ಲೇಖಕ: admin

ಮಡಿಕೇರಿ ಏ.10 NEWS DESK  : ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿಯ ತಾಯಿ, ಮಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗುತ್ತಿಗೆದಾರ ಟಿ.ಕೆ.ಸುರೇಂದ್ರ ಅವರ ಪತ್ನಿ ಎಂ.ಯು.ಬೇಬಿರಾಣಿ  ಹಾಗೂ ಪುತ್ರಿ ಟಿ.ಎಸ್. ರಿನಿಶಾ  ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು ಗಮನ ಸೆಳೆದಿದ್ದರು. ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜ್ ನ ವಿದ್ಯಾರ್ಥಿನಿಯಾಗಿರುವ ರಿನಿಶಾ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 570 ಅತ್ಯುನ್ನತ ಅಂಕಗಳನ್ನು ಪಡೆದುಕೊಂಡಿದ್ದಾರೆ. ತಾಯಿ ಬೇಬಿರಾಣಿ ನೆಲ್ಲಿಹುದಿಕೇರಿ ಜೂನಿಯರ್ ಕಾಲೇಜ್ ನಲ್ಲಿ ಪರೀಕ್ಷೆ ಬರೆದಿದ್ದು, ಕಲಾ ವಿಭಾಗದಲ್ಲಿ 600 ಕ್ಕೆ 388 ಅಂಕಗಳನ್ನು ಪಡೆದು ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.NEWS DESK  ಕನ್ನಡ ವಿಷಯದಲ್ಲಿ ಪುತ್ರಿ 96 ಹಾಗೂ ತಾಯಿ 93 ಅಂಕ ಪಡೆದುಕೊಂಡಿದ್ದಾರೆ. ಸುಮಾರು 25 ವರ್ಷಗಳ ಹಿಂದೆ 10ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದ ನನಗೆ ಇದೀಗ ಮಗಳು ಸ್ಫೂರ್ತಿ ತುಂಬಿ ದ್ವಿತೀಯ ಪಿಯುಸಿ ಬರೆಯುವಂತೆ ಪ್ರೋತ್ಸಾಹ ನೀಡಿದ ಪರಿಣಾಮ ಇಂದು ನಾನು ಉತ್ತೀರ್ಣಳಾಗಿದ್ದೇನೆ ಎಂದು ಬೇಬಿರಾಣಿ ಹರ್ಷ ವ್ಯಕ್ತಪಡಿಸಿದರು.NEWS…

Read More

ಮಡಿಕೇರಿ ಏ.10 NEWS DESK : ಯವಕಪಾಡಿ ಗ್ರಾಮದ ಕಕ್ಕಬೆ ಶ್ರೀ ಆದಿ ಪನ್ನಾಂಗಾಲ ತಮ್ಮೆ ದೇವಿಯ ವಾರ್ಷಿಕ ಉತ್ಸವವು ಏ.12 ಮತ್ತು 13 ರಂದು ನಡೆಯಲಿದೆ. ದೇವಾಲಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಉತ್ಸವವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಏ.12 ರಂದು ಬೆಳಿಗ್ಗೆ 10 ಗಂಟೆಗೆ ಅಂಜಪರವಂಡ ಮನೆಯಿಂದ ಭಂಡಾರ ಬರುವುದು, 11 ಗಂಟೆಗೆ ತಡಂಬು ತೊಳೆಯುವುದು, ಮಧ್ಯಾಹ್ನ 1 ಗಂಟೆಗೆ ನಾಡು ಹತ್ತಿಸುವುದು ಮತ್ತು ಹರಕೆ ಒಪ್ಪಿಸುವುದು, ರಾತ್ರಿ 9 ಗಂಟೆಗೆ ಕರಿ ಚಾಮುಂಡಿ ಭಾರಣಿ ನಡೆಯಲಿದೆ. ಏ.13 ರಂದು 11 ಗಂಟೆಗೆ ಕುರುಂದ ದೇವರ ಹಬ್ಬ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕ ಮುಖ್ಯಸ್ಥರು ಹಾಗೂ ಮುವತ್ತಮೂರು ಕುಡಿಯವರು ಕೋರಿದ್ದಾರೆ.

Read More

ಮಡಿಕೇರಿ ಏ.10 NEWS DESK : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯ ಕಾರ್ಕಳದ ಕ್ರಿಯೇಟಿವ್ ಎಜುಕೇಷನ್ ಫೌಂಡೇಷನ್ ಶಿಕ್ಷಣ ಸಂಸ್ಥೆಗೆ ಶೇ.100 ಫಲಿತಾಂಶ ದೊರೆತ್ತಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದಾಳೆ. ಉತ್ತಮ ಉಪನ್ಯಾಸಕರ ಪ್ರಯತ್ನದ ಫಲವಾಗಿ ದ್ವಿತೀಯ ಪಿಯುಸಿಯಲ್ಲಿ ನಿರಂತರವಾಗಿ ಶೇ.100 ರಷ್ಟು ಸಾಧನೆ ಮಾಡುತ್ತಿರುವ ಈ ಶಿಕ್ಷಣ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೆ ಎಂದು ಕಾಲೇಜು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

Read More

ವಿರಾಜಪೇಟೆ ಏ.10 NEWS DESK : ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮದ ಪೊನ್ನೀರ ಕುಟುಂಬಸ್ತರು ವರ್ಷಂಪ್ರತಿ ನಡೆಸಿಕೊಂಡು ಬರುವ ಶ್ರೀ ಬೇಟೆ ಚಾಮುಂಡಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆ ಶುದ್ಧ ಕಳಸ ನೆರವೇರಿಸಿ, ರಾತ್ರಿಯಿಂದ ವಿವಿಧ ದೈವಗಳೊಂದಿಗೆ ಮರುದಿನದ ವರೆಗೆ ಬೇಟೆ ಚಾಮುಂಡಿ ದೈವದ ಕೋಲದೊಂದಿಗೆ ವಾರ್ಷಿಕ ಹಬ್ಬಕ್ಕೆ ತೆರೆ ಎಳೆಯಲಾಯಿತು. ವಿವಿಧೆಡೆಯಿಂದ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಏ.10 NEWS DESK : ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ಮುಸ್ಲಿಂ ಬಾಂಧವರು ತ್ಯಾಗ ಮತ್ತು ಕರುಣೆಯ ಸಂಕೇತವಾದ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಬೆಳಗ್ಗೆ ಮಸ್ಜಿದ್ ತಖ್ವಾದಲ್ಲಿ ನಡೆದ ಈದ್ ನಮಾಜ್ ನೇತೃತ್ವವನ್ನು ಮಹಲ್ ಖತೀಬರಾದ ಮುಸ್ತಫಾ ಸಖಾಫಿ ವಹಿಸಿದ್ದರು. ನಂತರ ಮಾತನಾಡಿದ ಮುಸ್ತಫಾ ಸಖಾಫಿ ಕಳೆದ ಒಂದು ತಿಂಗಳು ಎಲ್ಲರೂ ಶ್ರದ್ಧೆ ಮತ್ತು ಭಕ್ತಿಯಿಂದ ವ್ರತಾಚರಣೆಯನ್ನು ಮಾಡಿದ್ದೇವೆ. ಪವಿತ್ರ ರಂಜಾನ್ ನಲ್ಲಿ ನಾವೆಲ್ಲರೂ ಅಲ್ಲಾಹಿನೊಂದಿಗೆ ವಿಶೇಷ ಪ್ರಾರ್ಥನೆ ನಡೆಸಿದ್ದೇವೆ. ಆದರೆ ಯುವ ಸಮೂಹ ಕೆಡುಕಿನ ದಾರಿಯಲ್ಲಿ ಸಾಗುತ್ತಿರುವುದು ದುಖಃದ ಸಂಗತಿಯಾಗಿದೆ. ಯುವ ಸಮೂಹ ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಒಳಿತಿನ ದಾರಿಯಲ್ಲಿ ಸಾಗಬೇಕು. ಯೌವ್ವನವನ್ನು ನಾವು ಹಾಳುಮಾಡಬಾರದು. ಯುವತ್ವದ ಪ್ರಾಯದಲ್ಲಿ ದೀನಿಕಾರ್ಯಗಳನ್ನು ಮಾಡುತ್ತಾ ನಾವು ಅಲ್ಲಾಹನಿಗೆ ಹತ್ತಿರವಾಗಬೇಕು. ಆದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಎಂದು ಸಾಧ್ಯ ಎಂದರು. ನಾವೆಲ್ಲರೂ ಸಂಭ್ರಮದಿಂದ ಈದ್ ಆಚರಣೆ ಮಾಡುವಾಗ ಜಗತ್ತಿನಾದ್ಯಂತ ಒಪ್ಪೊತ್ತಿನ ಊಟವೂ ಇಲ್ಲದೆ ಉಪವಾಸವಿರುವ ಲಕ್ಷಾಂತರ ಜನರಿಗಾಗಿ ನಾವು ದುಆ…

Read More

ಮಡಿಕೇರಿ ಏ.10 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶವನ್ನು ನೀಡುತ್ತಾ ಬಂದಿರುವ ಶಿಕ್ಷಣ ಸಂಸ್ಥೆಯಾಗಿದೆ. ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಬಂದಿದೆ.  *ದ್ವಿತೀಯ ಪಿಯುಸಿಯಲ್ಲಿ ರಾಜ್ಯದ ಹತ್ತು ರಾಂಕ್ ಗಳಲ್ಲಿ ವಾಣಿಜ್ಯ ವಿಭಾಗಕ್ಕೆ 3 ರಾಂಕ್*  2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಶೇ.100 ರಷ್ಟು ಫಲಿತಾಂಶ ದೊರೆತ್ತಿದೆ. ಅನಘ (ಮೂರನೇ ರಾಂಕ್) ದಿವಿತ್ ಗೌಡ(ಏಳನೇ ರಾಂಕ್) ಹಾಗೂ ಅಕ್ಷತಾ ಪೈ( ಹತ್ತನೇ ರಾಂಕ್) ನ್ನು ಪಡೆದಿರುತ್ತಾರೆ.  *CA ಫೌಂಡೇಷನ್ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಮೋಘ ಸಾಧನೆ*  ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್…

Read More

ಮಡಿಕೇರಿ ಏ.10 NEWS DESK : ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ವರ್ಷವಧಿ ಜಾತ್ರೆಯು ಶ್ರದ್ಧಾಭಕ್ತಿಯಿಂ ನಡೆಯಿತು. ದೇವರ ಸನ್ನಿಧಿಯಲ್ಲಿ ಎರಡು ದಿನಗಳ ಕಾಲ ಮಹಾಪೂಜೆ, ದೀಪಾರಾಧನೆ , ದೇವರ ಬಲಿ ದೇವರ ಪ್ರದರ್ಶನ, ಮಹಾಭಿಷೇಕ, ವಿಶೇಷ ಸೇವೆಗಳು ನೆರವೇರಿತು.  ಮಧ್ಯಾಹ್ನ ಮಹಾಪೂಜೆ , ದೇವರ ಬಲಿ ಹಾಗೂ  ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಭಕ್ತಾದಿಗಳಿಗೆ ಅನ್ನನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ವಿವಿಧಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಏ.10 NEWS DESK : ತನಲ್ ಮಹಿಳಾ ವಿಂಗ್ ವತಿಯಿಂದ ಮಡಿಕೇರಿಯ ನೆರಳಿನ ಮನೆ ತನಲ್ ಆಶ್ರಮದಲ್ಲಿ ಈದ್ ಉಲ್ ಫಿತರ್ ಸಂಭ್ರಮದಿಂದ ಆಚರಿಸಲಾಯಿತು. ತನಲ್ ಮಹಿಳಾ ವಿಂಗ್  ಸದಸ್ಯರು ಎಲ್ಲಾ ಆಶ್ರಿತರಿಗೆ ಮದರಂಗಿ ಹಚ್ಚಿ, ಹೊಷ ಉಡುಪು ಮತ್ತು ವಿಶೇಷ ಉಡುಗೊರೆ ನೀಡಿ ಸಂಭ್ರಮಿಸಿದರು. ಅಲ್ಲದೇ ಭೋಜನ ವ್ಯವಸ್ಥೆ ಯನ್ನು ಕಲ್ಪಿಸಿದರು. ಈ ಸಂದರ್ಭ ತನಲ್ ಮಹಿಳಾ ವಿಂಗ್ ನ ಪದಾಧಿಕಾರಿಗಳಾದ ಮುಹೀನ ಮೊಹಮ್ಮದ್, ಉನೈಸ ಮುಸ್ತಾಫಾ, ನಸಿರ, ಝಕೀಯ ಮತ್ತು ರಹಮತ್ ಅನ್ವರ್ ಹಾಜರಿದ್ದರು.

Read More

ಮಡಿಕೇರಿ ಏ.10 NEWS DESK : ಹಬ್ಬಗಳು ಭಾವೈಕ್ಯ ದ ಸಂದೇಶವನ್ನು ಸಾರುತ್ತದೆ, ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುವ ನಮ್ಮ ಭಾರತ ಎಂದಿಗೂ ಶಾಂತಿ ನೆಮ್ಮದಿಯನ್ನು ಬಯಸುತ್ತದೆ ಹೊರತು ದ್ವೇಷದ ವಾತಾವರಣವಲ್ಲ ಎಂದು ಹಾಫಿಝ್ ಫಝಲುಲ್ ರೆಹಮಾನ್  ಹೇಳಿದರು. ನಗರದ  ಬದ್ರಿಯಾ ಮಸೀದಿಯಲ್ಲಿ ಈದ್ ನಮಾಝ್ ನೇತೃತ್ವ ವಹಿಸಿದ ನಂತರ  ಮಾತನಾಡಿದ ಅವರು, ಪ್ರವಾದಿ ( ಸ) ಅವರು ನೀವು ಎಲ್ಲಿಯವರೆಗೆ ನಿಮ್ಮ ನೆರೆಯವರನ್ನು ಗೌರವಿಸುವುದಿಲ್ಲವೋ ಅಲ್ಲಿಯವರೆಗೆ ಓರ್ವ ಉತ್ತಮ ವಿಶ್ವಾಸಿಯಾಗಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ಉಲ್ಲೇಖಿಸಿದರು. ನಾಡಿನಲ್ಲಿ ಉತ್ತಮ ಮಳೆ ಬೆಳೆ ಹಾಗೂ ಸಮೃದ್ದಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ನಗರದ ಸಿ.ಪಿ.ಸಿ ಲೇ ಔಟ್ ನ ಮಸ್ಜಿದ್ ಉರ್ ರಹ್ಮಾ ಮಸೀದಿ, ಉಮರ್ ಮೌಲವಿ ಭಟ್ಕಲ್ ಮಸೀದಿ,  ಅಲೀ ಮುಸ್ಲಿಯಾರ್, ಮಲಬಾರ್ ಜುಮಾಅತ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲಿ ಈದ್ ನಮಾಝ್ ನಡೆಯಿತು. ಅಬ್ದುಲ್ ಹಮೀದ್ ಮದನಿ,  ಸಲಫಿ ಮಸೀದಿಯಲ್ಲಿ ಸಲಾವುದ್ದೀನ್ ಚುಝೈಲಿ ನೇತೃತ್ವದಲ್ಲಿ ನಡೆಯಿತು.

Read More

ಮಡಿಕೇರಿ ಏ.10 NEWS DESK : ಕಂದಕದಲ್ಲಿ ಸಿಲುಕಿದ್ದ ಮರಿಯಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಿಸಿರುವ ಘಟನೆ ಕುಶಾಲನಗರ ತಾಲೂಕಿನ ಬಾಳುಗೋಡು ಗ್ರಾಮದ ಕೆರೆಮೂಲೆಯಲ್ಲಿ ನಡೆದಿದೆ. ಕಾಫಿ ಬೆಳೆಗಾರ ಸಿ.ಕೆ.ಗಣೇಶ್ ಮಾರ್ಗ ಮಧ್ಯೆ ತೆರಳುವಾಗ ಕಾಡಾನೆಮರಿಯೊಂದು ಕಂದಕದ ಕೆಸರಿನಲ್ಲಿ ಸಿಲುಕಿ ಮೇಲೆ ಬರಲಾಗದೆ ಒದಾಡುತ್ತಿತ್ತು. ಈ ಬಗ್ಗೆ  ಕೂಡಲೇ  ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಕುಶಾಲನಗರ ಉಪವಲಯ ಅರಣ್ಯಾಧಿಕಾರಿಗಳಾದ ರಂಜನ್ ಹಾಗೂ ದೇವಯ್ಯ  ಕಾರ್ಯಪ್ರವೃತ್ತರಾಗಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಕೆಸರಿನಲ್ಲಿ ಸಿಲುಕಿದ್ದ  ಕಾಡಾನೆಯನ್ನು ಮೇಲೆತ್ತಲು ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಜೆಸಿಬಿಯನ್ನು ಬಳಸಿ ಗ್ರಾಮಸ್ಥರ ಸಹಕಾರದಿಂದ ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಮರಿ ಆನೆಯನ್ನು ರಕ್ಷಿಸಿದ್ದಾರೆ.

Read More