ಲೇಖಕ: admin

ಮಡಿಕೇರಿ NEWS DESK ಮೇ 15 : ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗದ ರಾಜ್ಯ ಕಾಂಗ್ರೆಸ್ ಸರಕಾರ ವಿದ್ಯಾರ್ಥಿಗಳಿಗೆ ಸಮಾನತೆಯ ಪಾಠ ಮಾಡುವ ಬದಲು ಹಿಜಾಬ್ ರಾಜಕಾರಣದ ಮೂಲಕ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿ ಶೂನ್ಯ ರಾಜ್ಯ ಸರಕಾರ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳಲ್ಲಿ ಅಸಮಾನತೆ ಮೂಡಿಸುತ್ತಿದೆ. ಸಮವಸ್ತ್ರ ಮತ್ತು ಸಮಾನತೆಯ ಅರಿವಿಲ್ಲದ ಕಾಂಗ್ರೆಸ್ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸುತ್ತಿದೆ. ಒಂದು ಧರ್ಮದವರನ್ನು ಓಲೈಸಿಕೊಳ್ಳುವ ಭರದಲ್ಲಿ ಮತ್ತೊಂದು ಧರ್ಮದವರ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ಸಮಾನತೆ ಮೂಡಿಸಲಾಗದವರು ಸಮಾಜದಲ್ಲಿ ಐಕ್ಯತೆ ಕಾಪಾಡುವ ಪಾಠ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರಕಾರದ ಹಿಜಾಬ್ ಅನುಮತಿಯ ನಿಲುವು ಒಡೆದು ಆಳುವ ನೀತಿ ಎನ್ನುವುದು ಮತ್ತೊಮ್ಮೆ ರಾಜ್ಯದ ಜನತೆಗೆ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಹಿಂದೂ ಕಾರ್ಯಕರ್ತರು ಮೌನಕ್ಕೆ ಶರಣಾಗಿರುವುದು ದುರಾದೃಷ್ಟಕರ. “ಸಬ್…

Read More

ಮಡಿಕೇರಿ NEWS DESK ಮೇ 15 : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ನೀಡಿರುವ ರಾಜ್ಯ ಸರಕಾರದ ಕ್ರಮ ಖಂಡನೀಯವೆಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿದ್ದು, ವಿಚಾರಣೆ ಪೂರ್ಣಗೊಳ್ಳುವ ಮೊದಲೇ ಸರಕಾರ ನೀಡಿರುವ ಆದೇಶ ಕಾನೂನಿಗೆ ವಿರುದ್ಧವಾಗಿದೆ. ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. 2022ರಲ್ಲಿದ್ದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆದಿರುವ ಕಾಂಗ್ರೆಸ್ ಸರಕಾರ ಒಂದು ಸಮುದಾಯದ ಓಲೈಕೆಗಾಗಿ ವಿದ್ಯಾರ್ಥಿಗಳ ಸಮಾನತೆಯ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳೆಲ್ಲರೂ ಸರ್ವ ಸಮಾನರು ಮತ್ತು ಐಕ್ಯತೆಯಿಂದ ಶಿಕ್ಷಣದ ಗುರಿ ಸಾಧಿಸಬೇಕೆನ್ನುವ ಉದ್ದೇಶದಿಂದ ಸಮವಸ್ತ್ರದ ವ್ಯವಸ್ಥೆಯನ್ನು ಪಾಲಿಸಲಾಗುತ್ತಿದೆ. ಆದರೆ ಕಾಂಗ್ರೆಸ್ ಸರಕಾರ ಶಿಕ್ಷಣದ ಹಕ್ಕನ್ನು ಎತ್ತಿ ಹಿಡಿಯುವ ಕಾರಣ ನೀಡಿ ವಿದ್ಯಾರ್ಥಿಗಳ ಸಮಾನತೆಯ ಹಕ್ಕನ್ನು ಕಸಿದುಕೊಳ್ಳುತ್ತಿದೆ. ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳಲ್ಲಿ ಭೇದಭಾವ ಮೂಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಒಂದು ಸಮುದಾಯದ ಮಂದಿ ರಾಜ್ಯ ಸರಕಾರದ…

Read More

ಮಡಿಕೇರಿ NEWS DESK ಮೇ 15 : ವೈಯುಕ್ತಿಕ ಕಾರಣದಿಂದಾಗಿ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೋಳಿಬೈಲು ವೆಂಕಟೇಶ್ ರವರು ಇತ್ತೀಚಿಗೆ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಇಂದು ಭಾಗಮಂಡಲಕ್ಕೆ ಕಾರ್ಯನಿಮಿತ್ತ ಆಗಮಿಸಿದ್ದ ಮಾನ್ಯ ಶಾಸಕರು, ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ವೆಂಕಟೇಶ್ ರವರೊಂದಿಗೆ ಮಾತನಾಡಿ, ಪಕ್ಷದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುವಂತೆ ಕೇಳಿಕೊಂಡ ಮೇರೆಗೆ, ಶಾಸಕರ ಹಾಗೂ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ತಮ್ಮ ನಿಲುವನ್ನು ಬದಲಾಯಿಸಿ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

Read More

ಮಡಿಕೇರಿ NEWS DESK ಮೇ 15 : ನೀಟ್ ಪರೀಕ್ಷೆ ರದ್ದತಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದ ಜೊತೆಗಿನ ಚೆಲ್ಲಾಟವಾಗಿದ್ದು, ಈ ಕ್ರಮ ಖಂಡನೀಯವೆಂದು ಎನ್‌ಎಸ್‌ಯುಐ ಕೊಡಗು ಜಿಲ್ಲಾಧ್ಯಕ್ಷ ಅಬ್ದುಲ್ ರಾಶೀದ್ ಪಿ.ಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಶ್ನೆ ಪತ್ರಿಕೆ ಸೋರಿಕೆಯ ಕಾರಣದಿಂದ ನೀಟ್ ಪರೀಕ್ಷೆ ರದ್ದಾಗಿರುವುದು ಇಡೀ ಶಿಕ್ಷಣ ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಹಗಲಿರುಳು ಕಷ್ಟಪಟ್ಟು ಓದಿದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಈ ಘಟನೆ ದೊಡ್ಡ ಪೆಟ್ಟು ನೀಡಿದೆ. ‘ಕೋಚಿಂಗ್ ಮಾಫಿಯಾ’, ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ರಾಜಕೀಯ ವ್ಯಕ್ತಿಗಳ ನಡುವಿನ ಭ್ರಷ್ಟ ಸಂಬಂಧದಿಂದಾಗಿ ವಿದ್ಯಾರ್ಥಿಗಳು ಇಂದು ಬಲಿಪಶುಗಳಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅತಿಯಾದ ಕೇಂದ್ರೀಕರಣವು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ರಾಜ್ಯಗಳ ಅಧಿಕಾರವನ್ನು ಕಿತ್ತುಕೊಂಡು, ಇಡೀ ವೈದ್ಯಕೀಯ ಶಿಕ್ಷಣದ ಪ್ರವೇಶ ಪ್ರಕ್ರಿಯೆಯನ್ನು ಎನ್‌ಟಿಎ ಅಡಿಯಲ್ಲಿ ತಂದಿರುವುದರಿಂದ ಈ ವ್ಯವಸ್ಥೆ ಹದಗೆಟ್ಟಿದೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಇರುವುದರಿಂದ, ಯಾವುದಾದರು ಒಂದು ಕಡೆ ಅಕ್ರಮ ನಡೆದರೂ ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು…

Read More

ಮಡಿಕೇರಿ NEWS DESK ಮೇ 15 : ಶಾಸಕರಾಗಿ ಅಧಿಕಾರ ವಹಿಸಿಕೊಂಡು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಮುಖರು ಹಾಗೂ ಹಲವು ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಜನಪರ ಕಾರ್ಯಗಳನ್ನು ಶ್ಲಾಘಿಸಲಾಯಿತು. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಮತ್ತಷ್ಟು ವೇಗವಾಗಿ ಸಾಗಲಿ ಎಂದು ಆಶಿಸಲಾಯಿತು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಂಸ ಹೆಚ್.ಎ, ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷೆ ಶಾಂತೆಯಂಡ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಹರಿಪ್ರಸಾದ್ ಕೋಚನ ಪ್ರಮುಖರಾದ ಮೂವ್ವನ ಕೀರ್ತನ್, ರೂಪ ಸುಬ್ಬಯ್ಯ, ಲತೀಫ್ ಸುಂಟಿಕೊಪ್ಪ, ಉಳುವಾರನ ಪವಿತ್ರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್,…

Read More

ವಿರಾಜಪೇಟೆ ಮೇ 14 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೊಡಗಿನಲ್ಲಿ ಸುಸ್ಥಿರ ಉದ್ಯಮಶೀಲತೆಗಾಗಿ ಕಂಜಿತಂಡ ಮಿಸಸ್ ರಾಣಿ ಅಯ್ಯಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕೊಡಗಿನಲ್ಲಿ ನವೀನ ಉದ್ಯಮಶೀಲತಾ ಉದ್ಯಮಗಳ ಮೂಲಕ ಸುಸ್ಥಿರತೆಯನ್ನು ಹೆಚ್ಚಿಸಲು ಬದ್ಧರಾಗಿರುವ ವ್ಯಕ್ತಿಗಳನ್ನು ಗುರುತಿಸಿ ನೀಡುವ ಈ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಸುನೀಲ್ ಮುದ್ದಯ್ಯ ಅವರು, ಸುಸ್ಥಿರ ಉದ್ಯಮಶೀಲತೆಗಾಗಿ ರಾಣಿ ಅಯ್ಯಪ್ಪ ಪ್ರಶಸ್ತಿಯು ಒಂದು ವಿಶಿಷ್ಟ ಗೌರವವಾಗಿದ್ದು, ಅದರ ಹೆಸರಿನ ಮೌಲ್ಯಗಳು ಮತ್ತು ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಟ್ರಸ್ಟ್ ಮುಖಾಂತರ ಕುಟುಂಬದವರಿಂದ ರಾಣಿ ಅಯ್ಯಪ್ಪ ಅವರ ಹೆಸರಿನಲ್ಲಿ ಸ್ಥಾಪಿಸಿದ ಪ್ರಶಸ್ತಿ ಮತ್ತು ಅವರ ಸ್ಮರಣೆಯನ್ನು ಕಾಪಾಡುವುದು ಮತ್ತು ಕೊಡಗಿಗೆ ಅವರ ಕೊಡುಗೆಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ. ಅಲ್ಲದೆ ಆಹಾರ ಭದ್ರತೆ ಮತ್ತು ಗ್ರಾಮೀಣ ಜೀವನೋಪಾಯಕ್ಕೆ ಸುಸ್ಥಿರತೆಯ ನುಡಿಗಟ್ಟುಗಳೊಂದಿಗೆ ಜಗತ್ತು ಇಂದು ಹೋರಾಡುತ್ತಿದೆ. ಸುಸ್ಥಿರ ಕೃಷಿಯು ಮುಂದಕ್ಕೆ ಒಂದು ಪ್ರಮುಖ…

Read More

ನಾಪೋಕ್ಲು  ಮೇ 14 NEWS DESK : ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ ಉತ್ಸವಕ್ಕೆ ವಿಶೇಷ ಪ್ರಾರ್ಥನೆಯೊಂದಿಗೆ ಚಾಲನೆ ನೀಡಲಾಯಿತು. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 18ರ ವರೆಗೆ ಜರುಗಲಿರುವ ಅಷ್ಟಬಂಧ ಬ್ರಹ್ಮಕಲಶ ಉತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಸಂಜೆ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ತಕ್ಕ ಮುಖ್ಯಸ್ಥರು ಹಾಗೂ ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ ಅವರು ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಧಾರ್ಮಿಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಧಾರ್ಮಿಕ ಕಾರ್ಯಕ್ರಮಗಳಾದ ಅಂಕುರಾರ್ಪಣೆ, ಪ್ರಾಸಾದ ಸುದ್ದಿ, ವಾಸ್ತು, ರಾಕ್ಷೋಗ್ನ ಹೋಮ, ವಾಸ್ತು ಬಲಿ ನಡೆಯಿತು. ಇದಕ್ಕೂ ಮೊದಲು ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ಅವರನ್ನು ಚಂಡೆ ಮೇಳಗಳೊಂದಿಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ ಹಾಗೂ ಸುಮನ್ ಸುಬ್ರಮಣಿ ಅವರು ಮಾತನಾಡಿ, ಪೂಜಾ…

Read More

ಮಡಿಕೇರಿ ಮೇ 14 NEWS DESK : ಕೇಂದ್ರ ಸರ್ಕಾರವು ದೇಶದಲ್ಲಿ ಮುಂಬರುವ ಖರೀದಿ ಋತುವಿನ ಹಿನ್ನಲೆಯಲ್ಲಿ ಮತ್ತು ಪರಿಣಾಮಕಾರಿ ಲಾಜಿಸ್ಟಿಕ್ಸ್ ಮತ್ತು ಸಂಗ್ರಹಣೆಗಾಗಿ ರಾಜ್ಯಗಳು ಎದುರಿಸುತ್ತಿರುವ ಅಡಚಣೆಗಳಿಂದಾಗಿ ಎನ್‍ಎಫ್‍ಎಸ್‍ಎ ಅಡಿಯಲ್ಲಿ ಮೇ ಮತ್ತು ಜೂನ್-2026 ರ ಎರಡು ಮಾಹೆಗಳ ಅಹಾರಧಾನ್ಯ ಹಂಚಿಕೆಯನ್ನು ಮುಂಗಡವಾಗಿ ಎತ್ತುವಳಿ ಮಾಡಿ ಕೂಡಲೇ ವಿತರಣೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ. ಪ್ರಯುಕ್ತ ಮೇ-2026 ಮತ್ತು ಜೂನ್-2026 ರ ಎರಡು ಮಾಹೆಗಳ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‍ಎಫ್‍ಎಸ್) ಹಂಚಿಕೆಯನ್ನು ಮೇ-2026 ರ ಮಾಹೆಯಲ್ಲಿ ವಿತರಿಸಲು ಸರ್ಕಾರವು ನಿರ್ದೇಶನ ನೀಡಿರುತ್ತದೆ. ಪ್ರಯುಕ್ತ ಕೊಡಗು ಜಿಲ್ಲೆಯ ಪ್ರತಿ ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ 70 ಕೆ.ಜಿ (ಮೇ-35 + ಜೂನ್-35) ಅಕ್ಕಿ ಮತ್ತು ಪಿ.ಹೆಚ್.ಹೆಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 10 ಕೆ.ಜಿ (ಮೇ-5 + ಜೂನ್-5) ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಮೇ ಮತ್ತು ಜೂನ್ 2026 ರ ಎರಡು ಮಾಹೆಗಳ ಆಹಾರಧಾನ್ಯವನ್ನು ಮೇ-2026ರ ಮಾಹೆಯಲ್ಲಿಯೇ ಒಟ್ಟಿಗೆ ವಿತರಣೆ…

Read More

ಮಡಿಕೇರಿ ಮೇ 14 NEWS DESK : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2026-27ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ತರಬೇತಿ ಪಡೆಯಲು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು, ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು.…

Read More

ನಾಪೋಕ್ಲು ಮೇ 14 NEWS DESK : ಮಡಿಕೇರಿ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರನ್ನು ಗೌರವ ಪೂರ್ವಾಕವಾಗಿ ಆಹ್ವಾನಿಸಲಾಯಿತು. ಮಡಿಕೇರಿ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ನಾಪೋಕ್ಲು  ಹೋಬಳಿಯ ಕಡಂಗ ಅರಪಟ್ಟು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 20 ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಆಯ್ಕೆಯಾಗಿದ್ದು ಅವರನ್ನು ಗುರುವಾರ ಮೈಸೂರಿನ ಅವರ ನಿವಾಸದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂಪಿ ಕೇಶವ ಕಾಮತ್ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಹಾಗೂ ಸಮ್ಮೇಳನದ ಉಪ ಸಮಿತಿಯ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಭೇಟಿಯಾಗಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲು ಮನವಿ ಮಾಡಿ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಿದರು. ಮನವಿಯನ್ನು ಮಾನ್ಯ ಮಾಡಿ ಗೌರವ ಸ್ವೀಕರಿಸಿದ…

Read More