ಮಡಿಕೇರಿ ಏ.19 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಯರವ ಸಮಾಜ ಆಯೋಜಿಸಿರುವ ಯರವ ಕ್ರಿಕೆಟ್ ಹಬ್ಬದ ಲೋಗೋವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಿದರು. ಪಂದ್ಯಾವಳಿಯು ಮೇ 1 ರಿಂದ 5ರ ವರೆಗೆ ತಿತಿಮತಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ.
ಲೇಖಕ: admin
ಮಡಿಕೇರಿ ಏ.18 : ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಇಂದು ಸಂಜೆ ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಮೇಲೆ ಹುಲಿ ದಾಳಿ ನಡೆಸಿದೆ. ಕುತ್ತಿಗೆ ಹಾಗೂ ತಲೆಬಾಗಕ್ಕೆ ಗಾಯಗೊಳಿಸಿದ ಪರಿಣಾಮ ರೆಹಮಾನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗದ್ದೆಯಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಏ.18 NEWS DESK : ಕಾಂಗ್ರೆಸ್ಸಿಗರು ಕುರ್ಚಿ ಅಜೆಂಡಾದಿಂದ ಇನ್ನೂ ಹೊರ ಬಂದಿಲ್ಲ, ಲೋಕಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. ಕುಶಾಲನಗರದ ಗೌಡ ಸಮಾಜದ ಆವರಣದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರಕಾರ ನೀಡಿರುವ ಗ್ಯಾರಂಟಿ ಯೋಜನೆ ಸರಕಾರದ ಖಜಾನೆ ಖಾಲಿಯಾದ ನಂತರ ಬಂದ್ ಆಗಲಿದೆ ಎಂದು ಹೇಳಿದ ಸದಾನಂದ ಗೌಡರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದು ನಿರಂತರ ಹಾಗೂ ಶಾಶ್ವತ ಯೋಜನೆಯಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಅಪಪ್ರಚಾರದ ಆಧಾರದಲ್ಲಿ ಗೆಲುವಿಗೆ ಶತ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿರುವುದು ಜನರ ದುರ್ದೈವ, ಈ ಬಾರಿಯ ಚುನಾವಣೆ ವಿಭಿನ್ನವಾದ ಚುನಾವಣೆಯಾಗಿದ್ದು, ಜಾತಿ ಲೆಕ್ಕಾಚಾರ ನಡೆಯುವುದಿಲ್ಲ. ಮೋದಿ ಅವರ…
ಮಡಿಕೇರಿ ಏ.18 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂಧಿಗಳ ಗೈರು ಮತದಾರರ (AVES) ವರ್ಗದ ಮತದಾರರಿಗೆ ಸ್ಥಾಪಿಸಲಾದ ಅಂಚೆ ಮತ ಕೇಂದ್ರ (PVC) ಗಳನ್ನು ಸ್ಥಾಪಿಸಲು ಚುನಾವಣಾ ಆಯೋಗದಿಂದ ನಿರ್ದೇಶನ ನೀಡಲಾಗಿದೆ. ಅದರಂತೆ 21-ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ, 208-ಮಡಿಕೇರಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 107 ಅಗತ್ಯ ಸೇವೆಗಳ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂಧಿಗಳಿಗೆ ಅಂಚೆ ಮತಪತ್ರದ ಸೌಲಭ್ಯವನ್ನು ಒದಗಿಸಬೇಕಾಗಿದ್ದು, ಮತದಾರರಿಗೆ ಅನುಕೂಲವಾಗುವಂತೆ ಅಂಚೆ ಮತ ಕೇಂದ್ರವನ್ನು (Postal Voting Center) ಜಿಲ್ಲಾಧಿಕಾರಿಗಳ ಹೊಸ ಕಛೇರಿ, ನೆಲ ಮಹಡಿ ಕೊಠಡಿ ಸಂಖ್ಯೆ-10 ಬನ್ನೂರು ರಸ್ತೆ ಸಿದ್ದಾರ್ಥ ನಗರ, ಮೈಸೂರು ಸ್ಥಾಪಿಸಲಾಗಿದೆ. ಅಗತ್ಯ ಸೇವೆಗಳಡಿ ಕೆಲಸ ನಿರ್ವಹಿಸುತ್ತಿರುವ ಮತದಾರರು ಏ.19, 20 ಹಾಗೂ 21 ರಂದು (AVES) ವರ್ಗದ ಮತದಾರರು ಮೇಲ್ಕಂಡ ಸ್ಥಳದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿರುವುದರಿಂದ ಎಲ್ಲಾ (AVES) ವರ್ಗದ…
ಸೋಮವಾರಪೇಟೆ ಏ.18 NEWS DESK : ಶತಮಾನಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ದಲಿತರು, ಅಸ್ಪೃಶ್ಯರಿಗೆ ಗೌರವಯುತ ಬದುಕನ್ನು ಕಟ್ಟಿಕೊಟ್ಟ, ಡಾ.ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ದಲಿತಪರ ಹೋರಾಟಗಾರ ಜಯಪ್ಪ ಹಾನಗಲ್ ಅಭಿಪ್ರಾಯಪಟ್ಟರು. ಸಮೀಪದ ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬಾಬಾ ಸಾಹೇಬರ ಸಾಧನೆ ಅಸಾಧಾರಣವಾದುದು. ಅವರು ಬದುಕಿನುದ್ದಕ್ಕೂ ಅವಮಾನ ಶೋಷಣೆಗಳಿಗೆ ಒಳಗಾಗಿ, ಅವುಗಳನ್ನು ಮೆಟ್ಟಿನಿಂತು ನೊಂದವರ ಬಾಳಿಗೆ ಬೆಳಕಾದವರು ಎಂದು ಹೇಳಿದರು. ಇನ್ನು ಮುಂದಿನ ದಿನಗಳಲ್ಲಿ ಮೀಸಲಾತಿಯಿಂದ ನೌಕರಿ ಪಡೆಯುವುದು ಅಸಾಧ್ಯದ ಮಾತು. ದೇಶದ ಸ್ವಾಯುತ ಸರ್ಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ಸರ್ಕಾರಿ ಸಂಸ್ಥೆಗಳು ಇಲ್ಲದೇ ಹೋದರೆ, ಮೀಸಲಾತಿ ಇಲ್ಲವಾಗುತ್ತದೆ ಎಂಬುದನ್ನು ಆಡಳಿತ ಮಾಡುವವರು ತಿಳಿದುಕೊಂಡಿದ್ದಾರೆ. ಶಿಕ್ಷಣ ತಾರಾತಮ್ಯದಿಂದ ಅನೇಕ ಬಡವರು, ದೀನದಲಿತರು ನೌಕರಿಯಿಂದ ವಂಚಿತರಾಗುವ ಸಂದರ್ಭ ಬರಲಿದೆ. ಈಗಾಗಲೇ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕಾಗಿದೆ.…
ಮಡಿಕೇರಿ ಏ.18 NEWS DESK : ಆಸ್ಟ್ರಿಯಾದ ವಿಯೆನ್ನಾದಲ್ಲಿ ಏ.21ರಂದು ನಡೆಯಲಿರುವ ಮ್ಯಾರಥಾನ್ ಸ್ಪರ್ಧೆಯಲ್ಲಿ ಮ್ಯಾರಥಾನ್ ಓಟಗಾರ ಕೊಡಗಿನ ಅಪ್ಪಚಂಗಡ ಬಿ.ಬೆಳ್ಯಪ್ಪ ಭಾರತವನ್ನು ಪ್ರತಿನಿಧಿಸಲಿದ್ದಾರೆ. 42.195 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯಲ್ಲಿ ಇಬ್ಬರು ಭಾರತೀಯರು ಸ್ಪರ್ಧಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದ ಕೊಡಗಿನ ಬೆಳ್ಯಪ್ಪ ಒಬ್ಬರಾಗಿದ್ದಾರೆ. ಮತ್ತೊಬ್ಬರು ಉತ್ತರಾಖಂಡ್ನ ಮಾನ್ಸಿಂಗ್. ಈ ಮ್ಯಾರಥಾನ್ನಲ್ಲಿ ವಿಶ್ವಾದ್ಯಂತ 40 ಸಾವಿರ ಓಟಗಾರರು ಭಾಗವಹಿಸುತ್ತಿದ್ದು, ಉತ್ತಮ ಪ್ರದರ್ಶನ ತೋರಿದವರನ್ನು ಪ್ಯಾರಿಸ್ ಒಲಿಂಪಿಕ್ಸ್ ಗೆ ಆಯ್ಕೆ ಮಾಡಲಾಗುತ್ತದೆ. ಈ ಮ್ಯಾರಥಾನ್ನಲ್ಲಿ 50 ವರ್ಷಗಳ ಹಿಂದೆ ಪಂಜಾಬ್ನ ಶಿವನಾಥ್ ಸಿಂಗ್ ಎಂಬುವರು 2 ಗಂಟೆ 11 ನಿಮಿಷ 59 ಸೆಕೆಂಡ್ಗಳಲ್ಲಿ 42.195 ಕಿಲೋ ಮೀಟರ್ ದೂರವನ್ನು ಕ್ರಮಿಸಿ ದಾಖಲೆ ನಿರ್ಮಿಸಿದ್ದರು.
ಮಡಿಕೇರಿ ಏ.18 NEWS DESK : ಸಮಾಜವಾದಿ ಪಕ್ಷದ ಕೊಡಗು ಜಿಲ್ಲಾ ಮಾಜಿ ಅಧ್ಯಕ್ಷ ಚೀಯಾಂಡಿರ ಕಿಶನ್ ಉತ್ತಪ್ಪ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡು ರಾಜ್ಯ ಸರಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಜನತೆಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದ ದಿಟ್ಟ ಹೆಜ್ಜೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸ್ಫೂರ್ತಿ ನೀಡಿತು. ಇನ್ನು ಮುಂದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿರುವುದಾಗಿ ಎಂದು ಕಿಶನ್ ಉತ್ತಪ್ಪ ತಿಳಿಸಿದರು. ಇವರೊಂದಿಗೆ ಕೊರವಂಡ ದೇವಯ್ಯ ಅವರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಸೋಮವಾರಪೇಟೆ ಏ.18 NEWS DESK : ಶ್ರೀ ರಾಮ ಉತ್ಸವ ಸಮಿತಿ ಮತ್ತು ಹಿಂದು ಜಾಗರಣಾ ವೇದಿಕೆ ವತಿಯಿಂದ ರಾಮನವಮಿ ಪ್ರಯುಕ್ತ ಪಟ್ಟಣದಲ್ಲಿ ಬೃಹತ್ ಶೋಭಯಾತ್ರೆ ನಡೆಯಿತು. ಶ್ರೀರಾಮ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯುತ್ ಅಲಂಕೃತ ಮಂಟಪಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಜಾನಪದ ಕಲಾತಂಡಗಳ ನೃತ್ಯ ನೋಡುಗರನ್ನು ಆಕರ್ಷಿಸಿದವು. ಭಕ್ತಾಧಿಗಳು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಪಟಾಕಿ ಸಿಡಿಮದ್ದು ಪ್ರದರ್ಶನ ನಡೆಯಿತು. ವಿವಿಧ ಸ್ಥಳಗಳಲ್ಲಿ ಪಾನಕ, ಮಜ್ಜಿಗೆ ವಿತರಿಸಲಾಯಿತು. ಅಂಜನೇಯ ದೇವಾಲಯ ಹಾಗು ರಾಮಮಂದಿರದಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ನಡೆಯಿತು.
ಮಡಿಕೇರಿ ಏ.18 NEWS DESK : ಕೊಡವ ಜಾನಪದ ಹೇಳುವ ಸ್ಪರ್ಧೆಯಲ್ಲಿ ಬಾದುಮಂಡ ಬೀನಕಾಳಯ್ಯ ಪ್ರಥಮ, ಕೊಟ್ಟಂಗಡ ಕವಿತ ವಾಸುದೇವ ದ್ವಿತೀಯ ಮತ್ತು ಮಚ್ಚುರ ಶಾರದ ಅಪ್ಪಯ್ಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕೊಡವಾಮೆರ ಕೊಂಡಾಟ ಸಂಘಟನೆ ಕೊಡವ ಜಾನಪದ ಕಥೆ ಹೇಳುವ ಸ್ಪರ್ಧೆಯನ್ನು ಅಂತರ್ಜಾಲದಲ್ಲಿ ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ನಾನಾ ಭಾಗಗಳಿಂದ ಒಟ್ಟು 17 ಸ್ಪರ್ಧಿಗಳು ಭಾಗವಹಿಸಿ ತಮ್ಮ ಜಾನಪದ ಪ್ರೌಢಿಮೆ ಮೆರೆದರು. ಕೊಡವಾಮೆರ ಕೊಂಡಾಟ ಸಂಘಟನೆ ಸಂಸ್ಥಾಪಕರೂ ಆದ ಚಾಮೆರ ದಿನೇಶ್ ಬೆಳ್ಳಪ ಪರಿಕಲ್ಪನೆಯಲ್ಲಿ ಆಯೋಜನೆಗೊಂಡ ಈ ಸ್ಪರ್ಧೆಯ ಬಹುಮಾನ ದಾನಿಗಳಾಗಿ ರಾಷ್ಟ್ರ ಮಟ್ಟದ ಸಾಮಾಜಿಕ ಕಾರ್ಯಕರ್ತ ಕೆಂಜಂಗಡ ರೋಶನ್ ನಾಣಯ್ಯ ಅವರು ನೀಡಿದರೆ, ಹಿನ್ನೆಲೆ ಚಿತ್ರವನ್ನು ಸುಪ್ರಸಿದ್ದ ಚಿತ್ರಕಲಾವಿದ ಐಮಂಡ ರೂಪೇಶ್ ನಾಣಯ್ಯ ರಚಿಸಿದರು. ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಜಾನಪದ ತಜ್ಞರಾದ ಬಾಚರಣಿಯಂಡ ಅಪ್ಪಣ್ಣ, ರಾಣು ಅಪಣ್ಣ ಹಾಗೂ ಅಲ್ಲಾರಂಡ ವಿಠಲ್ ನಂಜಪ್ಪ ಅವರು ನಿರ್ವಹಿಸಿದರು. ಸರ್ಧಾ ಸಂಚಾಲಕರಾಗಿ ಕೊಡವಾಮೆರ ಕೊಂಡಾಟ ಸಂಘಟನೆ ಸಹ ಕಾರ್ಯದರ್ಶಿ ಮಲ್ಲಂಡ ದರ್ಶನ್…
ಮಡಿಕೇರಿ ಏ.18 NEWS DESK : ಲೋಕಸಭಾ ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು ಎಂದು ಸ್ಪಷ್ಟಪಡಿಸಿದರು. ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಬಳಿಕ ಕಾಂಗ್ರೆಸ್ನಿಂದ ಒಕ್ಕಲಿಗ ಸಮುದಾಯದ ಎಂ.ಲಕ್ಷ್ಮಣ್ ಅವರಿಗೆ ಟಿಕೆಟ್ ದೊರಕಿದೆ. ಇವರು ಒಕ್ಕಲಿಗರ ಸಭೆಯಲ್ಲಿ ಪಾಲ್ಗೊಂಡು ಮಾತನಾಡುವ ಸಂದರ್ಭ, ಸಹಜವಾಗಿ ಎಂಬಂತೆ ಸಮೂಹದ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿ, ಒಕ್ಕಲಿಗ ಸಮಾಜದ ಮಂದಿ ಪ್ರಬುದ್ಧರಾಗಿದ್ದು, ಬಿಜೆಪಿ ಆರೋಪಗಳನ್ನು ಅರ್ಥೈಸಿಕೊಳ್ಳಬಲ್ಲರು ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು…






