ಲೇಖಕ: admin

ಮಡಿಕೇರಿ ಏ.6 NEWS DESK : ರಾಜ್ಯದಲ್ಲಿ ಬಿಜೆಪಿ ಮತ್ತು ಜಾತ್ಯಾತೀತ ಜನತಾ ದಳ ಮೈತ್ರಿ ಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಕೊಡಗಿನಲ್ಲಿ ಕೂಡ ಎರಡು ಪಕ್ಷದ ಮೈತ್ರಿ ಸಭೆ ಮಡಿಕೇರಿ ಯಲ್ಲಿ ನಡೆಯಿತು. ಸಭೆ ಯಲ್ಲಿ ಮುಂದಿನ ಲೋಕ ಸಭಾ ಚುನಾವಣೆ ಯನ್ನು ಜಂಟಿ ಯಾಗಿ ಎದುರುಸುವ ತೀರ್ಮಾನ ವನ್ನು ಮಾಡಲಾಯಿತು. ಈ ನಿಟ್ಟಿನಲ್ಲಿ ಕಾರ್ಯ ತಂತ್ರ ರೂಪಿಸುವಂತೆ ಚರ್ಚೆ ನಡೆಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಾತ್ಯಾತೀತ ಜನತಾ ದಳದ ಕೋರ್ ಕಮಿಟಿ ಸದಸ್ಯರಾದ ಟಿ.ಎಲ್.ವಿಶ್ವ,  ಪ್ರವೀಣ್,  ಬಿಜೆಪಿ ಜಿಲ್ಲಾ ಪ್ರಧಾನ  ಕಾರ್ಯದರ್ಶಿಮಹೇಶ್ ಜೈನಿ, ವಿ.ಕೆ.ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಹಾಗೂ ಎರಡು ಪಕ್ಷದ ಪ್ರಮುಖರಾದ ಪಾಣ್ ತಲೆ ವಿಶ್ವ ನಾಥ್, ನಾಗರಾಜ್, ಅನಿತಾ ಪೂವಯ್ಯ, ಕನ್ನಿಕೆ, ಮನು ಮಂಜುನಾಥ್, ಪುಷ್ಪವತಿ, ಗೌತಮ್ , ಕವನ್ ಕಾವೇರಪ್ಪ, ಮಂಜುನಾಥ್, ಶಿವದಾಸ್, ಜಾಶಿರ್, ಸುರೇಶ್, ರವಿ ಮೊಗೇರ ಸೇರಿದಂತೆ ಎರಡು…

Read More

ಮಡಿಕೇರಿ ಏ.6 NEWS DESK : ವಿಶ್ವ ಆರೋಗ್ಯ ದಿನದ ಪ್ರಯುಕ್ತ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನಗರದ ರಾಜಸೀಟ್ ಮುಂಭಾಗದಲ್ಲಿ ಬೀದಿ ನಾಟಕ ನಡೆಯಿತು. ಈ ಬೀದಿನಾಟಕದಲ್ಲಿ ಕಡ್ಡಿಪುಡಿ ಹಾಕಿ ಗಂಟಲಿನ ಕ್ಯಾನ್ಸರ್, ಮದ್ಯಪಾನ ಮತ್ತು ಧೂಮಪಾನದಿಂದ ಹೃದಯಾಘಾತ ಹಾಗೂ ಧೂಮಪಾನದ ಹೊಗೆಯ ಪ್ರಭಾವದಲ್ಲಿರುವ, ಚಟ ಇಲ್ಲದವರಿಗೂ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಪ್ರಾಂಶುಪಾಲರಾದ ಡಾ.ನರಸಿಂಹ ರೈ, ವೈದ್ಯಕೀಯ ಅಧೀಕ್ಷಕರಾದ ಡಾ.ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ ಈ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಬೀದಿ ನಾಟಕವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೊದಲನೆಯ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು, ಕಿವಿ, ಮೂಗು ಗಂಟಲಿನ ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತ ಅವರು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೊಡಗು ವೈದ್ಯಕೀಯ…

Read More

ಮಡಿಕೇರಿ ಏ.6 NEWS DESK : ಲೋಕಸಭಾ ಚುನಾವಣೆಯ ಮತದಾನವು ಇದೇ ಏ.26ರಂದು ನಡೆಯಲಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವಿಗೆ ಪ್ರತಿ ಮತಗಟ್ಟೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬಿಎಲ್‍ಎ ಗಳು, ಡೆಲಿಗೇಟರ್‍ಗಳು, ವಲಯ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರುಗಳು ಶಕ್ತಿ ಮೀರಿ ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಕರೆ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರುಗಳ, ಬಿಎಲ್‍ಎ ಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಡಿಕೇರಿ ಬ್ಲಾಕಿನಲ್ಲಿ 72 ಮತಗಟ್ಟೆಗಳಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗಳಿಸಿದ ಮತಕ್ಕಿಂತ ಹೆಚ್ಚಿನ ಮತವನ್ನು ಪಡೆಯುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಹಾಗೂ ಸರ್ಕಾರ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್…

Read More

ಮಡಿಕೇರಿ ಏ.6 NEWS DESK : ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆಯಾಗಿ ಕರ್ತಂಡ ಶೈಲಾ ಕುಟ್ಟಪ್ಪ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಆದೇಶದ ಮೇರೆಗೆ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್ ಅವರು ಶೈಲಾ ಕುಟ್ಟಪ್ಪ ಅವರನ್ನು ನೇಮಕ ಮಾಡಿ ಪಕ್ಷದ ಮಹಿಳಾ ಘಟಕವನ್ನು ಸಂಘಟಿಸಲು ಸೂಚನೆ ನೀಡಿದ್ದಾರೆ.

Read More

ಮಡಿಕೇರಿ ಏ.6 NEWS DESK : ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಗಳ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಉಲ್ಭಣಗೊಳ್ಳದಂತೆ ತೆಗೆದುಕೊಳ್ಳಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳು: ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟೆಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ ಮಾಹಿತಿ ಕಲೆ ಹಾಕಿ, ಎಲ್ಲಾ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ…

Read More

ಮಡಿಕೇರಿ ಏ.6 NEWS DESK : ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್‍ವೇವ್ (ಶಾಖದ ಹೊಡೆತ) ಸ್ಟ್ರೋಕ್‍ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಲಹೆಗಳನ್ನು ನೀಡಿದೆ. ಬೇಸಿಗೆಯಲ್ಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ಅನುಸರಿಸಬೇಕಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್‍ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಹಾಗೂ ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು…

Read More

ಪುತ್ತೂರು NEWS DESK ಏ.6 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಮೇದಿನೀ ಟೆಕ್ನಾಲಜೀಸ್ ಬೆಂಗಳೂರು ಇದರ ಸಹಯೋಗದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಂಶೋಧನಾ ನಿರತರಿಗೆ ಹಾಗೂ ವೃತ್ತಿಪರರಿಗೆ ಅನುಕೂಲವಾಗುವ ರೀತಿಯಲ್ಲಿ ತಂತ್ರಜ್ಞಾನಗಳ ಬದಲಾವಣೆ, ನೂತನ ಸಾಫ್ಟ್ವೇರ್‌ಗಳ ಬಳಕೆಯ ಬಗ್ಗೆ ಮಾಹಿತಿ, ವೃತ್ತಿಪರರಿಗೆ ಹೊಸ ಸಾಫ್ಟ್ವೇರ್‌ಗಳ ಮೂಲಕ ಮಾಡೆಲ್‌ಗಳ ರಚನೆ, ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಗಳನ್ನು ಮಾಡುವುದಕ್ಕೆ ಸೂಕ್ತ ಮಾರ್ಗದರ್ಶನ ಇವೇ ಮುಂತಾದ ವಿಷಯಗಳ ಬಗ್ಗೆ ಪರಸ್ಪರ ಸಹಕಾರದ ಬಗ್ಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿವಿಧ ವಲಯಗಳಲ್ಲಿ ಇಂತಹ ಕೇಂದ್ರವನ್ನು ತೆರೆದಿದ್ದು ಮಂಗಳೂರು ವಲಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ತೆರೆಯಲಾಗಿದೆ. ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರ ಸಮ್ಮುಖದಲ್ಲಿ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಹಾಗೂ ಮೇದಿನಿ ಸಂಸ್ಥೆಯ…

Read More

ಮಡಿಕೇರಿ ಏ.6 NEWS DESK : ಲೋಕಸಭಾ ಚುನಾವಣಾ ಸಂಬಂಧ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಭದ್ರತಾ ಕೊಠಡಿ ಮತ್ತು ಮತಗಟ್ಟೆ ಅಧಿಕಾರಿಗಳಿಗೆ ನೀಡುವ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ, ಪರಿಶೀಲಿಸಿದರು. ತಾಲೂಕು ಕಚೇರಿಯಲ್ಲಿ ಚುನಾವಣೆ ಕರ್ತವ್ಯದ ಬಗ್ಗೆ ಕೈಕೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ  ಪರಿಶೀಲನೆ ನಡೆಸಿದರು. ಅಲ್ಲದೇ ತಾಲೂಕು ಕಚೇರಿ ರೆಕಾರ್ಡ್ ಶಾಖೆಯಲ್ಲಿ ನಡೆಯುತ್ತಿರುವ ಕಡತಗಳ ಡಿಜಿಟಲೀಕರಣ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ತಹಶಿಲ್ದಾರರಾದ ರಾಮಚಂದ್ರ ಹಾಗೂ ಇತರರು ಇದ್ದರು.

Read More

ಮಡಿಕೇರಿ ಏ.6 NEWS DESK : ನಗರದ ಕೊಡಗು ವಿದ್ಯಾಲಯ ಶಾಲೆಯಲ್ಲಿ ಯು ಕೆ ಜಿ ಮಕ್ಕಳಿಗೆ ಪದವಿ ಪ್ರದಾನ ಸಮಾರಂಭ ಜರುಗಿತು. ಸುಂಟಿಕೊಪ್ಪದ ಶಾಂತಿ ಭವನ್ ನರ್ಸರಿ ಶಾಲೆಯ ಸಂಸ್ಥಾಪಕಿ ಲಿಂಡಾ ಸಿಂಗಮ್ ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಸಣ್ಣ ಮಕ್ಕಳು ಉದ್ಯಾನವನದಲ್ಲಿ ಇರುವ ಹೂವಿನ ಹಾಗೆ, ಪುಪ್ಪ ಸಸಿಯಲ್ಲಿರುವ ಮೊಗ್ಗು ಎಷ್ಟು ಸುಂದರವಾದ ಹೂವಾಗಿ ಅರಳುತ್ತದೋ,, ಅದೇ ರೀತಿ ಸುಂದರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಗೆ ತಾಳ್ಮೆ ಮುಖ್ಯ ಎಂದು ಪೋಷಕರಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಕೆ.ಎಸ್.ಸುಮಿತ್ರ, ಆಡಳಿತ ನಿರ್ವಹಣಾಧಿಕಾರಿ ಪಿ.ರವಿ, ಆಡಳಿತ ಮಂಡಳಿ ಸದಸ್ಯ ಸಿ.ಎಸ್.ಗುರುದತ್ತ್, ಹಿರಿಯ ವಕೀಲರು ಹಾಗೂ ಶಾಲೆಯ ಕಾನೂನು ಸಲಹೆಗಾರ ಡಿ.ಜಿ.ಕಿಶೋರ್, ಪೋಷಕರು, ಬೋಧಕ ಹಾಗೂ ಬೋಧಕೇತರ ವರ್ಗದವರು ಪಾಲ್ಗೊಂಡಿದ್ದರು. ಪ್ಲೆ ಹೋಮ್, ಎಲ್ ಕೆ ಜಿ, ಯು ಕೆ ಜಿ ಹಾಗೂ ಒಂದನೇ ತರಗತಿಯ ಪುಟಾಣಿ ಮಕ್ಕಳಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನೆರೆದಿದ್ದ…

Read More

ಮಡಿಕೇರಿ ಏ.6 NEWS DESK :   ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಡಾ.ಮಮತಾ ಕೇಶವ್ ಅವರು ಬಿಜೆಪಿ ವೃತ್ತಿಪರ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ತಳಮಟ್ಟದಲ್ಲಿ ಪಕ್ಷ ಸಂಘಟನೆಗೊಳಿಸಿ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಮತ್ತು ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ವೃತ್ತಿಪರ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿರಣ್‍ಕುಮಾರ್ ಅಣ್ಣೇಗೇರಿ ತಿಳಿಸಿದ್ದಾರೆ. ಮಮತಾ ಕೇಶವ್ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇವರ ಸೇವಾ ಮನೋಭಾವವನ್ನು ಗುರುತಿಸಿ ಹೊಸುರು ಏಷ್ಯಾ ಕಲ್ಚರಲ್ ಯೂನಿವರ್ಸಿಟಿ‌  ಗೌರವ‌ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಲ್ಲದೆ  ದೆಹಲಿಯಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ , ಹೃದಯ ವಾಹಿನಿ ಲಯನ್ಸ್ ಇಂಟರ್ ನ್ಯಾಷನಲ್ ಅವರಿಂದ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಗ್ಲೋಬಲ್ ಮೆನ್ ಅವಾರ್ಡ್,  ಅಂತರಾಷ್ಟ್ರೀಯ ಸಾಧನೆ ಐಕಾನ್ ಪ್ರಶಸ್ತಿ ,…

Read More