ವಿರಾಜಪೇಟೆ ಜ.12 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆಯ ಮಾಯಮುಡಿ ವಲಯದ ವತಿಯಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ವಲಯದ ಸದಸ್ಯರು ಹಾಗೂ ಗ್ರಾಮಸ್ಥರು ಮಾಯಮುಡಿ ಶ್ರೀ ರಾಮ ಮಂದಿರ ದೇವಾಲಯದ ಆವರಣದಲ್ಲಿದ್ದ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪ್ರವೀಣ್, ವಲಯ ಮೇಲ್ವಿಚಾರಕ ವಸಂತ, ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ, ಸೇವಾ ಪ್ರತಿನಿಧಿ ಪುಷ್ಪಾ, ಪದಾಧಿಕಾರಿಗಳಾದ ಕೃಷಿನ, ಗೀತಾ, ಜಲಜ ಸಂಘದ ಸದಸ್ಯರು ಊರಿನ ಗ್ರಾಮಸ್ಥರು ಇದ್ದರು.
ಲೇಖಕ: admin
ಸುಂಟಿಕೊಪ್ಪ ಜ.12 NEWS DESK : ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ಶೂಟ್ ವಿತರಿಸಲಾಯಿತು. ಸುಂಟಿಕೊಪ್ಪದ ಸಮಾಜ ಸೇವಕ ಇಬ್ರಾಹಿಂ (ಬಾಪ್ಪು) ಶಾಲೆಯ 94 ವಿದ್ಯಾರ್ಥಿಗಳಿಗೆ ಟ್ರ್ಯಾಕ್ಶೂಟ್ ವಿತರಿಸಿದರು. ಈ ಸಂದರ್ಭ ಶಾಲಾ ಉಪಪ್ರಾಂಶುಪಾಲ ಬಾಲಕೃಷ್ಣ ಅವರು ಮಾತನಾಡಿ, ಕೇವಲ ಒಂದು ಮಾತಿಗೆ ಇಬ್ರಾಹಿಂ ಬಾಪ್ಪು ಅವರು ನಮ್ಮ ಶಾಲೆಯ ಬಹುಮುಖ್ಯ ಅವಶ್ಯಕತೆಯೊಂದನ್ನು ಈಡೇರಿಸಿಕೊಟ್ಟಿದ್ದಾರೆ. ಹಣವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು. ವಿದ್ಯಾರ್ಥಿಗಳು ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಶಾಲೆಗೆ ಉತ್ತಮ ಹೆಸರು ತರಬೇಕು ಎಂದರು. ಹಿರಿಯ ಪತ್ರಕರ್ತರಾದ ಬಿ.ಡಿ.ರಾಜು ರೈ ಮಾತನಾಡಿ, ಇಬ್ರಾಹಿಂ ಬಾಪ್ಪು ಅವರು 2018 ರಿಂದ ಎಲೆಮರೆ ಕಾಯಿಯಂತೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ತನ್ನ ಆದಾಯದಿಂದ ಏನಾನದರೂ ಸಮಾಜಕ್ಕೆ ನೀಡಬೇಕೆಂಬ ಬಹುದೊಡ್ಡ ಇರಾದೆಯನ್ನು ಇರಿಸಿಕೊಂಡಿರುವುದು ಶ್ಲಾಘನೀಯ ಕಾರ್ಯವೆಂದು ಅವರು ಬಣ್ಣಿಸಿದರು. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅವರಿಗೆ ಧನ ಸಹಾಯವನ್ನು ಮಾಡುತ್ತಿರುವುದು ಸಮಾಜ ಸೇವೆಗೆ ಹಿಡಿದಿರುವ ಕನ್ನಡಿಯಾಗಿದೆ ಎಂದು ಪ್ರಶಂಸಿದರು. ಸುಂಟಿಕೊಪ್ಪ…
ಮಡಿಕೇರಿ ಜ.12 NEWS DESK : ಶ್ರೀ ಕಾವೇರಮ್ಮೆ ಮತ್ತು ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.15 ರಂದು ಭಾಗಮಂಡಲದಲ್ಲಿ 13ನೇ ವರ್ಷದ ‘ಚಂಡಿಕಾ ಹೋಮ’ ಮತ್ತು ವಿವಿಧ ಪೂಜಾ ಕಾರ್ಯಗಳನ್ನು ಆಯೋಜಿಸಲಾಗಿದೆಯೆಂದು ಟ್ರಸ್ಟ್ ಅಧ್ಯಕ್ಷರಾದ ಮುದ್ದಂಡ ಬಿ. ದೇವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಮುಂಭಾಗದ ಟ್ರಸ್ಟ್ನ ಜಾಗದಲ್ಲಿ ಲೋಕ ಕಲ್ಯಾಣಕ್ಕಾಗಿ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 7 ಗಂಟೆಯಿಂದ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಶತರುದ್ರಾಭಿಷೇಕ ಹಾಗೂ ಚಂಡಿಕಾ ಹೋಮ ನಡೆಯಲಿದೆ ಎಂದು ತಿಳಿಸಿದರು. ಪೂಜಾ ಕಾರ್ಯದ ನಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ. ಧನ ಸಹಾಯ ಮಾಡುವವರು ಆಡಳಿತ ಮಂಡಳಿ ಸದಸ್ಯರಿಗೆ ನೀಡಬಹುದು ಅಥವಾ ಟ್ರಸ್ಟ್ನ ಬ್ಯಾಂಕ್ ಖಾತೆಗೆ ಜಮೆ ಮಾಡಿ ತಮ್ಮ ಹೆಸರು ಮತ್ತು ವಿಳಾಸವನ್ನು ಟ್ರಸ್ಟ್ ಗೆ ತಿಳಿಸಬೇಕೆಂದು ಮನವಿ ಮಾಡಿದರು. ಧನ ಸಹಾಯ ಮಾಡುವವರು…
ವಿರಾಜಪೇಟೆ ಜ.12 NEWS DESK : ಸಮಾಜದಲ್ಲಿ ತಂಬಾಕು ಸೇವನೆ ಪ್ರತಿಷ್ಠೆ ಹಾಗೂ ಗೌರವದ ಪ್ರತಿಕವೆಂಬಂತೆ ಬಿಂಬಿತವಾಗುತ್ತಿರುವುದರಿಂದ ಯುವ ಜನತೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತರಾಗುತ್ತಿರುವುದು ಕಳವಳಕಾರಿ ಎಂದು ಆಶೀರ್ವಾದ ಆಸ್ಪತ್ರೆಯ ವೈದ್ಯರಾದ ಡಾ.ಚೇಂದಿರ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ವತಿಯಿಂದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಸಭಾಭವನದಲ್ಲಿ ನಡೆದ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ ಹಾಗೂ ಕೃತಕ ಕಾಲು ಜೋಡಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಜೀವನವು ವ್ಯಥೆಯಿಂದ ಕೂಡಿದ ಕಥೆಯಾಗಬಾರದು. ಪ್ರಸ್ತುತ ಸಮಾಜದಲ್ಲಿ ಒತ್ತಡದ ಜೀವನ, ಹೊಸತನ ಮುಂತಾದ ಕಾರಣದಿಂದಾಗಿ ವಿವಿಧ ರೀತಿಯ ತಂಬಾಕು ಉತ್ಪನ್ನಗಳ ಸೇವನೆ ಆರಂಭಿಸುತ್ತಿದ್ದಾರೆ. 18 ರಿಂದ 25 ವರ್ಷದೊಳಗಿನ ಯುವ ಜನತೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ತಂಬಾಕು ಸೇವನೆಯಿಂದ ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುವುದರೊಂದಿಗೆ ಜೀವನವನ್ನು ಕೂಡ ಹಾಳು ಮಾಡಿಕೊಳ್ಳುವುದರತ್ತ ಸಾಗುತ್ತಿದ್ದಾರೆ. ಧೂಮಪಾನ ಮಾಡುವುದರಿಂದ ಕೇವಲ ಧೂಮಪಾನಿಗೆ ಮಾತ್ರ ಹಾನಿಯಲ್ಲ ಧೂಮಪಾನದಿಂದ…
ಮಡಿಕೇರಿ ಜ.12 NEWS DESK : ಭಾರತೀಯ ವಿದ್ಯಾಭವನ ಕೊಡಗು ಕೇಂದ್ರ ಆಯೋಜಿಸಿದ್ದ ನೀನಾಸಂ ತಿರುಗಾಟ ನಾಟಕಗಳು ಯಶಸ್ವಿಯಾಗಿ ಪ್ರದರ್ಶನಗೊಂಡವು. ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಡಾ. ಎಂ.ಗಣೇಶ್ ನಿರ್ದೇಶನದಲ್ಲಿ ಮೊದಲ ದಿನದ ನಾಟಕ ‘ಹೃದಯದ ತೀರ್ಪು’ ಬಾನು ಮುಷ್ತಾಕ್ ಅವರ ಕಥೆಯನ್ನು ಆಧರಿಸಿದ ರಂಗಪ್ರಸ್ತುತಿ. ಒಂದು ವಿಶಿಷ್ಟ ಸಾಂಸಾರಿಕ ವೃತ್ತಾಂತವನ್ನು ಬಿಂಬಿಸುವ ಈ ನಾಟಕ ಮುಸ್ಲಿಂ ಸಮುದಾಯದ ಸಾಂಸ್ಕೃತಿಕ ಪರಿಸರದೊಳಗೆ ಸಾಗುತ್ತಲೇ ಅದರ ಎಲ್ಲೆಗಳನ್ನು ಮೀರಿ ಹೆಣ್ಣಿನ ನೋಟಗಳ ಮುಖಾಂತರ ಅನನ್ಯ ವಾದ ಮಾನವೀಯ ಬಿಕ್ಕಟ್ಟುಗಳನ್ನು ರಂಗದ ಮೇಲೆ ಅದ್ಭುತವಾಗಿ ಕಟ್ಟಿಕೊಟ್ಟಿತು. ಎರಡನೇ ದಿನ ಪ್ರದರ್ಶನಗೊಂಡ ‘ಅವತರಣಮ್ ಭ್ರಾಂತಾಲಯಮ್’ ಜಿ. ಶಂಕರ ಪಿಳ್ಳೆ ರಚಿಸಿ, ನಾ. ದಾಮೋದರ ಶೆಟ್ಟಿ ಅನುವಾದಿಸಿ, ಶಂಕರ ವೆಂಕಟೇಶ್ವರನ್ ನಿರ್ದೇಶಿಸಿದ ನಾಟಕ. ಮಾನವನ ಅನಿಶ್ಚಿತತೆ ಮತ್ತು ಅಸಂಬದ್ಧತೆಯನ್ನು ತೆರೆದಿಡುತ್ತ, ಬದುಕಿನ ಅರ್ಥಹೀನತೆಗೆ ಒಂದು ಇತ್ಯಾತ್ಮಕ ಮುದ್ರೆ ಸಿಗಬೇಕೆಂಬ ಹಂಬಲ ಈ ಪ್ರಯೋಗದ್ದು. ನಟರ ಅತ್ಯುತ್ತಮ ಅಭಿನಯದಿಂದ ನಾಟಕಗಳು ಪ್ರೇಕ್ಷಕರ ಮನ ಗೆದ್ದವು.
ಮಡಿಕೇರಿ ಜ.12 NEWS DESK : ದೇವರಕೊಲ್ಲಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನೂತನವಾಗಿ ಉದ್ದೇಶಿತ ಶ್ರೀ ಚಾಮುಂಡೇಶ್ವರಿ ಕಲಾಭವನಕ್ಕೆ ಭೂಮಿಪೂಜೆ ಮತ್ತು ಮಕರ ಸಂಕ್ರಾಂತಿ ಪೂಜಾಮಹೋತ್ಸವ ಜ.14 ರಂದು ಜರುಗಲಿದೆ. ಬುಧವಾರ ಬೆಳಗ್ಗೆ 10.45 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಕನಾ೯ಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಇವರು ಕಲಾಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಪೂವಾ೯ಹ್ನ 11 ಗಂಟೆಗೆ ಆಯೋಜಿತ ಸಭಾಕಾಯ೯ಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರ ಶಾಸಕರಾದ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದು, ಟಿ.ಶ್ಯಾಮ್ ಭಟ್, ಶ್ರೀ ಚಾಮುಂಡೇಶ್ವರಿ ದೇವಾಲಯದ ಅಧ್ಯಕ್ಷರಾದ ಯಶೋಧರ ಬಿ.ಜೆ.ಪಾಲ್ಗೊಳ್ಳಲಿದ್ದಾರೆ. ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಮೈಸೂರಿನ ಉದ್ಯಮಿ ನರೇಶ ಚೆರಿಯಮನೆ, ಮದೆನಾಡು ಪ್ರಾಥಮಿಕ ಕೖಷಿ ಪತ್ತಿನ ಸಹಕಾರ ಸಂಘದ, ಅಧ್ಯಕ್ಷ ಧನಂಜಯ್ ಅಗೋಳಿಕಜೆ, ಶ್ರೀ ಧಮ೯ಸ್ಥಳ ಗ್ರಾಮೀಣಾಭಿವೖದ್ದಿ ಯೋಜನೆಯ ಸಂಪಾಜೆ ವಲಯಾಧಿಕಾರಿ ಸಂತೋಷ್ ಕುಮಾರ್, ಶ್ರೀ ಚಾಮುಂಡೇಶ್ವರಿ ದೇವಾಲಯದ ಉಪಾಧ್ಯಕ್ಷ ರಾಜು ಕೆ.ಆರ್…
ಮಡಿಕೇರಿ ಜ.12 NEWS DESK : ದಕ್ಷಿಣ ಕನಾ೯ಟಕದ ದಕ್ಷಿಣ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥಿ೯ಗಳು ಸೈನಿಕಶಾಲೆಗೆ ಸೇಪ೯ಡೆಯಾಗಲು ಈ ವ್ಯಾಪ್ತಿಯಲ್ಲಿ ಪರೀಕ್ಷಾ ಮಾಗ೯ದಶಿ೯ ಶಿಬಿರಗಳು ಹೆಚ್ಚಾಗಗಬೇಕೆಂದು ಸರಗೂರು ವಿನಲ್ಲಿರುವ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಸಹಾಯಕ ಮುಖ್ಯಕಾಯ೯ನಿವ೯ಹಣಾಧಿಕಾರಿ ಹಾಗೂ ಶಿಕ್ಷಣ ಕಾರ್ಯಕ್ರಮಗಳ ಮುಖ್ಯಸ್ಥ ಪ್ರವೀಣ್ ಕುಮಾರ್ ಎಸ್. ಅಭಿಪ್ರಾಯಪಟ್ಟಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸೈನಿಕ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರವೀಣ್ ಕುಮಾರ್ ಮಾತನಾಡಿದರು. ಸೈನಿಕ ಶಾಲೆಗೆ ಸೇಪ೯ಡೆಯಾಗಬೇಕೆಂಬುದು ಅನೇಕ ವಿದ್ಯಾಥಿ೯ಗಳು, ಪೋಷಕರ ಆಸೆಯಾಗಿರುತ್ತದೆ. ಆದರೆ ಈ ನಿಟ್ಟಿನಲ್ಲಿ ಸೂಕ್ತವಾದ ಪರೀಕ್ಷಾ ಮಾಗ೯ದಶ೯ನ ಮತ್ತು ತರಬೇತಿಯ ಕೊರತೆ ಈವರೆಗೂ ಕಾಡುತ್ತಿತ್ತು. ಸೈನಿಕಶಾಲೆಯ ಆಯ್ಕೆಗಾಗಿ ಬಹುಮುಖ್ಯವಾದ ಪರೀಕ್ಷೆಯ ಹಂತದಲ್ಲಿ ಬಹುತೇಕ ವಿದ್ಯಾಥಿ೯ಗಳು ಮಾಗ೯ದಶ೯ನದ ಕೊರತೆಯಿಂದ ಆಯ್ಕೆಯಾಗದೇ ಸೈನಿಕಶಾಲೆಗೆ ಸೇಪ೯ಡೆಯಾಗುವ ಕನಸು ನನಸಾಗದೇ ನಿರಾಶರಾಗುತ್ತಿದ್ದರು. ಇದನ್ನು ಗಮನಿಸಿಯೇ ಸರಗೂರಿನಲ್ಲಿ…
ಮಡಿಕೇರಿ ಜ.12 NEWS DESK : ಕುಶಾಲನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪ್ರಸ್ತುತ ಪಡಿಸಿರುವ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವವು ಜ.15 ರಂದು ಕೊನೆಗೊಳ್ಳಲಿದೆ. ಹಾಗಾದ್ರೆ ಇನ್ಯಾಕೆ ತಡ… ಬೇಗ ಬೇಗ ಬನ್ನಿ ಕೊನೆಯ ನಾಲ್ಕು ದಿನಗಳ ಕಾಲಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ರೂ.7000 ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ. ರೂ.3500 ರಿಂದ ವಜ್ರಾಭರಣದ ಬೆಲೆಗಳು ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ, ಪೆಂಡೆಂಟ್, ಉಂಗುರ, ಕಿವಿಯೋಲೆ ನೆಕ್ಲೇಸ್, ಬಳೆಗಳ ವಿವಿಧ ವಿನ್ಯಾಸಗಳ ಅಮೋಘ ಸಂಗ್ರಹವಿದೆ. ನುರಿತ ತಜ್ಞರಿಂದ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ, ಪ್ರತಿಷ್ಠಿತ ಪ್ರಮಾಣೀಕೃತ ಏಜೆನ್ಸಿಗಳಿಂದ ಧೃಡೀಕರಣಗೊಂಡ ವಜ್ರಾಭರಣಗಳ ಶ್ರೇಣಿ, ಪ್ರಮಾಣೀಕೃತ EF ಬಣ್ಣದ ಹಳೆಯ ವಜ್ರಾಭರಣಗಳ ವಿನಿಮಯ, ಮರುಖರೀದಿಯ ಗ್ಯಾರಂಟಿ, ಅಚ್ಚರಿಯ ಕೊಡುಗೆ…
ಮಡಿಕೇರಿ ಜ.12 NEWS DESK : ರಾಜ್ಯದ NH-275 ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ತಾಂತ್ರಿಕ ಅನುಮೋದನೆ ನೀಡಿ ಹಣಬಿಡುಗಡೆ ಮಾಡಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕರ್ನಾಟಕದ ಅತ್ಯಂತ ಜನನಿಬಿಡ ಹೆದ್ದಾರಿಗಳಲ್ಲಿ ಒಂದಾದ NH-275 (ಬಂಟ್ವಾಳ-ಬೆಂಗಳೂರು ವಿಭಾಗ) ರಸ್ತೆಯ ಅಭಿವೃದ್ಧಿಗಾಗಿ (ಸಂಪಾಜೆ ಯಿಂದ ಕುಶಾಲನಗರ ವರೆಗೆ) ಭರ್ಜರಿ ಕೊಡುಗೆ ನೀಡಿದ್ದು, ಈ ರಸ್ತೆ ಅಭಿವೃದ್ಧಿ ಕಾಣಲಿದೆ ಎಂದಿದ್ದಾರೆ. ಈ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಕ್ಷಣಾತ್ಮಕ ಗೋಡೆಗಳ ನಿರ್ಮಾಣ ಮತ್ತು ಸುರಕ್ಷತಾ ಕಾಮಗಾರಿಗಳಿಗಾಗಿ 94.08 ಕೋಟಿ ರೂಪಾಯಿಗಳ ಆರ್ಥಿಕ ಮತ್ತು ತಾಂತ್ರಿಕ ಮಂಜೂರಾತಿಯನ್ನು ನೀಡಿ ಆದೇಶ ಹೊರಡಿಸಿದ್ದುಯೋಜನೆಯ ಹಿನ್ನೆಲೆ ಮತ್ತು ಉದ್ದೇಶಬಂಟ್ವಾಳ ಮತ್ತು ಬೆಂಗಳೂರು ನಡುವಿನ ಈ ಘಟ್ಟ ಪ್ರದೇಶದ ರಸ್ತೆಯು ಮಳೆಗಾಲದಲ್ಲಿ ಪದೇ ಪದೇ ಭೂಕುಸಿತಕ್ಕೆ ತುತ್ತಾಗುತ್ತಿತ್ತು. ಇದನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು…
ಮಡಿಕೇರಿ ಜ.12 NEWS DESK : ಯುವಶಕ್ತಿ ರಾಷ್ಟ್ರ ಶಕ್ತಿ..ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಯುವಜನತೆಗೆ ಕರೆ ನೀಡಿದ ಹರಿಕಾರ, ಮಹಾಚೇತನ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬವನ್ನು ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಯುವಕರ ಬಗ್ಗೆ ಅಪಾರ ನಂಬಿಕೆ ಹೊಂದಿದ್ದ ಅವರು ಯುವಶಕ್ತಿಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ನನಗೆ ಗಟ್ಟಿಮುಟ್ಟಾದ 100 ಜನ ಯುವಕರನ್ನು ಕೊಡಿ ನಾನು ನವ ಭಾರತವನ್ನು ನಿರ್ಮಾಣ ಮಾಡುತ್ತೀವಿ ಎಂದು ಕರೆ ನೀಡಿದ ಮಹಾನ್ ಚೇತನ. ಯುವಕರು ಹೇಡಿಗಳಲ್ಲ, ಪರಾವಲಂಬಿಗಳಲ್ಲ ಎಂದ ಅವರು ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂದು ಯುವಜನತೆಗೆ ಸಂದೇಶವನ್ನು ಸಾರಿದರು. ಅವರ ಹುಟ್ಟು ಹಬ್ಬವನ್ನು ಭಾರತ ಸರ್ಕಾರ 1985 ರಿಂದ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಸ್ವಾಮಿ ವಿವೇಕಾನಂದರನ್ನು ವ್ಯಕ್ತಪಡಿಸಿದ ಕೆಲವು ಅಭಿಪ್ರಾಯಗಳು ಏನೆಂದರೆ, ಆಧುನಿಕ ಜಗತ್ತಿನ ನಿರ್ಮಾತ್ರರಲ್ಲಿ ವಿವೇಕಾನಂದರನ್ನು ಪ್ರಮುಖರೆಂದು ಗೌರವಿಸುತ್ತದೆ. ಭಾರತವನ್ನು ಅರಿಯಬೇಕೆಂದರೆ ಸ್ವಾಮಿ ವಿವೇಕಾನಂದರ ಕುರಿತು ಅಧ್ಯಯನ ಮಾಡಬೇಕು. ಅಮೆರಿಕನ್ನರಿಗೆ…






