ಲೇಖಕ: admin

ಮಡಿಕೇರಿ ಮಾ.29 NEWS DESK  : ಲೋಕಸಭಾ ಚುನಾವಣೆ ಹಿನ್ನೆಲೆ ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆಗಳನ್ನು ಕಾಪಾಡುವ ಸಲುವಾಗಿ ಅಂತರ ರಾಜ್ಯ ಮತ್ತು ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ನಡೆಯಿತು. ಚುನಾವಣಾ ಹಿನ್ನೆಲೆ ಕೊಡಗು, ಹಾಸನ, ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ಗಡಿಭಾಗದ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವುದು ಮತ್ತು ಅಕ್ರಮ ಚಟುವಟಿಕೆಗಳು, ನಕ್ಸಲ್ ಚಟುವಟಿಕೆಗಳು, ಸಾಮಾಜಿಕ ವಿರೋಧಿ ಚಟುವಟಿಕೆ, ಕೋಮಗಲಭೆ, ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ, ರೌಡಿ ಆಸಾಮಿಗಳ ಮೇಲೆ ನಿಗಾವಣೆ ಹಾಗೂ ಇನ್ನಿತರೆ ವಿಷಯಗಳ ಕುರಿತು ವಿಸ್ತೃತ ಚರ್ಚೆಗಳು ನಡೆದವು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ನಡೆದ ಸಭೆಯಲ್ಲಿ ನರೆಯ ಕೇರಳ ರಾಜ್ಯದ ಪೊಲೀಸ್ ಅಧಿಕಾರಿಗಳು, ಜಿಲ್ಲೆ ಮತ್ತು ಹೊರ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು. ವಿರಾಜಪೇಟೆಯಲ್ಲಿ ನಡೆದ ಸಭೆಯಲ್ಲಿ ಕೇರಳ ರಾಜ್ಯ ಇರಿಟ್ಟಿ ಎಎಸ್‍ಪಿ ಯೋಗೇಶ್ ಮಂಡಯ್ಯ, ಮನಂತವಾಡಿ ಡಿಎಸ್‍ಪಿ ಪಿ.ಬ್ರಿಜೇಶ್, ವಿರಾಜಪೇಟೆ ಉಪವಿಭಾಗದ…

Read More

ಮಡಿಕೇರಿ ಮಾ.29  NEWS DESK : ಪ್ರತಿಷ್ಠೆಯ ಕಣವಾಗಿರುವ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಮಾ.31 ರಂದು ವಿರಾಜಪೇಟೆ, ನಾಪೋಕ್ಲು ಮತ್ತು ಕುಶಾಲನಗರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮ್ಮ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30 ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಹೇಳಿದ್ದಾರೆ. ಸಮಾವೇಶದಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಭೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ತನ್ವೀರ್ ಸೇಠ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ ಹಾಗೂ, ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ…

Read More

ಮಡಿಕೇರಿ ಮಾ.29 NEWS DESK : ಸುಂಟಿಕೊಪ್ಪ ಸಮೀಪದ ಹರದೂರಿನಲ್ಲಿ ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಶ್ರೀ ಆದಿ ನಾಗ ಬ್ರಹ್ಮ ಮೊಗೇರ ದೈವಗಳ ಮತ್ತು ಕೊರಗ ತನಿಯ ದೈವದ ಹಾಗೂ ಮಂತ್ರವಾದಿ ಗುಳಿಗನ ನೇಮೋತ್ಸವವು ಏ.6 ಮತ್ತು ಏ.7 ರಂದು ನಡೆಯಲಿದೆ. ಏ.3 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ, ಏ.6  ರಂದು ಮಧ್ಯಾಹ್ನ 12 ಗಂಟೆಗೆ ಆಯುಧಾ ಪೂಜೆ, ಸಂಜೆ 5 ಗಂಟೆಗೆ ನಿತ್ಯ ಪೂಜೆ ಮತ್ತು ಭಂಡಾರ ಹೊರಡುವುದು, ಸಂಜೆ 6 ಗಂಟೆಗೆ ಮಂತ್ರವಾದಿ ಗುಳಿಗನ ನೇಮ, ರಾತ್ರಿ 9.30 ಗಂಟೆಗೆ ಶ್ರೀ ಆದಿ ನಾಗ ಬ್ರಹ್ಮ ಮೊಗೇರ ದೈವಗಳ ಗರಡಿ ಇಳಿಯುವುದು, ರಾತ್ರಿ 9 ಗಂಟೆಗೆ ಸಾರ್ವಜನಿಕ ಅನ್ನದಾನ ನೆರವೇರಲಿದೆ. ರಾತ್ರಿ 12.30 ಗಂಟೆಗೆ ಆದಿ ಮಾಯೆ ತನ್ನಿ ಮಾನಿಗ ಗರಡಿ ಇಳಿಸಲಾಗುವುದು. ಏ.7 ರಂದು ಬೆಳಗ್ಗೆ 4.30 ಗಂಟೆಗೆ ಹರಕೆ ಮತ್ತು ಕಾಣಿಕೆ, ಬೆಳಗ್ಗೆ 8 ಗಂಟೆಗೆ ಶ್ರೀ ಕೊರಗ ತನಿಯ ದೈವದ ನೇಮ…

Read More

ಮಡಿಕೇರಿ ಮಾ.29 NEWS DESK  :  ವಿಶ್ವ ಕನ್ನಡ ಸಾಂಸ್ಕೃತಿಕ ಹಾಗೂ ಕಲಾ ಸಂಸ್ಥೆ  ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಮಹಿಳಾ ಸಮಾವೇಶದಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಸಂಸ್ಥೆಯ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಅವರಿಗೆ ಶಿವ ಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಮಡಿಕೇರಿ ಮಾ.29 NEWS DESK : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಚಿವ ಶಿವರಾಜ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ, ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ಜ.ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವ ಶಿವರಾಜ ತಂಗಡಗಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ತೀವ್ರ ಆಕ್ರೋಶ ವ್ಯಕಪಡಿಸಿದರು. ಮಹೇಶ್ ತಿಮ್ಮಯ್ಯ ಮಾತನಾಡಿ, ವಿಶ್ವ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ರಾಜ್ಯದ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವÀ ಶಿವರಾಜ ತಂಗಡಗಿ ಅವರು ‘ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ’ ಎನ್ನುವ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ, ಇದನ್ನು ಪಕ್ಷ ತೀವ್ರವಾಗಿ ಖಂಡಿಸುವುದಾಗಿ ಹೇಳಿದರು. ಈ ರಾಷ್ಟ್ರದ ಹೆಮ್ಮೆಯ ಪ್ರಧಾನಿ…

Read More

ಮಡಿಕೇರಿ ಮಾ. 29 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಮಾಡುವ ಖರ್ಚುವೆಚ್ಚದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ವೆಚ್ಚ ವೀಕ್ಷಕರಾದ ಎ.ಸುರೇಶ್  ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಅವರು ಮಾತನಾಡಿದರು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ಎಸ್.ಟಿ ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸಬೇಕು. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ಗಮನಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ಹೇಳಿದರು. ಪ್ರತಿ…

Read More

ಮಡಿಕೇರಿ ಮಾ.28 NEWS DESK : ಕೊಡವ ಕುಟುಂಬಗಳ ನಡುವಿನ 24ನೇ ವರ್ಷದ ಪ್ರತಿಷ್ಠಿತ ‘ಕುಂಡ್ಯೋಳಂಡ ಹಾಕಿ ಹಬ್ಬ’ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮಾ.30ರಿಂದ ಏಪ್ರಿಲ್28ರವರೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಪಂದ್ಯಾಟ ನಡೆಯಲಿದ್ದು, ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿದೆ. ಏಕಕಾಲಕ್ಕೆ 30 ಸಾವಿರ ಮಂದಿ ಆಸೀನರಾಗಿ ಪಂದ್ಯಾಟ ವೀಕ್ಷಿಸಲು ಅನುಕೂಲವಾಗುವಂತೆ ಮೈದಾನದ ಸುತ್ತಲೂ ಗ್ಯಾಲರಿ ನಿರ್ಮಾಣವಾಗಿದೆ. ಗಣ್ಯಾತಿಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗಳಿದ್ದು, ಒಟ್ಟು 3 ಮೈದಾನಗಳನ್ನು ಹಾಕಿ ಪಂದ್ಯಾವಳಿಗೆ ಸಿದ್ಧ ಮಾಡಲಾಗಿದೆ. ಅಂತರ್ ರಾಷ್ಟ್ರೀಯ ಗುಣಮಟ್ಟದ ಮಾದರಿಯಲ್ಲಿ ಮೈದಾನವನ್ನು ಸಿದ್ಧಗೊಳಿಸಲಾಗಿದೆ. ಮೈದಾನದಲ್ಲಿ ಚೆಂಡು ಮತ್ತು ಆಟಗಾರರ ನಡುವೆ ಸಮತೋಲನೆ ಕಾಪಾಡುವ ಸಲುವಾಗಿ ಮೈದಾನವನ್ನು ನುಣುಪಾಗಿಸಲು ಟ್ರ್ಯಾ ಮೂಲಕ ನೀರನ್ನು ಹರಿಸಲಾಗುತ್ತಿದೆ. ಪ್ರತಿ ಮೈದಾನದಲ್ಲಿ 6 ಪಂದ್ಯಗಳಂತೆ 1 ದಿನಕ್ಕೆ 18 ಪಂದ್ಯಾಟಗಳು ನಡೆಯಲಿವೆ. 10 ದಿನಗಳ ಬಳಿಕ 2 ಮೈದಾನ, ಫ್ರೀ ಕ್ವಾಟರ್ ಹಂತದ ಬಳಿಕ 1ನೇ ಮೈದಾನದಲ್ಲಿ ಹಾಕಿ ಕ್ರೀಡಾಕೂಟಗಳು ನಡೆಯಲಿವೆ. 24ನೇ ವರ್ಷದ ಕುಂಡ್ಯೋಳಂಡ ಹಾಕಿ…

Read More

ನಾಪೋಕ್ಲು  ಮಾ.29 NEWS DESK  : ಕೊಡಗು ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾದ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸ್ಥಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಹರೀಶ್ ಪೂವಯ್ಯ, ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಕ್ಕೆ ಸತತವಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದೇನೆ. ಎರಡು ಬಾರಿ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದೇನೆ ಇದಕ್ಕೆ ಕಾರಣಕರ್ತರಾದ ಕೃಷಿ ಪತ್ತಿನ ಸಹಕಾರ ಸಂಘದ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿ ತನ್ನ ಅನಿಸಿಕೆ ವ್ಯಕ್ತಪಡಿಸಿದರು. ನಿರ್ದೇಶಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಹರೀಶ್ ಅವರ ಗುಣಗಾನ ಮಾಡಿ ಮಾತನಾಡಿದರು. ಈ ಸಂದರ್ಭ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಕುಂಡ್ಯೋಳಂಡ ಎಂ.ಕವಿತಾ, ನಿರ್ದೇಶಕರಾದ ಕೇಲೇಟಿರ ಮುತ್ತಮ್ಮ, ಚೀಯಕಪೂವಂಡ ಸತೀಶ್ ದೇವಯ್ಯ, ಚೋಕಿರ ಪ್ರಭು ಪೂವಪ್ಪ, ಹೆಚ್.ಎ.ಬೊಳ್ಳು, ಅರೆಯಡ ರತ್ನ ಪೆಮ್ಮಯ್ಯ, ಚೋಕಿರ…

Read More

ನಾಪೋಕ್ಲು ಮಾ.29 NEWS DESK : ಬಲ್ಲಮಾವಟಿ ಗ್ರಾಮದ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ ನಾಲ್ಕು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಎತ್ತು ಪೋರಾಟ , ತೆಂಗಿನಕಾಯಿಗೆ ಗುಂಡು ಹೊಡೆಯುವುದು, ದೇವರ ಜಳಕ, ಕಳಶ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಕರ್ಯಗಳು ನಡೆಯಿತು. ಮಹಾಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ಹಾಗೂ ಅನ್ನದಾನ ನಡೆಯಿತು. ದೇವರ ಜಳಕದ ಬಳಿಕ ರಾತ್ರಿ ದೇವರ ನೃತ್ಯಬಲಿ ನಡೆಯಿತು. ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಳಶ ಪೂಜೆಯೊಂದಿಗೆ ಉತ್ಸವಕ್ಕೆ ತೆರೆ ಎಳೆಯಲಾಯಿತು. ದೇವಾಲಯದ ತಕ್ಕ ಮುಖ್ಯಸ್ಥರು ಆಡಳಿತ ಮಂಡಳಿ ಅಧ್ಯಕ್ಷರಾ, ಸದಸ್ಯರು. ಹಾಗೂ ಅಧಿಕ ಸಂಖ್ಯೆಯ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಮಾ.29 NEWS DESK  : ನವಕೊಡಗಿಗೆ ಭದ್ರ ಬುನಾದಿಯೊಂದಿಗೆ ಕೊಡಗಿನಲ್ಲಿ ವೀರಶೈವ ಧರ್ಮ ಪಸರಿಸಲು ಹಾಲೇರಿ ರಾಜರ ಕೊಡುಗೆ ಅಪಾರ ಎಂದು ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿ.ವಿ.ಶಿವಪ್ಪ ತಿಳಿಸಿದರು. ಸುವರ್ಣ ಕರ್ನಾಟಕ ೫೦ ರ ಸಂಭ್ರಮ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ( ನಾಪೋಕ್ಲು) ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ದಿ. ಶಾಂತಮಲ್ಲ ಸ್ವಾಮಿಗಳ ದತ್ತಿ ಮತ್ತು ದಿ. ಎಂ.ಜಿ.ಪದ್ಮನಾಭ ಕಾಮತ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಕೊಡಗಿನ ವೀರಶೈವ ಅರಸರು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ನೂತನ ಕೊಡಗಿಗೆ ವೀರಶೈವ ದೊರೆಗಳಾದ ಹಾಲೇರಿ ದೊರೆಗಳ ಕೊಡುಗೆ ಅಪಾರ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ, ಸಂಸ್ಕೃತಿ ಕಾರ್ಯಗಳಿಗೆ ದುಡಿದ ಉದ್ಯಮಿಗಳ ಕುರಿತಾದ…

Read More