ಲೇಖಕ: admin

ಮಡಿಕೇರಿ ಡಿ.12 NEWS DESK : ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ತಿಳಿಸಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಗೆ ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ‘ಉನ್ನತಿ’ ಭವನದ ಸಭಾಂಗಣದಲ್ಲಿ ‘ಸಹಕಾರ ಸಂಘಗಳ ಆಡಳಿತ ಪರಿಣಾಮಕಾರಿ ನಿರ್ವಹಣೆ’ ಸಂಬಂಧ ಒಂದು ವಾರಗಳ ಕಾಲ ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಗುಣಾತ್ಮಕ ಆಡಳಿತ ನಿರ್ವಹಣೆ ಅಗತ್ಯ. ಆ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸಹಕಾರ ವ್ಯವಸ್ಥೆಯಲ್ಲಿ ಕಲಿಕೆಯು ನಿರಂತರವಾಗಿದ್ದು, ಸಾಲದ ಪ್ರಕ್ರಿಯೆ ಮತ್ತು ಮಾರ್ಗಸೂಚಿಗಳು ಕಾಲ ಕಾಲಕ್ಕೆ ಬದಲಾಗುತ್ತಾ ಹೋಗುತ್ತವೆ. ಆದ್ದರಿಂದ ಸಹಕಾರ ಕಾಯ್ದೆ ಮತ್ತು ತಿದ್ದುಪಡಿ ಬಗ್ಗೆ ಮನನ ಮಾಡಿಕೊಳ್ಳಬೇಕು ಎಂದು ಬಾಂಡ್…

Read More

ಸೋಮವಾರಪೇಟೆ ಡಿ.12 NEWS DESK : ಮಕ್ಕಳಿಗೆ ವಿಜ್ಞಾನದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆ ಬಹಳ ಮುಖ್ಯವಾಗಿದ್ದು, ಶಿಕ್ಷಕರು ವಿಜ್ಞಾನದ ಬಗ್ಗೆ ಮಕ್ಕಳಿಗೆ ಹೆಚ್ಚಿನ ತಿಳುವಳಿಕೆ ನೀಡುವ ಮೂಲಕ ಅವರಲ್ಲಿ ವೈಜ್ಞಾನಿಕ‌ ಮನೋಭಾವ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಲು ವಿಶೇಷ ಗಮನ ಹರಿಸಬೇಕು. ಇದಕ್ಕಾಗಿ ಶಾಲೆಗಳಲ್ಲಿ ಶಿಕ್ಷಕರು ತಮ್ಮ ಬೋಧನೆಯಲ್ಲಿ ಪ್ರಾಯೋಗಿಕ ಸಲಕರಣೆ ಬಳಸುವ ಮೂಲಕ ಅವರಲ್ಲಿ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ‌ಆಸಕ್ತಿ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿನ ರಾಷ್ಟ್ರೀಯ‌ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನಿಗಳ ಆವಿಷ್ಕಾರದ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡು ತಮ್ಮನ್ನು ಸಂಶೋಧನಾ ಪ್ರವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆಗಳಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ…

Read More

ಮಡಿಕೇರಿ ಡಿ.12 NEWS DESK : ಇತ್ತೀಚಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಬಂದೂಕಿನಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಂದೂಕಿಗೆ ಸಂಬಂಧಿಸಿದ ಕಾನೂನು ಬದಲಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಲಹ ನಡೆಯುವ ಸಂದರ್ಭ ಮಹಿಳೆಯರು, ವಯೋವೃದ್ಧರು ಹಾಗೂ ಮಕ್ಕಳ ಮೇಲೆ ಕೂಡ ಬಂದೂಕಿನಿಂದ ದಾಳಿಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಉತ್ತಮ ನಾಗರೀಕ ಸಮಾಜ ನಿರ್ಮಾಣಕ್ಕೆ ಅಡ್ಡಿಯಾಗಿದೆ. ಪ್ರಸ್ತುತ ಇರುವ ಬಂದೂಕು ಕಾನೂನು ಅಪರಾಧ ತಡೆಗಟ್ಟಲು ವಿಫಲವಾಗಿದ್ದು, ಜನಸಾಮಾನ್ಯರ ರಕ್ಷಣೆ ಅಸಾಧ್ಯವಾಗಿದೆ. ಕೊಡಗಿನ ಸಂಸ್ಕೃತಿಗೆ ವಿರುದ್ಧವಾದ ಪ್ರಕ್ರಿಯೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಬೇಕು. ನಾಗರೀಕರ ರಕ್ಷಣೆಗಾಗಿ ಬಂದೂಕು ಕಾನೂನು ಬದಲಾವಣೆಗೆ ಒತ್ತಡ ಹೇರಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.

Read More

ನಾಪೋಕ್ಲು ಡಿ.12 NEWS DESK : ಬಲ್ಲಮಾವಟಿ ಶ್ರೀ ಭಗವತಿ ದೇವಾಲಯದ ಗರ್ಭಗುಡಿ ಹಾಗೂ ಮುಖ ಮಂಟಪ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಶಡಾಧಾರ ಪೂಜೆ ಶಡಾಧಾರ ಪೂಜಾ ವಿಧಿ ವಿಧಾನಗಳು ಶ್ರದ್ಧಾ ಭಕ್ತಿಯಿಂದ ಜರುಗಿತು. ದೇವಾಲಯದ ಹೃದಯ ಭಾಗದ ಗರ್ಭಗುಡಿಯ ನಿರ್ಮಾಣಕ್ಕೆ ನೆಲ ಮಟ್ಟದಿಂದ 7.25 ಅಡಿ ಭೂಮಿಯ ಒಳಗಿನಿಂದ ಅಡಿಪಾಯ ಹಾಕಿದ್ದು, ಗರ್ಭಗುಡಿ ಹಾಗೂ ಮುಖ ಮಂಟಪ ಅಡಿಪಾಯಕ್ಕೆ ಉಪ್ಪು ಮಿಶ್ರಿತ ಮರಳು ತುಂಬಿಸುವ ಕಾರ್ಯವನ್ನು ಊರಿನವರು ನೆರವೇರಿಸಿದರು. ಪೂಜೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಸ್ಥಾನದ ತಕ್ಕ ಮುಖ್ಯಸ್ಥರಾದ ಕೋಟೆರ ಸುಬ್ಬಯ್ಯ, ನೆರವಂಡ ಭೀಮಯ್ಯ, ಅಧ್ಯಕ್ಷರು ಕೋಟೆರ ಸುಬ್ಬಯ್ಯ, ಉಪಾಧ್ಯಕ್ಷರಾದ ಬೈರುಡ ಮಾಚಯ್ಯ, ಕಾರ್ಯಾಧ್ಯಕ್ಷರು ಮತ್ತು ಖಜಾಂಚಿ ಬೊಟ್ಟೋಳಂಡ ತಿಮ್ಮಯ್ಯ, ಚಂಗೇಟಿರ ಅಪ್ಪಯ್ಯ, ಕಾರ್ಯದರ್ಶಿ ಕೋಟೆರ ಧನುಷ್ ಬೋಪಣ್ಣ, ಮಾಜಿ ಕಾರ್ಯದರ್ಶಿ ಅಪ್ಪಚೆಟ್ಟೊಳಂಡ ರಾಜಭೀಮಯ್ಯ, ತಕ್ಕ ಮುಖ್ಯಸ್ಥರು, ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ತಂತ್ರಿ ದಿವಾಕರ್ ಭಟ್, ಮುಖ್ಯ ಅರ್ಚಕ…

Read More

ನಾಪೋಕ್ಲು ಡಿ.12 NEWS DESK  : ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ ಹಾಗೂ ಹದಿಹರೆಯದವರ ಸಮಸ್ಯೆಗಳ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಸೂಪರ್ವೈಸರ್ ಸುನಿತಾ ಮುತ್ತಣ್ಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ಕಾಯಿಲೆ ಹರಡುವ ಮತ್ತು ತಡೆಗಟ್ಟುವ ವಿಧಾನ, ಚಿಕಿತ್ಸೆ, ಸುರಕ್ಷತೆ ಹಾಗೂ ಅನುಸರಿಸಬೇಕಾದ ಕ್ರಮಗಳ ಬಗ್ಗೆ, ಆರೋಗ್ಯಕರ ಜೀವನ ನಡೆಸುವ ಬಗ್ಗೆ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಲೈಡ್ ಶೋ ಮುಖಾಂತರ ಅರಿವು ಮೂಡಿಸಿದರು. ಏಡ್ಸ್‍ಅನ್ನು ಜಾಗೃತಿಯಿಂದ ಮತ್ತು ಜ್ಞಾನದಿಂದ ನಿಯಂತ್ರಿಸಬಹುದು. ಯುವ ಪೀಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು. ಹದಿಹರೆಯದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಬರುತ್ತಿದ್ದು ಯಾವುದೇ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಕುಗ್ಗದೆ ತಮ್ಮ ಆರೋಗ್ಯದ ಬಗ್ಗೆ ತಿಳಿದುಕೊಂಡರೆ ಅವರು ಸುರಕ್ಷಿತ ಮತ್ತು ಬಲಿಷ್ಠರಾಗುತ್ತಾರೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿ ಆರೋಗ್ಯಕರ ಸಂಬಂಧಗಳ ಬಗ್ಗೆ ಅರಿವು…

Read More

ಮಡಿಕೇರಿ ಡಿ.12 NEWS DESK : ಕೊಡಗು ಜಿಲ್ಲೆಯ ಪ್ರಸಿದ್ಧ ಕೇಂದ್ರವಾದ ಮೇಕೇರಿ ಮಸೀದಿಯ ಮಖಾಂ ಉರೂಸ್ ಸಮಾರಂಭವು 2026 ಏ.24 ರಿಂದ 28ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮೇಕೇರಿಯ ಕಿಜರ್ ಜುಮ್ಮಾ ಮಸೀದಿ ಮತ್ತು ಮನವಿರುಲ್ ಇಸ್ಲಾಂ ಅರಬ್ಬಿ ಮದರಸದ ಪ್ರಧಾನ ಕಾರ್ಯದರ್ಶಿ ಎಂ.ಎಲ್.ರಹೀಮ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.    

Read More

ಮಡಿಕೇರಿ ಡಿ.12 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಮುಕ್ತ ಯುವ ಅಭಿಯಾನದ ಸಮಾರೋಪ ಸಮಾರಂಭವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎಲ್.ಶ್ರೀನಿವಾಸ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಥಮ ದರ್ಜೆ ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ ವಿಷಯದ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಡಾ.ರಾಘವ್ ಬಿ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಎಫ್‍ಎಂಸಿ ಕಾಲೇಜು ಎನ್‍ಎಸ್‍ಎಸ್ ಘಟಕಾಧಿಕಾರಿ ಡಾ.ಶೈಲಾ ಅವರು ಮಾತನಾಡಿದರು.   ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಪುನೀತ ರಾಣಿ ಎಸ್. ಹಾಗೂ ಎನ್.ಎಸ್.ಎಸ್ ಅಧಿಕಾರಿ ಅಲೋಕ್ ಬಿಜೈ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಹಾಗೂ ಎಫ್.ಎಂ.ಸಿ. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ತಾಲ್ಲೂಕು ಹಿರಿಯ…

Read More

ಮಡಿಕೇರಿ ಡಿ.12 NEWS DESK : ನಗರದ ಸ್ಪೈಸಸ್ ಅಂಗಡಿಯೊಂದರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನ ಮಾಡುವ ವಿಡಿಯೋವನ್ನು ಚಿತ್ರೀಕರಿಸಿ ವೈರಲ್ ಮಾಡಿರುವ ಪ್ರಕರಣ ವ್ಯಾಪಾರಿ ಕ್ಷೇತ್ರದ ಗೌರವಕ್ಕೆ ದಕ್ಕೆ ಉಂಟು ಮಾಡಿದೆ. ಈ ರೀತಿಯ ಪ್ರಕರಣಗಳು ಮುಂದೆ ನಡೆಯದಂತೆ ವರ್ತಕ ಸಮುದಾಯ ಎಚ್ಚರದಿಂದಿರಬೇಕು ಮತ್ತು ಸಿಬ್ಬಂದಿಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ನಿರ್ದೇಶಕ ಎಂ.ಧನಂಜಯ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿಗಳನ್ನು ಅವಹೇಳನ ಮಾಡಿರುವ ಪ್ರಕರಣ ರಾಜ್ಯವ್ಯಾಪಿ ಟೀಕೆಗೆ ಗುರಿಯಾಗಿದ್ದು, ವರ್ತಕ ಸಮುದಾಯ ತಲೆ ತಗ್ಗಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜ್ಞಾವಂತರ ಜಿಲ್ಲೆ ಕೊಡಗಿನ ವರ್ತಕರು ಪ್ರವಾಸೋದ್ಯಮವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಕಾನೂನಿಗೆ ವಿರುದ್ಧವಾದ ಈ ರೀತಿಯ ಚಟುವಟಿಕೆಗಳಿಂದ ವ್ಯಾಪಾರೋದ್ಯಮಕ್ಕೂ ಹೊಡೆತ ಬೀಳಲಿದೆ. ನಗರದ ವರ್ತಕರು ಹಾಗೂ ಅಂಗಡಿ ಮಳಿಗೆಗಳ ಮಾಲೀಕರು ತಮ್ಮ ಬಳಿ ಕಾರ್ಯನಿರ್ವಹಿಸುತ್ತಿರುವವರ ಬಗ್ಗೆ ಗಮನ ಹರಿಸಬೇಕು. ಈ ರೀತಿಯ ನಿಯಮಬಾಹಿರ ವರ್ತನೆಗಳಿಗೆ…

Read More

ವಿರಾಜಪೇಟೆ ಡಿ.12 NEWS DESK  : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ನಡೆದ ಕಾವೇರಿ ಕಲೋತ್ಸವದ ಕ್ರೀಡಾ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರು, ಥ್ರೋಬಾಲ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ತಂಡದಲ್ಲಿ ಸ್ಪರ್ಧಿಸಿದ ಆಟಗಾರ್ತಿಯರು 10ನೇ ತರಗತಿಯ ಮುಲ್ಲೆಂಗಡ ಪೂರ್ವಿಕ ಪೂವಮ್ಮ, ನೀಲಮಾಡ್,  ತನ್ಯ ರೈ ಬಿ.ಎಸ್ ,ಹನಾಫಲಕ್ ಎಸ್.ಎಂ.ಕುಟ್ಟನ ಯಶ್ಮಿತ, ಪಳೆಯಂಡ ಕಾಜಲ್ ಪಿ.ಎಸ್, 9ನೇ ತರಗತಿಯ ಚೇಂದಿರ ದರಾನಿಯತ ಸ್ಲಿನ್ಟಿ ಜೆ, ನೆಲ್ಲಚಂಡ ಪೊನ್ನಮ್ಮ ಎನ್, ಗುಡ್ಡಂಡ ಮಾನ್ವಿಮುತ್ತಮ್ಮ, ಬೊವ್ವೇರಿಯಂಡ ಹನ್ಸಿಕ ಪೊನ್ನಪ್ಪ ಹಾಗೂ 8ನೇ ತರಗತಿಯ ನಾಯಕಂಡ ಮಾನ್ಯ ಎನ್.ಬಿ,ಹೋಲಿಕ ಪಿ.ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿರುತ್ತಾರೆ. ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಬೋಧಕ-ಬೋದಕೇತರ ವೃಂದದವರು, ವಿದ್ಯಾರ್ಥಿಗಳ ಪೋಕಷರು ಅಭಿನಂದಿಸಿದ್ದಾರೆ.

Read More

ನಾಪೋಕ್ಲು ಡಿ.12 NEWS DESK : ರಾಜ್ಯ ಮಟ್ಟದ ರಿಲೆಯಲ್ಲಿ ಡಿ.ಕೆ.ಭವಿಷ್ಯ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಲಕ್ಕೋದಲ್ಲಿ ನಡೆಯಲಿರುವ 69ನೇ ರಾಷ್ಟ್ರ ಮಟ್ಟದ 4*400 ರಿಲೆ ಆಯ್ಕೆಯಾಗಿದ್ದಾಳೆ. ಡಿ.ಕೆ.ಭವಿಷ್ಯ ದೇರಾಜೆ ಕಿರಣ್ ಹಾಗೂ ಗೀತಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.

Read More