ಕುಶಾಲನಗರ ಆ.11 NEWS DESK : ಬೀದಿಬದಿ ಮೀನು ವ್ಯಾಪಾರಿಯನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಬಿಜೆಪಿ ಪ್ರಮುಖರು ಪುರಸಭೆ ಕಚೇರಿಯ ಆವರಣದಲ್ಲೇ ಮೀನು ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕುಶಾಲನಗರ ಪ್ರವಾಸಿ ಮಂದಿರದ ರಸ್ತೆಯಲ್ಲಿ ಬೀದಿಬದಿ ವ್ಯಾಪಾರಿಗಳು ಹಲವು ಸಮಯದಿಂದ ವ್ಯಾಪಾರ ನಡೆಸುತ್ತಿದ್ದು, ಹಾರಂಗಿಯ ವ್ಯಾಪಾರಿಯೊಬ್ಬರು ಹೊಳೆ ಮೀನು ತಂದು ರಸ್ತೆ ಬದಿಯಲ್ಲಿ ಕುಳಿತು ಮಾರಾಟ ಮಾಡುತ್ತಿದ್ದರು. ಈ ವೇಳೆ ಪುರಸಭೆ ಸಿಬ್ಬಂದಿ ಅವರ ವ್ಯಾಪಾರವನ್ನು ತೆರವುಗೊಳಿಸಿದ್ದರು. ಈ ಕುರಿತು ಮಾಹಿತಿ ಪಡೆದ ಬಿಜೆಪಿ ಪ್ರಮುಖರು ವ್ಯಾಪಾರಿಯ ನೆರವಿಗೆ ಧಾವಿಸಿ, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ ಎಂದು ಆರೋಪಿಸಿದರು. ಇದರಿಂದ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಮೀನು ವ್ಯಾಪಾರಿಯ ಬುಟ್ಟಿಯೊಂದಿಗೆ ಪುರಸಭೆ ಕಚೇರಿಗೆ ತೆರಳಿ, ಕಚೇರಿ ಆವರಣದಲ್ಲೇ ಮೀನು ಮಾರಾಟ ಆರಂಭಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಬಿಜೆಪಿ ಪ್ರಮುಖ ಭಾಸ್ಕರ್ ನಾಯಕ್ ಮಾತನಾಡಿ, ಅರಣ್ಯ ಇಲಾಖೆ ಕಚೇರಿ ಮುಂಭಾಗದ ರಸ್ತೆ ಬದಿಯಲ್ಲಿ…
ಲೇಖಕ: admin
ಮಡಿಕೇರಿ ಆ.11 NEWS DESK : ಆಡಳಿತ ಲೋಪಗಳಿಂದ ಮುಕ್ಕಾಗಿರುವ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತುವಿನ ಘನತೆಯನ್ನು ಮರುಸ್ಥಾಪಿಸಿ, ಅದರ ಪರಂಪರೆ ಇತಿಹಾಸವನ್ನು ಪುನರುಜ್ಜೀವನಗೊಳಿಸುವ ಚಿಂತನೆ ತಮ್ಮದಾಗಿದೆಯೆಂದು ಹಿರಿಯ ಸಾಹಿತಿಗಳು ಹಾಗೂ ಮುಂದಿನ ಕಸಾಪ ಚುನಾವಣಾ ಅಭ್ಯರ್ಥಿಯಾಗಿಯೂ ಗುರುತಿಸಿಕೊಂಡಿರುವ ಜಾಣಗೆರೆ ವೆಂಕಟರಾಮಯ್ಯ ಅವರು ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಮೈಸೂರಿನ ನಾಲ್ವಡಿ ಕೃಷ್ಣರಾಜ ಪಡೆಯರ್ ಅವರು ಸ್ಥಾಪಿಸಿ 112 ವರ್ಷಗಳಿ ಸಂದಿದೆ. ಇಂತಹ ಸಂಸ್ಥೆಯ ಘನತೆ ಗೌರವಗಳಿಗೆ ಕಳೆದೆರಡು ಅವಧಿಗಳಲ್ಲಿನ ದುರಾಡಳಿತ, ಭ್ರಷ್ಟತೆಗಳಿಂದ ಕುಂದುಂಟಾಗಿದೆಯೆಂದು ಅತೀವ ಬೇಸರ ವ್ಯಕ್ತಪಡಿಸಿದರು. ಪ್ರತಿ ಕುಟುಂಬಕ್ಕೊಂದು ಸದಸ್ಯತ್ವವಾಗಬೇಕು- ಕನ್ನಡ ಸಾಹಿತ್ಯ ಪರಿಷತ್ ಪ್ರಸ್ತುತ 4.50 ಲಕ್ಷ ಸದಸ್ಯತ್ವವನ್ನು ಹೊಂದಿದೆ. ರಾಜ್ಯದ ಕನ್ನಡಿಗರ ಸಂಖ್ಯೆಗೆ ಹೋಲಿಸಿದಲ್ಲಿ ಸದಸ್ಯತ್ವ ಅತ್ಯಂತ ಸಣ್ಣ ಪ್ರಮಾಣದ್ದು. ಈ ಹಿನ್ನೆಲೆಯಲ್ಲಿ ಕನ್ನಡ ನಾಡಿನ ಕನ್ನಡಿಗರ ಪ್ರತಿ ಕುಟುಂಬದಿಂದ ಸದಸ್ಯತ್ವ ಪಡೆದುಕೊಳ್ಳುವಂತಾಗಬೇಕು ಮತ್ತು ಆ ಮೂಲಕ ನಿಜ ಅರ್ಥದಲ್ಲಿ ಕಸಾಪ ಕನ್ನಡಿಗರ ಸಂಸ್ಥೆಯಾಗಿ ರೂಪು…
ಮಡಿಕೇರಿ NEWS DESK ಆ.11 : ಇತ್ತೀಚೆಗೆ ಬಿಡುಗಡೆಗೊಂಡಿರುವ ಕಸ್ತೂರಿ ರಂಗನ್ ವರದಿಯಲ್ಲಿ ಪರಿಸರ ಸೂಕ್ಷ್ಮ ವಲಯವೆಂದು ಸೇರ್ಪಡೆಗೊಂಡಿರುವ ಕುಂದಚೇರಿ ಚೆಟ್ಟಿಮಾನಿ ಗ್ರಾ.ಪಂ ವ್ಯಾಪ್ತಿಯ ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮವನ್ನು ತಕ್ಷಣ ಕೈಬಿಡಬೇಕೆಂದು ಈ ಭಾಗದ ಗ್ರಾಮಸ್ಥರು, ರೈತರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ. ಗ್ರಾ.ಪಂ ಸಭಾಂಗಣದಲ್ಲಿ ಇಂದು ಸಭೆ ನಡೆಸಿದ ಸರ್ವರು ಜು.27 ರಂದು 7ನೇ ಬಾರಿಗೆ ಬಿಡುಗಡೆಗೊಂಡ ಕಸ್ತೂರಿ ರಂಗನ್ ವರದಿಯಲ್ಲಿ ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮವನ್ನು ಸೇರಿಸಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಕೆದಂಬಾಡಿ ಕೀರ್ತಿ ಕುಮಾರ್ ಅವರು ಮಾತನಾಡಿ ಕಸ್ತೂರಿ ರಂಗನ್ ವರದಿಯಿಂದ ಜನರಿಗೆ ಆಗುವ ತೊಂದರೆ ಮತ್ತು ಅನಾನುಕೂಲದ ಬಗ್ಗೆ ಮಾಹಿತಿ ನೀಡಿದರು. ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕೆ.ಯು.ಹ್ಯಾರೀಶ್ ಅವರು ಮಾತನಾಡಿ ಕಸ್ತೂರಿ ರಂಗನ್ ವರದಿಗೆ ಸಂಬ0ಧಪಟ್ಟ0ತೆ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು 2012 ರಲ್ಲಿ ಸಭೆ ನಡೆಸಿ ಎರಡು ಗ್ರಾಮಗಳನ್ನು ಕೈ ಬಿಡುವಂತೆ ಒತ್ತಾಯಿಸಿ…
ಮಡಿಕೇರಿ NEWS DESK ಆ.11 : ಶಿಥಿಲಾವಸ್ಥೆಯಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಹೊಸತೋಟ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಹೊಸತೋಟ ಗ್ರಾಮದ ನಿವಾಸಿಗಳಾದ ನಿತ್ಯ(47) ಹಾಗೂ ಜನಾರ್ಧನ(47) ಮೃತಪಟ್ಟಿರುವ ದುರ್ದೈವಿಗಳು. ಹಳೇ ಶೌಚಾಲಯದ ಬಳಿ ಬರುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಶೌಚ ಗುಂಡಿ ಕುಸಿದು ನಿತ್ಯ ಅದರಲ್ಲಿ ಸಿಲುಕಿಕೊಂಡಿದ್ದರು. ಇದನ್ನು ಗಮನಿಸಿ ನಿತ್ಯನ ರಕ್ಷಣೆಗಾಗಿ ಧಾವಿಸಿದ ಜನಾರ್ಧನ ಅವರು ಕೂಡ ಗುಂಡಿಯಲ್ಲಿ ಸಿಲುಕಿಕೊಂಡರು. ತಕ್ಷಣ ಸ್ಥಳೀಯರು ಇಬ್ಬರನ್ನು ಗುಂಡಿಯಿ0ದ ಮೇಲಕ್ಕೆತ್ತಿ ಮಾದಾಪುರ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲೆ ನಿತ್ಯ ಸಾವನ್ನಪ್ಪ್ಪಿದ್ದರೆ, ಜನಾರ್ಧನ ಚಿಂತಾಜನಕ ಸ್ಥಿತಿಯಲ್ಲಿದ್ದರು ಎಂದು ತಿಳಿದು ಬಂದಿದೆ. ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಇವರು ಕೂಡ ಸಾವನ್ನಪ್ಪಿದ್ದಾರೆ. *ಶಾಸಕರ ಸಾಂತ್ವನ* ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸರಕಾರದಿಂದ ಸೂಕ್ತ ಪರಿಹಾರದ ಭರವಸೆ ನೀಡಿದರು.
ಮಡಿಕೇರಿ NEWS DESK ಆ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗಾನ ಕೋಗಿಲೆ ಎಸ್.ಜಾನಕಿ ಅವರಿಗೆ ‘ಪುಷ್ಪ ನಮನ, ನುಡಿ ನಮನ, ಗಾನ ನಮನ’ ಕಾರ್ಯಕ್ರಮ ಆ.14 ರಂದು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಗಾಯಕರು, ಶಕ್ತಿ ದಿನಪತ್ರಿಕೆಯ ಸಂಪಾದಕರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಟ್ರಸ್ಟಿ ಜಿ.ಚಿದ್ವಿಲಾಸ್ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಟ್ರಸ್ಟಿ ಅನಿಲ್ ಹೆಚ್.ಟಿ ಅವರು ನುಡಿ ನಮನ ಸಲ್ಲಿಸಲಿದ್ದಾರೆ.…
ಮಡಿಕೇರಿ ಆ.10 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 14 ರಂದು ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ಅರೆನಾ-ವಿರಾಜಪೇಟೆ, ಇಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ “ನೇರ ಸಂದರ್ಶನ” ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ಅರೆನಾ- ವಿರಾಜಪೇಟೆ, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಸಂದರ್ಶನದಲ್ಲಿ Relationship Manager, Front office Executive, Service Advisor, Driver, and Technician, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಪಿ.ಯು.ಸಿ, ಪದವಿ, ಡಿಪ್ಲೋಮಾ, ಹಾಗೂ ಐ.ಟಿ.ಐ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್– 8296020826 ಇವರನ್ನು…
ನಾಪೋಕ್ಲು ಆ.10 NEWS DESK : ನಮ್ಮ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಮಕ್ಕಳಲ್ಲಿ ಸಮಾಜದ ಬಗ್ಗೆ ಅರಿವು ಮೂಡಿಸಬೇಕು. ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ಮೂಲಕ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಸೋಲೂರು, ರಾಮನಗರದ ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಬಿಲ್ಲವ ಸಮಾಜದ ವತಿಯಿಂದ ಆಯೋಜಿಸಿದ್ದ 3ನೇ ವರ್ಷದ ಆಟಿಡೊಂಜಿ ದಿನಾಚರಣೆ, ಬಿಲ್ಲವ ಸಮುದಾಯ ಭವನದ ಶಂಕುಸ್ಥಾಪನೆ ಹಾಗೂ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ನಡೆದ ಸಭೆಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ–ವಿಚಾರ ಹಾಗೂ ಪರಂಪರೆಯ ಪರಿಚಯ ಮಾಡಿಕೊಡುವ ಅಗತ್ಯವಿದೆ. ಶ್ರೀ ನಾರಾಯಣಗುರುಗಳ ಧಾರ್ಮಿಕ ಹಾಗೂ ಸಾಮಾಜಿಕ ಸಂದೇಶಗಳನ್ನು ಸ್ಮರಿಸಿಕೊಂಡು, ಸಮಾಜದ ಎಲ್ಲರಿಗೂ ಸನ್ಮಂಗಲ ದೊರೆಯಲಿ ಎಂದು ಆಶಿಸಿದರು. :: ಬಿಲ್ಲವ ಸಮಾಜದ ಕೊಡುಗೆ ಶ್ಲಾಘನೀಯ: ಎ.ಎಸ್. ಪೊನ್ನಣ್ಣ :: ವಿರಾಜಪೇಟೆ ಶಾಸಕ ಹಾಗೂ ವಿಧಾನಸಭೆಯ…
ಮಡಿಕೇರಿ ಆ.10 NEWS DESK : ಕೊಡವ ಸಮಾಜ, ಮಡಿಕೇರಿ, ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟ, ಮಡಿಕೇರಿ ಹಾಗೂ ಮಡಿಕೇರಿಯ ಎಲ್ಲಾ ಕೊಡವ ಕೇರಿಗಳ ಸಂಯುಕ್ತ ಆಶ್ರಯದಲ್ಲಿ ನಡೆದ “ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ” ಕಾರ್ಯಕ್ರಮವು ಮಡಿಕೇರಿ ಕೊಡವ ಸಮಾಜದಲ್ಲಿ ಸಂಭ್ರಮದಿಂದ ನಡೆಯಿತು. ಕೊಡಗು ನೆಲದ ಸಂಸ್ಕೃತಿ, ಸಂಪ್ರದಾಯ ಹಾಗೂ ಪಾರಂಪರಿಕ ಆಹಾರ ಪದ್ಧತಿಯ ವೈವಿಧ್ಯತೆಯನ್ನು ಅನಾವರಣಗೊಳಿಸಿದ ಕಾರ್ಯಕ್ರಮವು ಮರೆಯಾಗುತ್ತಿರುವ ಕೊಡವ ಪಾರಂಪರಿಕ ಆಹಾರ ಪದ್ಧತಿ, ಆಚರಣೆಗಳು, ಜನಪದ ಸಂಸ್ಕೃತಿ ಹಾಗೂ ಪುರಾತನ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಅರ್ಥಪೂರ್ಣ ವೇದಿಕೆಯಾಗಿ ಗಮನ ಸೆಳೆಯಿತು. ಕಕ್ಕಡ ತಿಂಗಳ ವಿಶೇಷತೆ :: ಕೊಡವ ಸಂಪ್ರದಾಯದಲ್ಲಿ ಕಕ್ಕಡ ತಿಂಗಳಿಗೆ ವಿಶೇಷ ಮಹತ್ವವಿದೆ. ಮಳೆಗಾಲದ ಈ ಅವಧಿಯಲ್ಲಿ ಪ್ರಕೃತಿಯಲ್ಲಿ ದೊರೆಯುವ ವಿವಿಧ ಸಸ್ಯ, ಸೊಪ್ಪು ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ಪದಾರ್ಥಗಳನ್ನು ಬಳಸಿ ತಯಾರಿಸುವ ಪಾರಂಪರಿಕ ಖಾದ್ಯಗಳಿಗೆ ವಿಶೇಷ ಸ್ಥಾನವಿದೆ. ಇದೇ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಕ್ಕಡ ತೀನಿ ಪೈಪೋಟಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕಕ್ಕಡ ಪಾಯಸ,…
ಮಡಿಕೇರಿ ಆ.10 NEWS DESK : ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮಡಿಕೇರಿ ತಾಲ್ಲೂಕು ಘಟಕದ ಸಾಮಾನ್ಯ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಗರದ ಉಡುಪಿ ಗಾರ್ಡನ್ ಪಾರ್ಟಿ ಹಾಲ್ನಲ್ಲಿ ನಡೆಯಿತು. ಕರವೇ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪ್ರವೀಣ್ ಡಿಂಗ ಅವರ ಅಧ್ಯಕ್ಷತೆಯಲ್ಲಿ, ರಾಜ್ಯ ಮಹಿಳಾ ಸಂಚಾಲಕಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ದೀಪಾ ಪೂಜಾರಿ ಅವರ ಸೂಚನೆಯಂತೆ ಸಭೆ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ತಂಡದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜಿಲ್ಲಾ ಸಂಚಾಲಕ ಗೋವಿಂದರಾಜ್ ದಾಸ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಕುದುಪಜೆ ಅವರು ಸಂಘಟನೆ ನಡೆದು ಬಂದ ಹಾದಿ ಹಾಗೂ ಇದುವರೆಗೆ ಕೈಗೊಂಡಿರುವ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಮುನೀರ್ ಮಾಚಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. :: ನೂತನ ಪದಾಧಿಕಾರಿಗಳ ಆಯ್ಕೆ :: ಸಭೆಯಲ್ಲಿ ಕರವೇ ಮಡಿಕೇರಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರವೀಣ್ ಡಿಂಗ ಅಧ್ಯಕ್ಷರಾಗಿ,…
ಮಡಿಕೇರಿ ಆ.10 NEWS DESK : ಜನತಾ ಕಾಲೋನಿಯಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಎದೆಹಾಲಿನ ಮಹತ್ವ ಮತ್ತು ತಾಯಿ-ಮಗುವಿನ ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆರು ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲನ್ನೇ ನೀಡುವ ಮಹತ್ವ, ಆರು ತಿಂಗಳ ನಂತರ ನೀಡಬೇಕಾದ ಮೇಲು ಆಹಾರ, ಸಮಯಕ್ಕೆ ಸರಿಯಾಗಿ ಚುಚ್ಚುಮದ್ದು ಹಾಕಿಸುವುದು ಹಾಗೂ ಹೆರಿಗೆಗಳ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವ ಕುರಿತು ಮಾಹಿತಿ ನೀಡಲಾಯಿತು. ಅಲ್ಲದೆ, ಮಕ್ಕಳಲ್ಲಿ ಜಂತುಹುಳು ನಿವಾರಣೆಗಾಗಿ ನೀಡಲಾಗುವ ಅಲ್ಬೆಂಡಜೋಲ್ ಮಾತ್ರೆಯ ಬಳಕೆ, ಭಾಗ್ಯಲಕ್ಷ್ಮಿ ಯೋಜನೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಜಾ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಸುಮ ಅವರು ವಿವಿಧ ವಿಷಯಗಳ ಕುರಿತು ವಿವರವಾಗಿ ತಿಳಿಸಿದರು. ಆಶಾ ಕಾರ್ಯಕರ್ತೆ ಹೇಮಾವತಿ, ಅಂಗನವಾಡಿ ಕಾರ್ಯಕರ್ತೆ ರಮ್ಯಾ ಕಾರ್ಯಕ್ರಮವನ್ನು ಆಯೋಜಿಸಿದರು. ಗರ್ಭಿಣಿಯರು,…






