ಲೇಖಕ: admin

ಮಡಿಕೇರಿ, NEWS DESK ಫೆ.24 : ಮಡಿಕೇರಿ ಪ್ರವಾಸಿ ವಾಹನಗಳು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಮತ್ತು ಪ್ರವಾಸಿಗರಿಂದ ಅಧಿಕ ದರ ಪಡೆಯುತ್ತಿಲ್ಲವೆಂದು ಮಡಿಕೇರಿ ಪ್ರವಾಸಿ ವಾಹನ ಮಾಲೀಕ ಚಾಲಕರ ಸಂಘ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಂತು ಕಾರ್ಯಪ್ಪ ವಿನಾಕಾರಣ ಕೆಲವರು ಪ್ರವಾಸಿ ವಾಹನಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ರವಾನಿಸುತ್ತಿದ್ದು, ಇದು ಖಂಡನೀಯ ಎಂದರು. ಜೀಪ್ ಚಾಲಕರ ಸಂಘ ಮತ್ತು ಆಟೋ ಚಾಲಕರ ಸಂಘದ ಪ್ರಮುಖರೆನಿಸಿಕೊಂಡವರು ಪ್ರವಾಸಿ ವಾಹನಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಪ್ರವಾಸಿ ವಾಹನಗಳು ನಿಗಧಿತ ದರವನ್ನು ಮಾತ್ರ ಪ್ರವಾಸಿಗರಿಂದ ಪಡೆಯುತ್ತಿದ್ದು, ಅಧಿಕ ದರ ವಸೂಲಿ ಮಾಡುತ್ತಿಲ್ಲ. ಕೆಲವು ಜೀಪು ಚಾಲಕರು ಹಾಗೂ ಆಟೋ ಚಾಲಕರು ನಿಯಮ ಉಲ್ಲಂಘಿಸಿದಾಗ ಆಯಾ ಸಂಘಗಳ ಅಧ್ಯಕ್ಷರುಗಳು ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು. ಜಿಲ್ಲೆಯ ಪ್ರವಾಸೋದ್ಯಮದ ಬೆಳವಣಿಗೆಗೆ ಪ್ರವಾಸಿ ವಾಹನಗಳು ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು. *ಬೇಡಿಕೆ* ಜಿಲ್ಲೆಯ ವಿವಿಧ ಪ್ರವಾಸಿತಾಣಗಳಿಗೆ…

Read More

ಬೆಂಗಳೂರು, ಫೆಬ್ರವರಿ 24, 2026: ಭಾರತೀಯ ಭೂಸೇನೆಯು 2027ನೇ ಸಾಲಿನ ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CEE) ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯ ವೇಳಾಪಟ್ಟಿ ನೋಂದಣಿ ಪ್ರಾರಂಭ: 13 ಫೆಬ್ರವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಏಪ್ರಿಲ್ 2026 ನೇಮಕಾತಿ ನಡೆಯಲಿರುವ ಹುದ್ದೆಗಳ ವರ್ಗಗಳು ಈ ಕೆಳಗಿನ ವಿವಿಧ ವಿಭಾಗಗಳಲ್ಲಿ ಅಗ್ನಿವೀರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ: ಅಗ್ನಿವೀರ್ ಜನರಲ್ ಡ್ಯೂಟಿ (GD) ಅಗ್ನಿವೀರ್ ಟೆಕ್ನಿಕಲ್ ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್ ಅಗ್ನಿವೀರ್ ಟ್ರೇಡ್ಸ್‌ಮನ್ (10ನೇ ತರಗತಿ ಪಾಸಾದವರಿಗೆ) ಅಗ್ನಿವೀರ್ ಟ್ರೇಡ್ಸ್‌ಮನ್ (8ನೇ ತರಗತಿ ಪಾಸಾದವರಿಗೆ) ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ನರ್ಸಿಂಗ್ ಅಸಿಸ್ಟೆಂಟ್ ಮತ್ತು ನರ್ಸಿಂಗ್ ಅಸಿಸ್ಟೆಂಟ್ ವೆಟರ್ನರಿ ಸಿಪಾಯಿ ಫಾರ್ಮಾ ಅರ್ಹತೆ ಮತ್ತು ಹೆಚ್ಚಿನ ಮಾಹಿತಿ ವಯೋಮಿತಿ,…

Read More

*ಮಂಜಿನ ನಗರಿ ಮಡಿಕೇರಿಯ ಹೃದಯ ಭಾಗದಲ್ಲಿ SANEE GRACE : ನಿಮಗಿದು ಸುವರ್ಣಾವಕಾಶ >>> READY TO MOVE LUXURY FLAT FIRST TIME IN MADIKERI >>> BOOK & RENT TO US SCHEME >>> BYE A FLAT & GET ASSURED RENTAL INCOME* FLATS AVAILABLE : 1 BHK : 2 BHK : 3 BHK >>> ABBEY FALLS ROAD, BHAGAVATHI NAGAR, MADIKERI. 571201 >>> MORE INFORMATION CALL US : 9448549141, 9167790888, 9945779353

Read More

ರಾಂಚಿ, ಫೆಬ್ರವರಿ 24: ಒಂದು ಜೀವವನ್ನು ಉಳಿಸಲು ಸಾಲಸೋಲ ಮಾಡಿ ಲಕ್ಷಾಂತರ ರೂಪಾಯಿ ತೆತ್ತು ಹಾರಿದ ಏರ್ ಆಂಬ್ಯುಲೆನ್ಸ್ ವಿಧಿಯ ಅಟ್ಟಹಾಸಕ್ಕೆ ಬಲಿಯಾಗಿದೆ. ಜಾರ್ಖಂಡ್‌ನ ರಾಂಚಿಯಿಂದ ದೆಹಲಿಗೆ ಹೊರಟಿದ್ದ ರೆಡ್‌ಬರ್ಡ್ ಏರ್‌ವೇಸ್‌ನ ಏರ್ ಆಂಬ್ಯುಲೆನ್ಸ್ ಪತನಗೊಂಡಿದ್ದು, ವಿಮಾನದಲ್ಲಿದ್ದ ಏಳೂ ಮಂದಿ ಮೃತಪಟ್ಟಿದ್ದಾರೆ. ಒಂದು ಉಸಿರು ಉಳಿಸಲು ಹೋದ ಪ್ರಯತ್ನದಲ್ಲಿ ಏಳು ಪ್ರಾಣಗಳು ಮಸಣ ಸೇರಿದ ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದುರಂತ ಸಂಭವಿಸಿದ್ದು ಹೇಗೆ? ರಾಂಚಿಯ ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೇ.65 ರಷ್ಟು ಸುಟ್ಟುಹೋಗಿದ್ದ ಸಂಜಯ್ ಶಾ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ರೆಡ್‌ಬರ್ಡ್ ಏರ್‌ವೇಸ್‌ನ ಬೀಚ್‌ಕ್ರಾಫ್ಟ್ ಸಿ90 ವಿಮಾನವು ಸಂಜೆ 7.11 ಕ್ಕೆ ರಾಂಚಿಯಿಂದ ಟೇಕಾಫ್ ಆಗಿತ್ತು. ಆದರೆ, ಹಾರಾಟ ನಡೆಸಿದ ಕೇವಲ 20 ನಿಮಿಷಗಳಲ್ಲೇ ವಾಯು ಸಂಚಾರ ನಿಯಂತ್ರಣದೊಂದಿಗೆ (ATC) ಸಂಪರ್ಕ ಕಳೆದುಕೊಂಡ ವಿಮಾನವು, ಹವಾಮಾನ ವೈಪರೀತ್ಯದಿಂದಾಗಿ ಚತ್ರಾ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಮೃತಪಟ್ಟವರ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಪ್ರವಾಸಿಗರ ಸ್ವರ್ಗ ಗೋವಾ ನಡುವೆ ವೇಗದ ಸಂಪರ್ಕ ಕಲ್ಪಿಸುವ ದಿಸೆಯಲ್ಲಿ ನೈಋತ್ಯ ರೈಲ್ವೆಯು ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ. ಈ ಯೋಜನೆಗೆ ರೈಲ್ವೆ ಮಂಡಳಿಯಿಂದ ಅಂತಿಮ ಅನುಮೋದನೆ ಸಿಕ್ಕರೆ, ಗೋವಾ ಕಡಲತೀರಕ್ಕೆ ತೆರಳುವ ಪ್ರವಾಸಿಗರಿಗೆ ಇದೊಂದು ದೊಡ್ಡ ಕೊಡುಗೆಯಾಗಲಿದೆ. ವಾರದಲ್ಲಿ 6 ದಿನ ಸಂಚಾರ; 12 ಗಂಟೆಗಳ ಪಯಣ ಪ್ರಸ್ತುತ ಬೆಂಗಳೂರಿನಿಂದ ಗೋವಾಕ್ಕೆ ಸಂಚರಿಸುವ ವಾಸ್ಕೋ ಡಿ ಗಾಮಾ ಎಕ್ಸ್‌ಪ್ರೆಸ್ ಸುಮಾರು 15 ಗಂಟೆಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ, ವಂದೇ ಭಾರತ್ ರೈಲು ಈ 700 ಕಿಲೋಮೀಟರ್ ದೂರವನ್ನು ಸುಮಾರು 12 ರಿಂದ 12:05 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆ ಇದೆ. ಇದು ವಾರದಲ್ಲಿ ಆರು ದಿನಗಳ ಕಾಲ ಸಂಚರಿಸುವ ಸಾಧ್ಯತೆಯಿದೆ. ಘಾಟ್ ಪ್ರದೇಶದಲ್ಲಿ ವೇಗಕ್ಕೆ ಮಿತಿ ವಂದೇ ಭಾರತ್ ರೈಲು 160 ಕಿ.ಮೀ ಗಿಂತಲೂ ಹೆಚ್ಚು ವೇಗವಾಗಿ ಸಂಚರಿಸುವ ಸಾಮರ್ಥ್ಯ ಹೊಂದಿದ್ದರೂ, ಈ ಮಾರ್ಗದಲ್ಲಿ ಅಷ್ಟು ವೇಗವಾಗಿ ಚಲಿಸಲು ಸಾಧ್ಯವಿಲ್ಲ. ಕೊಂಕಣ ಭಾಗದ…

Read More

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಆಡಳಿತಾರೂಢ ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ (LDF) ಸರ್ಕಾರವು ಶಬರಿಮಲೆ ವಿಚಾರದಲ್ಲಿ ಅಚ್ಚರಿಯ ‘ರಾಜಕೀಯ ಯೂ-ಟರ್ನ್’ ತೆಗೆದುಕೊಳ್ಳುವ ಮುನ್ಸೂಚನೆ ನೀಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದ್ದ ಕಮ್ಯುನಿಸ್ಟ್ ಸರ್ಕಾರ, ಈಗ ಸಂಪ್ರದಾಯ ಮತ್ತು ಭಕ್ತರ ನಂಬಿಕೆಯ ರಕ್ಷಕನಂತೆ ಬಿಂಬಿಸಿಕೊಳ್ಳಲು ಸಜ್ಜಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯ ಆಘಾತ ಕಳೆದ ಡಿಸೆಂಬರ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡರಂಗಕ್ಕೆ ನಿರೀಕ್ಷಿತ ಯಶಸ್ಸು ಸಿಗದೆ ಮುಗ್ಗರಿಸಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಪ್ರದರ್ಶನ ನೀಡಿದ್ದರೆ, ಬಿಜೆಪಿ ಕೂಡ ತನ್ನ ಅಸ್ತಿತ್ವವನ್ನು ಬಲಪಡಿಸಿಕೊಂಡಿತ್ತು. ಈ ಹಿನ್ನಡೆಯ ಹಿಂದೆ ಶಬರಿಮಲೆ ವಿವಾದ ಮತ್ತು ಆಡಳಿತ ವಿರೋಧಿ ಅಲೆ ಪ್ರಮುಖ ಪಾತ್ರ ವಹಿಸಿದೆ ಎಂದು ವಿಶ್ಲೇಷಿಸಲಾಗಿದೆ. ಹಿಂದು ಮತಬ್ಯಾಂಕ್ ಸಂಪೂರ್ಣವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಾಲಾಗುವುದನ್ನು ತಡೆಯುವುದು ಈಗ ಸಿಪಿಐ(ಎಂ)ಗೆ ಅನಿವಾರ್ಯವಾಗಿದೆ. ಶಬರಿಮಲೆ ಚಿನ್ನ ಕಳವು ಪ್ರಕರಣದ ಬಿಸಿ ಬಜೆಟ್ ಅಧಿವೇಶನದಲ್ಲಿ…

Read More

ಮಡಿಕೇರಿ ಫೆ.24 –  ಜೀವ ಸಂರಕ್ಷಕವಾದ ರಕ್ತಕ್ಕೆ  ಕೊಡಗಿನಲ್ಲಿ ದಿನಾ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸ್ವಯಂಪ್ರೇರಿತರಾಗಿ ಜನರು ರಕ್ತದಾನ ಮಾಡಲು ಮುಂದಾಗಬೇಕಾದ ಅತ್ಯಗತ್ಯವಿದೆ ಎಂದು ಜಿಲ್ಲಾ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ರವಿ ಕರುಂಬಯ್ಯ ಕರೆ ನೀಡಿದ್ದಾರೆ. ಮಾಸಿಕ 600 ಯೂನಿಟ್ ರಕ್ತದ ಅಗತ್ಯವಿದ್ದು ಇಷ್ಟೊಂದು ರಕ್ತ ಸಂಗ್ರಹವಾಗದ ಹಿನ್ನಲೆಯಲ್ಲಿ ರಕ್ತದ ಕೊರತೆ ಆಸ್ಪತ್ರೆಗಳಲ್ಲಿ ತೀವ್ರವಾಗಿದೆ ಎಂದೂ ಅವರು ಹೇಳಿದ್ದಾರೆ. ನಗರದ ರೋಟರಿ ಸಬಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್  ವತಿಯಿಂದ ಮಹಿಳೆಯರಿಗಾಗಿಯೇ ರಕ್ತದಾನ ಶಿಬಿರ ಆಯೋಜನಾ ಕಾಯ೯ಕ್ರಮದಲ್ಲಿ ರಕ್ತದಾನ  ತಪ್ಪುಗ್ರಹಿಕೆ ಮತ್ತು ವಾಸ್ತವ ವಿಚಾರದ ಕುರಿತಾಗಿ ಅವರು ಮಾಹಿತಿ ನೀಡಿದರು.  ಕೆಲವು ವಷ೯ಗಳ ಹಿಂದಿನವರೆಗೆ  ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ 100 ಯೂನಿಟ್ ರಕ್ತ ಸಾಕಾಗುತ್ತಿತ್ತು, ಆದರೆ ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆಯ ಜಿಲ್ಲಾಸ್ಪತ್ರೆ ವಿಸ್ತಾರಗೊಂಡು ಕೊಡಗು ಮಾತ್ರವಲ್ಲದೇ ಪರಜಿಲ್ಲೆಗಳ ರೋಗಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ದಾಖಲಾಗುತ್ತಿರುವುದರಿಂದಾಗಿ ರಕ್ತಕ್ಕೆ ಬೇಡಿಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಪ್ರತೀ ತಿಂಗಳು 600 ಯೂನಿಟ್ ರಕ್ತದ ಅಗತ್ಯತೆಯಿದೆ.…

Read More

ಮಡಿಕೇರಿ, NEWS DESK ಫೆ.24 –   ಸಮಾಜದ ಅಗತ್ಯತೆಗೆ ತಕ್ಕಂತೆ ವಿನೂತನವಾದ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಗಳು ಕಾಯ೯ಪ್ರವೖತ್ತವಾಗಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಮಾಜದಲ್ಲಿಯೂ ಅಗತ್ಯತೆಗಳ ಬದಲಾವಣೆಗೆ ತಕ್ಕಂತೆ ಯೋಜನೆ ಜಾರಿಯಾಗಬೇಕೆಂದು ರೋಟರಿ ಜಿಲ್ಲೆ 3192 ನ ಬೆಂಗಳೂರು ಪೀಣ್ಯ ರೋಟರಿ ಸಂಸ್ಥೆಯ ಪ್ರಮುಖ ನಾಗೇಂದ್ರಪ್ರಸಾದ್ ಕರೆ ನೀಡಿದ್ದಾರೆ. ನಗರದ ಹೊರವಲಯದಲ್ಲಿನ ಸಂಪಿಗೆ ಇಕೋ  ವಿಲೇಜ್ ರೆಸಾಟ್೯ನಲ್ಲಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ವತಿಯಿಂದ ರೋಟರಿ ವಲಯ 6 ರ 14 ರೋಟರಿ ಸಂಸ್ಥೆಗಳಿಗೆ ಸೇರಿದ ಸದಸ್ಯರ   ಸಮ್ಮಿಲನ ಸಮಾರಂಭ ಉದ್ಗಾಟಿಸಿ  ಅವರು ಮಾತನಾಡಿದರು. ರೋಟರಿ ಸಂಸ್ಥೆಗಳಿಗೆ ಯುವಕ, ಯುವತಿಯರನ್ನು ಹೆಚ್ಚಿನ ಸಂಖ್ಯೆಯಲ್ಲಿ  ಆಕಷಿ೯ಸಬೇಕು.  ಸೇವಾ ಕಾಯ೯ಗಳಿಗೆ ಯುವಪೀಳಿಗೆ  ಮುಂದಾಗುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಬೇಕೆಂದು ಕರೆ ನೀಡಿದ ಅವರು, ಕೋವಿಡ್ ಲಾಕ್ ಡೌನ್ ಸಂದಭ೯ದಲ್ಲಿಯೂ ರೋಟರಿ ಸಂಸ್ಥೆಗಳು ವಿಶ್ವವ್ಯಾಪಿ ಸಕ್ರಿಯವಾದ ಕಾಯ೯ಚಟುವಟಿಕೆ ಮೂಲಕ ಜನರ ನೆರವಿಗೆ ಮುಂದಾಗಿತ್ತು, ಹಲವೊಮ್ಮೆ ಸಕಾ೯ರಗಳಿಂದಲೂ…

Read More

ಮಡಿಕೇರಿ NEWS DESK ಫೆ.24 : ದಕ್ಷಿಣ ಭಾರತ ಮಿಕ್ಸ್ ಬಾಕ್ಸಿಂಗ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಾದಾಪುರದ ಎನ್.ಸಿ.ಸುದರ್ಶನ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಮಿಕ್ಸ್ ಬಾಕ್ಸಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್.ಸಿ.ಸುದರ್ಶನ್ ಅವರು ಕೊಡಗು ಜಿಲ್ಲೆಯ ನೂರಾರು ವಿದ್ಯಾರ್ಥಿಗಳಿಗೆ ಮಿಕ್ಸ್ ಬಾಕ್ಸಿಂಗ್ ತರಬೇತಿಯನ್ನು ನೀಡಿದ್ದಾರೆ. ಅಲ್ಲದೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪದಕಗಳನ್ನು ಗೆಲ್ಲಲು ಕಾರಣಕರ್ತರಾಗಿದ್ದಾರೆ. ಇಂಡಿಯನ್ ಮಿಕ್ಸ್ ಬಾಕ್ಸಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಎಸ್. ಮಾಸ್ಕರ್ ಅವರು ಎನ್.ಸಿ.ಸುದರ್ಶನ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ.

Read More

ಚೆಟ್ಟಳ್ಳಿ ಫೆ.23 NEWS DESK :  ವಿರಾಟ್ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಚೆಟ್ಟಳ್ಳಿಯಲ್ಲಿ ವಿರಾಟ್ ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ನಡೆಯಿತು.  ಚೇರಳ, ಶ್ರೀಮಂಗಲ, ಈರಳೆವಳಮುಡಿ, ಕೂಡ್ಲೂರು ಚೆಟ್ಟಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಹಿಂದೂ ಬಾಂಧವರು ಭವ್ಯ ಶೋಭಾಯಾತ್ರೆ ಮತ್ತು ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಅಪೂರ್ವ ವೈಭವ ನೀಡಿದರು. ಶೋಭಾಯಾತ್ರೆಯು ವ್ಯಾಲಿ ಪ್ಲೇ ಶಾಲೆಯ ಮುಂಭಾಗದಿಂದ ಆರಂಭಗೊಂಡು ವಿವಿಧ ಸಾಂಸ್ಕೃತಿಕ ಪ್ರದರ್ಶನದೊಂದಿಗೆ ಚೆಟ್ಟಳ್ಳಿ ಪ್ರೌಢಶಾಲಾ ಆಟದ ಮೈದಾನದವರೆಗೆ ಸಾಗಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕೇಸರಿ ಧ್ವಜಗಳ ಹಾರಾಟ, ಧಾರ್ಮಿಕ ಘೋಷಣೆಗಳನ್ನು ಮೊಳಗಿಸುತ್ತ ಶಿಸ್ತುಬದ್ಧವಾಗಿ ಸಾಗಿದ ಮೆರವಣಿಗೆ ಸಾರ್ವಜನಿಕರ ಗಮನ ಸೆಳೆಯಿತು. ಇದರಿಂದ ಪಟ್ಟಣದೂದ್ದಕ್ಕೂ ಕೇಸರಿಮಯ ವಾತಾವರಣ ನಿರ್ಮಾಣವಾಗಿ, ಚೆಟ್ಟಳ್ಳಿ ಸಂಪೂರ್ಣವಾಗಿ ಹಬ್ಬದ ಸೌರಭದಲ್ಲಿ ಮುಳುಗಿತು. ಶೋಭಾಯಾತ್ರೆಯಲ್ಲಿ ಮಹಿಳೆಯರ ಪೂರ್ಣ ಕುಂಭ ಸ್ವಾಗತ,ನೆಲ್ಲಿಹುದಿಕೇರಿಯಶ್ರೀ ಮೂಕಾಂಬಿಕಾ ಭಜನೆ ಕುಣಿತ ತಂಡ , ಉಡತ್ ಮೊಟ್ಟೆ ಭಜನೆ ಕುಣಿತ, ಬೆಳ್ಳಿ ರಥ, ಶ್ರೀ ಶಬರೀಶ್ ಚೆಂಡೆಮೇಳ ತಂಡ…

Read More