ಲೇಖಕ: admin

ಮಡಿಕೇರಿ ಏ.2 NEWS DESK  :  ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಂತರ್ಜಾಲದ https://cbseit.in/cbse/2024/NVS_RST/Result.aspx ಕೊಂಡಿಯನ್ನು ಬಳಸಿ ಪರಿಶೀಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ನವೋದಯ ವಿದ್ಯಾಲಯದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಏ.2 NEWS DESK : ಕೊಡಗು ಜಿಲ್ಲೆಯಲ್ಲಿ ಮೇ 8 ರವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 5ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಯಲಿದೆ. ದನ, ಎಮ್ಮೆ, ಆಡು/ ಕುರಿ ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಅರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿರುತ್ತದೆ. ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ. ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿರುತ್ತದೆ. ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ. 20ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ…

Read More

ಮಡಿಕೇರಿ ಏ.2 NEWS DESK  : ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳ ಸೇವೆ ಪ್ರಶಂಸನೀಯವಾಗಿದೆ ಎಂದು ನಿವೃತ್ತ ಸಿಪಿಐ ಎಚ್.ಜೆ.ಶಿವಶಂಕರಪ್ಪ ಹೇಳಿದರು. ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನ ಆವರಣದಲ್ಲಿ ನಡೆದ ಕೊಡಗು ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 1965 ಏಪ್ರಿಲ್, 2 ರಂದು ಪೊಲೀಸ್ ಕಾಯ್ದೆ ಜಾರಿಗೆ ತರಲಾಗಿದ್ದು, ಆ ದಿನದ ನೆನಪಿಗಾಗಿ ಪೊಲೀಸ್ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸುತ್ತಾ ಬರಲಾಗುತ್ತಿದೆ. ಪೊಲೀಸ್ ಕಲ್ಯಾಣ ನಿಧಿಗೆ ಸಹಾಯಧನ ಪಡೆದು ಅದನ್ನು ಪೊಲೀಸರ ಕುಟುಂಬಗಳಿಗೆ ಸದ್ವಿನಿಯೋಗ ಮಾಡಲಾಗುತ್ತಿದೆ ಎಂದರು. ಪೊಲೀಸ್ ಇಲಾಖೆಯಲ್ಲಿ ಪ್ರತಿಯೊಬ್ಬರ ಸೇವೆ ಮಹತ್ವದ್ದಾಗಿದೆ. ದೈನಂದಿನ ಕರ್ತವ್ಯದಲ್ಲಿ ಪೊಲೀಸರು ಶಿಸ್ತು ಹಾಗೂ ಸಂಯಮಕ್ಕೆ ಹೆಸರುವಾಸಿ. ಶೌರ್ಯ, ಸೇವೆ ಒಳಗೊಂಡ ಕಾರ್ಯನಿರ್ವಹಣೆಯಿಂದಾಗಿ ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸರ ಕರ್ತವ್ಯ ಅಪಾರವಾಗಿದೆ…

Read More

ಮಡಿಕೇರಿ ಏ.2 NEWS DESK : ಕೊಡಗು ಗೌಡ ಯುವ ವೇದಿಕೆಯು 25ನೇ ವರ್ಷದ ಗೌಡ ಕ್ರೀಡಾಕೂಟದ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು,  ಏ.17 ರಿಂದ 28ರ ವರೆಗೆ ಮಡಿಕೇರಿಯಲ್ಲಿ ಗೌಡ ಲೆದರ್ ಬಾಲ್ ಸೀಸನ್-2 ಪಂದ್ಯಾವಳಿ ಹಾಗೂ  ಇದೇ ಪ್ರಥಮ ಬಾರಿಗೆ ಮಹಿಳಾ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದೆ ಎಂದು ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 12 ದಿನಗಳ ಕಾಲ ಪಂದ್ಯಾವಳಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಮಾಹಿತಿ ನೀಡಿದರು. ಪಂದ್ಯಾವಳಿಯ ಬಿಡ್ಡಿಂಗ್ ಪ್ರಕ್ರಿಯೆಯು ಈಗಾಗಲೇ ನಡೆದಿದ್ದು, 10 ಫ್ರಾಂಚೈಸಿ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದೆ. ಕ್ರೀಡಾಕೂಟದ ಎಲ್ಲಾ ಪಂದ್ಯಾವಳಿಗಳು ಯೂಟ್ಯೂಬ್ ನಲ್ಲಿ ನೇರ ಪ್ರಸಾರವಾಗಲಿದೆ. ಅಲ್ಲದೆ ಮೈದಾನದಲ್ಲಿ ಡಿಜಿಟಲ್ ಎಲ್ ಇ ಡಿ ಸ್ಕೋರ್ ಬೋರ್ಡನ್ನು ಅಳವಡಿಸಲಾಗುವುದು ಎಂದರು. ಪಂದ್ಯಾವಳಿ ವೀಕ್ಷಣೆಗೆ ಬಂದ ಪ್ರೇಕ್ಷಕರಿಗೆ ಅನುಕೂಲವಾಗಲು ಮಳಿಗೆಗಳು ಮತ್ತು ಇತರ ಆಟೋಟ ಚಟುವಟಿಕೆಗಳ…

Read More

ಸುಂಟಿಕೊಪ್ಪ,ಏ.2 NEWS DESK :  ಗದ್ದೆಹಳ್ಳದಲ್ಲಿ ನೆಲೆಗೊಂಡಿರುವ ಕೊಡಗಂಲ್ಲೂರ್ ಭದ್ರಕಾಳಿ ಶ್ರೀ ಕುರುಂಭ (ಭಗವತಿ) ದೇವಸ್ಥಾನದ 58ನೇ ವಾರ್ಷಿಕೋತ್ಸವದ ಅಂಗವಾಗಿ ಏ.6 ಮತ್ತು 7 ರಂದು ಭಗವತಿ ದೇವಾಲಯದಲ್ಲಿ ಮಾಹಾಪೂಜೆ ನಡೆಯಲಿದೆ ಎಂದು ಶಾಂತಾ ರಾಮಕೃಷ್ಣ ತಿಳಿಸಿದ್ದಾರೆ. ಕೊಡಗಂಲ್ಲೂರ್ ಭದ್ರಕಾಳಿ ಶ್ರೀ ಕುರುಂಭ (ಭಗವತಿ) ದೇವಸ್ಥಾನದ ಮಹಾಪೂಜೆಯ ಅಂಗವಾಗಿ ಏ.6 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ, 6.30 ಗಂಟೆಗೆ ಗಣಪತಿ ಪೂಜೆ, ಸಂಜೆ 6.45 ಗಂಟೆಗೆ ಶ್ರೀ ಸುಬ್ರಮಣ್ಯ ಸ್ವಾಮಿ ದೇವರ ಪೂಜೆ, ಸಂಜೆ 7 ಗಂಟೆಗೆ ಶ್ರೀ ಮುತ್ತಪ್ಪ ಪೈಂಗುತ್ತಿ, 7.30 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿ ಪೂಜೆ, 7.45 ಗಂಟೆಗೆ ಗುಳಿಗನ ಪೂಜೆ ನಡೆಯಲಿದೆ. ರಾತ್ರಿ 8 ಗಂಟೆಗೆ ಶ್ರೀ ಭದ್ರಕಾಳಿ ದೇವಿಗೆ ಆರ್ಚನೆ, ನೈವೇದ್ಯ ಪೂಜೆ, 8.30 ಗಂಟೆಗೆ ದೇವಿದರ್ಶನ, 8.45 ಗಂಟೆಗೆ ತಲಪುರಿ ಮೆರವಣಿಗೆ, 9 ಗಂಟೆಗೆ ವಸೂರ ಮಾಲೆ ದೇವರ ಬೆಳ್ಳಾಟಂ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ಏ.22 ರಂದು…

Read More

ಮಡಿಕೇರಿ ಏ.2 NEWS DESK : ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆಯು ಏ.3 ರಿಂದ ಏ.6ರ ವರೆಗೆ ನಡೆಯಲಿದೆ ಎಂದು ಶ್ರೀ ಮುತ್ತಪ್ಪ ದೇವಾಲಯದ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್, ಶ್ರೀ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ಅವರ ನೇತೃತ್ವದಲ್ಲಿ ನಾಲ್ಕುದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗಲಿದೆ ಎಂದು ಮಾಹಿತಿ ನೀಡಿದರು. ಶ್ರೀ ಮುತ್ತಪ್ಪ ಉತ್ಸವ ಸಮಿತಿ ಅಧ್ಯಕ್ಷ ಬಿ.ಕೆ.ರವೀಂದ್ರ ರೈ ಮಾತನಾಡಿ, ಏ.3 ರಂದು ಸಂಜೆ 6.30 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ,…

Read More

ವಿರಾಜಪೇಟೆ ಏ.2 NEWS DESK : ಬೆಂಗಳೂರಿನ ಬಾಗಲಗುಂಟೆಯ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಶ್ವ ಕನ್ನಡ ಪ್ರಥಮ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನೀಡಲಾಯಿತು. ಇದೇ ಸಂದರ್ಭ ನೃತ್ಯ ಮಾಡಿದ ವಿದ್ಯಾರ್ಥಿಗಳಾದ ಧೃತಿ, ಲಾವಣ್ಯ, ತನುಗೋಪಿ, ತೇಜಸ್ವಿನಿ, ಲಿಪಿತ, ಚೈತನ್ಯ, ಟಿಯಾನ, ಭುವನ, ಲಕ್ಷ, ಸಂಚಿತ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

Read More

ಮಡಿಕೇರಿ ಏ.2 NEWS DESK :  ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಇಂದು  ಪಕ್ಷೇತರ ಅಭ್ಯರ್ಥಿಯಾಗಿ  ಶಿವನಂಜಯ್ಯ ಹಾಗೂ ಎಂ.ರಂಗಸ್ವಾಮಿ  ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

Read More

ಮಡಿಕೇರಿ ಏ.2 NEWS DESK : ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್-ಎಸ್‍ಯುಸಿಐಸಿ) ಪಕ್ಷ ಈ ಬಾರಿ ಮೈಸೂರು-ಕೊಡಗು ಕ್ಷೇತ್ರವನ್ನು ಒಳಗೊಂಡಂತೆ ರಾಜ್ಯದ 19 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸಲಿದೆಯೆಂದು ಪಕ್ಷದ ರಾಜ್ಯ ಸಮಿತಿ ಸದಸ್ಯ ರವಿ ಬಿ. ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಿಂದ ಪಿರಿಯಾಪಟ್ಟಣದ ಸುನಿಲ್ ಟಿ.ಆರ್. ಅವರು ಎಸ್‍ಯುಸಿಐ(ಸಿ) ಪಕ್ಷದ ಅಭ್ಯರ್ಥಿಯಾಗಿ ತಮ್ಮ ನಾಮಪತ್ರವನ್ನು ಮಾ.28 ರಂದು ಸಲ್ಲಿಸಿದ್ದಾರೆ, ಇವರನ್ನು ಜನ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷವು 19 ರಾಜ್ಯಗಳ 151 ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಬಿಜೆಪಿ-ಕಾಂಗ್ರೆಸ್ ಅವಳಿ ಜವಳಿ- ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡು ಸಮಾಜದ ಕಡೆಗಣಿಸಲ್ಪಟ್ಟ ಜನಸಮೂಹದ ಉದ್ಧಾರಕ್ಕೆ ಬದಲಾಗಿ, ತಮ್ಮ ಅಧಿಕಾರದಲ್ಲಿ ಬಂಡವಾಳಶಾಹಿಗಳಿಗೆ ಅನುಕೂಲವಾಗುವ ನಿಟ್ಟಿನ ಧೋರಣೆ, ನೀತಿಗಳನ್ನು ಹೊಂದಿವೆ. ಈ ಪಕ್ಷಗಳೆರಡು ‘ಅವಳಿ ಜವಳಿ’ಯಾಗಿದ್ದು, ಯಾವುದೇ ವ್ಯತ್ಯಾಸವಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಕೇಂದ್ರದ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ 2014 ರ…

Read More

ಮಡಿಕೇರಿ ಮಾ.29 NEWS DESK ವಿಶೇಷ ವರದಿ : ಕಾವೇರಿಯ ತವರು ಜಿಲ್ಲೆ ಕೊಡಗಿನ ನದಿಗಳು ಮತ್ತು ಜಲಮೂಲಗಳೇ ಮಳೆಗಾಗಿ ಆಕಾಶ ನೋಡುವ ಪರಿಸ್ಥಿತಿ ಎದುರಾಗಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ನದಿ ನೀರು ಬರಿದಾಗಿದೆ. ಕಾವೇರಿ ನದಿ ನೀರು ಹರಿಯುವ ಪ್ರದೇಶವೆಲ್ಲವೂ ಬಯಲಿನಂತ್ತಾಗಿದ್ದು, ಬಂಡೆ ಮತ್ತು ಮರಳು ಗೋಚರಿಸುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲೂ ಬಿಸಿಲು ಮಿತಿ ಮೀರಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿ ನೀರು ಕ್ಷೀಣಿಸಿದ್ದು, ಭಕ್ತರ ಸ್ನಾನಕ್ಕೆ ಕಷ್ಟವಾಗಿದೆ. ನಾಪೋಕ್ಲು ಭಾಗದ ಒಂದೆರಡು ಕಡೆ ಹನಿ ಮಳೆ ಸುರಿದಿದೆಯೇ ಹೊರತು ಈ ವೇಳೆಗೆ ಆಗಬೇಕಾದಷ್ಟು ಪ್ರಮಾಣದಲ್ಲಿ ಮಳೆ ಜಿಲ್ಲೆಯ ಯಾವುದೇ ಭಾಗದಲ್ಲಿ ಆಗಿಲ್ಲ. ಮಳೆ ಸುರಿಯದ ಕಾರಣ ಮತ್ತು ಕಳೆದ ಮಳೆಗಾಲದಲ್ಲಿ ಸಾಕಷ್ಟು ಮಳೆ ಕೊರತೆಯಾಗಿರುವುದರಿಂದ ಮಾರ್ಚ್ ತಿಂಗಳ ಬಿಸಿಲಿಗೆ ನದಿಗಳು ಬರಡಾಗಿವೆ. ಸಿದ್ದಾಪುರದ ಗುಹ್ಯ- ಅಗಸ್ತೇಶ್ವರ ದೇವಾಲಯ ವ್ಯಾಪ್ತಿಯ ನದಿ ಪ್ರದೇಶ ಮೈದಾನದಂತ್ತಾಗಿದೆ. ಸಾಕಷ್ಟು ನೀರು ಇರುತ್ತಿದ್ದ ದುಬಾರೆಯಲ್ಲಿ ನೀರೇ ಇಲ್ಲದೆ ಪ್ರವಾಸಿಗರು ಬರಿದಾದ ನದಿಯ…

Read More