ಮಡಿಕೇರಿ ಮೇ 2 NEWS DESK : ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಮೇ 3ರ ಪಂದ್ಯ ಪಂದ್ಯ -1(08:30 ಎ.ಎಂ) ಅಂಜಿಗೇರಿ NAAD v/s ಕೂರ್ಗ್ ಬ್ಲಾಸ್ಟರ್ಸ್ ತಂಡ ಪಂದ್ಯ -2 (ಮಧ್ಯಾಹ್ನ 1:30) MTB ರಾಯಲ್ಸ್ v/s ಕೊಡವ ವಾರಿಯರ್ಸ್
ಲೇಖಕ: admin
ಮಡಿಕೇರಿ ಮೇ 2 NEWS DESK : “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ತೀವ್ರ ಪೈಪೋಟಿಯಿಂದ ಕೂಡಿದ್ದ ದಿನದ ದ್ವಿತೀಯ ಪಂದ್ಯದಲ್ಲಿ ಕೊಡವ ವಾರಿಯರ್ಸ್ ತಂಡ 11 ರನ್ಗಳ ಅಲ್ಪ ಅಂತರದ ಗೆಲುವನ್ನು ಟೀಂ ಲೀವರೇಜ್ ತಂಡದ ವಿರುದ್ಧ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ಗೆ ಇಳಿದ ಕೊಡವ ವಾರಿಯರ್ಸ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 112 ರನ್ಗಳನ್ನು ಕಲೆ ಹಾಕಿತು. ಇದಕ್ಕೆ ಪ್ರತಿಯಾಗಿ ಟೀಂ ಲೀವರೇಜ್ ತಂಡ ನಿಗದಿತ ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 101 ರನ್ಗಳನ್ನಷ್ಟೆ ಕಲೆ ಹಾಕಲು ಶಕ್ತವಾಗಿ, ಗೆಲುವಿನ ಸಮೀಪಕ್ಕೆ ಬಂದು ಪರಾಭವಗೊಂಡು ನಿರಾಸೆ ಅಣುಭವಿಸಿತು. ಕೊಡವ ವಾರಿಯರ್ಸ್ ತಂಡದ ಸಜನ್ ನಂದೀರ ಅವರು ಬಿಗುವಿನ ಬೌಲಿಂಗ್ ಪ್ರದರ್ಶನ ನೀಡಿ, ಕೇವಲ 12 ರನ್ಗಳನ್ನಿತ್ತು 3 ವಿಕೆಟ್ ಕಬಳಿಸಿ ತಂಡದ ಗೆಲುವಿಗೆ ಕಾರಣರಾಗುವ ಮೂಲಕ ಪಂದ್ಯ ಪುರುಷೋತ್ತಮರಾಗಿ ಹೊರ ಹೊಮ್ಮಿದರು.
ಮಡಿಕೇರಿ ಮೇ 2 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ದಿನದ ಮೊದಲ ಪಂದ್ಯದಲ್ಲಿ ರಾಯಲ್ ಟೈಗರ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿ ಪೂರ್ಣ ಅಂಕಗಳನ್ನು ಪಡೆದುಕೊಂಡಿತು. ರಾಯಲ್ ಟೈಗರ್ಸ್ ತಂಡ 7 ವಿಕೆಟ್ಗಳ ಅಂತರದಿಂದ ಎದುರಾಳಿ ಟೀಂ ವೈಲ್ಡ್ಫ್ಲಾರ್ ತಂಡವನ್ನು ಪರಾಭವಗೊಳಿಸಿತು. ಮೊಲು ಬ್ಯಾಟಿಂಗ್ ಮಾಡಿದ ಟೀಂ ವೈಲ್ಡ್ ಫ್ಲಾರ್ ತಂಡ ನಿಗದಿತ ಇಪ್ಪತ್ತು ಓವರ್ಗಳಲ್ಲಿ 18 ಓವರ್ಗಳಲ್ಲೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡು 131 ರನ್ಗಳನ್ನು ಕಲೆ ಹಾಕಿತು. ಇದಕ್ಕೆ ಪ್ರತಿಯಾಗಿ ರಾಯಲ್ ಟೈಗರ್ಸ್ ತಂಡ 11.2 ಓವರ್ಗಳಲ್ಲೆ 132 ರನ್ಗಳನ್ನು ಗಳಿಸುವ ಮೂಲಕ ಸುಲಭ ಗೆಲುವನ್ನು ಸಾಧಿಸಿತು. ವಿಜೇತ ರಾಯಲ್ ಟೈಗರ್ಸ್ ತಂಡದ ಅಪ್ಪಯ್ಯ ಅವರು 23 ರನ್ ನೀಡಿ ಎರುರಾಳಿ ವೈಲ್ಡ್ ಫ್ಲಾರ್ ತಂಡದ ರನ್ ಓಟಕ್ಕೆ ಕಡಿವಾಣ ಹಾಕಿದ್ದಲ್ಲದೆ, ಬ್ಯಾಟಿಂಗ್ನಲ್ಲಿ 12 ಎಸೆತಕ್ಕೆ ಮಿಂಚಿನ…
ಮಡಿಕೇರಿ ಮೇ 2 NEWS DESK : ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ಹಿಟ್ನೆ ಹೆಬ್ಬಾಗಿಲು ನಿವಾಸಿ ಶಿವಪ್ಪ (49) ಎಂಬುವವರೇ ಮೃತ ವ್ಯಕ್ತಿ. ಶಿವಪ್ಪ ಇಂದು ಮಧ್ಯಾಹ್ನ ಕುಶಾಲನಗರ ಕೊಪ್ಪ ಸೇತುವೆಯ ಕೆಳಭಾಗದ ನದಿಯಲ್ಲಿ ಸ್ನಾನಕ್ಕೆಂದು ಇಳಿದಾಗ ಕಾಲುಜಾರಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಕುಶಾಲನಗರ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿದ್ದಾಪುರ ಮೇ 2 NEWS DESK : ಮನೆಯ ಆವರಣದ ಕೋಳಿ ಗೂಡಿನಲ್ಲಿದ್ದ ಭಾರೀ ಗಾತ್ರದ ನಾಗರ ಹಾವೊಂದನ್ನು ರಕ್ಷಿಸಿರುವ ಘಟನೆ ಪೊನ್ನಂಪೇಟೆ ಸಮೀಪದ ಚಿಕ್ಕ ಮಂಡೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಂಡೂರು ಗ್ರಾಮದ ಕಳ್ಳಿಚಂಡ ಶ್ಯಾಂ ಜಗದೀಶ್ ಎಂಬವರ ಮನೆಯ ಕೋಳಿಗೂಡಿನೊಳಗೆ ನಾಗರಹಾವೊಂದು ಸೇರಿಕೊಂಡು ಅಲ್ಲಿದ್ದ ಆರು ಕೋಳಿಮೊಟ್ಟೆಯನ್ನು ನುಂಗಿ ಹಾಕಿತ್ತು. ಇದನ್ನು ಗಮನಿಸಿ ಆತಂಕಗೊಂಡ ಮನೆ ಮಂದಿ ಸಿದ್ದಾಪುರದ ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿ ಅವರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಸುರೇಶ್ ಮತ್ತು ಆರ್ಆರ್ಟಿ ವಿನೋದ್ ಅವರು ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಟ್ಟಿದ್ದಾರೆ.
ಮಡಿಕೇರಿ ಮೇ 2 NEWS DESK : ಮುಂಬೈನ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ನಡೆದ 43ನೇ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ಮಡಿಕೇರಿಯ ಬಂಗಾಡುಮನೆ ವಸಂತಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕವನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. 4*100 ರಿಲೆಯಲ್ಲಿ ಚಿನ್ನದ ಪದಕ, 100 ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಹಾಗೂ 400 ಮೀ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಸಂತಿ ಅವರು, ಪ್ರಸ್ತುತ ಬಡ್ತಿ ಹೊಂದಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನಸಿರ್ಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು ಇಲ್ಲಿಯವರೆಗೆ ಅನೇಕ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ದಾಖಲೆ ಸಂಖ್ಯೆಯ ಪದಕಗಳನ್ನು ಗೆದ್ದಿದ್ದಾರೆ.
ಮಡಿಕೇರಿ ಮೇ 2 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ 8 ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಮೇ 17 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಮೇ 2 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭದ ಸಮಾರೋಪ ಸಮಾರಂಭ ಕಾರ್ಯಕ್ರಮವು ಮೇ 3 ರಂದು ನಡೆಯಲಿದೆ. ಜುಮಾ ನಮಾಝಿನ ಬಳಿಕ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮವನ್ನು ಎರುಮಾಡ್ ತಂಙಳ್ ಸಯ್ಯಿದ್ ಇಲ್ಯಾಸ್ ಅಲ್ ಹೈದರೂಪಿ ಎಮ್ಮೆಮಾಡು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಅಬೂಬಕ್ಕರ್ ಸಖಾಫಿ ಪುದಿಯೋಡಿ ವಹಿಸಲಿದ್ದು, ಬದ್ರುಸ್ಸಾದಾತ್ ಇಬ್ರಾಹಿಂ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಉಸ್ಮಾನ್ ಕಂಬೇರ, ಮಾಜಿ ಅಧ್ಯಕ್ಷರಾದ ಉಸ್ಮಾನ್ ಹಾಜಿ ಬೆಲಿಯತ್ಕಾರಂಡ, ಶಾಫಿ ಸಅದಿ ಸೋಮವಾರಪೇಟೆ, ಕರ್ನಾಟಕ ಎಸ್.ವೈ.ಎಸ್ ಅಧ್ಯಕ್ಷ ಹಫೀಳ್ ಸಅದಿ, ಕೊಟ್ಟಮುಡಿ ಹಿದಾಯ ಮರ್ಕಝುಲ್ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಪಡಿಯಾನಿ ಖತೀಬ್ ಹಂಝ ರಹ್ಮಾನಿ, ಪಳ್ಳರಾಣೆ ಖತೀಬ್ ಝುಬೈರ್ ಮಿಸ್ಬಾಹಿ, ಎಮ್ಮೆಮಾಡು ಗ್ರಾ.ಪಂ…
ಮಡಿಕೇರಿ ಮೇ 2 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಮೇ 3 ರಂದು ಮಾಸಿಕ ದುರ್ಗಾಪೂಜೆ ನಡೆಯಲಿದೆ. ಅಂದು ಸಂಜೆ 7 ಗಂಟೆಗೆ ನಡೆಯಲಿರುವ ದುರ್ಗಾಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪೂಜಾ ಸೇವೆಯನ್ನು ಮಾಡಿಸುವ ಭಕ್ತಾದಿಗಳು ಸಂಜೆ 6.30 ಕ್ಕೆ ಹಾಜರಿದ್ದು, ಸಂಕಲ್ಪ ಮಾಡಿಸುವಂತೆ ಕೋರಿದೆ.
ಮಡಿಕೇರಿ ಮೇ 2 NEWS DESK : ಮಕ್ಕಳಿಗೆ ಶಿಕ್ಷಣ ಮುಖ್ಯ, ಓದಿ ವಿದ್ಯಾವಂತರಾಗದಿದ್ದರೂ ಗುಣವಂತರಾಗಬೇಕೆಂದು ಹಾಕಿ ಪಟು, ರಾಷ್ಟ್ರೀಯ ಹಾಕಿ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ ಕರೆ ನೀಡಿದರು. ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ. ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಜಿಲ್ಲಾ ಕ್ರೀಡಾಂಗಂದಲ್ಲಿ ಒಂದು ತಿಂಗಳ ಕಾಲ ನಡೆದ ಉಚಿತ ಬೇಸಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹಾಕಿ ವಿಶ್ವಮಾನ್ಯ ಆಟವಾಗಿದೆ. ಇಂತಹ ಶಿಬಿರದಲ್ಲಿ ಹಾಕಿಯನ್ನು ಕೂಡ ಕಲಿಸಿಕೊಡುತ್ತಿರುವದು ಶ್ಲಾಘನೀಯ. ಯಾವದೇ ಕಾರಣಕ್ಕೂ ಈ ಶಿಬಿರ ನಿಲ್ಲಬಾರದು, ಮುಂದುವರೆಸಿಕೋಡು ಹೋಗಬೇಕೆಂದು ಹೇಳೀದರು. ಶಿಲ್ಪಿ ತನ್ನಲ್ಲಿರುವ ಕಲೆಯನ್ನು ತೋರಿಸಿಕೊಳ್ಳಲ್ಲ, ಅದಾಗಿಯೇ ಹೊರಬರುತ್ತದೆ. ಅದೇ ರೀತಿ ಮಕ್ಕಳ ಪ್ರತಿಭೆ ಬಗ್ಗೆ ಪೋಷಕರಿಗೆ ಗೊತ್ತಿರುತ್ತದೆ. ಅದನ್ನು ಹೊರತರಲು ಪ್ರೋತ್ಸಾಹ ನೀಡಬೇಕು. ಹಿಂದೆ ನಮಗೆಲ್ಲ ಈರೀತಿಯ ಶಿಬಿರ, ಪ್ರೋತ್ಸಾಹ ಇರಲಿಲ್ಲ, ನಾವೇ ಅಭ್ಯಾಸ ಮಾಡಿಕೊಳ್ಳುತ್ತಿದ್ದೆವು. ಆಡುವ ಮೈದಾನಕ್ಕೆ ಮೊದಲು ನಮಿಸಬೇಕು. ಮೈದಾನಕ್ಕೆ ಬರುವವರು ಒಳ್ಳೆಯ ಅಟಗಾರರಾಗುತ್ತಾರೆ. ಪ್ರಸ್ತುತ…






