ಲೇಖಕ: admin

ಮಡಿಕೇರಿ ಏ.11 NEWS DESK : ಶ್ರೇಷ್ಠ ಭಾರತಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಬೆಂಬಲಿಸುವಂತೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಮನವಿ ಮಾಡಿದ್ದಾರೆ. ಹುಣುಸೂರು ತಾಲ್ಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಬಿಜೆಪಿಗೆ ಮತ ನೀಡುವಂತೆ ಕೋರಿದರು. ನಗರದ ದೇವರಾಜ ಅರಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಯದುವೀರ್ ಅವರು, ಕಲ್ಲಹಳ್ಳಿಯ ದೇವರಾಜ ಅರಸರ ಸಮಾಧಿಗೆ ಗೌರವ ಸಮರ್ಪಿಸಿದರು. ನಂತರ ಹನಗೋಡು ಬಳಿಯ ದೊಡ್ಡಹೆಜ್ಜೂರಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸಿದರು. ಪ್ರಚಾರ ಸಭೆಯಲ್ಲಿ ಮಾತನಾಡಿದ ಯದುವೀರ್ ನಮ್ಮ ಪೂರ್ವಜರು ಈ ನಾಡಿನ ಜನರ ಶ್ರೇಯೋಭಿವೃದ್ಧಿಗಾಗಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಈ ಬಗ್ಗೆ ಜನರಲ್ಲಿ ಕೃತಜ್ಞತಾ ಭಾವವಿದೆ. ನಾನು ಕೂಡ ಜನಸೇವೆ ಮಾಡಲು ಉತ್ಸುಕನಾಗಿದ್ದೇನೆ ಎಂದರು. ದೇಶದ ಅಭಿವೃದ್ಧಿ ಮತ್ತು ಜನರ ರಕ್ಷಣೆಗೆ ಸದಾ ಮಿಡಿಯುವ ಪ್ರಧಾನಿ ಮೋದಿಯವರ ಪ್ರಭಾವದಿಂದ ನಾನು ಸ್ಪರ್ಧಿಸಿದ್ದೇನೆ.…

Read More

ಮಡಿಕೇರಿ ಏ.11 NEWS DESK : ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಅವರು ಸುಮಾರು ಎರಡೂವರೆ ಮೂರು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಯದುವೀರ್ ಅವರಿಗೆ ಶುಭಕೋರಿರುವ ಅವರು ಅತ್ಯಧಿಕ ಮತಗಳ ಅಂತರದಿಂದ ಯದುವೀರ್ ಅವರು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಮೈಸೂರು ಮಾತ್ರವಲ್ಲ ಇಡೀ ರಾಜ್ಯ ಮತ್ತು ದೇಶದಲ್ಲಿ ರಾಜವಂಶಸ್ಥ ಯದುವೀರ್ ಅವರ ಬಗ್ಗೆ ಜನರಿಗೆ ಅಪಾರ ಅಭಿಮಾನವಿದೆ, ಅವರ ಗೆಲುವು ನಿಶ್ಚಿತವಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಏ.11 NEWS DESK : ಮಡಿಕೇರಿ ನಗರದ ವಿವಿಧೆಡೆ ಮುಸ್ಲಿಂ ಬಾಂಧವರ ಸಂಭ್ರಮದ ಹಬ್ಬ ಈದುಲ್ ಫಿತ್ರ್ ರಂಜಾ಼ನ್ ನನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮಗುರುಗಳು ಧರ್ಮಸಂದೇಶ ನೀಡಿ ಹಬ್ಬಗಳ ಆಚರಣೆಯ ಕುರಿತು ವಿವರಿಸಿದರು. ಲೋಕಕಲ್ಯಾಣಕ್ಕಾಗಿ ಎಲ್ಲರೂ ಪ್ರಾರ್ಥಿಸುವಂತೆ ಕರೆ ನೀಡಿದರು. ಪರಸ್ಪರ ಆಲಿಂಗನದ ಮೂಲಕ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡ ಮುಸ್ಲಿಂ ಬಾಂಧವರು, ಕುಟುಂಬ ವರ್ಗ ಹಾಗೂ ಸ್ನೇಹಿತರೊಂದಿಗೆ ವಿಶೇಷ ಖಾದ್ಯಗಳನ್ನು ಸವಿದರು. ಕಳೆದ ಒಂದು ತಿಂಗಳ ರಂಜಾ಼ನ್ ಉಪವಾಸಕ್ಕೆ ತೆರೆ ಎಳೆದರು.

Read More

ಮಡಿಕೇರಿ ಏ.11 NEWS DESK : ಸ್ನಾನಕ್ಕೆಂದು ತೆರಳಿದ ವ್ಯಕ್ತಿ ಹೊಳೆಯಲ್ಲಿ ಮುಳುಗಿ ಸಾವನ್ನಪಿದ ಘಟನೆ ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಕೊಳಕೇರಿ ಗ್ರಾಮದಲ್ಲಿ ನಡೆದಿದೆ. ಕಕ್ಕಬ್ಬೆ ಕುಂಜಿಲ ಗ್ರಾಮದ ವಾಟೆಕಾಡು ನಿವಾಸಿ ದೇವಯ್ಯ(38) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ದೇವಯ್ಯ ಅವರು ತನ್ನ ಸಹೋದರನ ಜೊತೆ ತೋಟದ ಕೆಲಸಕ್ಕೆ ತೆರಳಿದ್ದು, ಬಿಸಿಲಿನ ತಾಪದಿಂದ ಸ್ನಾನ ಮಾಡಲು ಕುವಲೆಕಾಡು ಗ್ರಾಮದ ಕುಪ್ಪೋಟು ಹೊಳೆಗೆ ಇಳಿದಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಈಜುಗಾರರ ಸಹಾಯದಿಂದ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಂಟಿಕೊಪ್ಪ ಏ.11 NEWS DESK : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿನ ಸರಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳು ಉತ್ತಮ ಸಾಧನೆ ಮಾಡಿರುವುದು ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕರಲ್ಲಿ ಹರ್ಷ ಉಂಟು ಮಾಡಿದೆ. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ 51 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು, ಶೇ.97 ರಷ್ಟು ಫಲಿತಾಂಶ ಪಡೆದಿದ್ದಾರೆ. ವಿಜ್ಞಾನ ವಿಷಯದಲ್ಲಿ ಶೇ.100, ವಾಣಿಜ್ಯ ವಿಷಯದಲ್ಲಿ ಶೇ.96, ಹಾಗೂ ಕಲಾ ವಿಷಯದಲ್ಲಿ ಶೇ.94 ಫಲಿತಾಂಶವನ್ನು ಪಡೆದಿದೆ. ಮೂವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಎಂ.ಪಿ.ಶ್ವೇತಾ ಕಲಾವಿಭಾಗದಲ್ಲಿ, ವಾಣಿಜ್ಯ ವಿಭಾಗದಲ್ಲಿ ಕವಿತ ಮತ್ತು ವಿಜ್ಞಾನ ಕೆ.ಎಂ.ಶಫ್‍ರೀನಾ ಮೊದಲಿಗರಾಗಿದ್ದಾರೆ. ಕಾಲೇಜಿನ ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದವು ಮಕ್ಕಳ ಸಾಧನೆಯನ್ನು ಶ್ಲಾಘಿಸಿದರು. ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವಕಾಲೇಜು 96.66 ಫಲಿತಾಂಶ ಪಡೆದಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 17 ಮಂದಿ, ಪ್ರಥಮ ದರ್ಜೆ 45 ಮಂದಿ, ದ್ವಿತೀಯ ದರ್ಜೆಯಲ್ಲಿ 26 ಮಂದಿ ಮತ್ತು ಸಾಮಾನ್ಯ ದರ್ಜೆಯಲ್ಲಿ 7 ಮಂದಿ ಉತ್ತೀರ್ಣರಾಗಿದ್ದಾರೆ. ಕಾಲೇಜಿ…

Read More

ಸುಂಟಿಕೊಪ್ಪ,ಏ.11 NEWS DESK : ಸುಂಟಿಕೊಪ್ಪದಲ್ಲಿ ಮುಸ್ಲಿಂ ಬಾಂಧವರು ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ರಂಜಾನ್ ಈದ್‍ಉಲ್ ಪಿತ್ತರ್ ಅಂಗವಾಗಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಹೊಸ ಉಡುಪುಗಳನ್ನು ತೊಟ್ಟು ಪರಸ್ಪರ ಅಲಂಗಿಸಿಕೊಂಡು ಈದ್‍ಉಲ್ ಪಿತರ್ ಶುಭಾಶಯ ವಿನಿಮಯ ಮಾಡಿಕೊಂಡರು. ಸುಂಟಿಕೊಪ್ಪ ಪಟ್ಟಣದ ಸುನ್ನಿ ಶಾಫಿ ಜುಮ್ಮ ಮಸ್ಜಿದ್‍ನಲ್ಲಿ ಮುಸ್ಲಿಯರ್ ರೌಫ್ ಸಖಾಫಿ, ಸುನ್ನಿ ಹನಫಿ ಮುಸ್ಲಿಂ ಜಮಾಅತ್ ಮೌಲನಾ ಜುಬೇರ್‍ಆಹ್ಮದ್, ಸುನ್ನಿ ಶಾಫಿ ಜುಮಾಮಸ್ಜಿದ್ ಧಾರ್ಮಿಕ ಮೌಲವಿ ಹಮೀದ್ ದಾರ್ಮಿ,  ಮಸ್ಜಿದ್ ಮೌಲನಾ ಇನಾಂ, ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್ ಮುಸ್ಲಿಯರ್ ಒಸಾಮ ಸಖಾಫಿ, ಅವರುಗಳು ಧಾರ್ಮಿಕ ಪ್ರವಚ ಪ್ರಾರ್ಥನೆಯನ್ನು ಸಲ್ಲಿಸಿದರು. ಕಳೆದ 30 ದಿನಗಳ ಉಪವಾಸದ ಅಂಗವಾಗಿ ಪ್ರತಿದಿನ ರಾತ್ರಿ ಮಸೀದಿಗಳಲ್ಲಿ ಮೌಲವಿಗಳಿಂದ ಧಾರ್ಮಿಕ ಪ್ರವಚನ ಹಾಗೂ ವಿಶೇಷ ಪ್ರಾರ್ಥನೆಯನ್ನು ನೆರವೇರಿತು. ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ಜುಮ್ಮ ಮಸೀದಿಗಳಲ್ಲಿ ಪ್ರಾರ್ಥನೆ ಧಾರ್ಮಿಕ ಪ್ರವಚನ ನೆರವೇರಿತು. ನಂತರ ಗದ್ದೆಹಳ್ಳದ ಈದ್ಗಾದಲ್ಲಿ…

Read More

ಮಡಿಕೇರಿ ಏ.11 NEWS DESK : ಚುನಾವಣಾ ಬಾಂಡ್ ಹಗರಣದ ಆರೋಪ ಎದುರಿಸುತ್ತಿರುವ ಪ್ರಧಾನಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ಮಡಿಕೇರಿ ನಗರದ ಗಾಂಧಿ ಮಂಟಪದ ಬಳಿ ಪ್ರತಿಭಟನೆ ನಡೆಸಿತು. ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಸರಕಾರದ ಸರ್ವಾಧಿಕಾರಿ ಧೋರಣೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಜನಪ್ರಿಯ ನಾಯಕರಾಗಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ತಪ್ಪು ಮಾಡದಿದ್ದರೂ ನೇರವಾಗಿ ಎದುರಿಸಲಾಗದೆ ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಲಾಗಿದೆ. ಆದರೆ ಸ್ವತ: ಪ್ರಧಾನಮಂತ್ರಿಗಳೇ ಚುನಾವಣಾ ಬಾಂಡ್ ಹಗರಣದ ಆರೋಪ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅವ್ಯವಹಾರದಲ್ಲಿ ನೇರವಾಗಿ ಭಾಗಿಯಾಗಿರುವ ಬಿಜೆಪಿ ನಾಯಕರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮತದಾರರು ತಮ್ಮನ್ನು ಅಧಿಕಾರದಿಂದ ಕಿತ್ತೆಸೆಯುತ್ತಾರೆ ಎಂಬುವುದನ್ನು ಅರಿತಿರುವ ಕೇಂದ್ರ ಸರಕಾರ ಹೇಗಾದರೂ ಮಾಡಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ವಾಮ…

Read More

ವಿರಾಜಪೇಟೆ ಏ.11 NEWS DESK : ವಿರಾಜಪೇಟೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಜ್ಞಾನಗಂಗಾ ಭವನ’ದಲ್ಲಿ ಏ.12ರಿಂದ 14ರವರೆಗೆ ಚಿಣ್ಣರ ಬೇಸಿಗೆ ‘ಸಂಭ್ರಮ’ ಶಿಬಿರ ನಡೆಯಲಿದೆ ಎಂದು ಕೇಂದ್ರದ ಮುಖ್ಯ ಸಂಚಾಲಕಿ ಬಿ.ಕೆ.ಕೋಮಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂರು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ 8 ರಿಂದ 15 ವರ್ಷದೊಳಗಿನ ಮಕ್ಕಳು ಭಾಗವಹಿಸಬುದಾಗಿದೆ. ಶಿಬಿರವು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಏರೀಬಿಕ್ ವ್ಯಾಯಾಮ, ದ್ಯಾನ, ಸ್ವಚ್ಚ ಮನಸ್ಸು, ಸ್ವಚ್ಛ ಜೀವನದಿಂದ ಸ್ವಚ್ಚ ಭಾರತ, ಗೇಮ್ಸ್, ವ್ಯಕ್ತಿತ್ವ ವಿಕಸನ, ಆಲೋಚನೆಯ ನೆಲೆ, ಏಕಾಗ್ರತೆಯ ಕಲೆ, ಭಯದ ನಿವಾರಣೆ, ಧ್ಯಾನದ ಮಹತ್ವಿಕೆ, ಕ್ರಿಯೆಯಲ್ಲಿ ಆಲೋಚನೆಗಳು, ಮೌಲ್ಯಗಳು, ಗುಂಪು ಚಟುವಟಿಕೆಗಳು, ಒಳಾಂಗಣ, ಹೊರಾಂಗಣ ಆಟೋಟಗಳು ಸೇರಿದಂತೆ ಇತರ ಚಟುವಟಿಕೆಗಳು ನಡೆಯಲಿದೆ. ಆಸಕ್ತ ಮಕ್ಕಳು ನೊಂದಾವಣೆಗಾಗಿ 08274-256834, 8105419822 ಸಂಖ್ಯೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.

Read More

ಸೋಮವಾರಪೇಟೆ ಏ.11 NEWS DESK : ಕರ್ಕಳ್ಳಿ ಗ್ರಾಮದ ನಿವಾಸಿ, ಕಾಫಿ ಬೆಳೆಗಾರ ಬಿ.ಸಿ.ರವೀಂದ್ರ (71) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಏ.11 ರಂದು 12.30ರ ನಂತರ ಕರ್ಕಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಕಾಫಿ ಬೆಳೆಗಾರ ಬಿ.ಸಿ.ರವೀಂದ್ರ ಪಯೋನಿಯರ್ ಟೆನ್ನಿಸ್ ಕ್ಲಬ್ಬಿನ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಏ.11 NEWS DESK : ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ಸಡಗರ ಸಂಭ್ರಮದಿಂದ ಜರುಗಿತು. ಗಾಳಿಯಲ್ಲಿ ಬಲೂನ್ ಗಳ ಗುಚ್ಛವನ್ನು ಹಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳು ಹಾಗೂ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಪಾಲ್ಗೊಂಡು ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಕೊಡಗು ವಿದ್ಯಾಲಯದ ಕ್ರೀಡಾ ಅಧ್ಯಕ್ಷ ಕೋಡಿಮಣಿಯಂಡ ರಘು ಮಾದಪ್ಪ ಅವರನ್ನು ಶಾಲಾ ಮಕ್ಕಳ ಬ್ಯಾಂಡ್ ತಂಡದಿಂದ ಬರಮಾಡಿಕೊಳ್ಳಲಾಯಿತು. ನಂತರ ಮಾತನಾಡಿದ ಅವರು, ಕ್ರೀಡಾ ಸೌಲಭ್ಯದ ಬಗ್ಗೆ ವ್ಯಾಖ್ಯಾನ ನೀಡಿ ಅದರ ಕಲಿಕೆಯ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು. ಕ್ರೀಡೆಯಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದರ ಬಗ್ಗೆ ಕಿವಿ ಮಾತು ಹೇಳಿದರು. ಶಾಲೆಯ ಕ್ರೀಡಾ ಮೈದಾನದಲ್ಲಿ ಬೇಸಿಗೆ ಕ್ರೀಡಾ ಶಿಬಿರಕ್ಕೆ ಶಾಲಾ ಆಡಳಿತ ಮಂಡಳಿಯ ಸದಸ್ಯೆ ನಿಯತ ದೇವಯ್ಯ ಚಾಲನೆ ನೀಡಿದರು. ನುರಿತ ತರಬೇತುದಾರರಿಂದ ಕ್ಯಾಲಿಗ್ರಾಫಿ ಹಾಗೂ ಚಿತ್ರಕಲಾ ಪ್ರದರ್ಶನ ನಡೆಯಿತು. ಮೇ 1 ರವರೆಗೆ ನಡೆಯುವ…

Read More