ಲೇಖಕ: admin

ಮಡಿಕೇರಿ ಮಾ.23 NEWS DESK : ಲಾರಿ ಮತ್ತು ಆ್ಯಂಬುಲೆನ್ಸ್ ನಡುವೆ ಡಿಕ್ಕಿಯಾಗಿ ಓರ್ವ ಗಾಯಗೊಂಡಿರುವ ಘಟನೆ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತ್ತೋಡು ಎಂಬಲ್ಲಿ ನಡೆದಿದೆ. ಅಪಘಾತದಿಂದ ಗಾಯಗೊಂಡಿರುವ ಆ್ಯಂಬುಲೆನ್ಸ್ ಚಾಲಕನನ್ನು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಗ್ಗೆ ನಡೆದ ಪ್ರತ್ಯೇಕ ಅಪಘಾತದ ಗಾಯಾಳುವನ್ನು ಮೈಸೂರಿಗೆ ಕರೆದೊಯ್ಯುತ್ತಿದ್ದ ವಿರಾಜಪೇಟೆ ಸರಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಎದುರು ಭಾಗದಿಂದ ಬಂದ ಲಾರಿಗೆ ಡಿಕ್ಕಿ ಹೊಡೆಯಿತು ಎಂದು ಹೇಳಲಾಗಿದೆ. ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಲು ಲಾರಿ ಚಾಲಕ ಲಾರಿಯನ್ನು ತಕ್ಷಣ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಪಡಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಹೊರತು ಪಡಿಸಿ ಉಳಿದವರೆಲ್ಲರು ಅಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಮಾ.23 NEWS DESK : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಾಪೋಕ್ಲು ಬಳಿಯ ಕಕ್ಕಬ್ಬೆ ನಾಲಡಿ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕರಾಗಿದ್ದ ನಾಲಡಿ ಗ್ರಾಮದ ನಿವಾಸಿ ಕಂಬೆಯಂಡ ರಾಜ ದೇವಯ್ಯ (59)ಮೃತ ದುರ್ದೈವಿ. ತೋಟದ ಕೆಲಸಕ್ಕೆಂದು ನಾಲಡಿ ಗ್ರಾಮದ ತೋಡುಕೆರೆ ಬಳಿ ತೆರಳುತ್ತಿದ್ದಾಗ ದಿಢೀರ್ ಆಗಿ ಕಾಡಾನೆ ದಾಳಿ ಮಾಡಿದೆ. ಸ್ವಲ್ಪ ದೂರದ ವರೆಗೆ ರಾಜ ದೇವಯ್ಯ ಅವರನ್ನು ಅಟ್ಟಾಡಿಸಿದ ಆನೆ ಏಕಾಏಕಿ ದಾಳಿ ಮಾಡಿತು. ಈ ಸಂದರ್ಭ ಅವರು ಸ್ಥಳದಲ್ಲೇ ಮೃತಪಟ್ಟರು. ರಾಜ ದೇವಯ್ಯ ಅವರೊಂದಿಗೆ ತೆರಳಿದ್ದ ನಾಯಿ ಮಾತ್ರ ಮನೆಗೆ ಮರಳಿದಾಗ ಸಂಶಯಗೊಂಡ ಪತ್ನಿ ನಳಿನಿ ಪತಿಗೆ ಕರೆ ಮಾಡಿದ್ದಾರೆ. ಆದರೆ ಉತ್ತರ ಬಾರದೆ ಇದ್ದಾಗ ತೋಟದ ಕಡೆ ತೆರಳಿ ಪರಿಶೀಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ತಮ್ಮ ಕಣ್ಣಿಗೆ ಕಾಡಾನೆ ಗೋಚರವಾದ ಕಾರಣ ಅಲ್ಲಿಂದ ಓಡಿ ಹೋದೆ ಎಂದು ನಳಿನಿ ಹೇಳಿಕೊಂಡಿದ್ದಾರೆ. ನಂತರ ಪುತ್ರ ಬಂದು ಪರಿಶೀಲಿಸಿದಾಗ ಕಾಫಿ ಗಿಡಗಳ ಮಧ್ಯದಲ್ಲಿ ರಾಜ ದೇವಯ್ಯ…

Read More

ಮಡಿಕೇರಿ ಮಾ.23 NEWS DESK : ಕಾಡಾನೆ ದಾಳಿಯಿಂದ ಮೃತಪಟ್ಟ ಕಕ್ಕಬ್ಬೆ ನಾಲಡಿ ಗ್ರಾಮದ ನಿವಾಸಿ ಕಂಬೆಯಂಡ ರಾಜ ದೇವಯ್ಯ ಅವರ ಮನೆಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಭೇಟಿ ನೀಡಿದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು ವನ್ಯಜೀವಿಗಳ ದಾಳಿ ತಡೆಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಹಾಗೂ ನಾಪೋಕ್ಲು, ಕಕ್ಕಬ್ಬೆ ಭಾಗದ ಬಿಜೆಪಿ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಮಾ.23 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಳೂರು ಬಸವನಹಳ್ಳಿ ಕಾರೇಕೊಪ್ಪ ಗ್ರಾಮದ ಶ್ರೀ ಪಟ್ಟದಮ್ಮ ದೇವಾಲಯದಲ್ಲಿ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿAದಲೇ ಗಣಪತಿ ಹೋಮ, ಅಭಿಷೇಕ, ಅಲಂಕಾರ ಪೂಜೆ, ಕಳಸ ಪೂಜೆ ಹಾಗೂ ಲಲಿತಾ ಸಹಸ್ರನಾಮ ಜರುಗಿತು. ಮಧ್ಯಾಹ್ನ ಮಹಾಪೂಜೆ ಮತ್ತು ಮಹಾ ಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಮಡಿಕೇರಿ ಮಾ.23 NEWS DESK : ಭಾರತೀಯ ನೌಕಾ ಪಡೆಯ ತಂಡ ನಗರದಲ್ಲಿ ವೀರ ಸೇನಾನಿಗಳ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸಿತು. ಕರ್ನಾಟಕ ಪರಂಪರೆ ರ್ಯಾಲಿ (ಕರ್ನಾಟಕ ಹೆರಿಟೇಜ್ ರ‍್ಯಾಲಿ) ಎಂಬ ಕಾರ್ಯಕ್ರಮ ಹಮ್ಮಿಕೊಂಡು ಆ ಮೂಲಕ ಅಗ್ನಿಪಥ್ ಯೋಜನೆಯ ಮಾಹಿತಿ, ದೇಶಸೇವೆಯ ಮಹತ್ವ ಹಾಗೂ ಕರ್ನಾಟಕ ಪರಂಪರೆಯನ್ನು ಪರಿಚಯಿಸುವ ಪ್ರಯತ್ನಕ್ಕೆ ಮುಂದಾಗಿರುವ ಭಾರತೀಯ ನೌಕಾ ಪಡೆಯ ತಂಡ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮಂಗೇರಿರ ಮುತ್ತಣ್ಣ, ಅಜ್ಜಮಾಡ ದೇವಯ್ಯ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು. ನೌಕಾದಳದ ಕಮಾಂಡರ್ ಎನ್‍ಎಸ್‍ಪಿ ಸಿಂಗ್, ಕಮಾಂಡರ್ ರವೀಂದ್ರ ಕುಮಾರ್, ಸಂಯೋಜಕ ಲೆಫ್ಟಿನೆಂಟ್ ಕಮಾಂಡರ್ ಕುಂಚೆಟ್ಟಿರ ಸುಬ್ಬಯ್ಯ ಮತ್ತಿತರ ಅಧಿಕಾರಿಗಳು ಗೌರವ ನಮನ ಸಲ್ಲಿಸಿದರು.

Read More

ವಿರಾಜಪೇಟೆ ಮಾ.23 NEWS DESK : ಸಮಾಜದಲ್ಲಿ ಮಹಿಳೆಯರ ಮೇಲಿನ ತಾರತಮ್ಯ ನಿಲ್ಲಬೇಕು ಎಂದು ಅರಮೇರಿಯ ಎಸ್.ಎಂ.ಎಸ್. ವಿದ್ಯಾಪೀಠದ ಪ್ರಾಂಶುಪಾಲೆ ಬಲ್ಲಚಂಡ ಕುಸುಮ್  ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನ ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ಸಬಲೀಕರಣದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಮಹಿಳೆಯರು ಮತ್ತು ಪುರುಷರಲ್ಲಿ ದೈಹಿಕ ಮತ್ತು ಜೈವಿಕ  ವ್ಯತ್ಯಾಸವಿದೆ. ಆದರೆ ಭೌದ್ದಿಕ ವ್ಯತ್ಯಾಸವಿಲ್ಲ. ಪುರುಷರು ಯಾವಾಗ ಬೌದ್ಧಿಕವಾಗಿ ಮುಂದುವರೆಯುತ್ತಾರೋ ಅಥವಾ ಸ್ತ್ರೀಯರಿಗೆ ಬೌದ್ಧಿಕತೆಗೆ ಸಂಭಂದಿಸಿದ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಸಿಗದಿದ್ದಾಗ ಅಸಮಾನತೆ, ತಾರತಮ್ಯ ಎಂದು ಹೋರಾಟ ನಡೆಸುವುದು ಸರಿಯಲ್ಲ ಎಂದರು. ಆದುದರಿಂದ ಬೌದ್ಧಿಕ ಅಭಿವೃದ್ಧಿಯ ಕಡೆ ಮಹಿಳೆಯರು ಹೆಚ್ಚಿನ ಗಮನವನ್ನು ನೀಡಬೇಕು ಎಂದರು. ಮಹಿಳೆಯರು ಸಮಾಜಕ್ಕೆ ಕೊಡುಗೆ ಕೊಡುವ ಉದ್ದೇಶದಿಂದ ಶಿಕ್ಷಣ, ಉದ್ಯೋಗವನ್ನು ಪಡೆಯಬೇಕೆ ಹೊರತು ಪುರುಷರಿಗೆ ಸವಾಲು ಹಾಕುವ ಉದ್ದೇಶದಿಂದ ಅಲ್ಲ ಎಂದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಣಯ್ಯ  ಮಾತನಾಡಿ ಮಹಿಳಾ ಸಬಲೀಕರಣ ಇಂದು ಪ್ರಸ್ತುತವಾಗಿದ್ದು, ಸಮಾಜಕ್ಕೆ ಮತ್ತು…

Read More

ಮಡಿಕೇರಿ ಮಾ.23 NEWS DESK :  ಕಾಡಾನೆ ದಾಳಿಗೆ  ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ  ಘಟನೆ ನಾಪೋಕ್ಲುವಿನ ನಾಲಡಿ ಗ್ರಾಮದ  ತೋಡುಕೆರೆ ಎಂಬಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಂಬೆಯಂಡ ರಾಜ ದೇವಯ್ಯ (59)ಮೃತ ದುರ್ದೈವಿ. ಬೆಳಗ್ಗೆ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಸೋಮವಾರಪೇಟೆ ಮಾ.22 NEWS DESK : ಕಾಡುಪ್ರಾಣಿಗಳಿಂದ ರೈತರ ರಕ್ಷಣೆ ಹಾಗೂ ಫಸಲು ಕಾಪಾಡಿಕೊಳ್ಳವುದಕ್ಕೆ ಇರುವ ಪರವಾನಗಿ ಬಂದೂಕನ್ನು ಚುನಾವಣೆ ಸಂದರ್ಭ ಠೇವಣಿ ಇಡುವುದಕ್ಕೆ ಜಿಲ್ಲಾಧಿಕಾರಿಗಳು ವಿನಾಯಿತಿ ನೀಡಬೇಕೆಂದು ಕರ್ನಾಟಕ ರಾಜ್ಯ ರೈತಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ ಆಗ್ರಹಿಸಿದೆ. ಚುನಾವಣೆ ಸಂದರ್ಭ 3 ತಿಂಗಳು ಪರವಾನಗಿ ಬಂದೂಕನ್ನು ಠಾಣೆಯಲ್ಲಿ ಇಟ್ಟರೆ ರೈತರು ಸಂಕಷ್ಟಕ್ಕೆ ಸಿಲುಕತ್ತಾರೆ. ಬಂದೂಕು ಒಂದೇ ರೈತರ ಜೀವ ರಕ್ಷಣೆ ಮಾಡುವ ಆಯುಧವಾಗಿದ್ದು ಕೂಡಲೆ ವಿನಾಯಿತಿ ನೀಡಬೇಕು ಎಂದು ಸಂಘದ ಉಪಾಧ್ಯಕ್ಷ ಜಿ.ಎಂ.ಹೂವಯ್ಯ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು ಈಗಾಗಲೇ ರೈತರು ಪೊಲೀಸ್ ಠಾಣೆಯಲ್ಲಿ ಬಂದೂಕು ಠೇವಣಿ ಇಡುವುದಕ್ಕೆ ವಿನಾಯಿತಿ ನೀಡಿದ್ದಾರೆ. ಆ ನಿಯಮ ಕೊಡಗಿನಲ್ಲೂ ಜಾರಿಗೆ ಬರುವಂತಾಗಲಿ ಎಂದು ಹೇಳಿದರು. ಮೇಲಾಧಿಕಾರಿಗಳು ಹೊರರಾಜ್ಯದಿಂದ ಬಂದಿರುತ್ತಾರೆ. ಅವರಿಗೆ ಕೊಡಗಿನ ರೈತರ ಕಷ್ಟ ಗೊತ್ತಾಗುವುದಿಲ್ಲ. ಪ್ರತಿಯೊಂದಕ್ಕೂ ಕಾನೂನಿನ ಪುಸ್ತಕ ತೋರಿಸುವುದು ಸಮಂಜಸವಲ್ಲ. ಮಾನವೀಯತೆಗೆ ಮೊದಲ ಅಧ್ಯತೆ ನೀಡಬೇಕು ಎಂದು ಹೇಳಿದರು. ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ಅರಣ್ಯದಂಚಿನಲ್ಲಿ…

Read More

ಸೋಮವಾರಪೇಟೆ ಮಾ.22 NEWS DESK : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಆಶ್ರಯದಲ್ಲಿ, ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ನಡೆಯಿತು. ಇಲ್ಲಿನ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಕಲ ಜೀವರಾಶಿಗಳಿಗೂ ಅತೀ ಅಗತ್ಯವಾಗಿರುವ ನೀರಿನ ಮಹತ್ವವನ್ನು ಎಲ್ಲರೂ ಅರಿತುಕೊಂಡು, ಅದರ ಸಂರಕ್ಷಣೆಗೆ ಪ್ರತಿಯೋರ್ವರೂ ಮುಂದಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ವಕೀಲರಾದ ಹೆಚ್.ಎಸ್. ವೆಂಕಟೇಶ್ ಅವರು, ಜಲಮೂಲಗಳ ಸಂರಕ್ಷಣೆಯೊAದಿಗೆ, ಹಸಿರೀಕರಣಕ್ಕೆ ಆದ್ಯತೆ ನೀಡಬೇಕು. ದಿನಬಳಕೆಯಲ್ಲಿ ನೀರಿನ ಮಿತವ್ಯಯ ಮಾಡಬೇಕು. ನೀರಿನ ಪುನರ್ಬಳಕೆಗೆ ಹೆಚ್ಚು ಒತ್ತು ನೀಡಬೇಕು. ಹಸಿರು ಉಳಿದರೆ ಮಾತ್ರ ನೀರು, ನೀರಿದ್ದರೆ ಮಾತ್ರ ಜೀವನ ಎಂಬುದನ್ನು ಮರೆಯಬಾರದು ಎಂದರು. ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ, ತಾಲೂಕು ತಹಶೀಲ್ದಾರ್…

Read More

ಮಡಿಕೇರಿ ಮಾ.22 NEWS DESK : ಇಂದಿನಿಂದ ಐಪಿಎಲ್ ಆವೃತ್ತಿ ಪ್ರಾರಂಭವಾಗುವುದರಿಂದ ತಮ್ಮ ನಾಯಕರಿಗೆ ಮಡಿಕೇರಿಯಲ್ಲಿ ವಿಭಿನ್ನ ರೀತಿಯಲ್ಲಿ ಅಭಿಮಾನ ವ್ಯಕ್ತಪಡಿಸಿದ್ದಾರೆ. ನಗರದ ಡಿಕೆ ಫ್ಯಾಷನ್ ಮಾಲೀಕ ಮಂಜುನಾಥ್ ತಮ್ಮ ತಲೆಯಲ್ಲಿ ಎಂ.ಎಸ್.ಧೋನಿಯಾ ಚಿತ್ರವನ್ನು ಹೇರ್ ಕಟಿಂಗ್ ಮಾಡಿಸಿಕೊಳ್ಳುವ ಗಮನ ಸೆಳೆದಿದ್ದಾರೆ. ಮಡಿಕೇರಿಯ ಬ್ಯೂಟಿ ಗಾರ್ಡನ್ ಸಲೂನ್ ಕೇಶ ವಿನ್ಯಾಸಗಾರ ವಿನಯ್ ಸ್ಟಿಂಗ್  ಅವರ ಕೈ ಚಳಕದಿಂದ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿಯ ಮುಖ ಪಟ ವಿನ್ಯಾಸಗೊಂಡಿದೆ.

Read More