ಲೇಖಕ: admin

ಮಡಿಕೇರಿ ಏ.11 NEWS DESK : 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ ವಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸುಜಿತ್‌ ಡಿ. ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸಮೀಕ್ಷಾ ಎಸ್‌ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಪ್ರೇಮ್‌ ಸಾಗರ್‌ ಪಟೀಲ್‌ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌, ಹೆಚ್.ವಿ.ವರ್ಷ  589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಗಳಿಸಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಾನ್ವಿ ರಾವ್‌ 595 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನ, ಭಕ್ತಿ…

Read More

ನಾಪೋಕ್ಲು ಏ.11 NEWS DESK : ದೊಡ್ಡಪುಲಿಕೋಟು ಗ್ರಾಮದ ಕೋಟೆ ಭಗವತಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವದ ಅಂಗವಾಗಿ ಅಂದಿ ಬೊಳಕ್, ಮಹಾಪೂಜೆ , ಎತ್ತು ಪೋರಾಟ, ಪಟ್ಟಣಿ ದೇವಿಯ ರ್ಶನ ಬಲಿ, ತರ್ಥ ಪ್ರಸಾದ ವಿತರಣೆ ಬಳಿಕ ಉತ್ಸವದಲ್ಲಿ ಪಾಲ್ಗೊಂಡ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಕಾರ್ಯಕ್ರಮದಲ್ಲಿ ಬೊಳಕಾಟ್, ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಬಳಿಕ ಕಾವೇರಿ ನದಿಯಲ್ಲಿ ದೇವಿಯ ಜಳಕ, ನಂತರ ದೇವಾಲಯದ ಸುತ್ತ ದೇವರ ನೃತ್ಯಬಲಿ ಜರುಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ಸಂಪನ್ನಗೊಂಡಿತು. ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ದೇವಾಲಯದ ಮುಖ್ಯ ಅರ್ಚಕ ಗೋಪಾಲಕೃಷ್ಣ ನೇತೃತ್ವದಲ್ಲಿ ನೆರವೇರಿಸಿ ಕೊಟ್ಟರು. ಉತ್ಸವದಲ್ಲಿ ಊರ ಹಾಗೂ ಪರ ಊರಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚ್ಚಿರ ತಮ್ಮಯ್ಯ, ಉಪಾಧ್ಯಕ್ಷ ಮಣವಟ್ಟಿರ ಮುದ್ದಯ್ಯ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಕಾರ್ಯದರ್ಶಿ ಕರವಂಡ ಲವ ನಾಣಯ್ಯ, ದೇವಾಲಯದ ತಕ್ಕರಾದ ಪೆಬ್ಬಟ್ಟಿರ ಕುಶಾಲಪ್ಪ, ಕರವಂಡ ರವಿ ಬೋಪಣ್ಣ ಆಡಳಿತ…

Read More

ನಾಪೋಕ್ಲು ಏ.11 NEWS DESK : ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವ ಏ.13 ರಿಂದ 19 ರವರೆಗೆ ನಡೆಯಲಿದೆ. ಏ.13 ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಗುವುದು, ಏ.14 ರಂದು ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಏ.15 ರಂದು ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವ ಬಲಿ ನಡೆಯಲಿದೆ. ಏ.16 ರಂದು ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನಡೆಯಲಿದೆ. ಏ.17ರಂದು ಹಗಲು ಉತ್ಸವಬಲಿ ನಡೆದು ಸಂಜೆ ದೀಪಾರಾಧನೆ ನಡೆಯಲಿದೆ. ಏ.18 ರಂದು ಪಟ್ಟಣಿ ಹಬ್ಬ ಜರುಗಲಿದೆ. ಬೆಳಗ್ಗೆ ತುಲಾಭಾರ, ಮಧ್ಯಾಹ್ನ ಎತ್ತು ಪೋರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಅಪರಾಹ್ನ ಜೋಡಿ ದೇವರ ನೃತ್ಯೋತ್ಸವ ನಡೆಯಲಿದೆ. ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಹಾಲಿಂಗೇಶ್ವರ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಏ.11 NEWS DESK : ಚೆರಿಯಪರಂಬು, ಹಳೆತಾಲ್ಲೂಕು, ಕೊಳಕೇರಿ, ಎಮ್ಮೆಮಾಡು, ಕೊಟ್ಟಮುಡಿ,ಕುಂಜಿಲ ವ್ಯಾಪ್ತಿಯ ಜುಮಾ ಮಸೀದಿ ಸೇರಿದಂತೆ ವಿವಿಧೆಡೆ ಈದುಲ್ ಫಿತರ್ ಅನ್ನು ಮುಸಲ್ಮಾನ ಬಾಂಧವರು ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಖತೀಬರದ ಅಶ್ರಫ್ ಅಸ್ಸಾನಿ ನೇತೃತ್ವದಲ್ಲಿ ಸಾಮೂಹಿಕ ಈದುಲ್ ಫಿತರ್ ನಮಾಜ್ ನೆರವೇರಿಸಲಾಯಿತು. ಪ್ರತಿಯೊಬ್ಬರು ಪ್ರವಾದಿಯವರ ಸಂದೇಶದಂತೆ ನಾಡಿನಲ್ಲಿ ಶಾಂತಿ ಸೌಹಾರ್ದತೆ ಮತ್ತು ಐಕ್ಯತೆಯಿಂದ ಜೀವನ ನಡೆಸಬೇಕು. ಇಸ್ಲಾಂ ಶಾಂತಿಯ ಧರ್ಮವಾಗಿದ್ದು, ಮತ್ತೊಬ್ಬರಿಗೆ ನೋವುಂಟು ಮಾಡುವ ಕಾರ್ಯ ಪ್ರವೃತ್ತಿಗಳನ್ನು ಮಾಡದೆ ಎಲ್ಲಾ ಧರ್ಮದವರೊಂದಿಗೆ ಸೌಹಾರ್ದತೆಯನ್ನು ಬೆಳೆಸಬೇಕು ಎಂದು ಗುರುಗಳು ಈದ್ ಸಂದೇಶ ನೀಡಿದರು. ನಾಡಿನ ಸುಭಿಕ್ಷಕ್ಕಾಗಿ ಮತ್ತು ನಾಡಿನಲ್ಲಿ ಮೃತಪಟ್ಟವರಿಗೆ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಈ ಸಂದರ್ಭ ಜಮಾಯತ್ ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್, ಉಪ ಅಧ್ಯಕ್ಷ ಪಿ.ಎಂ ಅರಫತ್, ಕಾರ್ಯದರ್ಶಿ ಯೂನಸ್, ಮಾಜಿ ಅಧ್ಯಕ್ಷ ಸಲೀಂ ಹ್ಯಾರಿಸ್ , ಎಂ.ಎ.ಮನ್ಸೂರ್ ಅಲಿ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳು ಸದಸ್ಯರು ಮತಬಾಂಧವರು ಹಾಜರಿದ್ದರು. ವರದಿ :…

Read More

ನಾಪೋಕ್ಲು ಏ.11 NEWS DESK : ಬೇತು ಗ್ರಾಮದ ಕೊಂಡೀರ ಪೂವಣ್ಣ (ಗಿರಿ) ಎಂಬವರ ತೋಟಕ್ಕೆ ಬೆಂಕಿ ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ. ಪೂವಣ್ಣ ಅವರ ಗದ್ದೆಯ ಹುಲ್ಲಿನ ರಾಶಿಗೆ ಬೆಂಕಿ ತಗಲಿದ್ದು, ಗದ್ದೆ ಉದ್ದಕ್ಕೂ ವ್ಯಾಪಿಸಿದ ಬೆಂಕಿ ಕಾಫಿ ತೋಟಕ್ಕೂ ಹಬ್ಬಿದೆ. ಸುಮಾರು 50 ಕಾಫಿ ಗಿಡಗಳಷ್ಟು ಸುಟ್ಟು ನಷ್ಟ ಸಂಭವಿಸಿದೆ. ಈ ಸಂದರ್ಭ ಗ್ರಾಮಸ್ಥರು ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ದಳದ ವಾಹನ ಗ್ರಾಮಕ್ಕೆ ಆಗಮಿಸಿದ್ದರೂ ಸ್ಥಳಕ್ಕೆ ತೆರಳಲಾಗದೆ ಮಕ್ಕಿ ಶ್ರೀ ಶಾಸ್ತವು ದೇವಾಲಯದ ಸಮೀಪ ಸ್ಥಗಿತಗೊಳಿಸಲಾಯಿತು. ಬಳಿಕ ಸಿಬ್ಬಂದಿಗಳು ಮಾತ್ರ ಘಟನಾ ಸ್ಥಳಕ್ಕೆ ತೆರಳಿ ಬಾಕಿ ಉಳಿದ ಅಲ್ಪ ಸ್ವಲ್ಪ ಬೆಂಕಿಯನ್ನು ನಂದಿಸಿ ಸಹಕರಿಸಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಏ.11 NEWS DESK  : ಅಂಜಪರವಂಡ ತಂಡದ ಆಟಗಾರರಾದ ಹೇಮಂತ್, ಅವಿನ್ ಚಿಟ್ಟಿಯಪ್ಪ ಹಾಗೂ ದೀಪಕ್ ಸುಬ್ಬಯ್ಯ ತಲಾ ಒಂದು ಗೋಲು ಗಳಿಸಿದರೆ ಅಂಜಪರವಂಡ ಚಿರಾಗ್ ಎರಡು ಗೋಲುಗಳಿಸಿ ಒಟ್ಟು ಐದು ಗೋಲುಗಳನ್ನು ದಾಖಲಿಸುವುದರ ಮೂಲಕ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟರು. ಆ ಮೂಲಕ ಅಂಜಪರವಂಡ ಪಳಂಗಿಯಂಡ ವಿರುದ್ಧ ಗೆಲುವು ಸಾಧಿಸಿತು. ಇಲ್ಲಿನ ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಇತರ ಪಂದ್ಯಗಳಲ್ಲಿ ಬೊಳ್ಳೆಪಂಡ ವಾಟೇರಿರ ವಿರುದ್ಧ 1-0 ರಿಂದ ಚಿರಿಯಪಂಡ ಅದೇಂಗಡ ವಿರುದ್ಧ 2-0 ರಿಂದ ಗೆಲುವು ಸಾಧಿಸಿತು. ಮಾಚಿಮಂಡ ಬಾಚಮಂಡ ವಿರುದ್ಧ, ಕೊಂಗಂಡ ಚೊಟ್ಟೇಮಾಡ ವಿರುದ್ಧ,ಅರೆಯಡ ದೇಯಂಡ ವಿರುದ್ಧ 3-0 ಅಂತರದ ಗೆಲುವು ಸಾಧಿಸಿ ಮುಂದಿನ ಸುತ್ತು ಪ್ರವೇಶಿಸಿದವು. ಕಲಿಯಂಡ ಚೆರುವಾಳಂಡ ವಿರುದ್ಧ 4-0 ರಿಂದ ಜಯಗಳಿಸಿದರೆ ಕೇಲಪಂಡ ಅವರೇಮಾದಂಡ ವಿರುದ್ಧ 2-1 ರಿಂದ ಜಯಗಳಿಸಿತು. ಅಮ್ಮಂಡ ಮುದ್ದಿಯಂಡ ವಿರುದ್ಧ 2-1 ರಿಂದ, ಚೇನಂಡ…

Read More

ಮಡಿಕೇರಿ ಏ.10 NEWS DESK : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ ರಾಜ್ಯದಲ್ಲಿ 5ನೇ ಸ್ಥಾನ ಗಳಿಸಿದೆ. 2023ರ ಫಲಿತಾಂಶಕ್ಕೆ ಹೋಲಿಸಿದರೆ, ಈ ಬಾರಿ ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ.1.58 ಹೆಚ್ಚಳವಾಗಿದೆಯೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ಸಿ. ತಿಳಿಸಿದ್ದಾರೆ. ಜಿಲ್ಲೆಯಲ್ಲಿ 4578 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 4216 ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ 804 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 671 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.83.46 ಫಲಿತಾಂಶ ದೊರಕಿದೆ. ವಾಣಿಜ್ಯ ವಿಭಾಗದಲ್ಲಿ 2351 ವಿದ್ಯಾರ್ಥಿಗಳಲ್ಲಿ 2196 ಮಂದಿ ಉತ್ತೀರ್ಣರಾಗಿ ಶೇ.93.41 ಫಲಿತಾಂಶ ದೊರಕಿದೆ. ವಿಜ್ಞಾನ ವಿಭಾಗದಲ್ಲಿ 1421 ವಿದ್ಯಾರ್ಥಿಗಳಲ್ಲಿ 1349 ಮಂದಿ ತೇರ್ಗಡೆಹೊಂದಿ ಶೇ.94.93 ಫಲಿತಾಂಶ ಲಭಿಸಿದೆ. ಖಾಸಗಿ 385 ವಿದ್ಯಾರ್ಥಿಗಳಲ್ಲಿ 222 ಮಂದಿ ತೇರ್ಗಡೆಹೊಂದಿ ಶೇ.57.66 ಫಲಿತಾಂಶ ದಾಖಲಾಗಿದೆ. ಪುನರಾವರ್ತಿತ 140 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ತೇರ್ಗಡೆಹೊಂದಿ ಶೇ.50.71 ಫಲಿತಾಂಶ ದೊರಕಿದೆ. ಕಲಾ ವಿಭಾಗದಲ್ಲಿ ಮಡಿಕೇರಿಯ ಸಂತ…

Read More

ಮಡಿಕೇರಿ ಏ.10 NEWS DESK : ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ ಮೇ 18 ರಿಂದ 25ರ ವರೆಗೆ ಗೌಡ ಫುಟ್ಬಾಲ್ ಟ್ರೋಫಿ ಹಾಗೂ ಮರಗೋಡು ವ್ಯಾಪ್ತಿಯ ಗ್ರಾಮಗಳಿಗೆ ಸೀಮಿತವಾಗಿ ಯೂನಿಟಿ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಅಕಾಡೆಮಿ ಕಾರ್ಯದರ್ಶಿ ಇಟ್ಟಣಿಕೆ ನವನೀತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ 7ನೇ ವರ್ಷದ ಗೌಡ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದರು. ಕಳೆದ ಬಾರಿಯ ಪಂದ್ಯಾವಳಿಗೆ ಸಮುದಾಯ ಬಾಂಧವರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಬಾರಿ ಮೊದಲ 64 ತಂಡಗಳಿಗೆ ಆಧ್ಯತೆ ನೀಡಲಾಗಿದೆ. ಪ್ರವೇಶ ಶುಲ್ಕ 3 ಸಾವಿರ ರೂಪಾಯಿ ಇದ್ದು, ಆಸಕ್ತ ತಂಡಗಳು ಮೇ 5 ರೊಳಗಾಗಿ ತಂಡಗಳ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಪಂದ್ಯಾವಳಿಯ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ. 70,000 ನಗದು, ದ್ವಿತೀಯ ರೂ.50,000 ನಗದು, ತೃತೀಯ ಹಾಗೂ ನಾಲ್ಕನೇ ಬಹುಮಾನ ರೂ.10,000 ಸಾವಿರ ನಗದು ಹಾಗೂ ಆಕರ್ಷಕ…

Read More

ಮಡಿಕೇರಿ ಏ.10 NEWS DESK  :  ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾಗಿ ಎಂ.ಜಿ.ಸವಿತಾ ಬಡ್ತಿ ಹೊಂದಿದ್ದಾರೆ. ಕಳೆದ 26 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಮಡಿಕೇರಿಯ ವಕೀಲರು ನೋಟರಿ ಹಾಗೂ ಲೇಖಕರೂ ಆದ ಬಾಳೆಯಡ ಕಿಶನ್ ಪೂವಯ್ಯ ಅವರ ಪತ್ನಿ.

Read More

ಕುಶಾಲನಗರ ಏ.10 NEWS DESK : ಸತತ ಒಂದು ತಿಂಗಳ ವ್ರತಾಚರಣೆಯ ನಂತರ ಮುಸಲ್ಮಾನರ ಪ್ರಮುಖ ಹಬ್ಬಗಳಲ್ಲಿ ಒಂದಾಗ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು. ಕುಶಾಲನಗರದ ಹಿಲಾಲ್ ಮಸೀದಿ, ಕೂಡಿಗೆ, ಶುಂಠಿಕೊಪ್ಪ, ನಂಜರಾಜಪಟ್ಟಣ ಸೇರಿದಂತೆ ಹಲವೆಡೆ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಗಳಲ್ಲಿ ವಿಶೇಷ ನಮಾಜ಼್ ನೆರವೇರಿಸಲಾಯಿತು. ಊರಿನಲ್ಲಿ ಶಾಂತಿ ನೆಲೆಸಲು ಹಾಗೂ ಮಳೆಗಾಗಿ ಪ್ರಾರ್ಥಿಸಲಾಯಿತು. ದಾನದ ಧರ್ಮವೆಂದೇ ಪ್ರಖ್ಯಾತವಾದ ಈದುಲ್ ಫಿತರ್ ಹಬ್ಬದಂದು ಶಾಫಿ ಬಾಂಧವರು ಬಡವರಿಗೆ ದಾನ, ಧರ್ಮಗಳನ್ನು ನೀಡಿದರು. ನಂತರ ಸರ್ವರಿಗೂ ಈದುಲ್ ಫಿತರ್ ಹಬ್ಬದ ಶುಭಾಶಯಗಳನ್ನು ಸಾರಿದ ಮುಸ್ಲಿಂ ಸಹೋದರರು, ಹಿಂದೂ ಸಹೋದರರಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ಹಿಲಾಲ್ ಮಸೀದಿ ಅಧ್ಯಕ್ಷ ಎಂ.ಎಂ.ಎಸ್.ಹುಸೇ‌ನ್ ಮಾತನಾಡಿ, ಈದುಲ್ ಫಿತರ್ ನ ಶುಭಾಶಯಗಳನ್ನು ತಿಳಿಸಿದರು. ಹಿಲಾಲ್ ಮಸೀದಿ ಧರ್ಮಗುರುಗಳಾದ ನಾಸರ್ ಫೈಜಿ಼ ಮಾತನಾಡಿ, ನಾಡಿನಲ್ಲಿ ಸರ್ವರೂ ಶಾಂತಿ, ಸಹೋದರತೆಯಿಂದ ಬಾಳಬೇಕಾಗಿದೆ ಎಂದರು. ಹಿಲಾಲ್ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮಾತನಾಡಿ,…

Read More