ಲೇಖಕ: admin

ಮಡಿಕೇರಿ ಜೂ.5 NEWS DESK : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಭವ್ಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು, ವಕೀಲರ ಸಂಘ ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಉದ್ದಿಮೆದಾರರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ “ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ ಎಂಬ ಧ್ಯೇಯವಾಕ್ಯದೊಂದಿಗೆ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ…

Read More

ಮಡಿಕೇರಿ ಜೂ.5 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಅವರು ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಪಕ್ಷದ ಮುಖಂಡರುಗಳು ಸಹಕಾರ ನೀಡುವಂತೆ ಕೋರಿದರು. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು ಘೋಷಿಸಿದ್ದು, ಜೂ.20 ರಿಂದ 29ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ, ಆಗಸ್ಟ್, 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.5 ರಿಂದ ಸೆ.4ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅಕ್ಟೋಬರ್,…

Read More

ಕುಶಾಲನಗರ ಜೂ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ, ಶಾಲೆಯ ಇಕೋ ಕ್ಲಬ್ ಹಾಗೂ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಎನ್.ಎಸ್.ಎಸ್., ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಜಿಲ್ಲಾ ಸಂಘಟನೆ, ಎಸ್ ಡಿ ಎಂ ಸಿ. ಆಶ್ರಯದಲ್ಲಿ “ನಮ್ಮ ನಡೆ ಹಸಿರೆಡೆಗೆ” ದಡಿ ಶುಕ್ರವಾರ( ಜೂ.5 ರಂದು)ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’; ಎಂಬ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ: 2026 ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪರಿಸರ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಗಿಡ ನೆಟ್ಟು ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ತೊಡಗಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಪರಿಸರಕ್ಕೆ ಧಕ್ಕೆ : ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ,…

Read More

ಮಡಿಕೇರಿ ಜೂ.5 NEWS DESK : ಕೆದಮುಳ್ಳೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ 43 ಮನೆಗಳ ಬೀಗದ ಕೀ ಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಆದಿವಾಸಿ ಯರವ ಮತ್ತಿತರ ಕುಟುಂಬಗಳಿಗೆ ನೀಡುವ ಮೂಲಕ ಹಸ್ತಾಂತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೆದಮುಳ್ಳೂರು ಗ್ರಾ.ಪಂ.ವ್ಯಾಪ್ತಿಯ ಸರ್ವೆ ನಂ.370/1 ರ 7.50 ಎಕರೆ ಜಾಗದ ಬಡಾವಣೆಯಲ್ಲಿ ನಿರ್ಮಿಸಿರುವ ಮನೆಗಳು ಹಾಗೂ ಮೂಲ ಸೌಕರ್ಯ ಕಾಮಗಾರಿ ಉದ್ಘಾಟಿಸಿ, ಶಾಸಕರು ಮಾತನಾಡಿದರು. ಪರಿಶಿಷ್ಟ ಪಂಗಡದ ಆದಿವಾಸಿ ಯರವ, ಜೇನುಕುರುಬ, ಬೆಟ್ಟಕುರುಬ ಸಮಾಜಗಳ ಮನೆ ನಿರ್ಮಾಣದ ಕಾಮಗಾರಿ ಯೋಜನೆ ಪೂರ್ಣಗೊಳಿಸುವಲ್ಲಿ ಹಲವು ಪ್ರಯತ್ನ ನಡೆದಿದೆ ಎಂದು ಹೇಳಿದರು. ಯೋಜನೆ ಅರ್ಧಕ್ಕೆ ಸ್ಥಗಿತಗೊಂಡಿತ್ತು, ಆ ನಿಟ್ಟಿನಲ್ಲಿ ಬೆಂಗಳೂರಿನ ನೀರು ಸರಬರಾಜು ವಿಭಾಗದಿಂದ ಸಿಎಸ್‍ಆರ್ ನಿಧಿಯಡಿ 1.60 ಲಕ್ಷ ರೂ. ಹೆಚ್ಚುವರಿ ಹಣ ಬಿಡುಗಡೆ ಮಾಡಿಸಿ ಮನೆ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಈ ಹಿಂದೆ ಮನೆ…

Read More

ಮಡಿಕೇರಿ ಜೂ.5 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದಲ್ಲಿ ವಿವಿಧ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಕೊಡಗು ವಿದ್ಯಾಲಯದ ಎನ್‌ಸಿಸಿ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಪ್ರಾಂಶುಪಾಲೆ ಕೆ. ಎಸ್. ಸುಮಿತ್ರಾ, ಆಡಳಿತ ವ್ಯವಸ್ಥಾಪಕ ರವಿ ಪಿ., ಡಿಆರ್‌ಎಫ್‌ಒ ಸುನಿಲ್ ಮತ್ತು ಅವರ ತಂಡದ ಸಮ್ಮುಖದಲ್ಲಿ ಉಕ್ಕುಡದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಅವುಗಳ ಸಂರಕ್ಷಣೆ ಹಾಗೂ ಪೋಷಣೆಯ ಜವಾಬ್ದಾರಿಯನ್ನು ಅರಿತುಕೊಂಡರು. ಈ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸುವುದರ ಜೊತೆಗೆ, ಪ್ರಕೃತಿಯ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿಯ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಎನ್‌ಸಿಸಿ ಕೆಡೆಟ್‌ಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಮರಗಳ ಮಹತ್ವ, ಮಾಲಿನ್ಯ ನಿಯಂತ್ರಣ ಹಾಗೂ ಸ್ವಚ್ಛತೆಯ…

Read More

ಮಡಿಕೇರಿ ಜೂ.5 NEWS DESK : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನ ಮೊದಲ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಹಿಳಾ ಘಟಕವನ್ನು ಮತ್ತಷ್ಟು ಸದೃಢಗೊಳಿಸಿ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಪಕ್ಷದ ಜಿಲ್ಲಾ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಮಹಿಳಾ ಘಟಕ ಪ್ರಮುಖ ಪಾತ್ರ ವಹಿಸಬೇಕು. ಎಲ್ಲಾ ವಾರ್ಡ್‍ಗಳಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸಬೇಕು ಎಂದು ಕರೆ ನೀಡಿದರು. ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ಮಾತನಾಡಿ ಮಹಿಳಾ ಘಟಕ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು. ಮಹಿಳಾ ಅಧ್ಯಕ್ಷೆ ಶಶಿಕಲಾ ಮಾತನಾಡಿ ಪಕ್ಷದ ಬಲವರ್ಧನೆಗೆ ಎಲ್ಲಾ ಮಹಿಳಾ ಕಾರ್ಯಕರ್ತರು ಕೈಜೋಡಿಸಬೇಕು,…

Read More

ಮಡಿಕೇರಿ ಜೂ.5  NEWS DESK : ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ. ನಾಗಲ್ಯಾಂಡ್ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಕಾಡಾನೆ ದಾಳಿ ಸಂದರ್ಭ ತೋಟದಲ್ಲಿದ್ದ ಕೆಲವು ಕಾರ್ಮಿಕರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದರು. ಕಾಡಾನೆಗಳ ಉಪಟಳ ಮಿತಿ ಮೀರಿರುವ ಕುರಿತು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಣ್ಣಳಮಾಡ ಸಂಧ್ಯಾ ಅವರು ತಮ್ಮ ಇಬ್ಬರು ಪುತ್ರಿಯರ ಜೊತೆಯಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ವಾಸವಾಗಿದ್ದು, ಪತಿ ಸುನೀಲ್ ಅಚ್ಚಯ್ಯ ಅವರು…

Read More

ಮಡಿಕೇರಿ NEWS DESK ಜೂ.5 : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರತಿ ಗ್ರಾ.ಪಂ ಮಟ್ಟದಲ್ಲಿ “ಭಾರತ್ ಜೋಡೋ ಯುವ ಸಂಘ” ವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಸಂಘಟನೆಯಾಗಿದ್ದು, ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು “ಭಾರತ್ ಜೋಡೋ ಯುವ ಸಂಘ” ವನ್ನು ಮುನ್ನಡೆಸಲು ಸರಕಾರದ ಮೂಲಕ ತಲಾ 10 ಲಕ್ಷ ರೂ. ಬಿಡುಗಡೆ ಮಾಡುವುದಾಗಿ ನೂತನ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದು ಜನರು ಪಾವತಿಸಿದ ತೆರಿಗೆ ಹಣವಾಗಿದ್ದು, ಯಾವುದೇ ಕಾರಣಕ್ಕು ಈ ರೀತಿಯ ರಾಜಕೀಯ ಲಾಭದ ದೃಷ್ಟಿಕೋನದ ಸಂಘಗಳಿಗೆ ವಿನಿಯೋಗ ಮಾಡಬಾರದು ಮತ್ತು ಗ್ರಾಮಗಳಲ್ಲಿ ಸಂಘರ್ಷಕ್ಕೆ ಕಾರಣವಾಗಬಲ್ಲ ಸಂಘಟನೆಗಳನ್ನು ಸರಕಾರ ರಚಿಸಬಾರದು ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹಗಲುಗನಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಭಾರತ್ ಜೋಡೋ” ಯಾತ್ರೆಯನ್ನು ದೇಶವ್ಯಾಪಿ…

Read More

ಮಡಿಕೇರಿ NEWS DESK ಜೂ.5 : ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ್ ಆಚಾರ್ಯ ಅವರು ಜಿಲ್ಲೆಯ ಇಬ್ಬರು ಉತ್ಸಾಹಿ ಶಾಸಕರು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಸಮಸ್ಯೆಗಳಿಗೆ ಖುದ್ದು ಸ್ಪಂದಿಸುತ್ತಿರುವ ಶಾಸಕದ್ವಯರ ಸೇವೆ ರಾಜ್ಯಕ್ಕೂ ವ್ಯಾಪಿಸಿದರೆ ಯುವಶಕ್ತಿಗೆ ಪ್ರೇರಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿನಾಡು ಕೊಡಗಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜಕೀಯವಾಗಿ ಬಲ ತುಂಬಬೇಕು. ಇದರಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜಗದೀಶ್ ಆಚಾರ್ಯ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜೂ.5 : ಅರಣ್ಯ ಪ್ರದೇಶದಲ್ಲಿರುವ ತೇಗ, ನೀಲಗಿರಿ ಮತ್ತು ಅಕೇಶಿಯ ಮರಗಳನ್ನು ತೆರವುಗೊಳಿಸಿ ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಯೋಜನೆ ರೂಪಿಸಬೇಕು. ಆ ಮೂಲಕ ವನ್ಯಜೀವಿಗಳ ದಾಳಿಯನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆ ಕೊಡಗು ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳನ್ನು ಭೇಟಿಯಾದ ಪ್ರಮುಖರು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತಿತರ ಜಿಲ್ಲೆಗಳಲ್ಲಿ ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಅತಿಯಾಗುತ್ತಿದೆ. ಕಾಡಾನೆ, ಹುಲಿ ಸೇರಿದಂತೆ ವನ್ಯಜೀವಿಗಳ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ ಮತ್ತು ಕೃಷಿ ಫಸಲು ನಾಶವಾಗುತ್ತಿದೆ. ಈ ಸಮಸ್ಯೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಅರಣ್ಯ ಭಾಗದಲ್ಲಿ ಆಹಾರ ಹಾಗೂ ನೀರಿನ ಕೊರತೆ ಎದುರಾಗಿರುವುದೇ ವನ್ಯಜೀವಿಗಳ ಉಪಟಳಕ್ಕೆ ಕಾರಣವಾಗಿದೆ. ಕಾಡು ಪ್ರಾಣಿಗಳಿಗೆ ಬೇಕಾದ ಆಹಾರಕ್ಕೆ ಪೂರಕವಾದ ಗಿಡ ಮರಗಳನ್ನು ಬೆಳೆಸುವ ಬದಲು ಪ್ರಕೃತಿಗೆ…

Read More