಕರಿಗೆ ಅರೆ ಭಾಷೆಯನ್ನು ಕಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ಕುಶಾಲನಗರದ ರೈತ ಸಹಕಾರ ಭವನ ಸಭಾಂಗಣದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅದರ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಅರೆಭಾಷೆ ದಿನಾಚರಣೆ -2025 ಮತ್ತು ಅರೆ ಭಾಷೆ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಕಾಡೆಮಿ ಮೂಲಕ ಸಂಸ್ಕೃತಿ ಸಾಹಿತ್ಯ ಸಂಶೋಧನೆ ಕಾರ್ಯಕ್ರಮ ಚಟುವಟಿಕೆಗಳು ನಿರಂತರ ನಡೆಯುತ್ತಿವೆ. ಸಮುದಾಯದ ಪ್ರತಿಯೊಬ್ಬರು ಮಾತೃಭಾಷೆಗೆ ಆದ್ಯತೆ ನೀಡಬೇಕು. ಯುವ ಜನಾಂಗ ಭಾಷಾಜ್ಞಾನ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಗೌಡ ಸಮಾಜ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಸೂದನ ಎಸ್ ಗೋಪಾಲ್, ವ್ಯಾಪ್ತಿಗಳು ಬದಲಾದಂತೆ ಭಾಷೆ ಬದಲಾಗುತ್ತವೆ. ಭಾಷೆ ಸಂಸ್ಕೃತಿಯನ್ನು…
ಮಡಿಕೇರಿ ಡಿ.15 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಚೆಟ್ಟಳ್ಳಿ ಚೇರಳ ಗೌಡ ಸಮಾಜದ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಚೇರಳ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ನಿಡ್ಯಮಲೆ ಜ್ಞಾನೇಶ್ ಅವರು, ಅರೆಭಾಷೆ ಬೆಳೆದು ಬಂದ ದಾರಿ, ಅರೆಭಾಷೆ ಗೌಡರು ಮದುವೆಯ ಶಾಸ್ತ್ರ ಸಂಪ್ರದಾಯಗಳು ಹಾಗೂ ಹುಟ್ಟು-ಸಾವುಗಳಲ್ಲಿ ಮಾಡುವ ಶಾಸ್ತ್ರಗಳ ಬಗ್ಗೆ ವಿವರಿಸಿದರು. ಯುವ ಪೀಳಿಗೆ ನಮ್ಮ ಆಚಾರ ವಿಚಾರಗಳನ್ನು ಮರೆಯದೆ ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಕರ್ನಾಟಕ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಹಿರಿಯರು ಹಾಗೂ ಕಾಫಿ ಬೆಳೆಗಾರರಾದ ಮರದಾಳು ಬಸಪ್ಪ ಮತ್ತು ಪೇರಿಯನ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜದ ಕಾರ್ಯದರ್ಶಿ ಆಜೀರ ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ…
ಮಡಿಕೇರಿ ಡಿ.15 NEWS DESK : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವ ಸ್ಪರ್ಧೆಗಳು ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ, ಸಮೂಹ ಸ್ಪರ್ಧೆಗಳು ಇತ್ತೀಚೆಗೆ ನಗರದ ಗಾಂಧಿ ಭವನದಲ್ಲಿ ನಡೆಸಲಾಗಿತ್ತು. ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ ಸ್ಪರ್ಧೆಯಲ್ಲಿ ಬಾಲ ಪ್ರತಿಭೆ (8 ರಿಂದ 14 ವರ್ಷದೊಳಗಿನವರಲ್ಲಿ)ಯಲ್ಲಿ ಪ್ರಥಮ ಸ್ಥಾನ ಪಡೆದು ಡಿ.22 ರಂದು ಮೈಸೂರಿನ ಕಲಾಮಂದಿರದಲ್ಲಿರುವ ರಂಗಾಯಣದ ಆವರಣದಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿಜೇತರ ವಿವರ ಇಂತಿದೆ. ಕರ್ನಾಟಕ/ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಪ್ರಥಮ ಸ್ಥಾನ ಅಪೇಕ್ಷ ಆರ್.ರೈ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಮಡಿಕೇರಿ ತಂದೆ ರಾಧಕೃಷ್ಣ ರೈ, ಶ್ರೀ ಗಜಾನನ ಸ್ಟೋರ್ಸ್, ಮಲ್ಲಿಕಾರ್ಜುನ ನಗರ, ಮಡಿಕೇರಿ ಕೊಡಗು ಜಿಲ್ಲೆ. ದೂ.ಸಂ. 9480646175. ಶಾಸ್ತ್ರೀಯ ನೃತ್ಯ (ಭರತನಾಟ್ಯ)ದಲ್ಲಿ ಪ್ರಥಮ ಸ್ಥಾನ ಆವಂತಿಕ ಟಿ.ಯು., ಸಂತ ಅನ್ನಮ್ಮ…
ಮಡಿಕೇರಿ ಡಿ.15 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಚೆಟ್ಟಳ್ಳಿ ಚೇರಳ ಗೌಡ ಸಮಾಜದ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಚೇರಳ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ನಿಡ್ಯಮಲೆ ಜ್ಞಾನೇಶ್ ಅವರು, ಅರೆಭಾಷೆ ಬೆಳೆದು ಬಂದ ದಾರಿ, ಅರೆಭಾಷೆ ಗೌಡರು ಮದುವೆಯ ಶಾಸ್ತ್ರ ಸಂಪ್ರದಾಯಗಳು ಹಾಗೂ ಹುಟ್ಟು-ಸಾವುಗಳಲ್ಲಿ ಮಾಡುವ ಶಾಸ್ತ್ರಗಳ ಬಗ್ಗೆ ವಿವರಿಸಿದರು. ಯುವ ಪೀಳಿಗೆ ನಮ್ಮ ಆಚಾರ ವಿಚಾರಗಳನ್ನು ಮರೆಯದೆ ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಕರ್ನಾಟಕ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಹಿರಿಯರು ಹಾಗೂ ಕಾಫಿ ಬೆಳೆಗಾರರಾದ ಮರದಾಳು ಬಸಪ್ಪ ಮತ್ತು ಪೇರಿಯನ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜದ ಕಾರ್ಯದರ್ಶಿ ಆಜೀರ ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ…
ಮಡಿಕೇರಿ ಡಿ.15 NEWS DESK : 66/11 ಕೆ.ವಿ.ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆ.ವಿ ಸಿದ್ದಾಪುರ ವಿವಿ ಕೇಂದ್ರದಲ್ಲಿ ಡಿಸೆಂಬರ್, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 5 ಎಂವಿಎ ಪರಿವರ್ತಕ ಬದಲಾವಣೆ ಹಾಗೂ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸಿದ್ದಾಪುರ ಪಟ್ಟಣ, ಕರಡಿಗೋಡು, ಅವರೆಗುಂದ, ಕೆಸವಿನಹಳ್ಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಡಿ.15 NEWS DESK : ಕನ್ನಡ ಉಪ ಭಾಷೆಗಳಲ್ಲಿ ಒಂದಾದ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಲು ಸಿನಿಮಾ, ನಾಟಕ ಹಾಗೂ ಕಿರುಚಿತ್ರಗಳ ನಿರ್ಮಾಣ ಕಾರ್ಯ ಹೆಚ್ಚಾಗಿ ಆಗಬೇಕು ಎಂದು ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಚೊಕ್ಕಾಡಿ ಎನ್.ಅಪ್ಪಯ್ಯ ಅವರು ಸಲಹೆ ಮಾಡಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಸಹಯೋಗದೊಂದಿಗೆ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಬೆಳವಣಿಗೆಯಲ್ಲಿ ಸಮಾಜಗಳ ಪಾತ್ರ ಕುರಿತು ಅವರು ಮಾತನಾಡಿದರು. ಇಂದಿನ ಸಾಮಾಜಿಕ ಮಾಧ್ಯಮ ಯುಗದಲ್ಲಿ ಸಿನಿಮಾ ನಾಟಕ, ಸಾಕ್ಷ್ಯಚಿತ್ರ, ಕಿರುಚಿತ್ರಗಳು, ಎಲ್ಲರನ್ನು ಗಮನಸೆಳೆಯುತ್ತವೆ. ಆದ್ದರಿಂದ ಸಾಮಾಜಿಕ ಮಾಧ್ಯಮವು ಪ್ರಬಲವಾಗಿದ್ದು, ಆ ನಿಟ್ಟಿನಲ್ಲಿ ಅರೆಭಾಷೆ ಬೆಳವಣಿಗೆಗೆ ಇವುಗಳ ನಿರ್ಮಾಣ ಕಾರ್ಯ ಅತ್ಯಗತ್ಯ ಎಂದು ಅಪ್ಪಯ್ಯ ಅವರು ಪ್ರತಿಪಾದಿಸಿದರು. ಅರೆಭಾಷೆಯಲ್ಲಿ ಪುಸ್ತಕಗಳನ್ನು ಹೆಚ್ಚಾಗಿ ಪ್ರಕಟಿಸುವಂತಾಗಬೇಕು. ಪುಸ್ತಕಗಳ ಪ್ರಕಟಣೆ ಒಂದು ಗ್ರಂಥವಾಗಿದ್ದು, ಆ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕು ಎಂದು ಅಪ್ಪಯ್ಯ ಅವರು…
ಮಡಿಕೇರಿ ಡಿ.15 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2ನೇ ವರ್ಷದ ಕೊಡಗು ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾವಳಿಯಲ್ಲಿ ಟೀಂ ಸ್ಮ್ಯಾಶರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಪಂದ್ಯಾಟದಲ್ಲಿ ಟೀಂ ಸ್ಮ್ಯಾಶರ್ಸ್, ಟೀಂ ಚೀತಾ, ಟೀಮ್ ಫ್ಲೈಯರ್ಸ್, ಟೀಂ ಜಂಪರ್ಸ್, ಟೀಂ ಹಂಟರ್ಸ್ ಮತ್ತು ಟೀಂ ಬ್ಲಾಕರ್ಸ್ ತಂಡಗಳು ಪಾಲ್ಗೊಂಡಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ 4 ತಂಡಗಳು ಕ್ವಾಲಿಫಯರ್ ಹಂತಕ್ಕೆ ಪ್ರವೇಶ ಪಡೆಯಿತು. ಮೊದಲ ಕ್ಲಾಲಿಫೈಯರ್ ಪಂದ್ಯಾಟದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಟೀಂ ಸ್ಮ್ಯಾಶರ್ಸ್ ತಂಡ 26-24 ಪಾಯಿಂಟ್ಗಳಿಂದ ಅಕ್ಷಯ್ ನಾಯಕತ್ವದ ಟೀಂ ಫ್ಲೈಯರ್ಸ್ ತಂಡವನ್ನು ಮಣಿಸಿತು. ನಂತರ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಪ್ರೇಮ್ ನಾಯಕತ್ವದ ಟೀಂ ಚೀತಾ ತಂಡ 25-19 ಪಾಯಿಂಟ್ಗಳಿಂದ ಆದರ್ಶ್ ನಾಯಕತ್ವದ ಟೀಂ ಜಂಪರ್ಸ್ ತಂಡವನ್ನು ಮಣಿಸಿತು. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪ್ರೇಮ್ ನಾಯಕತ್ವದ ಟೀಂ ಚೀತಾ ತಂಡ 25-27…
ಮಡಿಕೇರಿ ಡಿ.15 NEWS DESK : ಮಡಿಕೇರಿ ತಾಲ್ಲೂಕಿನ ಮರಗೋಡು ಹೊಸ್ಕೇರಿ ಗ್ರಾಮದ ಬೇರಂಗಿ ಬೆಟ್ಟದ ‘ಬಯಲ ಈಶ್ವರ ಸನ್ನಿಧಿ’ಯಲ್ಲಿ ಡಿ.21 ರಂದು ಏಳನೇ ವಾರ್ಷಿಕೋತ್ಸವ ನಡೆಯಲಿದೆ. ವಾರ್ಷಿಕೋತ್ಸವ ಪ್ರಯುಕ್ತ ಅಂದು ಬೆಳಗ್ಗೆ 10 ಗಂಟೆಗೆ ಈಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ. ಬಳಿಕ ಭಕ್ತರಿಗೆ ಅನ್ನದಾನವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ರಾಮಣ್ಣ ಮನವಿ ಮಾಡಿದ್ದಾರೆ.






