ಲೇಖಕ: admin

ಮಡಿಕೇರಿ NEWS DESK :  ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು  ಕೊಡಗು ಡಿಸಿಸಿ ಬ್ಯಾಂಕಿನ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕರಾದ ಪಟ್ಟಡ ಪ್ರೇಮ ಕರುಂಬಯ್ಯ ಅವರ ಮನೆಯ ಆವರಣದಲ್ಲಿ ನಡೆಸಲಾಯಿತು. ಮಂಡಳಿಯ ಅಧ್ಯಕ್ಷೆ  ರಾಣಿ ಅರುಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅಪ್ಪನೆರವಂಡ ವಿಲೀನ ದೇವಯ್ಯ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡು ಸದೃಡ ಭಾರತ ನಿರ್ಮಿಸುವಲ್ಲಿ ತಮ್ಮ ತಮ್ಮ ಜವಾಬ್ಧಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಪಟ್ಟಡ ಪ್ರೇಮ ಕರುಂಬಯ್ಯ ಮಾತನಾಡಿ, ಮಹಿಳೆಯರು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾಲಂಭಿಗಳಾಗುವಂತೆ ಅಭಿವೃದ್ಧಿಯತ್ತ ಮುನ್ನಡೆಯಬೇಕೆಂದು ತಿಳಿಸಿದರು. ಕಾರ್ಯಕ್ರಮದ ಪ್ರಯುಕ್ತ ಜನನಿ ಮಹಿಳಾ ಮಂಡಳಿಯ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮ, ವಿವಿಧ ರೀತಿಯ ಆಟಗಳನ್ನು ಏರ್ಪಡಿಸಲಾಗಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಿಂಡಿಕೇಟ್‌ ಬ್ಯಾಂಕಿನ ನಿವೃತ ಅಸಿಸ್ಟೆಂಟ್ ಮ್ಯಾನೇಜರ್ ನಾಳಿಯಮಂಡ ಸುಶೀಲಾ ಗಾಂಧಿ, ನಿವೃತ್ತ ಉಪನ್ಯಾಸಕರಾದ ಪಟ್ಟಡ ಕರುಂಬಯ್ಯ ಹಾಜರಿದ್ದರು. ಜನನಿ…

Read More

ಮೈಸೂರು ಮಾ.24 NEWS DESK : ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ಜಿಲ್ಲೆಗಳ ಕಾಂಗ್ರೆಸ್ ಮುಖಂಡರುಗಳ ಸಭೆ ನಡೆಸಿದರು. ಮೈಸೂರಿನಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ||ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮೈಸೂರು ಜಿಲ್ಲೆಯ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು.

Read More

ನಾಪೋಕ್ಲು ಮಾ.24 NEWS DESK : ನಾಪೋಕ್ಲು ಸಮೀಪದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ಊರು ಮತ್ತು ಪರವೂರಿನ ಭಕ್ತರು ಸೇರಿ  ಸಾಂಪ್ರದಾಯಿಕವಾಗಿ ಶ್ರದ್ದಾಭಕ್ತಿಯಿಂದ ಆಚರಿಸಿದರು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತುಪೋರಾಟ ವಿಧಿ ವಿಧಾನ ನಡೆಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹಾಲು ಬಲಿವಾಡು ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ ಮಹಾಪೂಜೆ, ತೀರ್ಥ ಪ್ರಸಾದ ಅನ್ನಸಂತರ್ಪಣೆ ವಿತರಣೆಯಾಯಿತು ದೇವರ ಪ್ರಾರ್ಥನೆಯ ಬಳಿಕ ದೇವರ ಪ್ರದರ್ಶನ ಬಲಿ ಜರುಗಿತು. ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ಮಲ್ಮ ಬೆಟ್ಟಕ್ಕೆ ಶ್ರದ್ದಾಭಕ್ತಿಯಿಂದ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಗ್ರಾಮದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ದಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊಂಡು ದೇವರ ಕಟ್ಟು ಸಡಿಲಿಸಲಾಯಿತು. ನಾಡಿನ ಸುಭಿಕ್ಷಕ್ಕಾಗಿ ವಿಶೇಷ ಪ್ರಾರ್ಥನೆ…

Read More

ಮಡಿಕೇರಿ ಮಾ.24 NEWS DESK : ದುಷ್ಕರ್ಮಿಗಳ ಗುಂಡೇಟಿಗೆ 11 ವರ್ಷದ ಕಾಡುಕೋಣವೊಂದು ಬಲಿಯಾದ ಘಟನೆ ಪಿರಿಯಾಪಟ್ಟಣ  ಮುಖ್ಯರಸ್ತೆಯಿಂದ  ಪಾರದಕಟ್ಟೆ ಕಳ್ಳಬೇಟೆ ತಡೆ ಶಿಬಿರಕ್ಕೆ ಹೋಗುವ ರಸ್ತೆಯ ಮೈಸೂರು-ಕೊಡಗು ಚೈನ್‌ಗೇಟ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶವಾಗಿದ್ದು, ಇಂದು ಬೆಳಗ್ಗೆ ಕಾಡುಕೋಣಕ್ಕೆ ಗುಂಡು ಹೊಡೆದ ಶಬ್ಧ ಕೇಳಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುವ ಸಂದರ್ಭ ವನ್ಯಜೀವಿ ಬೇಟೆಗಾರರು ಪರಾರಿಯಾಗಿದ್ದಾರೆ.  ದುಷ್ಕರ್ಮಿಗಳ ಪತ್ತೆಗಾಗಿ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿದೆ.

Read More

ಮಡಿಕೇರಿ ಮಾ.24 NEWS DESK : ಫೆಡರೇಷನ್ ಆಫ್ ಕೊಡವ ಸಮಾಜದ ವಿಮೆನ್ಸ್ ವಿಂಗ್ ವತಿಯಿಂದ ಬಾಳುಗೋಡಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ವಿಮೆನ್ಸ್ ವಿಂಗ್ ಅಧ್ಯಕ್ಷೆ ಬಲ್ಲಣಮಾಡ ರೀಟಾ ದೇಚಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಾದ ಕುಪ್ಪ0ಡ ಛಾಯ ನಂಜಪ್ಪ,  ಬಲ್ಲಚಂಡ ಲೂಸಿ ನಂಜಮ್ಮ ಹಾಗೂ ಕೋಡಿಮಣಿಯಂಡ ಮೌಲ್ಯ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Read More

ನಾಪೋಕ್ಲು ಮಾ.24 NEWS DESK : ನಾಪೋಕ್ಲು ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ತುಲಾಭಾರ ಸೇವೆ ನಂತರ ಭಕ್ತರು ವಿವಿಧ ರೀತಿಯ ಹರಕೆ ಸಲ್ಲಿಸಿದರು. ಮಹಾಪೂಜೆ ಹಾಗೂ ಭಕ್ತರಿಗೆ ಪ್ರಸಾದ ವಿತರಣೆಯಾಯಿತು. ಎತ್ತುಪೋರಾಟ, ಅನ್ನಸಂತರ್ಪಣೆ ಮತ್ತು ದೇವರ ಪ್ರದರ್ಶನ ಬಲಿ ಜರುಗಿತು. ತಂತ್ರಿ ಸುರೇಶ್ ಶರ್ಮ, ಅರ್ಚಕ ರಮೇಶ್ ಶರ್ಮ, ಸುಧೀರ ಹಾಗೂ ಜಯಚಂದ್ರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ತಕ್ಕ ಮುಖ್ಯಸ್ಥರಾದ ನಾಪನೆರವಂಡ ಪೊನ್ನಪ್ಪ, ಬಾಳೆಯಡ ರಾಜ ಕುಂಞಪ್ಪ, ಬದಂಚೆಟ್ಟೀರ ನಾಣಯ್ಯ, ಆಡಳಿತ ಮಡಳಿ ಅಧ್ಯಕ್ಷ ಮುಂಡಂಡ ನಾಣಯ್ಯ, ಕಾರ್ಯದರ್ಶಿ ಮುಕ್ಕಾಟಿರ ವಿನಯ್, ಖಜಾಂಚಿ ಮನವಟ್ಟಿರ ಪಾಪು ಚಂಗಪ್ಪ, ಮಂಡಿರ ನಂದ, ಅಪ್ಪುಮಣಿಯಂಡ ಸನ್ನು  ಸೋಮಣ್ಣ, ಬದಂಚೆಟ್ಟೀರ ದೇವಯ್ಯ, ಬಾಳೆಯಡ…

Read More

ಮಡಿಕೇರಿ ಮಾ.24 NEWS DESK : ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾದ ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಾಪೋಕ್ಲು ಭಾಗಮಂಡಲ ಮುಖ್ಯ ರಸ್ತೆಯಲ್ಲಿ ಭಾನುವಾರ ಮುಂಜಾನೆ ನಡೆಯಿತು. ನಾಪೋಕ್ಲುವಿನಿಂದ ಭಾಗಮಂಡಲಕ್ಕೆ ತೆರಳುವ ಮುಖ್ಯ ರಸ್ತೆಯ ಚೋನಾಕೆರೆ ಎಂಬಲ್ಲಿ ರಸ್ತೆ ಬದಿಯ ತೋಟದಲ್ಲಿದ್ದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅಲ್ಲದೆ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಮರ ಬಿದ್ದ ಪರಿಣಾಮ ರಸ್ತೆ ಬದಿಯ 5 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಚೋನಾಕೆರೆ, ಕೂರುಳಿ, ನೆಲಜಿ, ಎಮ್ಮೆಮಾಡು, ಬಲ್ಲಮಾವಟಿ, ಪೇರೂರು ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಹಾನಿಯಾದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ವಿದ್ಯುತ್ ಕಂಬಗಳನ್ನು ಮರುಸ್ಥಾಪಿಸಿ ವಿದ್ಯುತ್ ಅಭಾವ ಉಂಟಾಗದಂತೆ ನಾಪೋಕ್ಲು ಸೆಸ್ಕ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕ್ರಮ ಕೈಗೊಂಡರು. ನೆಲಜಿ, ಬಲ್ಲಮಾವಟಿ,…

Read More

ಮಡಿಕೇರಿ ಮಾ.24 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂಪಾಜೆಯ ಚಡಾವು ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ನಾಡಿನ ಜನತೆಗೆ ಒಳಿತಾಗಲಿ ಎಂದು ಕೋರಿದರು. ಇದೇ ಸಂದರ್ಭ ಕೊಯನಾಡಿನ ಸುನ್ನಿ ಮುಸ್ಲಿಂ ಜುಮಾ ಮಸೀದಿಗೆ ಶಾಸಕರು ಭೇಟಿ ನೀಡಿದರು. ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಕೊಯನಾಡು ವತಿಯಿಂದ ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಸುರೇಶ್ ಸಂಪಾಜೆ, ಹನೀಫ್ ಕೊಯನಾಡು, ಇಸ್ಮಾಯಿಲ್, ಲವ ಚಿಣ್ಣಪ್ಪ, ಸಂಪನ್ನ ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.24 NEWS DESK : ರಾಷ್ಟ್ರ ಮಟ್ಟದ ಪೊಲೀಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜಿಲ್ಲಾ ಶಸಸ್ತ್ರ ದಳದ ARSI ಜಿತೇಂದ್ರ ರೈ ಚಿನ್ನದ ಪದಕ ಪಡೆದಿದ್ದಾರೆ. ಫುಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ತೆಲಂಗಾಣದಲ್ಲಿ ನಡೆದ ರಾಷ್ಟç ಮಟ್ಟದ ಪೊಲೀಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಜಿತೇಂದ್ರ ರೈ, ಡಬಲ್ಸ್ ನಲ್ಲಿ ಕಂಚಿನ ಪದಕ ಹಾಗೂ ಮಿಕ್ಸ್ ಡಬಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದು ಕೊಡಗು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ಈ ಹಿಂದೆಯೂ ರಾಷ್ಟç ಹಾಗೂ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಅನೇಕ ಪದಕಗಳನ್ನು ಗೆದ್ದಿದ್ದಾರೆ. ಸೇನಾಪಡೆ, ಭಾರತೀಯ ರೈಲ್ವೆ, ಅರೆಸೇನಾ ಪಡೆ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 28 ರಾಜ್ಯ ಹಾಗೂ ವಿವಿಧ ಘಟಕಗಳು ಈ ಕ್ರೀಡೆಯಲ್ಲಿ ಭಾಗವಹಿಸಿದ್ದವು. ಜಿತೇಂತ್ರ ರೈ ಸಾಧನೆಯನ್ನು ಕೊಡಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

Read More