ಲೇಖಕ: admin

ಮಡಿಕೇರಿ ಡಿ.15 NEWS DESK : ಕೊಡವರ ಕುರಿತು ಸುಳ್ಳು ಚರಿತ್ರೆಗಳನ್ನು ಸೃಷ್ಟಿಸುವ ಮೂಲಕ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯದ ನೈಜ ಚರಿತ್ರೆಯನ್ನು ಬುಡಮೇಲು ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ಕೊಡವರು ಜಾಗೃತರಾಗಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರೆ ನೀಡಿದ್ದಾರೆ. 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರತ್ಯೇಕವಾಗಿ `ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಿತಿಮತಿಯಲ್ಲಿ ನಡೆದ 22ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಅನೇಕ ವರ್ಷಗಳಿಂದ ಕೊಡವರ ಹಕ್ಕುಗಳ ಮೇಲೆ ಆಗುತ್ತಿರುವ ದಾಳಿಯನ್ನು ನಾವು ಸಹಿಸಿಕೊಂಡೇ ಬಂದಿದ್ದೇವೆ. ನಮ್ಮ ಹಕ್ಕನ್ನು ಕಸಿದುಕೊಳ್ಳುವವರಿಗೆ ಸರಕಾರ ಅಧಿಕಾರದಲ್ಲಿ ಉಳಿಯುವುದಕ್ಕಾಗಿ ಬೆಂಬಲವನ್ನು ನೀಡುತ್ತಾ ಬಂದಿದೆ, ಸರಕಾರ ಈ ನಾಡಿನ ಬಹುಸಂಖ್ಯಾತರ ಪರವಾಗಿದೆ ಎಂದು ಆರೋಪಿಸಿದರು. 1970ರ ನಂತರ ಈ ರೀತಿಯ…

Read More

ಮಡಿಕೇರಿ ಡಿ.15 NEWS DESK : ಬಾಳೆಹೊನ್ನೂರಿನ ಕಾಫಿ ಸಂಶೋಧನಾ ಸಂಸ್ಥೆ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕೇಂದ್ರ್ರ ಕಾಫಿ ಮಂಡಳಿಯ ಆಶ್ರಯದಲ್ಲಿ ಡಿ.20ರಿಂದ 22 ರವರೆಗೆ ಬಾಳೆಹೊನ್ನೂರಿನಲ್ಲಿ ಶತಮಾನೋತ್ಸವ ಸಮಾರಂಭ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ಸರ್ಕಾರದ ಕೇಂದ್ರ್ರ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅವರು ಶತಮಾನೋತ್ಸವ ಸಮಾರಂಭವನ್ನು ಡಿ.20ರಂದು ಕೇಂಧ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಶ್ ಗೋಯಲ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ, ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರ ಸ್ವಾಮಿ, ಕೇಂದ್ರ ವಾಣಿಜ್ಯ ಸಚಿವರಾದ ಜತಿನ್ ಪ್ರಸಾದ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಸಂಸದರುಗಳಾದ ಕೋಟಾ ಶ್ರೀನಿವಾಸ ಪೂಜಾರಿ, ಯದುವೀರ್ ಒಡೆಯರ್, ಕಾಫಿ ಮಂಡಳಿ ಅಧ್ಯಕ್ಷರಾದ ವಿ.ಜಿ.ದಿನೇಶ್ ಹಾಗೂ ಚಿಕ್ಕಮಗಳೂರು ಮತ್ತು ಕೊಡಗಿನ ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. *ಘೋಷವಾಕ್ಯ* ಅರೇಬಿಯಾ ದೇಶದಿಂದ ಬಾಬಾ ಬುಡನ್…

Read More

ಮಡಿಕೇರಿ ಡಿ.15 NEWS DESK : ಕೊಡವ ಕೌಟುಂಬಿಕ ಹಾಕಿ ಉತ್ಸವ ಪ್ರಾರಂಭಗೊಂಡು ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ, ಕಳೆದ ಇಪ್ಪತ್ತೈದು ವರ್ಷಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳ ನಡುವಣ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯು ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಡಿ.26 ರಿಂದ 30ರವರೆಗೆ ಮೂರ್ನಾಡಿನಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಕುರಿತು ವಿವರಗಳನ್ನಿತ್ತ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಈ ಪಂದ್ಯಾವಳಿಯನ್ನು ಹಾಕಿ ಕೂರ್ಗ್, ಎಂ.ಬಾಡಗ ಸ್ಪೋರ್ಟ್ಸ್ ರಿಕ್ರಿಯೇಷನ್ ಸಂಸ್ಥೆ ಮತ್ತು ಮೂರ್ನಾಡು ವಿದ್ಯಾಸಂಸ್ಥೆಯ ಸಹಕಾರದೊಂದಿಗೆ ಮೂರ್ನಾಡಿನ ದಿ.ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಲೀಗ್ ಮತ್ತು ನಾಕ್ ಔಟ್ ಮಾದರಿಯಲ್ಲಿ ಆಯೋಜಿಸುತ್ತಿರುವುದಾಗಿ ತಿಳಿಸಿದರು. :: ಯಾವೆಲ್ಲ ಕಟುಂಬಗಳು ಪಾಲ್ಗೊಳ್ಳಲಿವೆ ? :: ಕೊಡವ ಹಾಕಿ ಅಕಾಡೆಮಿ ಗೌರವ ಕಾರ್ಯದರ್ಶಿ ಕುಲ್ಲೇಟಿರ ಅರುಣ್ ಬೇಬ ಅವರು ಮಾತನಾಡಿ, ಕಳೆದ ಇಪ್ಪತ್ತೈದು ವರ್ಷಗಳಲ್ಲಿ ನಡೆದ ಕೌಟುಂಬಿಕ ಕೊಡವ ಹಾಕಿ…

Read More

ಕುಶಾಲನಗರ ಡಿ.15 NEWS DESK : ನಾಡು ಕಂಡ ಅಪರೂಪದ ರಾಜಕಾರಣಿ, ಶಿಕ್ಷಣ ಪ್ರೇಮಿ, ಸಮಾಜದ ಸಂಘಟಕ, ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರರ ಅಗಲಿಕೆ ಇಡೀ ನಾಡಿಗೆ ತುಂಬಲಾರದ ನಷ್ಟ ಎಂದು ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಹೆಚ್.ವಿ.ಶಿವಪ್ಪ ವಿಷಾದಿಸಿದರು. ಕುಶಾಲನಗರದ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಆವರಣದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಶಾಮನೂರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಅವರದ್ದೇ ಆದ ಕಲ್ಪನೆಯಲ್ಲಿ ದಾವಣಗೆರೆ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದಲ್ಲದೇ 50 ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಹಸ್ರ ಮಂದಿಗೆ ಬೆಳಕಾದವರು.  ವೀರಶೈವ ಸಮಾಜವನ್ನು ರಾಷ್ಟ್ರೀಯ ಮಟ್ಟದಲ್ಲಿ ಸಂಘಟಿಸಿ ಸಮಾಜದ ಪ್ರಶ್ನಾತೀತ ನಾಯಕರಾಗಿದ್ದರು ಎಂದು ಶಿವಪ್ಪ ಬಣ್ಣಿಸಿದರು. ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಾಂಭಶಿವಯ್ಯ ಮಾತನಾಡಿ, ವೀರಶೈವ ಸಮಾಜದಲ್ಲಿ ಗುಂಪುಗಳಾಗದಂತೆ ಎಚ್ಚರಿಕೆ ವಹಿಸಿ ಇಳಿ ವಯಸ್ಸನ್ನೂ ಲೆಕ್ಕಿಸದೇ ದಾವಣಗೆರೆಯಲ್ಲಿ ಪಂಚಪೀಠಗಳ ಶ್ರೀಗಳನ್ನು ಒಂದೆಡೆ ಸೇರಿಸಿ ನಡೆಸಿದ ಬೃಹತ್ ಸಮಾವೇಶ ಇತಿಹಾಸದ ಪುಟಗಳಲ್ಲಿ…

Read More

ವಿರಾಜಪೇಟೆ ಡಿ.15 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಅಮ್ಮತ್ತಿಯ ಆರ್.ಐ.ಹೆಚ್.ಪಿ ಆಸ್ಪತ್ರೆ ಹಾಗೂ ಕೆದಮುಳ್ಳೂರು ಫಾತಿಮಾ ಮಾತೇಯ ದೇವಾಲಯದ ಸಂಯುಕ್ತ ಆಶ್ರಯದಲ್ಲಿ ಡಿ.17 ರಂದು ಕೆದಮುಳ್ಳೂರು ಗ್ರಾಮದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಕಾರ್ಯಕ್ರಮ ಸಂಚಾಲಕ ಕಿಶೋರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆದಮುಳ್ಳೂರು ಗ್ರಾಮದ ಸೆಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಕಣ್ಣಿನ ಪೊರೆ ಚಿತ್ಸೆಯನ್ನು ಏರ್ಪಡಿಸಲಾಗಿದೆ. ಅಮ್ಮತ್ತಿಯ ಆರ್.ಐ.ಹೆಚ್.ಪಿ ಆಸ್ಪತ್ರೆಯ ನುರಿತ ವೈದ್ಯರು ಆರೋಗ್ಯ ಹಾಗೂ ನೇತ್ರ ಚಿಕಿತ್ಸೆಯನ್ನು ಒದಗಿಸಲಿದ್ದಾರೆ. ಅಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಡಿ.15 NEWS DESK : ಸ್ಪಧಾ೯ತ್ಮಕ ಪರೀಕ್ಷೆಗಳಿಗೆ ಸೂಕ್ತ ತಯಾರಿ ಮಾಡಿಕೊಳ್ಳುವಲ್ಲಿ ವಾತಾ೯ ಪತ್ರಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹಾಸನ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಕೆ.ಕೆ.ಸುಮಿತ ಅಭಿಪ್ರಾಯಪಟ್ಟಿದ್ದಾರೆ. ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಹಾಸನ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರು ಮತ್ತು ಕಾಲೇಜಿನ ಮಾಜಿ ಉಪನ್ಯಾಸಕಿ ಕೆ.ಕೆ.ಸುಮಿತಾ , ವಿದ್ಯಾರ್ಥಿಗಳಿಗೆ ಗುರಿ ಮತ್ತು ಛಲ ಎರಡೂ ಇರಬೇಕು. ಪ್ರಚಲಿತ ವಿದ್ಯಮಾನ ಮತ್ತು ವಾರ್ತಾ ಪತ್ರಿಕೆಯಲ್ಲಿನ ಮುಖ್ಯಾಂಶಗಳನ್ನು ಬರೆದಿಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತಯಾರಿ ನಡೆಸಿಕೊಳ್ಳಬೇಕು. ಸತತ ಪರಿಶ್ರಮ ಹಾಗೂ ಆತ್ಮ ವಿಶ್ವಾಸ ದಿಂದ ಮುನ್ನಡೆಯಬೇಕೆಂದು ಅವರು ವಿದ್ಯಾಥಿ೯ಗಳಿಗೆ ಕಿವಿಮಾತು ಹೇಳಿದರು. ಸ್ವತಃ ಕ್ರೀಡಾಪಟುವಾದ ಸುಮಿತ, ಕ್ರೀಡೆ ಮತ್ತು ವಿದ್ಯಾಭ್ಯಾಸ ನಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂದು ಹೇಳಿದರು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿ ಜಿ ವಿ ಕುಮಾರ್ ಮಾತನಾಡಿ ಇಂದಿನ ಮಕ್ಕಳು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕೆಂದು…

Read More

ಮಡಿಕೇರಿ ಡಿ.15 NEWS DESK : ದೈವತ್ವದ ಶಕ್ತಿಯನ್ನೊಳೊಂಡ ಸಾಮೂಹಿಕ ಭಜನೆಯು ಮನಸ್ಸಿನ ಸಂತೋಷ, ನೆಮ್ಮದಿಗೆ ಕಾರಣವಾಗುತ್ತದೆ ಎಂದು ನಗರದ ಶ್ರೀ ವಿಜಯವಿನಾಯಕ ದೇವಾಲಯದ ಟ್ರಸ್ಟಿ ಜಿ.ಚಿದ್ವಿಲಾಸ್ ಅಭಿಪ್ರಾಯಪಟ್ಟಿದ್ದಾರೆ.  ನಗರದ ಶ್ರೀ ಆಂಜನೇಯ ದೇವಾಲಯದಲ್ಲಿ ಆಯೋಜಿತ ಶ್ರೀರಾಮಾಂಜನೇಯ ಭಜನಾ ಮಂಡಳಿಯ 35 ನೇ ವಾಷಿ೯ಕೋತ್ಸವದ ಸಂದಭ೯ ಆಯೋಜಿತ ಏಕಾಹ ಭಜನಾ ಕಾಯ೯ಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚಿದ್ವಿಲಾಸ್. ಭಜನೆಗೆ ಇಹಲೋಕದ ಪರಿವನ್ನು ಮರೆಸುವ ಶಕ್ತಿ ಇದೆ. ಭಜನೆಗೆ ಆರೋಗ್ಯದ ಸಮಸ್ಯೆಯನ್ನು ನಿವಾರಿಸುವ ಶಕ್ತಿಯೂ ಇದೆ. ಆದ್ಮಾತ್ಮಿಕ ಚಿಂತನೆಗೆ ಕಾರಣವಾಗುವ ಸಾಮೂಹಿಕ ಭಜನೆಗೆ ಮನಸ್ಸಿನ ಸಂತೋಷ, ಪರಿಶುದ್ದತೆ ಉಂಟು ಮಾಡುವ ಶಕ್ತಿ ಸಿದ್ದಿಸಿದೆ ಎಂದೂ ಅಭಿಪ್ರಾಯಪಟ್ಟರು. ಸಾಮೂಹಿಕ ಭಜನೆ ಎಂಬುದು ಚಿಕಿತ್ಸೆ ಕೂಡ ಆಗಿದೆ. ವೈದ್ಯರಿಂದ ನಿವಾರಿಸಲಾಗದ ಅನೇಕ ಮಾನಸಿಕ ಸಮಸ್ಯೆಗಳಿಗೆ ದೈವತ್ಯದ ಶಕ್ತಿ ಹೊಂದಿರುವ ಭಜನೆ ಪರಿಹಾರವಾಗಿ ಕಂಡಿದೆ ಎಂದು ಹೇಳಿದ ಚಿದ್ವಿಲಾಸ್, ಸಾಮೂಹಿಕ ಭಜನೆ ಎಂಬುದು ವ್ಯಕ್ತಿಯ ಮನಸ್ಸು, ಮನೆಯ ಸದಸ್ಯರ ನೆಮ್ಮದಿಗೂ ನೆರವಾಗುತ್ತದೆ ಆ ಮೂಲಕ ಸಮಾಜದ…

Read More

ಮಡಿಕೇರಿ ಡಿ.15 NEWS DESK : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕರ್ನಾಟಕ ದಕ್ಷಿಣ ಪ್ರಾಂತದ 45ನೇ ಪ್ರಾಂತ ಸಮ್ಮೇಳನ ಡಿ.17, 18 ಮತ್ತು 19 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಪ್ರವೀಣ್ ಎಚ್.ಕೆ ಅವರು ಸಮ್ಮೇಳನದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತದ 9 ಸಂಘಟನಾತ್ಮಕ ವಿಭಾಗಗಳಿಂದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಆಧ್ಯಾಪಕರು ಭಾಗವಹಿಸಲಿದ್ದಾರೆ. ಡಿ.17 ರ ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ಪ್ರದರ್ಶಿನಿ ಉದ್ಘಾಟನೆಗೊಳ್ಳಲಿದೆ ಎಂದರು. ಜನರಲ್ ತಿಮ್ಮಯ್ಯ ಪ್ರದರ್ಶನಿಯನ್ನು ಪದ್ಮಶ್ರೀ ಪುರಸ್ಕೃತ ಕಲಾವಿದೆ ರಾಣಿ ಮಾಚಯ್ಯ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಪ್ರಾಂತ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಹಾಗೂ ಅಭಿಮನ್ಯು ಅಕಾಡೆಮಿಯ ಸಿಇಓ ಅರ್ಜುನ್ ದೇವಯ್ಯ ಭಾಗವಹಿಸಲಿದ್ದಾರೆ. ಡಿ.19 ರಂದು ನಡೆಯುವ ಯುವ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ…

Read More

ಮಡಿಕೇರಿ ಡಿ.15 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಡಿ. 16 ರಂದು ಕುಶಾಲನಗರ ಬಳಿಯ ಹುಣಸೆವಾಡಿ ಸರ್ಕಲ್‍ನಲ್ಲಿರುವ ಕೂರ್ಗ್ ವಾಟರ್ ಪಾರ್ಕ್‍ನಲ್ಲಿ ಆಯೋಜಿತವಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ತಿಳಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿದ್ದಾರೆ. ಸಾಂಸ್ಕೃತಿಕ ವೇದಿಕೆಗೆ ಬಿಗ್‍ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಹಾಗೂ ಹಾಸ್ಯ ನಟ ತುಕಾಲಿ ಸಂತೋಷ್ ಚಾಲನೆ ನೀಡಲಿದ್ದು, ಹಿರಿಯ ಪತ್ರಕರ್ತ ರವಿ ಟೆಲೆಕ್ಸ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೂರ್ಗ್ ವಾಟರ್ ಪಾರ್ಕ್ ಮಾಲೀಕ ಲಕ್ಷ್ಮೀ ನಾರಾಯಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ನಿರ್ದೇಶಕಿ ಬಿ.ಆರ್. ಸವಿತಾ ರೈ,…

Read More

ಮಡಿಕೇರಿ ಡಿ.15 NEWS DESK : ಅಹ್ಮದಿಯಾ ಮುಸ್ಲಿಂ ಜಮಾತ್‍ನ ಮಹಿಳಾ ವಿಭಾಗದ ವತಿಯಿಂದ ನಗರದ ಬಾಲಭವನದಲ್ಲಿ “ಮಹಿಳಾ ಸರ್ವಧರ್ಮ ಸಮ್ಮೇಳನ” ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಎಲ್ಲರ ದೇಹದಲ್ಲಿ ಹರಿಯುವ ರಕ್ತ ಒಂದೇ, ನಾವು ಎಲ್ಲರೂ ಶಾಂತಿಗಾಗಿ ಒಟ್ಟಾಗಿ ಸೇರಿ ಸಹಬಾಳ್ವೆ ನಡೆಸಬೇಕೆಂದು ಹೇಳಿದರು. ಲಜ್ನಾ ಇಮಾಇಲ್ಲಾಹ್ ಸದಸ್ಯರಾದ ಡಾ.ಅಫ್ರೀನ್ ಮೆಲ್ವಿನ್ ಮಾತನಾಡಿ ಬಹುಧರ್ಮೀಯ ಹಾಗೂ ಬಹುಸಾಂಸ್ಕೃತಿಕ ಸಮಾಜದಲ್ಲಿ ಜೀವಿಸುತ್ತಿರುವುದರಿಂದ ಪರಸ್ಪರ ಧರ್ಮಗಳ ಸಂಪ್ರದಾಯಗಳು ಮತ್ತು ನಂಬಿಕೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಲಜ್ನಾ ಇಮಾಇಲ್ಲಾಹ್ ಸಂಸ್ಥೆಯ ಅಧ್ಯಕ್ಷೆ ಜೀನತ್ ಜಫ್ರುಲ್ಲಾ ಅವರು “ಇಸ್ಲಾಂನಲ್ಲಿ ಮಹಿಳೆಯ ಸ್ಥಾನಮಾನ” ವಿಷಯದ ಕುರಿತು ಮಾತನಾಡಿ, ಇಸ್ಲಾಂ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ, ಸಮಾನತೆ, ಘನತೆ, ಗೌರವ, ರಕ್ಷಣೆ ಹಾಗೂ ಸೂಕ್ತ ಸ್ಥಾನಮಾನವನ್ನು ನೀಡುತ್ತದೆ ಎಂದು ವಿವರಿಸಿದರು. ಶಿಕ್ಷಣ, ಉದ್ಯೋಗ, ಆರ್ಥಿಕ ಹಕ್ಕುಗಳು, ಭದ್ರತೆ ಹಾಗೂ ಸಂರಕ್ಷಣೆ, ವಿವಾಹ ಮತ್ತು ವಿಚ್ಛೇದನ ಸೇರಿದಂತೆ ಜೀವನದ ಎಲ್ಲಾ ವಲಯಗಳಲ್ಲಿ ಮಹಿಳೆಯರಿಗೆ ಹಕ್ಕುಗಳನ್ನು…

Read More