ಲೇಖಕ: admin

ಮಡಿಕೇರಿ ಏ.4 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಚೆಕ್‍ಪೋಸ್ಟ್‍ಗಳನ್ನು ತೆರೆದು ಪ್ರತೀ ದಿನ ನಿರಂತರವಾಗಿ ವಾಹನಗಳ ತಪಾಸಣೆ ಕಾರ್ಯ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಕುಶಾಲನಗರ ಹಾಗೂ ಕೊಪ್ಪ ಚೆಕ್‍ಪೋಸ್ಟ್‍ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಚೆಕ್‍ಪೋಸ್ಟ್‍ನಲ್ಲಿ ನಡೆಸಲಾಗುವ ತಪಾಸಣೆ ಕುರಿತು ಪರಿಶೀಲಿಸಿ ಚೆಕ್‍ಪೋಸ್ಟ್ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ದಾಖಲೆಗಳಿಲ್ಲದೆ ನಗದು, ಸಾಮಗ್ರಿ, ಚಿನ್ನಾಭರಣ, ಮದ್ಯ ಹಾಗೂ ವಾಣಿಜ್ಯ ಸರಕುಗಳನ್ನು ವಾಹನಗಳಲ್ಲಿ ಸಾಗಾಟ ಮಾಡುವುದನ್ನು ಸರಿಯಾಗಿ ಪರಿಶೀಲನೆ ನಡೆಸಬೇಕು. ದಾಖಲೆ ರಹಿತ ಸಾಮಾಗ್ರಿಗಳು ಮತ್ತು ನಗದು ದೊರೆತರೆ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಚೆಕ್‍ಪೋಸ್ಟ್‍ನಲ್ಲಿ ಕಾರ್ಯನಿರತ ಅಧಿಕಾರಿ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಚೆಕ್‍ಪೋಸ್ಟ್ ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಕೆಲಹೊತ್ತು ತಾವೇ ಖುದ್ದಾಗಿ ತಪಾಸಣೆ ನಡೆಸುವ ಮೂಲಕ ಚೆಕ್‍ಪೋಸ್ಟ್ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿಗಳಿಗೆ ಮಾದರಿಯಾದರು.…

Read More

ಮಡಿಕೇರಿ ಏ.4 NEWS DESK : ವಯೋವೃದ್ಧರಿಗೆ ಆರೈಕೆ ಕೇಂದ್ರಗಳ ಸ್ಥಾಪನೆ ಮತ್ತು ಅಶಕ್ತರಿಗೆ ನೆರವಾಗುವ ಉದ್ದೇಶದಿಂದ ನೂತನವಾಗಿ ನೋಂದಾಯಿತ ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನ್ನು ಸ್ಥಾಪಿಸಿರುವುದಾಗಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ್ ಹೂಟಗಳ್ಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಟ್ರಸ್ಟ್ ನ ಟ್ರಸ್ಟಿಗಳಾಗಿ ಸುಂಟಿಕೊಪ್ಪದ ಏಳನೇ ಹೊಸಕೋಟೆಯ ಸೌಮ್ಯಶ್ರೀ, ಮಡಿಕೇರಿಯ ಕೆ.ಎಂ.ಚೇತನ್, ಮೈಸೂರಿನ ಲೇನರ್ಡ ಜೋಸೆಫ್ ಬ್ಯಾಸ್ಟೀನ್, ನಾಗೇಂದ್ರ.ಕೆ, ಗೌರವ ಅಧ್ಯಕ್ಷರಾಗಿ ಬಿಗ್ ಬಾಸ್ ಖ್ಯಾತಿಯ ಸ್ನೇಕ್ ಶ್ಯಾಮ್ ಹಾಗೂ ಕಾನೂನು ಘಟಕದ ಮುಖ್ಯಸ್ಥೆಯಾಗಿ ವಕೀಲರಾದ ಮೊನಾಲಿಸಾ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಮತ್ತು ಖಜಾಂಚಿ ಆಯ್ಕೆ ಪ್ರಕ್ರಿಯೆ ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಯಾಗಿದ್ದು, ಇದರ ಉದ್ದೇಶಗಳನ್ನು ಸರ್ಕಾರ ಮಾನ್ಯ ಮಾಡಿದೆ. ವಯಸ್ಸಾದ ವ್ಯಕ್ತಿಗಳಿಗೆ ಆರೈಕೆ ಕೇಂದ್ರಗಳನ್ನು ಸ್ಥಾಪಿಸುವುದು ಸಂಸ್ಥೆಯ ಮುಖ್ಯ ಯೋಜನೆಯಾಗಿದೆ. ಅನಾಥಾಶ್ರಮವನ್ನು ನಿರ್ಮಾಣ ಮಾಡಿ ಕಷ್ಟದ ಪರಿಸ್ಥಿತಿಯಲ್ಲಿರುವವರು ಹಾಗೂ ವಯಸ್ಸಾದ ವ್ಯಕ್ತಿಗಳಿಗೆ…

Read More

ನಾಪೋಕ್ಲು ಏ.5 NEWS DESK : ಕಾಡಾನೆ ದಾಳಿಯಿಂದ ಮೃತಪಟ್ಟ ಕುಂಜಿಲ ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ನಾಲಡಿ ಗ್ರಾಮದ ನಿವಾಸಿ ಕಂಬೆಯಂಡ ದೇವಯ್ಯ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರದ ಚೆಕ್ ವಿತರಿಸಲಾಯಿತು. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಸ್ಸೀನ್ ಬಾಷಾ, ಭಾಗಮಂಡಲ ವಲಯ ಅರಣ್ಯಾಧಿಕಾರಿ ಟಿ.ಎಂ.ರವೀಂದ್ರ, ಉಪವಲಯ ಅರಣ್ಯ ಅಧಿಕಾರಿ ಕಾಳೇಗೌಡ ಮೃತರ ಪತ್ನಿ ನಳಿನಿ, ಮಗ ಅಕ್ಷತ್ ಮುತ್ತಣ್ಣ ಅವರಿಗೆ 15 ಲಕ್ಷ ರೂಪಾಯಿಯ ಪರಿಹಾರದ ಚೆಕ್ ವಿತರಿಸಿ, ಮಾಸಿಕ 4000 ಪಿಂಚಣಿಯ ಸೌಲಭ್ಯ ಕಲ್ಪಿಸಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು  ಏ.4 : ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯಲ್ಲಿ ಪಾಲಚಂಡ ತಂಡವು ಭರ್ಜರಿ ಜಯಗಳಿಸಿತು. ಪಾಲಚಂಡ ತಂಡ ಬಿಜ್ಜಂಡ ತಂಡದ ವಿರುದ್ಧ 6-0 ಅಂತರದಿಂದ ಗೆಲುವು ಸಾಧಿಸಿ ಮುಂದಿನ ಸುತ್ತು ಪ್ರವೇಶಿಸಿತು. ನಂಬುಬುಡಮಂಡ ಮತ್ತು ಪೊನ್ನಾಲತಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ನಂಬುಡ ಮಂಡ ತಂಡ 3-1 ಅಂತರದಿಂದ ಗೆಲುವು ಸಾಧಿಸಿತು. ಮತ್ತೊಂದು ಪಂದ್ಯದಲ್ಲಿ ನಡಿಕೇರಿ ಯಂಡ ವಿರುದ್ಧ ವಾಟೇರಿರ 3 -0 ಅಂತರದ ಗೆಲುವು ಸಾಧಿಸಿತು .ಕೇಕಡ ಮತ್ತು ಕೂಪದಿರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಟೈ ಬ್ರೇಕರ್ ನಲ್ಲಿ ಕೂಪದಿರ 3-1 ಅಂತರದ ಗೆಲುವು ಸಾಧಿಸಿತು.,ಮೊಣ್ಣಂಡ ಆಪಟ್ಟಿರ ತಂಡದ ವಿರುದ್ಧ 3-0 ಜಯ ಸಾಧಿಸಿತು. ಅಮ್ಮನಕುಟ್ಟಂಡ ವಿರುದ್ಧ ಬೊಟ್ಟೋಳಂಡ ತಂಡ ,ಕಿರಿಯಮಾಡ ತಂಡದ ವಿರುದ್ಧ ಬೈರಟಿರ ತಂಡ ,ನೆಲ್ಲಿರ ವಿರುದ್ಧ ಕುಪ್ಪಣಮಾಡ, ಜಂಬಂಡ ವಿರುದ್ಧ ಚೊಟ್ಟೆಮಾಡ ಗೆಲುವು ಸಾಧಿಸಿ ಮುಂದಿನ ಸುತ್ತು ಪ್ರವೇಶಿಸಿದವು ಪಾಲೆಯಡ…

Read More

ನಾಪೋಕ್ಲು ಏ.4 NEWS DESK : ಕೊಡವ ಕೌಟುಂಬಿಕ ಬೊಟ್ಟೋಳಂಡ ಕಪ್ ಹಗ್ಗ ಜಗ್ಗಾಟ-2024 ಕ್ರೀಡೋತ್ಸವದ ಮೈದಾನ ತಯಾರಿಗೆ ಭೂಮಿ ಪೂಜೆ ನೆರವೇರಿತು. ಸ್ಥಳೀಯ ಕೆಪಿಎಸ್ ಶಾಲಾ ಆಟದ ಮೈದಾನ ದಲ್ಲಿ ಪೂಜಾ ವಿಧಿ ವಿಧಾನಗಳೊಂದಿಗೆ ಕ್ರೀಡಾ ಸಮಿತಿಯ ಪ್ರಮುಖರು ಹಾಗೂ ಕುಟುಂಬಸ್ಥರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಕ್ರೀಡಾ ಸಮಿತಿಯ ಅಧ್ಯಕ್ಷ ಬೊಟ್ಟೋಳoಡ ಗಣೇಶ್ ಮಾತನಾಡಿ, ಕ್ರೀಡಾಕೂಟವು ಏ.18 ರಿಂದ 23 ವರೆಗೆ ಆಯೋಜಿಸಲಾಗಿದೆ. ಎಲ್ಲರ ಸಹಕಾರದಿಂದ ಕೆಲಸ ಕಾರ್ಯಗಳು ಸಾಂಗವಾಗಿ ಜರುಗುತ್ತಿದೆ. ಈಗಾಗಲೇ 150 ತಂಡಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ನೊಂದಾವಣಿಗೆ ಬಾಕಿ ಉಳಿದವರು ಈ ತಿಂಗಳ 10 ರ ವರೆಗೆ ಸಮಯಾವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬಗಳು ನೋಂದಾಯಿಸಿ ಕ್ರೀಡೋತ್ಸವವನ್ನು ಯಶಸ್ಸಿಗೊಳಿಸಬೇಕೆಂದರು. ಕ್ರೀಡಾ ಸಮಿತಿ ಸಂಚಾಲಕ ಬೊಟ್ಟೋಳಂಡ ಮಿಟ್ಟು ಪೂಣಚ್ಚ ಪ್ರಾರ್ಥನೆ ಸಲ್ಲಿಸಿ, ಯಾವುದೇ ತರದ ವಿಘ್ನಗಳಿಲ್ಲದೇ ಸುಸೂತ್ರವಾಗಿ ಕ್ರೀಡಾಕೂಟವು ಜರುಗಲೆಂದು ಪ್ರಾರ್ಥಿಸಿದರು. ಪೂಜಾ ಕಾರ್ಯವನ್ನು ನಾಪೋಕ್ಲು ಶ್ರೀ ಭಗವತಿ ದೇವಾಲಯದ ಮುಖ್ಯ ಅರ್ಚಕ ಹರೀಶ್ ಭಟ್…

Read More

ನಾಪೋಕ್ಲು ಏ.4 NEWS DESK : ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ನೂತನ ಅಧ್ಯಕ್ಷರಾಗಿ ಕಲಿಯಂಡ .ಎಂ ಹ್ಯಾರಿ ಮಂದಣ್ಣ ಆಯ್ಕೆಯಾಗಿದ್ದಾರೆ. ಟ್ರಸ್ಟಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಬೊಪ್ಪಂಡ ಎಂ. ಬೋಪಯ್ಯ ನಿಧನರಾದ ಹಿನ್ನೆಲೆಯಲ್ಲಿ ಖಾಲಿಯಾಗಿದ್ದ ಸ್ಥಾನಕ್ಕೆ ಶಾಲಾ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಕಲಿಯಂಡ .ಎಂ ಹ್ಯಾರಿ ಮಂದಣ್ಣ ಅವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನೆರವಂಡ ಸುನಿಲ್ ದೇವಯ್ಯ, ಕಾರ್ಯದರ್ಶಿಗಳಾಗಿ ನಾಯಕಂಡ ದೀಪಕ್ ಚೆಂಗಪ್ಪ ಆಯ್ಕೆಯಾದರು. ನಿರ್ದೇಶಕರಗಳಾಗಿ ಕಲ್ಯಾಟoಡ .ಎಂ.ಪೂಣಚ್ಚ , ಮಕ್ಕಿ.ಎಸ್ ಸುಬ್ರಹ್ಮಣ್ಯ, ಬಿದ್ದಾಟoಡ. ಮುತ್ತಣ್ಣ, ಕುಂಬಂಡ ಗಣೇಶ್ , ಬೊಪ್ಪಂಡ ಎಂ.ಕುಶಾಲಪ್ಪ, ಬಿದ್ದಾಟoಡ ಎ. ಪಾಪ ಮುದ್ದಯ್ಯ , ಅಪ್ಪಾರಂಡ ಎಂ. ಅಪ್ಪಯ್ಯ , ಬೊಳ್ಳಚೆಟ್ಟಿರ ಎಂ.ಸುರೇಶ್ ,ಅಪ್ಪಚಟ್ಟೋಳಂಡ ನವೀನ್ ಅಪ್ಪಯ್ಯ , ಕಲಿಯಂಡ ಕೌಶಿಕ್ ಕುಶಾಲಪ್ಪ, ಚೌರಿರ ಎ.ಮಂದಣ್ಣ ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಬೆಂಗಳೂರು ಮಾ.4 NEWS DESK :  ಚುನಾವಣೆ ಘೋಷಣೆ ಆಗುತಿದ್ದಂತೆಯೇ ಮಾಧ್ಯಮಗಳಲ್ಲಿ ವಾಟ್ಸ್‌ ಅಪ್‌ ಅಥವಾ ಫೇಸ್‌ ಬುಕ್‌ ನಲ್ಲಿ ಯಾರೂ ಪ್ರಚಾರ ಮಾಡಬಾರದು ಎಂದು ಪದೇ ಪದೇ ಪ್ರಸಾರ ಮಾಡಲಾಯಿತು. ಬಹುಶಃ ಇದು ಅವರ ಮಾಹಿತಿಯ ಕೊರತೆ ಎಂದು ಕಾನೂನು ತಜ್ಞರು ಅಭಿಪ್ರಾಯಿಸಿದ್ದಾರೆ. ಪ್ರಚಾರ ಮಾಡದೇ ಯಾವುದೇ ಅಭ್ಯರ್ಥಿ ಗೆಲ್ಲುವುದು ಅಸಾಧ್ಯ. ಕನಿಷ್ಟ ಪಕ್ಷ ತಾನು ಅಥವಾ ತಮ್ಮ ಪಕ್ಷ ಮಾಡಿರುವ ಕೆಲಸಗಳ ಬಗ್ಗೆ ಮತದಾರರಿಗೆ ತಿಳಿಸುವುದಕ್ಕಾದರೂ ಪ್ರಚಾರ ಮಾಡಲೇಬೇಕಾಗುತ್ತದೆ. ಅಭ್ಯರ್ಥಿಯೊಬ್ಬರು ಸಾರ್ವಜನಿಕ ಸಭೆ ನಡೆಸಿ ಲಕ್ಷಾಂತರ ಜನರನ್ನು ಸೇರಿಸಿ ಭಾಷಣ ಮಾಡಿ ಪ್ರಚಾರ ಮಾಡುತ್ತಾರೆ. ಇದು ಲಕ್ಷಾಂತರ ಜನರು ನೋಡುವ ಟಿವಿ ಚಾನೆಲ್‌ , ವೃತ್ತ ಪತ್ರಿಕೆಗಳಲ್ಲಿ ವರದಿ ಆಗುವ ಮೂಲಕ ಮತ್ತೆ ಲಕ್ಷಾಂತರ ಜನರನ್ನು ತಲುಪುತ್ತದೆ. ಬಹಿರಂಗವಾಗಿಯೇ ಪ್ರಚಾರ ಮಾಡುವ ಮೂಲಕ ರಾಜಕೀಯ ಪ್ರಚಾರಕ್ಕೆ ಅವಕಾಶ ಇರುವಾಗ ವಾಟ್ಸ್‌ ಅಪ್‌ , ಫೇಸ್‌ ಬುಕ್‌ ನಲ್ಲಿ ಏಕೆ ಕೂಡದು ? ಅನೇಕ ವಾಟ್ಸ್‌ ಅಪ್‌ ಗ್ರೂಪ್‌ ಗಳಲ್ಲಿ…

Read More

ಕೂಡಿಗೆ ಮಾ.4 NEWS DESK : ಉತ್ತರ ಕೊಡಗಿನ ಪ್ರಮುಖ ಶಿವ ದೇವಾಲಯ ಕಣಿವೆಯ ಶ್ರೀರಾಮಲಿಂಗೇಶ್ವರ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಏ.17 ರಂದು ಜರುಗಲಿದೆ. ರಥೋತ್ಸವಕ್ಕೆ ಕೊಡಗು ಜಿಲ್ಲೆಯ ಭಕ್ತಾಧಿಗಳು ಸೇರಿದಂತೆ ನೆರೆಯ ಹಾಸನ ಹಾಗೂ ಮೈಸೂರು ಜಿಲ್ಲೆಗಳ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ದೇವಾಲಯದ ಮುಂಬದಿಯಲ್ಲಿ ಹರಿದಿರುವ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗುಸೇತುವೆ ಇಲ್ಲಿಗೆ ಧಾವಿಸುವ ಭಕ್ತರು ಹಾಗೂ ಪ್ರವಾಸಿಗರ ಕಣ್ಮನ ತಣಿಸುವುದು ವಿಶೇಷ ಸಂಗತಿ. ರಥೋತ್ಸವದ ಹಿನ್ನೆಲೆಯಲ್ಲಿ ದೇವಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್, ಕಾರ್ಯಾಧ್ಯಕ್ಷ ಕೆ.ಎಸ್.ಮಾಧವ ನೇತೃತ್ವದ ಭಕ್ತಗಣ ರಥೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ದೇವಾಲಯದ ಐತಿಹ್ಯ : ದೇವಾಲಯದ ಗರ್ಭಗುಡಿಯ ಉತ್ತರಾಭಿಮುಖವಾಗಿ ಹರಿದಿರುವ ಜೀವ ನದಿ ಕಾವೇರಿ ದೇವಾಲಯದ ಮಹತ್ವವನ್ನು ನಿಚ್ಛಳಗೊಳಿಸಿದೆ. ನದಿಯ ದಂಡೆಯಲ್ಲಿ ಇರುವ ಈ ದೇವಾಲಯದ ಗರ್ಭಗುಡಿಯ ” ಶಿವಲಿಂಗ ” ವನ್ನು ಅಯೋಧ್ಯೆ ಬಿಟ್ಟು ವನವಾಸಕ್ಕೆಂದು ತೆರಳಿದ ಸಾಕ್ಷಾತ್ ಶ್ರೀರಾಮನೇ ಪ್ರತಿಷ್ಠಾಪಿಸಿದ ಲಿಂಗವೇ ಈ ” ರಾಮಲಿಂಗ ” ಎಂಬುದು ಪುರಾತನ ಕಾಲದಿಂದಲೂ…

Read More

ಮಡಿಕೇರಿ ಏ.3 NEWS DESK : ಇತ್ತೀಚೆಗೆ ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಶಾಸಕರ ಸಹಿತ ಇತರರ ಜೇಬಿನಿಂದ ಪಿಕ್ ಪಾಕೆಟ್ ಮಾಡಿದ್ದ 13 ಮಂದಿ ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಮೂಲದ 11 ಮತ್ತು ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಇದೀಗ ನ್ಯಾಯಾಲಯದ ವಶಕ್ಕೆ ನೀಡಲಾಗಿದೆ. ಆರೋಪಿಗಳು ಪಿಕ್ ಪಾಕೆಟ್ ಮಾಡಿದ್ದ 1 ಲಕ್ಷ 96 ಸಾವಿರದ 300 ರೂ.ಗಳ ಪೈಕಿ 65 ಸಾವಿರದ 960 ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ 12 ಮೊಬೈಲ್ ಫೋನ್‌ಗಳು, 2 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. : ಬಂಧಿತ ಆರೋಪಿಗಳು : ಶಿವಮೊಗ್ಗ ಭದ್ರಾವತಿಯ ಜಯಣ್ಣ ಅಲಿಯಾಸ್ ಕಿರಿಕ್ ಜಯ(38), ಪುಟ್ಟರಾಜು ಅಲಿಯಾಸ್ ಪುಟ್ಟ(39), ಸಿ.ನಾಗರಾಜ ಅಲಿಯಾಸ್ ಕೋತಿ ಕಿಚ್ಚ(43), ರಾಮು ಅಲಿಯಾಸ್ ಕುಳ್ಳರಾಮು(43), ಕೆ.ಉಮೇಶ್(36), ಜಯಣ್ಣ ಅಲಿಯಾಸ್ ದೊಡ್ಡ ಜಯಣ್ಣ(53), ಬೋಜಪ್ಪ ಅಲಿಯಾಸ್ ಬೋಜ(50), ಮೆಹಬೂಬ್ ಸುಭಾನ್(48), ಡಿ.ಗಿರೀಶ(31), ಬಾಲು(35),…

Read More

ಮಡಿಕೇರಿ ಏ.3 NEWS DESK : ನಿಷೇಧಿತ ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ರಾಜ್ಯದ ಮೂವರು ಆರೋಪಿಗಳನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಕೇರಳ ತಾಮರಶೇರಿ ನಿವಾಸಿಗಳಾದ ಮಹಮದ್ ಅಶ್ರಫ್(49), ತಸ್ವೀಕ್(24) ಮತ್ತು ಎ.ಟಿ.ಅಲ್ಯಾಝ್(27) ಎಂಬವರೇ ಬಂಧಿತ ಆರೋಪಿಗಳಾಗಿದ್ದು, ಇವರ ಬಳಿ ಇದ್ದ 1 ಕೆ.ಜಿ 400 ಗ್ರಾಂ ಗಾಂಜಾ ಮತ್ತು 2 ಗ್ರಾಂ ಎಂಡಿಎಂಎ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ತಿತಿಮತಿಯ ಮೈಸೂರು-ವಿರಾಜಪೇಟೆ ಹೆದ್ದಾರಿಯಲ್ಲಿ ಕೆಲವು ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಗೋಣಿಕೊಪ್ಪ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಂದರ್ಭ ಮೂವರು ಆರೋಪಿಗಳು ಮಾಲು ಸಹಿತ ಸೆರೆಯಾಗಿದ್ದಾರೆ. ವಿರಾಜಪೇಟೆ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತ ನಿರೀಕ್ಷಕ ಶಿವರಾಜ ಮುಧೋಳ, ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬಿರಾದರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

Read More