ಮಡಿಕೇರಿ ಏ 30 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿತವಾಗಿರುವ ಸಮಾಗಮ ಬೇಸಿಗೆ ಶಿಬಿರ ನೂರಾರು ಮಕ್ಕಳಿಗೆ ವಿನೂತನ ವಿಚಾರಗಳ ಕಲಿಕೆಗೆ ನೆರವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾಥಿ೯ಗಳನ್ನು ತರಬೇತುಗೊಳಿಸುವ ಉದ್ದೇಶದಿಂದ 20 ದಿನಗಳಿಂದ ನಡೆಯುತ್ತಿರುವ ಸಮಾಗಮ ಬೇಸಿಗೆ ಶಿಬಿರದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 250 ಹೆಚ್ಚು ವಿದ್ಯಾಥಿ೯ಗಳು ವೈವಿಧ್ಯಮಯ ವಿಭಾಗಗಳಲ್ಲಿ ತಮ್ಮ ಇಷ್ಟದ ವಿಷಯಗಳನ್ನು ಆಯಾ ವಿಚಾರಗಳನ್ನು ಪರಿಣಿತರಿಂದ ತಿಳಿದುಕೊಳ್ಳುತ್ತಿದ್ದಾರೆ. ಭಾರತೀಯ ಸಂಸ್ಕೖತಿಯ ಜತೆಗೇ ಕ್ರೀಡೆಯಲ್ಲಿಯೂ ಸಮಾಗಮದಲ್ಲಿ ತರಬೇತಿ ನೀಡಲಾಗುತ್ತಿದೆ. ಹಾಕಿ ಕ್ರೀಡೆಯ ಬಗ್ಗೆ ಅರುಣ್ ಹಾಗೂ ಕುಶಾಲಪ್ಪ ಕ್ರಿಕೆಟ್ ಬಗ್ಗೆ ರೆನ್ ಟ್ರೆವರ್ ಡೈಸ್ , ಮಹೇಶ್ ಮತ್ತು ಶಾಹಿಲ್. , ಅಥ್ಲೆಟಿಕ್ಸ್ ಬಗ್ಗೆ ರೇಷ್ಮಾ ದೇವಯ್ಯ, ಬ್ಯಾಸ್ಕೆಟ್ಬಾಲ್ ಬಗ್ಗೆ ರಾಯಲ್ ಜೊಜೊ, ಫುಟ್ಬಾಲ್ ಸಂಬಂಧಿತ ಎಂ. ಕ್ರಿಸ್ಟೋಫರ್, ಹ್ಯಾಂಡ್ಬಾಲ್ ಕ್ರೀಡೆಯನ್ನು ಚಿಕ್ಕಣ್ಣ, ಟೇಬಲ್ ಟೆನ್ನಿಸ್ ಕ್ರೀಡಾವಿಭಾಗದಲ್ಲಿ ರಚನ್ ಪೊನ್ನಪ್ಪ ತರಬೇತುದಾರರಾಗಿದ್ದಾರೆ. ಮಡಿಕೇರಿಯ ಹಿರಿಯ ಚೆಸ್ ಆಟಗಾರ ಎನ್.ಟಿ.ಶಂಕರನಾರಾಯಣ ಅವರು ಮಕ್ಕಳಿಗೆ ಚೆಸ್ ಕಲಿಸಿದರೆ, ಕ್ಯಾಲಿಗ್ರಾಫಿ…
ಲೇಖಕ: admin
ಮಡಿಕೇರಿ ಏ.30 NEWS DESK : ಯು.ಎ.ಇ. ಯ ದುಬೈನಲ್ಲಿ ಜರುಗಿದ ಅಂಡರ್-20 ಜೂನಿಯರ್ ಏಷ್ಯನ್ ಚಾಂಪಿಯನ್ಶಿಪ್-2024ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕೊಡಗಿನ ಯುವತಿ ಬೊಳ್ಳಂಡ ಉನ್ನತಿ ಅಯ್ಯಪ್ಪ 100 ಮೀ. ಹರ್ಡಲ್ಸ್ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. 13.66 ಸೆಕೆಂಡ್ನಲ್ಲಿ ಉನ್ನತಿ ಗುರಿ ಸಾಧಿಸಿ ಸಾಧನೆ ತೋರಿದ್ದು, ಪದಕ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಇಡೀ ಕುಟುಂಬದ ಕ್ರೀಡಾ ಸಾಧನೆ ಗಮನಾರ್ಹವಾಗಿದೆ. ಉನ್ನತಿ ಅವರ ತಂದೆ ರಾಷ್ಟ್ರೀಯ ಅಥ್ಲೆಟಿಕ್ ಕೋಚ್ ಬೊಳ್ಳಂಡ ಅಯ್ಯಪ್ಪ ಅವರು 1994ರ ಜೂನಿಯರ್ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿ4*400 ಮೀಟರ್ ರಿಲೇಯಲ್ಲಿ ಬೆಳ್ಳಿಪದಕ ಪಡೆದಿದ್ದಾರೆ. ತಾಯಿ ಮಾಜಿ ಒಲಂಪಿಯನ್ ಪ್ರಮೀಳಾ ಅಯ್ಯಪ್ಪ 1996ರಲ್ಲಿ ಹೆಫ್ಟಥ್ಲಾನ್ನಲ್ಲಿ ಭಾರತಕ್ಕೆ ಕಂಚಿನ ಪದಕ ಗಳಿಸಿದ ಸಾಧನೆ ಮಾಡಿದ್ದರು. ಇದೀಗ ಪುತ್ರಿ ಉನ್ನತಿ ಅಯ್ಯಪ್ಪ ಕೂಡ ಇದೇ ಜೂನಿಯರ್ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ 100 ಮೀಟರ್ ಹರ್ಡಲ್ಸ್ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಪೋಷಕರೊಂದಿಗೆ ಇದೀಗ ಪುತ್ರಿಯೂ ಭಾರತಕಕೆ ಪದಕ ತಂದ ಕೀರ್ತಿ ಈ ಕುಟುಂಬದ್ದಾಗಿದೆ.
ಮಡಿಕೇರಿ ಏ.30 NEWS DESK : ಗಾಂಧಿ ಯುವಕ ಸಂಘದಿಂದ ನೀಡಲಾಗುವ “ಮಾದರಿ ಯುವ ನಾಯಕ” ಪ್ರಶಸ್ತಿಗೆ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಆಯ್ಕೆಯಾಗಿದ್ದಾರೆ. ಇವರ ರಾಜಕೀಯ ಕ್ಷೇತ್ರದಲ್ಲಿನ ಸೇವೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ಮಾದರಿ ಯುವ ನಾಯಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ಅವರು ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಗಾಂಧಿ ಯುವಕ ಸಂಘದ ಆಶ್ರಯದಲ್ಲಿ ಜೂ.9ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಡೆಯಲಿದೆ ಎಂದು ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.
ಕರಿಕೆ ಏ.29 NEWS DESK : ಅಗ್ನಿ ಆಕಸ್ಮಿಕದಿಂದ ಗೇರುಬೀಜದ ತೋಟ ಹಾನಿಗೀಡಾಗಿರುವ ಘಟನೆ ಕರಿಕೆ ಗ್ರಾಮದ ಎಳ್ಳುಕೊಚ್ಚಿಯಲ್ಲಿ ನಡೆದಿದೆ. ಅಜಯ್ ಕುಮಾರ್ (ಭಾವೆ ನಂಬ್ಯಾರ್) ಎಂಬುವವರ ಗೇರು ತೋಟದಲ್ಲಿ ಅಗ್ನಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾಗಿದೆ. ಸ್ಥಳೀಯ ಗ್ರಾಮಸ್ಥರು ನಿರಂತರ ಶ್ರಮವಹಿಸಿ ಅಗ್ನಿಯ ಜ್ವಾಲೆಯನ್ನು ನಿಯಂತ್ರಿಸಿದರು.
ಮಡಿಕೇರಿ ಏ.29 NEWS DESK : ರಿಯಾಲಿಟಿ ಶೋವೊಂದರದಲ್ಲಿ ಮೆಕ್ಯಾನಿಕ್ ಗಳ ಕುರಿತು ಅವಹೇಳನ ಮಾಡಿರುವ ಆರೋಪದಡಿ ಖಾಸಗಿ ದೃಶ್ಯವಾಹಿನಿ, ಕಾರ್ಯಕ್ರಮದ ಆಯೋಜಕರು, ತೀರ್ಪುಗಾರರು ಹಾಗೂ ನಿರೂಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಡಿಕೇರಿ ಟೂ ವೀಲರ್ಸ್ ಮೆಕ್ಯಾನಿಕ್ ಗಳು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೆಕ್ಯಾನಿಕ್ ಗಳು ಖಾಸಗಿ ದೃಶ್ಯ ವಾಹಿನಿಯೊಂದರಲ್ಲಿ ಪ್ರಸಾರವಾದ ರಿಯಾಲಿಟಿ ಶೋದಲ್ಲಿ ಮೆಕ್ಯಾನಿಕ್ ಗಳ ಕುರಿತು ಕೀಳು ಮಟ್ಟದ ಸಂಭಾಷಣೆ ಬಳಕೆ ಮಾಡಲಾಗಿದೆ. ಯುವ ಪ್ರತಿಭೆಯೊಬ್ಬಳ ಮೂಲಕ ಮೂಲಕ ಸಂಭಾಷಣೆ ಹೇಳಿಸಲಾಗಿದ್ದು, ಇದು ಇಡೀ ಮೆಕಾನಿಕ್ ಸಮುದಾಯಕ್ಕೆ ನೋವನ್ನುಂಟು ಮಾಡಿದೆ. “ಮೆಕಾನಿಕ್ ಗಳನ್ನು ಪ್ರೇಮಿಸಿ ವಿವಾಹವಾದರೆ ಜೀವನದುದ್ದಕ್ಕೂ ಗ್ರೀಸ್ ತಿನ್ನಬೇಕಾಗುತ್ತದೆ” ಎಂದು ಸಂಭಾಷಣೆ ಹೇಳುವ ಮೂಲಕ ಮೆಕಾನಿಕ್ ಗಳನ್ನು ಕೀಳಾಗಿ ಕಾಣಲಾಗಿದೆ. ಅಲ್ಲದೆ ಈ ಅವಹೇಳನಾಕಾರಿ ಸಂಭಾಷಣೆಗೆ ಕಾರ್ಯಕ್ರಮದ ನಿರೂಪಕರು ಹಾಗೂ ತೀರ್ಪುಗಾರರು ಚಪ್ಪಾಳೆ ತಟ್ಟಿ ಹುರಿದುಂಬಿಸಿ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.…
ಮಡಿಕೇರಿ ಏ.29 NEWS DESK : ಕೊಡವ ಹಾಕಿ ನಮ್ಮೆ ಎಂದೇ ಖ್ಯಾತಿಯಾಗಿ ಕಳೆದ 23 ಹಬ್ಬಗಳನ್ನ ಕಂಡಿದ್ದ ಕೊಡವುನೆಲ 24ನೇ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನ ಉತ್ಸವವಾಗಿ ಹಿಗ್ಗಿಸಿದ ಕೀರ್ತಿ ಕುಂಡ್ಯೋಳಂಡ ಕುಟುಂಬಕ್ಕೆ ಸಂದಿದೆ. ಅವಿರತ ಪ್ರಯತ್ನ ಅಚ್ಚುಕಟ್ಟಿನ ಯೋಜನೆ, ಅಚ್ಚಳಿಯದ ಮೈಲಿಗಲ್ಲನ್ನ ನೆಡುವಲ್ಲಿ ಯಶಸ್ವಿಯಾಗಿದೆ. ಹಾಕಿ ಎಂಬ ಎವರ್ಗ್ರೀನ್ ಕ್ರೀಡೆಯನ್ನ ಬಳಸಿಕೊಂಡು ಜನಾಂಗದ ಶ್ರೇಯೋಭಿವೃದ್ಧಿಗೆ ಮತ್ತು ಜನಾಂಗದ ಬೆಳವಣಿಗೆಗೆ ಪೂರಕವಾಗಿ ಏನೆಲ್ಲಾ ಮಾಡಬಹುದೋ ಆ ಎಲ್ಲಾ ಆಯಾಮಗಳನ್ನು ಇದೇ ಹಾಕಿಯನ್ನ ಕೇಂದ್ರಬಿಂದುವಾಗಿ ಇಟ್ಟುಕೊಂಡೇ ಸಾಧಿಸಿದ ಹಿರಿಮೆಯೂ ಕುಂಡ್ಯೋಳಂಡದ್ದೇ. ಹಾಕಿ ನಮ್ಮೆ ಎಂದರೆ ಕೇವಲ ಅಬ್ಬರ, ಆಡಂಬರ, ಮೋಜು ಮಸ್ತಿ ಎಂಬಲ್ಲಿಂದ ಇದೇ ಹಾಕಿ ನಮ್ಮೆಯಿಂದ ಜನಾಂಗವನ್ನು ನಾನಾ ಆಯಾಮದಲ್ಲಿ ಜೇಡರ ಬಲೆಯಂತೆ ನೇಯ್ದು ಗರಿಗರಿ ರೇಷ್ಮೆಯ ಚಾದವರವನ್ನೇ ರಚಿಸಿದನ್ನು ನೋಡಿದರೆ, ಇದು ಕೇವಲ ಕಾರ್ನಿವಲ್ ಮಾತ್ರ ಅಲ್ಲ, ಇದೊಂದು ಅಳಿಯದೇ ಉಳಿಯುವ ಐತಿಹಾಸಿಕ ಉತ್ಸವವಾಗಿ ಅಚ್ಚೊತ್ತಿದೆ ಕುಂಡ್ಯೋಳಂಡ ಒಕ್ಕ. ಕೊಡವ ಜನಾಂಗದ ಒಗ್ಗಟ್ಟು, ಸಂಬಂಧದ ಬೆಳವಣಿಗೆಯೊಂದಿಗೆ ಜನಾಂಗದ ಶ್ರೇಯಕ್ಕೆ ಸಾಕ್ಷಿಯಾಗಿ…
ಕೂಡಿಗೆ ಏ.29 NEWS DESK : ಮೂದರವಳ್ಳಿ ಶ್ರೀ ಈಶ್ವರ ಮತ್ತು ಕಟ್ಟೆ ಬಸವವಣ್ಣ ಸ್ವಾಮಿಯ ನೂತನ ದೇವಸ್ಥಾನಗಳ ಉದ್ಘಾಟನೆ ಮತ್ತು ಧಾರ್ಮಿಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು. ಸನಾತನ ಸಂಸ್ಕೃತಿ, ಧಾರ್ಮಿಕ ಕಾರ್ಯಗಳು, ಆಧ್ಯಾತ್ಮಕಿ ಚಿಂತನೆಯಿಂದ ಮಾನವ ಜನ್ಮ ಸಾರ್ಥಕಗೊಳ್ಳುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಸನ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು. ಅವರು ಕೂಡಿಗೆ ಸಮಿಪದ ಮೂದರವಳ್ಳಿ ಗ್ರಾಮದಲ್ಲಿ ಜೀರ್ಣೋದ್ದಾರಗೊಂಡಿರುವ 600 ವರ್ಷಗಳ ಇತಿಹಾಸ ಹೊಂದಿರುವ ಶ್ರೀಈಶ್ವರ ಮತ್ತು ಕಟ್ಟೆ ಬಸವಣ್ಣ ಸ್ವಾಮಿ ದೇವಸ್ಥಾನಗಳ ಪ್ರತಿಷ್ಠಾಪನಾ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದರು. ಮಾನವನಲ್ಲಿ ಜ್ಞಾನದ ಬೆಳಕು ಇದ್ದಲ್ಲಿ ಬದುಕು ಸಾರ್ಥಕಗೊಳ್ಳುತ್ತದೆ ಜ್ನಾನದ ಶುದ್ಧಿ, ಧಾರ್ಮಿಕ ಕಾರ್ಯಗಳಿಂದಲೂ ಬದುಕು ಹಸನಾಗುತ್ತದೆ ಎಂದರು. ಗುರು-ಹಿರಿಯರು ನೀಡುವ ಮಾರ್ಗದರ್ಶನದಿಂದ ಮತ್ತು ಅವರು ನೀಡಿದ ಜ್ಞಾನದ ಶುದ್ದಿಯಿಂದ ನಾವು ಇಂದು ಭಗವಂತನನ್ನು ಕಾಣಬಹುದು. ಕೆಲವರು ಭಯದಿಂದ ಮತ್ತೆ ಕೆಲವರು ಭಕ್ತಿಯಿಂದ ತಾನಾಗಿಯೇ ಭಗವಂತನನ್ನು ಕಾಣುತ್ತಾರೆ. ಪ್ರತಿಯೊಬ್ಬರು ಧಾರ್ಮಿಕ ಕಾರ್ಯವನ್ನು ಮಾಡುವ ಮೂಲಕ…
ಮಡಿಕೇರಿ ಏ.29 NEWS DESK : ಮತ್ತಿಕಾಡು ಅತ್ತೂರು ನಲ್ಲೂರು ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವ ಏ.30 ರಂದು ನಡೆಯಲಿದೆ. ಬೆಳಗ್ಗೆ ಪ್ರಾರ್ಥನೆ, ಪುಣ್ಯಾಹ ಕಲಶ ಪೂಜೆ, ಗಣಪತಿ ಹೋಮ, ದುರ್ಗಾಹೋಮ, ಮಹಾ ಕಲಶಾಭಿಷೇಕ ಜರುಗಲಿದ್ದು, ಮಧ್ಯಾಹ್ನ ಮಹಾಪೂಜೆ, ಮಹಾ ಮಂಗಳಾರತಿ ಹಾಗೂ ಅನ್ನಸಂತರ್ಪಣೆಯಾಗಲಿದೆ. ಸಂಜೆ ಮಹಾರಂಗ ಪೂಜೆ ಮತ್ತು ಪ್ರಸಾದ ವಿತರಣೆಯಾಗಲಿದೆ.
ಸೋಮವಾರಪೇಟೆ ಏ.29 NEWS DESK : ಹೆಣ್ಣು-ಗಂಡು ಎಂಬ ತಾರತಮ್ಯ ತೋರದೆ ಮಕ್ಕಳನ್ನು ಸುಸಂಸ್ಕೃತರಾಗಿ ರೂಪಿಸುವ ಹೊಣೆಗಾರಿಕೆ ತಂದೆ-ತಾಯಿಯರದಾಗಿದ್ದು ಅವರ ಮೇಲೆ ಸಂಪೂರ್ಣ ಕಾಳಜಿ ಮುಖ್ಯ ಎಂದು ಜಾನಪದ ಕಲಾವಿದೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಅಭಿಪ್ರಾಯಪಟ್ಟರು. ಅಂಕನಹಳ್ಳಿ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀಗುರುಸಿದ್ಧ ವೀರೇಶ್ವರಸ್ವಾಮಿ ಜಾತ್ರಾಮಹೋತ್ಸವದ ಪ್ರಯುಕ್ತ ನಡೆದ `ಮಹಿಳಾ ಮಿಲನ” ಕಾರ್ಯಕ್ರಮದ “ಧರ್ಮ-ಸಂಸ್ಕೃತಿ-ಮಹಿಳೆ’ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಮೊಬೈಲ್-ಕಂಪ್ಯೂಟರ್ ಗೀಳಿನಿಂದ ಹೊರಬರುವ ಹಾಗೇ ಪೋಷಕರು ನೀತಿಕಥೆಗಳನ್ನು ಹೇಳಬೇಕು. ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ನಾಯಕತ್ವದ ಗುಣ ಬೆಳೆಸಬೇಕು.ಸಮಾಜದಲ್ಲಿ ಧರ್ಮ, ಸಂಸ್ಕೃತಿ ಉಳಿಸಬೇಕು.ಬೆಳೆಸಬೇಕು ಎಂದರು. ಮುಖ್ಯ ಅತಿಥಿ ಸಾಹಿತಿ ಶ.ಗ.ನಯನತಾರಾ ಪ್ರಾಸ್ತಾವಿಕ ನುಡಿಗಳನ್ನಾಡಿ, ಧರ್ಮ ಮತ್ತು ಸಂಸ್ಕೃತಿ ನಮ್ಮ ದೇಶದ ಜೀವಾಳವಾಗಿದ್ದುಇವುಗಳಲ್ಲಿ ಮಹಿಳೆ ಮಹತ್ತರ ಪಾತ್ರ ವಹಿಸುತ್ತಾಳೆ.ಮಠಮಾನ್ಯಗಳಿಂದಾಗಿ ಇಂದು ಸಮಾಜದಲ್ಲಿ ಧರ್ಮ ಮತ್ತು ಸಂಸ್ಕೃತಿ ಉಳಿದಿದೆ.ಧರ್ಮವೆಂದರೆ ಜಾತಿಯಲ್ಲ; ಮೂಲ ಸ್ವಭಾವ.ಸಂಸ್ಕೃತಿ ಎಂದರೆ ನಂಬಿಕೆ, ನಡವಳಿಕೆ, ರೂಢಿಗಳು.ಮಠದಲ್ಲಿ ಆಯೋಜಿಸಿರುವ ಮಹಿಳಾ ಮಿಲನ ಕಾರ್ಯಕ್ರಮ ಮಹಿಳಾ…
ಮಡಿಕೇರಿ ಏ.29 NEWS DESK : ಕೊಡಗಿನ ಪ್ರವಾಸೋದ್ಯಮ ಹಾಗೂ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕಿಂಬರ್ಲಿ ಕೂರ್ಗ್ ಸಂಸ್ಥೆ ವತಿಯಿಂದ ಮೇ 4 ಮತ್ತು 5 ರಂದು ಮಡಿಕೇರಿಯಲ್ಲಿ ಕೂರ್ಗ್ ಕಾರ್ನೀವಲ್ ನಡೆಯಲಿದೆ ಎಂದು ಸಂಸ್ಥೆಯ ಪ್ರಮುಖರಾದ ಕೆ.ಜಿ.ಮದನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಗೀತ ಪ್ರದರ್ಶನ, ರುಚಿಕರವಾದ ಆಹಾರ, ಫ್ಲೀ ಮಾರುಕಟ್ಟೆ, ಮೋಜಿನ ಆಟಗಳು, ಮನರಂಜನೆ, ಕಾರ್ಯಾಗಾರಗಳು ನಡೆಯಲಿದೆ ಎಂದರು. ಮೇ 4 ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಪ್ರವೇಶ ಶುಲ್ಕ ರೂ.99 ನಿಗಧಿಪಡಿಸಲಾಗಿದೆ. ದೇಶ ವಿದೇಶಗಳಿಂದ ಕಲಾವಿದರು ಪಾಲ್ಗೊಂಡು ನೋಟ್ ಸಿಕ್, ನಾಯಮಯ, ಲೌಡ್ ಸೈಲೆನ್ಸ, ಬಿ ಸೈಡ್ ಟೇಪ್ಸ್, ಸವಾರಿ, ರಾ ಪ್ಲೋಸ್, ಸಾಥ್ವಿಕ್ ಗುಪ್ತಾ, ಡಿಪ್ಟಿಕ್, ಟ್ರೆಮೆಂಟ್, ಸೌಂಡ್ ಒಫ್ ಹಿಮಾಲಯಾಸ್ ಸೇರಿದಂತೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಿಂಬರ್ಲಿ ಸಂಸ್ಥೆಯ ಪ್ರಮುಖರಾದ ಬಿ.ಎಂ.ಗರುಡ, ಲಿಖಿತ…






