ಮಡಿಕೇರಿ ಮಾ.24 NEWS DESK : ದೆಹಲಿ ಅಬಕಾರಿ ಹಗರಣದ ಕಂಪನಿಯಿಂದ ಕೋಟ್ಯಾಂತರ ರೂ. ದೇಣಿಗೆ ಸ್ವೀಕರಿಸಿರುವ ಆರೋಪ ಎದುರಿಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ತಕ್ಷಣ ಬಂಧಿಸಬೇಕೆಂದು ಕೊಡಗು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತನ್ನ ಕಂಪನಿಯಿಂದ ಚುನಾವಣಾ ಬಾಂಡ್ಗಳ ಮೂಲಕ ಬಿಜೆಪಿಗೆ ಕೋಟ್ಯಾಂತರ ರೂ. ನೀಡಿರುವುದು ಬಹಿರಂಗಗೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿರುವ ಅವರು, ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಜೆ.ಪಿ.ನಡ್ಡಾ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನೇಕ ಇಡಿ ದಾಳಿಗಳು ಮತ್ತು ಎರಡು ವರ್ಷಗಳ ಸುದೀರ್ಘ ತನಿಖೆ ಹೊರತಾಗಿಯೂ ಯಾವುದೇ ಎಎಪಿ ನಾಯಕರ ಬಳಿಯಾಗಲಿ, ಕಾರ್ಯಕರ್ತರ ಬಳಿಯಾಗಲಿ ಒಂದೇ ಒಂದು ರೂಪಾಯಿ ಅಕ್ರಮ ಹಣವನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ತಪ್ಪಿತಸ್ಥರು ಎನ್ನಲು ಅವರ ಬಳಿ…
ಲೇಖಕ: admin
ಸುಂಟಿಕೊಪ್ಪ ಮಾ.24 NEWS DESK : ಯೇಸುಕ್ರಿಸ್ತರು ಮರಣವನ್ನಪ್ಪಿದ “ಗುಡ್ ಫ್ರೈಡೇ” ಯ ದಿನ ಸಮೀಪಿಸುತ್ತಿದ್ದು, ಕ್ರೈಸ್ತ ಬಾಂಧವರು ಇಂದು ಜಿಲ್ಲೆಯ ಚರ್ಚ್ ಗಳಲ್ಲಿ “ಗರಿಗಳ ಹಬ್ಬದ” ಮೂಲಕ ಪವಿತ್ರ ಸಪ್ತಾಹಕ್ಕೆ ಚಾಲನೆ ನೀಡಿದರು. ಉಪವಾಸ ಆಚರಿಸುತ್ತಿರುವ ಕ್ರೈಸ್ತರು ಗರಿಗಳ ಭಾನುವಾರವನ್ನು ವಿಶೇಷ ಪ್ರಾರ್ಥನೆಯ ಮೂಲಕ ಆಚರಿಸಿದರು. ಜನರು ಯೇಸುಕ್ರಿಸ್ತನನ್ನು ರಾಜಾಧಿರಾಜನೆಂದು ಘೋಷಿಸಿ ಕತ್ತೆಯ ಮೇಲೆ ಮೆರವಣಿಗೆ ಮಾಡಿದ ದಿನವನ್ನು ಸ್ಮರಿಸುವ ದಿನವಾಗಿ ಗರಿಗಳನ್ನು ಕ್ರೈಸ್ತ ಭಕ್ತರಿಗೆ ನೀಡಲಾಗುತ್ತದೆ. ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಅರುಳ್ ಸೆಲ್ವಕುಮಾರ್ ಹಾಗೂ ಸಹಾಯಕ ಧರ್ಮಗುರುಗಳಾದ ನವೀನ್ ಅವರುಗಳು ಸಂತ ಮೇರಿ ಶಾಲಾ ಮೈದಾನದಲ್ಲಿ ಧರ್ಮ ಸಂದೇಶದ ಮೂಲಕ ತೆಂಗಿನ ಗರಿಗಳನ್ನು ಆಶೀರ್ವಚಿಸಿ ಭಕ್ತರಿಗೆ ನೀಡಿದರು. ಶಾಲಾ ಆವರಣದಿಂದ ಚರ್ಚ್ ವರೆಗೆ ಮೆರವಣಿಗೆಯನ್ನು ನಡೆಸಲಾಯಿತು. ನಂತರ ಬಲಿಪೂಜೆಯನ್ನು ನೆರವೇರಿಸಿ ಪವಿತ್ರ ವಾರಕ್ಕೆ ಮುನ್ನುಡಿ ಬರೆಯಲಾಯಿತು. ನೂರಾರು ಸಂಖ್ಯೆಯ ಭಕ್ತರು ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮಾ.24 NEWS DESK : ಎರಡು ಹುಲಿಗಳ ನಡುವಿನ ಕಾದಾಟದಲ್ಲಿ ಹೆಣ್ಣು ಹುಲಿಯೊಂದು ಮೃತಪಟ್ಟಿರುವ ಘಟನೆ ಹುಣುಸೂರು ನಾಗರಹೊಳೆಯ ಹುಲಿ ಸಂರಕ್ಷಿತ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ವಲಯದಲ್ಲಿ ನಡೆದಿದೆ. ಆನೆಚೌಕೂರು ವನ್ಯಜೀವಿ ವಲಯದ ಗಣಗೂರು ತಾವರೆಕೆರೆ ಅರಣ್ಯ ಪ್ರದೇಶದಲ್ಲಿ ಹುಲಿಯ ಕಳೇಬರ ಸಿಕ್ಕಿದೆ. ಮತ್ತೊಂದು ಹುಲಿಯೊಂದಿಗೆ ಕಾದಾಟ ನಡೆಸಿದ ಕುರುಹು ಇಲ್ಲಿ ಪತ್ತೆಯಾಗಿದೆ. ನಾಗರಹೊಳೆ ಉದ್ಯಾನವನದ ಮುಖ್ಯ ಪಶುವೈದ್ಯಾಕಾರಿ ರಮೇಶ್ ಹಾಗೂ ಬಾಳೆಲೆಯ ಪಶುವೈದ್ಯಾಧಿಕಾರಿ ಭವಿಷ್ಯ ಕುಮಾರ್ ಅವರು ಹುಲಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು. ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಕುಶಾಲನಗರ ಮಾ.24 NEWS DESK : ಬಸ್ ನಲ್ಲಿ ಅಪಾಯಕಾರಿ ಪ್ರಯಾಣದಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೋಡಿ ಅರಿವಿದ್ದರೂ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಬಸ್ ನ ಬಾಗಿಲು, ಮೆಟ್ಟಿಲುಗಳಲ್ಲಿ ನೇತಾಡಿಕೊಂಡು ಪ್ರಯಾಣ ಮಾಡುವ ದೃಶ್ಯಗಳು ಕಂಡು ಬರುತ್ತಿದೆ. ಕುಶಾಲನಗರ ಸಮೀಪದ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕೆಲವು ವಿದ್ಯಾರ್ಥಿಗಳು ನೇತಾಡಿಕೊಂಡು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಇದನ್ನು ಗಮನಿಸಿದ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಶಾ ಅವರು ವಿದ್ಯಾರ್ಥಿಗಳನ್ನು ಬಸ್ ನಿಂದ ಕೆಳಗಿಳಿಸಿ ಬುದ್ದಿ ಮಾತು ಹೇಳಿದರು. ದಾರಿಯಲ್ಲಿ ಹೋಗುತ್ತಿದ್ದ ಖಾಸಗಿ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜ್ ಗೆ ಕಳುಹಿಸಿಕೊಡುವ ಮೂಲಕ ಅಪಾಯದ ಬಗ್ಗೆ ಅರಿವು ಮೂಡಿಸಿ ಮಾದರಿಯಾದರು. (ಕೃಪೆ : CM)
ಮಡಿಕೇರಿ ಮಾ.24 NEWS DESK : ವಾರದ ಹಿಂದೆಯಷ್ಟೇ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಭೇಟಿ ನೀಡಿದ್ದ ಶಂಕಿತ ನಕ್ಸಲರು ಇದೀಗ ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಸುಳಿದಾಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಸಮೀಪದ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದರು ಎಂದು ಹೇಳಲಾಗಿದೆ. ಮಾ.23 ರಂದು ಕಾರ್ಮಿಕರೊಬ್ಬರ ಮನೆಗೆ ಭೇಟಿ ನೀಡಿದಾಗ ಕಾರ್ಮಿಕ ಪ್ರವೇಶ ನಿರಾಕರಿಸಿ ಬಾಗಿಲು ಬಂದ್ ಮಾಡಿದಾಗ ಶಂಕಿತ ನಕ್ಸಲರು ತೋಟದ ಮಾಲೀಕರ ಮನೆಗೆ ಹೋಗಿದ್ದಾರೆ ಎಂದು ಮಾಹಿತ್ಯ ಲಭ್ಯವಾಗಿದೆ. ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿನ ಮೂಲಕ ಸೋಮವಾರಪೇಟೆ ಮತ್ತು ಗಾಳಿಬೀಡು, ಸಂಪಾಜೆ ಮೂಲಕ ಕೇರಳದ ಅರಣ್ಯದೊಳಗೆ ಸಂಪರ್ಕ ಸಾಧಿಸಬಹುದಾಗಿದ್ದು, ನಕ್ಸಲ್ ನಿಗ್ರಹ ದಳ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಿದೆ. ಕಳೆದ ವಾರವಷ್ಟೇ ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ವ್ಯಾಪ್ತಿಯಲ್ಲಿ ಕಾಣಿಸಿಕೊಂಡು ದಿನಸಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದರು.
ಸೋಮವಾರಪೇಟೆ ಮಾ.23 NEWS DESK : ಸೋಮವಾರಪೇಟೆ ಪಟ್ಟಣದ ರೇಂಜರ್ಸ್ ಬ್ಲಾಕ್ ನಿವಾಸಿ, ದೇವಿ ಎಲೆಕ್ಟ್ರಿಕಲ್ ಮಾಲೀಕ ಪಿ.ಕೆ.ಶಶಿ (73) ಅವರು ಅನಾರೋಗ್ಯದಿಂದ ಇಂದು ರಾತ್ರಿ ನಿಧನರಾದರು. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ನಗರೂರಿನ ಕ್ಯಾಥೋಲಿಕ್ ಸ್ಮಶಾನದಲ್ಲಿ ನಡೆಯಲಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಗೋಣಿಕೊಪ್ಪ ಮಾ.23 NEWS DESK : ರಾಮ ರಾಜ್ಯದ ಕನಸು ನನಸಾಗುತ್ತಿದೆ, ದೇಶವನ್ನು ಮತ್ತಷ್ಟು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದು ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ತಿಳಿಸಿದ್ದಾರೆ. ತಿತಿಮತಿ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆದ ತಿತಿಮತಿ, ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾವೇರಿ ತವರು ಕೊಡಗು ಮತ್ತು ಮೈಸೂರಿಗೂ ಅವಿನಾಭಾವ ಸಂಬ0ಧವಿದೆ. ಈ ಭಾಗದ ಜನರ ಸೇವೆ ಮಾಡುವ ಆಕಾಂಕ್ಷೆಯೊ0ದಿಗೆ ಚುನಾವಣೆ ಕಣಕ್ಕೆ ಇಳಿದಿದ್ದೇನೆ. ಪಕ್ಷದ ಆತ್ಮ ಬಲವಾಗಿರುವ ಕಾರ್ಯಕರ್ತರು ದೇಶ ಮುನ್ನಡೆಸುವ ಮತ್ತು ಅಭಿವೃದ್ಧಿಪಡಿಸುವ ಕರ್ತವ್ಯಕ್ಕಾಗಿ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಈಗಾಗಲೇ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಪ್ರಪಂಚವೇ ನಿಬ್ಬೆರಗಾಗಿ ನೋಡುವ ವಾತಾವರಣ ಸೃಷ್ಟಿಯಾಗಿದೆ. ಹಿಂದೆ ಅರಸು ಮನೆತನದವರು ಮೈಸೂರು ರಾಜ್ಯವನ್ನು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರು. ಸ್ವದೇಶಿ ಉತ್ಪನ್ನಗಳಿಗೆ ಸಾಕಷ್ಟು ಒತ್ತು ನೀಡಿ ಮೈಸೂರು ಬ್ರಾಂಡ್ನಲ್ಲಿ…
ಮಡಿಕೇರಿ ಮಾ.23 NEWS DESK : ಅಂತರರಾಷ್ಟ್ರೀಯ ಜನಾಂಗೀಯ ತಾರತಮ್ಯ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು. ಹಿರಿಯರಿಗಾಗಿ ಶ್ರದ್ಧಾಂಜಲಿ ಅರ್ಪಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಆಡಳಿತ ನಡೆಸುತ್ತಿರುವ ಬಹುಸಂಖ್ಯಾತರು ಅಲ್ಪಸಂಖ್ಯಾತ, ಅತ್ಯಂತ ಸೂಕ್ಷ್ಮ, ಆದಿಮ ಸಂಜಾತ ಕೊಡವ ಬುಡಕಟ್ಟು ಜನರನ್ನು ತಾರತಮ್ಯ ಮನೋಭಾವದಿಂದ ನೋಡುತ್ತಿರುವುದು ವಿಷಾದನೀಯವೆಂದು ಬೇಸರ ವ್ಯಕ್ತಪಡಿಸಿದರು. ನಾಚಪ್ಪ ಅವರು ಮಾತನಾಡಿ ದೇವಟ್ ಪರಂಬುವಿನಲ್ಲಿ ಷಡ್ಯಂತ್ರಕ್ಕೆ ಸಿಲುಕಿ ಕೊಡವ ಜನಾಂಗದ ಹಿರಿಯ ತಲೆಮಾರು ಬಲಿಯಾಯಿತು. ಈ ನೋವು ಅಚಲವಾಗಿ ಉಳಿದಿರುವಾಗಲೇ ಪ್ರಸ್ತುತ ಕೊಡವರ ಮೇಲಿನ ತಾರತಮ್ಯ ನೀತಿ ಮತ್ತಷ್ಟು ನೋವನ್ನುಂಟು ಮಾಡಿದೆ ಎಂದರು. ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣದ ಗುರಿ ಸಾಧನೆಗಾಗಿ ಹಿರಿಯರ ಆಶೀರ್ವಾದವನ್ನು ಪಡೆಯಲು ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿ ಸ್ಮರಣೆಯನ್ನು ಮಾಡಲಾಗಿದೆ. ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕೊಡವರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಅನುಷ್ಠಾನಗೊಳಿಸಬೇಕು.…
ಕಡಂಗ ಮಾ.23 NEWS DESK : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ 20ನೇ ವರ್ಷದ ಮುಸ್ಲಿಂ ಕ್ರಿಕೆಟ್ ಮತ್ತು ಹಗ್ಗ ಜಗ್ಗಾಟ ಕ್ರೀಡಾಕೂಟವನ್ನು ಮೇ 10 ರಿಂದ 19 ರವರೆಗೆ ಮೂರ್ನಾಡು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಆದಂ ತಿಳಿಸಿದ್ದಾರೆ. ಏಪ್ರಿಲ್ ತಿಂಗಳು ನಡೆಸಲು ತೀರ್ಮಾನಿಸಲಾಗಿದ್ದ ಕ್ರೀಡಾಕೂಟವು ಲೋಕಸಭಾ ಚುನಾವಣೆ ಇರುವುದರಿಂದ ದಿನಾಂಕವನ್ನು ಮುಂದೂಡಲಾಗಿ ಎಂದು ತಿಳಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಚಿಸುವವರು ಏ.25ರ ಒಳಗೆ ಮೊ. ಸಂಖ್ಯೆ 9900900250, 9740481273 ನೊಂದಾವಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ವರದಿ : ನೌಫಲ್ ಕಡಂಗ
ವಿರಾಜಪೇಟೆ ಮಾ.23 NEWS DESK : ಇನ್ನರ್ ವೀಲ್ ಕ್ಲಬ್ ಆಫ್ ಮಡಿಕೇರಿ ವತಿಯಿಂದ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಕಣ್ಣಿನ ದೋಷ ಇರುವಂತ ವಿದ್ಯಾರ್ಥಿಗಳಿಗೆ ಕನ್ನಡಕಗಳನ್ನು ವಿತರಿಸಲಾಯಿತು. ಶಾಲೆಯ ಡಾ. ಎಂ.ಎಂ.ಚಂಗಪ್ಪ ಮೆಮೋರಿಯಲ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ, ವಿದ್ಯಾರ್ಥಿಗಳು ಕಣ್ಣಿನ ಹಿತದೃಷ್ಟಿಯಿಂದ ಮಿತಿಯಲ್ಲಿ ಮೊಬೈಲ್ ಬಳಕೆ ಮಾಡಬೇಕು. ಸಮತೋಲನ ಆಹಾರದ ಸೇವನೆ ಮಾಡಬೇಕು. ಪ್ರತಿದಿನ ಕಣ್ಣಿನ ಶುಚಿತ್ವದೊಂದಿಗೆ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹಿತನುಡಿಗಳನ್ನು ಹೇಳಿದರು. ಮುಖ್ಯ ಅತಿಥಿಗಳಾದ ಐಚ್ಚೆಟ್ಟಿರ ಚಿಣ್ಣಪ್ಪ ಮಾತನಾಡಿ ನಮ್ಮ ಕಣ್ಣನ್ನು ಹೇಗೆ ನಾವು ಸುರಕ್ಷಿತವಾಗಿಟ್ಟುಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ವನಜಾಕ್ಷಿ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು. ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್.ಲಾಲ್ ಕುಮಾರ್ ಇನ್ನರ್ ವೀಲ್ ಸಂಸ್ಥೆಯ ಬಗ್ಗೆ ಪರಿಚಯ ಮಾಡಿದರು. ಇನ್ನರ್ವೀಲ್ ಸಂಸ್ಥೆಯ ಅಧ್ಯಕ್ಷ ಕಣ್ಣು ದೇವರಾಜ್ ಉಪಸ್ಥಿತರಿದ್ದರು. ಇನ್ನರ್ವಿಲ್ ಸಂಸ್ಥೆಯ ಮಾಜಿ…






