ಮಡಿಕೇರಿ ಜ.13 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಕೊಂಪುಳಿರ ಇಂದಿರಾ ರಾಮಚಂದ್ರ, ನಗರಾಧ್ಯಕ್ಷರಾಗಿ ಶಶಿಕಲಾ ಭಗವತಿ ನಗರ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಜಾನಕಿ ವೆಂಕಟೇಶ್ ಚೌಡ್ಲು, ನಗರಾಧ್ಯಕ್ಷರಾಗಿ ಶುಭ ಸೋಮವಾರಪೇಟೆ, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಸವಿತಾ ಸುರೇಶ್ ಶಿರಂಗಾಲ ಹಾಗೂ ನಗರಾಧ್ಯಕ್ಷರಾಗಿ ಸಂಗೀತ ರವಿಕುಮಾರ್ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಮೂರು ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಚರ್ಚಿಸಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಒಪ್ಪಿಗೆ ಮೇರೆಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪಕ್ಷದ ಬಲವರ್ಧನೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್ ತಿಳಿಸಿದರು. ನೂತನ ಅಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಡಾ.ಮಂತರ್ ಗೌಡ ಅವರು ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭ ಸೋಮವಾರಪೇಟೆ…
ಲೇಖಕ: admin
ಚೆಟ್ಟಳ್ಳಿ ಜ.13 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತಕ್ಕೆ ಸಹಕಾರ ವಿದ್ಯಾನಿಧಿ ಚೆಕ್ಕನ್ನು ವಿತರಿಸಲಾಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಿಬ್ಬಂದಿ ಅರುಣ್ ಕುಮಾರ್ ಅವರಿಗೆ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರಾದ ಬಿ.ಎಂ.ಕಾಶಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ಎಸ್.ನಂದಿನಿ ಹಾಜರಿದ್ದರು.
ಮಡಿಕೇರಿ ಜ.13 NEWS DESK : ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ದಕ್ಷತೆ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅಭಿನಂದಿಸಿದರು. ನಗರದ ಜಿಲ್ಲಾ ಕವಾಯತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಇದ್ದರು.
ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿದ ಸೃಜನಶೀಲ, ಸಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಬೇಕು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಬೇಕು. ಸ್ಪರ್ಧೆಗೆ ಪುಸ್ತಕ ಕಳಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸಬೇಕು. ಲಕೊಟೆಯ ಮೇಲೆ “ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ” ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. :: ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ…
ಮೈಸೂರು ಜ.13 NEWS DESK : ಯುವ ಸಮುದಾಯಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಜ್ಞಾನಿಕ ಉತ್ತೇಜನಕ್ಕಾಗಿ ಮೈಸೂರಿನಲ್ಲಿ ಪ್ಲಾನೆಟೋರಿಯಂ ನಿರ್ಮಾಣಕ್ಕೆ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಐದು ಕೋಟಿ ರೂ. ಅನುದಾನವನ್ನು ಸಂಸದರ ನಿಧಿಯಿಂದ ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಮೈಸೂರಿನಲ್ಲಿ ಕಾಸ್ಮೋಲಜಿ ಎಜುಕೇಷನ್ ಅಂಡ್ ರೀಸರ್ಚ್ ಟ್ರೇನಿಂಗ್ ಸೆಂಟರ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಹೆಚ್ಚುವರಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಕಾಸ್ಮೋಸ್ ಪ್ಲಾನೆಟೇರಿಯಮ್ ಯೋಜನೆಯು ನಮ್ಮ ಯುವಜನರಿಗೆ ಕುತೂಹಲ, ಕಲಿಕೆ, ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚು ಒತ್ತು ನೀಡುತ್ತದೆ ಎಂದು ವಿವರಿಸಿದ್ದಾರೆ. ಈ ಪ್ರಮುಖ ಯೋಜನೆಯು ಮೈಸೂರಿನ ಪ್ರವಾಸಿ ತಾಣದ ಹೆಗ್ಗುರುತಿಗೆ ಮತ್ತೊಂದು ಸೇರ್ಪಡೆಯಾಗಲಿದೆ. ಸ್ಥಳೀಯ ಅಭಿವೃದ್ಧಿಗೆ ಹೊಸ ಮಾರ್ಗ ಅವಕಾಶ ಒದಗಿಸುತ್ತದೆ ಜೊತೆಗೆ. ಜ್ಞಾನದ ಕೇಂದ್ರವಾಗಿ ಮೈಸೂರಿನ ಪರಂಪರೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ವಿವರಿಸಿದ್ದಾರೆ.…
ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಲೇಖಕಿ ಪೂಜಾರಿರ ಕೃಪಾ ದೇವರಾಜ್ ಬರೆದ ‘ಮಂತ್ರ ಪುಷ್ಪ ಕಥೆಗಳ ಕ್ಯಾನ್ವಾಸ್’ ಕೃತಿ ಪಡೆದುಕೊಂಡಿದೆ. ಈ ದತ್ತಿಯನ್ನು ಗೌರಮ್ಮ ಅವರ ಪುತ್ರ. ಬಿ.ಜಿ.ವಸಂತ ಅವರು ಸ್ಥಾಪಿಸಿದ್ದು, ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇದುವರೆಗೆ 22 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಪಾ ದೇವರಾಜ್ ಹಲವು ಪುಸ್ತಕಗಳನ್ನು ರಚಿಸಿದ್ದು, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಮಡಿಕೇರಿ ಜ.13 NEWS DESK : ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಭಾರತೀಯ ಕ್ರೀಡಾ ಪ್ರಾಧಿಕಾರದ ನೇತಾಜಿ ಸುಭಾಷ್ ದಕ್ಷಿಣ ಕೇಂದ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರೀಡಾಪಟುಗಳ ಸಾಧನೆ, ಕ್ರೀಡಾ ಕೊಠಡಿ, ಕ್ರೀಡೆಗೆ ಸಂಬಂಧಿತ ಉಪಕರಣಗಳು, ಸುಸಜ್ಜಿತ ಕ್ರೀಡಾಂಗಣಾದ ಒಳ ಹಾಗೂ ಹೊರ ನೋಟವನ್ನು ವೀಕ್ಷಿಸಿದರು. ಕ್ರೀಡಾಪಟುಗಳನ್ನು ಭೇಟಿ ಮಾಡಿ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡುವಂತೆ ಎಂದು ಪ್ರೋತ್ಸಾಹಿಸಿದರು. ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾದ ವಿಷ್ಣು ಸುಧಾಕರನ್, ನಿಕಟ ಪೂರ್ವ ನಿರ್ದೇಶಕರಾದ ಎಂ.ಕೆ ಗಣೇಶನ್ ಹಾಗೂ ಹಿರಿಯ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಬೆಂಗಳೂರು ಜ.13 NEWS DESK : ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದರು. ಚುನಾವಣೆ ಹಾಗೂ ಚುನಾವಣಾ ನೀತಿಗಳು ಮತ್ತು ಪ್ರಜಾಪ್ರಭುತ್ವ ಆಡಳಿತ ಎಂಬ ವಿಷಯದ ಬಗ್ಗೆ ಮಾತನಾಡಿದ ಶಾಸಕರು, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮಹತ್ವ ಹಾಗೂ ಚುನಾವಣೆ ಪ್ರಕ್ರಿಯೆಗಳ ರೀತಿ -ನೀತಿಗಳ ಬಗ್ಗೆ ವಿಸ್ತಾರವಾಗಿ ವಿವರಿಸಿ ಯುವ ವಕೀಲರ ಜೊತೆ ಸಂವಾದ ನಡೆಸಿದರು. ಭಾರತೀಯರಾದ ನಮಗೆ ನಮ್ಮ ಸಂವಿಧಾನ ನೀಡಿದ ಅತ್ಯಂತ ಮಹತ್ವದ ವಿಷಯವೇ ಪ್ರಜಾಪ್ರಭುತ್ವ ಆಡಳಿತ. ಇಲ್ಲಿ ಪ್ರಜೆಗಳು ತಮ್ಮನ್ನು ಆಳಬೇಕಾಗಿರುವ ವ್ಯಕ್ತಿಯನ್ನು ಆಯ್ಕೆ ಮಾಡಲು ಸಂಪೂರ್ಣ ಸ್ವಾತಂತ್ರ್ಯರು ಮತ್ತು ದೇಶದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡರೆ, ಇದು ಅತ್ಯಂತ ಮಹತ್ವದ ಹಾಗೂ ಗುರುತರ ಜವಾಬ್ದಾರಿ ಆಗಿರುತ್ತದೆ. ವಕೀಲರಿಗೆ ಸಂವಿಧಾನವನ್ನು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವ ಮಹತ್ವದ ಜವಾಬ್ದಾರಿ ಇದೆ. ಇದನ್ನು ಎಲ್ಲರೂ ಯಶಸ್ವಿಯಾಗಿ ನಿಭಾಯಿಸಬೇಕೆಂದು ಪ್ರಜಾಪ್ರಭುತ್ವ ಆಡಳಿತದ ಮಹತ್ವ…
ನಾಪೋಕ್ಲುಜ.13 NEWS DESK : ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2025-26 ಸಾಲಿನ ಸ್ಪರ್ಧೆಯಲ್ಲಿ ರಘುಪತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2025-26 ಸಾಲಿನ ಸ್ಪರ್ಧೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಮೂರ್ನಾಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕಕ್ಕಬೆ ನಿವಾಸಿ ಎ.ಎ.ರಘುಪತಿ ಅವರು ನಾಟಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಜು ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.12 NEWS DESK : ಮಡಿಕೇರಿಯ ಮಂಗಳಾದೇವಿ ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಜ.14 ಮತ್ತು 15 ರಂದು ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಎರಡು ದಿನಗಳ ಕಾಲ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗ ದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ನಡೆಯಲಿದೆ. ಜ.14 ರಂದು ಸಂಜೆ 6 ಗಂಟೆಯಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ದಿ, ರಾಕ್ಷೆಘ್ನ ಹೋಮ, ವಾಸ್ತುಪೂಜೆ, ವಾಸ್ತುಹೋಮ, ದಿಶಾಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಜ.15 ರಂದು ಬೆಳಗ್ಗೆ ಗಂಟೆ 8 ರಿಂದ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ, ಕಲಶಾಭಿಷೇಕ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ಸಾಯಂಕಾಲ 5.30 ರಿಂದ ಸಾಯಂಪೂಜೆ, 6.30 ಕ್ಕೆ ರಂಗಪೂಜೆ ಸಂಜೆ 7 ರಿಂದ ಬಲಿ…






