ಲೇಖಕ: admin

ಕುಶಾಲನಗರ ಮಾ.27 NEWS DESK : ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ (ಎನ್ ಸಿ ಇ ಆರ್ ಟಿ )ಯಲ್ಲಿ 2019 ರಿಂದ 2023 ರ ಸಾಲಿನ ಬಿಎಸ್ಸಿ ಬಿಎಡ್ ಇಂಟಿಗ್ರೇಟೆಡ್ ( ಪಿಸಿಎಂ ) ಶಿಕ್ಷಣದಲ್ಲಿ ಮಾಡಿದ ಅಪೂರ್ವ ಸಾಧನೆಗಾಗಿ ಕೊಡಗಿನ ಬಾನಂಡ ಡಿ.ವಿದ್ಯಾಶ್ರೀ ಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಅಕಾಡೆಮಿಕ್ ಎಕ್ಸೆಲೆನ್ಸ್ ಅವಾರ್ಡ್ ಪ್ರಶಸ್ತಿ ಲಭಿಸಿದೆ. ಮೂಲತಃ ಮಡಿಕೇರಿ ನಿವಾಸಿಯಾಗಿರುವ ಪ್ರಸ್ತುತ ಕುಶಾಲನಗರದ ಕೊಪ್ಪಾದಲ್ಲಿ ವಾಸವಿರುವ ಇವರು ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದರು. ನಂತರ ಮಡಿಕೇರಿ ಸಂತ ಜೋಸೆಫರ ಪಿಯು ಕಾಲೇಜಿನ ದ್ವಿತೀಯ ಪಿಯುಸಿಯಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ಹುಣಸೂರು ವನ್ಯಜೀವಿ ವಿಭಾಗದ ದೊಡ್ಡಹರವೆ ಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ದಲ್ಲಿರುವ ಬಾನಂಡ ದೇವಿಪ್ರಸಾದ್ ಹಾಗೂ ಪಿ.ಎಂ.ನೈನಾ ದಂಪತಿಗಳ ಪುತ್ರಿಯಾಗಿರುವ ವಿದ್ಯಾಶ್ರೀ ಇದೀಗ ಮೈಸೂರಿನಲ್ಲಿರುವ ಕರ್ನಾಟಕ ವಿಶ್ವ ವಿದ್ಯಾನಿಲಯದಲ್ಲಿ ಎಂಎಸ್ಸಿ ಎಂ.ಎಡ್ ಸ್ನಾತ ಕೋತ್ತರ ಪದವಿಗೆ ಸೇರ್ಪಡೆಯಾಗಿದ್ದಾರೆ.

Read More

ಸೋಮವಾರಪೇಟೆ ಮಾ.27 NEWS DESK  : ಲೋಕಸಭಾ ಚುನಾವಣೆಯ ಕಾವು ಏರತೊಡಗಿದ್ದು, 28 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಸುಲಲಿತ ಹಾಗೂ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಲ್ಲಲ್ಲಿ ಚೆಕ್ ಪೋಸ್ಟ್ ಗಳ  ಮೂಲಕ ಹಣ ಮತ್ತಿತರೆ ಆಮಿಷದ ವಸ್ತುಗಳ ಸಾಗಾಟಕ್ಕೆ ಹದ್ದಿನ ಕಣ್ಣಿರಿಸಿದೆ. ಆದರೆ ಇಂಥ ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕನಿಷ್ಠ ಮೂಲಬೂತ ಸೌಕರ್ಯ ಒದಗಿಸದೆ ಇರುವುದು ವಿಪರ್ಯಾಸ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸೋಮವಾರಪೇಟೆಗೆ ಸಮೀಪದ ಹಾಸನ ಕೊಡಗು ಗಡಿಭಾಗದ ಬಾಣಾವಾರಗೇಟ್ ನಲ್ಲಿರುವ ಚೆಕ್ ಪೋಸ್ಟ್ ನಲ್ಲಿ ಶಾಮಿಯಾನ ಅಥವಾ ತಾತ್ಕಾಲಿಕ ಶೇಡ್ ಕೂಡ ನಿರ್ಮಿಸದೆ ಅಧಿಕಾರಿಗಳು ಸುಡುಬಿಸಿಲಿನಲ್ಲಿಯೆ ಕುಳಿತು ಕಾರ್ಯ ನಿರ್ವಹಿಸಿದರೆ ಆನೆಯ ಹಾವಳಿ ಇರುವ ಇಲ್ಲಿ ರಾತ್ರಿಯವೇಳೆ ಯಾವುದೇ ರಕ್ಷಣೆ ಇಲ್ಲದೆ ಜೀವ ಕೈಯಲ್ಲಿ ಹಿಡಿದು ಕರ್ತವ್ಯ ನಿರ್ವಹಿಸುವಂತಾಗಿದೆ. ಸರಕಾರ ಚುನಾವಣೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚಮಾಡುವಾಗ ಚುನಾವಣಾ…

Read More

ವಿರಾಜಪೇಟೆ ಮಾ.27  NEWS DESK :  ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐ.ಕ್ಯೂ.ಎ.ಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿಯ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ಕುರಿತು  ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹೆಚ್.ಪಿ.ನಿರ್ಮಲ ಮಾತನಾಡಿ,  ಇಂದಿನ ಯುವ ಸಮುದಾಯವು ಮತದಾನವನ್ನು ಕೇವಲ ಹಕ್ಕು ಎಂದು ಪರಿಗಣಿಸದೆ ದೇಶದ ಜವಾಬ್ದಾರಿಯುತ ನಾಗರಿಕನಾಗಿ ಮತದಾನ ನನ್ನ ಕರ್ತವ್ಯವೆಂದು ಭಾವಿಸಿಸಿ ಸದೃಢ ಭಾರತವನ್ನು ನಿರ್ಮಿಸುವಲ್ಲಿ ವಿವೇಚನೆಯಿಂದ ನಮ್ಮ ರಾಜಕೀಯ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ, ವಿದ್ಯಾವಂತ ಯುವಜನತೆಯು ಮತದಾನದಂತಹ ರಾಜಕೀಯ ಚಟುವಟಿಕೆಗಳನ್ನು ಅಸಡ್ಡೆಯಿಂದ ಕಾಣುತ್ತಿದ್ದು, ಇದು ನಮ್ಮ ದೇಶದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಯುವಜನತೆಯು ಹೆಚ್ಚು ಪರಿಣಾಮಕಾರಿಯಾಗಿ  ಆಲೋಚಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ…

Read More

ನಾಪೋಕ್ಲು  ಮಾ.27 NEWS DESK  : ಕೊಡವ ಕುಟುಂಬ ತಂಡಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ನಾಪೋಕ್ಲುವಿನಲ್ಲಿ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆ ಜರುಗಲಿದೆ. ಪ್ರತಿವರ್ಷ ಜರುಗುವ ಹಾಕಿ ಉತ್ಸವ ಹೆಚ್ಚೆಚ್ಚು ಜನಪ್ರಿಯತೆ ಗಳಿಸಿಕೊಳ್ಳುತ್ತಿದೆ. ಹಾಕಿ ನಮ್ಮೆಯ ಆಯೋಜಕರಾದ ಕುಂಡ್ಯೋಳಂಡ ಕುಟುಂಬಸ್ಥರು ಬಿರುಸಿನ ಸಿದ್ಧತೆ ನಡೆಸಿದ್ದು, ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಮೈದಾನಗಳ ನಿರ್ಮಾಣ, ಗ್ಯಾಲರಿ, ವೇದಿಕೆ, ಸ್ಟಾಲ್‍ಗಳ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಗಳು ಭರದಿಂದ ಸಾಗುತ್ತಿವೆ. ಮಾ.30 ರಿಂದ ಏ.28 ರವರೆಗೆ ಒಂದು ತಿಂಗಳ ಕಾಲ ಕೌಟುಂಬಿಕ ಹಾಕಿ ಉತ್ಸವ ನಡೆಯಲಿದ್ದು, ಮಾ.30ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಏ.28 ರಂದು ಅಂತಿಮ ಪಂದ್ಯ ನಡೆಯಲಿದೆ. ಸುಮಾರು 400 ಕೊಡವ ಕುಟುಂಬಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕುಟುಂಬಸ್ಥರು ಕಾರ್ಯೋನ್ಮುಖರಾಗಿದ್ದು, 360 ಕುಟುಂಬ ತಂಡಗಳು ಈ ಬಾರಿಯ ಹಾಕಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿವೆ ಅಂತೆಯೇ ಕುಂಡ್ಯೋಳಂಡ ಹಾಕಿ ಉತ್ಸವ ವಿಶ್ವ ದಾಖಲೆ ಪುಟ…

Read More

ನಾಪೋಕ್ಲು ಮಾ.27 NEWS DESK : ವೆಸ್ಟ್ ಕೊಳಕೇರಿಯ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ ನಾಲ್ಕು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವದ ಅಂಗವಾಗಿ ಪಟ್ಟಣಿ ಹಬ್ಬ, ದೇವರ ಪ್ರದರ್ಶನ ಬಲಿ,ವಿಶೇಷ ಮಹಾಪೂಜೆ, ಆಟ್ ಪಾಟ್ ,ತೆಂಗಿನಕಾಯಿಗೆ ಗುಂಡು ಹೊಡೆಯುವುದು, ದೇವರ ಜಳಕ, ದೇವರ ಕಳಸ ಬೋಟೆಕಾರ ದೇವರ ಹಬ್ಬ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಈ ಸಂದರ್ಭ ದೇವಾಲಯದ ದೇವತಕ್ಕರಾದ ಕಾಂಡಂಡ ಕುಟುಂಬಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಎಸ್. ಕುಟ್ಟಪ್ಪ, ಉಪಾಧ್ಯಕ್ಷ ಕಲಿಯಂಡ ಕಾಳಪ್ಪ, ಕಾರ್ಯದರ್ಶಿ ಕುಂಡ್ಯೋಳಂಡ ವಿಶು ಪೂವಯ್ಯ, ಖಜಾಂಚಿ ಜಯ ಕರುಂಬಯ್ಯ, ಆಡಳಿತ ಮಂಡಳಿ ಸದಸ್ಯರು ಹಾಗೂ ಊರ ಮತ್ತು ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು. ಉತ್ಸವದ ಪೂಜಾ ವಿಧಿ ವಿಧಾನವನ್ನು ಮುಖ್ಯ ಅರ್ಚಕ ಸೀತಾರಾಮ್ ಭಟ್ ಮತ್ತು ಬಳಗ ನೆರವೇರಿಸಿ ಕೊಟ್ಟರು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಮಾ.27 NEWS DESK : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ ಗೋ ಮಾತೆಗೆ ನೀರುಣಿಸುವ ಮೂಲಕ ನಾಡಿನೆಲ್ಲೆಡೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಪ್ರಾರ್ಥಿಸಿ, ರೈತರಿಗೆ ಸಾಂಕೇತಿಕವಾಗಿ ನೇಗಿಲು ನೀಡಿ ಗೌರವಿಸಿದರು. ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಆರ್.ರಘು ಕೌಟಿಲ್ಯ, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಸಚಿವ ಎಸ್.ಎ.ರಾಮದಾಸ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ಮೈಸೂರು ಜಿಲ್ಲಾ ಅಧ್ಯಕ್ಷ ಎಲ್.ನಾಗೇಂದ್ರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.27 NEWS DESK : ವಿಶ್ವ ಹಿಂದೂ ಪರಿಷತ್  ಕೊಡಗು ಘಟಕ, ಬನಶಂಕರಿ ಘಟಕ ಮತ್ತು ರಾಜರಾಜೇಶ್ವರಿ ನಗರ ಶ್ರೀ ರಾಯರ ಮಠದ ಪ್ರಮುಖರು ಭಾಗಮಂಡಲ ಹಾಗೂ ತಲಕಾವೇರಿಗೆ ಭೇಟಿ ನೀಡಿದರು. ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಕಾವೇರಿ ಮಾತೆಗೆ ಬೆಳ್ಳಿಯ ಬಾಗಿನವನ್ನು ಅರ್ಪಿಸಿದರು. ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ಯ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮಾತನಾಡಿ, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜನರು ಮಳೆಯ ಅಭಾವದಿಂದ ನೀರಿಲ್ಲದೆ ಬರಗಾಲದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ.ಈ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಕಾವೇರಿನದಿಯ ಉಗಮ ಸ್ಥಾನ ತಲಕಾವೇರಿಗೆ ಆಗಮಿಸಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು. ಈ ಸಂದರ್ಭ ಭಜರಂಗದಳ ಪ್ರಾಂತ್ಯ ಸಂಯೋಜಕರಾದ ಪ್ರಪಂಚನ್, ವಿ.ಹಿಂ.ಪ. ಕೊಡಗು ಜಿಲ್ಲಾ ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಕಾರ್ಯಾಧ್ಯಕ್ಷರಾದ ಸುರೇಶ್ ಮುತ್ತಪ್ಪ, ಸಹಕಾರ್ಯದರ್ಶಿ ಕೇತೀರ ಯತೀಶ್, ಭಜರಂಗದಳ ಜಿಲ್ಲಾ ಸಂಯೋಜಕರಾದ ಪ್ರವೀಣ್ ಸಿದ್ದಾಪುರ, ಸಹ ಸಂಯೋಜಕರಾದ ನವೀನ್ ಪೂಜಾರಿ, ದುರ್ಗಾವಾಹಿನಿ ಜಿಲ್ಲಾ ಸಂಯೋಜಕಿ ರಿಶ್ತ ಚಂಗಪ್ಪ,…

Read More

ಮಡಿಕೇರಿ ಮಾ.27 NEWS DESK : ಕೊಡಗು ಜಿಲ್ಲಾ‌ ಫುಟ್ಬಾಲ್ ಸಂಸ್ಥೆಯ ಅಧೀನದಲ್ಲಿ ಅಮ್ಮತ್ತಿಯ ಪ್ರೌಢ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಗೆ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಪೋಷಕ  ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ  ಚಾಲನೆ ನೀಡಿದರು. ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ,ರಾಜ್ಯ ಫುಟ್ಬಾಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಜಗದೀಶ್ ಕೊಡಗರಹಳ್ಳಿ, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಖಜಾಂಚಿ ದೀಪು ಮಾಚಯ್ಯ, ಸದಸ್ಯರಾದ ಲಿಜೇಶ್ ಅಮ್ಮತ್ತಿ ಹಾಜರಿದ್ದರು. ಮೊದಲ ದಿನ ಆರು ತಂಡಗಳಿಗೆ ಗೆಲುವು: ಕೊಡಗು ಜಿಲ್ಲಾ ಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಯ ಮೊದಲ ದಿನ ಆರು ತಂಡಗಳು ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಚೌಡೇಶ್ವರಿ ಎಫ್.ಸಿ ಅಮ್ಮತ್ತಿ ‌ತಂಡವು‌ 4-0 ಗೋಲುಗಳ ಅಂತರದಿಂದ ಕ್ಯಾಪ್ಟನ್ಸ್ ‌ಇಲೆವೆನ್ ಪಾಲಿಬೆಟ್ಟ ತಂಡವನ್ನು ಮಣಿಸಿತು. ಎರಡನೇ ‌ಪಂದ್ಯದಲ್ಲಿ ಎನ್.ವೈ.ಸಿ ಕೊಡಗರಹಳ್ಳಿ ತಂಡವು 1-0 ಗೋಲುಗಳ ಅಂತರದಿಂದ ಎಂ.ಸಿಸಿ ಮಡಿಕೇರಿ ತಂಡವನ್ನು ಸೋಲಿಸಿತು. ಮೂರನೇ ಪಂದ್ಯದಲ್ಲಿ ಅಮಿಟಿ ಯುನೈಟೆಡ್ ಎಫ್.ಸಿ ಗದ್ದೆಹಳ್ಳ…

Read More

ಮಡಿಕೇರಿ ಮಾ.27 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಗಾಳಿಬೀಡು ನವೋದಯ ವಿದ್ಯಾಲಯದ ಕನ್ನಡ ಶಿಕ್ಷಕ ಮಾರುತಿ ದಾಸಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ. ಶರಣ ಸಾಹಿತ್ಯ ಚಟುವಟಿಕೆಗಳನ್ನು ತಾಲ್ಲೂಕಿನಾದ್ಯಂತ ಹೆಚ್ಚಾಗಿ ಪ್ರಚಾರ ಪಡಿಸುವ ಮೂಲಕ ಜನಸಾಮಾನ್ಯರಲ್ಲಿ ವಚನ ಸಾಹಿತ್ಯದ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದ್ದಾರೆ.

Read More

ವಿರಾಜಪೇಟೆ  ಮಾ.27 NEWS DESK : ಭಾರತದ ಪ್ರಜಾಪ್ರಭುತ್ವದ ಯಶಸ್ಸಿಗೆ ಯುವ ಜನತೆಯ ಪಾತ್ರ ಬಹು ಮುಖ್ಯವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಪವಿತ್ರ ರೈ  ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಐಕ್ಯೂಎಸಿ, ಎನ್. ಎಸ್. ಎಸ್ ಹಾಗೂ ಮತದಾರರ ಸಾಕ್ಷರತಾ ಘಟಕಗಳ ವತಿಯಿಂದ ಜರುಗಿದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ನಮ್ಮ ಸರ್ಕಾರ ಹಾಗೂ ಮತದಾನದ ಪದ್ದತಿಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು. ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ದ ನಡುವಿನ ವ್ಯತ್ಯಾಸವನ್ನು ತಿಳಿಸಿದ ಅವರು ಸ್ವತಂತ್ರ, ಸಮಾನತೆ, ನ್ಯಾಯ, ಬ್ರಾತೃತ್ವ ಪ್ರಜಾಪ್ರಭುತ್ವದ ಮೂಲ ಆಧಾರ ಅಂಶಗಳಾಗಿವೆ ಎಂದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯವಾಗಿದ್ದು, ಪ್ರತಿಯೊಬ್ಬರು ಮತವನ್ನು ಚಲಾಯಿಸಬೇಕು ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ ಇಡೀ ವಿಶ್ವವೇ ಭಾರತದ…

Read More