ಮಡಿಕೇರಿ ಮೇ 5 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಭಾನುವಾರದ ಎರಡನೇ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ತಂಡಕ್ಕೆ ಪ್ರಗತಿ ಕ್ರಿಕೆಟರ್ಸ್ ತಂಡದ ವಿರುದ್ಧ 6 ವಿಕೆಟ್ಗಳ ಜಯ ಲಭಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಯುನೈಟೆಡ್ ತಂಡ 14.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ ಗಳನ್ನು ಗಳಿಸಿ ವಿಜಯ ದಾಖಲಿಸಿತು 50 ಬಾಲ್ ಗಳಲ್ಲಿ ಭರ್ಜರಿ 90 ರನ್ ಗಳನ್ನು ಗಳಿಸಿದ ಸಿ.ಆರ್.ಅಯ್ಯಪ್ಪ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. (ಮೇ 6ರ ಪಂದ್ಯ) ಬೆಳಗ್ಗೆ 8.30 ಎಂಟಿಬಿ ರಾಯಲ್ಸ್- ಟೀಮ್ ಲಿವರೆಜ್ ಮಧ್ಯಾಹ್ನ 1.30 ಅಂಜಿಗೇರಿ ನಾಡ್- ಕೊಡವ…
ಲೇಖಕ: admin
ಮಡಿಕೇರಿ ಮೇ 5 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಭಾನುವಾರದ ಮೊದಲ ಪಂದ್ಯದಲ್ಲಿ ವೈಲ್ಡ್ ಫ್ಲವರ್ ತಂಡ 16 ರನ್ಗಳ ಅಂತರದಿಂದ ಎದುರಾಳಿ ಅಂಜಿಗೇರಿ ನಾಡ್ ತಂಡವನ್ನು ಮಣಿಸಿತು. ಟಾಸ್ ಗೆದ್ದ ಅಂಜಿಗೇರಿ ನಾಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ವೈಲ್ಡ್ ಫ್ಲವರ್ ತಂಡ 20 ಓವರ್ ಗಳಳ್ಲಿ 8 ವಿಕೆಟ್ ನಷ್ಟಕ್ಕೆ 144 ರನ್ ಗಳನ್ನು ದಾಖಲಿಸಿತು. ನಂತರ ಬ್ಯಾಟಿಂಗ್ ಮಾಡಿದ ಅಂಜಿಗೇರಿ ನಾಡ್ ತಂಡ 18.4 ಓವರ್ ಗಳಲ್ಲಿ 128 ರನ್ ಗಳನಷ್ಟೇ ಗಳಿಸಿತು. 21 ರನ್ ಗಳಿಸಿ, 3 ವಿಕೆಟ್ ಕಬಳಿಸಿದ ವೈಲ್ಡ್ ಫ್ಲವರ್ ತಂಡದ ನಿತಿನ್ ಬೋಪಣ್ಣ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಗಳಿಸಿದರು.
ಸೋಮವಾರಪೇಟೆ ಮೇ 4 NEWS DESK : ಕಾಡಾನೆಯೊಂದು ರಸ್ತೆಗೆ ಅಡ್ಡಬಂದ ಪರಿಣಾಮ, ಬೈಕ್ ಸಹಿತ ಸವಾರ ಆನೆಗೆ ಡಿಕ್ಕಿ ಹೊಡೆದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೇಳೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ 9.30ರ ಸುಮಾರಿಗೆ ಬೇಳೂರು ಗ್ರಾಮಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದ ಹಾನಗಲ್ಲುಬಾಣೆ ನಿವಾಸಿ ರಾಮು ಎಂಬವರಿಗೆ, ಕಾಟ್ನಮನೆ ಜಂಕ್ಷನ್ನ ತಿರುವಿನಲ್ಲಿ ದಿಢೀರನೆ ಕಾಡಾನೆ ಅಡ್ಡ ಬಂದಿದೆ. ಈ ಸಂದರ್ಭ ನಿಯಂತ್ರಣ ತಪ್ಪಿ ಬೈಕ್ ಆನೆಗೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ರಾಮು ಅವರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು, ಅದೃಷ್ಟವಶಾತ್ ಸ್ಥಳದಿಂದ ಓಡಿ ಪಾರಾಗಿದ್ದಾರೆ. ರಾಮು ಅವರ ಬಲಗೈ ಹಾಗೂ ಎಡಗಾಲಿಗೆ ಗಾಯಗಳಾಗಿದ್ದು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸೋಮವಾರಪೇಟೆ ಮೇ 4 NEWS DESK : ಸೋಮವಾರಪೇಟೆ ತಾಲ್ಲೂಕು ಮೊಗೇರ ಯುವ ವೇದಿಕೆ ವತಿಯಿಂದ ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಅಯೋಜಿಸಿರುವ ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಸದಸ್ಯ ಪಿ.ಎಂ. ರವಿ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ನಮ್ಮ ಸಂಸ್ಕೃತಿ, ಆಚಾರ-ವಿಚಾರ, ಪದ್ದತಿ-ಪರಂಪರೆಯನ್ನು ಉಳಿಸಿಕೊಂಡು ಮುಂದೆ ಸಾಗಲು ಸಮಾಜ ಬಾಂಧವರ ಒಗ್ಗೂಡುವಿಕೆ ಅಗತ್ಯ. ಕ್ರೀಡೆಯಿಂದ ಸಂಘಟನೆ ಸಾಧ್ಯ. ಮೊಗೇರ ಸಮಾಜವು ಜಿಲ್ಲೆಯಲ್ಲಿ 2003ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಅಲ್ಲಿಂದ ಇಲ್ಲಿಯವರೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿದೆ ಎಂದರು. ಜಿಲ್ಲೆಯಲ್ಲಿ 40 ಸಾವಿರಕ್ಕೂ ಅಧಿಕ ಮೊಗೇರ ಸಮಾಜ ಬಾಂಧವರಿದ್ದು, ಇನ್ನಷ್ಟು ಒಗ್ಗಟ್ಟು ಸಾಧಿಸಬೇಕಿದೆ. ಸಮುದಾಯದ ಯುವ ಜನಾಂಗ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಬೇಕು. ಗ್ರಾಮ ಮಟ್ಟದಲ್ಲಿ ಸಂಘಟನೆಗಳು ಬಲಗೊಳ್ಳಬೇಕು ಎಂದು ರವಿ ಅಭಿಪ್ರಾಯಿಸಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ. ಯಾಕೂಬ್, ಹಲವಷ್ಟು ವರ್ಷಗಳಿಂದ ಲೈನ್ಮನೆಗಳಲ್ಲಿಯೇ ನೆಲೆಸಿರುವ ಮೊಗೇರ ಸಮುದಾಯದವರಿಗೆ ವಸತಿ…
ಸೋಮವಾರಪೇಟೆ ಮೇ 4 NEWS DESK : ಜೂನಿಯರ್ ಇಂಡಿಯಾ ಹಾಕಿ ತಂಡಕ್ಕೆ ಸೋಮವಾರಪೇಟೆಯ ಎಚ್.ಎ.ವಚನ್ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮೇ.20ರಿಂದ 29ರ ತನಕ ಯುರೋಪ್ನಲ್ಲಿ ನಡೆಯುವ ಹಾಕಿ ಪಂದ್ಯಾವಳಿಯಲ್ಲಿ ಜೂನಿಯರ್ ಇಂಡಿಯಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಭಾರತ, ಜರ್ಮನಿ, ಬೆಲ್ಜಿಯಂ, ನೆದರ್ಲ್ಯಾಂಡ್ ದೇಶಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಸೋಮವಾರಪೇಟೆ ಕ್ಲಬ್ ರಸ್ತೆ ನಿವಾಸಿ ಎಚ್.ಎನ್.ಅಶೋಕ್ ಮತ್ತು ಸುಜಿನಿ ದಂಪತಿ ಪುತ್ರ ವಚನ್ ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದು, ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಹಾಕಿ ತರಬೇತಿ ಪಡೆಯುತ್ತಿದ್ದಾರೆ.
ಮಡಿಕೇರಿ ಮೇ 4 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶನಿವಾರದ ಎರಡನೇ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ 78 ರನ್ಗಳ ಜಯ ಸಾಧಿಸಿತು. ಕೂರ್ಗ್ ಯುನೈಟೆಡ್ v/s MTB ರಾಯಲ್ಸ್ MTB ರಾಯಲ್ಸ್ ಟಾಸ್ ಗೆದ್ದು ಫೀಲ್ಡ್ ಆಯ್ಕೆ ಮಾಡಿಕೊಂಡಿತು ಕೂರ್ಗ್ ಯುನೈಟೆಡ್ — 199/5 (20.0 ಓವರ್ಗಳು) MTB ರಾಯಲ್ಸ್ — 121/9(20.0 ಓವರ್ಗಳು) ಕೂರ್ಗ್ ಯುನೈಟೆಡ್ 78 ರನ್ಗಳ ಜಯ ಸಾಧಿಸಿತು ಪಂದ್ಯಪುರುಷ:: ಸಿ ಆರ್ ಅಯ್ಯಪ್ಪ — 89(47)
ಕಡಂಗ ಮೇ 4 NEWS DESK : ಕಡಂಗ ಬದ್ರಿಯಾ ಮಸೀದಿಯ ಅಧಿನದಲ್ಲಿ ನೂತನವಾಗಿ ಆರಂಭಗೊಂಡ ದರ್ಸ್ ಹಾಗೂ ವಾರ್ಷಿಕ ಬದರ್ ಮೌಲೀದ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕೂರತು ಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಲ್ ಕೂರತ್ ಉದ್ಘಾಟಿಸಿ, ದರ್ಸ್ ನ ಮಹತ್ವ ಕುರಿತು ಮಾತನಾಡಿದರು. ನಂತರ ದುಆ ಆಶೀರ್ವಚನ ನೀಡಿದರು. ಬದ್ರಿಯಾ ಮಸೀದಿಯ ಅಧ್ಯಕ್ಷ ಕೆ.ಇ.ಉಸ್ಮಾನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೂರ್ಗ್ ಜಮಿಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ, ಬದ್ರಿಯಾ ಮಸೀದಿಯ ಮುದರಿಸ್ ಅಬ್ದುಲ್ ಸತ್ತಾರ್ ಸಖಾಫಿ, ನಾಪೋಕ್ಲು ಮಸೀದಿಯ ಮುದರಿಸ್ ಅಶ್ರಫ್ ಹಸ್ಸನಿ, ಮೊಯದ್ದಿನ್ ಮಸೀದಿಯ ಅಧ್ಯಕ್ಷ ಅಬ್ದುಲ್ಲ, ಕಾರ್ಯದರ್ಶಿ ಅಬ್ದುಲ್ ರೆಹಮಾನ್, ಬದ್ರಿಯಾ ಮಸೀದಿಯ ಕೋಶಾಧಿಕಾರಿ ಸಿ.ಎ.ರಜಾಕ್, ಉಪಾಧ್ಯಕ್ಷರಾದ ರಝಕ್, ರಶೀದ್, ಸಹದ್, ನೌಫಲ್, ಹಾಸಿಮ್, ಸುಹೈಲ್, ಕರೀಂ, ಅರ್ಷಾದ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ಮತಿತ್ತರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ರಾಶೀದ್ ಸ್ವಾಗತಿಸಿ, ವಂದಿಸಿದರು. ವರದಿ : ನೌಫಲ್
ಮಡಿಕೇರಿ ಮೇ 4 NEWS DESK : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ʼವಾರ್ತಾಭಾರತಿʼ ಕೊಡಗು ಜಿಲ್ಲೆಯ ವಿಶೇಷ ವರದಿಗಾರ ಕೆ.ಎಂ. ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದಾರೆ. 2023ರ ಏ.6 ರಂದು ‘ವಾರ್ತಾಭಾರತಿ’ ಪತ್ರಿಕೆಯಲ್ಲಿ ಪ್ರಕಟವಾದ ‘ರಸ್ತೆ ಕೊಡಿ ಇಲ್ಲದಿದ್ದರೆ ಸಾವಿಗೆ ದಾರಿ ಮಾಡಿಕೊಡಿ’ ಎಂಬ ವರದಿಯು ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಹಿರಿಯ ಪತ್ರಕರ್ತ ಕೇಶವ ಕುಂದರ್, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಟಿ.ಎನ್. ಆಯ್ಕೆ ಸಮಿತಿಯಲ್ಲಿದ್ದರು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಇನ್ ಜರ್ನಲಿಸಮ್ನಲ್ಲಿ ಸರ್ಟಿಫಿಕೆಟ್ ಕೋರ್ಸ್ ಪಡೆದಿರುವ ಇಸ್ಮಾಯಿಲ್ ಈ ಹಿಂದೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತ್ತು ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನೂ ಗಳಿಸಿದ್ದರು. 2021ರಲ್ಲಿ ಇಸ್ಮಾಯಿಲ್ ಅವರ ಚೊಚ್ಚಲ ಕೃತಿ ‘ಮರಿಯಮ್’ ಪ್ರಕಟಗೊಂಡಿತ್ತು. ಫುಟ್ಬಾಲ್ ಕ್ರೀಡಾಪಟು ಮತ್ತು ತರಬೇತುದಾರರಾಗಿರುವ ಇವರು ಕರ್ನಾಟಕ…
ವಿರಾಜಪೇಟೆ ಮೇ 4 NEWS DESK : ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಉಚಿತ ಬೇಸಿಗೆ ಶಿಬಿರವು ಯಶಸ್ವಿಯಾಗಿ ನಡೆಯಿತು. 22 ದಿವಸಗಳ ಕಾಲ ನಡೆದ ಶಿಬಿರದಲ್ಲಿ ವಿವಿಧ ಶಾಲೆಗಳ ಮೂವತ್ತಕ್ಕೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ ವಿರಾಜಪೇಟೆಯ ನುರಿತ ತರಬೇತುದಾರರು ಮಕ್ಕಳಿಗೆ ಯೋಗ, ಕರಾಟೆ, ಮಾರ್ಷಲ್ ಆರ್ಟ್ಸ್, ಕ್ರಾಫ್ಟ್, ನೃತ್ಯ, ಸಂಗೀತ, ಆಂಗ್ಲ ಭಾಷೆ ಕಲಿಕೆ, ಕ್ರೀಡೆ, ಡ್ರಾಯಿಂಗ್, ಕ್ಷೇತ್ರ ಪರಿಚಯ ಇನ್ನೂ ಮುಂತಾದ ವಿಚಾರಗಳ ಬಗ್ಗೆ ತರಬೇತಿ ನೀಡಿದರು. ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಆಯೋಜಕರಾದ ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಮ್ಮ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪ್ರಕಾಶ್ ಅವರ ಸಹಕಾರ, ಇತರ ಇಲಾಖಾಧಿಕಾರಿಗಳು, ಗ್ರಾಮಸ್ಥರು, ದಾನಿಗಳು ಮತ್ತು ವಿಶೇಷವಾಗಿ ಸ್ಥಳೀಯರು ಮತ್ತು ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ರವೀಂದ್ರ ನೀಡಿದ ಸಹಕಾರದಿಂದ ಈ ಶಿಬಿರ ಯಶಸ್ಸನ್ನು ಕಂಡಿದೆ. ಮಕ್ಕಳ ಪೋಷಕರ ಪ್ರೋತ್ಸಾಹಕ್ಕೂ ನಾನು ಆಭಾರಿಯಾಗಿದ್ದೇನೆ ಎಂದರು. ಮಕ್ಕಳು ಹಲವಾರು ವಿಷಯಗಳನ್ನು ಈ ಶಿಬಿರದಿಂದ…
ಮಡಿಕೇರಿ ಮೇ 5 NEWS DESK : ಮಡಿಕೇರಿ ತಾಲ್ಲೂಕಿನ ಅಪ್ಪಂಗಳ ನಿವಾಸಿ ಶಂಕರನಾರಾಯಣ ಹೆಬ್ಬಾರ್ ಹಾಗೂ ಶ್ಯಾಮಲ ದಂಪತಿಯ ಪುತ್ರಿ ಅಶ್ವಿನಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿ ರವೀಶ್ ಕೇಕುಣ್ಣಾಯ್ಯ ಹಾಗೂ ಕುಸುಮ ದಂಪತಿಯ ಪುತ್ರ ಕೆ.ಆರ್.ಅನ್ವೇಶ್ ಅವರ ವಿವಾಹವು ಮೇ 1 ರಂದು ಪುತ್ತೂರಿನ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು.






