ಸೋಮವಾರಪೇಟೆ ಏ.26 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಶಾಂತಿಯುತ ಮತದಾನ ನಡೆಯಿತು. ತಾಲ್ಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ಮಧ್ಯಾಹ್ನದ ತನಕ ಮತದಾನ ನಿಧಾನಗತಿಯಲ್ಲಿ ಸಾಗಿದರೂ ಮಧ್ಯಾಹ್ನ 3ಗಂಟೆಯ ನಂತರ ಕೂಲಿ ಕಾರ್ಮಿಕರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ಬಳಗುಂದ ಮತಗಟ್ಟೆಯಲ್ಲಿ ಶಾಸಕ ಡಾ.ಮಂತರ್ಗೌಡ ಮತ್ತು ಪತ್ನಿ ದಿವ್ಯ ರೊಂದಿಗೆ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಗೌರವಿಸಿ, ಮತದಾನ ಮಾಡಬೇಕು. ಮತದಾನ ಪವಿತ್ರವಾದುದು. ದೇಶದ ಪ್ರಜಾಪ್ರಭುತ್ವದ ರಕ್ಷಣೆ ನಮ್ಮದಾಗಿದೆ. ಸರ್ವ ಜನಾಂಗದವರನ್ನು ಸಮಾನವಾಗಿ ಕಾಣುವ ಜನಪ್ರತಿನಿಧಿಯನ್ನು ಪ್ರಜ್ಞಾವಂತ ಮತದಾರರು ಆಯ್ಕೆ ಮಾಡಬೇಕು ಎಂದು ಹೇಳಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಕುಂಬೂರು ಬೂತ್ನಲ್ಲಿ ಮತಚಲಾಯಿಸಿದರು. ಬಳಗುಂದ ಮತಗಟ್ಟೆಯಲ್ಲಿ ಕರ್ಕಳ್ಳಿ ಗ್ರಾಮದ ಪ್ರಥಮ ಬಿಸಿಎ ವಿದ್ಯಾರ್ಥಿ ಮಾಳವಿಕ ಮೊದಲ ಬಾರಿಗೆ ಮತದಾನ ಮಾಡಿದರು. ನಂತರ ಅವರು ಮತದಾನವನ್ನು ಸಂಭ್ರಮಿಸಿದ್ದೇನೆ. ನನಗೆ ಇಷ್ಟವಾದ ಸೂಕ್ತ ಅಭ್ಯರ್ಥಿಗೆ…
ಲೇಖಕ: admin
ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಯು ಸುಳ್ಳು ಮತ್ತು ಸತ್ಯಗಳ ನಡುವೆ ನಡೆಯುತ್ತಿರುವ ಸಮರವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳು ಮತದಾರರಿಗೆ ವರದಾನವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮತದಾರರ ಒಲವು ಇದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಲೋಕಸಭಾ ಚುನಾವಣೆ ಸಂದರ್ಭ ವಿರಾಜಪೇಟೆ ನಗರದ ಭೂತ್ ಕೇಂದ್ರಗಳಿಗೆ ಭೇಟಿ ನೀಡಿ ಮತದಾನದ ಅವಲೋಕನ ಮಾಡಿ ನಗರದ ಭೂತ್ ಕೇಂದ್ರ 148 ಸೇರಿದಂತೆ ಎಲ್ಲಾ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಜನತೆಯ ಮೇಲೆ ಪ್ರಭಾವ ಬೀರಿದೆ. ಇದರಿಂದ ಪಕ್ಷದ ಅಭ್ಯರ್ಥಿಯು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ನಗರ ಕಾಂಗ್ರೆಸ್ ಅದ್ಯಕ್ಷರಾದ ಮಾದಂಡ ಪಿ.ತಿಮ್ಮಯ್ಯ, ವಿರಾಜಪೇಟೆ ಪುರಸಭಾ ಸದಸ್ಯರಾದ ಡಿ.ಪಿ.ರಾಜೇಶ್,…
ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಗೆ ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸಂಜೆ 5 ಗಂಟೆ ವೇಳೆಗೆ 70.58 ರಷ್ಟು ಮತದಾನ ನಡೆದಿದೆ. ಮಡಿಕೇರಿ ಕ್ಷೇತ್ರದಲ್ಲಿ 70.54 ರಷ್ಟು ಮತದಾನ ನಡೆದಿದ್ದು, ವಿರಾಜಪೇಟೆ ಕ್ಷೇತ್ರದಲ್ಲಿ 70.22 ರಷ್ಟು ಮತದಾನ ನಡೆದಿದೆ. ಮತದಾರರು ಮತಗಟ್ಟೆಯಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತದಾನ ಮಾಡಿದರು.
ಮಡಿಕೇರಿ ಏ.26 NEWS DESK : ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯಿದ್ ಹಸನ್ ಸಖಾಫ್ ಅಲ್ ಹಳ್ರಮಿ(ರ) ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಎಮ್ಮೆಮಾಡಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಮೇ 3ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏ.27 ರಂದು ಸಯ್ಯಿದ್ ಶಿಹಾಬುದ್ದೀನ್ ಅಲ್ ಅಹ್ದಲ್ (ಮುತ್ತನೂರ್ ತಂಙಳ್) ದ್ಸಿಕ್ರ್ ಹಲ್ಖಾ ಮತ್ತು ಮತ ಪ್ರವಚನ ನೇತೃತ್ವ ವಹಿಸಲಿದ್ದು, ಮುಳ್ಳೂರ್ಕೆರೆ ಮುಹಮ್ಮದ್ ಅಲಿ ಸಖಾಫಿ ಆಧುನಿಗ ಯುಗತ್ತಿಲ್ ಇಸ್ಲಾಮಿಂಡೆ ಪ್ರಶಸ್ವಿ ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಹಂಸ ಸಅದಿ, ಮಾಜಿ ಅಧ್ಯಕ್ಷ ಮೂಸ ಹಾಜಿ ಚಕ್ಕೇರ, ಸಯ್ಯದ್ ಆಟಕೋಯ ತಂಙಳ್ ಬಾಣೆಪುರ, ಸಯ್ಯಿದ್ ಪೊಕೊಯ ತಂಙಳ್ ಬಾಣೆಪುರ, ಸಯ್ಯಿದ್ ಫಝಲ್ ಅಲ್ ಹೈದರೂಪಿ, ಎಮ್ಮೆಮಾಡು ಶಹೀದಿಯ ಅನಾಥಾಲಯದ ಕೋಶಾಧಿಕಾರಿ ಉಸ್ಮಾನ್ ನೆರೂಟ್, ಮೇಯಾಣೆ ಮಸೀದಿ ಇಮಾಂ ಹಾರಿಸ್…
ವಿರಾಜಪೇಟೆ ಏ.26 NEWS DESK : ವಿರಾಜಪೇಟೆ ನಗರದ ಚಿಕ್ಕಪೇಟೆ ನಿವಾಸಿ ವಿಶ್ವ ಹಾಕಿ ಕಪ್ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಹಾಲಿ ಒಮನ್ ದೇಶದ ಹಾಕಿ ತಂಡದ ಮುಖ್ಯ ತರಬೇತುದಾರರಾಗಿರುವ ಕೂತಂಡ ಕೆ.ಪೂಣಚ್ಚ ಬಿಜೆಪಿಗೆ ಸೇರ್ಪಡೆಯಾದರು. ವಿರಾಜಪೇಟೆ ನಗರದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ಚಾಮರಾಜ ಒಡೆಯರ್ ಅವರ ರೋಡ್ ಶೋ ನಡೆದ ಸಂದರ್ಭದಲ್ಲಿ ಪೂಣಚ್ಚ ಅವರು ಬೆಂಬಲಿಗರ ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಪಕ್ಷ ಪ್ರಮುಖರ ಸಮ್ಮುಖದಲ್ಲಿ ಬಿಜೆಪಿ ಗೆ ಸೇರ್ಪಡೆಯಾದರು. ನಂತರ ಮಾತನಾಡಿದ ಪೂಣಚ್ಚ, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಅಥವಾ ಮೋದಿ ಅವರು ದೇಶವನ್ನು ವಿಶ್ವದ ಭೂಪಟದಲ್ಲಿ ಭಾರತವನ್ನು ವಿಶ್ವ ಗುರು ಮಾಡುವತ್ತಾ ಶ್ರಮವಹಿಸಿದ್ದಾರೆ. ದೇಶದಲ್ಲಿ ನಡೆದಿರುವ ಅಮೂಲಾಗ್ರ ಬದಲಾವಣೆಯು ಹೊಸ ದಿಕ್ಕು ತೋರುವಂತೆ ಮಾಡಿದೆ. ಉತ್ತಮ ಸೇವೆ ನೀಡುವ ದೇಶ ಸೇವಕ ಮೋದಿ ಅವರು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯಬೇಕು…
ಮಡಿಕೇರಿ ಏ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಜರುಗಿದ ಮತದಾನದಲ್ಲಿ ಶೇ.53.55 ಪ್ರತಿಶತ ಮತದಾನವಾಗಿದೆ.
ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಈವರೆಗೆ ಶೇ. 50.98 ಮತದಾನ ನಡೆದಿದೆ.
ಮಡಿಕೇರಿ ಏ.26 NEWS DESK : ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯುದ್ ಹಸನ್ ಸಖಾಫ್ ಹಳ್ರಮಿ(ರ) ಮತ್ತು ಇತರ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತಿ ನಡೆಯುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಗೆ ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫಿ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಧ್ವಜಾರೋಹಣಕ್ಕೂ ಮೊದಲು ಸಾಮೂಹಿಕ ನಮಾಜಿನ ಬಳಿಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬೆಳ್ತಂಗಡಿ ದಾರುಸ್ಸಲಾಂ ಚೇರ್ಮೆನ್ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ನೇತೃತ್ವ ವಹಿಸಿದ್ದರು. ರಾತ್ರಿ 8 ಗಂಟೆಗೆ ಕೊಡಗು ನಾಇಬ್ ಖಾಝಿ ಅಬ್ದುಲ್ಲ ಫೈಝಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಮ್ಮೆಮಾಡು ಮುದರ್ರಿಸ್ ಹಂಝ ಸಖಾಫಿ ವಹಿಸಲಿದ್ದಾರೆ. ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ್ಲ ಪ್ರಶ್ನಂಙಳುಂ ಪರಿಹಾರವುಂ ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಎಮ್ಮೆಮಾಡು ಮಾಜಿ ಖತೀಬರಾದ ಸಯ್ಯಿದ್ ಅಬ್ದುಲ್ ಅಝೀಝ್ ಅಲ್ ಹೈದರೂಸಿ, ಹಾಫಿಳ್ ಜುನೈದ್ ಜಲಾಲಿ, ಎಮ್ಮೆಮಾಡು ಶಹೀದಿಯ ಅನಾಥಾಲಯ ಅಧ್ಯಕ್ಷ ಹಸೈನಾರ್ ಹಾಜಿ ಚಕ್ಕೇರ,…
ಮಡಿಕೇರಿ ಏ.26 NEWS DESK : ಕೊಡಗಿನ ವಿವಿಧೆಡೆ ಹಿರಿಯ ನಾಗರಿಕರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವ ಮೂಲಕ ಯುವ ಮತದಾರರಿಗೆ ಸ್ಫೂರ್ತಿಯಾದರು. ನಾಪೋಕ್ಲು ಬೂತ್ ಸಂಖ್ಯೆ 56 ರಲ್ಲಿ ಬೊಪ್ಪೇರ ಕಾವೇರಪ್ಪ (98) ಮತದಾನ ಮಾಡಿದರು. ಚೌಡ್ಲೂ ಗ್ರಾಮದ ಹೊನ್ನಮ್ಮ (85) ಸಹಾಯಕರೊಂದಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.
ಮಡಿಕೇರಿ ಏ.26 NEWS DESK : ಚೆಟ್ಟಳ್ಳಿ ಸಮೀಪದ ಪೊನ್ನತ್ಮೊಟ್ಟೆ ಬೂತ್ ಸಂಖ್ಯೆ 237ರಲ್ಲಿ ಮೊದಲ ಬಾರಿ ಮತದಾನ ಮಾಡಿದ ಕೆ.ಎಂ.ಇರ್ಷಾದ್, ಸವಾದ್ ಉಸ್ಮಾನ್, ಸಫ್ವಾನ್ ಮತ್ತು ಮುಜಮ್ಮಿಲ್ ಮತಿತ್ತರರು ಮೊದಲ ಬಾರಿಗೆ ಮತ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತ ಚಲಾಯಿಸಿ ಸಂಭ್ರಮಿಸಿದರು.






