ಲೇಖಕ: admin

ಮಡಿಕೇರಿ ಏ.12 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ಮತದಾನದ ಪ್ರಮಾಣ ಅಧಿಕಗೊಳಿಸಲು ಈಗಾಗಲೇ ನಾನಾ ರೀತಿಯ ಚಟುವಟಿಕೆಗಳ ಮೂಲಕ ಕ್ರೀಯಾಶೀಲವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೆಲ್ಲದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ಗ್ರಾಮದ ಕಶೆಗೋಡಿ ಭಾಗದ ಮಾಣಿ ಪರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿಗಳಾದ ಸನ್ನಿಧಿ ಕಶೆಕೋಡಿ, ಸಾರ್ವಿ ಸ್ಕಂದ, ಸ್ತುತಿ, ಆದ್ಯ, ಹಾಗೂ ಸಮೃದ್ಧಿ ಇವರುಗಳು ಮಡಿಕೇರಿಯ ವಿವಿಧ ಪ್ರದೇಶಗಳಲ್ಲಿ ತಮ್ಮದೇ ಹಾಡಿನ ಶೈಲಿ ಮೂಲಕ ಮತದಾನ ಜಾಗೃತಿ ಮೂಡಿಸಿದರು. ಉಪವಿಭಾಗಾಧಿಕಾರಿ ವಿನಾಯಕ್ ನಾರ್ವಡೆ ಅವರು ಈ ಮಕ್ಕಳ ಮತದಾನದ ಜಾಗೃತಿ ಕಾರ್ಯಕ್ಕೆಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಕಚೇರಿಯಲ್ಲಿ ಮಕ್ಕಳನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಪುಟ್ಟ ಮಕ್ಕಳ ಚುನಾವಣಾ ಮತದಾನದ ಜಾಗೃತಿ ಕಾರ್ಯವನ್ನು ನಿರಂತರವಾಗಿ ನಡೆಸುವ ಮೂಲಕ ಮತದಾನದ ಪ್ರಮಾಣ ಅಧಿಕಗೊಳಿಸಲು ಮಕ್ಕಳು ತಮ್ಮದೇ ಆದ ಭಾಷೆ ಹಾಗೂ…

Read More

ಮಡಿಕೇರಿ ಏ.12 NEWS DESK : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 134ನೇ ವಾರ್ಷಿಕೋತ್ಸವವು ಏ.15 ರಿಂದ 17ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಏ.15 ರಂದು ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಲಿದೆ. ಏ.16 ರಂದು ಮಧ್ಯಾಹ್ನ 3 ಗಂಟೆಗೆ ಮನೆ ಮನೆಯಿಂದ ಪೂಜೆಯನ್ನು ದೇವಾಲಯಕ್ಕೆ ತಂದೊಪ್ಪಿಸುವುದು, ರಾತ್ರಿ 8 ಗಂಟೆಗೆ ಹೂವಿನ ವರ ಬೇಡುವುದು, ಮನೆ, ಮನೆಯಿಂದ ಆರತಿಯನ್ನು ದೇವಾಲಯಕ್ಕೆ ತರುವುದು, ರಾತ್ರಿ 9 ಗಂಟೆಗೆ ದೇವಿಗೆ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಲಿದೆ. ಏ.17 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಶ್ರೀ ದೇವಿಗೆ ಹರಕೆ ಮತ್ತು ಕಾಣಿಕೆ ಒಪ್ಪಿಸುವುದು, ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಏ.21 ರಂದು ಅಪರಾಹ್ನ 3 ಗಂಟೆಗೆ ಗುಳಿಗನ ಪೂಜೆ ನಡೆಯಲಿದೆ.…

Read More

ಕುಶಾಲನಗರ, ಏ.12 NEWS DESK :  ಉತ್ತರ ಕೊಡಗಿನ ಹಾರಂಗಿ ನೀರಾವರಿ ಬಯಲು ಪ್ರದೇಶದಲ್ಲಿರುವ ಜಿಲ್ಲೆಯ ದೊಡ್ಡ ಗ್ರಾಮವೆನಿಸಿದ ಹೆಬ್ಬಾಲೆ ಗ್ರಾಮದಲ್ಲಿ ರೈತರು ಸಂಭ್ರಮ, ಸಾಗರದಿಂದ ಹೊನ್ನಾರು ಉತ್ಸವವನ್ನು ಆಚರಿಸಿದರು. ಗ್ರಾಮದ‌ ಬಸವೇಶ್ವರ ದೇವಸ್ಥಾನಕ್ಕೆ 50 ಕ್ಕೂ ಹೆಚ್ಚು ಜೋಡಿ ಜಾನುವಾರುಗಳೊಂದಿಗೆ ಕೃಷಿ ಉಪಕರಣಗಳೊಂದಿಗೆ ಆಗಮಿಸಿದ ರೈತರು ಜಾನುವಾರುಗಳಿಗೆ ಪೂಜೆ ಸಲ್ಲಿಸಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥಿಸಿದರು. ಬಸವೇಶ್ವರ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ತೆರಳಿದ ಹೊನ್ನಾರು ಉತ್ಸವವು ಗ್ರಾಮದ ಬನಶಂಕರಿ ದೇವಸ್ಥಾನದ ಬಳಿ ಸಮಾಪನಗೊಂಡಿತು. ನಂತರ ಅಲ್ಲಿಂದ ಶ್ರೀ ಕಾಳಿಕಾಂಭ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಿದ ನಂತರ ಹೊನ್ನಾರು ಹೊಂದಿದ್ದ ಎಲ್ಲಾ ರೈತರು ತಮ್ಮ ತಮ್ಮ ಜನೀನುಗಳಿಗೆ ತೆರಳಿ ನೇಗಿಲನ್ನು ಹೂಡಿ ಹೊನ್ನಾರು ಉಳುಮೆಗೆ ಚಾಲನೆ ನೀಡಿದರು. ಗ್ರಾಮ ದೇವಾಲಯ ಸಮಿತಿ ಅಧ್ಯಕ್ಷ ಯಜಮಾನ್ ಬಸವರಾಜು ಮಾತನಾಡಿ, “ಹೊನ್ನಾರು” ಉಳುಮೆ ಕಾರ್ಯವು ಬರಗಾಲವನ್ನು ತೊಲಗಿಸಿ ರೈತರಲ್ಲಿ ಹೊಸ ಉತ್ಸಾಹ ತರಲಿ ಎಂದು ಆಶಯ ವ್ಯಕ್ತಪಡಿಸಿದರು. ದೇವಾಲಯ ಸಮಿತಿಯ…

Read More

ಕುಶಾಲನಗರ, ಏ.12 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಗ್ರಾಮದ ದೇವಾಲಯ ಸಮಿತಿ ವತಿಯಿಂದ ಹೊಸ ವರ್ಷ ಯುಗಾದಿ ಹಬ್ಬದ ಅಂಗವಾಗಿ ಗ್ರಾಮೀಣ ಜನಪದ ಸಂಸ್ಕೃತಿಯ ‘ಹೊನ್ನಾರು’ ಉತ್ಸವ( ಚಿನ್ನದ ಉಳುಮೆ)ಕ್ಕೆ ರೈತರು ಸಂಭ್ರಮ, ಸಡಗರದಿಂದ ಆಚರಿಸಿದರು. ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಅಲಂಕೃತ ಜಾನುವಾರುಗಳಿಗೆ ಸಾಮೂಹಿಕ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು. ಹೊನ್ನಾರು ಉತ್ಸವಕ್ಕೆ ಚಾಲನೆ ನೀಡಿದ ಮಾತನಾಡಿದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಯುಗಾದಿ ಹಬ್ಬವು ರೈತರ ಪಾಲಿಗೆ ಹೊಸ ವರ್ಷವಾಗಿದ್ದು, “ಹೊನ್ನಾರು” ಉಳುಮೆ ಕಾರ್ಯವು ರೈತರಲ್ಲಿ ಹೊಸ ಉತ್ಸಾಹ ತರಲಿದೆ. ಹೊನ್ನಾರು ಉತ್ಸವದ ಮೂಲಕ ರೈತರ ಕೃಷಿ ಫಸಲಿಗೆ ಉತ್ತಮ ಮಳೆ ಬೆಳೆ ಬಂದು ಕೃಷಿ ಕಾರ್ಯ ದೇಶ ಸಂವೃದ್ದಿಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಿದರು. ನಂತರ ರೈತರು ಗ್ರಾಮದ ದೇವಾಲಯಕ್ಕೆ ಸೇರಿದ ಜಮೀನಿನಲ್ಲಿ ಗ್ರಾಮದಲ್ಲಿ ಗ್ರಾಮ ದೇವಾಲಯ ಸಮಿತಿ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ದೇವಸ್ಥಾನಕ್ಕೆ ಸೇರಿದ ಜಮೀನಿನಲ್ಲಿ ಮೊದಲಿಗೆ ರೈತ ಗಂಗಾರಾಜು…

Read More

ಮಡಿಕೇರಿ ಏ.12 NEWS DESK : ಮೂಡಿಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು ಘೋಷಿಸಿದೆ ಎಂದು ಕಾಲೇಜಿನ ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಸಿಬಿಎಸ್‍ಸಿ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್‍ಇ(ಭಾರತೀಯ ಪ್ರೌಢ ಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ(ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗುತ್ತಾರೆ ಎಂದು ಮಾಹಿತಿ ನೀಡಿದರು. ಗಣಿತ, ವಿಜ್ಞಾನ ಹಾಗೂ…

Read More

ಮಡಿಕೇರಿ ಏ.12 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರ ಪರ ಮತಯಾಚಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾನುವಾರ ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಭೋಸರಾಜು, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೊಡಗು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಸೇರಿದಂತೆ ಹಿರಿಯ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಈಗಾಗಲೇ ಕೊಡಗು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ಕಾರ್ಯ ನಡೆದಿದೆ. ಜನರಿಂದ ಎಂ.ಲಕ್ಷ್ಮಣ ಗೌಡ ಅವರ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದು,…

Read More

ಮಡಿಕೇರಿ ಏ.12 NEWS DESK :  ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಹಾಗೂ ತಮ್ಮವರನ್ನು ಕೂಡ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಾರ್ವಜನಿಕರಿಗೆ ಕರೆ ನೀಡಿದರು. ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ  ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು. ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯು ವಿವೇಚನೆಯಿಂದ ಅರ್ಹ ವ್ಯಕ್ತಿಗೆ ನೀಡುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮುಂದಾಗಬೇಕು. ಈ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರವುಳಿಯದೆ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಏ.26 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ.…

Read More

ಮಡಿಕೇರಿ ಏ.12 NEWS DESK :  ವಿರಾಜಪೇಟೆ ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆನಂದ ಡೊಳ್ಳಿನ್ ಅವರು ಇಂದು ವಿರಾಜಪೇಟೆಯಲ್ಲಿರುವ ವಸತಿ ಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

Read More

ನಾಪೋಕ್ಲು ಫೆ.12 NEWS DESK : ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ನಾಪಂಡ, ಚೇಂದಂಡ, ಚೆಟ್ಟೋಳಂಡ, ಸೋಮಯಂಡ, ಮಚ್ಚಾರಂಡ, ಕಂಗಂಡ, ಮಾತ್ರಂಡ ಸೇರಿದಂತೆ ವಿವಿಧ ತಂಡಗಳು ಮುನ್ನಡೆ ಸಾಧಿಸಿದವು. ದಿನದ ಪಂದ್ಯದಲ್ಲಿ ಕಂಗಂಡ ಮತ್ತು ಮಾಚಮಾಡ ತಂಡಗಳು ಸಮಬಲ ಸಾಧಿಸಿದವು. ಬಳಿಕ ಟೈಬ್ರೇಕರ್ ನಲ್ಲಿ ಕಂಗಡ ತಂಡವು ನಾಲ್ಕು ಗೋಲು ಗಳಿಸಿದರೆ ಮಾಚಮಾಡು ತಂಡ ಎರಡು ಗೋಲು ಗಳಿಸಿತು. ಕಂಗಂಡ ಮಾಚಮಾಡ ವಿರುದ್ಧ ಗೆಲುವು ಸಾಧಿಸಿತು. ಮತ್ತೊಂದು ಟೈ ಬ್ರೇಕರ್ ಪಂದ್ಯದಲ್ಲಿ ಪೊಂಜಂಡ ತಂಡವು ಕಾಲಚಂಡ ವಿರುದ್ಧ 4-3 ಅಂತರದ ಗೆಲುವು ಸಾಧಿಸಿತು. ಕೊಟ್ಟಂಗಡ ಮತ್ತು ಅಚ್ಚಪಂಡ ತಂಡಗಳ ನಡುವೆಯೂ ಸಮಬಲದ ಸೆಣೆಸಾಟ ನಡೆಯಿತು. ಬಳಿಕ ನಡೆದ ಟೈ ಬ್ರೇಕರ್ ನಲ್ಲಿ ಕೊಟ್ಟಂಗಡ ತಂಡದ ಆಟಗಾರರು ಐದುಗೋಲು ಗಳಿಸಿದರು. ಅಚ್ಚ ಪಂಡ ತಂಡದ ಆಟಗಾರರು 3 ಗೋಲು ಗಳಿಸಿದರು ಈ ಪಂದ್ಯದಲ್ಲಿ ಕೊಟ್ಟಂಗಡ ತಂಡ ಗೆಲುವು ಸಾಧಿಸಿ ಮುಂದಿನ ಸುತ್ತು ಪ್ರವೇಶಿಸಿತು.…

Read More

ಸುಂಟಿಕೊಪ್ಪ,ಏ.12 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಸುಂಟಿಕೊಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ರಾಜ್ಯದಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಚುನಾವಣೆಗೆ ಮುನ್ನಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಅದೇ ರೀತಿ ಕೇಂದ್ರದ ನಾಯಕರಾದ ಮಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಘೋಷಿಸಿದ ಗ್ಯಾರಂಟಿಯನ್ನು ಈಡೇರಿಸುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು. ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಕಛೇರಿಯನ್ನು ತೆರದಿರಲಿಲ್ಲ ಇಲ್ಲಿ ಉಳಿಯುತ್ತಲೂ ಇರಲಿಲ್ಲ ಎಂದು ಹೇಳಿದ ಅವರು ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಮತದಾರರಿಗೆ ಭರವಸೆ ನೀಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ ಮಾತನಾಡಿ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ತೋರಿದ ಪ್ರೀತಿಯನ್ನೆ ನಮ್ಮ…

Read More