*ಸರ್ವರಿಗೂ ಶಾಂತಿ, ಸಮೃದ್ಧಿ ಸಿಗಲಿ, ಹಬ್ಬದ ಶುಭಾಯಗಳು*
ಲೇಖಕ: admin
*ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ*
*ಕನಸಿನ ನಿವೇಶನ ಖರೀದಿಸಿ ಯುಗಾದಿಯ ಹರುಷ ಅನುಭವಿಸಿ*
*ಸರ್ವರಿಗೂ ಸಂತೋಷ, ಸಮೃದ್ಧಿ ಸಿಗಲಿ* ಅನಿತಾ ಪೂವಯ್ಯ, ಅಧ್ಯಕ್ಷರು, ಮಡಿಕೇರಿ ನಗರಸಭೆ.
ಮಡಿಕೇರಿ ಏ.8 NEWS DESK : ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚಯ್ಯ ಅವರ ಕಾರ್ಯದರ್ಶಿಯಾಗಿದ್ದ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು. ಕುಶಾಲನಗರದ ಕಾರು ನಿಲ್ದಾಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಸಮ್ಮುಖದಲ್ಲಿ ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಚನ್ನಪಂಡ ದರ್ಶನ್, ಅಜ್ಜಮಕ್ಕಡ ನವೀನ್, ಸುಮಂತ್ ಪೂಜಾರಿ, ನಿತಿನ್ ಪೂಜಾರಿ, ತಂಬುಕುತ್ತಿರ ಮೊಣ್ಣಯ್ಯ, ಸಿ.ಡಿ.ಪ್ರಸಾದ್, ಕೆ.ಜಿ.ವಿನಯ್, ಕೆ.ಎಸ್.ರಕ್ಷಿತ್, ಕೆ.ಜೆ.ಹರ್ಷಿತ್, ಬಿ.ಇ.ಲೋಹಿತ್, ಕೆ.ಕೆ.ಗಿರೀಶ್, ಸಿ.ಎಂ.ಪ್ರಮೋದ್, ಎಸ್.ಎಸ್.ಅಕ್ಷಿತ್, ಎಂ.ಬಿ.ಆನಂದ್, ಪಿ.ಆರ್.ಚಂದ್ರಕಾಂತ್, ಸಿ.ಆರ್.ಬಿಪಿನ್, ಜಿ.ಕೆ.ಬೀನಾ, ಸಿ.ಎಸ್.ತೀರ್ಥ, ಶಿವಯ್ಯ, ವೀರನ್ ದೇವಯ್ಯ, ಕವನ್ ಕಾರ್ಯಪ್ಪ, ಶರೀಫ್, ಕೆ.ಕೆ.ಕೌಶಿಕ್, ಜಗದೀಶ್, ಹೃತಿಕ್, ವಂಸತ್, ರಾಜ, ಆನಂದ್, ಲೋಕೇಶ್, ರಂಜಿತ್, ಶಶಾಂಕ್, ಮಂಜು, ಅಜ್ಜಮಕ್ಕಡ ವಿನುಕುಶಾಲಪ್ಪ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಬೊಳ್ಳಜಿರ ಬಿ.ಅಯ್ಯಪ್ಪ ಅವರು, ಪ್ರಧಾನಮಂತ್ರಿ…
ಪುತ್ತೂರು ಏ.8 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಬಿಎ ವಿಭಾಗದ ಪ್ರೊ.ರಾಕೇಶ್.ಎಂ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಕ್ಯಾಪಿಟಲ್ ಸ್ಟ್ರಕ್ಚರ್ ಡಿಸಿಷನ್ಸ್ ಎ ಸ್ಟಡಿ ಆಫ್ ಇಂಡಿಯನ್ ಕಂಪೆನೀಸ್ (Capital structure decisions a study of indian companies) ಎನ್ನುವ ವಿಷಯದ ಬಗ್ಗೆ ಬಳ್ಳಾರಿಯ ಬಳ್ಳಾರಿ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್ಮೆಂಟ್ನ ಡಾ.ಜಾನೆಟ್ ಜ್ಯೋತಿ ಡಿ’ಸೋಜ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಮಾಡಿದ್ದಾರೆ. ಇವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು 14 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ. ಡಾ.ರಾಕೇಶ್.ಎಂ ಅವರ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.
ಮಡಿಕೇರಿ ಏ.8 NEWS DESK : ದೇಶಕ್ಕೆ ಮೋದಿ ಎಂಬ ಶಕ್ತಿ ಅನಿವಾರ್ಯ, ಈ ಶಕ್ತಿಗೆ ಪರ್ಯಾಯವೆಂಬ ಪದವೇ ಉದ್ಭವಿಸುವುದಿಲ್ಲ. ಚುನಾವಣಾ ಹಬ್ಬದಲ್ಲಿ ಕಮಲ ಅರಳುವುದು ಗ್ಯಾರಂಟಿ ಎಂಬುವುದು ಈಗಾಗಲೇ ಜಗಜ್ಜಾಹೀರಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು. ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಸೋಮವಾರಪೇಟೆಯ ಜೇಸೀ ವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆ ಯಾವತ್ತಿಗೂ ಬಿಜೆಪಿ ಭದ್ರಕೋಟೆ. ಸುಶಿಕ್ಷಿತ, ಬುದ್ದಿವಂತ ಮತದಾರರಿರುವ ಕೊಡಗಿನವರು ಉತ್ತಮ ಅಯ್ಕೆಯನ್ನೇ ಮಾಡಲಿದ್ದಾರೆ. ಮಾಹಿತಿ ತಂತ್ರಜ್ಞಾನದ ಬಗ್ಗೆ ಅಪಾರ ಜ್ಞಾನ ಹೊಂದಿರುವ ಸುಸಂಸ್ಕೃತ ಕುಟುಂಬದ ಹಿನ್ನೆಲೆಯುಳ್ಳ ಯದುವೀರ್ ಅವರು ಅತ್ಯಧಿಕ ಮತಗಳ ಅಂತರದಿಂದ ಜಯಗಳಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಮಾತನಾಡಿ, ಭವಿಷ್ಯದಲ್ಲಿ ಶ್ರೇಷ್ಠ ಭಾರತ ನಿರ್ಮಾಣ ಮೋದಿಯವರಿಂದ ಮಾತ್ರ ಸಾಧ್ಯ. ಇಂದು ದೇಶ ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರೆದಿದ್ದು, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲಾ…
ಮೈಸೂರು ಏ.8 NEWS DESK : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದ್ದ ಇಂದು (ಏ.8) ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, ಅಂತಿಮವಾಗಿ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ. ಇಂದು ಪಕ್ಷೇತರ ಅಭ್ಯರ್ಥಿಗಳಾದ ಆರ್. ಮಹೇಶ್, ಎಸ್.ದೊರೆಸ್ವಾಮಿ ನಾಯಕ, ರಾಜಣ್ಣ, ಶಿವನಂಜಯ್ಯ, ಶ್ರೀನಿವಾಸ್ ಬೋಗಾದಿ ಹಾಗೂ ಸಣ್ಣ ನಾಯಕ ಇವರುಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು: ಸುನಿಲ್ ಟಿ. ಆರ್ (ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷ), ಎಂ.ಎಸ್ ಪ್ರವೀಣ್ (ಕರ್ನಾಟಕ ರಾಷ್ಟ್ರ ಸಮಿತಿ), ಎ.ಎಸ್ ಸತೀಶ್ (ಅಖಿಲ ಭಾರತ ಹಿಂದೂ ಮಹಾ ಸಭಾ ), ಪಿ.ಎಸ್ ಯಡಿಯೂರಪ್ಪ (ಪಕ್ಷೇತರ ), ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ಭಾರತೀಯ ಜನತಾ ಪಕ್ಷ), ಹೆಚ್.ಕೆ ಕೃಷ್ಣ (ಕರುನಾಡು ಪಾರ್ಟಿ ),ಲೀಲಾವತಿ ಜೆ ಎಸ್ (ಉತ್ತಮ ಪ್ರಜಾಕೀಯ ಪಕ್ಷ), ರಂಗಸ್ವಾಮಿ ಎಂ (ಪಕ್ಷೇತರ ),…
ಮಡಿಕೇರಿ ಏ.8 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ಮರಗೋಡು ಫೀಡರ್ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವ ಹಿನ್ನೆಲೆ ಏ.10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮರಗೋಡು, ಹಾಕತ್ತೂರು, ಅರಪಟ್ಟು, ಪಾರಾಣೆ, ಕಾಂತೂರು, ಕೊಣಂಜಗೇರಿ, ಎಂ. ಬಾಡಗ, ಹೊದ್ದೂರು, ಚೆಯಂಡಾಣೆ, ಅರಪಟ್ಟು ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಅಭಿಯಂತರರು ಚೆಸ್ಕಾಂ ಕೋರಿದ್ದಾರೆ.
ಸುಂಟಿಕೊಪ್ಪ ಏ.8 NEWS DESK : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಏ.9 ರಂದು ಚಂದ್ರಮಾನ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಅಂದು ದೇವಾಲಯದಲ್ಲಿ ವಿಶೇಷ ಪೂಜೆ, ಪಂಚಾಂಗ ಶ್ರವಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಹಾಪೂಜೆಯ ಬಳಿಕ ಭಕ್ತಾಧಿಗಳಿಗೆ ಅನ್ನದಾನ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಏ.29 ರಂದು ದೇವಾಲಯದ ವಾರ್ಷಿಕೋತ್ಸವ ನಡೆಯಲಿದ್ದು, ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದೆ. ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ವಾರ್ಷಿಕೋತ್ಸವ ದ ಅಂಗವಾಗಿ ವಧ್ಯಾಹ್ನ ದೇವಾಲಯದ ತಕ್ಕರ ಮನೆಯಿಂದ ಭಂಡಾರ ತಂದು ದೇವಾಲಯದಲ್ಲಿ ಹಬ್ಬದ ವಿಧಿವಿಧಾನಗಳು ನಡೆಯಲಿದೆ. ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಏ.18 ರಂದು ದೇವಾಲಯದಲ್ಲಿ ಹಬ್ಬದ ಕಟ್ಟು ಬಿಳಲಿದೆ. ಏ.26 ರಂದು ಶ್ರೀ ಬಸವೇಶ್ವರ ದೇವರ ಉತ್ಸವವು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.






