ಲೇಖಕ: admin

ಮಡಿಕೇರಿ NEWS DESK ಡಿ.15 : ಖಾಸಗಿ ಬಸ್ ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ದಕ್ಷಿಣ ಕೊಡಗಿನ ಮಾಕುಟ್ಟ ಹೆದ್ದಾರಿ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ರಾಜ್ಯಕ್ಕೆ ಸೇರಿದ ಖಾಸಗಿ ಬಸ್ ಇದಾಗಿದ್ದು, ಮಾಕುಟ್ಟದ ಆಂಜನೇಯ ದೇವಾಲಯದ ಬಳಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಅಗ್ನಿಗೆ ಆಹುತಿಯಾಗಿತ್ತು. ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.

Read More

ಮಡಿಕೇರಿ ಡಿ.15 NEWS DESK : ನಗರದ ಸಂತ ಮೈಕಲರ ದೇವಾಲಯದ ಬೆಳ್ಳಿ ಮಹೋತ್ಸವ ಹಾಗೂ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಸಂಜೆ ಅಲಂಕೃತ ವಾಹನದಲ್ಲಿ ದೇವರ ವಿಗ್ರಹಗಳನ್ನು ಕುಳ್ಳಿರಿಸಿ ಸಹಸ್ರಾರು ಸಂಖ್ಯೆಯ ಕ್ರಿಶ್ಚಿಯನ್ ಬಾಂಧವರು ನಗರದಲ್ಲಿ ಮೆರವಣಿಗೆ ನಡೆಸಿದರು. ಭಕ್ತರು ಉರಿಯುತ್ತಿದ್ದ ಮೇಣದ ಬತ್ತಿ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಕ್ಕಳು, ಮಹಿಳೆಯರಾದಿಯಾಗಿ ಜನಾಂಗದ ಮಂದಿ ಸಂತ ಮೈಕಲರ ದೇವಾಲಯದಿಂದ ಹೊರಟ ಮೆರವಣಿಗೆ ಮಂಗೇರೀರ ಮುತ್ತಣ್ಣ ವೃತ್ತ, ಸ್ಕ್ವಾಡರ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಚೌಕಿವರೆಗೆ ಸಾಗಿ ಮತ್ತೆ ಅದೇ ರಸ್ತೆ ಮೂಲಕ ದೇವಾಲಯಕ್ಕೆ ಹಿಂತಿರುಗಿತು. ದೇವಾಲಯಕ್ಕೆ 25 ವರ್ಷ ತುಂಬಿದ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

Read More

ನಾಪೋಕ್ಲು ಡಿ.15 NEWS DESK : ಕಕ್ಕಬ್ಬೆಯ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸಭಾಂಗಣದಲ್ಲಿ ಕೊಡವ ಮುಸ್ಲಿಂ ಸ್ಪೋಟ್ರ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಅನ್ನು ಉದ್ಘಾಟಿಸಲಾಯಿತು. ಕೊಡಗು ಜಿಲ್ಲಾ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಮಕ್ಕಳಿಗೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವುದರ ಮೂಲಕ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಅನ್ನು ಉದ್ಘಾಟಿಸಿ, ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪೂರಕ ವ್ಯವಸ್ಥೆ ಇಲ್ಲದಿರುವ ಕಾರಣ ಯಶಸ್ಸು ಸಾಧಿಸಲಾಗುತ್ತಿಲ್ಲ. ಆದ್ದರಿಂದ ಅರ್ಹ ಕ್ರೀಡಾ ಪ್ರತಿಭಗಳಿಗೆ ಸರಕಾರೇತರ ಸಂಘ ಸಂಸ್ಥೆಗಳ ಪ್ರೋತ್ಸಾಹ ತೀರಾ ಅಗತ್ಯ ಎಂದರು. ಕ್ರೀಡೆಗಳು ಸಮಾಜದಲ್ಲಿ ಬಹು ಆಯಾಮದ ಪಾತ್ರವನ್ನು ವಹಿಸುತ್ತವೆ. ಇದು ದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಅತ್ಯಗತ್ಯ ಅಂಶವಾಗಿದೆ. ಕ್ರೀಡೆಗಳಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಕ್ರೀಡೆ ಜೀವನದಲ್ಲಿ ಮನುಷ್ಯನಿಗೆ ಶಿಸ್ತನ್ನು ಕಲಿಸುತ್ತದೆ ಎಂದರಲ್ಲದೆ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಪದಾಧಿಕಾರಿಗಳ ಸಾಮಾಜಿಕ ಚಿಂತನೆ ಶ್ಲಾಘನೀಯ ಎಂದು ಮೆಚ್ಚುಗೆ…

Read More

ಮಡಿಕೇರಿ ಡಿ.15 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಕುಟ್ಟ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವಾಗಿದೆ. ಸಾರ್ವಜನಿಕರು ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಹಿಂದೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಈ ರಸ್ತೆಯನ್ನು ಮಳೆ ನಿಂತ ಕೂಡಲೇ ದುರಸ್ತಿಗೊಳಿಸಲಾಗುವುದೆಂದು ಭರವಸೆ ನೀಡಿದ್ದರು.

Read More

ನಾಪೋಕ್ಲು ಡಿ.15 NEWS DESK : ಲಕ್ನೋದಲ್ಲಿ ನಡೆದ 19ನೇ ರಾಷ್ಟ್ರೀಯ ಡೈಮಂಡ್ ಜುಬಿಲಿ ಸ್ಕೌಟ್ ಜಂಬೂರಿ ಕಾರ್ಯಕ್ರಮದಲ್ಲಿ ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕೊಡಗಿಗೆ ಕೀರ್ತಿ ತಂದಿದ್ದಾರೆ. ಕಾರ್ಯಕ್ರಮದಲ್ಲಿ ಸ್ಕೌಟ್ ವಿದ್ಯಾರ್ಥಿಗಳಾದ ಲಿತನ್ ಪೂಣಚ್ಚ, ಧೀಮಂತ್ ಎ.ಎಸ್., ಪೊನ್ನಣ್ಣ ಬಿ.ಎನ್, ವಿಹಾನ್ ಕರುಂಬಯ್ಯ, ತನುಷ್ ಎಂ.ಬಿ, ಬೆಳ್ಳಿಪ್ಪ ಬಿ ಹಾಗೂ ಸ್ಕೌಟ್ ಮಾಸ್ಟರ್ ಮಹೇಶ್ ಪಾಲ್ಗೊಂಡಿದ್ದರು. ಅಂಕುರ್ ಪಬ್ಲಿಕ್ ಶಾಲೆಯ ಶಾಲಾ ಅಧ್ಯಕ್ಷ ರಾಜಾ ಚರ್ಮಣ್ಣ, ಕಾರ್ಯದರ್ಶಿ ರತ್ನ ಚರ್ಮಣ್ಣ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಡಿ.15 NEWS DESK : ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪಿಸಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಎಐಸಿಸಿ ವತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರ್ ಗದ್ದಿ ಚೋಡ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು , ಶ್ರೀಮತಿ ಸೋನಿಯಾ ಗಾಂಧಿ ಅವರು, ಶ್ರೀ ರಾಹುಲ್ ಗಾಂಧಿ ಅವರು, ಶ್ರೀಮತಿ ಪ್ರಿಯಾಂಕ ಗಾಂಧಿ ಅವರು , ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು , ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರು, ಸಚಿವರುಗಳಾದ ಡಾಕ್ಟರ್ ಎಂ.ಸಿ ಸುಧಾಕರ್ ಅವರು , ಈಶ್ವರ್ ಖಂಡ್ರೆ ಅವರು , ರಹಿಮ್ ಖಾನ್ ಅವರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Read More

ನಾಪೋಕ್ಲು ಡಿ.15 NEWS DESK : ತಮ್ಮ ಇಷ್ಟಾರ್ಥ ಸಿದ್ಧಿಗೆ ಭಕ್ತರು ಹರಕೆ ಒಪ್ಪಿಸುವ ಪದ್ಧತಿ ಅನಾದಿಕಾಲದಿಂದಲೂ ರೂಢಿಗತವಾಗಿ ಬಂದಿದೆ. ತಮ್ಮ ಇಷ್ಟ ದೇವರಿಗೆ ಆಯಾ ಪ್ರದೇಶದ ಆಚರಣೆಗೆ ತಕ್ಕಂತೆ ಪ್ರಾಣಿಗಳನ್ನು, ಹೂವುಹಣ್ಣುಗಳನ್ನು ಹರಕೆರೂಪದಲ್ಲಿ ಭಕ್ತರು ಒಪ್ಪಿಸುವುದು ಅನೂಚಾನವಾಗಿ ನಡೆದುಕೊಂಡು ಬಂದಿದೆ. ಆದರೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಬಳಿಯ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ಭಕ್ತರು ಹರಕೆ ರೂಪದಲ್ಲಿ ಮಣ್ಣಿನ ನಾಯಿಗಳ ಪ್ರತಿಕೃತಿಯನ್ನು ಒಪ್ಪಿಸುವಂತಹ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ಹರಕೆಯ ಕಾರಣದಿಂದ ದೇವಾಲಯದ ಸುತ್ತಲೂ ಮಣ್ಣಿನ ನಾಯಿಗಳ ಪ್ರತಿಕೃತಿ ಮೆರುಗು ನೀಡುತ್ತವೆ.ದಟ್ಟ ಕಾನನದ ಮದ್ಯೆ ಸುಮಾರು ಐದು ಅಡಿ ಎತ್ತರದ ವೃತ್ತಾಕಾರದ ಕಟ್ಟೆ ಈ ಕಟ್ಟೆಯ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ಸನ್ನಿಧಿ. ದೇವರಿಗೆ ಆಧ್ರಯವಿತ್ತಂತೆ ತೋರುವ ಒಂದು ಹಲಸಿನ ಮರ, ಸುತ್ತಲೂ ಸಹಸ್ರಾರು ಹರಕೆಯ ಮಣ್ಣಿನ ನಾಯಿಗಳು ಇದು ಮಕ್ಕಿ ಶಾಸ್ತಾವು ದೇವಾಲಯದ ಚಿತ್ರಣ. ಈ ದೇವಸ್ಥಾನದಲ್ಲಿ ಹರಕೆಯ ನಾಯಿ ತಯಾರಿಸುವ ಮತ್ತು…

Read More

ಮಡಿಕೇರಿ ಡಿ.15 NEWS DESK : ಕ್ರೀಡೆಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಮತ್ತು ನಾಯಕತ್ವದ ಗುಣವನ್ನು ಸೃಷ್ಟಿಸುತ್ತವೆ ಎಂದು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ತಿಳಿಸಿದ್ದಾರೆ. ಕೊಡಗು ಸೈನಿಕ ಶಾಲೆಯಲ್ಲಿ ನಡೆದ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ತೋರಿದ ಉನ್ನತ ಮಟ್ಟದ ಕ್ರೀಡಾಸ್ಫೂರ್ತಿ, ಶಿಸ್ತು ಮತ್ತು ಕನಿಷ್ಠ ಪ್ರಶಂಸನೀಯ. ಕ್ರೀಡಾಕೂಟದ ಆಯೋಜಕರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಕ್ರೀಡಾಕೂಟದುದ್ದಕ್ಕೂ ಸುರಕ್ಷತೆ ಮತ್ತು ನ್ಯಾಯಸಮ್ಮತ ಆಟಕ್ಕೆ ಆದ್ಯತೆ ನೀಡಲಾಗಿತ್ತು ಎಂದು ಹೇಳಿದರು. ಬಾಲಕಿಯರ ಹಿರಿಯರ ವಿಭಾಗದಿಂದ ಸುಬ್ರತೋ ನಿಲಯದ ಕೆಡೆಟ್ ದೀಪ್ತಿದೇವಿ ಹಾಗೂ ಕಿರಿಯ ಬಾಲಕಿಯರ ವಿಭಾಗದಿಂದ ಕಟಾರಿ ಕಿರಿಯರ ನಿಲಯದ ಕೆಡೆಟ್ ಕನಿಷ್ಠ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾದರು. ಕ್ರೀಡಾಕೂಟದ ಎಲ್ಲಾ ವಿಭಾಗಗಳಲ್ಲಿ ಸ್ಮರಣೀಯವಾದ ಸಾಧನೆಗೈದ ಸುಬ್ರತೋವನ್ನು 2025ನೇ ಸಾಲಿನ ಚಾಂಪಿಯನ್ ನಿಲಯವನ್ನಾಗಿ…

Read More

ಮಡಿಕೇರಿ ಡಿ.15 NEWS DESK : ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್ ಮಾದರಿಯಲ್ಲಿ “ಕೊಡವಲ್ಯಾಂಡ್” ಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಡಿ.18ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 16ನೇ ವಾರ್ಷಿಕ ಸಾರ್ವಜನಿಕ ಗನ್ ಕಾರ್ನಿವಲ್-ತೋಕ್ ನಮ್ಮೆಯನ್ನು ಮೂರ್ನಾಡ್ ನ ಬಲಂಬೇರಿ ರಸ್ತೆಯ ಬಳಿ ಕಡಿಯತ್ನಾಡ್ ಗಡಿರೇಖೆಯ ಸಮೀಪ ಚೇನಂಡ ಪೃಥ್ವಿ ಅವರ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್ ನಲ್ಲಿ ಜಾನಪದ ಸಂಭ್ರಮ ಮತ್ತು ಉತ್ಸಾಹದೊಂದಿಗೆ ಆಚರಿಸಲಾಗುತ್ತಿದೆ. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ, ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಕೊಡವರು, ಕೊಡವತಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಬಂದೂಕು ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆ, ಹಳೆಯ ಸಂಪ್ರದಾಯದ ಆಚರಣೆಗಳು, ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಮತ್ತು ಸಂರಕ್ಷಿಸಲು ಪ್ರತಿ ವರ್ಷ…

Read More

ಮಡಿಕೇರಿ ಡಿ.15 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ವಾಷಿ೯ಕ ಕ್ರೀಡಾಕೂಟ ವಿದ್ಯಾಥಿ೯, ಶಿಕ್ಷಕರ ಸಂಭ್ರಮದೊಂದಿಗೆ ಜರುಗಿತು.  ಕ್ರೀಡೋತ್ಸವದ ಒಲಂಪಿಕ್ ಟಾರ್ಚ್ ನ್ನು ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜು ಮಾತನಾಡಿ, ಕ್ರೀಡೆಗಳು ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ಥೈರ್ಯ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಪರಿಶ್ರಮ ಹಾಗೂ ಆತ್ಮವಿಶ್ವಾಸದೊಂದಿಗೆ ಮುಂದುವರಿಯಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ವ್ಯಕ್ತಿತ್ವ ನಿರ್ಮಾಣದಲ್ಲಿ ಗೆಳೆಯರ ಪಾತ್ರ ಮಹತ್ವದ್ದಾಗಿದ್ದು, ವಿಫಲತೆಯನ್ನು ಧೈರ್ಯದಿಂದ ಎದುರಿಸುವುದು ನಾಯಕತ್ವದ ಪ್ರಮುಖ ಗುಣವೆಂದು ಅವರು ಅಭಿಪ್ರಾಯಪಟ್ಟರು. ಒತ್ತಡದ ಸಂದರ್ಭಗಳಲ್ಲಿ ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಬೇಕು ಹಾಗೂ ವಿನಯವೇ ವ್ಯಕ್ತಿಯನ್ನು ಎತ್ತರಕ್ಕೆ ಕೊಂಡೊಯ್ಯುವ ಶಾಶ್ವತ ಗುಣವೆಂದೂ ಜಿಲ್ಲಾಧಿಕಾರಿ ಕಿವಿಮಾತು ಹೇಳಿದರು. ಕುಂಡ್ಲೋಳಂಡ ದಿನೇಶ್ ಕಾರ್ಯಪ್ಪ ಮಾತನಾಡಿ ಸಾಮಾಜಿಕ ಮಾಧ್ಯಮಗಳ ಪರಿಣಾಮದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ವಿದ್ಯಾರ್ಥಿ–ಗುರುಗಳ ನಡುವಿನ ಪರಸ್ಪರ ಗೌರವದಲ್ಲಿ ಉಂಟಾಗುತ್ತಿರುವ…

Read More