ಕುಶಾಲನಗರ ಮಾ.28 NEWS DESK : ಶರಣ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಕುಶಾಲನಗರದ ವೀರಶೈವ ಸಮಾಜದ ಅಧ್ಯಕ್ಷರಾದ ಎಂ.ಎಸ್.ಶಿವಾನಂದ ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ಶರಣ ಸಾಹಿತ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸುವ ಜೊತೆಗೆ ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಮೂಲಕ ಪರಿಷತ್ತನ್ನು ಕಟ್ಟಿ ಬೆಳೆಸುವ ಪಣ ತೊಡಬೇಕೆಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಮಾ.28 NEWS DESK : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ಬೆಂಬಲ ಸೂಚಿಸಿ ಕೊಡಗು ಜೆಡಿಎಸ್ ಸಾಮೂಹಿಕ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ನಾಯಕರ ನಿರ್ಧಾರದಂತೆ ಕೊಡಗು ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ. ಮಾ.30 ರಂದು ಮಡಿಕೇರಿಯ ಹೊಟೇಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ಜಿಲ್ಲಾ ಜೆಡಿಎಸ್ ಮುಂಚೂಣಿ ನಾಯಕರುಗಳ ಸಭೆ ನಡೆಯಲಿದ್ದು, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಕೊಡಗು ಉಸ್ತುವಾರಿ ಮಂಜೇಗೌಡ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಕೋರ್ ಕಮಿಟಿ ರಚಿಸಿ ತಾಲ್ಲೂಕು ಅಧ್ಯಕ್ಷರುಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗುವುದು. ಜಿಲ್ಲಾಧ್ಯಕ್ಷರು ಇಲ್ಲದ ಕಾರಣ ಸಾಮೂಹಿಕ ನಾಯಕತ್ವದಲ್ಲಿ ಚುನಾವಣಾ ಕಾರ್ಯ ನಿರ್ವಹಿಸಲಿದ್ದೇವೆ ಎಂದರು. ಜೆಡಿಎಸ್ ನಲ್ಲಿ ಇನ್ನೂ ಕೂಡ ಪಕ್ಷ ನಿಷ್ಠ ಹಿರಿಯರು…
ವಿರಾಜಪೇಟೆ ಮಾ.28 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಪೊನ್ನಂಪೇಟೆ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಧನುಗಾಲ ಗ್ರಾಮದ ಕಾಫಿ ಬೆಳೆಗಾರ ಜೆ.ಎಸ್.ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ. ಶರಣ ಸಾಹಿತ್ಯ ಚಟುವಟಿಕೆಗಳನ್ನು ತಾಲ್ಲೂಕಿನಾದ್ಯಂತ ಹೆಚ್ಚಾಗಿ ಪ್ರಚಾರ ಪಡಿಸುವ ಮೂಲಕ ಜನಸಾಮಾನ್ಯರಲ್ಲಿ ವಚನ ಸಾಹಿತ್ಯದ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದ್ದಾರೆ.
ಉತ್ತರಾಖಂಡ ಮಾ.28 NEWS DESK : ಉತ್ತರಾಖಂಡದ ನಾನಕ್ ಮಟ್ಟಾ ಸಾಹಿಬ್ ಗುರುದ್ವಾರದ ಸಿಬ್ಬಂದಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರುವಾರ ಮುಂಜಾನೆ ಬೈಕ್ನಲ್ಲಿ ಬಂದ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ದೇಗುಲದ ಆವರಣದಲ್ಲಿದ್ದ ಸಿಬ್ಬಂದಿ ಬಾಬಾ ತಾರ್ಸೆಮ್ ಸಿಂಗ್ ಎಂಬುವವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ಏಳು ಗಂಟೆಯ ಸುಮಾರಿಗೆ ಕೊಲೆ ನಡೆದಿದ್ದು ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇಬ್ಬರು ಮುಸುಕುಧಾರಿಗಳು ಬೈಕ್ ನಲ್ಲಿ ಬಂದು ಬಾಬಾ ತಾರ್ಸೆಮ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಮಡಿಕೇರಿ ಮಾ.28 NEWS DESK : ಕೊಡಗು- ದಕ್ಷಿಣ ಕನ್ನಡ ಗಡಿಯ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದು, ಮತ್ತೆ ಶಂಕಿತ ನಕ್ಸಲರು ಬಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಾ.16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ನ ಅಂಗಡಿಗೆ ಭೇಟಿ ನೀಡಿ ದಿನಸಿ ಸಾಮಾಗ್ರಿ ಖರೀದಿಸಿ ಅರಣ್ಯ ಪ್ರದೇಶದಲ್ಲಿ ನುಸುಳಿದ್ದರು. ಇದೇ ನಾಲ್ವರ ತಂಡ ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಮಾ.23ರಂದು ಕಾಣಿಸಿಕೊಂಡಿದ್ದರು. ಅಲ್ಲದೆ ಮನೆಯೊಂದಕ್ಕೆ ಭೇಟಿ ಕೂಡ ನೀಡಿದ್ದರು. ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ಕೂಂಬಿAಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿತ್ತು. ಆದರೆ ಇದೀಗ ಮತ್ತೆ ಮಾ.27 ರಂದು ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ತೆರಳಿರುವುದನ್ನು ಸ್ಥಳೀಯರು ನೋಡಿದ್ದಾರೆ ಎಂದು ಹೇಳಲಾಗಿದೆ. ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆ ನಕ್ಸಲ್ ನಿಗ್ರಹ ದಳ ಇದೇ ಪ್ರದೇಶದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಇಲ್ಲಿಯವರೆಗೆ ಶಂಕಿತ ನಕ್ಸಲರು ಪತ್ತೆಯಾಗಿಲ್ಲ.
ವಿರಾಜಪೇಟೆ ಮಾ.28 NEWS DESK : ಇತಿಹಾಸ ಪ್ರಸಿದ್ಧ ಬಾಳೂಗೋಡು ಶ್ರೀ ತ್ರಿಮೂರ್ತಿ ದೇವರ ವಾರ್ಷಿಕ ತೆರೆ ಮಹೋತ್ಸವವು ಮಾ.30 ರಿಂದ ಏ.1 ರ ವರೆಗೆ ನಡೆಯಲಿದೆ. ವಾರ್ಷಿಕ ತೆರೆ ಮಹೋತ್ಸವ ದ ಅಂಗವಾಗಿ ಮೂರು ದಿನಗಳು ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದ್ದು, ಮಾ.31 ರಂದು ತ್ರಿಮೂರ್ತಿ ದೇವರ ವಾರ್ಷಿಕ ತೆರೆ ಮಹೋತ್ಸವ ನಡೆಯಲಿದೆ. ವಾರ್ಷಿಕ ತೆರೆ ಮಹೋತ್ಸವದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕ ಮುಖ್ಯಸ್ಥ ರು, ಆಡಳಿತ ಮಂಡಳಿ ಯ ಸದಸ್ಯರು ಮನವಿ ಮಾಡಿದ್ದಾರೆ.
ಕುಶಾಲನಗರ ಮಾ.28 NEWS DESK : ಕುಶಾಲನಗರ ತಾಲ್ಲೂಕು ಯೋಗಿನಾರೇಯಣ ಬಲಿಜ ಸಂಘದ ವತಿಯಿಂದ ಕುಲ ಗುರು ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮವನ್ನು ಕುಶಾಲನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಆರ್.ಬಾಬಣ್ಣ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 900 ಕ್ಕೂ ಹೆಚ್ಚು ಬಲಿಜ ಸಂಘದ ಕುಟುಂಬಗಳಿದ್ದು, ಪ್ರತೀ ವರ್ಷವೂ ಕುಲಗುರುಗಳ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸಂಘದ ಸದಸ್ಯರ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡುವುದರೊಂದಿಗೆ, ಸಮಾಜದ ಕಡುಬಡ ಕುಟುಂಬಗಳಿಗೆ ನೆರವು ನೀಡುವ ಕೆಲಸ ಸಮಾಜದಿಂದ ಆಗಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಂಘದ ಸದಸ್ಯರಾಗಬೇಕಿದೆ. ಹಾಗೆಯೇ ಸಮಾಜದ ಮಾಹಾನ್ ಪುರುಷರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಕರೆಕೊಟ್ಟ ಸಂಘದ ಅಧ್ಯಕ್ಷ ಆರ್.ಬಾಬಣ್ಣ ಸಮಾಜ ಬಾಂಧವರು ರಾಜಕೀಯವಾಗಿಯೂ ಅಭಿವೃದ್ದಿ ಹೊಂದಬೇಕೆಂದು ಕರೆಕೊಟ್ಟರು. ಈ ಸಂದರ್ಭ ಸಂಘದ ಸದಸ್ಯರಾದ ಕವಿತಾ ದಯಾನಂದ್ ಮಾತನಾಡಿದರು. ಜಯಂತಿ ಅಂಗವಾಗಿ ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಭಾವ ಚಿತ್ರಗಳನ್ನು ಸಂಘದ ಸದಸ್ಯ…
ಸುಂಟಿಕೊಪ್ಪ ಮಾ.28 NEWS DESK : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಸುಂಟಿಕೊಪ್ಪದಲ್ಲಿ ವಿಶೇಷಚೇತನರು ಮತ್ತು ಅವರ ಪಾಲಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸುಂಟಿಕೊಪ್ಪದ ಮಾದಾಪುರ ರಸ್ತೆಯಲ್ಲಿರುವ ಸ್ವಸ್ಥ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ವಿಶಾಲ್ ಕುಮಾರ್ ಮಾತನಾಡಿ, ವಿಶೇಷಚೇತನರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಹೊಂದಿಕೊಂಡಲ್ಲಿ ಆಸ್ಪತ್ರೆಗಳಲ್ಲಿ ರೂ.5 ಲಕ್ಷಗಳವರೆಗಿನ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದರು. ವಿಶೇಷಚೇತನರಿಗಾಗಿ ಇರುವ ವಿಶೇಷ ಗುರುತಿನ ಚೇಟಿಯ ಮಹತ್ವದದ ಬಗ್ಗೆ ತಿಳಿಸಿ, ವಿಶೇಷ ಗುರುತಿನ ಚೇಟಿಯನ್ನು ಮಾಡಿಸದೇ ಇದ್ದವರು, ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲುಯುಗಳ ಮುಖಾಂತರ ನೋಂದಾಯಿಸಿ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತಪಾಸಣೆಗೊಳಗಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು. ವಿರಾಜಪೇಟೆಯ ಆಶೀರ್ವಾದ್ ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥ ಶಿಶುತಜ್ಞ ಡಾ. ಗೌರವ್ ಅಯ್ಯಪ್ಪ ಮಾತನಾಡಿ, ನವಜಾತ ಶಿಶುವಿನ ಜನನದ ಮೊದಲ ನಿಮಿಷದ…
ಬೆಂಗಳೂರು ಮಾ.28 NEWS DESK : ಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ ದಾಖಲಿಸಿದೆ. ಸೋಮವಾರ ವಯನಾಡ್ ಮಾರುಕಟ್ಟೆಯಲ್ಲಿ ರೋಬಸ್ಟಾ ಹಸಿ ಕಾಫಿ ಹಣ್ಣುಗಳ ಫಾರ್ಮ್ಗೇಟ್ ಬೆಲೆ ಪ್ರತಿ ಕಿಲೋಗ್ರಾಂಗೆ ದಾಖಲೆಯ ರೂ.172 ಅನ್ನು ಮುಟ್ಟಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕೆಜಿಗೆ ರೂ.115 ಇತ್ತು. ಇದೇ ಸಮಯದಲ್ಲಿ ರೋಬಸ್ಟಾ ಪಾರ್ಚ್ಮೆಂಟ್ ಕಾಫಿ ಬೀಜಗಳ ಸ್ಪಾಟ್ ಬೆಲೆಯು ಕೆಜಿಗೆ ರೂ.315 ಕ್ಕೆ ಸರ್ವಕಾಲಿಕ ಏರಿಕೆ ದಾಖಲಿಸಿದೆ. 2023 ರ ಇದೇ ಅವಧಿಯಲ್ಲಿ ದರ ಕಿಲೋಗೆ 220 ರೂಪಾಯಿಗಳಷ್ಟಿತ್ತು. ಮಾರ್ಚ್ 2022 ರಲ್ಲಿ ಕಚ್ಚಾ ಹಣ್ಣುಗಳು ಮತ್ತು ಪಾರ್ಚ್ ಮೆಂಟ್ ಗೆ ದರ ಕ್ರಮವಾಗಿ ರೂ. 80 ಮತ್ತು ರೂ. 145 ರಷ್ಟಿತ್ತು. ಕೊಡಗಿನ ಮಾರುಕಟ್ಟೆಯಲ್ಲಿ ಬುಧವಾರ ರೊಬಸ್ಟಾ ಪಾರ್ಚ್ಮೆಂಟ್ ದರ 50 ಕೆಜಿ ಚೀಲಕ್ಕೆ 14,400 ರಿಂದ 14,700 ರೂಪಾಯಿಗಳಿಗೆ ಏರಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ.…
NEWS DESK *ಮೈತ್ರಿ ಫೋಟೋ*






