ಲೇಖಕ: admin

ಮೇಷ : ಈ ವಾರ ನಿಮ್ಮ ಆರ್ಥಿಕ ಸ್ಥಿತಿ ಪ್ರಗತಿಯಾಗಲಿದೆ. ಜೀವನದಲ್ಲಿ ಸ್ವಲ್ಪ ಮಟ್ಟಿನ ವಿರಸ ಇರಬಹುದು, ಮಕ್ಕಳಿಂದ ಖರ್ಚು, ಕೋರ್ಟ್, ಕಚೇರಿ ಕೆಲಸದಲ್ಲಿ ಜಯ, ಹಳೆಯ ಸ್ನೇಹಿತರು, ಬಂಧುಗಳ ಅನಿರೀಕ್ಷಿತ ಭೇಟಿ. ಶುಭ ದಿನಾಂಕ 1, ಶುಭ ಸಂಖ್ಯೆ 3, ಪರಿಹಾರ : ಗಣಪತಿ ಆರಾಧನೆ ಮಾಡಿ. ವೃಷಭ : ಈ ವಾರ ಅನಾರೋಗ್ಯ, ವೈದ್ಯರ ಭೇಟಿಯಾಗಬೇಕಾಗಬಹುದು, ಆರ್ಥಿಕ ಅವಕಾಶಗಳು, ವಿವಿಧ ಕಡೆಯಿಂದ ಅಭಿವೃದ್ಧಿಯ ಲಕ್ಷಣಗಳು ಕಾಣಬಹುದು. ಗೃಹ ಅಲಂಕಾರಕ್ಕೆ ವಸ್ತುಗಳು ಮತ್ತು ಬಟ್ಟೆ, ಬಂಗಾರ ಖರೀದಿಸುವ ಯೋಗವಿದೆ. ಶುಭ ದಿನಾಂಕ 6, ಶುಭ ಸಂಖ್ಯೆ 5, ಪರಿಹಾರ : ಲಕ್ಷ್ಮೀ ಆರಾಧನೆ ಮಾಡಿ. ಮಿಥುನ : ಈ ವಾರ ಗೌರವ ಪ್ರಾಪ್ತಿಯಾಗಲಿದೆ, ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಿರಿ, ಸಾಲಗಾರರ ಒತ್ತಡ ಹೆಚ್ಚಲಿದೆ, ಬಂಧುಗಳೊಂದಿಗೆ ಅನವಶ್ಯಕ ಜಗಳವಾಗುವ ಸಾಧ್ಯತೆ ಇದೆ. ಶುಭ ದಿನಾಂಕ : 5, ಶುಭ ಸಂಖ್ಯೆ 8, ಪರಿಹಾರ : ಸಣ್ಣ ಮಕ್ಕಳಿಗೆ ಹಾಲನ್ನು ದಾನ ಮಾಡಿ ಕರ್ಕಾಟಕ : ನಿಮಗೆ…

Read More

ಮಡಿಕೇರಿ ಮಾ.31 NEWS DESK : ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮೇಕೇರಿ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಹನೀಫ್ ಹಾಗೂ ಬೆಂಬಲಿಗರು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಸ್.ಪೊನ್ನಣ್ಣ ಅವರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಸಚಿವರಾದ ಡಾ.H.C.ಮಹದೇವಪ್ಪ, ಕೆ.ವೆಂಕಟೇಶ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.31 NEWS DESK : ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ವಿಶ್ವವೇ ಬೆಚ್ಚಿ ಬೀಳುವ ರೀತಿಯಲ್ಲಿ ಭ್ರಷ್ಟಾಚಾರ ನಡೆಸಿದ್ದು, ದೇಶವನ್ನು 25 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ಯಿದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿರಾಜಪೇಟೆ ಕೊಡವ ಸಮಾಜದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸುಳ್ಳಿನ ರಾಜಕಾರಣ ಮಾಡುತ್ತಿರುವ ಬಿಜೆಪಿಯಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಬಣಗೊಂಡಿದೆ ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಟೀಕಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ನಡೆಸುತ್ತಿದೆ. ಈ ಬಾರಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಒಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪ್ರಾಮಾಣಿಕ ವ್ಯಕ್ತಿಯಾಗಿರುವ ಎಂ.ಲಕ್ಷ್ಮಣ್ ಗೌಡ ಅವರನ್ನು ಕಣಕ್ಕಿಳಿಸಲಾಗಿದೆ. ಇವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಪಣತೊಡಿ ಎಂದು ಯತೀಂದ್ರ ಕರೆ ನೀಡಿದರು. ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಾತನಾಡಿ ಕೊಡಗಿನ ಜನ ಸುಸಂಸ್ಕೃತರು, ಸಜ್ಜನರು, ವಿವೇಕವಂತರು. ಪ್ರಜಾಪ್ರಭುತ್ವಕ್ಕೆ ಗೌರವ…

Read More

ಮಡಿಕೇರಿ ಮಾ.31 NEWS DESK : ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118 ನೇ ಜನ್ಮ ದಿನಾಚರಣೆಯು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ(ಸನ್ನಿಸೈಡ್)ದಲ್ಲಿ ಭಾನುವಾರ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸುಬೇದಾರ್ ಗೌಡಂಡ ತಿಮ್ಮಯ್ಯ ಅವರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು. ವಿದ್ಯಾರ್ಥಿನಿ ಶ್ರೀಷ ಮಾತನಾಡಿ ಭಾರತೀಯ ಸೇನಾ ಕ್ಷೇತ್ರಕ್ಕೆ ಜನರಲ್ ತಿಮ್ಮಯ್ಯ ಅವರ ಕೊಡುಗೆ ಅಪಾರ ಎಂದು ಹೇಳಿದರು. ರಾಷ್ಟ್ರದ ಮಹಾದಂಡ ನಾಯಕರಾಗಿ ಸೇನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ತಿಳಿಸಿದರು. ಜನರಲ್ ತಿಮ್ಮಯ್ಯ ಅವರು ರಾಷ್ಟ್ರಕಂಡ ಮಹಾನ್ ವೀರ ಸೇನಾನಿಯಾಗಿದ್ದು, ಜನರಲ್ ತಿಮ್ಮಯ್ಯ ಅವರ ಸೇನಾ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆ, ಛಲ, ಸಾಮರ್ಥ್ಯ ಮತ್ತು ಪ್ರಬುದ್ಧತೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ವಿವರಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಪೊಲೀಸ್…

Read More

ಮಡಿಕೇರಿ ಮಾ.31 NEWS DESK : ಮಡಿಕೇರಿ ಕೊಡವ ಸಮಾಜ ಹಾಗೂ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವತಿಯಿಂದ ಜನರಲ್ ತಿಮ್ಮಯ್ಯ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ತಿಮ್ಮಯ್ಯ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಕೊಡವ ಸಮಾಜದ ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವೀರ ಸೇನಾನಿಗೆ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿದೇಶಕರುಗಳಾದ ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವಂಡ ರವಿಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಾ ಮುದ್ದಪ್ಪ, ಕನ್ನಂಡ ಕವಿತಾ ಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಜನರಲ್ ತಿಮ್ಮಯ್ಯ ಶಾಲೆಯ ಪಾಂಶುಪಾಲರಾದ ಕಲ್ಮಾಡಂಡ ಸರಸ್ವತಿ, ಆಡಳಿತಾಧಿಕಾರಿ ಮುಕ್ಕಾಟಿರ ಪೊನಮ್ಮ, ಚೌರಿರ ಕಾವೇರಿ ಪೂವಯ್ಯ, ಕೊಡವ ಮಕ್ಕಡ ಕೂಟದ…

Read More

ಸುಂಟಿಕೊಪ್ಪ ಮಾ.31 NEWS DESK : ಜಿಲ್ಲೆಯ ಕ್ರೈಸ್ತ ಬಾಂಧವರು ಈಸ್ಟರ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದ ವತಿಯಿಂದ ಸಂತ ಮೇರಿ ಶಾಲಾ ಆವರಣದಲ್ಲಿ ವಿವಿಧ ಸಾಂಘ್ಯಗಳ ಮೂಲಕ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡ ಕ್ರೈಸ್ತರು ನಂತರ ಈಸ್ಟರ್ ಹಬ್ಬವನ್ನು ಸಡಗರ ಸಂಭ್ರಮದಿಂದ ಮನೆಗಳಲ್ಲಿ ಆಚರಿಸಿಕೊಂಡರು. ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಪಾ.ಅರುಳ್ ಸೆಲ್ವಕುಮಾರ್ ಅವರು ಸಂದೇಶ ನೀಡಿ ಬೃಹತ್ ಮೇಣದ ಬತ್ತಿಯನ್ನು ಬೆಳಗಿದರು. ಯೇಸುವು ಸಮಾಧಿಯಿಂದ ಪುನರ್ ತ್ಥಾನಗೊಂಡಿರುವ ರೂಪಕ ದೃಶ್ಯದ ಅಂಗವಾಗಿ ಪ್ರಭು ಕ್ರಿಸ್ತರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಬಲಿಪೂಜೆಯನ್ನು ಸಮರ್ಪಿಸಿದರು. ಸಹಾಯಕ ಧರ್ಮಗುರುಗಳಾದ ರೇ.ಫಾ.ನವೀನ್‌ಕುಮಾರ್, ಸಂತ ಕ್ಲಾರ ಕನ್ಯಾಸ್ತ್ರೀ ಕಾನ್ವೆಂಟಿನ ಕನ್ಯಾಸ್ತ್ರೀಯರು ಗಾಯನ ವೃಂದದೊಂದಿಗೆ ನೂರಾರು ಸಂಖ್ಯೆಯಲ್ಲಿ ನೆರದಿದ್ದ ಭಕ್ತಾಧಿಗಳು ದೇವಾಲಯದಲ್ಲಿ ಪುನರ್‌ತ್ಥಾನದ ಆಡಂಬರ ಬಲಿಪೂಜೆ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಶಿಲುಬೆ ಏರಿದ ಯೇಸುಕ್ರಿಸ್ತರು 3ನೇ ದಿನ ಸಮಾಧಿಯಿಂದ ಪುನರುತ್ಥಾನಗೊಂಡಿರುವುದನ್ನು ಕ್ರಿಸ್ತರು “ಮರಣವನ್ನು ಜಯಿಸಿದ ಹಬ್ಬ” ಪಾಸ್ಕ ಕಾಲದ…

Read More

ಕುಶಾಲನಗರ ಮಾ.31 NEWS DESK : ಎರಡೂವರೆ ದಶಕಗಳ ಹಿಂದೆ  ಕಾರ್ಗಿಲ್ ನಲ್ಲಿ ಜೀವವನ್ನು ಪಣಕ್ಕಿಟ್ಟು  ಶತ್ರುಗಳೊಂದಿಗೆ ಹೋರಾಡಿ ಸಾವನ್ನು ಜಯಿಸಿ ದೇಶಪ್ರೇಮ ಮೆರೆದು ಬಂದ ಸಾಹಸಿ ಯೋಧ ಬ್ಯಾಂಕಿನಲ್ಲಿ ತಮ್ಮ ಸೇವೆಯನ್ನು ಮುಗಿಸಿ ನಿವೃತ್ತಿಯಾದಾಗ ಬ್ಯಾಂಕಿನ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಬ್ಯಾಂಕಿನ ಗ್ರಾಹಕರು ಸೇರಿ ಸಲ್ಲಿಸಿದ ಗೌರವದ ಸಂದರ್ಭವದು. ಕುಶಾಲನಗರದ ಯೂನಿಯನ್ ಬ್ಯಾಂಕಿನಲ್ಲಿ ಕಳೆದ 20  ವರ್ಷಗಳ ಸುಧೀರ್ಘ ಅವಧಿಯ  ಸೇವೆ ಸಲ್ಲಿಸಿ ನಿವೃತ್ತಿಯಾದ ಸಂದರ್ಭ ಎಲ್ಲರ ಕಣ್ಣಂಚಿನಲ್ಲಿ ಕಂಬನಿ  ತರಿಸಿ ಶುಭ ಹಾರೈಸಿದ ಪ್ರಸಂಗವದು. ಯೂನಿಯನ್ ಬ್ಯಾಂಕಿನ ಹಿರಿಯ ವ್ಯವಸ್ಥಾಪಕಿ ರಾಜಶ್ರೀ ರಾಮಚಂದ್ರನ್  ಅಧ್ಯಕ್ಷತೆಯಲ್ಲಿ  ಜರುಗಿದ ಸರಳ ಹಾಗೂ ಸುಂದರ ಸಮಾರಂಭದಲ್ಲಿ  ಬ್ಯಾಂಕಿನ ನಿವೃತ್ತ ಅಧಿಕಾರಿ ಬಾಲಚಂದ್ರ  ಮೊಹಮ್ಮದ್ ನಬಿ ಅವರು ಯೂನಿಯನ್ ಬ್ಯಾಂಕ್ ನೊಂದಿಗೆ  ಸಾರ್ವಜನಿಕರನ್ನು ಆಕರ್ಷಿಸಿ ಅವರಿಗೆ ನೀಡುತ್ತಿದ್ದ ಸೇವೆಗಳು ಹಾಗೂ ಅವರು  ಹೊಂದಿದ್ದ ಉತ್ತಮ ಬಾಂಧವ್ಯದ ಕುರಿತು ಮಾತನಾಡುತ್ತಲೇ ಇಡೀ ಸಭೆ ಮಂತ್ರಮುಗ್ಧತೆಯೊಂದಿಗೆ  ಗೌರವ ಸಲ್ಲಿಸಿದ ಬಗೆ ನಿಜಕ್ಕೂ ಶ್ಲಾಘನೀಯ. ತಾನು ಬ್ಯಾಂಕಿಗೆ ನೌಕರನಾಗಿ ಸೇರುವ ಮುನ್ನಾ  ಎದುರಿಸಿದ…

Read More

ಮಡಿಕೇರಿ ಮಾ.31 NEWS DESK : ಪೊನ್ನಂಪೇಟೆ ತಾಲ್ಲೂಕು ಮತ್ತೂರು ಶ್ರೀ ಭೂತನಾಥೇಶ್ವರ ಅಯ್ಯಪ್ಪ ದೇವಸ್ಥಾನ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ವಿವಿಧ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದರು.

Read More

ಕುಶಾಲನಗರ ಮಾ.31 NEWS DESK : ಕೊಡಗು ಜಿಲ್ಲಾ ಬ್ಯೂಟಿಷಿಯನ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಆರ್.ಲೋಕೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಪವಿತ್ರ ಹಾಗೂ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ನಾಗಮಣಿ ನೇಮಕಗೊಂಡರು. ಲುಕ್ಸ್ ಬ್ಯೂಟಿ ಕೇರ್ ವತಿಯಿಂದ ಕುಶಾಲನಗರದಲ್ಲಿ ನಡೆದ ತರಬೇತಿ ಶಿಬಿರದಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಅವರ ಸಮ್ಮುಖದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

Read More

ಮಡಿಕೇರಿ ಮಾ.31 NEWS DESK : ಜಿಲ್ಲೆಯ ವಿವಿಧ ಸಮಸ್ಯೆಗಳ ವಿರುದ್ಧ ಜನಪರವಾಗಿ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದ್ದ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ, ವಕೀಲ ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರು ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿರಾಜಪೇಟೆಯ ಗೃಹ ಕಚೇರಿ ಸಮೀಪ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪವನ್ ಪೆಮ್ಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪೊನ್ನಣ್ಣ ಅವರು ಪವನ್ ಪೆಮ್ಮಯ್ಯ ಹಾಗೂ ಬೆಂಬಲಿಗರಿಗೆ ಕಾಂಗ್ರೆಸ್ ಧ್ವಜ ನೀಡಿ, ಶಲ್ಯ ತೊಡಿಸಿ ಪಕ್ಷಕ್ಕೆ ಬರ ಮಾಡಿಕೊಂಡರು. ನAತರ ಮಾತನಾಡಿದ ಶಾಸಕರು, ಜನರೊಂದಿಗೆ ಸರಳವಾಗಿ ಬೆರೆಯಬಲ್ಲ, ಜನರ ಕೈಗೆ ಸುಲಭವಾಗಿ ಸಿಗಬಲ್ಲ, ಜನರ ಸಮಸ್ಯೆಯನ್ನು ಆಲಿಸುವ ಶಕ್ತಿ, ಕಾಳಜಿ ಹೊಂದಿರುವ ವ್ಯಕ್ತಿ ಜನ ಪ್ರತಿನಿಧಿಯಾಗುವುದು ಮತ್ತು ನಾಯಕನಾಗುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಯುವ ಸಮೂಹ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು…

Read More