ಮಡಿಕೇರಿ ಏ.15 NEWS DESK : ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಾಣ -ನಿರ್ದೇಶನದ ಕೊಡವ ಚಲನಚಿತ್ರ “ಕಾಂಗತ ಮೂಡ್” (The shadow) ಚಿತ್ರದ ಮುಹೂರ್ತ ಮೂರ್ನಾಡಿನ ಬಿದ್ದಂಡ ಪೊನ್ನಪ್ಪ ಅವರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿ ಮಾತನಾಡಿದ ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ನಾವು ಎಷ್ಟು ಓದುತ್ತೇವೆ ಎಂಬುದು ಮುಖ್ಯವಲ್ಲ. ನಾವು ಜೀವನದಲ್ಲಿ ಎಷ್ಟರ ಮಟ್ಟಿಗೆ ಮನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುತ್ತಿದ್ದೇವೆ ಎಂಬುದು ಮುಖ್ಯ ಗ್ರಂಥಾಲಯಕ್ಕೆ ಎಲ್ಲರೂ ಹೋಗುತ್ತಾರೆ. ಅಲ್ಲಿರುವ ಪ್ರತಿ ಪುಸ್ತಕಗಳನ್ನು ಓದುತ್ತಾರೆ. ಆದರೆ ಅದನ್ನು ಓದುವಿಕೆಗೆ ಅಷ್ಟೇ ಸೀಮಿತ ಪಡಿಸದೇ ಅದರಿಂದ ಪಡೆದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಳ್ಳಬೇಕು ಎಂದು ಹೇಳಿದರು. ಬಾಹ್ಯಕ್ಕಿಂತಲೂ ಅಂತರಾಳದಲ್ಲಿ ನೋಡುವ ದೃಷ್ಠಿಕೋನ ಬಾಳನ್ನು ಅಭ್ಯಾಸ ಮಾಡುತ್ತದೆ. ನಮ್ಮ ಒಳಗಿನ ಬಾಳನ್ನು ನಮ್ಮ ಮನಸ್ಸನ್ನು ನಾವು ಓಡಾಡುವ ನೆಲ, ಜಲ ಹಾಗೂ ಪರಿಸರವನ್ನು ನಾವು ಗಮನದಲ್ಲಿಟ್ಟುಕೊಳ್ಳುವುದು ಅತ್ಯಂತ…
ಲೇಖಕ: admin
ಮಡಿಕೇರಿ ಏ.15 NEWS DESK : ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಶಾಂತಪ್ಪ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಅನುಮೋದನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಪತ್ರ ನೀಡಿದ್ದು, ಇಂದು ನಡೆದ ಜೂ಼಼ಮ್ ಸಭೆಯಲ್ಲಿ ಪಾಲ್ಗೊಂಡು ಚುನಾವಣೆಯ ಜವಾಬ್ದಾರಿಯ ಕುರಿತು ಚರ್ಚಿಸಿರುವುದಾಗಿ ಶಾಂತಪ್ಪ ತಿಳಿಸಿದ್ದಾರೆ. ಜಿಲ್ಲಾ ಪರಿಷತ್ ನ ಮಾಜಿ ಸದಸ್ಯರಾಗಿರುವ ಕೆ.ಬಿ.ಶಾಂತಪ್ಪ ಅವರು ರಾಜ್ಯ ಕುರುಬರ ಸಂಘದ ಕಾರ್ಯಾಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
ಸುಂಟಿಕೊಪ್ಪ ಏ.15 NEWS DESK : ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಸಮಾರಂಭದಲ್ಲಿ ದಿನದ ಮಹತ್ವತೆ ಕುರಿತು ಮಾತನಾಡಿದರು. ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ದೇಶದಲ್ಲಿ ಐಕ್ಯತೆ, ಸಾಮಾಜಿಕತೆ, ರಾಜಕೀಯ, ಆರ್ಥಿಕವಾಗಿ ದೇಶವು ಬಲಿಷ್ಠಗೊಳ್ಳಬೇಕಿದರೆ ದೇಶದ ಪ್ರತಿಯೊಬ್ಬ ಪ್ರಜೆಯು ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶವು ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಲು ಸಾಧ್ಯವೆಂದು ಮನಗಂಡಿದ್ದರು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ದೇಶವು ಬಲಿಷ್ಠ ರಾಷ್ಟ್ರವಾಗಲೂ ಕಾರಣಿಭೂತರಾಗಿದ್ದಾರೆಂದು ಅವರು ನುಡಿದರು. ಗಣ್ಯರು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ನಿವಾಸಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಸುಂಟಿಕೊಪ್ಪ ಏ.15 NEWS DESK : ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಗದ್ದೆಹಳ್ಳ, ಕೆದಕಲ್, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ ಮಾದಾಪುರ, ಗರಗಂದೂರು ಇನ್ನಿತರ ಕಡೆಗಳಲ್ಲಿ ಹಿಂದೂ ಮಲಯಾಳಿ ಭಾಂದವರು ಬಿಶು ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಕೇರಳದಲ್ಲಿ ಸಂಭ್ರಮದಿಂದ ಆಚರಿಸುತ್ತಿರುವ ಬಿಶು ಹಬ್ಬವನ್ನು ಕೊಡಗಿನ ಹಿಂದೂ ಮಲಯಾಳಿ ಭಾಂದವರು ಸಂಭ್ರಮದಿಂದ ಆಚರಿಸುತ್ತಾರೆ. ದವಸ ದಾನ್ಯ ಹೂ ಹಣ್ಣು ಹಂಪಲು (ಕಣಿ) ಹಳದಿ ಬಣ್ಣದ ಬಿಶು ಪುಷ್ಪ ಇರಿಸಿ ಬಿಶು ಹಬ್ಬ ದೇವರನಾಡು ಕೇರಳದಲ್ಲಿ ಹಿಂದೂ ಮಲಯಾಳಿ ನೆಲೆಸಿರುವ ಎಲ್ಲಾ ರಾಜ್ಯ ಹಾಗೂ ವಿದೇಶಗಳಲ್ಲೂ ಬಿಶು ಹಬ್ಬವನ್ನು ಆಚರಿಸುತ್ತಾರೆ. ಸುಂಟಿಕೊಪ್ಪ ಸುರೇಶ್ ಗೋಪಿ ಮನೆಯಲ್ಲಿ ಫಲಪುಷ್ಪಗಳನ್ನು ಇರಿಸಿ ಪೂಜೆಯನ್ನು ಸಲ್ಲಿಸಿದರು. ಹಿಂದೂ ಮಾಲಯಾಳಿಗಳ ಮನೆಂiÀಲ್ಲಿ ದವಸ ಧಾನ್ಯ, ಹೂ ಹಣ್ಣು ಹಂಪಲು (ಕಣಿ) ಹಳದಿ ಬಣ್ಣದ ಬಿಶು ಪುಷ್ಪ ಇರಿಸಿ ಬಿಶು ಹಬ್ಬ ಬರಚಿಸಿ ಹೊಸ ಬಟ್ಟೆ ಧರಿಸಿ ಇನ್ನಿತರ ತರಕಾರಿಗಳಿಂದ ತಯಾರಿಸಿದ ಭಕ್ಷ ಬೋಜನ ಸವಿಯುವುದು ಬಿಶು ಹಬ್ಬದ ವಿಶೇಷವಾಗಿದೆ.
ಸೋಮವಾರಪೇಟೆ ಏ.15 NEWS DESK : ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ವಾಸ್ತುಶಿಲ್ಪಿ, ದಲಿತ ಚಳುವಳಿಯ ಪಿತಾಮಹಾ ಎಂದು ಪರಿಗಣಿಸಲಾಗಿದೆ. ಅವರು ಸಂವಿಧಾನದ ಹಕ್ಕುಗಳಿಂದ ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಮುಖ್ಯ ಶಿಕ್ಷಕ ಶಿರಂಗಾಲ ಲೋಕೇಶ್ ಅಭಿಪ್ರಾಯಿಸಿದರು. ತಾಲೂಕು ಆಡಳಿತ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಮಾನವ ಧರ್ಮದ ಪ್ರತಿಪಾದಕ, ಸಮಾಜ ಸುಧಾರಕ, ಸಂವಿಧಾನ ತಜ್ಞ, ಮಾನವ ಹಕ್ಕುಗಳ ಹೋರಾಟಗಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರು ಭಾರತದಲ್ಲಿಯ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯರು, ಎದುರಿಸುತ್ತಿದ್ದ ತಾರತಮ್ಯ ಮತ್ತು ದಬ್ಬಾಳಿಕೆಯ ವಿರುದ್ಧದ ಹೋರಾಟ ಮಾಡಿ, ನ್ಯಾಯ ಒದಗಿಸಿಕೊಟ್ಟ ಮಹಾನ್ ಚೇತನ ಎಂದು ಬಣ್ಣಿಸಿದರು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ಭಾರತದ ಸಂವಿಧಾನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಹಿಳೆಯರು, ಕಾರ್ಮಿಕರು, ಅಸ್ಪೃಶ್ಯರು, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಹಿತಾಸಕ್ತಿ ಕಾಪಾಡಲು ಶ್ರಮಿಸಿದ್ದಾರೆ. ಇವತ್ತು ನಾವೆಲ್ಲಾ ಪಡೆಯುತ್ತಿರುವ…
ಸೋಮವಾರಪೇಟೆ ಏ.15 NEWS DESK : ಅಂಬೇಡ್ಕರ್ ಸೇನೆ ಮತ್ತು ಗಾಂಧಿನಗರದ ದೊಡ್ಡಮಾರಿಯಮ್ಮ ದೇವಾಲಯ ಸಮಿತಿ, ಬೆಟ್ಟದಳ್ಳಿ ಮಾನವತ ಯುವಕ ಸಂಘ, ಶಾಂತಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮಾಭಿವೃದ್ಧಿ ಸಮಿತಿ, ವೆಂಕಟೇಶ್ವರ ಬ್ಲಾಕ್ ನ ಆದಿಕರ್ನಾಟಕ ಸಮಾಜ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಸೋಮವಾರಪೇಟೆಯಲ್ಲಿ ಆಚರಿಸಲಾಯಿತು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಲಂಕೃತ ವಾಹನದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಿ, ವಾದ್ಯವೃಂಧ ಮತ್ತು ಡಿಜೆಯೊಂದಿಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರಮುಖರಾದ ಹಾನಗಲ್ ಜಯಪ್ಪ, ಪ್ರತಾಪ್ ಶಾಂತಳ್ಳಿ, ಜಗದೀಶ್ ಬೆಟ್ಟದಳ್ಳಿ, ಎಚ್.ಜೆ.ಜವರಪ್ಪ, ಪ್ರವೀಣ್, ಎಂ.ಪಿ.ಹೊನ್ನಪ್ಪ ಇದ್ದರು.
ಮಡಿಕೇರಿ ಏ.15 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಖಂಡನೀಯ. ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಅವರ ಹೇಳಿಕೆ ಅವರು ಮಹಿಳೆಯರ ಮೇಲೆ ಹೊಂದಿರುವ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಮಾಜಿ ಮುಖ್ಯಮಂತ್ರಿಯೊಬ್ಬರು ಈ ರೀತಿಯ ಹೇಳಿಕೆ ನೀಡಿರುವುದರಿಂದ ರಾಷ್ಟ್ರದ ಇಡೀ ಮಹಿಳೆಯರನ್ನು ಅವಮಾನಿಸಿದಂತ್ತಾಗಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತದೆ, ಇಡೀ ಸಮಾಜ ಮಹಿಳೆಯರನ್ನು ಕಾವೇರಿ, ಚಾಮುಂಡೇಶ್ವರಿ, ಭೂತಾಯಿ ಎಂದು ಕೈಮುಗಿಯುತ್ತದೆ. ಆದರೆ ಮಹಿಳೆಯರ ಬಗ್ಗೆ ಕುಮಾರಸ್ವಾಮಿ ಅವರಿಗೆ ಇರುವ ಭಾವನೆಯನ್ನು ಯಾವ ಸ್ವಾಭಿಮಾನಿ ಮಹಿಳೆ ಕೂಡ ಸಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಮಹಿಳೆಯೂ ಇಂದು ಅವರ ವಿರುದ್ಧ ದಿಕ್ಕಾರ ಕೂಗುವ…
ವಿರಾಜಪೇಟೆ ಏ.15 NEWS DESK : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್.ಎಸ್.ಎಸ್., ಐಕ್ಯೂಎಸಿ, ವಿದ್ಯಾರ್ಥಿ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಡಾ. ಬಿ.ಆರ್.ಅಂಬೇಡ್ಕರ್ ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ವಿಷಯದಂತೆ ವಿಶ್ವದಲ್ಲಿಯೇ ಬಲಿಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಡಾ.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಸಂವಿಧಾನದ ಆಶಯಗಳನ್ನು ವಿವರಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಚಿಂತನೆಗಳು ಸಾರ್ವಕಾಲಿಕವಾಗಿದ್ದು, ಅವರು ವಿಶ್ವದಲ್ಲಿಯೇ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಮತ್ತು ಸಂವಿಧಾನದ ರಚನೆಯಲ್ಲಿ, ಆರ್.ಬಿ.ಐ ಸ್ಥಾಪನೆಯಲ್ಲಿ, ಅರ್ಥಶಾಸ್ತ್ರಕ್ಕೆ ಅಂಬೇಡ್ಕರ್ ಅವರ ಕೊಡುಗೆಗಳನ್ನು ಉದಾಹರಣೆ ಸಮೇತ ವಿವರಿಸಿದರು. ಕಾಲೇಜಿನ ಎನ್.ಎಸ್.ಎಸ್. ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಸಂವಿಧಾನದ ಪೀಠಿಕೆಯ…
ಮಡಿಕೇರಿ ಏ.15 NEWS DESK : ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರು ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಮುಗಿದ ನಂತರ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಇಡೀ ಕಾಂಗ್ರೆಸ್ ಬಳಗ ಮಂಜುನಾಥ್ ಕುಮಾರ್ ಅವರ ಗೆಲುವಿಗಾಗಿ ಶ್ರಮಿಸಲಿದೆ ಎಂದರು. ಶಿಕ್ಷಕರ ಕ್ಷೇತ್ರದಿಂದ ಎರಡು ಬಾರಿ ಚುನಾವಣೆಯನ್ನು ಎದುರಿಸಿದ್ದ ಮಂಜುನಾಥ್ ಕುಮಾರ್ ಅವರು ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಮಂದಿ ಕಾಂಗ್ರೆಸ್ ಶಾಸಕರೇ ಇದ್ದಾರೆ. ಕೊಡಗು ಜಿಲ್ಲೆಯಲ್ಲಿ 1500 ಮತದಾರರಿದ್ದಾರೆ, ಇಬ್ಬರು ಶಾಸಕರು ಕಾಂಗ್ರೆಸ್ಸಿನವರೇ ಆಗಿರುವುದರಿಂದ ಗೆಲುವು ಮಂಜುನಾಥ್ ಕುಮಾರ್ ಅವರ ಸಮೀಪದಲ್ಲೇ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಿಕ್ಷಕ ವರ್ಗಕ್ಕೆ ಅತ್ಯಂತ ಆತ್ಮೀಯರಾಗಿ, ಶಿಕ್ಷಣ…
ಮಡಿಕೇರಿ ಏ.15 NEWS DESK : ಕಾಂತೂರು-ಮೂರ್ನಾಡು ಶ್ರೀಪನ್ನಂಗಾಲ ದೇವಿಯ ವಾರ್ಷಿಕೋತ್ಸವವು ಏ.18 ಮತ್ತು 19 ರಂದು ನಡೆಯಲಿದೆ. ಏ.18 ರಂದು ಬೆಳಿಗ್ಗೆ ದೇವರ ಶುದ್ಧ, ಕಳಸ ಪೂಜೆ, ಕೆರೆ ಮನೆಯಿಂದ ಭಂಡಾರ ತರುವುದು, ಎತ್ತು ಪೋರಾಟ, ದೇವರ ದರ್ಶನ ಹಾಗೂ ಸಂಜೆ 7 ಗಂಟೆಗೆ ಕುರುಂದ ಬಾರಣಿ ಜರುಗಲಿದೆ. ಏ.19 ರಂದು ಬೆಳಿಗ್ಗೆ ದೇವರ ದರ್ಶನ, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಚಾಮುಂಡಿ ಉತ್ಸವ, ಕುರುಂದಾಟ ದೇವರ ಜಳಕ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ತಕ್ಕ ಮುಖ್ಯಸ್ಥರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.






