ಸೋಮವಾರಪೇಟೆ ಏ.1 NEWS DESK : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಶಿವರಾಜ್ ತಂಗಡಿಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮಂಡಲದ ಯುವ ಮೋರ್ಚಾ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತದ ಸೋಮವಾರ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಮೋದಿ ವಿರುದ್ಧದ ಸಚಿವ ಶಿವರಾಜ್ ತಂಗಡಿಗಿ ಹೇಳಿಕೆ ಖಂಡನೀಯವಾದುದು. ಪ್ರಧಾನಿ ಮೋದಿಯವರು ದೇಶದ ರಕ್ಷಣೆಗೆ ಹಗಲಿರುಳು ಶ್ರಮಿಸುತಿದ್ದು ಅಂಥವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ತಂಗಡಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು. ಮಂಡಲ ಯುವ ಮೋರ್ಚಾದ ಅಧ್ಯಕ್ಷ ಮೋಹಿತ್ ಮಾತನಾಡಿ, ಯುವಕರು ಎಲ್ಲೇ ಹೋದರು ಮೋದಿ ಮೋದಿ ಎನ್ನುತ್ತಾರೆ ಅಂತವರಿಗೆ ಕಪಾಳಕ್ಕೆ ಹೊಡಿಯ ಬೇಕು ಎಂದು ಹೇಳುತ್ತಾರೆ. ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸ್ಥಾನಕ್ಕೆ ಅವಮಾನ. ರಾಜ್ಯದ ಮುಖ್ಯಮಂತ್ರಿಗಳು ಅವರಿಗೆ ಒಳೆಯ ಸಂಸ್ಕೃತಿ ಹೇಳಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇವರು ಹೋದಲೆಲ್ಲಾ ಘೇರಾವ್ ಹಾಕಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದರು. ಕೊಡಗಿನಲ್ಲಿ…
ಲೇಖಕ: admin
ಮಡಿಕೇರಿ ಏ.1 NEWS DESK : ಶ್ರೀ ಕಾವೇರಮ್ಮೇ ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏ.3ರಂದು ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುವುದೆಂದು ಟ್ರಸ್ಟ್ ಅಧ್ಯಕ್ಷ ಎಂ.ಬಿ ದೇವಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸೇರಿದಂತೆ ಕರ್ನಾಟಕ ರಾಜ್ಯವು ಬರದ ಬೇಗೆಯಂದ ಬೇಯುತ್ತಿರುವುದು, ಮಾನವನಿಗೆ, ವನ್ಯಜೀವಿಗಳಿಗೆ, ಪ್ರಾಣಿಪಕ್ಷಿಗಳಿಗೆ ಕುಡಿಯಲು ನೀರಿನ ಸಮಸ್ಯೆ ಉಂಟಾಗಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೇ ರೀತಿ ಮುಂದುವರೆದಲ್ಲಿ ಮಾನವ ಕುಲಕ್ಕೆ ಗಂಭೀರ ಪರಿಣಾಮವನ್ನು ಬೀರುವ ಸಾಧ್ಯತೆ ಇರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಬರಗಾಲದಿಂದ ಜಲ ಮೂಲಗಳೆಲ್ಲಾ ಬತ್ತಿ ಹೋಗಿದ್ದು, ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿಗೆ ಬಂದು ತಲುಪಿದ್ದೇವೆ. ಇದೇ ಮುಂದುವರಿದಲ್ಲಿ ಭವಿಷ್ಯದಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ಊಹಿಸುವುದು ಕೂಡ ಕಷ್ಟವಾಗಿದೆ. ಪ್ರಕೃತಿಯ ಮೇಲೆ ಮಾನವನ ಹಸ್ತಕ್ಷೇಪವೇ ಇದೆಲ್ಲದಕ್ಕೂ ಕಾರಣವಾಗಿದೆ. ಯಾವುದೇ ಸರ್ಕಾರ ಬಂದರೂ ಕೂಡ ಮರ ಗಿಡ ಉಳಿಸುವ, ಅರಣ್ಯ ಬೆಳೆಸುವ ಕಾರ್ಯಕ್ಕೆ…
ಮಡಿಕೇರಿ ಏ.1 NEWS DESK : ಕಲೆ, ಸಂಸ್ಕೃತಿ, ಭಾಷೆ, ಗ್ರಾಮೀಣ ಶಿಕ್ಷಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡುವುದು, ಉತ್ತಮ ಆರೋಗ್ಯ ಹೊಂದಲು ಮಾರ್ಗದರ್ಶನ, ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ರೂಪಿಸುವ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ನೂತನವಾಗಿ ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿದೆ. ಮೇಕೇರಿಯಲ್ಲಿರುವ ಕೂರ್ಗ್ ಗವದನ ರೆಸಾರ್ಟಿನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಂಸ್ಕೃತಿ ಸಿರಿ” ಬಳಗದ ಲಾಂಛನವನ್ನು ಬಿಡುಗಡೆಗೊಳಿಸುವ ಮೂಲಕ ನೂತನ ಟ್ರಸ್ಟ್ ನ್ನು ಅಸ್ತಿತ್ವಕ್ಕೆ ತರಲಾಯಿತು. ಈ ಸಂದರ್ಭ ಮಾತನಾಡಿದ ಖ್ಯಾತ ವೈದ್ಯರಾದ, ಬಳಗದ ಟ್ರಸ್ಟಿ ಡಾ. ಮೋಹನ್ ಅಪ್ಪಾಜಿ, ಎಲ್ಲರೂ ಒಗ್ಗಟ್ಟಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಮಾಜದಲ್ಲಿ ತೊಂದರೆಗೊಳಗಾಗಿರುವವರನ್ನು ಗುರುತಿಸಿ ಸಹಾಯ ನೀಡುವುದು, ಕೊಡಗಿನ ಕಲೆ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಪಣತೊಡಬೇಕೆಂದು ಕರೆ ನೀಡಿದರು. ಮತ್ತೋರ್ವ ಟ್ರಸ್ಟಿ ಹಾಗೂ ನಿರ್ಮಾಪಕಿ, ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಮಾತನಾಡಿ, ನಾವು ದುಡಿಯುವ ಒಂದು ಭಾಗವನ್ನು ಸಮಾಜದ ಏಳಿಗೆಗೆ ಮೀಸಲಿಟ್ಟು…
ಮಡಿಕೇರಿ ಏ.1 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ಟ್ಯಾಗ್ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆಯನ್ನು ಜೂ.5 ಕ್ಕೆ ಮುಂದೂಡಿದ ನ್ಯಾಯಾಲಯ ಸಿಎನ್ಸಿ ಬೇಡಿಕೆಯ ಕುರಿತು ಅಫಿಡವಿಟ್ ಸಲ್ಲಿಸುವಂತೆ ಡಾ.ಸುಬ್ರಮಣಿಯನ್ ಸ್ವಾಮಿ ಅವರಿಗೆ ಸೂಚಿಸಿತು. ಅಲ್ಲದೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ. ವಕೀಲರಾದ ಸತ್ಯ ಸಬರ್ವಾಲ್ ಹಾಗೂ ಎಂ.ಎಸ್.ನಾರಾಯಣ ಕಿರಣ್ ಸಿಎನ್ಸಿ ಪರ ವಾದ ಮಂಡಿಸಿದರು. ಕೊಡವರಿಗೆ ನೀಡಿದ ಭರವಸೆಗಳನ್ನು ಸರಕಾರ ಈಡೇರಿಸುತ್ತಿಲ್ಲ ಮತ್ತು ಅಸಡ್ಡೆ ತೋರುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ಬಿಪಿನ್ ಚಂದ್ರ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕ್ರಿಶಾ ದೀಕ್ಷಿತ್ ಅವರ ಮುಂದೆ ವಕೀಲರು ಪ್ರತಿಪಾದಿಸಿದರು. ಕೇಂದ್ರದ ಗೃಹ ಇಲಾಖೆ, ಕಾನೂನು ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರಕಾರವನ್ನು ಪ್ರತಿವಾದಿಗಳನ್ನಾಗಿ…
ಮಡಿಕೇರಿ ಏ.1 NEWS DESK : ವಿದ್ಯಾರ್ಥಿಗಳು ಧೈರ್ಯ, ಆತ್ಮ ವಿಶ್ವಾಸ, ತಾಳ್ಮೆ, ಸಹೋದರತ್ವ ಮತ್ತು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಿರುವ ದಿ.ಸಿ.ವಿ.ಶಂಕರ ಸ್ವಾಮಿ ಸ್ಮರಣಾರ್ಥ 30ನೇ ವರ್ಷದ ಉಚಿತ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಶಿಬಿರಗಳು ವಿದ್ಯಾರ್ಥಿಗಳ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ, ನಾನು ಕೂಡ ಬಾಲ್ಯದಲ್ಲಿ ಹಾಕಿ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದೆ, ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದೆ. ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆಯಬೇಕು. ಉತ್ತಮ ತರಬೇತುದಾರರು ತರಬೇತಿ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರೀಡಾಕೂಟದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಕೊಡಗಿಗೆ ಕೀರ್ತಿ ತರುವಂತೆ ಜಿಲ್ಲಾಧಿಕಾರಿ ಕರೆ ನೀಡಿದರು. ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿ ಸಾಧಿಸಲು ಹಾಗೂ ಮನಸ್ಸಿನ ಚಂಚಲತೆಯನ್ನು ಹೋಗಲಾಡಿಸಲು ಪ್ರಾಣಾಯಮ ಹೆಚ್ಚು ಸಹಕಾರಿಯಾಗಿದೆ ಎಂದರು. ಯಾವುದೇ ಗುರಿ…
ಮಡಿಕೇರಿ ಏ.1 NEWS DESK : ಇಂದಿನ ತಾಂತ್ರಿಕ ಯುಗದಲ್ಲಿ ಗುರು ಶಿಷ್ಯರ ಸಂಬಂಧವನ್ನು ಮರೆಯುವಂತ ಪರಿಸ್ಥಿಯಾಗಿದ್ದು, ಶಾಲೆಗಳಲ್ಲಿ ಮೊದಲು ಗುರು ಶಿಷ್ಯರ ಸಂಬಂಧ ಗಟ್ಟಿಯಾಗುವಂತೆ ಮಾಡಬೇಕೆಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಹೇಳಿದರು. ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 25ನೇ ವರ್ಷದ ಬೆಳ್ಳಿಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರ್ಟಿಫಿಶಲ್ ಇಂಟಲಿಜೆಂಟ್ ತಂತ್ರಜ್ಞಾನ ಬಳಕೆ ಒಂದೆಡೆಯಾದರೆ ಮಕ್ಕಳಲ್ಲಿ ಮೊಬೈಲ್ಗಳ ಬಳಕೆ ಹೆಚ್ಚಾಗುತ್ತಿರುವುದು ವಿಷಾದನೀಯ ಎಂದರು. 25ನೇ ಸಂಭ್ರಮದಲ್ಲಿರುವ ಜನರಲ್ ತಿಮ್ಮಯ್ಯ ಶಾಲೆಯು ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಹೆಸರನ್ನು ಎಲ್ಲೆಡೆ ಅಜರಾಮರ ವಾಗಿರುವಂತೆ ಮಾಡುತ್ತಿದ್ದು, ಶಾಲೆಯು ಉತ್ತುಂಗಕ್ಕೆ ಏರಲೆಂದು ಆರೈಸಿದರು. ಮಡಿಕೇರಿಯ ಮುಖ್ಯ ರಸ್ತೆಯಲ್ಲಿ 1973ರಲ್ಲಿ ಪ್ರತಿಷ್ಠಾಪಿಸಲಾದ ಜನರಲ್ ತಿಮ್ಮಯ್ಯ ಪ್ರತಿಮೆ ಕಳೆದ ನಾಲ್ಕೈದು ತಿಂಗಳ ಹಿಂದೆ ಹಾನಿಗೊಳಗಾಗಿದ್ದು, ಅದನ್ನು ಮರುಸ್ಥಾಪನೆ ಮಾಡಲಾಗಿರುವುದು ಶ್ಲಾಘನೀಯ ಎಂದರು. ಕಾಫಿ ಬೆಳೆಗಾರ ಹಾಗೂ ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ ಮಾತನಾಡಿ, ಜನರಲ್ ತಿಮ್ಮಯ್ಯ ಅವರ ಸೇವೆಯನ್ನು…
ಮಡಿಕೇರಿ ಏ.1 NEWS DESK : ನಗರದ ಇಸ್ಕಾನ್ ಜಗನ್ನಾಥ ಮಂದಿರದಲ್ಲಿ ಏ.11 ರಿಂದ ಏ.24ರ ವರೆಗೆ ಬೇಸಿಗೆ ಶಿಬಿರ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ನಾಹ್ನ 1 ಗಂಟೆಯವರೆಗೆ 14 ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ 5 ರಿಂದ 12 ವರ್ಷದೊಳಗಿನ ಬಾಲಕ, ಬಾಲಕಿಯರು ಪಾಲ್ಗೊಳ್ಳಬಹುದಾಗಿದೆ. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಕೀರ್ತನೆ, ಶ್ಲೋಕ ಪಠಣ, ಕಥೆ, ಚಿತ್ರಕಲೆ ಮತ್ತು ಬಣ್ಣಗಾರಿಕೆ, ವಿವಿಧ ಆಟಗಳ ಕುರಿತು ತರಬೇತಿ ನೀಡಿಲಾಗುವುದು ಎಂದು ಮಂದಿರ ಪ್ರಮುಖರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 6360331427, 9538275112 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಏ.1 NEWS DESK : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ದೊರೆಸ್ವಾಮಿ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಡಿಕೇರಿ ಏ.1 NEWS DESK : ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣರಾಜ ಒಡೆಯರ್ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಯದುವೀರ್ ತಾಯಿ ಪ್ರಮೋದಾ ದೇವಿ ಹಾಗೂ ಬೆಂಬಲಿಗರು ಹಾಜರಿದ್ದರು.
ಮಡಿಕೇರಿ ಏ.1 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ 5 ಚುನಾವಣಾ ಪ್ರಚಾರ ವಾಹನಗಳಿಗೆ ಮತ್ತು ಬುಲೆಟ್ ಪ್ರೂಫ್ ವಾಹನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಎಸ್. ಮುನಿರಾಜು, ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪ್ರಮುಖರು ಹಾಜರಿದ್ದರು.






