ಸುಂಟಿಕೊಪ್ಪ ಏ.18 NEWS DESK : ಕೆದಕಲ್ ಭದ್ರಕಾಳೇಶ್ವರಿ ದೇವಾಲಯದ ವತಿಯಿಂದ ವಿಷ್ಣುಮೂರ್ತಿ ದೇವರ ಕಟ್ಟಿತೆರೆ ಹಾಗೂ ಕೋಲಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ತೆರೆಯ ಅಂಗವಾಗಿ ಭದ್ರಕಾಳೇಶ್ಚರಿ, ಈಶ್ವರ, ವಿಷ್ಣುಮೂರ್ತಿ ಹಾಗೂ ಅಜ್ಜಪ್ಪ ದೇವರ ಕೋಲ ಮತ್ತು ದರ್ಶನಗಳು ನಡೆದವು. ಇದೇ ಮೊದಲ ಬಾರಿಗೆ ವಿಷ್ಣುಮೂರ್ತಿಯ ಕಟ್ಟಿತೆರೆ ನಡೆದಿತ್ತು. ವಿಷ್ಣುಮೂರ್ತಿ ದೇವರಿಗೆ ತೆರೆ ಕಟ್ಟುವ ಮೊದಲು ತೆರೆಯನ್ನು ಕೆದಕಲ್ ಮುಖ್ಯ ರಸ್ತೆಯಲ್ಲಿ ಕೇರಳದ ಚಂಡೆ ವಾದ್ಯ ದೊಂದಿಗೆ ಮೆರವಣಿಗೆ ನಡೆಸಲಾಯಿತು. ರಾತ್ರಿ ಮಹಾಮಂಗಳಾರತಿ, ಭಂಡಾರ ಹಾಕುವುದು, ದೇವರ ಹರಕೆ ಸೇರಿದಂತೆ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿತು. ಕೆದಕಲ್, ಬಾಳೆಕಾಡು, ಸುಂಟಿಕೊಪ್ಪ, ಹಾಲೇರಿ, ಬೋಯಿಕೇರಿ, ಮಡಿಕೇರಿ, ಕಾಂಡನಕೊಲ್ಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಲೇಖಕ: admin
ಸುಂಟಿಕೊಪ್ಪ ಏ.18 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡರಾಮ ದೇವಾಲಯದಲ್ಲಿ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊದಂಡರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ಅಳವಡಿಸಿ, ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ರಾಮನಿಗೆ ಪಂಚಾಮೃತ ಅಭಿಷೇಕ, ರಾಮತಾರಕ ಹೋಮ ನಡೆದು ಮಹಾಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಿಸಲಾಯಿತು. ಪೂಜಾ ಕೈಂಕಾರ್ಯವನ್ನು ದೇವಾಲಯದ ಮುಖ್ಯ ಅರ್ಚಕ ಜಯಂತ್ ಭಟ್ ಅವರ ನೇತೃತ್ವದಲ್ಲಿ ಅರ್ಚಕರುಗಳಾದ ಗಣೇಶ್ ಉಪಾಧ್ಯಯ, ಮಂಜುನಾಥ್ ಭಟ್, ಮಂಜುನಾಥ್ ಉಡುಪ, ಗಣೇಶ್ ಭಟ್ ನೆರವೇರಿಸಿದರು. ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ಪದಾಧಿಕಾರಿಗಳು ಗೌರಿ ಗಣೇಶೋತ್ಸವ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಬಿ.ಎಂ.ಸುರೇಶ್, ನಿಕಟಪೂರ್ವ ಕಾರ್ಯದರ್ಶಿ ಸುರೇಶ್ ಗೋಪಿ, ಮುಖಂಡರಾದ ಪಿ.ಆರ್.ಸುನಿಲ್ಕುಮಾರ್, ಧನುಕಾವೇರಪ್ಪ, ಶಾಂತರಾಮ್ ಕಾಮತ್, ರಾಮ ಸೇವಾ ಸಮಿತಿಯ ಅಶೋಕ್ ಶೇಟ್, ಪ್ರೀತಂ ಪ್ರಭಾಕರ್, ವಿಜಯ ಸೇರಿದಂತೆ ಮತ್ತಿತರರು…
ಸುಂಟಿಕೊಪ್ಪ ಏ.18 NEWS DESK : ಸುಂಟಿಕೊಪ್ಪದಲ್ಲಿ ಆಯೋಜಿಸಲಾದ ವಿಪಿ ಯೋಧ ಕ್ರಿಯೇಟಿವ್ ಅಕಾಡೆಮಿ ಮಾರ್ಷಲ್ ಆರ್ಟ್ ಅಂಡ್ ಫಿಟ್ನೆಸ್ ವತಿಯಿಂದ ಕರಾಟೆ ಬ್ಲಾಕ್ಬೆಲ್ಟ್ ಪರೀಕ್ಷೆಯನ್ನು ಪದವಿ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು ಉತ್ತೀರ್ಣರಾದ ಪ್ರಮಾಣಪತ್ರ ಹಾಗೂ ಬ್ಲಾಕ್ಬೆಲ್ಟ್ಗಳನ್ನು ವಿತರಿಸಲಾಯಿತು. ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ವಿವಿಧ ಬೆಲ್ಟ್ ಸ್ಥಾನಗಳಿಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಒಟ್ಟು 40 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸತೀಶ್, ಪ್ರಶಾಂತಿನಿ ದಂಪತಿಗಳ ಪುತ್ರ ಕೆ.ಎಸ್.ಅಕ್ಷಯ್ ಬ್ಲಾಕ್ ಬೆಲ್ಟ್, ಎಫ್ ಎಂ ಸಿ ಕಾಲೇಜಿನ ದ್ವಿತೀಯ ಬಿ ಸಿ ಎ ವಿದ್ಯಾರ್ಥಿ ಡಾನ್ ದ್ವಿತೀಯ ಸ್ಥಾನ ಪಡೆದಿದ್ದಾನೆ. 7ನೇ ಹೊಸಕೋಟೆ ನಿವಾಸಿ ಎಚ್.ಎನ್.ಶ್ರೀಧರ್ ಹಾಗೂ ಅನಿತಾ ದಂಪತಿಗಳ ಪುತ್ರ ಎಸ್. ಅಂಕಿತ್ ಬ್ಲಾಕ್ ಬೆಲ್ಟ್, ಎಫ್ ಎಂ ಸಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಡಾನ್ ದ್ವಿತೀಯ. ಕೊಡಗರಹಳ್ಳಿ ಅಂದಗೋವೆಯ ವಲ್ಲಂಡ ಕಾಶಿಯಪ್ಪ ಹಾಗೂ ವಲ್ಲಂಡ ಗೌರಮ್ಮ ಅವರ ಪುತ್ರಿ ವಲ್ಲಂಡ ಕೆ.ಹರಿಪ್ರಿಯ ಬ್ಯಾಕ್ ಬೆಲ್ಟ್, ಇವಳು ಸಂತ…
ಮಡಿಕೇರಿ ಏ.17 NEWS DESK : ಕೊಡಗು ಮತ್ತು ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರು ಇಂದು ನಗರದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೈಸೂರು-ಕೊಡಗು ರೈಲು ಸಂಪರ್ಕ, ಐಟಿ-ಬಿಟಿ ಕಂಪೆನಿಗಳಲ್ಲಿ ಕೊಡಗಿನವರಿಗೆ ಆದ್ಯತೆ, ಸಮಗ್ರ ನೀರು ಸರಬರಾಜು ವ್ಯವಸ್ಥೆ, ಪಿರಿಯಾಪಟ್ಟಣದಲ್ಲಿ ಕೃಷಿ ಸಂಶೋಧನಾ ಕೇಂದ್ರ, ಮಡಿಕೇರಿಯಲ್ಲಿ ವೈದ್ಯಕೀಯ ಟ್ರಾಮಾ ಕೇಂದ್ರ ಸ್ಥಾಪನೆ, ಸೋಮವಾರಪೇಟೆಯಲ್ಲಿ ಟೆಕ್ನಾಲಜಿ ಪಾರ್ಕ್, ಕಾಫಿ ಮತ್ತು ಕರಿಮೆಣಸು ಬೆಳೆಗಾರರ ಸಮಸ್ಯೆಗೆ ಪರಿಹಾರ, ಮಡಿಕೇರಿಯಲ್ಲಿ ಮಿನಿ ಏರ್ಪೋರ್ಟ್, ಯೋಗ ಶಾಲೆಗಳ ಸ್ಫಾಪನೆ, ಕ್ರೀಡಾಭಿವೃದ್ಧಿ ಪ್ರಾಧಿಕಾರ ಪ್ರಾರಂಭ, ಹುಣಸೂರಿನಲ್ಲಿ ಸೆಂಟ್ರಲ್ ಯೂನಿವರ್ಸಿಟಿ ಸ್ಥಾಪನೆ, ವಿರಾಜಪೇಟೆಯಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಕೇಂದ್ರ ಆರಂಭ, ಗೋಣಿಕೊಪ್ಪಲುವಿನಲ್ಲಿ ಕಾಫಿ ರಫ್ತು ಕೇಂದ್ರ ಸೇರಿದಂತೆ ವಿವಿಧ ಯೋಜನೆಗಳ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ ಎಂದು ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಹೇಳಿದರು. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಇಂದು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಲಕ್ಷ್ಮಣ್ ಗೌಡ ಹೇಳಿದರು. ಈ…
ಸೋಮವಾರಪೇಟೆ ಏ.17 NEWS DESK : ಶ್ರೀ ರಾಮನವಮಿ ಉತ್ಸವ ಸಮಿತಿ ಮತ್ತು ಹಿಂದುಜಾಗರಣಾ ವೇದಿಕೆ ವತಿಯಿಂದ ಆಂಜನೇಯ ದೇವಾಲಯದಲ್ಲಿ ಶ್ರೀ ರಾಮನವಮಿ ಆಚರಿಸಲಾಯಿತು. ಪಟ್ಟಣದ ರಾಮಮಂದಿರದಲ್ಲಿ ರಾಮನವಮಿ ಅಂಗವಾಗಿ ಮುಂಜಾನೆಯಿಂದಲೇ ವಿಶೇಷ ಪೂಜೆ, ಹೋಮಹವನ ನಡೆಯಿತು. ದೇವಾಲಯದಲ್ಲಿ ಭಕ್ತಾದಿಗಳಿಗೆ ಪಾನಕ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಮತ್ತು ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ನಡೆಯಿತು. ಪಟ್ಟಣದ ಬಸ್ ನಿಲ್ದಾಣ ಮತ್ತು ಮಹಾತ್ಮಗಾಂಧಿ ವೃತ್ತದ ಬಳಿ ಸಾರ್ವಜನಿಕರಿಗೆ ಪಾನಕ ವಿತರಿಸಲಾಯಿತು. ರಾಮನವಮಿ ಶೋಭ ಯಾತ್ರೆ, ಶಾಂತಿಯುವವಾಗಿ ನಡೆಯಲು ಡಿವೈಎಸ್ಪಿ ಗಂಗಾಧರಪ್ಪ ಮತ್ತು ಇನ್ಸ್ಪೆಕ್ಟರ್ ವಸಂತ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ನಡೆಯಿತು.
ಮಡಿಕೇರಿ ಏ.17 NEWS DESK : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 134ನೇ ವಾರ್ಷಿಕೋತ್ಸವವು ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಿತು. ನಂತರ ಮನೆ ಮನೆಯಿಂದ ಪೂಜೆಯನ್ನು ದೇವಾಲಯಕ್ಕೆ ತಂದೊಪ್ಪಿಸಲಾಯಿತು. ರಾತ್ರಿ ಹೂವಿನವರ ಬೇಡುವುದು, ಮಹಿಳೆಯರು ಮನೆ, ಮನೆಯಿಂದ ಆರತಿಯನ್ನು ದೇವಾಲಯಕ್ಕೆ ತಂದೊಪ್ಪಿಸಿದರು. ದೇವಿಗೆ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ಬಳಿಕ ಶ್ರೀ ದೇವಿಗೆ ಹರಕೆ ಮತ್ತು ಕಾಣಿಕೆ ಒಪ್ಪಿಸಲಾಯಿತು. ಇದೇ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಏ.21 ರಂದು ಅಪರಾಹ್ನ 3 ಗಂಟೆಗೆ ಗುಳಿಗನ ಪೂಜೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎಂದು ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ತಿಳಿಸಿದೆ.
ಮಡಿಕೇರಿ ಏ.17 NEWS DESK : ಮತ ಚಲಾಯಿಸುವುದು ಅವರವರ ವೈಯುಕ್ತಿಕ ವಿಚಾರವಾಗಿದೆ. ಅನಗತ್ಯವಾಗಿ ಗೊಂದಲದ ಹೇಳಿಕೆಯನ್ನು ನೀಡಿ ಅರೆಭಾಷಿಕರನ್ನು ಇಕ್ಕಟ್ಟಿಗೆ ದೂಡುವ ಕೆಲಸವನ್ನು ಬಿಜೆಪಿಯ ಅರೆಭಾಷಿಕ ಮಿತ್ರರು ಮಾಡಕೂಡದು ಎಂದು ಕೊಡಗು ಗೌಡ ವಿದ್ಯಾ ಸಂಘದ ನಿರ್ದೇಶಕ ಸೂದನ ಎಸ್.ಈರಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ಸಚಿವ ವೆಂಕಟೇಶ್ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಕೊಡಗು ಗೌಡ ವಿದ್ಯಾಸಂಘದಲ್ಲಿ ಅರೆಭಾಷಿಕ ಪ್ರಮುಖರೊಂದಿಗೆ ಸಮಾಲೋಚಿಸಿ ಮತ ಯಾಚಿಸಿದ್ದು ನಿಜ. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ರಾಜ್ಯದ ಉಪ ಮುಖ್ಯಮಂತ್ರಿಗಳಿಗೆ ಸಲ್ಲಬೇಕಾದ ಗೌರವವನ್ನು ಸಮಾಜದ ವತಿಯಿಂದ ನೀಡಿದ್ದಾರೆ. ಇದು ಅವರ ಕರ್ತವ್ಯ ಮತ್ತು ಹೃದಯ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ. ಆದರೆ ಸೋಮಣ್ಣ ಅವರು ಗೌಡ ಜನಾಂಗದವರಲ್ಲಿ ಲಕ್ಷ್ಮಣ್ ಗೌಡರ ಪರ ಮತಯಾಚನೆ ಮಾಡಿದ್ದಾರೆ ಎಂದು ಬಿಜೆಪಿಯ ಕೆಲವು ಅರೆಭಾಷಿಕ ಮಿತ್ರರು ಕಪೋಲಕಲ್ಪಿತ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅಸಮಾಧಾನ…
ಮಡಿಕೇರಿ ಏ.17 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಭಾಗಮಂಡಲ ಫೀಡರ್ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಏ.18 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಏ.17 NEWS DESK : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2023-24ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತವಾಗಿ 2 ತಿಂಗಳು ವಸತಿಯುತ ದೈಹಿಕ ಸಾಮರ್ಥ್ಯ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಮವಸ್ತ್ರ ಸೇವೆಗಳಿಗೆ ವಸತಿಯುತ 60 ದಿನಗಳ ದೈಹಿಕ ಹಾಗೂ ಇತರೆ ತರಬೇತಿ. 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 17 ವರ್ಷ 6 ತಿಂಗಳಿನಿಂದ 23 ವರ್ಷಗಳು, ಅಭ್ಯರ್ಥಿಯ ಸಾಮಾನ್ಯ ಅರ್ಹತೆ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ…
ಮಡಿಕೇರಿ ಏ.17 NEWS DESK : ಮಡಿಕೇರಿಗೆ ಆಗಮಿಸಿದ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಡಗು ಜಿಲ್ಲೆಯ ಅರೆಭಾಷಿಕ ಗೌಡರು ಹಾಗೂ ಒಕ್ಕಲಿಗರ ನಾಯಕರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆ ಕೊಡಗು ಗೌಡ ವಿದ್ಯಾಸಂಘದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯದ ಉಪ ಮುಖ್ಯಮಂತ್ರಿಗಳಿಗೆ ಗೌರವ ಸೂಚಿಸಿ ಜನಾಂಗದ ನಾಯಕನಾಗಿ ಈ ಸಭೆಗೆ ಹಾಜರಾಗಿದ್ದೇನೆ ಹೊರತು ಯಾವುದೇ ಪಕ್ಷದ ಅಭಿಮಾನಿಯಾಗಿ ಅಲ್ಲ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉಪ ಮುಖ್ಯಮಂತ್ರಿಗಳು ಆಸೀನರಾಗಿದ್ದ ವೇದಿಕೆಯಲ್ಲಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಕ್ರಿಕೆಟ್ ಕಪ್ ನ ಟ್ರೋಫಿ ಅನಾವರಣ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನನಗೆ ಆಹ್ವಾನವಿದ್ದ ಕಾರಣ ನಾನು ಹಾಜರಿದ್ದೆ ಎಂದು ತಿಳಿಸಿದ್ದಾರೆ. ವೇದಿಕೆಯಲ್ಲಿ ನಾನು ಯಾವ ಪಕ್ಷಕ್ಕೂ ಅಥವಾ ಅಭ್ಯರ್ಥಿಗೂ ಮತ ಚಲಾಯಿಸಲು ಕರೆ ನೀಡಿರುವುದಿಲ್ಲ. ಅರೆಭಾಷಿಕ ಜನಾಂಗದ ಮತ ಬಾಂಧವರು ವಿದ್ಯಾವಂತರು ಹಾಗೂ ಮತ…






