ಲೇಖಕ: admin

ಮಡಿಕೇರಿ ಏ.10 NEWS DESK :  ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಆದೇಶದ ಮೇರೆಗೆ ವಿರಾಜಪೇಟೆ ಪುರಸಭೆಯ ಸಹಭಾಗಿತ್ವದಲ್ಲಿ ವಿರಾಜಪೇಟೆ ನಗರದ ಸಂತ ಅನ್ನಮ್ಮ ಕಾಲೇಜಿನಲ್ಲಿ ನಡೆದ ಮತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮದ ಅಂಗವಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

Read More

ವಿರಾಜಪೇಟೆ ಏ.10 NEWS DESK :  ಅರಮೇರಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪನ್ನಂಗಾಲ ತಮ್ಮೆ ದೇವಿಯ ವಾರ್ಷಿಕ ಉತ್ಸವವು ಏ.12 ಮತ್ತು 13 ರಂದು ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯು ತಿಳಿಸಿದೆ. ಎರಡು ದಿನಗಳು ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಏ.12 ರಂದು ಮುಂಜಾನೆ 4 ಗಂಟೆಗೆ ದೇವಿಗೆ ವಿಶೇಷ ಅಭಿಷೇಕ, 5 ಗಂಟೆಗೆ ದೇವಸ್ಥಾನ ಕ್ಕೆ ಭಂಡಾರ ಬರುವುದು, ಬೆಳಿಗ್ಗೆ 11 ಗಂಟೆಗೆ ದೇವರ ದರ್ಶನ, ಮಧ್ಯಾಹ್ನ 1 ಗಂಟೆಗೆ ಪ್ರಮುಖ ಆಕರ್ಷಣೆಯಾದ ಕೊಡೆ ತರುವುದು. ನಂತರ 3-30 ಗಂಟೆಗೆ ಎತ್ತು ಪೊರಾಟ್, 4 ಗಂಟೆಗೆ ಕುಂಞ ತೋಟ್ ನೊಂದಿಗೆ ಪ್ರಥಮ ದಿನದ ಕಾರ್ಯಕ್ರಮ ಅಂತ್ಯವಾಗಲಿದೆ. ಏ.13 ರಂದು ಬೆಳಿಗ್ಗೆ 10.30ಕ್ಕೆ ದೇವರ ದರ್ಶನ, ಮಧ್ಯಾಹ್ನ 1 ಗಂಟೆಗೆ ವಿಶೇಷ ಅನ್ನ ಸಂತರ್ಪಣೆ, ನಂತರ 4 ಗಂಟೆಗೆ ಕುರುಂಧ ಕಳಿ, ಸಂಜೆ 5 ಗಂಟೆಗೆ ದೇವರ ಅಭ್ಯಂಜನ ನಡೆಯಲಿದೆ. ದೇಗುಲದಲ್ಲಿ ಎರಡು ದಿನ ಕಾಲ ನಡೆಯುವ ಶ್ರೀ…

Read More

ಮಡಿಕೇರಿ ಏ.10 NEWS DESK : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆ ಶೇ.92.13 ಫಲಿತಾಂಶದೊಂದಿಗೆ ರಾಜ್ಯಕ್ಕೆ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.97.37ದೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಶೇ. 96.80 ದೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಗದಗ ಜಿಲ್ಲೆ ಶೇ.72.86  ದೊಂದಿಗೆ ಕೊನೆಯ ಸ್ಥಾನದಲ್ಲಿದೆ. ರಾಜ್ಯದಾದ್ಯಂತ ಈ ಬಾರಿ 5, 52,690 ವಿದ್ಯಾರ್ಥಿಗಳು ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್  karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಈ ಬಾರಿ ರಾಜ್ಯದಾದ್ಯಂತ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. 1,124 ಕೇಂದ್ರಗಳಲ್ಲಿ…

Read More

ಮಡಿಕೇರಿ ಏ.10 NEWS DESK : ವಿರಾಜಪೇಟೆಯ ಕಾವೇರಿ ಕಾಲೇಜು ಬಳಿ ನಡೆಯುತ್ತಿರುವ ಚರಂಡಿ ಕಾಮಗಾರಿಯ ಗುಣಮಟ್ಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲಿಸಿದರು.

Read More

ಸೋಮವಾರಪೇಟೆ ಏ.10 NEWS DESK : ಆಲೂರುಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ತಪೋಕ್ಷೇತ್ರ ಮನೆಹಳ್ಳಿ ಮಠಕ್ಕೆ ಮೈಸೂರಿನ ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಕ್ಷೇತ್ರದ ಆರಾದ್ಯ ದೈವ ವೀರಭದ್ರ ಸ್ವಾಮಿ, ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಮಠದ ಪೀಠಾಧ್ಯಕ್ಷರಾದ ಮಹಾಂತ ಶಿವಲಿಂಗ ಸ್ವಾಮೀಜಿ ನೇತೃತ್ವ ಹಾಗೂ ಜಿಲ್ಲೆಯ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಮಳೆ, ಬೆಳೆ, ಪ್ರಜೆಗಳ ಕಲ್ಯಾಣಕ್ಕಾಗಿ ಅಷ್ಟೋತ್ತರ, ಅರ್ಚನೆ ಹಾಗೂ ವಿಶೇಷ ಪೂಜೆ ನೆರವೇರಿಸಿದರು. ನಂತರ ಬಿಲ್ವ ಗೋ ಶಾಲೆಗೆ ಭೇಟಿನೀಡಿದ ಅವರು ಗೋವುಗಳಿಗೆ ಹಣ್ಣು ಹಂಪಲು ತಿನ್ನಿಸಿ ನಮಿಸಿದರು. ನಂತರ ಮಾತನಾಡಿದ ಅವರು ಇಂದು ಸಾಕಷ್ಟು ಸವಾಲುಗಳಿವೆ ಅವುಗಳನ್ನು ಮೆಟ್ಟಿನಿಂತು ಅಭಿವೃದ್ದಿ ಸಾಧಿಸಬೇಕಾಗಿದೆ, ಇಂದು ಲೋಕಕಲ್ಯಾಣಕ್ಕಾಗಿ ಭಗವಂತನ ಮೊರೆಹೊಕ್ಕಿದ್ದೇವೆ ಎಲ್ಲಾ ಗುರುಗಳ ಮಾರ್ಗದರ್ಶನ, ಆಶೀರ್ವಾದ ವಿರಲಿ ಎಂದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಕೊಡಗುಹಾಸನ ಮಠಧೀಶರ ಪರಿಷತ್ತಿನ ಪ್ರದಾನ ಕಾರ್ಯದರ್ಶಿ ಮುದ್ದಿನಕಟ್ಟೆ ಮಠದ ಶ್ರೀ.ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ,ಕಾರ್ಯದರ್ಶಿ ಕಿರಿಕೂಡ್ಲಿ ಮಠದ…

Read More

NEWS DESK :ಪುಣ್ಯ ಮಾಸ ರಂಜಾನ್ ತಿಂಗಳು ವಿದಾಯ ಹೇಳುತ್ತಿದೆ  ರಮ್ಜಾನ್ ಸತ್ಯ ವಿಶ್ವಾಸಿಗಳಿಗೆ ಪುಣ್ಯಗಳ ಕೊಯ್ಲು ದಿನವಿಡೀ ಹಸಿವಿನಿಂದಿ ದ್ದು  ಸೃಷ್ಟಿಕರ್ತನ ಸ್ತುತಿ ಸ್ತೋತ್ರಗಳನ್ನು ಮಾಡುತ್ತಾ ಕಳೆಯುವ ಸತ್ಯ ವಿಶ್ವಾಸಿಗೆ ಶವ್ವಾಲ್ ತಿಂಗಳ ಮೊದಲ ದಿನ ಹಬ್ಬವಾಗಿರುತ್ತದೆ. ರಂಜಾನ್ ತಿಂಗಳಲ್ಲಿ ಅವನು ಹಲವು ಅನುಭವ ಗಳನ್ನು ಪಡೆದಿರುತ್ತಾನೆ. ನಿತ್ಯ ಆರಾಧನೆ ಮತ್ತು ಪಾಪ ಕಾರ್ಯಗಳಿಂದ ದೂರವಿರುತ್ತಾ ಸಿಗುವ ಆಧ್ಯಾತ್ಮಿಕ ಅನುಭೂತಿ ಒಂದೆಡೆಯಾದರೆ ರಂಜಾನಿನ ದಿನವಿಡೀ ಹಸಿದಿರುವುದರಿಂದ ದೈಹಿಕ ಇಚ್ಛೆಗಳಿಂದ ದೂರವಿರುವುದರಿಂದ ಬಿಡುವಿಲ್ಲದ ಹೊರತಾಗಿಯೂ ಬಿಡುವು ಮಾಡಿಕೊಂಡು ಆರಾಧನೆಗಾಗಿ ಸಮಯವನ್ನು ನಿಗದಿ ಪಡಿಸುವುದರಿಂದ ತ್ಯಾಗ ಮನೋಭಾವ ಸಮಯ ಪಾಲನೆ ಯ ಶಿಸ್ತು ಆತನಲ್ಲಿ ಬೆಳೆದಿರುತ್ತದೆ. ಹೀಗೆ ಒಂದು ತಿಂಗಳ ನಿರಂತರ ಉಪವಾಸದಿಂದ ಒಬ್ಬ ಮನುಷ್ಯನು ಸಂಪೂರ್ಣವಾಗಿ ಪರಿಶುದ್ಧನಾಗಿರುತ್ತಾನೆ ಅವನ ಬದುಕಿನಲ್ಲಿಯೂ ಬದಲಾವಣೆಯಾಗಿರುತ್ತದೆ ಅವನ ಶರೀರ ಮತ್ತು ಮನಸ್ಸು ಎರಡು ಎಲ್ಲಾ ರೀತಿಯ ಕೆಡುಕು ರೋಗಗಳಿಂದ ದುಶ್ಚಟತನದಿಂದ ಶುದ್ದಿಯಾಗಿರುತ್ತದೆ. ರಂಜಾನ್ ಸಮಾಜಕ್ಕೆ ದೊಡ್ಡ ಪರಿವರ್ತನೆಯ ಸುಧಾರಣೆಯ ಪಾಠವನ್ನೇ ಕಲಿಸಿಕೊಟ್ಟಿರುತ್ತದೆ. ಹಸಿವೆಯಲ್ಲಿ ಯಾವುದೇ ಭೇದವಿಲ್ಲ ದನಿಕನಾಗಿದ್ದರೂ ಬಡವನಾಗಿದ್ದರೂ…

Read More

ಮಡಿಕೇರಿ ಏ.9 NEWS DESK : ಮೈಸೂರು- ಕೊಡಗು ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭಗೊಂಡಿದೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್  ಅವರು ಕೊಡಗಿನಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಜಿಲ್ಲೆಯ ಹಿರಿಯ ರಾಜಕಾರಣಿ ಬಿ.ಎ.ಜೀವಿಜಯ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು ಬೆಂಬಲ ಕೋರಿದರು. ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಸಮಾಲೋಚಿಸಿದರು. ಇದಕ್ಕೂ ಮೊದಲು ವಿವಿಧ ಮಠಾಧೀಶರನ್ನು ಭೇಟಿಯಾದ ಯದುವೀರ್ ಅವರು ಆಶೀರ್ವಾದ ಪಡೆದರು. ಬಿಜೆಪಿ ಮುಖಂಡರುಗಳಾದ ರಾಮದಾಸ್, ಅಶ್ವತ್ಥ್ ನಾರಾಯಣ ಗೌಡ, ಮಾಜಿ ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.9 NEWS DESK : ಹರೇ ರಾಮ, ಕ್ರೋಧೀ ನಾಮ ಸಂವತ್ಸರದ ಇಂದು ಕೊಡಗು ಹವ್ಯಕ ವಲಯ, ಬ್ರಾಹ್ಮಣರ ವಿದ್ಯಾಭಿವೃದ್ಧಿ ನಿಧಿ ಹಾಗೂ ವೈಭವ* ತಂಡದ ಸಹಯೋಗದೊಂದಿಗೆ ಮಡಿಕೇರಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರುದ್ರ ಸಹಿತ ವರುಣ ಸೂಕ್ತ ಪಠಣ ಮಾಡಲಾಯಿತು. ಲೋಕಕ್ಕೆ ಕಾಲಕಾಲಕ್ಕೆ ಮಳೆಯ‌ ಮೂಲಕ ಸುಭೀಕ್ಷೆ ಒದಗಿಸಿ, ಕ್ಷೇಮವಾಗಲಿ ಎಂದು ಶ್ರೀ ಆಂಜನೇಯ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

Read More

ಮಡಿಕೇರಿ ಏ.9 NEWS DESK : ಕಾವೇರಿಯ ಉಗಮಸ್ಥಾನ ಕೊಡಗಿನಲ್ಲಿ ಮಳೆ ಬಾರದೆ ತಾಪಮಾನ ಮಿತಿಮೀರಿದೆ. ಹೂಮಳೆಗಾಗಿ ಎದುರು ನೋಡುತ್ತಿರುವ ಜನ ಮಳೆ ಬಾರದೆ ಕಂಗಾಲಾಗಿದ್ದಾರೆ. ಕೃಷಿ ಕ್ಷೇತ್ರ ಸಂಪೂರ್ಣ ಹಾನಿಗೊಳಗಾಗಿದ್ದು, ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗಿದೆ. ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಹೊರಭಾಗದಲ್ಲಿರುವ ಬಪ್ಪುರಾಯ ಸ್ವಾಮಿ ದೇವರಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಇಲ್ಲಿ ಪ್ರಾರ್ಥನೆ ಸಲ್ಲಿಸಿದರೆ ಮಳೆ ಸುರಿಯುತ್ತದೆ ಎನ್ನುವ ನಂಬಿಕೆ ಗ್ರಾಮಸ್ಥರದ್ದು. ಗ್ರಾಮದ ಪ್ರಗತಿ ಪರ ಕೃಷಿಕ ಹೆಚ್.ಎಸ್.ಮಹೇಶ್ ಮಾತನಾಡಿ ಈ ಬಾರಿಯ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ, ಬರ ಇಡೀ ನಾಡನ್ನು ಆವರಿಸಿದೆ. ನದಿ, ಕೆರೆ ಸೇರಿದಂತೆ ಕೊಳವೆ ಬಾವಿಗಳು ಬತ್ತಿವೆ. ಜೀವ ನದಿ ಕಾವೇರಿ ಸಂಪೂರ್ಣ ಒಣಗುತ್ತಿದೆ. ಹಾಗಾಗಿ ಮಳೆ ಸುರಿಸಿ ನಾಡಿನ ಜನರನ್ನು ಉದ್ಧರಿಸು ಎಂದು ಗ್ರಾಮದ ರೈತರು ಹಾಗೂ ಗ್ರಾಮಸ್ಥರೊಂದಿಗೆ ಮಳೆಯ ದೇವರನ್ನು ಪ್ರಾರ್ಥಿಸಿದ್ದಾಗಿ ಹೇಳಿದರು. ಮಹಾಪೂಜೆಯ ನಂತರ ಅನ್ನಸಂತರ್ಪಣೆಯಾಯಿತು. ಪೂಜಾ ಕೈಂಕರ್ಯದಲ್ಲಿ ಮರೂರು ಗ್ರಾಮಸ್ಥರು…

Read More

ಮಡಿಕೇರಿ ಏ.9 NEWS DESK : ಈದ್ ಉಲ್ ಫಿತರ್ ಹಬ್ಬದ ದಿನವಾದ ಏ.9 ರಂದು  ಮಡಿಕೇರಿಯ ಎಂ.ಎಂ ಮಸೀದಿಯಲ್ಲಿ ಬೆಳಿಗ್ಗೆ 8.30 ಗಂಟೆಗೆ ಧರ್ಮಗುರು ಅಬ್ದುಲ್ ಹಮೀದ್ ಮದನಿ ಅವರ ನೇತೃತ್ವದಲ್ಲಿ ಹಬ್ಬದ ವಿಶೇಷ ನಮಾಝ್ ನಡೆಯಲಿದೆ ಎಂದು ಮಸೀದಿಯ ಕಾರ್ಯದರ್ಶಿ  ಹಾಜಿ ಎಂ.ಎಂ. ಹಾರೂನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More