ಮಡಿಕೇರಿ ಏ.12 NEWS DESK : ಕರಿಕೆ ಗ್ರಾಮದಲ್ಲಿ ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರಿಕೆ ವ್ಯಾಪ್ತಿಯ ಕುಂಡತ್ತಿಕಾನ, ಬಾಳೆಬಳಪ್ಪು ಕುಡಿಯಂಗಲ್ಲು ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ನೀಡಿದ ಪ್ರಮುಖರು ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಜನವಸತಿ ಪ್ರದೇಶದ ಕೆಲವು ಮನೆ ಮತ್ತು ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ದಂಧೆ ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೆ ದಂಧೆಕೋರರು ಅಧಿಕಾರಿಗಳು ಸ್ಥಳಕ್ಕೆ ಬರುವ ಮಾಹಿತಿ ಪಡೆದುಕೊಂಡು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಸಾಕ್ಷಿ ಸಹಿತ ಎಲ್ಲೂ ಸಿಕ್ಕಿ ಹಾಕಿಕೊಳ್ಳುತ್ತಿಲ್ಲವೆಂದು ಆರೋಪಿಸಿದರು. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರೇ ಇದ್ದು, ದುಡಿದ ಹಣವನ್ನು ದುಪ್ಪಟ್ಟು ದರದ ಅಕ್ರಮ ಮದ್ಯಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಇದರಿಂದ ಮಹಿಳೆಯರು…
ಲೇಖಕ: admin
ಮಡಿಕೇರಿ ಏ.12 NEWS DESK : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನು(22) ಎಂಬ ಯುವಕ ಹುಲಿ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃಷಿಕ ವೃಷಬೇಂದ್ರಪ್ಪ ಅವರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಆದರೆ ಹುಲಿ ಕಾರ್ಯಾಚರಣೆ ತಂಡ ಬರುತ್ತಿದ್ದಂತೆ ಹುಲಿ ಮತ್ತೊಂದು ತೋಟದ ಮೂಲಕ ಕಾಲ್ಕಿತ್ತಿದೆ ಎಂದು ತಿಳಿದು ಬಂದಿದೆ. ಗ್ರಾಮಸ್ಥರು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಇದ್ದಾರೆ.
ಬೆಂಗಳೂರು ಏ.12 NEWS DESK : ಖ್ಯಾತಿ ಜ್ಯೋತಿಷಿ ಎಸ್.ಕೆ.ಜೈನ್ (67) ಅವರು ಇಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶ್ವಾಸಕೋಶದ ಸೋಂಕಿನಿಂದ ನೀರು ಶೇಖರಣೆಗೊಂಡು ದೇಹಕ್ಕೆಲ್ಲಾ ಹರಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿರುವುದಾಗಿ ತಿಳಿದು ಬಂದಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ.ಸುರೇಂದ್ರ ಕುಮಾರ್ ಜೈನ್ (ಎಸ್.ಕೆ.ಜೈನ್) ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಬೆಂಗಳೂರಿನಲ್ಲಿ ಬೆಳೆದರು. ಸುಮಾರು 40 ವರ್ಷಗಳ ಸುದೀರ್ಘ ಕಾಲ ಜ್ಯೋತಿಷಿ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಉದಯ ಟಿವಿಯಲ್ಲಿ ದಾಖಲೆಯ 20 ವರ್ಷಗಳ ಕಾಲ ಇವರು ನಡೆಸಿಕೊಡುತ್ತಿದ್ದ ಜ್ಯೋತಿಷ್ಯ ಕಾರ್ಯಕ್ರಮ ಪ್ರಸಾರಗೊಂಡಿತ್ತು. ಎಸ್.ಕೆ.ಜೈನ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ಏ.12 NEWS DESK : ಅಧಿಕ ತಾಪಮಾನದಿಂದ ಕಂಗಾಲಾಗಿದ್ದ ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಾಧಾರಣ ಮಳೆಯಾಗಿದೆ. ಕಳೆದ ಎರಡು ವಾರಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದ ಜನರು ಹಾಗೂ ಕೃಷಿಕ ವರ್ಗ ಕೊಂಚ ನೆಮ್ಮದಿ ಅನುಭವಿಸಿದ್ದಾರೆ. ಮಡಿಕೇರಿ ನಗರದ ಕೆಲವು ಭಾಗ, ನಾಪೋಕ್ಲು, ಬೇತು, ಚೆರಿಯಪರಂಬು, ಕೊಳಕೇರಿ ಎಮ್ಮೆಮಾಡು, ನೆಲಜಿ ಬಲ್ಲಮಾವಟಿ, ಪಾರಾಣೆ, ಕೈಕಾಡು ಹೊದ್ದೂರು, ಮೂರ್ನಾಡು, ಮೇಕೇರಿ, ಬಿಳಿಗೇರಿ ಮೊದಲಾದೆಡೆ ಮಳೆಯಾಗಿದ್ದು, ಜನರಲ್ಲಿ ಸಂತಸ ಮೂಡಿದೆ. ಒಂದೆಡೆ ಕೆರೆಯಲ್ಲೂ ನೀರಿಲ್ಲದೆ, ಮತ್ತೊಂದೆಡೆ ಮಳೆಯೂ ಆಗದೆ ಕಾಫಿ ಗಿಡಗಳು ಒಣಗುವ ಸ್ಥಿತಿಗೆ ಬಂದು ತಲುಪಿದ ಹಿನ್ನೆಲೆ ಬೆಳೆಗಾರರು ಚಿಂತಿತರಾಗಿದ್ದರು. ಆದರೆ ಇಂದು ಸುರಿದ ಸಾಧಾರಣ ಮಳೆ ಬೆಳೆಗಾರರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗಬಹುದೆನ್ನುವ ನಿರೀಕ್ಷೆಯಲ್ಲಿದ್ದಾರೆ.
ವಿರಾಜಪೇಟೆ ಏ.12 NEWS DESK : ಸಮಾಜ ಸೇವಕಿ ಹಾಗೂ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಸಂಸ್ಥೆಯ ಮುಖ್ಯಸ್ಥರಾದ ಪೂಜಾ ರವೀಂದ್ರ ಅವರಿಗೆ ರೆಡ್ ದಿವಸ್ ಪ್ರಶಸ್ತಿ ಲಭಿಸಿದೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯಾದ ರೆಡ್ ಎಫ್. ಎಂ ಹಾಗೂ ಒರಿಯನ್ ಮಾಲ್ ಸಂಸ್ಥೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. ಕಾರ್ಯಕ್ರಮದಲ್ಲಿ ಪ್ರಸಿದ್ಧ ಗಾಯಕಿ ಉಷಾ ಉತ್ತಪ್ಪ, ನಟಿ ಪ್ರಿಯಾಂಕ ಉಪೇಂದ್ರ ಮತ್ತು ಇತರ ಗಣ್ಯರು ಹಾಜರಿದ್ದರು. ಪೂಜಾ ರವೀಂದ್ರ ವಿರಾಜಪೇಟೆಯ ಹೆಗ್ಗಳ ಗ್ರಾಮದ ನಿವಾಸಿ.
ಮಡಿಕೇರಿ ಏ.12 NEWS DESK : ಸರಕಾರಿ ಜಮೀನುಗಳಲ್ಲಿ ಅನಧೀಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಗುತ್ತಿಗೆ ಆಧಾರದಲ್ಲಿ ಸರಕಾರಿ ಜಾಗವನ್ನು ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಏ.15ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭೂ-ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆ, ಆದಿವಾಸಿ, ಮೂಲ ನಿವಾಸಿ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಒಳಗೊಂಡು ಕೊಡಗಿನ ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ಏ.15 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಏಕಕಾಲದಲ್ಲಿ ಪ್ರತಿಭಟನೆ ನಡೆಸಿ, ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗುವುದೆಂದರು. ರಾಜ್ಯ ಸರ್ಕಾರ ತರಾತುರಿಯಲ್ಲಿ ಕಾನೂನಿಗೆ ತಿದ್ದುಪಡಿ ತಂದಿದ್ದು, ಕಲಂ 94(ಇ)ಯನ್ನು ಹೊಸದಾಗಿ ಸೇರಿಸಲಾಗಿದೆ. ಇದರಿಂದ ಸರಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಅಂತಹ ಜಮೀನನ್ನು ಗುತ್ತಿಗೆ…
ಮಡಿಕೇರಿ ಏ.12 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಏ.13 ರಿಂದ 17 ರವರೆಗೆ 85 ವರ್ಷ ಮೇಲ್ಪಟ್ಟ ಹಿರಿಯನಾಗರೀಕ ಮತದಾರರು ಹಾಗೂ ಶೇ.40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ವಿಶೇಷ ಚೇತನ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟಾನ್ ತಂತ್ರಾಂಶದಲ್ಲಿ ಮಾಹಿತಿಯನ್ನು ದಾಖಲಿಸಿ, ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಾನಸಭಾ ಕ್ಷೇತ್ರವಾರು ಹೋಂ ವೋಟಿಂಗ್ ನಡೆಯುವ ದಿನಾಂಕಗಳು: ಮಡಿಕೇರಿಯಲ್ಲಿ(208) ಏ.15 ರಿಂದ 17 ರವರೆಗೆ, ವಿರಾಜಪೇಟೆ(209) ಏ.15 ರಿಂದ 17ರವರೆಗೆ, ಪಿರಿಯಾಪಟ್ಟಣ(210) ಏ.14 ರಿಂದ 15ರವರೆಗೆ, ಹುಣಸೂರು(212) ಏ.15 ರಿಂದ 16ರವರೆಗೆ, ಚಾಮುಂಡೇಶ್ವರಿ(215) ಏ.13 ರಿಂದ 14ರವರೆಗೆ, ಕೃಷ್ಣರಾಜ(216) ಏ.13 ರಿಂದ 14ರವರೆಗೆ, ಚಾಮರಾಜ(217) ಏ.14 ರಿಂದ 15 ಹಾಗೂ ನರಸಿಂಹರಾಜ(218)ದಲ್ಲಿ ಏ.13 ರಿಂದ 14 ರವರೆಗೆ ಹೋಮ ವೋಟಿಂಗ್ಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಏ.12 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ-ಪಂಗಡದ ಮತಗಳು ನಿರ್ಣಾಯಕ ಪಾತ್ರ ವಹಿಸಲಿರುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಪಿ.ಎಂ.ರವಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 1.5 ಲಕ್ಷ ಮತಗಳಿದ್ದು, ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಈ ಸಮೂಹವನ್ನು ಮತ ಬ್ಯಾಂಕ್ಗೊಸ್ಕರ ಓಲೈಕೆ ಮಾಡುತ್ತ ಬಂದಿದೆಯೆ ಹೊರತು ಅವರ ಬಗ್ಗೆ ನೈಜ ಕಾಳಜಿ ತೋರಿಲ್ಲ. ಈ ಬಾರಿ ಪರಿಶಿಷ್ಟ ಸಮೂಹ ಬಿಜೆಪಿ ಪರ ವಿಶ್ವಾಸವನ್ನು ಹೊಂದಿರುವುದಾಗಿ ಹೇಳಿದರು. ನರೇಂದ್ರ ಮೋದಿ ಅವರು ಈ ರಾಷ್ಟ್ರದ ಪ್ರಧಾನಮಂತ್ರಿಗಳಾದ ಬಳಿಕ ಪರಿಶಿಷ್ಟ ಸಮೂಹದ ಏಳಿಗೆಗೆ ಹತ್ತು ಹಲವು ಶಾಶ್ವತ ಯೋಜನೆಗಳನ್ನು ನೀಡಿರುವುದಲ್ಲದೆ, ಹಿಂದುಳಿದ ಸಮೂಹಕ್ಕೆ ಸೇರಿದವರಿಗೆ ರಾಷ್ಟ್ರಪತಿ ಸ್ಥಾನವನ್ನು ನೀಡಿದೆ. ಬಿಜೆಪಿ ಪಕ್ಷ ದಲಿತ ಸಮೂಹದವರಿಗೆ ಮಹತ್ವದ ಸ್ಥಾನಗಳನ್ನು ನೀಡುವ ಮೂಲಕ ರಾಷ್ಟ್ರ ಸೇವೆಯಲ್ಲಿ ಅವರ ಪಾಲು ಹೆಚ್ಚಾಗಿರುವುವಂತೆ ನೋಡಿಕೊಂಡಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್…
ಮಡಿಕೇರಿ ಏ.12 NEWS DESK : ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದ ಏ.26 ರಂದು ನಡೆಯುವ ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದೇವೆ ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಸುಮಾರು 30 ಸಾವಿರ ಮಂದಿ ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಜನರಿದ್ದು, ಎಲ್ಲರೂ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ ಎಂದರು. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ `ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ “ಆದಿ ದ್ರಾವಿಡ” ಪರಿಶಿಷ್ಟ ಜಾತಿ ಎಂದು ಜಾತಿ ಪ್ರಮಾಣಪತ್ರ ನೀಡಲು ಸರಕಾರÀ ಕ್ರಮ ಕೈಗೊಳ್ಳಬೇಕೆಂದು ಕಳೆದ ಅನೇಕ ವರ್ಷಗಳಿಂದ ಸಂಘಟನೆ ಮೂಲಕ…
ಮಡಿಕೇರಿ ಏ.12 NEWS DESK : ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಕಾರ್ಯವನ್ನು ಯಾವುದೇ ಅಡಚಣೆ ಮತ್ತು ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ನಿಷೇಧಿತ ಪ್ರದೇಶದ…






