ಮಡಿಕೇರಿ ಏ.1 NEWS DESK : ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡೂರಪ್ಪ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಲೇಖಕ: admin
ನಾಪೋಕ್ಲು ಏ.1 NEWS DESK : ಚೆರಿಯ ಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್-2024 ಹಾಕಿ ಪಂದ್ಯಾವಳಿಯ ಮೊದಲ ದಿನದ ಪಂದ್ಯದಲ್ಲಿ ಉದಿಯಂಡ, ಅನ್ನಾಡಿಯಂಡ, ಚೋದುಮಂಡ, ಕನ್ಂಬೀರ, ಕುಕ್ಕೇರ, ಅಲ್ಲಾಪಿರ, ಗುಮ್ಮಟಿರ, ಕವಾಡಿಚಂ, ಗುಮ್ಮಟೀರ, ಕೂಡಂಡ ಸೇರಿದಂತೆ 17 ತಂಡಗಳು ಮುನ್ನಡೆ ಸಾಧಿಸಿದವು. ಮೈದಾನ ಒಂದರಲ್ಲಿ ಉದಿಯಂಡ ತಂಡವು ನಾಟೋಳಂಡ ತಂಡದ ವಿರುದ್ಧ 2-0ಅಂತರದ ಗೆಲುವು ಸಾಧಿಸಿತು. ಉದಿಯಂಡ ಪವನ್ ಪಳಂಗಪ್ಪ ಗೋಲು ಹೊಡೆಯುವುದರ ಮೂಲಕ ತಂಡಕ್ಕೆ ಗೆಲುವು ತಂದು ಕೊಟ್ಟರು. ಅನ್ನಾಡಿಯಂಡ ಮತ್ತು ಬೊಳ್ಳೇರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ 3-2 ಅಂತರದಿಂದ ಬೊಳ್ಳೆರ ಗೆಲುವು ಸಾಧಿಸಿತು.ಚೋದುಮಂಡ ತಂಡವು ಅನ್ನೇರಕಂಡ ತಂಡದ ವಿರುದ್ಧ 6-0 ಅಂತರದ ಭರ್ಜರಿ ಗೆಲುವು ಸಾಧಿಸಿತು. ಚೋದು ಮಂಡ ತಂಡದ ನಿಖಿಲ್ ಕಾವೇರಪ್ಪ ಭರ್ಜರಿ 5 ಗೋಲು ಗಳಿಸಿದರು. ಗಗನ್ ಗಣಪತಿ ಒಂದು ಗೋಲ್ ಗಳಿಸಿದರು. ಮೈದಾನ ಎರಡರಲ್ಲಿ ನಡೆದ ಪಂದ್ಯದಲ್ಲಿ ಕನ್ನಂಬೀರ ಪಾಂಡ್ಯಂಡ ತಂಡದ ವಿರುದ್ಧ 4-1…
ನಾಪೋಕ್ಲು ಏ.1 NEWS DESK : ವಿದ್ಯಾರ್ಥಿಗಳು ಪ್ರೌಢಶಾಲಾ ಹಂತದಲ್ಲಿ ನಿರ್ಧಿಷ್ಟ ಗುರಿಯನ್ನು ತಲುಪಲು ಕಾರ್ಯಪ್ರವೃತ್ತರಾಗಬೇಕು ಎಂದು ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರೇಖಾ ಚಿಣ್ಣಪ್ಪ ಹೇಳಿದರು. ಇಲ್ಲಿನ ಅಂಕುರ್ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಪದವಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಅಲ್ಬರ್ಟ್ ಐಸ್ಟಿನ್ ಅವರ ಮಾತಿನಂತೆ “ಉಪಯುಕ್ತತೆಯ ಮನುಷ್ಯನಾಗು” ಹಾಗೂ ಸ್ವಾಮಿ ವಿವೇಕಾನಂದರ ಮಾತಿನಂತೆ “ನಿಮ್ಮೊಳಗಿನ ಶಕ್ತಿಯನ್ನು ಕಂಡುಕೊಳ್ಳಿ” ಎಂಬ ನುಡಿಮುತ್ತುಗಳನ್ನು ಉಲ್ಲೇಖಿಸಿ. ಆದರ್ಶ ಪುಣ್ಯಪುರುಷರ ಜೀವನ ಸಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಕೀರ್ತಿವಂತರಾಗಿ ಉತ್ತಮ ವ್ಯಕ್ತಿಗಳಾಗಿ ಬಾಳಿರಿ ಎಂದು ಶುಭ ಹಾರೈಸಿದರು. ಶಾಲೆಯ ಕಾರ್ಯದರ್ಶಿ ರತ್ನ ಚರ್ಮಣ ವಿದ್ಯಾರ್ಥಿಗಳಿಗೆ ಹಿತವಚನ ಆಡಿದರು. ವಿದ್ಯಾರ್ಥಿಗಳ ಕಾಲೇಜು ಶಿಕ್ಷಣ ಉತ್ತಮವಾಗಿದ್ದು, ಭವಿಷ್ಯ ಉಜ್ವಲವಾಗಲಿ ಎಂದು ತನ್ನ ಅನಿಸಿಕೆ ವ್ಯಕ್ತಪಡಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ರಾಜ ಚರ್ಮಣ ವಹಿಸಿದ್ದು, ನಿರ್ದೇಶಕಿ ಗಾಯನ್ ಗೌರಮ್ಮ, ಪೋಷಕರು ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು…
ಮಡಿಕೇರಿ ಏ.1 NEWS DESK : ಹಾತೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪೊನ್ನಂಪೇಟೆ ತಾಲೂಕು ಸವಿತಾ ಸಮಾಜದ ವತಿಯಿಂದ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಕ್ರೀಡಾಕೂಟಕ್ಕೆ ಶುಭಹಾರೈಸಿದರು. ಇದೇ ಸಂದರ್ಭ ಸಮಾಜ ಬಾಂಧವರು ಶಾಸಕ ಎ.ಎಸ್.ಪೊನ್ನಣ್ಣರನ್ನು ಸನ್ಮಾನಿಸಿ, ಗೌರವಿಸಿದರು.
ಕುಶಾಲನಗರ ಏ.1 NEWS DESK : ನಾಡಿನ ಭಕ್ತರ ಪಾಲಿಗೆ ನಡೆದಾಡುವ ದೈವವೇ ಆಗುವ ಮೂಲಕ ಲಕ್ಷಾಂತರ ಮಂದಿಗೆ ಬದುಕು ಕರುಣಿಸಿದ ಸಿದ್ದಗಂಗೆಯ ಸಿದ್ದಪುರುಷ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಹುಟ್ಟು ಹಬ್ಬವನ್ನು ಕುಶಾಲನಗರದ ಸೋಮೇಶ್ವರ ದೇವಾಲಯದಲ್ಲಿ ಆಚರಿಸಲಾಯಿತು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶ್ರೀ ಸೋಮೇಶ್ವರ ದೇವರಿಗೆ ಶ್ರೀಗಳ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ, ಸಿದ್ದಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ತಮ್ಮ ಜೀವಿತಾವಧಿಯಲ್ಲಿ ಕೈಗೊಂಡ ತ್ರಿವಿಧ ದಾಸೋಹದ ಸೇವೆಗೆ ಭಾರತ ಸರ್ಕಾರ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭ ಅಕ್ಕನ ಬಳಗದ ಮಹಿಳೆಯರಿಂದ ಕಾಯಕ ಯೋಗಿಯ ಕುರಿತು ಭಜನೆ ನಡೆಯಿತು. ಕುಶಾಲನಗರದ ಹಿರಿಯ ನಿವಾಸಿ ಬಿ.ಆರ್.ನಾರಾಯಣ, ದೇವಾಲಯದ ಅರ್ಚಕ ಸುಬ್ರಮಣ್ಯ ದೀಕ್ಷಿತ್, ಕುಶಾಲನಗರ ವೀರಶೈವ ಸಮಾಜದ ಅಧ್ಯಕ್ಷ ಎಂ.ಎಸ್.ಶಿವಾನಂದ, ಅಕ್ಕನ ಬಳಗದ ಸದಸ್ಯರಾದ ಲೇಖನಾ, ಬೇಬಿ, ನಿವೃತ್ತ ಯೋಧ ಅಮೆ ಜನಾರ್ಧನ್ ಹಾಗೂ…
ಮಡಿಕೇರಿ ಏ.1 NEWS DESK : ಮಂಥನ ಕೊಡಗು ಹಾಗೂ ರಂಗಭೂಮಿ ಪ್ರತಿಷ್ಠಾನ ಕೊಡಗು ಆಶ್ರಯದಲ್ಲಿ ಅಡ್ಡಂಡ ಕಾರ್ಯಪ್ಪ ರಚಿತ “ಕರಿನೀರ ವೀರ” ಕೃತಿ ಏ.2 ರಂದು ಲೋಕಾರ್ಪಣೆಗೊಳ್ಳಲಿದೆ. ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಸಂಜೆ 5.30 ಕ್ಕೆ ಕೃತಿ ಲೋಕಾರ್ಪಣೆಗೊಳ್ಳಲಿದೆ. ಭಾರತೀಯ ವಿದ್ಯಾಭವನದ ಅಧ್ಯಕ್ಷ ಕೆ.ಎಸ್. ದೇವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವೀರ ಸಾವರ್ಕರ್ ಕುರಿತು ಲೇಖಕ, ಚಿಂತಕ ನಿತ್ಯಾನಂದ ವಿವೇಕಾವಂಶಿ ಮಾತನಾಡಲಿದ್ದಾರೆ. ಕೃತಿ ಲೇಖಕ ಅಡ್ಡಂಡ ಕಾರ್ಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಸಾವರ್ಕರ್ ಚರಿತ್ರೆ ಕುರಿತಾದ ಈ ನಾಟಕ ರಾಜ್ಯದಲ್ಲಿ 40 ಪ್ರದರ್ಶನ ಕಂಡಿದೆ. ಈ ಕೃತಿಯನ್ನು ಅಯೋಧ್ಯೆ ಪ್ರಕಾಶನ ಪ್ರಕಟಿಸಿದೆ.
ನಾಪೋಕ್ಲು ಏ.1 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದೊಂದಿಗೆ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ಮಾತನಾಡಿ, ಯುವಜನರು ಈ ರೋಗಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರೆ ಹೆಚ್ಚು ಸೂಕ್ತ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಜಾಗೃತಿ ಕುರಿತಾಗಿ ಎನ್ಎಸ್ಎಸ್ ಅಧಿಕಾರಿ ಕಲ್ಪನಾ, ದ್ವಿತೀಯ ಬಿ.ಕಾಂನ ವಿದ್ಯಾರ್ಥಿಗಳಾದ ಹರ್ಷಿತ ಹಾಗೂ ಅರ್ಜುನ್ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಏಡ್ಸ್ ಕುರಿತಾದ ಪೋಸ್ಟರ್ ಮೇಕಿಂಗ್ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಹಸೀನ ಸ್ವಾಗತಿಸಿದರು. ಸಫಾನ ನಿರೂಪಣೆ ಮಾಡಿದರು. ರಾಶಿದ ವಂದಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಏ.1 NEWS DESK : ವಿದ್ಯಾರ್ಥಿಗಳು ಮೊಬೈಲ್ಗಳನ್ನು ಉತ್ತಮ ವಿಚಾರಗಳಿಗಾಗಿ ಮಾತ್ರ ಬಳಸಿಕೊಳ್ಳಬೇಕೆಂದು ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಅಧ್ಯಾಪಕಿ ಕೆ.ಬಿ.ಉಷಾರಾಣಿ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ.ಸೂದನ ರಾಘವಯ್ಯ ದತ್ತಿನಿಧಿ ಕಾರ್ಯ ಕ್ರಮದಲ್ಲಿ ದತ್ತಿ ಉಪನ್ಯಾಸ ನೀಡಿ ಮಾತನಾಡಿದರು. ವಿಷಯಧಾರಿತ ಪುಸ್ತಕಗಳನ್ನು ಬೋಧನೆ ಮಾಡುವ ಶಿಕ್ಷಕರನ್ನು ಪ್ರೀತಿಸಿ ಸಹನೆಯಿಂದ ಶಿಕ್ಷಣವನ್ನು ಬೋಧಿಸುವ ಶಿಕ್ಷಕರನ್ನು ಗೌರವಿಸಿ ಅವರ ಸಕಾರಾತ್ಮಕ ಗುಣಗಳನ್ನು ಸ್ಮರಿಸಿಕೊಂಡಾಗ ವಿಚಾರಗಳು ಶಾಶ್ವತವಾಗಿ ಮನಸ್ಸಿನಲ್ಲಿ ಉಳಿದುಕೊಳ್ಳುತ್ತವೆ. ಪಠ್ಯದ ಪರೀಕ್ಷೆಯೊಂದಿಗೆ ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಜವರಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯ ಚಟುವಟಿಕೆಗಳಿಗೆ ಸೀಮಿತವಾಗದೆ ದತ್ತಿನಿದಿಗಳಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗಲಿದೆ ಎಂದು ಎಂದು ಹರ್ಷ ವ್ಯಕ್ತಪಡಿಸಿದರು. ದತ್ತಿ ದಾನಿಗಳಾದ ನಿವೃತ್ತ…
ಮಡಿಕೇರಿ ಏ.1 NEWS DESK : ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಅಮ್ಮತ್ತಿಯ ಫ್ರೌಢ ಶಾಲಾ ಮೈದಾನದಲ್ಲಿ ಕಳೆದ ಆರು ದಿನಗಳ ಕಾಲ ನಡೆದ ಕೊಡಗು ಜಿಲ್ಲಾ ಮಟ್ಟದ ನೋಂದಾಯಿತ ಫುಟ್ಬಾಲ್ ಕ್ಲಬ್ ಗಳ ನಡುವಿನ ಫುಟ್ಬಾಲ್ ಲೀಗ್ ಪಂದ್ಯಾವಳಿಯಲ್ಲಿ ಬಿಎಫ್.ಸಿ ತಂಡವು ಬೋಯಿಕೇರಿ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿವೆ. ರನ್ನರ್ಸ್ ಪ್ರಶಸ್ತಿಯನ್ನು ಮಿಲನ್ಸ್ ಎಫ್.ಸಿ ಅಮ್ಮತ್ತಿ ತೃಪ್ತಿಪಟ್ಟುಕೊಂಡಿತ್ತು. 30+30 ನಿಮಿಷಗಳ ಫೈನಲ್ ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಬಿಎಫ್.ಸಿ ತಂಡವು ತನ್ನ ಸ್ಟ್ರೈಕರ್ ಆಟಗಾರ ವಿಜು ಏಳನೇ ನಿಮಿಷದಲ್ಲಿ ಬಾರಿಸಿದ ಗೋಲಿನ ನೆರವಿನ ಮೂಲಕ ಮುನ್ನಡೆ ಪಡೆದುಕೊಂಡಿತ್ತು. ಮೊದಲಾರ್ಧದಲ್ಲಿ ಮಿಲನ್ಸ್ ಎಫ್.ಸಿ ತಂಡವು ಕೂಡ ಆಕ್ರಮಣಕಾರಿ ಆಟಕ್ಕೆ ಮುಂದಾದರು ಕೂಡ ಸಮಬಲಗಳಿಸಲು ಸಾಧ್ಯವಾಗಲಿಲ್ಲ. ದ್ವಿತೀಯಾರ್ಧದ 40ನೇ ನಿಮಿಷದಲ್ಲಿ ಬಿಎಫ್.ಸಿ ತಂಡದ ಪಾಂಡಿಯನ್ ಅವರು ಅಮೋಘವಾದ ಗೋಲುಗಳಿಸುವುದರ ಮೂಲಕ 2-0 ಗೋಲುಗಳ ಮುನ್ನಡೆ ಪಡೆದುಕೊಂಡ ಬಿಎಫ್.ಸಿ ತಂಡವು ಮತ್ತಷ್ಟು ಆಕ್ರಮಣಕಾರಿ ಆಟಕ್ಕೆ ಮುಂದಾಗಿ,55 ನಿಮಿಷದಲ್ಲಿ ಅಣ್ಣಪ್ಪ ಮತ್ತು 58ನೇ ನಿಮಿಷದಲ್ಲಿ…
ಮಡಿಕೇರಿ ಏ.1 NEWS DESK : ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಮತ್ತು ರೋಟರಿ ಜಿಲ್ಲೆ 3181 ಸಂಯುಕ್ತ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನದ ಪ್ರಯುಕ್ತ ಮಡಿಕೇರಿ ನಗರದ ರಾಜಾಸೀಟ್ ಮುಂಭಾಗದಲ್ಲಿ ಮತದಾನ ಜಾಗೃತಿ ಕುರಿತಾದ ಬೀದಿ ನಾಟಕ ಮತ್ತು ಕಾರು ರ್ಯಾಲಿ ನಡೆಯಿತು. ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಮತ್ತು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮತದಾನ ಜಾಗೃತಿ ಕುರಿತಾಗಿ ಸಾರ್ವಜನಿಕರು ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಮತ್ತು ಸಿ.ವಿಜಿಲ್ ಆ್ಯಪ್ ಬಳಕೆ ಕುರಿತಾಗಿ ಮಾಹಿತಿ ನೀಡಿದರು. ಅಲ್ಲದೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ಮಾಹಿತಿ ನೀಡಿದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಸಂವಿಧಾನದ ಕರ್ತವ್ಯ ನಿರ್ವಹಿಸುವಂತೆ ಮನವಿ ಮಾಡಿದರು. ಮಡಿಕೇರಿ ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಮಾತನಾಡಿ, ಮತದಾನ ಪ್ರತಿಯೊಬ್ಬ…






