ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ನಿಡ್ತ ಗ್ರಾಮದ ಶ್ರೀ ಬಸವೇಶ್ವರ ಮತ್ತು ಶ್ರೀ ಕನ್ನಂಬಾಡಿಯಮ್ಮ ದೇವಾಲಯದಲ್ಲಿ ಮೇ 6 ರಂದು ವಾರ್ಷಿಕ ಪೂಜೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದಯಾನಂದ ಮತ್ತು ಕುಟುಂಬದವರು ಮನವಿ ಮಾಡಿದ್ದಾರೆ.
ಲೇಖಕ: admin
ಪುತ್ತೂರು ಮೇ 3 NEWS DESK : ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೋಫೆಸರ್ ಡಾ.ರಾಘವೇಂದ್ರ ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2024” ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ಯಾವುದೇ ತಂತ್ರಜ್ಞಾನಕ್ಕೆ ಅದರದ್ದೇ ಆದ ಮಿತಿ ಇರುತ್ತದೆ. ಹಾಗಾಗಿ ಸಂಪೂರ್ಣವಾಗಿ ಅದರ ಮೇಲೆ ಅವಲಂಬಿತವಾಗದೆ ಅದರ ಸಹಾಯವನ್ನು ಪಡೆದುಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ…
ಸೋಮವಾರಪೇಟೆ ಮೇ 3 NEWS DESK : ಹಾನಗಲ್ಲುಬಾಣೆ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮೂರು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಗಂಗಾಪೂಜೆಯೊಂದಿಗೆ ಆರಂಭಗೊಂಡ ವಾರ್ಷಿಕ ಪೂಜೋತ್ಸವಲ್ಲಿ ಗಣಪತಿ ಹೋಮ, ಅಲಂಕಾರ ಸೇವೆ, ಮಹಾಮಂಗಳಾರತಿ, ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ದೇವಾಲಯ ಸಮಿತಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಗಣೇಶ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪೂಜೋತ್ಸವದ ಉಸ್ತುವಾರಿ ವಹಿಸಿದ್ದರು. ಶಾಸಕ ಡಾ. ಮಂತರ್ ಗೌಡ ಸೇರಿದಂತೆ ಇತರ ಪ್ರಮುಖರು ಇದ್ದರು.
ಮಡಿಕೇರಿ ಮೇ 3 NEWS DESK : ವಿರಾಜಪೇಟೆ ಶಿವಕೇರಿಯಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಶ್ರೀ ಆದಿ ದಂಡಿನ ಮಾರಿಯಮ್ಮ ಮತ್ತು ಶ್ರೀ ಚಾಮುಂಡಿ (ಚೌಂಡಿ) ದೇವರ ಉತ್ಸವವು ಮೇ 7 ರಿಂದ 10ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮೇ 7 ರಂದು ಪ್ರಾತಃಕಾಲ 6 ಗಂಟೆಗೆ ಗಣಪತಿ ಹೋಮ, ಬೆಳಿಗ್ಗೆ 8.30 ಗಂಟೆಗೆ ಕಳಸ ಪೂಜೆ, ಮಧ್ಯಾಹ್ನ 12 ಗಂಟೆಗೆ ದೇವಿಗೆ ಹೂವಿನ ಅಲಂಕಾರದೊಂದಿಗೆ ಮಹಾಪೂಜೆ ಮತ್ತು ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನದಾನ ನೆರವೇರಲಿದೆ. ಅಪರಾಹ್ನ 2 ಗಂಟೆಗೆ ದೇವರ ಪಲ್ಲಕ್ಕಿಯನ್ನು ಅಲಂಕೃತ ಮಂಟಪದೊಂದಿಗೆ ವಿರಾಜಪೇಟೆಯ ಮುಖ್ಯಬೀದಿಯಲ್ಲಿ ಮೆರವಣಿಗೆ ನಡೆಯಲಿದ್ದು, ರಾತ್ರಿ 9 ಗಂಟೆಗೆ ತಳಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ 10 ಗಂಟೆಗೆ ಆರತಿ ಪೂಜೆ, ಮಹಾಪೂಜೆ ಹಾಗೂ ಮಂಗಳಾರತಿ ನೆರವೇರಲಿದೆ. ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪೂಜೆ, ಮಧ್ಯಾಹ್ನ…
ಮಡಿಕೇರಿ ಮೇ 3 NEWS DESK : ಚೆಯ್ಯಂಡಾಣೆ ಸಮೀಪದ ಚೇಲಾವರದಲ್ಲಿ ಪಿ.ಜೆ.ಪುತ್ರ, ಜಯನವರ ಮನೆಯಲ್ಲಿ ನೂತನವಾಗಿ ಸ್ಥಾಪನೆ ಗೊಂಡಿರುವ ಶ್ರೀ ಸ್ವಾಮಿ ಕೊರಗಜ್ಜನ ಸನ್ನಿಧಿಯಲ್ಲಿ ಮೇ 4 ಮತ್ತು 5 ರಂದು ದೈವ ಕೋಲಗಳು ನಡೆಯಲಿದೆ. ಮೇ 4 ರಂದು ಬೆಳಿಗ್ಗೆ 6.30 ಗಂಟೆಗೆ ಗಣಪತಿ ಪೂಜೆ, ಅಪರಾಹ್ನ 3 ಗಂಟೆಗೆ ಭಂಡಾರ ತೆಗೆಯುವುದು, ಸಂಜೆ 4 ಗಂಟೆಗೆ ಗುಳಿಗ ದೈವದ ಕೋಲ, ರಾತ್ರಿ 8.30 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9.30 ಗಂಟೆಗೆ ಪಾಷಾಣಮೂರ್ತಿ ದೈವದ ಕೋಲ, ರಾತ್ರಿ 11.30 ಗಂಟೆಗೆ ಮಯೊಂತಿ ದೈವದ ಕೋಲ ನೆರವೇರಲಿದೆ. ಮೇ 5 ರಂದು ಬೆಳಿಗ್ಗೆ 6 ಗಂಟೆಗೆ ಪ್ರಸಾದ ವಿತರಣೆ, ಬೆಳಿಗ್ಗೆ 7 ಗಂಟೆಗೆ ಸ್ವಾಮಿ ಕೊರಗಜ್ಜ ದೈವದ ಕೋಲ, ಮಧ್ಯಾಹ್ನ 12.30 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಎರಡು ದಿನಗಳಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ನೇಮೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕೊರಗಜ್ಜ ದೈವ ಸನ್ನಿಧಿಯ ಆಡಳಿತ ಮಂಡಳಿ ಕೋರಿದೆ. ಅನ್ನದಾನ…
ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ ಲಯನ್ಸ್ ಕ್ಲಬ್ ಮತ್ತು ಬೆಂಗಳೂರಿನ ಯಲಹಂಕ ಲಯನ್ಸ್ ಕ್ಲಬ್ ವತಿಯಿಂದ ಗರಗಂದೂರು ಬಿ ಗ್ರಾಮದ ಹೊಸತೋಟದಲ್ಲಿ ರುದ್ರಭೂಮಿ ಶಂಕುಸ್ಥಾಪನ ಸಮಾವೇಶ ನಡೆಯಿತು. ಸೋಮವಾರಪೇಟೆ ಲಯನ್ಸ್ ಅಧ್ಯಕ್ಷ ಎಸ್.ಮಹೇಶ್ ಮಾತನಾಡಿ, ಬಡ ಕುಟುಂಬದ ಪ್ರದೇಶವಾದ ಈ ಭಾಗದಲ್ಲಿ ಸುಸಜ್ಜಿತವಾದ ಸಿಲಿಕಾನ್ ಚೇಂಬರ್ ಒಳಗೊಂಡ ರುದ್ರ ಭೂಮಿ ನಿರ್ಮಾಣ ಮಾಡಲು ಸೋಮವಾರಪೇಟೆ ಲಯನ್ಸ್ ಕ್ಲಬ್ ಮತ್ತು ಬೆಂಗಳೂರಿನ ಯಲಹಂಕ ಲಯನ್ಸ್ ಕ್ಲಬ್ ನಿರ್ಧರಿಸಿದ್ದು, ಅಂದಾಜು 4.30 ಲಕ್ಷ ರೂಪಾಯಿಗಳನ್ನು ವಿನಯೋಗಿಸುತ್ತಿದೆ ಎಂದರು. ಈ ಸಂದರ್ಭ ಸೋಮವಾರಪೇಟೆ ಲಯನ್ಸ್ ಕ್ಲಬ್ ಕಾರ್ಯದರ್ಶಿ ಚಾವಡಿ ಶಿವಕುಮಾರ್ ಯಲಹಂಕ, ಲಯನ್ಸ್ ಅಧ್ಯಕ್ಷ ಜಯಪ್ರಕಾಶ್, ಕಾರ್ಯದರ್ಶಿ ಜಿತೇಂದ್ರ ಸಿಂಗ್, ಚಿಟ್ಟಿಮಾಡ ರೋಹಿತ್, ನಂಗಾರು ರಾಮಚಂದ್ರ, ಎ.ಪಿ.ಸುಬ್ಬಯ್ಯ, ಮುಖಂಡರಾದ ರಾಜು, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಲೀಂ ಹಾಜರಿದ್ದರು.
ಮಡಿಕೇರಿ ಮೇ 3 NEWS DESK : ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿದ ವನ್ಯಜೀವಿ ಕುರಿತ ನಾಲ್ಕು ಪುಸ್ತಕಗಳು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಆಶ್ರಯದಲ್ಲಿ ಮೇ 9 ರಂದು ಬಿಡುಗಡೆಯಾಗಲಿದೆ. ಮೈಸೂರು ಕಲ್ಚರಲ್ ಅಸೋಸಿಯೇಶನ್, ಬೆಂಗಳೂರಿನ ಅಕ್ಷರ ಮಂಟಪ ಪಬ್ಲಿಕೇಷನ್ ಸಹಯೋಗದಲ್ಲಿ ಬೆಳಗ್ಗೆ 10.30ಕ್ಕೆ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಐತಿಚಂಡ ರಮೇಶ್ ಉತ್ತಪ್ಪ ಅವರ `ಕಾಡು ಹೇಳಿದ ಕಥೆ’, `ಹಾವು, ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ’, `ಆನೆ, ಬದಲಾದ ವರ್ತನೆ’, `ಅರ್ಜುನ, ನಿನ್ನ ಮರೆಯಲೆಂತು ನಾ’ ಕೃತಿಗಳು ಲೋಕಾರ್ಪಣೆಯಾಗಲಿವೆ. ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ.ಲೋಕನಾಥ್ ಉದ್ಘಾಟಿಸಲಿದ್ದಾರೆ. ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ಶ್ರೀ ವಿಶ್ವೇಶ್ವರ ಭಟ್, ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀ ರವಿಂದ್ರ ಭಟ್, ವಿಜಯ ಕರ್ನಾಟಕ ಪತ್ರಿಕೆ ಸಂಪಾದಕ ಶ್ರೀ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಪತ್ರಿಕ ಸಂಪಾದಕ ಕೆ.ಎನ್.ಚನ್ನೇಗೌಡ, ಕನ್ನಡ ಪ್ರಭಾ ಪತ್ರಿಕೆ ಪ್ರಧಾನ ಸಂಪಾದಕ ಶ್ರೀ…
ಮಡಿಕೇರಿ ಮೇ 3 NEWS DESK : ಮರಗೋಡು ಶ್ರೀ ಶಿವ ಪಾರ್ವತಿ ದೇವಾಲಯದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಪಾಂಡನ ಮನೆಯಿಂದ ಭಂಡಾರ ತರುವ ಮೂಲಕ ಪ್ರಾರಂಭವಾಯಿತು. ಪಟ್ಟಣಿಯಂದು ಎತ್ತು ಪೋರಾಟ ನಡೆಯಿತು. ತೆಂಗಿನಕಾಯಿ ಕೀಳುವುದು, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಿತು. ಸಂಜೆ ದೇವರ ಜಳಕದ ನಂತರ 11 ಸುತ್ತು ದೇವರ ನೃತ್ಯ ಬಲಿಯು ನಡೆದು ಉತ್ಸವ ಸಂಪನ್ನಗೊಂಡಿತು. ಉತ್ಸವ ಸಂದರ್ಭದಲ್ಲಿ ದೇವರಿಗೆ ಕುಂಕುಮರ್ಚನೆ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಅರ್ಚಕರಾದ ಮಹೇಶ್ ಶಗ್ರಿತ್ತಾಯ ಹಾಗೂ ಕಾಸರಗೋಡಿನ ತಂತ್ರಿಗಳಾದ ಗೋಪಾಲಕೃಷ್ಣ ಕೆದಿಲಾಯ ಅವರು ಪೂಜಾ ಕೈಂಕರ್ಯಗಳನ್ನು ನೆರೆವೇರಿಸಿದರು. ಬ್ರಹ್ಮವಾಹಕರಾದ ಸತ್ಯಮೂರ್ತಿ ಸರಳಾಯ ಮತ್ತು ಕೃಷ್ಣ ಪ್ರಸಾದ್ ಕೆದಿಲಾಯ ಅವರು ಉತ್ಸವ ಮೂರ್ತಿಯನ್ನು ಹೊತ್ತು ದೇವರ ಸೇವೆಯನ್ನು ನೆರೆವೇರಿಸಿದರು. ಉತ್ಸವದಲ್ಲಿ ವಿವಿಧ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕುಶಾಲನಗರ ಮೇ 2 NEWS DESK : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣ, ಚಿಕ್ಕ ಅಳುವಾರ, ಕೊಡಗು ಇಲ್ಲಿ, 2024-25ನೇ ಶೈಕ್ಷಣಿಕ ಸಾಲಿನಿಂದ ಬಹು ಬೇಡಿಕೆಯ ವೃತ್ತಿಪರ ಕೋರ್ಸ್ಗಳಾದ ಬಿಸಿಎ, ಎಂಸಿಎ ಮತ್ತು ಎಂಬಿಎ ಪದವಿಗಳ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಮೊದಲ ಹಂತದಲ್ಲಿ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (BCA in Artificial Intelligence and Machine Learning) ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA in Artificial Intelligence and Machine Learning) ಜನಪ್ರಿಯ ಕೋರ್ಸ್ಗಳಲ್ಲಿ ಒಂದಾಗಿದೆ. ಮೂರು ವರ್ಷಗಳ ಪದವಿ ಕೋರ್ಸ್ ಇದಾಗಿದ್ದು ಆರು ಸೆಮಿಸ್ಟರ್ಗಳನ್ನೊಳಗೊಂಡಿದೆ. ಡೇಟಾಬೇಸ್ ನಿರ್ವಹಣಾ ವ್ಯವಸ್ಥೆಗಳು, ನೆಟ್ವರ್ಕಿಂಗ್, ಡೇಟಾ ರಚನೆ ಮತ್ತು ಪೈಥಾನ್, ‘ಸಿ’, ‘ಸಿ++’, ಕ್ಲೌಡ್ ಕಂಪ್ಯೂಟಿAಗ್ ಮತ್ತು ‘ಜಾವಾ’ ನಂತಹ ಕೋರ್ ಪ್ರೋಗ್ರಾಮಿಂಗ್ ಭಾಷೆಗಳ ಬಗ್ಗೆ ಕಲಿಯುವುದಕ್ಕೆ ಹಾಗೂ ಮಾಹಿತಿ ತಂತ್ರಜ್ಞಾನ ಪರಿಕರಗಳ ವಿನ್ಯಾಸ…
ಮಡಿಕೇರಿ ಮೇ 2 NEWS DESK : ಕೊಡವ ಕುಟುಂಬಗಳ ನಡುವಿನ 24ನೇ ಹಾಕಿ ಹಬ್ಬ ಪ್ರತಿಷ್ಠಿತ “ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024” ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಗಿನ್ನಿಸ್ ವಿಶ್ವ ದಾಖಲೆ ಬರೆಯುವ ಮೂಲಕ ಸಣ್ಣ ಕುಟುಂಬವೊಂದು ದೊಡ್ಡ ಸಾಧನೆ ಮಾಡಿದೆ ಎಂದು ಕುಂಡ್ಯೋಳಂಡ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಂಡ್ಯೋಳಂಡ ಹಾಕಿ ಹಬ್ಬದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಅವರು ಕೇವಲ 103 ಸದಸ್ಯ ಬಲದ ಕುಟುಂಬವೊಂದು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವೆಂದರು. ಕಳೆದ ಒಂದು ವರ್ಷದಿಂದ ಹಾಕಿ ಹಬ್ಬದ ಯಶಸ್ಸಿಗಾಗಿ ಎಲ್ಲರ ಸಹಕಾರ ಪಡೆದು ಶ್ರಮಿಸಲಾಗಿದೆ. 30 ದಿನಗಳ ಕಾಲ ನಡೆದ ಕುಂಡ್ಯೋಳಂಡ ಹಾಕಿ ಕಾರ್ನಿವಲ್ನಲ್ಲಿ 346 ಕುಟುಂಬಗಳ 4,834 ಆಟಗಾರರು ಪಾಲ್ಗೊಂಡಿದ್ದರು. 360 ಕೊಡವ ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದರು. ಇದು ಗಿನ್ನಿಸ್ ವಿಶ್ವ ದಾಖಲೆ ಬರೆಯಲು ಸಹಕಾರಿಯಾಯಿತು. ಗಿನ್ನಿಸ್ ಪ್ರವೇಶ ಅಷ್ಟು ಸುಲಭವಾಗಿರಲಿಲ್ಲ, ಎಲ್ಲಾ…






