ಸೋಮವಾರಪೇಟೆ ಮಾ.22 NEWS DESK : ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಮಾ.23 ಮತ್ತು 24ರಂದು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ 24ನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ. ಮಾ.23ರಂದು ಬೆಳಿಗ್ಗೆ 9.30ಕ್ಕೆ ಕ್ರೀಡಾಕೂಟದ ಉದ್ಘಾಟನೆಯನ್ನು ಯಡೂರು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪಿ.ಭಾನುಪ್ರಕಾಶ್ ನೆರವೇರಿಸಲಿದ್ದು, ಕಾಲೇಜು ಪ್ರಾಂಶುಪಾಲರಾದ ಪ್ರೊ. ಧನಲಕ್ಷ್ಮೀ, ಗ್ರಾ.ಪಂ ಸದಸ್ಯೆ ಲಲಿತಾ ರಾಮಣ್ಣ, ಉಪಾಧ್ಯಕ್ಷೆ ರೇಣುಕಾ ವೆಂಕಟೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಮಾ.24 ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಗ್ರಾ.ಪಂ. ಸದಸ್ಯ ವೈ.ಎಸ್.ರಘು, ಚೌಡ್ಲು ವಿಎಸ್ಎಸ್ಎನ್ ಉಪಾಧ್ಯಕ್ಷ ವೈ.ಎಂ.ನಾಗರಾಜು, ನಿರ್ದೇಶಕ ದಳವಾಯಿ ರಾಜು, ಉದ್ಯಮಿಗಳಾದ ಹರಪಳ್ಳಿ ರವೀಂದ್ರ, ಅರುಣ್ ಕಾಳಪ್ಪ, ಗಿರೀಶ್ ಮಲ್ಲಪ್ಪ, ಕೆ.ಟಿ.ಸತೀಶ್, ಉದಯ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವಾಗಿ 22 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ 15…
ಲೇಖಕ: admin
ವಿರಾಜಪೇಟೆ ಮಾ.22 NEWS DESK : ವಿರಾಜಪೇಟೆಯ ಚಿನ್ನ, ಬೆಳ್ಳಿ ವರ್ತಕರು ಮತ್ತು ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆಯು ಮಾ.24 ರಂದು ನಡೆಯಲಿದೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೆ.ಪಿ.ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಚಿನ್ನ-ಬೆಳ್ಳಿ ವರ್ತಕರು ಮತ್ತು ಕೆಲಸಗಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಕೆ.ಶ್ರೀನಿವಾಸ, ವಿರಾಜಪೇಟೆ ತಾಲ್ಲೂಕು ಚಿನ್ನ-ಬೆಳ್ಳಿ ವರ್ತಕರ ಮತ್ತು ಕೆಲಸಗಾರರ ಸಂಘದ ಉಪಧ್ಯಕ್ಷ ಉಲ್ಲಾಸ್ ಶೇಟ್, ಪ್ರಧಾನ ಕಾರ್ಯದರ್ಶಿ ಎ.ಪಿ.ಲೋಕೇಶ್, ಸಹ ಕಾರ್ಯದರ್ಶಿ ವಿ.ವಿ.ಜಿತೇಂದ್ರ, ಖಜಾಂಚಿ ಎ.ಎನ್.ದಶರಥ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರ ಕುಟುಂಬ ವರ್ಗದವರಿಗೆ ಸಂಗೀತ ಕುರ್ಚಿ, ಮಹಿಳೆಯರಿಗೆ ಮಕ್ಕಳಿಗೆ, ಪುರುಷರಿಗೆ, ಬಣ್ಣದ ರಂಗೋಲಿ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ವರದಿ : ಕಿಶೋರ್ ಕುಮಾರ್ ಶೆಟ್ಟಿ
ಮಡಿಕೇರಿ ಮಾ.22 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪೂಮಾಲೆ ವಾರಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪೊದಕೋಟೆ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ತಾವು ಕಲಿತ ಪ್ರಾಥಮಿಕ ಶಿಕ್ಷಣವನ್ನು ಮೆಲುಕು ಹಾಕಿ ತಲೆಬಾಗಿ ಶಾಲೆಗೆ ನಮಿಸಿದರು. ವರದಿ : ಕರುಣ್ ಕಾಳಯ್ಯ
ಮಡಿಕೇರಿ ಮಾ.22 NEWS DESK : ಪ್ರತಿಯೊಬ್ಬರಿಗೂ ನೀರಿನ ಮಹತ್ವ ತಿಳಿದಿದೆ ಮತ್ತು ನೀರಿಲ್ಲದಿದ್ದರೆ ಭೂಮಿಯ ಮೇಲೆ ಯಾವುದೇ ಜೀವಿಯು ಬದುಕಲಾರದು. ಭೂಮಿಯ ಮೇಲೆ ನೀರು ಅತ್ಯವಶ್ಯಕವಾಗಿದೆ. ಹಾಗಾಗಿ ನೀರಿನ ಮಹತ್ವವನ್ನು ಅರಿಯಲು ಮತ್ತು ಅದರ ಸಂರಕ್ಷಣೆ ಮಾಡುವ ಕುರಿತು ಜನಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 22 ಅನ್ನು ವಿಶ್ವ ಜಲ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತದೆ. “ಶಾಂತಿಗಾಗಿ ನೀರು” ಎಂಬುದು 2024 ರ ವಿಶ್ವ ಜಲ ದಿನದ ಮುಖ್ಯ ಘೋಷಣೆ (ಥೀಮ್) ಯಾಗಿದೆ. ನೀರು ನಮ್ಮ ಶಾಂತಿಗೆ ಕಾರಣವಾಗಬೇಕೇ ಹೊರತು ಎಂದೂ ಕೂಡ ಸಂಘರ್ಷಕ್ಕೆ ಕಾರಣವಾಗಬಾರದು. ನಾವು ನೀರನ್ನು ಪರಸ್ಪರ ಸಹಕಾರ ತತ್ವದಡಿ ಕೊಟ್ಟು ತೆಗೆದುಕೊಳ್ಳುವ ಸಕಾರಾತ್ಮಕ ಮನೋಭಾವ ಹೊಂದಿ ಸಾಮರಸ್ಯ ಬೆಳೆಸಿಕೊಳ್ಳಬೇಕು ಎಂಬುದು ಈ ವರ್ಷದ ಉದ್ದೇಶವಾಗಿದೆ. 1993 ರಿಂದ ಪ್ರತಿವರ್ಷ ಈ ದಿನವನ್ನು ಆಚರಿಸುವ ಮೂಲಕ ಜನರಲ್ಲಿ ನೀರಿನ ಸಂರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತಿದೆ. ನಾವು ಅಂತರ್ಜಲವನ್ನು ವೃದ್ಧಿಸಲು ಕ್ರಮಕೈಗೊಳ್ಳಬೇಕು. ಜಲ ಮಾಲಿನ್ಯವನ್ನು ತಡೆಗಟ್ಟುವ ದಿಸೆಯಲ್ಲಿ ನಾವು…
ಮಡಿಕೇರಿ ಮಾ.22 NEWS DESK : ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ ಕುಂಡ್ಯೋಳಂಡ ಹಾಕಿ ಹಬ್ಬ ಮಾ.30 ರಿಂದ ಏ.28 ರವರೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ದಾಖಲೆಯ 360 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಅಧ್ಯಕ್ಷ ರಮೇಶ್ ಮುದ್ದಯ್ಯ ಹಾಗೂ ಪ್ರಮುಖರು ಕೊಡವ ಹಾಕಿ ಅಕಾಡೆಮಿಯು 26 ವರ್ಷಗಳ ಹಿಂದೆ ಕೊಡವ ಹಾಕಿ ಹಬ್ಬದ ಜನಕ ದಿವಂಗತ ಪಾಂಡಂಡ ಕುಟ್ಟಣಿ ಅವರ ನೇತೃತ್ವದಲ್ಲಿ 1997 ರಲ್ಲಿ ಸ್ಥಾಪಿತಗೊಂಡಿತು. ಅಂದಿನಿಂದ ಇಂದಿನವರೆಗೆ ಕೊಡವ ಕುಟುಂಬಗಳ ನಡುವಿನ ವಿಶ್ವದಾಖಲೆಯ ಹಾಕಿ ಹಬ್ಬವನ್ನು ಆಯೋಜಿಸುತ್ತಾ ಬರುತ್ತಿದೆ ಎಂದರು. ಈ ವರ್ಷ 24ನೇ ಹಾಕಿ ಹಬ್ಬವನ್ನು ಕುಂಡ್ಯೋಳಂಡ ಕುಟುಂಬದ ಸಾರಥ್ಯದಲ್ಲಿ ನಡೆಸಲಾಗುತ್ತಿದೆ. ಕೊಡವ ಹಾಕಿ ಅಕಾಡೆಮಿ, ಹಾಕಿ…
ಕುಶಾಲನಗರ, ಮಾ 22 NEWS DESK : ಕರ್ನಾಟಕದ ಕಾರವಾರ ನೌಕಾನೆಲೆಯ 13 ಅಧಿಕಾರಿಗಳ ತಂಡ ಕೊಡಗಿನ ಸೈನಿಕ ಶಾಲೆಗೆ ಭೇಟಿ ನೀಡಿತು. ಶಾಲೆಗೆ ಆಗಮಿಸಿದ ಅಧಿಕಾರಿಗಳು ಸೈನಿಕ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಭಾರತೀಯ ನೌಕಾ ಇಲಾಖೆಯಲ್ಲಿ ಅಧಿಕಾರಿಗಳಾಗಿ ವೃತ್ತಿಜೀವನವನ್ನು ಆಯ್ಕೆ ಮಾಡಿಕೊಳ್ಳುವಂತ ಸಲಹೆ ನೀಡಿದರು. ಕಾರವಾರದ ನೌಕಾನೆಲೆಯ ಉಪ ನೆಲೆ ವಿಕ್ಚುವಲಿಂಗ್ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಜೆ ಸುಬ್ಬಯ್ಯ ಮಾತನಾಡಿ, ತಮ್ಮ ವಿದ್ಯಾಭ್ಯಾಸ ಮತ್ತು ಕರ್ತವ್ಯಕ್ಕೆ ಬದ್ಧರಾಗಿ ತಮ್ಮ ಭವಿಷ್ಯವನ್ನು ಭಾರತೀಯ ಸೇನೆಯಲ್ಲಿ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕೆಂದರು. ಹಾಗೆಯೇ ತಮ್ಮ ಈ ರ್ಯಾಲಿಯ ಉದ್ದೇಶ ಹಾಗೂ ನೌಕಾ ಸೇನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಈ ರ್ಯಾಲಿಯ ಮಹತ್ವವನ್ನು ಕುರಿತು ಪರಿಚಯಿಸಿದರು. ಇದರೊಂದಿಗೆ ಭಾರತೀಯ ನೌಕಾ ಸೇನೆಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಇರುವ ವಿವಿಧ ವೃತ್ತಿಪರ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಕಮಾಂಡರ್ ಸಜ್ವಾನ್ ಕೋಕಿಲಾ ಮಾತನಾಡಿ, ಭಾರತೀಯ ನೌಕಾಪಡೆಯಲ್ಲಿ ಅಧಿಕಾರಿಗಳಾಗಿ ಸೇರಲು ಮಹಿಳೆಯರಿಗೆ ಲಭ್ಯವಿರುವ ಹೆಚ್ಚಿನ ಅವಕಾಶಗಳ…
ನಾಪೋಕ್ಲು ಮಾ.22 NEWS DESK : ಬೆಟ್ಟಗೇರಿ ಭಗವತಿ ದೇವರ ವಾರ್ಷಿಕ ಉತ್ಸವವು ಮಾ.24 ಮತ್ತು 25 ರಂದು ನಡೆಯಲಿದೆ. ಮಾ.24 ರಂದು ಪಟ್ಟಣಿ, ಹಗಲು ವಿಶೇಷ ಪೂಜಾ ಕೈಂಕರ್ಯಗಳು, ಮಧ್ಯಾಹ್ನ 1 ಗಂಟೆಗೆ ಕಟ್ರತಂಡ ಕುಟುಂಬದ ಭಂಡಾರದ ಮನೆಯಿಂದ ಬಂಡಾರ ಹೊರಡುವುದು, 2 ಗಂಟೆಗೆ ಶಾಸ್ತಾವು ತೆರೆ , ಸಂಜೆ 5 ಗಂಟೆಗೆ ಆಂಬಲದಲ್ಲಿ ಭಗವತಿ ಅಯ್ಯಪ್ಪ ತೆರೆ, 6 ಗಂಟೆಗೆ ದೇವರು ಬನಕ್ಕೆ ಹೋಗುವುದು ರಾತ್ರಿ, 7.30 ಗಂಟೆಗೆ ಚೌಂಡಿ ತೋತ ಹಾಗೂ 9 ಗಂಟೆಗೆ ಮೇಲೇರಿ ಕುಂಟೆಗೆ ಅಗ್ನಿಸ್ಪರ್ಶ ನಡೆಯಲಿದೆ. ಮುಂಜಾನೆ ಮಂದಣ್ಣ ಮೂರ್ತಿ, ಅಂಜಿ ಕುಟ್ಟಿ ಮೂರ್ತಿ ಕರಿಬಾಳ ಹಾಗೂ ನುಚ್ಚಟ್ಟೆ ತೆರೆಗಳು ನಡೆಯಲಿವೆ. ಮಾ.25 ರಂದು ಬೆಳಗ್ಗೆ 11 ಗಂಟೆಗೆ ವಿಷ್ಣುಮೂರ್ತಿಯ ಕೆಂಡಸೇವೆ ಹಾಗೂ ಗುಳಿಗ ರಾಜನ ಕೋಲ, ಮಧ್ಯಾಹ್ನ 12.30 ಗಂಟೆಯಿಂದ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪೌಡಂಡ ಡಾಲಿ ಭೀಮಯ್ಯ ಉಪಾಧ್ಯಕ್ಷ…
ಸುಂಟಿಕೊಪ್ಪ,ಮಾ.22 NEWS DESK : ಬಿಜೆಪಿ ಪರಿಶಿಷ್ಟ ಮೋರ್ಚಾದ ಸಭೆಯು ಜಿಲ್ಲಾಧ್ಯಕ್ಷ ಪಿ.ಎಂ.ರವಿ ಅವರ ಅಧ್ಯಕ್ಷತೆಯಲ್ಲಿ ಸುಂಟಿಕೊಪ್ಪದಲ್ಲಿ ನಡೆಯಿತು. ದ್ವಾರಕಾ ಹೊಟೇಲ್ನ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಒಂದೂವರೆ ಲಕ್ಷಕ್ಕಿಂತಲ್ಲೂ ಅಧಿಕವಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ ಮೋರ್ಚದ ಘಟಕವನ್ನು ಬಲಿಷ್ಟಗೊಳಿಸುವ ಮೂಲಕ ಪರಿಶಿಷ್ಟ ಜನಾಂಗದವರು ರಾಜಕೀಯವಾಗಿ ಬೆಳೆಯುವಂತಾಗಬೇಕೆಂದು ಕರೆ ನೀಡಿದರು. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದವರನ್ನು ಪಕ್ಷವು ಗುರುತಿಸಿ ಉನ್ನತ ಸ್ಥಾನಮಾನ ನೀಡುತ್ತ ಬಂದಿದೆ. ಪಕ್ಷದ ಸಂಘಟನೆಯೊಂದಿಗೆ ಎಲ್ಲರೂ ಕೈ ಜೋಡಿಸುವಂತಾಗಬೇಕೆಂದರು. ಭಾರತೀಯ ಜನತಾ ಪಕ್ಷವು ರಾಷ್ಟ್ರ ಭಕ್ತಿ, ರಾಷ್ಟ್ರೀಯತೆಯ ಬಗ್ಗೆ ಅಪಾರವಾದ ಗೌರವವನ್ನು ನೀಡುವ ಪಕ್ಷವಾಗಿದೆ ಎಂದರು. ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನೀಲ್ಕುಮಾರ್, ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಸೋಮವಾರಪೇಟೆ ಗ್ರಾಮಾಂತರ ಮಂಡಲ ಎಸ್ಸಿ ಮೋರ್ಚದ ಅಧ್ಯಕ್ಷ ಜಿ.ಜಗನಾಥ್, ಪಕ್ಷದ ಹಿರಿಯ ಸದಸ್ಯ ಬಿ.ಕೆ.ಮೋಹನ ಮಾತನಾಡಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ, ಪ್ರಧಾನ ಕಾರ್ಯದರ್ಶಿ ವಿ.ರಾಜ, ಕಾರ್ಯದರ್ಶಿ ಪ್ರಶಾಂತ್(ಕೋಕಾ), ಪಂಚಾಯಿತಿ ಸದಸ್ಯರಾದಆನಂದ, ಪ್ರೇಮ ಕೃಷ್ಣ,…
ಮಡಿಕೇರಿ ಮಾ.22 NEWS DESK : ಪೊನ್ನಂಪೇಟೆ ವಿದ್ಯುತ್ 66/11 ಕೆವಿಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಮಾರ್ಚ್, 24 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 66/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳೆಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, ಕುಶಾಲನಗರ, ಕೂಡಿಗೆ, ಇಂಡಸ್ಟ್ರಿಯಲ್ ಏರಿಯಾ, ಹಾರಂಗಿ, ಎಸ್ಎಲ್.ಎನ್, ಶಿರಂಗಾಲ, ಭುವನಗಿರಿ, ಹೆಬ್ಬಾಲೆ, ನಂಜರಾಯಪಟ್ಟಣ, ಶಾಂತಳ್ಳಿ,, ಸೋಮವಾರಪೇಟೆ, ಅಬ್ಬೂರುಕಟ್ಟೆ, ಬೇಳೂರು, ಐಗೂರು, ಬೆಟ್ಟದಳ್ಳಿ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ…
ಮಡಿಕೇರಿ ಮಾ.22 NEWS DESK *ತಲಕಾವೇರಿ ಮತ್ತು ಭಾಗಮಂಡಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್*






