ಮಡಿಕೇರಿ ಏ.4 NEWS DESK : ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಂಡದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ಮೂವೆರ ಜಯರಾಂ ಹಾಜರಿದ್ದರು.
ಲೇಖಕ: admin
ಮಡಿಕೇರಿ ಏ.4 NEWS DESK : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ನಿರ್ಣಯ ಹಾಗೂ ಎಸ್ಟಿ ಟ್ಯಾಗ್ ಕುರಿತು ಎರಡು ರಾಷ್ಟ್ರೀಯ ರಾಜಕೀಯ ಪಕ್ಷಗಳ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಭರವಸೆ ನೀಡುವ ಮೂಲಕ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಲೋಕದ ಅದಮ್ಯ ಧ್ವನಿ ಹಾಗೂ ಆದಿಮಸಂಜಾತ ಕೊಡವರ ಸಾಮಾಜಿಕ-ಭೂ ರಾಜಕೀಯ ಮತ್ತು ಜನಾಂಗೀಯ-ಸಾಂಸ್ಕೃತಿಕ ಸಂಘಟನೆಯಾದ ಸಿಎನ್ಸಿ, ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ನಿರ್ಣಯ, ಎಸ್ಟಿ ಟ್ಯಾಗ್ ಸೇರಿದಂತೆ ಪ್ರಧಾನ ಕೊಡವ ಕುಲ ಸಮಸ್ಯೆಗೆ ಸಂಬಂಧಿಸಿದ 10 ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟು ಕಳೆದ 34 ವರ್ಷಗಳಿಂದ ಶಾಂತಿಯುತ ಹೋರಾಟ ನಡೆಸುತ್ತಾ ಬಂದಿದೆ. ಇಲ್ಲಿಯವರೆಗೆ ಈಡೇರದ ಈ ಬೇಡಿಕೆಗಳ ಕುರಿತು ಅಭ್ಯರ್ಥಿಗಳು ತಮ್ಮ ಬದ್ಧತೆಯನ್ನು ಶುದ್ಧ ಅಂತ:ಕರಣದಿಂದ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ. ಕೊಡವ ಲ್ಯಾಂಡ್ಗಾಗಿ ನಮ್ಮ ಸಂವಿಧಾನದ ಆರ್ಟಿಕಲ್ 224(ಎ)…
ಮಡಿಕೇರಿ ಏ.4 NEWS DESK : ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಭಾರತೀಯ ಚುನಾವಣಾ ಆಯೋಗ ಜಿಲ್ಲಾಡಳಿತ ಕೊಡಗು ಜಿಲ್ಲೆ ಹಾಗೂ ಮಡಿಕೇರಿ ನಗರಸಭೆಯ ವತಿಯಿಂದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ರಂಗೋಲಿ ಮತ್ತು ಚಿತ್ರಕಲೆ ಸ್ಪರ್ಧೆ ನಡೆಯಿತು. ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಲೆಕ್ಕಾಧಿಕಾರಿಗಳಾದ ಜ಼ುವೆಲ್ ಖಾನ್ , ನಗರಸಭೆಯ ಪೌರಾಯುಕ್ತ ವಿಜಯ , ಎಇಇ ಸೌಮ್ಯ , ಕಂದಾಯ ಅಧಿಕಾರಿಗಳಾದ ಎಂ.ಎ.ತಾಹಿರ್ ಹಾಗೂ ಬೂತ್ ಮಟ್ಟದ ಅಧಿಕಾರಿಗಳು, ನಗರಸಭೆ ಸಿಬ್ಬಂದಿಗಳು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭ ಕಾಲೇಜಿನ ವತಿಯಿಂದ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಸಹ ಪ್ರಠ್ಯ ಚಟುವಟಿಕೆಯ ಸಂಯೋಜಕರಾದ ಡಾ.ರೇಣುಶ್ರೀ, ಕಾಲೇಜಿನ ಅಧ್ಯಾಪಕ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಮತದಾನ ಪ್ರತಿಜ್ಞಾವಿಧಿಯನ್ನು ನಗರಸಭೆಯ ಪೌರಾಯುಕ್ತ ವಿಜಯ ಬೋಧಿಸಿದರು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. :: ರಂಗೋಲಿ ಸ್ಪರ್ಧೆ ವಿಜೇತರು :: ಶಿವ – ದ್ವಿತೀಯ ಎಂ.ಕಾಂ…
ಮಡಿಕೇರಿ ಏ.4 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷರಾಗಿ ಕೊಡಂದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷರಾಗಿ ಕೇಟೋಳಿರ ಹರೀಶ್ ಪೂವಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಡಂದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇಟೋಳಿರ ಹರೀಶ್ ಪೂವಯ್ಯ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. 2ನೇ ಬಾರಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಾಂಡ್ ಗಣಪತಿ ಹಾಗೂ ಹರೀಶ್ ಪೂವಯ್ಯ ಅವರು ಅಧಿಕಾರ ಸ್ವೀಕರಿಸಿದರು. ಕಳೆದ 5 ವರ್ಷಗಳ ಆಡಳಿತಾವಧಿಯಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದೇನೆ. ಮುಂದಿನ ಅವಧಿಯಲ್ಲೂ ಬ್ಯಾಂಕ್ನ ನಿರ್ದೇಶಕರ ಸಲಹೆ ಸೂಚನೆಗಳೊಂದಿಗೆ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಡಿಸಿಸಿ ಬ್ಯಾಂಕ್ 103 ವರ್ಷ ಇತಿಹಾಸ ಹೊಂದಿದ್ದು, ಕಳೆದ 5 ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಬ್ಯಾಂಕ್ನ ನೂತನ ಕಟ್ಟಡ ನಿರ್ಮಾಣ, ಶತಮಾನೋತ್ಸವ ಆಚರಣೆ, ಸಾಲ ಮೇಳದಂತಹ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದರು. ಚುನಾವಣಾಧಿಕಾರಿಯಾದ ಉಪವಿಭಾಗಾಧಿಕಾರಿ…
ಮಡಿಕೇರಿ ಏ.4 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಅಧಿಕಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ, ವಿರಾಜಪೇಟೆ ಪುರಸಭೆ ಸಹಯೋಗದಲ್ಲಿ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು. ಮತದಾನದ ಕಾರ್ಯದಲ್ಲಿ ಹಬ್ಬದಂತೆ ಎಲ್ಲರೂ ಸಂಭ್ರಮಿಸಬೇಕು. ಈ ಹಬ್ಬದಲ್ಲಿ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಏ.26 ರಂದು ಮತದಾನ ಜರುಗಲಿದ್ದು, ತಾವೆಲ್ಲರೂ ಮತದಾರರ ಗುರುತಿನ ಚೀಟಿಯೊಂದಿಗೆ ಹಾಗೂ ಚುನಾವಣಾ ಆಯೋಗದ ಸೂಚಿಸಿದ ದಾಖಲೆಗಳೊಂದಿಗೆ ಮತದಾನ ಕೇಂದ್ರಕ್ಕೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಬೇಕು. ರಾಷ್ಟ್ರವು ತಮಗೆ ನೀಡಿದ ಮತದಾನದ ಹಕ್ಕನ್ನು ಅರ್ಹರಿಗೆ ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು. ತಾವು ಮತ ಚಲಾಯಿಸುವುದರೊಂದಿಗೆ ತಮ್ಮ ಕುಟುಂಬದ ಸದಸ್ಯರು ಹಾಗು ನೆರೆಹೊರೆಯವರನ್ನು ಮತ ಚಲಾಯಿಸಲು ಪ್ರೇರೇಪಿಸಬೇಕು ಎಂದು ಅರಿವು ಮೂಡಿಸಲಾಯಿತು. ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ…
ವಿರಾಜಪೇಟೆ ಏ.4 NEWS DESK : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣ ನಯನ ಸಭಾಂಗಣದಲ್ಲಿ ನಡೆದ ಶ್ರೀ ರಘುವೀರ್ ಕಲಾ ಸೇವಾ ಟ್ರಸ್ಟ್ನ ವತಿಯಿಂದ ಆಯೋಜಿಸಿದ್ದ ಪ್ರತಿಭೋತ್ಸವದಲ್ಲಿ ನಾಟ್ಯ ಮಯೂರಿ ನೃತ್ಯ ಶಾಲೆಯ ತಂಡಕ್ಕೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕ ಬಿ.ರಾಮಮೂರ್ತಿಯವರ ಹಲವಾರು ಚಲನಚಿತ್ರಗಳಲ್ಲಿ ನಟಿಸಿದ ನೀಲಕಂಠ ಅಡಿಗ, ಆಯೋಜಕರಾದ ಹ್ಯಾಟ್ರಿಕ್ ಸೂರ್ಯ ಮುಂತಾದ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.
ಮಡಿಕೇರಿ ಏ.4 NEWS DESK : ಕೊಡಗಿನ ಮಹಿಳಾ ಲೇಖಕಿಯರಲ್ಲಿ ಆದ್ಯ ಪ್ರವರ್ತಕರಲ್ಲೊಬ್ಬರಾದ ಕೂತಂಡ ಪಾರ್ವತಿ ಪೂವಯ್ಯ ನವರ ಕುರಿತ ಕೃತಿ ‘ಅವ್ವ’ ಏ.6 ರಂದು ಸಂಜೆ 6 ಗಂಟೆಗೆ ಮಡಿಕೇರಿಯ ಭಾರತೀಯ ವಿದ್ಯಾ ಭವನ ಕೊಡಗು ಕೇಂದ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ನಯನಾ ಕಶ್ಯಪ್, ಈ ಕೃತಿಯಲ್ಲಿ ಪಾರ್ವತಿ ಪೂವಯ್ಯನವರ ವ್ಯಕ್ತಿಚಿತ್ರ ಮತ್ತು ಕಥೆಗಳನ್ನು ಸಂಕಲಿಸಿ ಇಂಗ್ಲಿಷ್ ಗೆ ಅನುವಾದಿಸಿದ್ದಾರೆ. ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಸಂಪಾದಕ ಕೆ.ಬಿ.ಗಣಪತಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಭಾರತೀಯ ವಿದ್ಯಾ ಭವನದ ಪ್ರಮುಖ ಕೆ.ಎಸ್.ದೇವಯ್ಯ, ಡಾ.ಮನೋಹರ್ ಪಾಟ್ಕರ್, ಕೆ.ಪಿ.ಉತ್ತಪ್ಪ, ಬಾಲಾಜಿ ಕಶ್ಯಪ್ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಏ.4 NEWS DESK : ಕರ್ನಾಟಕ ಸಮಸ್ತ ಪ್ರಗತಿಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯಲ್ಲಿ ದೇಶ ಉಳಿಸಿ ಸಂಕಲ್ಪ ಯಾತ್ರೆ ನಡೆಯಿತು. ಏ.8ರ ವರೆಗೆ ನಡೆಯಲಿರುವ ದೇಶ ಉಳಿಸಿ ಸಂಕಲ್ಪ ಯಾತ್ರೆಯ ತಂಡವನ್ನು ನಗರದ ಸುದರ್ಶನ್ ವೃತದಲ್ಲಿ ಜಮಾಅತೆ ಇಸ್ಲಾಮೀ ಜಿಲ್ಲಾಧ್ಯಕ್ಷ ಅಬ್ದುಲ್ ರೆಹಮಾನ್, ಕಾರ್ಯದರ್ಶಿ ಮೊಹಮ್ಮದ್ ಮುಸ್ತಫಾ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮುಖಂಡ ಅಬ್ದುಲ್ ಗಪೂರ್, ನಗರ ಸಭಾ ಸದಸ್ಯರುಗಳಾದ ಅಮೀನ್ ಮೊಹ್ಸಿನ್, ಮನ್ಸೂರ್, ದಲಿತಪರ ಹೋರಾಟಗಾರ ನಿರ್ವಾಣಪ್ಪ, ಪ್ರಮುಖರಾದ ಹೇಮಂತ್, ಲಕ್ಷ್ಮಣ ಬರಮಾಡಿಕೊಂಡರು. ನಂತರ ನಗರದ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಿದರು. ಈ ಸಂದರ್ಭ ಯಾತ್ರೆಯ ಸಂಯೋಜಕ ಆರ್.ನಾಗೇಶ್ ಅರಳಕುಪ್ಪೆ, ಹಿರಿಯ ಸಾಹಿತಿ ಡಾ. ಮುಕುಂದ ರಾಜ್, ಸಮಾಜ ಸೇವಕ ಡಾ ರಮೆಶ್ ಬೆಲಂಕೊಂಡ ಹಾಜರಿದ್ದರು.
ಮಡಿಕೇರಿ ಏ.4 NEWS DESK : ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ಮಹಿಳಾ ಘಟಕದ ಕೊಡಗು ಜಿಲ್ಲಾಧ್ಯಕ್ಷರಾಗಿ ಮೀನಾಜ್ ಪ್ರವೀಣ್ ಆಯ್ಕೆಯಾಗಿದ್ದಾರೆ. ಐಎನ್ಟಿಯುಸಿ ರಾಜ್ಯಾಧ್ಯಕ್ಷ ಲಕ್ಷ್ಮೀ ವೆಂಕಟೇಶ್ ಅವರ ಸೂಚನೆ ಮೇರೆಗೆ ಮೀನಾಜ್ ಪ್ರವೀಣ್ ಅವರನ್ನು ನೇಮಕ ಮಾಡಿರುವುದಾಗಿ ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಬಿ.ಡಿ.ಅಣ್ಣಯ್ಯ ತಿಳಿಸಿದ್ದಾರೆ.
ಬೆಂಗಳೂರು ಏ.4 NEWS DESK : ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದಿದ್ದಾರೆ. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.






