ಕುಶಾಲನಗರ, NEWS DESK ಫೆ.23: ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ವ್ಯಸನಮುಕ್ತರಾಗಿ ಆರೋಗ್ಯದ ಕಡೆ ಹೆಚ್ಚು ನಿಗಾ ವಹಿಸುವ ಮೂಲಕ ಸದೃಢ, ಸಮರ್ಥ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಬೇಕೆಂದು ಕೂಡಿಗೆ ಸರ್ಕಾರಿ ಅಸ್ಪತ್ರೆಯ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಕರೆಕೊಟ್ಟರು. ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮದಲಾಪುರ ಗ್ರಾಮದಲ್ಲಿ ಯುವಕರಿಗಾಗಿ ನನ್ನ ಭಾರತ – ಡಿಜಿಟಲ್ ಸಾಕ್ಷರತೆ ಎಂಬ ಧ್ಯೇಯಘೋಷದೊಂದಿಗೆ ಒಂದು ವಾರ ಕಾಲ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ಶಿಬಿರಾರ್ಥಿಗಳ ಆರೋಗ್ಯ ಪರಿಶೀಲಿಸಿ ಮಾತನಾಡಿದ ಅವರು, ತಂತ್ರಜ್ಞಾನ ಹಾಗೂ ವಿಜ್ಞಾನದ ಈ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಶಿಕ್ಷಣದ ಅರಿವು ಪಡೆಯುವ ಮೂಲಕ ಹೆಚ್ಚು ಜ್ಞಾನವಂತರಾಗಿ ಶಿಕ್ಷಣದ ಗುರಿ ಸಾಧಿಸಲು ಕರೆಕೊಟ್ಟ ಅವರು, ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ತರ ಪಾತ್ರ ವಹಿಸುತ್ತದೆ ಎಂದರು. ಶಿಬಿರಾಧಿಕಾರಿಗಳಾದ ಕೆ.ಪಿ.ವಿನಯ್, ಜಿ.ಜಯಣ್ಣ, ಮದಲಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ. ರೇಣುಕಾ,…
ಲೇಖಕ: admin
ಮಡಿಕೇರಿ NEWS DESK ಫೆ.23 : ಇಂದಿನ ಆಧುನಿಕ ನಾಗಲೋಟದಿಂದ ಯುವಜನರು ಪುಸ್ತಕ ಸಂಸ್ಕೃತಿಯಿಂದ ದೂರ ಸರಿಯುತ್ತಿದ್ದು, ಯುವಜನರನ್ನು ಪುಸ್ತಕ ಓದುವಂತಾಗಲು ಹತ್ತಿರಕ್ಕೆ ತರುವಲ್ಲಿ ‘ಅಂಗಳದಲ್ಲಿ ತಿಂಗಳ ಪುಸ್ತಕ ಹಾಗೂ ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ಅವರು ತಿಳಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಕನ್ನಡ ಪುಸ್ತಕ ಪ್ರಾಧಿಕಾರದ ಯೋಜನೆ “ಮನೆಗೊಂದು ಗ್ರಂಥಾಲಯ” ಕರಪತ್ರ ಬಿಡುಗಡೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು. ಯುವಜನರಲ್ಲಿ ಪುಸ್ತಕ ಸಂಸ್ಕೃತಿ ಭಿತ್ತಬೇಕು ಎಂಬ ಉದ್ದೇಶದಿಂದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 30 ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಬಾಕಿ ಇದೆ ಎಂದು ಹೇಳಿದರು. ಜ್ಞಾನಪೀಠ ಪ್ರಶಸ್ತಿ ಪಡೆದವರು ಸೇರಿದಂತೆ ಹಲವು ಸಾಹಿತಿ ಹಾಗೂ ಕವಿಗಳ ಹೆಸರಿನಲ್ಲಿ ವಿಶೇಷ…
ಸೋಮವಾರಪೇಟೆ NEWS DESK ಫೆ.23 : ವಿಶ್ವಕ್ಕೆ ಹಿಂದುತ್ವ ಸಾರಿದ ರಾಷ್ಟ್ರ ಭಾರತ ಎಂದು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪುತ್ತೂರು ರವೀಂದ್ರ ಹೆಮ್ಮ ವ್ಯಕ್ತಪಡಿಸಿದರು. ಪಟ್ಟಣದ ಬೇಳೂರು ಮಂಡಲದ ವತಿಯಿಂದ ಏರ್ಪಡಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಅತಿಥಿಯಾಗಿ ದಿಕ್ಸೂಚಿ ಭಾಷಣ ಮಾಡಿದರು. ಹಿಂದುತ್ವದ ಹರಿಕಾರ, ಪ್ರತಿಪಾದಕ ಸ್ವಾಮೀವಿವೇಕಾನಂದರು ಅಂದು ಚಿಕಾಗೋ ನಗರದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಮಾತನಾಡಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಸನಾತನ ಹಿಂದೂ ಧರ್ಮ ಉಳಿದರೆ ಭಾರತ ಉಳಿಯುತ್ತದೆ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕೆಂದರು .ವಿಶ್ವದ ಇತರೆ ರಾಷ್ಟ್ರಗಳು ವ್ಯವಹಾರಿಕ ದೇಶಗಳಾದರೆ ಭಾರತ ಮಾತೃತ್ವ ಹಾಗೂ ಭಾತೃತ್ವದ ದೇಶವಾಗಿದೆ, ಬೇರೆ ರಾಷ್ಟ್ರಗಳು ತಮ್ಮ ಬದುಕಿಗಾಗಿ ಪರರನ್ನು ಕೊಲ್ಲುತ್ತಿವೆ. ಕೋವಿಡ್ ಸಂದರ್ಭದಲ್ಲಿ ಭಾರತ ಕಂಡುಹಿಡಿದ ಲಸಿಕೆಯನ್ನು ಇತರೆ ರಾಷ್ಟ್ರಗಳಿಗೂ ನೀಡುವ ಮೂಲಕ ಭಾರತ ಮಾತ್ರ ತಮ್ಮೊಡನೆ ಇತರರನ್ನು ಬದುಕಿಸುತ್ತಿದೆ ಎಂದ ಅವರು ಅದಕ್ಕಾಗಿಯೇ ಹಿಂದುತ್ವ ಉಳಿಯಬೇಕೆಂದರು. ಕಾರ್ಯಕ್ರಮದ ಸಾನಿಧ್ಯ ವಹಿಸಿದ…
ಮಡಿಕೇರಿ NEWS DESK ಫೆ.23 : ಮಡಿಕೇರಿ ತಾಲ್ಲೂಕು ನೋಟರಿಗಳಾಗಿ ಮಡಿಕೇರಿ ವಕೀಲರ ಸಂಘದ ಅಚ್ಚಾಂಡಿರ ಪವನ್ ಪೆಮ್ಮಯ್ಯ ಹಾಗೂ ಸುನಿಲ್ ಕುಮಾರ್ ಜೆ. ನೇಮಕಗೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ಕಂದಾಯ ತಾಲ್ಲೂಕಿಗೆ ಹೆಚ್ಚುವರಿಯಾಗಿ ಸೃಷ್ಟಿಸಿರುವ ಎರಡು ನೋಟರಿ ಹುದ್ದೆಗಳಿಗೆ ಸರಕಾರ ಇವರನ್ನು ನೇಮಕ ಮಾಡಿದೆ. ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರು ಮಡಿಕೇರಿ ವಕೀಲರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಮಾಜ ಸೇವೆಯಲ್ಲೂ ಸಕ್ರಿಯರಾಗಿದ್ದಾರೆ.
ಮಡಿಕೇರಿ NEWS DESK ಫೆ.23 : ರಾಜ್ಯದಲ್ಲಿ ದಲಿತರ ಒಳ ಮೀಸಲಾತಿ ಮತ್ತು ಹಕ್ಕುಗಳ ಕುರಿತು ದಲಿತ ಸಮುದಾಯಗಳು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿಯಲ್ಲಿ ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾ ದಲಿತ ಸಮುದಾಯದ ಸ್ವಾಭಿಮಾನ ಸಮಾವೇಶ, ‘ಕರ್ನಾಟಕ ದಲಿತ ರತ್ನ’ ಮತ್ತು ‘ಕೊಡಗು ರತ್ನ’ ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರಕಾರ ಒಳ ಮೀಸಲಾತಿ ಜಾರಿಗೆ ಮುಂದಾಗಿದೆ. ಆದರೆ ಅದರ ರೂಪು-ರೇಷೆ, ನೀತಿ-ನಿಯಮಗಳು ಇನ್ನೂ ಜಾರಿಗೆ ಬಂದಿಲ್ಲ. ಹೀಗಿದ್ದರೂ ಬಿಜೆಪಿ, ಆರ್ಎಸ್ಎಸ್ ಮತ್ತದರ ಅಂಗ ಸಂಘಟನೆಗಳು ಅಪಪ್ರಚಾರ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಮಾತನಾಡಿ, ಪ್ರಪಂಚದ ಶ್ರೇಷ್ಠ ದಾಖಲೆ ಎಂದೇ ಕರೆಯಲಾಗುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್…
ಬೀದರ್ NEWS DESK ಫೆ 23 : ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪಿ ಕರೆ ನೀಡಿದರು. ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಮ್ಮೇಳನದ ವೆಬ್ ಸೈಟ್” ಉದ್ಘಾಟಿಸಿ ಮಾತನಾಡಿದರು. ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಮ್ಮೇಳನಗಳು ಒಂದು ಅರ್ಥದಲ್ಲಿ “ಪಿಟ್ ಸ್ಟಾಪ್ಸ್” ಎಂದು ಹೇಳಬಹುದು. ರೇಸಿಂಗ್ ಕಾರುಗಳು ತಮ್ಮ ಓಟದ ನಡುವೆ ಟೈರ್ ಗಳನ್ನು ಬದಲಾಯಿಸಲು, ಇಂಧನ ತುಂಬಿಸಿಕೊಳ್ಳಲು ಮಾರ್ಗಮಧ್ಯದಲ್ಲಿ ಇರುವ ನಿಲ್ದಾಣಗಳನ್ನು ಪಿಟ್ ಸ್ಟಾಪ್ಸ್ ಎಂದು ಕರೆಯುತ್ತಾರೆ. ವೈರಲ್ ಸುದ್ದಿಗಳ ವೇಗದಲ್ಲಿ ಓಡುತ್ತಿರುವ ಉದ್ಯಮಕ್ಕೆ ಈಗ ಇಂಥಾ ಪಿಟ್ ಸ್ಟಾಪ್ಸ್ ಗಳ ಅಗತ್ಯ ತುಂಬ ಇದೆ ಎಂದು ವಿವರಿಸಿದರು. ಈ ಸಮ್ಮೇಳನ ವೃತ್ತಿಪರರಿಗೆ ತಮ್ಮ ನೋಟಗಳನ್ನು, ಆಯ್ಕೆಗಳನ್ನು…
ಮಡಿಕೇರಿ NEWS DESK ಫೆ. 23 – ಭಾರತದಲ್ಲಿ ಉತ್ತಮ ಉದ್ದೇಶಕ್ಕಾಗಿ ದಾನ ನೀಡುವವರ ಸಂಖ್ಯೆ ಕಡಮೆಯಾಗಿಲ್ಲ.. ಆದರೆ ಈ ರೀತಿ ನೀಡಿದ ದಾನ ಸೂಕ್ತವಾಗಿ ಬಳಕೆಯಾಗುವಂತೆ ನೋಡಿಕೊಳ್ಳುವ ಕತ೯ವ್ಯ ದಾನ ಸ್ವೀಕರಿಸಿದವರ ಮೇಲಿದೆ ಎಂದು ಬೆಂಗಳೂರಿನ ಪೀಣ್ಯ ರೋಟರಿ ಸಂಸ್ಥೆಯ ಪ್ರಮುಖ ಮಾಜಿ ಗವನ೯ರ್ ನಾಗೇಂದ್ರ ಪ್ರಸಾದ್ ಹೇಳಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿಯ 121 ನೇ ದಿನಾಚರಣೆ ಸಂದಭ೯ದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಯುಕ್ತಾಶ್ರಯದಲ್ಲಿ 22 ಮಂದಿ ವಿಶೇಷ ಚೇತನರಿಗೆ ಕೖತಕ ಕೈ ಮತ್ತು ಕಾಲು ಜೋಡಣಾ ಶಿಬಿರ ಉದ್ಘಾಟಿಸಿ ನಾಗೇಂದ್ರ ಪ್ರಸಾದ್ ಮಾತನಾಡಿದರು. ಭಾರತದಲ್ಲಿ ಕೊಡುಗೆ ದಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಆದರೆ ದಾನಿಗಳು ತಾವು ಶ್ರಮಪಟ್ಟು ಗಳಿಸಿದ ಸಂಪಾದನೆಯನ್ನು ದಾನವಾಗಿ ನೀಡಿದ ಸಂದಭ೯ ಆ ಹಣ ಎಷ್ಟರ ಮಟ್ಟಿಗೆ ಉತ್ತಮ ಕಾಯ೯ಗಳಿಗೆ ವಿನಿಯೋಗಿಸಲ್ಪಡುತ್ತದೆ ಎಂಬುದನ್ನು ಗಮನಿಸುತ್ತಾರೆ. ಹೀಗಾಗಿ ಲಭಿಸಿದ ಕೊಡುಗೆಯನ್ನು ಸಮಪ೯ಕವಾಗಿ ಬಳಕೆ ಮಾಡುವುದು ದಾನ ಪಡೆದ ವ್ಯಕ್ತಿಗಳಿಂದ…
ಮಡಿಕೇರಿ NEWS DESK ಫೆ.23 : ಕೇರಳ-ಕರ್ನಾಟಕ ರಾಜ್ಯ ಚುಟುಕು ಸಾಹಿತ್ಯ ಸಮ್ಮೇಳನವು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದ ಸಭಾಂಗಣದಲ್ಲಿ ಅದ್ಧೂರಿಯಿಂದ ಜರುಗಿತು. ಚುಟುಕು ಯುಗಾಚಾರ್ಯ ಡಾ| ಎಂ.ಜಿ.ಆರ್. ಅರಸ್ ವೇದಿಕೆಯಲ್ಲಿ ಈ ಸಂದರ್ಭ ಕವಿಗೋಷ್ಠಿ, ಯುವಕವಿಗೋಷ್ಠಿ, ವಿಚಾರಗೋಷ್ಠಿ, “ಕವಿ ಕಾವ್ಯವಿಭೂಷಣ” “ಕವಿ ಕಾವ್ಯ ಕಂಠೀರವ” ಪ್ರಶಸ್ತಿ ಪ್ರದಾನ ನಡೆಯಿತು. ಈ ಸಂದರ್ಭ ಕೊಡಗಿನ ಚುಟುಕು ಬ್ರಹ್ಮ ಖ್ಯಾತಿಯ ಹಾ. ತಿ. ಜಯಪ್ರಕಾಶ್, ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ, ಆಜೂರ ರಾಜ್ಯ ಪ್ರಶಸ್ತಿ ವಿಜೇತೆ , ಸಾಹಿತಿ ಪೂಜಾರೀರ ಕೃಪಾ ದೇವರಾಜ್, ಕೊಡವ ಅಕಾಡೆಮಿ ರಾಜ್ಯ ಪ್ರಶಸ್ತಿ, ಗ್ಲೋಬಲ್ ಅಚೀವರ್ಸ್ ಅವಾರ್ಡ್ ವಿಜೇತೆ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ , ಸಾಹಿತಿ ಅರಸಿನಮಕ್ಕಿಯ ರೇಣುಕಾ ಸುಧೀರ್ ಇನ್ನಿತರರು ರಾಷ್ಟ್ರೀಯ ಕವಿಕಾವ್ಯ ವಿಭೂಷಣ ಪ್ರಶಸ್ತಿ ಸ್ವೀಕಾರ ಮಾಡಿದರು. ಸಮ್ಮೇಳನಕ್ಕೆ ಮೊದಲು ಸರ್ವಾಧ್ಯಕ್ಷ ನಾಡೋಜ ಡಾ. ಕೃಷ್ಣಕುಮಾರ್ ಕೂಡ್ಲು , ಕನ್ನಡ ಭವನದ ಸ್ಥಾಪಕರೂ, ಕೇರಳ ರಾಜ್ಯ-ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರೂ ಆದ ಡಾ|…
ಬಾಳೆಲೆ NEWS DESK ಫೆ.23 : ಜೀರ್ಣೋದ್ಧಾರಗೊಳ್ಳುತ್ತಿರುವ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾಮದ ದೇವನೂರು ಪ್ರಸಿದ್ಧ ಶ್ರೀ ಮಹದೇವ ದೇವಸ್ಥಾನಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ರವರು ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ಪೂಜೆ ಸಲ್ಲಿಸಿದ ಶಾಸಕರು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭ ಶಾಸಕರ ಅನುದಾನ ರೂ.7.5 ಲಕ್ಷಗಳಲ್ಲಿ ನಿರ್ಮಿಸಿರುವ ದೇವಸ್ಥಾನದ ರಸ್ತೆಯನ್ನು ಅವರು ಉದ್ಘಾಟಿಸಿದರು. ದೇವಸ್ಥಾನದ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರ ಕಾರ್ಯಗಳಿಗೆ ಮುಜುರಾಯಿ ಇಲಾಖೆಯಿಂದ ರೂ.10 ಲಕ್ಷ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು. ವಲಯ ಅಧ್ಯಕ್ಷ ಕೋದಂಡ ಸಂಪನ್ ಸೋಮಣ್ಣ, ಸುಬ್ಬಯ್ಯ, ದೇವಸ್ಥಾನ ಸಮಿತಿಯ ಪ್ರಮುಖರು, ಪಂಚಾಯಿತಿ ಮಾಜಿ ಸದಸ್ಯ ವಿನು ಉತ್ತಪ್ಪ, ಪೊನ್ನಪ್ಪಸಂತೆ ವಲಯ ಅಧ್ಯಕ್ಷ ಚೆಟ್ಟಿಮಾಡ ರೋಬಿನ್ ಬೋಪಣ್ಣ, ದೇವಯ್ಯ, ಅನಿಶ್ ಬೋಪಣ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಫೆ.23 : ಹೃದಯ ಸ್ತಂಭನವಾದ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ನೀಡಿದಲ್ಲಿ ಜೀವ ಉಳಿಸಬಹುದಾಗಿದ್ದು, ಇಂತಹ ತುರ್ತು ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರು ಅರಿವು ಹೊಂದಿರಬೇಕೆಂದು ಮೈಸೂರು ಮಣಿಪಾಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ತಜ್ಞರಾದ ಡಾ. ಅರುಣ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಪತ್ರಿಕಾಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಆಯೋಜಿಸಲಾಗಿದ್ದ ಜೀವ ರಕ್ಷಕ ಕೌಶಲ್ಯ ಕಾರ್ಯಾಗಾರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಜೀವ ರಕ್ಷಣೆಯ ಅರಿವು ಹೊಂದಿಕೊಳ್ಳಬೇಕೆನ್ನುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೀವ ಉಳಿಸಲು ಪ್ರತಿ ನಿಮಿಷ, ಪ್ರತಿ ಸೆಕೆಂಡ್ ಮುಖ್ಯವಾಗಿರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸ್ತಂಭನವಾದಲ್ಲಿ ಸಾರ್ವಜನಿಕರು ಏನು ಮಾಡಬೇಕೆಂದು ಅರಿತುಕೊಂಡರೆ ಜೀವ ಉಳಿಸಬಹುದಾಗಿದೆ. ಈ ಸಂಬಂಧ ವಿದೇಶದಲ್ಲಿ ಸಾರ್ವಜಕರಿಗೆ ತರಬೇತಿ ನೀಡಲಾಗುತ್ತಿದೆ. ನಮ್ಮ ದೇಶದಲ್ಲಿ ಅರಿವು ಮೂಡಿಸುವುದು ಬಹಳ ಕಷ್ಟವಾಗಿದ್ದರೂ ಪ್ರಯತ್ನ ಮುಂದುವರೆಸಿದ್ದೇವೆ. ಸಾರ್ವಜನಿಕರು ತುರ್ತು ಚಿಕಿತ್ಸೆಯ ಬಗ್ಗೆ ಅರಿತುಕೊಂಡು…






