ಲೇಖಕ: admin

ವಿರಾಜಪೇಟೆ ಮಾ.23 NEWS DESK : ವಿರಾಜಪೇಟೆಯ ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಪೆಗ್ಗರಿಕಾಡುವಿನ ನವೋದಯ ಯುವಕ ಸಂಘದ ವತಿಯಿಂದ ಶಿವರಾತ್ರಿ ಆಚರಣೆ ಅಂಗವಾಗಿ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಗುಡ್ಡಗಾಡು ಓಟ, ಓಟದ ಸ್ಫರ್ಧೇ, ಚಿಕ್ಕ ಮಕ್ಕಳಿಗೆ ವಿವಿಧ ಸ್ಫರ್ಧೇಗಳು, ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಮೂರು ವರ್ಷದ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲ ವಯೋಮಾನದವರು ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಗೊಳಿಸಿದರು. ಬಳಿಕ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೆÇನ್ನಣ್ಣ ಈ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ದೊರೆತಂತಾಗುತ್ತದೆ. ಅಲ್ಲದೆ ಜಾತಿ ಭೇದ ಮರೆತು ನಾವು ಸೌಹಾರ್ದತೆಯಿಂದ ಎಲ್ಲಾ ಹಬ್ಬ ಹರಿದಿನಗಳನ್ನು ಆಚರಿಸಬೇಕೆಂದು ಯುವಕರಿಗೆ ಕಿವಿ ಮಾತನ್ನು ಹೇಳಿದರು. ಬಿಟ್ಟಂಗಾಲದ ಎವರ್ ಗ್ರೀನ್ ಕೌಂಟಿಯ ಮಾಲೀಕರಾದ ಭಜನ್ ಬೋಪಣ್ಣ…

Read More

ಮಡಿಕೇರಿ ಮಾ.23 NEWS DESK  : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ‘ಶ್ವೇತ ಪತ್ರ’ವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಬಿಡುಗಡೆ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕಳೆದ 10 ತಿಂಗಳ ಅವಧಿಯಲ್ಲಿ ತನ್ನ ಕ್ಷೇತ್ರದ 58 ಗ್ರಾಮ ಪಂಚಾಯ್ತಿ, ಒಂದು ಪುರಸಭೆಗೆ ಭೇಟಿ ನೀಡಿ, ಅಲ್ಲಿನ ಜನರೊಂದಿಗೆ ಬೆರೆತು, ಅಭಿವೃದ್ಧಿ ಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದರು. ಚುನಾವಣಾ ಘೋಷಣೆಯ ಬಳಿಕ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳಬಾರದೆನ್ನುವ ಚಿಂತನೆಗಳಡಿ ಚುನಾವಣಾ ಘೋಷಣೆಗೂ ಮುನ್ನ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಕಾಮಗಾರಿಗಳಿಗೆ ಭೂಮಿಪೂಜೆ ನಡೆಸಿ ಚಾಲನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ::: ರಾಜಕೀಯ ತೊರೆಯುತ್ತೇನೆ ::: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ತಾವು ಚಾಲನೆ ನೀಡಿದ ಕಾಮಗಾರಿ, ಅನುದಾನಗಳೆಲ್ಲವೂ ಹಿಂದಿನ ಬಿಜೆಪಿ ಸರ್ಕಾರದ್ದೆಂದು ಬಿಜೆಪಿ ಮಂದಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ತಾವು…

Read More

ಮಡಿಕೇರಿ ಮಾ.23 NEWS DESK : ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿಯ ಲಗಾಮು ಕೇವಲ ಎರಡು ಮೂರು ಮಂದಿಯ ಕೈಯಲ್ಲಿರುವುದು ಜಗಜ್ಜಾಹೀರಾಗಿದ್ದು, ಲೋಕಸಭಾ ಚುನಾವಣೆಗೆ ಆ ಪಕ್ಷ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಬಗ್ಗೆ ಸ್ವತ: ಜನರೇ ನಿರಾಶರಾಗಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ದಶಕಗಳಿಂದ ಕೊಡಗು- ಮೈಸೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡದ ಬಿಜೆಪಿ, ಅದಕ್ಕೆ ಸೂಕ್ತ ಕಾರಣವನ್ನು ಜನರಿಗೆ ನೀಡುವ ಉತ್ತರದಾಯಿತ್ವವನ್ನು ಹೊಂದಿದೆ. ಟಿಕೆಟ್ ನೀಡದಿರಲು ಅವರು ನಿಷ್ಕ್ರೀಯರಾಗಿದ್ದರೆ ಅಥವಾ ಜನವಿರೋಧಿಯಾಗಿದ್ದರೆ ಎನ್ನುವುದನ್ನು ಸ್ಪಷ್ಟಪಡಿಸಬೇಕಾಗಿತ್ತು. ಆದರೆ ಅದ್ಯಾವುದನ್ನು ಮಾಡದೆ ಹೊಸ ಅಭ್ಯರ್ಥಿಗೆ ಅವಕಾಶ ನೀಡಿದೆ. ತನ್ನ ಯಾವುದೇ ನಡೆಗಳಿಗೆ ಕಾರಣಗಳನ್ನು ನೀಡವುದಿಲ್ಲ ಎನ್ನುವ ಬಿಜೆಪಿ ಧೋರಣೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡದಿರುವುದು, ಶೋಭಾ ಕರಂದ್ಲಾಜೆ ಅವರಿಗೆ ಅವರ…

Read More

ಮಡಿಕೇರಿ ಮಾ.23 NEWS DESK :  ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆಯು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕಾಂಗ್ರೆಸ್ ಸರಕಾರದ ಜನಪ್ರಿಯ ಯೋಜನೆಗಳನ್ನು ಮುಂದಿಟ್ಟುಕೊಂಡು ಪಕ್ಷಕ್ಕಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶತಾಯಗತಾಯ ಶ್ರಮಿಸಬೇಕೆಂದು ಕರೆ ನೀಡಿದರು. ಪಕ್ಷದ ನಾಯಕರುಗಳಾದ  ವೀಣಾ ಅಚ್ಚಯ್ಯ, ಬ್ಲಾಕ್ ಅಧ್ಯಕ್ಷ  ಹಂಸ, ಪಕ್ಷದ ಹಿರಿಯ ನಾಯಕ ಟಿ.ಪಿ.ರಮೇಶ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ.ಶಶಿಧರ್ ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಒಂದಾಗಿ  ಅಭ್ಯರ್ಥಿ ಎ0. ಲಕ್ಷ್ಮಣ ಅವರನ್ನು ಗೆಲ್ಲಿಸಲು ಪಣತೊಡಬೇಕೆಂದು ಕರೆ ನೀಡಿದರು. ಸನ್ಮಾನ ::  ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಧರ್ಮಜ ಉತ್ತಪ್ಪ,  ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ದಾಸ್,  ಫ್ಯಾನ್ಸಿ ಪಾರ್ವತಿ ಹಾಗೂ ಮಡಿಕೇರಿ ನಗರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾದ …

Read More

ಮಡಿಕೇರಿ ಮಾ.23 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಒಬ್ಬ ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದು, ಇವರ ಗೆಲುವು ನಿಶ್ಚಿತವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಎಂ.ಎ.ಕಲೀಲ್ ಬಾಷ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜಕಾರಣದಲ್ಲಿ ಅಪರೂಪವೆಂಬAತೆ ಅತ್ಯಂತ ಸರಳ ಹಾಗೂ ಸಜ್ಜನ ಗುಣ ಹೊಂದಿರುವ ಎಂ.ಲಕ್ಷ್ಮಣ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಸ್ವಾಗತಾರ್ಹವಾಗಿದೆ. ಇವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದಾಕ್ಷಣ ಅಲ್ಪಸಂಖ್ಯಾತ, ಹಿಂದುಳಿದ, ದಲಿತ ಸೇರಿದಂತೆ ಎಲ್ಲಾ ಸಮುದಾಯದ ಮಂದಿ ಬೆಂಬಲ ಸೂಚಿಸುತ್ತಿದ್ದು, ಗೆಲುವು ಸುಲಭವಾಗಲಿದೆ ಎಂದು ತಿಳಿಸಿದ್ದಾರೆ. ಜನಪರ ಮತ್ತು ನಿಷ್ಪಕ್ಷಪಾತ ಹೋರಾಟದ ಮೂಲಕವೇ ಕೇಂದ್ರ ಸರಕಾರದ ವೈಫಲ್ಯಗಳನ್ನು ಬಯಲಿಗೆಳೆದ ಹೆಗ್ಗಳಿಕೆ ಇವರದ್ದಾಗಿದೆ. ಕೆಪಿಸಿಸಿ ವಕ್ತಾರರಾಗಿದ್ದರೂ ಸಾಮಾನ್ಯ ಕಾರ್ಯಕರ್ತರಂತೆ ಕಾರ್ಯಕರ್ತರೊಂದಿಗೆ ಬೆರೆಯುವ ಲಕ್ಷ್ಮಣ್ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಸಾಮರ್ಥ್ಯ ಹೊಂದಿದ್ದಾರೆ. ಐದು ಗ್ಯಾರಂಟಿ ಯೋಜನೆಗಳನ್ನು…

Read More

ಕುಶಾಲನಗರ, ಮಾ.23 : ನಾವು ನಾಳಿನ ಉತ್ತಮ ಭವಿಷ್ಯತ್ತಿಗಾಗಿ ನೆಲ -ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ- ವೈವಿಧ್ಯ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಿಸಲು ಪಣ ತೊಡಬೇಕಿದೆ ಎಂದು ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ  ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್, ಎನ್.ಎಸ್.ಎಸ್.ಘಟಕ, ವಿಜ್ಞಾನ ಸಂಘ, ಸೀಕೋ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ಎಸ್ ಡಿ ಎಂ ಸಿ ಯ ಸಹಯೋಗದೊಂದಿಗೆ ” ಅರಣ್ಯಗಳು ಮತ್ತು ನಾವೀನ್ಯತೆ ” ಎಂಬ ಧ್ಯೇಯದೊಂದಿಗೆ ‘ಅರಣ್ಯಗಳು ಮತ್ತು ನಾವೀನ್ಯತೆ‘’ಎಂಬ ಧ್ಯೇಯದೊಂದಿಗೆ  ವಿಶ್ವ ಅರಣ್ಯ ದಿನಾಚರಣೆ:2024 ಅಂಗವಾಗಿ ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ ಅರಣ್ಯ ದಿನದ ಮಹತ್ವ ಮತ್ತು ಪ್ರಾಮುಖ್ಯತೆ ಕುರಿತು ಮಾತನಾಡಿದರು. ಪ್ರಸಕ್ತ ವರ್ಷ ‘ಅರಣ್ಯಗಳು ಮತ್ತು ನಾವೀನ್ಯತೆ‘’ಎಂಬ ವಿಷಯದ ಮೇಲೆ’ 2024 ರ ಅಂತರಾಷ್ಟ್ರೀಯ ಅರಣ್ಯ ದಿನವನ್ನು ಆಚರಿಸಲಾಗುತ್ತಿದೆ.ಮಾನವೀಯತೆ ಮತ್ತು ಗ್ರಹದ…

Read More

ಮಡಿಕೇರಿ ಮಾ.23 : ಶೋಭಕೃತ್ ಸಂವತ್ಸರದ ಕೊನೆಯ ಗ್ರಹಣ ಮಾ.25 ರಂದು ಚಂದ್ರ ಗ್ರಹಣವಾಗಿರುತ್ತದೆ. ಈ ಗ್ರಹಣವು ಮಾರ್ಚ್ 25 ಸೋಮವಾರ ಹುಣ್ಣಿಮೆಯಂದು ಭಾರತದ ಸಮಯ ಬೆಳಿಗ್ಗೆ 10.21 ರಿಂದ ಮಧ್ಯಾಹ್ನ 3.5ರ ವರೆಗೆ ಘಟಿಸಲಿದ್ದು, ಹಗಲು ಆಗಿರುವುದರಿಂದ ಭಾರತದಲ್ಲಿ ಗೋಚರಿಸುವುದಿಲ್ಲ. ಏಷ್ಯ ಖಂಡದ ಉತ್ತರ ಮತ್ತು ಪೂರ್ವ ಯುರೋಫ್, ಆಸ್ಟ್ರೇಲಿಯ, ಆಫ್ರಿಕ, ಅಮೇರಿಕ ಖಂಡದ ಉತ್ತರ ಮತ್ತು ಪೂರ್ವದಲ್ಲಿ ಗ್ರಹಣ ಗೋಚರಿಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ತಜ್ಞರು ವೈಜ್ಞಾನಿಕ ಮನೋಭಾವನೆಗೆ ತಕ್ಕಂತೆ ನಮ್ಮಲ್ಲಿ ಗೋಚರಿಸದೆ ಇರುವುದರಿಂದ ಗ್ರಹಣ ಆಚರಣೆಯು ಅಗತ್ಯವಿಲ್ಲ ಹಾಗೂ ದೋಷವು ಇಲ್ಲವೆಂದು ಸಮಜಾಯಿಷಿಕೆ ಕೊಡುತ್ತಾರೆ. ಆದರೆ ಜಗತ್ತಿಗೆ ಒಂದೇ ಭೂಮಿ, ಒಂದೇ ಚಂದ್ರ, ಒಂದೇ ಸೂರ್ಯ. ಆದ್ದರಿಂದ ಧರ್ಮ ಗ್ರಂಥದ ಪ್ರಕಾರ ಚಂದ್ರನಿಗೆ ರಾಹು ಗ್ರಹಸ್ತಗ್ರಹಣವೆಂದು ಹೇಳಲ್ಪಡುತ್ತದೆ. ಆದ್ದರಿಂದ ಈ ಗ್ರಹಣ ದೋಷಗಳು ಇಡೀ ಭೂ-ಮಂಡಲಕ್ಕೆ ವ್ಯಾಪಿಸಿರುತ್ತದೆ ಎನ್ನುವುದು ನನ್ನ ತಾರ್ಕಿಕ ಸ್ಪಷ್ಟನೆ. ಗ್ರಹಣವು ಉತ್ತರ ನಕ್ಷತ್ರದ ನಾಲ್ಕನೆಯ ಪಾದದಲ್ಲಿ ಘಟಿಸುವುದರಿಂದ ಉತ್ತರ ನಕ್ಷತ್ರದ ಕನ್ಯಾ ರಾಶಿಯವರಿಗೆ ಕಂಟಕ…

Read More

ಮಡಿಕೇರಿ ಮಾ.23 NEWS DESK :  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯನ್ನು ರಚಿಸಲಾಗಿದ್ದು, ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೆ.ಎಸ್.ಮೂರ್ತಿ, ಗೌರವಾಧ್ಯಕ್ಷರುಗಳಾಗಿ ಜಿಲ್ಲೆಯ ಎಲ್ಲಾ ಮಠಾಧೀಶರು, ಪ್ರಧಾನ ಕಾರ್ಯದರ್ಶಿಯಾಗಿ ಬಿ.ನಟರಾಜು, ಕಾರ್ಯದರ್ಶಿಯಾಗಿ ತೊರೆನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ.ಬಿ.ಮಂಜುನಾಥ್, ಆವರ್ತಿ ಮಹದೇವಪ್ಪ, ಕೋಶಾಧ್ಯಕ್ಷರಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಹಿರಿಯ ಉಪಾಧ್ಯಕ್ಷರಾಗಿ ಸೋಮವಾರಪೇಟೆಯ ನಿವೃತ್ತ ಪ್ರಾಂಶುಪಾಲ ಜೆ.ಸಿ.ಶೇಖರ್, ಉಪಾಧ್ಯಕ್ಷರುಗಳಾಗಿ ಗೆಜ್ಜೆಹಣಕೋಡು ಗ್ರಾಮದ ಕಾಫಿ ಬೆಳೆಗಾರ ಜಿ.ಎಸ್.ದಯಾನಂದ, ದುಬಾರೆಯ ಪ್ರವಾಸೋದ್ಯಮಿ ಎನ್.ಕೆ.ಮೋಹನ್ ಕುಮಾರ್, ಮಡಿಕೇರಿ ವಾಣಿಜ್ಯ ತೆರಿಗೆ ಇಲಾಖೆಯ ಎಂ.ಕೆ.ಧನರಾಜು ನೇಮಕಗೊಂಡಿದ್ದಾರೆ. ನಿರ್ದೇಶಕರುಗಳಾಗಿ ತೊರೆನೂರು ಹೆಚ್.ಬಿ.ಚಂದ್ರಪ್ಪ, ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬಸವರಾಜು, ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾಲಯದ ಡಾ.ಜಮೀರ್ ಅಹಮದ್, ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಸುನಿಲ್ ಕುಮಾರ್, ಹೆಬ್ಬಾಲೆ ಪ್ರೌಢಶಾಲೆಯ ಮೆ‌.ನಾ.ವೆಂಕಟನಾಯಕ್, ಮಾಯಮುಡಿಯ ನಿವೃತ್ತ ಯೋಧ…

Read More

ಮಡಿಕೇರಿ ಮಾ.23 NEWS DESK  : ಕೊಡಗಿನ ಹಿರಿಯ ಸಾಹಿತಿ ಕುಶಾಲನಗರದ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರಿಗೆ ವಿಶ್ವವಾಣಿ ಪತ್ರಿಕೆ ನೀಡುವ ಗ್ಲೋಬಲ್ ಅಚಿವ್ ಮೆಂಟ್ ಪ್ರಶಸ್ತಿ ದೊರಕಿದೆ. ಕೊಡಗಿನ ಸಾಹಿತ್ಯ ಮತ್ತು ಪಾಕ ಕಲಾ ಕ್ಷೇತ್ರದಿಂದ ಈ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಇಂಡೋನೇಷ್ಯಾ ದೇಶದ ಬಾಲಿ ದ್ವೀಪದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ ಎಂದು ವಿಶ್ಲವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ತಿಳಿಸಿದ್ದಾರೆ. ಕನಾ೯ಟಕದ ವಿವಿಧ ಕ್ಷೇತ್ರದ ಸಾಧಕರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಫ್ಯಾನ್ಸಿ ಮುತ್ತಣ್ಣ ಕೊಡವ, ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಮನಾಹ೯ ಸಾಧನೆ ಮಾಡಿದ್ದು, 12 ಕೃತಿಗಳನ್ನು ರಚಿಸಿದ್ದಾರೆ. ಕವಿಗೋಷ್ಟಿ, ವಿಚಾರಗೋಷ್ಟಿಗಳಲ್ಲಿ ಪಾಲ್ಗೊಂಡು ಕೊಡವ, ಕನ್ನಡ ಭಾಷಾ ಸಾಹಿತ್ಯದ ಬಗ್ಗೆ ವಿಚಾರಮಂಡಿಸಿದ್ದಾರೆ. ಅಂತೆಯೇ ಪಾಕಕಲೆಯಲ್ಲಿಯೂ ಫ್ಯಾನ್ಸಿ ಹೆಸರುವಾಸಿಯಾಗಿದ್ದು ಅನೇಕ ಕಾಯ೯ಕ್ರಮಗಳಲ್ಲಿಯೂ ಪಾಲ್ಗೊಂಡು ಕೊಡಗಿನ ಪಾಕಕಲೆಯ ಬಗ್ಗೆಯೂ ಮಾಹಿತಿ ನೀಡಿರುವ ಹಿರಿಮೆ ಹೊಂದಿದ್ದಾರೆ. ಫ್ಯಾನ್ಸಿ ಸಾಹಿತ್ಯ ಸಾಧನೆಗಾಗಿ ಈಗಾಗಲೇ ಅನೇಕ ಪ್ರಶಸ್ತಿಗಳು ಲಭಿಸಿದ್ದು,…

Read More

ಮಡಿಕೇರಿ ಮಾ.23 NEWS DESK  : ಮಲೆನಾಡಿನ ಹಸಿರ ಒಡಲಲ್ಲಿ ಬೆರೆತು, ಪರಿಸರ ಪ್ರಜ್ಞೆಯ ಲೇಖನಗಳ ಸರಮಾಲೆಯ ಮೂಲಕ ಓರ್ವ ಪರಿಸರ ಪ್ರೇಮಿಯಾಗಿ ಬೆಳೆದ ಹಿರಿಯ ಸಾಹಿತಿ ನಾ.ಡಿಸೋಜ ಅವರ ಎಲ್ಲಾ ಲೇಖನಗಳು ಸಮಾಜಮುಖಿಯಾಗಿವೆ ಎಂದು ಸಾಹಿತಿ, ಕಲಾವಿದೆ ಮತ್ತು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಮಿಲನ ಭರತ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಆಶ್ರಯದಲ್ಲಿ ನಗರದ ಸಹಕಾರಿ ಡಿಪ್ಲೋಮ ತರಬೇತಿ ಕೇಂದ್ರದಲ್ಲಿ ನಡೆದ ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ, ಕಥಾ ಸ್ಪರ್ಧೆ ಮತ್ತು ನಾಟಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಮಲೆನಾಡಿನ ಹಸಿರ ಪರಿಸರವನ್ನೆ ಕೇಂದ್ರವಾಗಿಟ್ಟುಕೊಂಡು ಅವರು ಬರೆದ ದ್ವೀಪ, ನಡುವೆ ನಿಂತ ಜನ, ಮಂಜುಗೆಡ್ಡೆ, ಕಾಡಿನ ಬೆಂಕಿ, ಒಂದು ಜಲಪಾತದ ಸುತ್ತ ಮತ್ತು ಈ ನೆಲ ಈ ಜಲದಂತಹ ಕಾದಂಬರಿಗಳು ಸದ್ದಿಲ್ಲದೇ ಜಾಗೃತಿಯ ಬೆಳೆ…

Read More