ಲೇಖಕ: admin

ಮಡಿಕೆರಿ ಮಾ.30 NEWS DESK : ಗುಂಡೇಟಿಗೆ ವ್ಯಕ್ತಿಯೊಬ್ಬರು ಬಲಿಯಾಗಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಅರುವತ್ತೋಕ್ಲು ಗ್ರಾ.ಪಂ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್ (57) ಗುಂಡೇಟಿಗೆ ಬಲಿಯಾದ ದುರ್ದೈವಿಯಾಗಿದ್ದಾರೆ. ಇವರ ಪುತ್ರ ಧ್ಯಾನ್ ಗೂ ಗುಂಡೇಟು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಕಾಶ್ ಅವರ ಸಹೋದರ ಸುಬ್ರಮಣಿ ಎಂಬುವವರು ಬೇಗೂರು ಗ್ರಾಮದ ತೋಟದಲ್ಲಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಮಾ.30 NEWS DESK :  ಕೊಡವ ಕುಟುಂಬಗಳ ನಡುವಿನ 24ನೇ ಹಾಕಿ ಹಬ್ಬ ಪ್ರತಿಷ್ಠಿತ “ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024” ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರು ಹಾಕಿ ಹಬ್ಬವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೊಡಗಿನ ವಿಶಿಷ್ಟ ಕೊಡವ ಸಂಸ್ಕೃತಿ, ಸಂಪ್ರದಾಯಗಳೊಂದಿಗೆ, ಹಾಕಿ ಕ್ರೀಡೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿಕೊಂಡು ಮುಂದುವರಿಸಿಕೊಂಡು ಹೋಗುವುದು ಅತ್ಯವಶ್ಯ. ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬ ಹೆಮ್ಮೆಯ ಪ್ರತೀಕವಾಗಿದೆ ಎಂದರು. ::: ಸಂಭ್ರಮ ::: 24ನೇ ವರ್ಷದ ಕ್ರೀಡಾ ಹಬ್ಬದ ಅಂಗವಾಗಿ ಬಂದೂಕಿನಿಂದ ಅಷ್ಟೇ ಸಂಖ್ಯೆಯ ಗುಂಡುಗಳನ್ನು ಆಕಾಶಕ್ಕೆ ಸಿಡಿಸಿ ಸಂಭ್ರಮಿಸಲಾಯಿತು. ಇದಕ್ಕೂ ಮೊದಲು ನಾಪೋಕ್ಲು ಶ್ರೀ ರಾಮ ಮಂದಿರದಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದವರೆಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಬೃಹತ್ ಮೆರವಣಿಗೆ ಸಾಗಿತು. ಮೈದಾನದಲ್ಲಿ ಪಥಸಂಚಲನ, ಧ್ವಜಾರೋಹಣ ಮತ್ತು ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ನಡೆಯಿತು.…

Read More

ಸುಂಟಿಕೊಪ್ಪ ಮಾ.30 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪವಿತ್ರ ಗುರುವಾರದ ಸಂಜೆ ಕಡೆಯ ಭೋಜನ ಮತ್ತು ಶುಭ ಶುಕ್ರವಾರ (ಗುಡ್‍ಫ್ರೈಡೆ)ದ ಅಂಗವಾಗಿ ವಿಶೇಷ ಬಲಿಪೂಜೆ ನಡೆಯಿತು. ಸಂತ ಮೇರಿ ಶಾಲಾವರಣದಲ್ಲಿ ಪ್ರಾರ್ಥನಾ ಕೂಟವನ್ನು ದೇವಾಲಯದ ಧರ್ಮಗುರುಗಳಾದ ಫಾಧರ್ ಅರುಳ್ ಸೇಲ್ವಕುಮಾರ್ ಹಾಗೂ ಸಹಾಯಕ ಗುರುಗಳಾದ ನವೀನ್ ಕುಮಾರ್ ನೇರವೇರಿಸಿದರು. ನೂರಾರು ಸಂಖ್ಯೆಯಲ್ಲಿ ನೇರೆದಿದ್ದ ಕ್ರೈಸ್ತ ಭಾಂದವರು ಶ್ರದ್ಧಾಭಕ್ತಿಯಿಂದ ಪ್ರಾರ್ಥನಾ ಕೂಟದಲ್ಲಿ ಪಾಲ್ಗೊಂಡಿದ್ದರು. ದೇವಾಲಯದ ಧರ್ಮಗುರುಗಳಾದ ವಂ.ಫಾ.ಅರುಳ್‍ಸೇಲ್ವಕುಮಾರ್, ಸಹಾಯಕ ಧರ್ಮಗುರುಗಳಾದ ನವೀನ್‍ಕುಮಾರ್ ಅವರು ದೇವಾಲಯದ ಕ್ರೈಸ್ತಭಾಂದವರ ಪಾದಗಳನ್ನು ತೊಳೆಯುವ ಮೂಲಕ ಆಚರಣೆಯನ್ನು ನೇರವೇರಿಸುವ ಮೂಲಕ ನೆನಪಿಸಿದರು. ನಂತರ ಮಧ್ಯರಾತ್ರಿಯವರೆಗೆ ವಿಶೇಷ ಪ್ರಾರ್ಥನೆ ದ್ಯಾನಗಳಲ್ಲಿ ಕ್ರೈಸ್ತಭಾಂದವರು ತೊಡಗಿಸಿಕೊಂಡಿದ್ದರು. ಶುಭಶುಕ್ರವಾರದ ಅಂಗವಾಗಿ ಧೇವಾಲಯದಲ್ಲಿ ಕ್ರೈಸ್ತಾ ಭಾಂದವರು ಸಂತಮೇರಿ ಶಾಲಾ ಸಭಾಂಗಣದಲ್ಲಿ ವಿಶೇಷ ಪ್ರಾರ್ಥನೆ ಮಾಡುವ ಪ್ರಾರ್ಥನಕೂಟದಲ್ಲಿ ಪ್ರಸುತ್ತ ಪಡಿಸಲಾಗಿದ್ದು, ವಿಶೇಷ ಪ್ರಾರ್ಥನೆಯಲ್ಲಿ ಶೃದ್ಧಾ ಭಕ್ತಿಯಿಂದ ತೊಡಗಿಸಿಕೊಂಡರು. ದೇವಾಲಯದಿಂದ ಆರಂಭಗೊಂಡ ಶಿಲುಬೆಯಾದಿಯಲ್ಲಿ ಸಂತ ಅಂತೋಣಿ ಶಾಲಾವರಣದಿಂದ ಆರಂಭಗೊಂಡು ಸಂತಮೇರಿ ಕ್ರಿಸ್ತ ಶಿಲುಬೆಯಾತನೆಯನ್ನು ಸ್ಮರಿಸುತ್ತಾ…

Read More

ಮಡಿಕೇರಿ ಮಾ.29 : ಪ್ರತಿ ಸೋಮವಾರದ ಸಂತೆ ದಿನ ಸುಮಾರು 5 ಸಾವಿರ ಮಂದಿ ಸೇರುವ ನಾಪೋಕ್ಲು ಮಾರುಕಟ್ಟೆ ಶಿಥಿಲಾವಸ್ಥೆಯಲ್ಲಿದೆ. ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ಗ್ರಾ.ಪಂ ನಿರ್ಲಕ್ಷ್ಯ ವಹಿಸಿದರೆ ಮುಂದೆ ಅಪಾಯ ಕಾದಿದೆ ಎಂದು ಗ್ರಾಹಕರು ಹಾಗೂ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸುಮಾರು 20 ವರ್ಷಗಳ ಹಿಂದೆ ಮಡಿಕೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆರ್.ಐ.ಡಿ.ಎಫ್ ಸಹಾಯ ಧನದಡಿಯಲ್ಲಿ ನಾಪೋಕ್ಲು ಗ್ರಾಮೀಣ ಸಂತೆ ನಿರ್ಮಾಣಗೊಂಡಿತು. ಒಟ್ಟು 16 ಬೃಹತ್ ಕಬ್ಬಿಣದ ಕಂಬಗಳ ಮೂಲಕ ಮೇಲ್ಚಾವಣಿ ಅಳವಡಿಸಿ ಕಟ್ಟೆಗಳನ್ನು ನಿರ್ಮಿಸಿ ಸುಸಜ್ಜಿತವಾಗಿಯೇ ಅಂದು ಮಾರುಕಟ್ಟೆಯನ್ನು ಗ್ರಾಹಕರು ಹಾಗೂ ವ್ಯಾಪಾರಿಗಳ ಅನುಕೂಲಕ್ಕಾಗಿ ಅರ್ಪಿಸಲಾಯಿತು. ಆದರೆ ಇಂದು ಮಾರುಕಟ್ಟೆಯ ಕಬ್ಬಿಣದ ಕಂಬಗಳು ಶಿಥಿಲಾವಸ್ಥೆಗೊಂಡಿದ್ದು, ಬೀಳುವ ಹಂತಕ್ಕೆ ತಲುಪಿದೆ. ತಳಭಾಗದಲ್ಲಿ ಕಂಬಗಳು ಶೇ.80 ರಷ್ಟು ತುಕ್ಕು ಹಿಡಿದಿವೆ. ಜೋರಾಗಿ ಗಾಳಿ ಬಂದರೂ ಕಂಬಗಳು ಮುರಿದು ಮೇಲ್ಚಾವಣಿ ನೆಲಕಚ್ಚುವ ಸಾಧ್ಯತೆಗಳಿದೆ. ವಾರದ ಸಂತೆ ದಿನವಾದ ಪ್ರತಿ ಸೋಮವಾರ ಸುಮಾರು 5 ಸಾವಿರ ಮಂದಿ ಮಾರುಕಟ್ಟೆಗೆ ಬಂದು ಹೋಗುತ್ತಾರೆ. ಮಾರುಕಟ್ಟೆ…

Read More

ಮಡಿಕೇರಿ ಮಾ.29 NEWS DESK  :  ವಿಶ್ವ ಕನ್ನಡ ಸಾಂಸ್ಕೃತಿಕ ಹಾಗೂ ಕಲಾ ಸಂಸ್ಥೆ  ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಹಿಳಾ ಸಮಾವೇಶದಲ್ಲಿ ಮಡಿಕೇರಿಯ ಭರತ ನಾಟ್ಯ ಕಲಾವಿದೆ ಕಾವ್ಯಶ್ರೀ ಕಪಿಲ್ ಅವರಿಗೆ ಶಿವ ಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಪ್ರಸ್ತುತ ಬಾಲಭವನದಲ್ಲಿ ಭರತನಾಟ್ಯ ತರಗತಿ ನಡೆಸುತ್ತಿದ್ದಾರೆ.

Read More

ಸೋಮವಾರಪೇಟೆ ಮಾ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ  ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶದ್ಧಾಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚ್ ನ ಫಾದರ್ ಜಾಕಪ್ ಕೊಳನೂರು ಅವರು  ಶಿಲುಬೆ  ಬೆಟ್ಟದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಯೇಸು ಕ್ರಿಸ್ತನು ವಿಶ್ವದ ಒಳಿತಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದ ಕುರಿತು ವಿವರಿಸಿದರು. ಹೆಚ್ಚಿನ ಸಂಖ್ಯೆಯ ಕ್ರೈಸ್ತ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Read More

ಸೋಮವಾರಪೇಟೆ ಮಾ.29 NEWS DESK : ಸೋಮವಾರಪೇಟೆಯ ಜಯವೀರಮಾತೆ ಚರ್ಚ್ ವತಿಯಿಂದ GOOD FRIDAY ಪ್ರಯುಕ್ತ ಪಟ್ಟಣದಲ್ಲಿ ಶಾಂತಿ ಮೆರವಣಿಗೆ ಶುಕ್ರವಾರ ನಡೆಯಿತು. ಜೇಸಿ ವೇದಿಕೆಯಲ್ಲಿ ಚರ್ಚ್ನ ಸಹಾಯಕ ಧರ್ಮಗುರು ಜಾನ್ ಫರ್ನಾಂಡಿಸ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಜೇಸಿ ವೇದಿಕೆಯಲ್ಲಿ ಯೇಸು ಕ್ರಿಸ್ತನನ್ನು ಶಿಲುಬೆಗೇರಿಸುವ ರೂಪಕ ನೋಡುಗರನ್ನು ಅರ್ಕಷಿಸಿತು. ಏಸು ಕ್ರಿಸ್ತನನ್ನು ರೋಮನ್ ಸೈನಿಕರು ಥಳಿಸುವ ದೃಶ್ಯಗಳು ಮೆರವಣಿಗೆಯಲ್ಲಿ ಸಾಗಿತು. ಮೆರವಣಿಗೆಯಲ್ಲಿ ಪ್ರಮುಖರಾದ ಶೀಲಾ ಡಿಸೋಜ, ಮಾರ್ಷಲ್ ಲೋಬೋ, ಸುನಿಲ್, ಪ್ರಿನ್ಸ್, ಮರ್ವಿನ್, ಲಾರೆನ್ಸ್ ಮತ್ತಿತರರು ಇದ್ದರು.

Read More

ಸೋಮವಾರಪೇಟೆ ಮಾ.29 NEWS DESK : ಕಾಫಿ ಮಂಡಳಿ ಮತ್ತು ಭುವನ ಮಂದಾರ ರೈತ ಉತ್ಪಾದಕ ಸಂಸ್ಥೆ ಸಹಯೋಗದೊಂದಿಗೆ ಈ ಕಾಮ್ ಕಮಾಡಿಟೀಸ್ ವತಿಯಿಂದ ಮಣ್ಣು ಪರೀಕ್ಷೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ಸಮಾಜ ಸಭಾಂಗಣದಲ್ಲಿ ಈಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಈ ಕಾಮ್ ಕಂಪನಿಯ ಮುಖ್ಯಸ್ಥರಾದ ಡಾ. ಚಂಗಲ ರಾಯಪ್ಪ ಅವರು ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತರರಾಷ್ಟ್ರಿಯ ಮಾರುಕಟ್ಟೆ ಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಉಪನಿರ್ದೇಶಕರಾದ ಡಾ. ಚಂದ್ರಶೇಖರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಫಿ ಬೆಳೆಗಾರರಿಗೆ ಕಾಫಿ ಮಂಡಳಿಯಿAದ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಭುವನ ಮಂದಾರ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಮಾತನಾಡಿ, ಮಣ್ಣು ಪರೀಕ್ಷೆ ಮಾಡಿ, ವರದಿಯ ಆಧಾರದ ಮೇಲೆ ನಿಗದಿತ ಪ್ರಮಾಣದಲ್ಲಿ ರಾಸಯನಿಕ ಗೊಬ್ಬರ ಹಾಕಿದರೆ ಉತ್ತಮ ಇಳುವರಿ ಸಾಧ್ಯ. ಈ ಕ್ರಮದಿಂದ ಉತ್ಪಾದನಾ ವೆಚ್ಚವೂ ಕಡಿಮೆಯಾಗಲಿದೆ ಎಂದು…

Read More

ಮಡಿಕೇರಿ ಮಾ.29 NEWS DESK : ದಂಪತಿ ಸಾವಿನಲ್ಲೂ ಒಂದಾದ ಘಟನೆ ಕುಶಾಲನಗರದ ವೆಂಕಟೇಶ್ವರ ಬಡಾವಣೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವರ್ತಕ ಮಂಜುನಾಥ್ ಶೆಟ್ಟಿ ಅವರು ಮಾ.28 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪತಿಯ ಸಾವಿನಿಂದ ಬಹಳಷ್ಟು ನೊಂದಿದ್ದ ಮಂಜುನಾಥ್ ಅವರ ಪತ್ನಿ ಲೀಲಾವತಿ ಅವರು ಸಂಜೆ ವೇಳೆ ಮನೆಯಲ್ಲಿ ಅಸ್ವಸ್ಥರಾದರು. ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಬೆಳಿಗ್ಗೆ ಹೃದಯಾಘಾತಕ್ಕೊಳಗಾದ ಮಂಜುನಾಥ್ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು. ಮೃತ ದಂಪತಿ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಂಪತಿ ಸಾವಿನ ಬಗ್ಗೆ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಮಾ.29 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲವು  ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಿತು. ರಾತ್ರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಿಂದ ಭಂಡಾರ ಹೊರಟಿತು. ನಂತರ ಮೇಲೇರಿಗೆ ಅಗ್ನಿ ಸ್ಪರ್ಷ ನಡೆದು ಕುಲ್ಚಾಟ ಹೊರಡುವ ಧಾರ್ಮಿಕ ವಿಧಾನವೂ ನಡೆಯಿತು. ಇಂದು ಮುಂಜಾನೆ ಅಗ್ನಿ ಪ್ರವೇಶ, ಪ್ರಸಾದ ವಿತರಣೆ,  ಮಾರಿಕಳ ಪ್ರವೇಶ ಹಾಗೂ ಮಾರಿಕಳದಿಂದ ಬಂದ ನಂತರ ಹರಕೆಯ ಸುರಿಗೆಗಳನ್ನು ಒಪ್ಪಿಸಲಾಯಿತು.  ನಂತರ ಪ್ರಸಾದ ವಿತರಣೆ ನೆರವೇತು. ಸುತ್ತಮುತ್ತಲಿನ ಗ್ರಾಮಸ್ಥರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವರದಿ : ಕೀಲಾರು ಶರತ್, ಸಂಪಾಜೆ

Read More