ಮಡಿಕೇರಿ NEWS DESK ಜು.14 : ಯರವನಾಡು ಗ್ರಾಮದ ದೇವಯಿರ ವಿನಯ್ ಅವರ ಮನೆಯ ಬಳಿ ಹುಲ್ಲುಗುಡ್ಡೆಯಲ್ಲಿ ಅಡಗಿದ್ದ 16 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಪಿಯೂಷ್ ಪೆರೆರಾ ರಕ್ಷಿಸಿದರು. ಸೆರೆ ಸಿಕ್ಕ ಕಾಳಿಂಗ ಸರ್ಪವನ್ನು ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದರು. (ಪಿಯೂಷ್ ಪೆರೆರಾ ಮೊ.ಸಂ 94819 52253)
ಲೇಖಕ: admin
ಮಡಿಕೇರಿ NEWS DESK ಜು.14 : ಬೆಂಗಳೂರು ಕೊಡಗು ಗೌಡ ಸಮಾಜದ ವತಿಯಿಂದ ಮಹಿಳಾ ಘಟಕ ಹಾಗೂ ಯುವ ವೇದಿಕೆಯ ಸಹಯೋಗದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿದ್ದ “ವಧು-ವರರ ಸಮಾವೇಶ” ಯಶಸ್ವಿಯಾಗಿ ನಡೆಯಿತು. ಬೆಂಗಳೂರು ಕೊಡಗು ಗೌಡ ಸಮಾಜದಲ್ಲಿ ನಡೆದ ಸಮಾವೇಶದಲ್ಲಿ 90ಕ್ಕೂ ಹೆಚ್ಚು ವಧು-ವರ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಪೋಷಕರೊಂದಿಗೆ ಆಗಮಿಸಿದ್ದ ದೇಶ-ವಿದೇಶಗಳಲ್ಲಿ ನೆಲೆಸಿರುವ ಹಲವು ಅಭ್ಯರ್ಥಿಗಳು ಸಮುದಾಯದೊಳಗೆ ಸೂಕ್ತ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ತೋರಿದರು. ಕಾರ್ಯಕ್ರಮವನ್ನು ಹಿರಿಯರಾದ ನಂಗಾರು ನಿಂಗರಾಜು ಉದ್ಘಾಟಿಸಿ ಮಾತನಾಡಿ ಯುವಜನತೆಗೆ ಜೀವನ ಸಂಗಾತಿಯ ಆಯ್ಕೆಯ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು. ಕೊಡಗು ಗೌಡ ಸಮಾಜದ ಅಧ್ಯಕ್ಷ ನಿವೃತ್ತ ವಿಂಗ್ ಕಮಾಂಡರ್ ಅಯ್ಯೆಟ್ಟಿ ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಆಶಾ ಕಾಚಿಲಂಡ ಸ್ವಾಗತಿಸಿ, ಕಾರ್ಯದರ್ಶಿ ಕವಿತಾ ಕಡ್ಯದ ವಂದಿಸಿದರು. ತರುಣ್ ಕೂಡಕಂಡಿ ಹಾಗೂ ಕಲಾ ದೇವಜನ ನಿರೂಪಿಸಿದರು. ನೂತನ್ ಚೆಟ್ಟಿಮಾಡ ಹಾಗೂ ಜಗದೀಶ್ ಬೊಳ್ಳೂರು ಅಭ್ಯರ್ಥಿಗಳ ಮಾಹಿತಿ ಹಂಚಿಕೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು.…
ಪೊನ್ನಂಪೇಟೆ NEWS DESK ಜು.14 : ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಮಾರಮ್ಮ ದೇವರ ವಾರ್ಷಿಕ ಉತ್ಸವ *ಮಾರಿಗುಡಿ ನಮ್ಮೆ* ಇದೇ ಜುಲೈ -16 ಹಾಗೂ ಜುಲೈ -22ರಂದು ಎರಡು ದಿನಗಳ ಕಾಲ ನಡೆಯಲಿದೆ ಎಂದು ಊರಿನ ತಕ್ಕಮುಖ್ಯಸ್ಥರು ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ, ಶ್ರೀ ಭದ್ರಕಾಳಿ ಹಾಗೂ ಶ್ರೀ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು ಪೂರ್ವಿಕರ ಕಾಲದಿಂದಲೂ ಮಾರಿಗುಡಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದ್ದು, ಮಚ್ಚಿಯಂಡ ಕುಟುಂಬಸ್ಥರ ಮುಂದಾಳತ್ವದಲ್ಲಿ ಇಲ್ಲಿ ವರ್ಷಕ್ಕೆ ಎರಡು ಬಾರಿ ಹಬ್ಬ ನಡೆಯಲಿದ್ದು ಇಲ್ಲಿ ಕೊಡವರೇ ಪೂಜಾರಿಗಳಾಗಿರುತ್ತಾರೆ ಎಂದು ಮಾಹಿತಿ ನೀಡಿದ್ದರು. ಕೊಡಗಿನ ಸಾಂಪ್ರದಾಯಿಕ ಕಕ್ಕಡ ಮಾಸದ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ಜುಲೈ-16ರಂದು ಗುರುವಾರ ಮೊದಲ ಹಬ್ಬ ನಡೆಯಲಿದ್ದು, ಎರಡನೇ ಹಬ್ಬವು ಕಕ್ಕಡ ಮಾಸದ ಆರನೇ ದಿನದಂದು ಅಂದರೆ ಜುಲೈ-22ರಂದು ಹಬ್ಬ ನಡೆಯಲಿದೆ. ಎರಡು ದಿನಗಳು ಕೂಡ ಬೆಳಿಗ್ಗೆ 9-30ರಿಂದ ಸಂಜೆ…
ಬೆಂಗಳೂರು NEWS DESK ಜು.14 : ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ಇಂದು ಬೆಂಗಳೂರಿನ ಬಿಐಇಸಿ (BIEC) ನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026’ (Google I/O Connect India 2026) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಈ ಮಹತ್ವದ ಘೋಷಣೆ ಮಾಡಿದರು. ಇದರೊಂದಿಗೆ, ಸ್ಟಾರ್ಟ್ಅಪ್ಗಳು ಮತ್ತು ಉದ್ಯಮಗಳ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ವಿಶೇಷ ‘AI ಹಬ್’ (AI Hub) ಅನ್ನು ಇನ್ಕ್ಯುಬೇಶನ್ ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು. *ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಉಪಕ್ರಮಗಳು* ಭಾರತದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಜಾಗತಿಕ ಮಟ್ಟದ AI ಪ್ರತಿಭೆಗಳನ್ನು ರೂಪಿಸಲು, ಸುಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಬಲವಾದ ಸಮನ್ವಯ ಸಾಧಿಸಲು ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು. AI ಹಬ್ (AI Hub) ನವೋದ್ಯಮಗಳು (Startups), ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧಕರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಸಂಶೋಧನೆ ಹಾಗೂ…
ಮಡಿಕೇರಿ ಜು.13 NEWS DESK : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿನ ಎ.ವಿ.ಶಾಲೆಯಿಂದ ಅಭಿಫಾಲ್ಸ್ ಗೆ ಹಾಗೂ ಭಗವತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸುತ್ತಿರುವುದರಿಂದ ಯಾವುದೇ ವಾಹನಗಳಿಗೆ ಪ್ರವೇಶವಿರುವುದಿಲ್ಲ. ಲಘು ವಾಹನಗಳಿಗೆ ಪರ್ಯಾಯ ರಸ್ತೆ ಇದ್ದು ಭಾರಿ ವಾಹನಗಳಿಗೆ ಪರ್ಯಾಯ ರಸ್ತೆ ಇರುವುದಿಲ್ಲ. ಆದ್ದರಿಂದ ಜುಲೈ, 14 ರಿಂದ ಆಗಸ್ಟ್, 05 ರವರೆಗೆ ಈ ರಸ್ತೆಯ ಕಾಮಗಾರಿ ನಡೆಯಬೇಕಾಗಿರುವುದರಿಂದ ವಾಹನ ಚಾಲಕರು ಕಾಮಗಾರಿ ನಡೆಸಲು ಸಹಕರಿಸುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.
ಮಡಿಕೇರಿ ಜು.13 NEWS DESK : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಮಾನವ ಅಭಿವೃದ್ದಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ದಿ ಯೋಜನೆ-2031 ರ ವರದಿಗಳನ್ನು ಸಿದ್ದಪಡಿಸುವ ಸಂಬಂಧ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೋಮವಾರ ಸುಧೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೊಡಗು ಜಿಲ್ಲಾ ಪಂಚಾಯತ್ ಮಡಿಕೇರಿ ರವರಿಗೆ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ತಾಂತ್ರಿಕ ಬೆಂಬಲ ಸಂಸ್ಥೆಯ ಸಂಯೋಜಕರು, ಸಹ ಸಂಯೋಜಕರಿಗೆ ನವೀನ್ ಎ.ಬಿ.ಯೋಜನಾ ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ಅವರು ಸ್ವಾಗತ ಕೋರಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಯೋಜನಾ ಇಲಾಖೆಯ ನಿರ್ದೇಶನದಂತೆ ಈ ಬಾರಿ ಜಿಲ್ಲಾ ಯೋಜನಾ ಸಮಿತಿ ವತಿಯಿಂದ ಪ್ರಮುಖವಾಗಿ ಡಿಎಚ್ಡಿಆರ್-2025 ಹಾಗೂ ಐಎಸ್ಡಿಡಿಪಿ-2031 ರ ವರದಿಗಳನ್ನು ಸಿದ್ದಪಡಿಸಲು ಕ್ರಮವಹಿಸಲಾಗುತ್ತಿದೆ. ಈ ಸಂಬಂಧ ಈಗಾಗಲೇ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಂಡು ನಿಖರ…
ಮಡಿಕೇರಿ ಜು.13 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್ನಲ್ಲಿ ಜುಲೈ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
ಮಡಿಕೇರಿ ಜು.13 NEWS DESK : ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ ಆಯೋಜಿಸಿರುವ ಜಿಲ್ಲಾ ಮಟ್ಟದ ಫುಟ್ಬಾಲ್ ಟೂರ್ನಿಯಲ್ಲಿ ಕೊಡಗು ಜಿಲ್ಲಾ ತಂಡವು ಮತ್ತೊಂದು ಅದ್ಭುತ ಪ್ರದರ್ಶನ ನೀಡಿ ಮಂಡ್ಯ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿ ಸೆಮಿಫೈನಲ್ಗೆ ಭರ್ಜರಿಯಾಗಿ ಪ್ರವೇಶಿಸಿದೆ. ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಡಗು ತಂಡವು ಮಂಡ್ಯ ತಂಡಕ್ಕೆ ಯಾವುದೇ ಅವಕಾಶ ನೀಡದೆ ಸಂಪೂರ್ಣ ಮೇಲುಗೈ ಸಾಧಿಸಿತು. ತಂಡದ ನಾಯಕ ವಿಜು ಮೊದಲ ಗೋಲು ದಾಖಲಿಸಿ ತಂಡಕ್ಕೆ ಮುನ್ನಡೆ ಒದಗಿಸಿದರು. ನಂತರ ದಿವಾಕರ್ ಮತ್ತು ಸಬಿತ್ ತಲಾ ಒಂದು ಗೋಲು ದಾಖಲಿಸಿ ತಂಡದ ಗೆಲುವನ್ನು ಮತ್ತಷ್ಟು ಭದ್ರಪಡಿಸಿದರು. ತಂಡದ ನಾಯಕ ವಿಜು ಅವರ ಸಮರ್ಥ ನಾಯಕತ್ವ, ಆಟಗಾರರ ಸಂಘಟಿತ ಪ್ರದರ್ಶನ ಹಾಗೂ ತರಬೇತಿ ಸಿಬ್ಬಂದಿಯ ಮಾರ್ಗದರ್ಶನದಿಂದ ಕೊಡಗು ತಂಡವು ಸೆಮಿಫೈನಲ್ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ತಂಡದ ಮುಖ್ಯ ಕೋಚ್ ಜಗದೀಶ್ ಪಾಣತಲೆ, ಸಹಾಯಕ ಕೋಚ್ ದೀಪು ಮಾಚ್ಚಯ್ಯ ಹಾಗೂ ತಂಡದ ವ್ಯವಸ್ಥಾಪಕ ದರ್ಶನ್ ಸುಕುಮಾರ್…
ಕುಶಾಲನಗರ, ಜು.12 NEWS DESK : ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಪರಿಸರ ಪ್ರೇಮಿಯೂ ಆದ ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, ಸೇವಾ ನಿವೃತ್ತಿ ಹೊಂದಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರಿಗೆ ಶಾಲೆಯಲ್ಲಿ ಎಸ್.ಡಿ.ಎಂ.ಸಿ., ಶಾಲಾ ಶಿಕ್ಷಕ ವೃಂದ, ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಅಭಿನಂದನಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪ್ರೇಮಕುಮಾರ್ ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. “ಪರಿಸರಕ್ಕಾಗಿ ನಾವು”- ಮಕ್ಕಳ ಪರಿಸರ ಸಂಭ್ರಮ: 2026 ದೊಂದಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಹಿರಿಯ ವಿದ್ಯಾರ್ಥಿ ವೃಂದ, ವಿವಿಧ ಶಾಲಾ- ಕಾಲೇಜುಗಳು, ವಿವಿಧ ಸಂಘ- ಸಂಸ್ಥೆಗಳು ಸೇರಿದಂತೆ ಕೂಡ್ಲೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಸಮಿತಿ , ಗ್ರಾಮಸ್ಥರು ಹಾಗೂ ನಾಗರಿಕರು ಜತೆಗೂಡಿ ಟಿ.ಜಿ.ಪ್ರೇಮಕುಮಾರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಸೇವಾ ನಿವೃತ್ತಿ ಹೊಂದಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮ ಕುಮಾರ್ ಅವರಿಗೆ…
ಸುಂಟಿಕೊಪ್ಪ ಜು.13 NEWS DESK : ಮಡಿಕೇರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸುಂಟಿಕೊಪ್ಪ ವಲಯದ ಗದ್ದೆಹಳ್ಳ ಒಕ್ಕೂಟದ ವತಿಯಿಂದ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಪರಿಸರವನ್ನು ಈಗಿನಿಂದಲೇ ಉಳಿಸಿದರೆ ಮಾತ್ರ ಮುಂದಿನ ಜನಾಂಗಕ್ಕಾಗಿ ಬೇಕಾಗಿದೆ. ಅದ್ದುದರಿಂದ ಪರಿಸರವನ್ನು ಉಳಿಸಿ ಬೆಳೆಸುವ ಬಗ್ಗೆ ತಿಳಿಸಿದರು. ಗಿಡ ನೆಡುವುದು ಒಂದು ದಿನಕ್ಕೆ ಸಿಮೀತವಾಗಬಾರದು ಅದರ ರಕ್ಷಣೆಯನ್ನು ಮಾಡುವುದರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಶಾಲಾ ಶಿಕ್ಷಕ ಮಂಜುನಾಥ ಅವರು ಮಕ್ಕಳಿಗೆ ಪರಿಸರದ ಉಳಿವಿಗೆ ಮಕ್ಕಳು ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುಕುಮಾರ್, ಪಂಚಾಯಿತಿ ಮಾಜಿ ಸದಸ್ಯರುಗಳಾದ ಗೀತಾ, ಪಾರ್ವತಿ ಸೋಮಯ್ಯ, ಎಸ್ಡಿಎಂಸಿ ಅಧ್ಯಕ್ಷೆ ಬಲ್ಕಿಸ್…






