ಮಡಿಕೇರಿ ಏ.7 NEWS DESK : ಬಿಜೆಪಿ ಯುವಮೋರ್ಚಾ ಮಡಿಕೇರಿ ಗ್ರಾಮಾಂತರ ಮಂಡಲದ ಮೊದಲ ಕಾರ್ಯಕಾರಿಣಿ ಸಭೆ ಪಕ್ಷದ ಕಚೇರಿಯಲ್ಲಿಮಂಡಲ ಯುವಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಯುವಮೋರ್ಚಾದ ನೂತನ ಪದಾಧಿಕಾರಿಗಳಿಗೆ ಅದೇಶಪತ್ರವನ್ನು ವಿತರಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಯಾವ ರೀತಿಯಾಗಿ ತೊಡಗಿಸಿಕೊಳ್ಳ ಬೇಕು ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಮೋರ್ಚಾದ ಸದಸ್ಯರ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಎಲ್ಲಾ ಶಕ್ತಿಕೇಂದ್ರ ಅಥವಾ ಬೂತ್ ಮಟ್ಟದಲ್ಲಿ ಯುವಮೋರ್ಚಾದ ತಂಡಗಳ ರಚನೆಗೆ ಸೂಚಿಸಲಾಯಿತು. ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನೋದ್ ಸಂಘಟನಾತ್ಮಕ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಯುವಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಮಜೀಕೊಡಿ ಸ್ವಾಗತಿಸಿದರು, ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ದರ್ಶನ್ ದಂಬೆಕೋಡಿ ವಂದಿಸಿದರು.
ಲೇಖಕ: admin
ಮಡಿಕೇರಿ ಏ.7 NEWS DESK : ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏ.4ರಂದು ವ್ಯಕ್ತಿಯೋರ್ವರನ್ನು ಅಪಹರಿಸಿ ಚಿನ್ನಾಭರಣ ಮತ್ತು ನಗದು ದೋಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ. ಮೈಸೂರು ರಾಜೀವ್ ನಗರ 2ನೇ ಹಂತದ ನಿವಾಸಿ ಯಾಸಿನ್(21), ಶ್ರೀರಾಮ್ಪುರ ನಿವಾಸಿ ರುಕ್ಸಾನ(23), ಗೌಸಿಯ ನಗರ ರಿಯಾಜ್ ಜಿನ್ನಾ ಮಸೀದಿ ಸಮೀಪದ ನಿವಾಸಿ ಸಹಬಾಜ್(28), ಗೌಸಿಯ ನಗರ 10ನೇ ಕ್ರಾಸ್ ನಿವಾಸಿ ಅಬ್ದುಲ್(21) ರೇಣುಕಾ ದೇವಿ ಬ್ಲಾಕ್, 3ನೇ ಕ್ರಾಸ್, ಗೌಸಿಯ ನಗರದ ಸುಹೇಲ್ ಅಹಮ್ಮದ್(30), ಪಿರಿಯಾಪಟ್ಟಣ ನಿವಾಸಿ ಯಾಸಿನ್(23), ಗೌಸಿಯಾ ನಗರದ ಪೈಜಲ್ ಖಾನ್(23), ಮೈಸೂರು ರಾಜೀವ್ ನಗರ 3ನೇ ಹಂತದ ಮುದಾಸಿರ್(24) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ಗೌಸಿಯಾ ನಗರದ ಪಿಳ್ಳೆ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ::: ಅಪಹರಣ ಮತ್ತು ದರೋಡೆ :::…
ಮಡಿಕೇರಿ ಏ.7 NEWS DESK : ಕಾಂಗ್ರೆಸ್ ಎಲ್ಲೂ ಧರ್ಮಾಧಾರಿತ ರಾಜಕಾರಣ ಮಾಡುತ್ತಿಲ್ಲ, ಜನಸಾಮಾನ್ಯರ ಪರವಾದ ಕಾರ್ಯಕ್ರಮಗಳ ಮೂಲಕ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಿದಿದೆ. ಈ ಬಗ್ಗೆ ಜನ ಜಾಗೃತರಾಗಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕರ ನಿವಾಸದ ಆವರಣದಲ್ಲಿ ನಡೆದ ವಲಯ, ಬೂತ್ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಅಭಿವೃದ್ಧಿಪರ ಚಿಂತನೆಯ ರಾಜಕಾರಣ ಮಾಡಿದರೆ, ಬಿಜೆಪಿ ಧರ್ಮವನ್ನು ಆಧರಿಸಿ ರಾಜಕಾರಣ ಮಾಡಿ ಸಮಜದಲ್ಲಿ ಸಂಘರ್ಷವನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತದೆ ಎಂದು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದ ಐದು ಗ್ಯಾರಂಟಿಗಳನ್ನು ಜನ ಮೆಚ್ಚಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಮತದಾರರು ನಮ್ಮ ಕೈಹಿಡಿಯಲಿದ್ದಾರೆ. ಆದರೆ ಕಾಂಗ್ರೆಸ್ಸಿಗರು ಮೈಮರೆಯಬಾರದು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಗೆಲುವಿಗಾಗಿ ಪರಿಶ್ರಮ ಪಡಬೇಕು.…
ಮಡಿಕೇರಿ ಏ.7 NEWS DESK : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ತಡೆಯಲಾಗದ ಉಷ್ಣಾಂಶದಿಂದ ಜನ ತತ್ತರಿಸಿ ಹೋಗಿದ್ದು, ಇಂದು ಜಿಲ್ಲೆಯ ವಿವಿಧೆಡೆ ಸುರಿದ ಹೂಮಳೆ ಕೊಂಚ ನೆಮ್ಮದಿಯನ್ನು ತಂದಿದೆ. ಅತಿಹೆಚ್ಚು ವರ್ಷಧಾರೆಯಾಗುವ ಭಾಗಮಂಡಲದಲ್ಲಿ ವರ್ಷದ ಮೊದಲ ಮಳೆ ಇಂದು ಸುರಿಯಿತು. ಚೇರಂಬಾಣೆ, ನಾಪೋಕ್ಲು, ಎಮ್ಮೆಮಾಡು, ನೆಲಜಿ, ಕಾರುಗುಂದ, ಕಡಿಯತ್ತೂರು ಸುತ್ತಮುತ್ತಲ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ. ::: ಪೂಜೆ ::: ಕಾವೇರಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಉಷ್ಣಾಂಶ ಮಿತಿ ಮೀರುತ್ತಿರುವುದರಿಂದ ನದಿ ಮತ್ತು ಜಲಮೂಲಗಳು ಬತ್ತಿ ಹೋಗಿವೆ. ಗಿಡಮರಗಳು ಒಣಗಲು ಆರಂಭಗೊಂಡಿವೆ, ಕೃಷಿ ಫಸಲಿಗೆ ಹಾನಿಯಾಗಿದೆ. ಪರಿಸ್ಥಿತಿ ಕೈಮೀರುತ್ತಿರುವುದರಿಂದ ಕೊಡಗಿನ ಮಳೆ ದೇವರೆಂದೇ ನಂಬಿಕೊಂಡು ಬಂದಿರುವ ಪಾಡಿ ಶ್ರೀಇಗ್ಗುತ್ತಪ್ಪನಿಗೆ ಏ.8 ರಂದು ಸ್ಥಳೀಯ ಭಕ್ತಜನ ಸಂಘ ಹಾಗೂ ಭಕ್ತರು ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ, ಅಭಿಷೇಕ ಅರ್ಪಿಸಲಿದ್ದಾರೆ.
ಮಡಿಕೇರಿ ಏ.7 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಿಧಾನವಾಗಿ ಲೋಕಸಭಾ ಚುನಾವಣೆ ಕಾವೇರುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿರುವುದರಿಂದ ಎಂ.ಲಕ್ಷ್ಮಣ್ ಗೌಡ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಸ್ವತ: ಮುಖ್ಯಮಂತ್ರಿಗಳು ಏ.14 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಮತ್ತು ಸಂಜೆ 4 ಗಂಟೆಗೆ ವಿರಾಜಪೇಟೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳು ಹಾಗೂ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರುಗಳು ಹಾಜರಿರುವರು ಎಂದು ಕಾಂಗ್ರೆಸ್ ಪ್ರಮುಖರು ತಿಳಿಸಿದ್ದಾರೆ.
ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯ ಮತದಾನವು ಇದೇ ಏ.26ರಂದು ನಡೆಯಲಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವಿಗೆ ಪ್ರತಿ ಮತಗಟ್ಟೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬಿಎಲ್ಎ ಗಳು, ಡೆಲಿಗೇಟರ್ಗಳು, ವಲಯ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರುಗಳು ಶಕ್ತಿಮೀರಿ ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಕರೆ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರುಗಳ, ಬಿಎಲ್ಎ ಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮಡಿಕೇರಿ ಬ್ಲಾಕಿನಲ್ಲಿ 72 ಮತಗಟ್ಟೆಗಳಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗಳಿಸಿದ ಮತಕ್ಕಿಂತ ಹೆಚ್ಚಿನ ಮತವನ್ನು ಪಡೆಯುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಹಾಗೂ ಸರ್ಕಾರ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತಯಾಚಿಸಬೇಕೆಂದರು.…
ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದರಿಂದ ಹತಾಶೆಗೊಂಡಿರುವ ವಿರಾಜಪೇಟೆ ಕ್ಷೇತ್ರದ ಶಾಸಕರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಜನರ ಕೈಗೆ ಸಿಗುವುದಿಲ್ಲವೆಂದು ಹೇಳಿಕೆ ನೀಡುವ ಮೂಲಕ ಮತದಾರರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ರಾಜಪ್ರಭುತ್ವ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯದುವೀರ್ ಅವರು ಒಬ್ಬ ಸಾಮಾನ್ಯ ವ್ಯಕ್ತಿ ಮತ್ತು ಈಗ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಒಡೆಯರ್ ವಂಶಸ್ಥರಾಗಿ ಹಾಗೂ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರ ಸಂಕಷ್ಟದ ಬದುಕನ್ನು ಬಹಳ ಹತ್ತಿರದಿಂದ ಬಲ್ಲವರಾಗಿದ್ದಾರೆ ಎಂದು ತಿಳಿಸಿದ್ದಾರೆ. ರಾಜವಂಶಸ್ಥರು ಅರಮನೆಯಲ್ಲಿದ್ದುಕೊಂಡೇ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದ ಉದಾಹರಣೆಗಳು ಇತಿಹಾಸದ ಪುಟಗಳಲ್ಲಿದೆ. ರಾಜ್ಯದ ರೈತರು ಹಾಗೂ ಜನರಿಗಾಗಿ ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಕೆಆರ್ಎಸ್ ಅಣೆಕಟ್ಟು ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಜನರು ಇಂದಿಗೂ ಇದೆಲ್ಲವನ್ನು ಮರೆತಿಲ್ಲ,…
ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಪರ ಏ.8ರಂದು ಸೋಮವಾರಪೇಟೆ ಮಂಡಲದ ವಿವಿಧ ಭಾಗಗಳಲ್ಲಿ ಬಹಿರಂಗ ಪ್ರಚಾರ ಸಭೆ ನಡೆಯಲಿದೆ ಎಂದು ಬಿಜೆಪಿ ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಹಾಗೂ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಾದಾಪುರ, 10 ಗಂಟೆಗೆ ಸುಂಟಿಕೊಪ್ಪ, 11.30 ಗಂಟೆಗೆ ಸೋಮವಾರಪೇಟೆ, ಮಧ್ಯಾಹ್ನ 2 ಗಂಟೆಗೆ ಶನಿವಾರಸಂತೆ, 3 ಗಂಟೆಗೆ ಕೊಡ್ಲಿಪೇಟೆ, ಸಂಜೆ 4 ಗಂಟೆಗೆ ಆಲೂರು ಸಿದ್ದಾಪುರ, 5 ಗಂಟೆಗೆ ಹೆಬ್ಬಾಲೆ, 6 ಗಂಟೆಗೆ ಕುಶಾಲನಗರ ಹಾಗೂ 7 ಗಂಟೆಗೆ ನೆಲ್ಯಹುದುಕೇರಿಯಲ್ಲಿ ಬಹಿರಂಗ ಪ್ರಚಾರ ಸಭೆ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅಭ್ಯರ್ಥಿ ಯದುವೀರ್ ಒಡೆಯರ್, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ ಗೌಡ, ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ,…
ಮಡಿಕೇರಿ ಏ.7 NEWS DESK : ಗಾಂಧೀಜಿ ಅನುಯಾಯಿಯಾಗುವುದು ಸುಲಭವಲ್ಲದ ದಿನಗಳಲ್ಲಿ ಗಾಂಧೀಜಿ ತತ್ವಾದಶ೯ಗಳನ್ನು ಜೀವನದಲ್ಲಿ ಹಾಸುಹೊಕ್ಕಾಗಿಸಿ ಸರಳವಾಗಿ ಆದಶ೯ಪ್ರಾಯವಾಗಿ ಬದುಕಿದ ಹಿರಿಮೆ ಕೂತಂಡ ಪಾವ೯ತಿ ಪೂವಯ್ಯ ಅವರಿಗೆ ಸಲ್ಲಬೇಕೆಂದು ಹಿರಿಯ ಪತ್ರಕತ೯ ಕೆ.ಬಿ.ಗಣಪತಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಭಾರತೀಯ ವಿದ್ಯಾಭವನದಲ್ಲಿ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ವತಿಯಿಂದ ಆಯೋಜಿತ ಕೂತಂಡ ಪಾವ೯ತಿ ಪೂವಯ್ಯ ಅವರ ಕುರಿತಾದ ಅವ್ವ ಪುಸ್ತಕ ಲೋಕಾಪ೯ಣೆಗೊಳಿಸಿ ಮಾತನಾಡಿದ ಕೆ.ಬಿ.ಗಣಪತಿ, ಪಂದ್ಯಂಡ ಗಣಪತಿಯವರು ಅಂದಿನ ಕಾಲದಲ್ಲಿ ಕೊಡಗಿನ ಗಾಂಧಿ ಎಂದು ಖ್ಯಾತರಾಗಿದ್ದರೆ ಕೂತಂಡ ಪೂವ೯ತಿ ಪೂವಯ್ಯ ಅವರು ಕೊಡಗಿನ ಸರೋಜಿನಿ ನಾಯ್ದು ಎಂದು ಹೆಸರುವಾಸಿಯಾಗಿದ್ದರು ಎಂದು ಸ್ಮರಿಸಿಕೊಂಡರು. ಕೂತಂಡ ಪಾವ೯ತಿ ಅವರನ್ನು ಪ್ರತ್ಯಕ್ಷ ಕಂಡವುರು ಕೆಲವೇ ಕೆಲವರಾದರೂ ಪಾವ೯ತಿ ಅವರ ಜೀವನಾದಶ೯ಗಳನ್ನು ಅರಿತವರು ಅನೇಕರಿದ್ದಾರೆ. ತನ್ನ ಬರವಣಿಗೆ ಮೂಲಕ ಕೊಡವರಂಥ ಸಣ್ಣ ಸಮುದಾಯವನ್ನು ಭಾರತಾದ್ಯಂತ ಪ್ರಚುರಪಡಿಸಿದ ಕೀತಿ೯ ಅಂದಿನ ಕಾಲದ ಅಗ್ರ ಮಹಿಳಾ ಲೇಖಕಿಯಾಗಿದ್ದ ಪಾವ೯ತಿ ಪೂವಯ್ಯನವರಿಗೆ ಸಲ್ಲುತ್ತದೆ ಎಂದು ಗಣಪತಿ ಶ್ಲಾಘಿಸಿದರು. ಕೊಡವ, ಕನ್ನಡ, ಇಂಗ್ಲೀಷ್ ಭಾಷೆಯಲ್ಲಿ…
NEWS DESK : ಶೋಭಕೃತ್ ನಾಮಸಂವತ್ಸರದ ಪಾಲ್ಗುಣ ಮಾಸದ ಕೊನೆಯ ಅಮಾವಾಸ್ಯೆಯಂದು ಅತ್ಯಂತ ಕಠೋರವಾದ ಸೂರ್ಯನ ಮೈತುಂಬಾ ಕತ್ತಲೆ ವ್ಯಾಪಿಸುವ ವರ್ಷದ ಮೊದಲ ಸೂರ್ಯಗ್ರಹಣ 2024 ಏಪ್ರಿಲ್ 8 ರಂದು ಸೋಮವಾರ ಸಂಭವಿಸಲಿದೆ. ಈ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ, ಉತ್ತರ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊ ದೇಶಗಳಲ್ಲಿ ಸ್ಪಷ್ಟವಾಗಿ ಗೋಚರಿಸಲಿದೆ. ಗ್ರಹಣ ಸಂಭವಿಸುವ ಸಮಯ ಭಾರತದ ಕಾಲಮಾನದಲ್ಲಿ ಸೋಮವಾರ ರಾತ್ರಿ 9:13 ಗಂಟೆಯಿಂದ ರಿಂದ 2.22 ವರೆಗೆ. ಭಾರತ ದೇಶದಲ್ಲಿ ಗ್ರಹಣ ಗೋಚರಿಸದೆ ಇದ್ದರೂ ಕೆಲವು ರಾಶಿ, ನಕ್ಷತ್ರಗಳ ಮೇಲೆ ಗ್ರಹಣ ಪರಿಣಾಮ ಬೀರಲಿದೆ. ಗ್ರಹಣದ ದಿನ ರೇವತಿ ನಕ್ಷತ್ರವಿದ್ದು, ರೇವತಿ ನಕ್ಷತ್ರ ಮೀನ ರಾಶಿಯವರಿಗೆ ಶನಿಬಾಧಕವು ಹೆಚ್ಚಾಗಲಿದೆ. ಬಂಧು ಕಲಹ, ಪ್ರಯಾಣದಲ್ಲಿ ಅಡೆತಡೆ, ವ್ಯವಹಾರದಲ್ಲಿ ನಷ್ಟ, ಮಾನಸಿಕ ವೇದನೆ ಆಗಲಿದೆ. ವೃಶ್ಚಿಕ ಲಗ್ನದಲ್ಲಿ ಗ್ರಹಣ ಸ್ಪರ್ಶವಾಗುವುದರಿಂದ ವೃಶ್ಚಿಕ ರಾಶಿಯವರಿಗೆ ವಿವಿಧ ಕ್ಷೇತ್ರದಲ್ಲಿ ಹಿನ್ನಡೆಯಾಗಲಿದೆ. ಮಾನಸಿಕ ವೇದನೆ ಎದುರಾಗಲಿದೆ, ಮನಸ್ತಾಪದಿಂದ ಆತ್ಮೀಯರು ದೂರವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಸಾಲಗಾರರ ಒತ್ತಡ ಹೆಚ್ಚಲಿದೆ. ಈ…






