ಮಡಿಕೇರಿ, ಡಿ.12 NEWS DESK : ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗ, ಉಡುಪಿಯ ಪೂರ್ಣಪ್ರಜ್ಞ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ, ಡಿ.9 ರಂದು ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ, ವಿಜೇತರಾದ ಕೊಡಗು ಜಿಲ್ಲೆಯ ಎಂಟು ಮಂದಿ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಅರ್ವತ್ತೊಕ್ಲಿನ ವಿದ್ಯಾನಿಕೇತನ ಪ.ಪೂ. ಕಾಲೇಜು ಪ್ರಥಮ ಪಿಯುಸಿಯ ಎಂ.ಹರಿಕೃಷ್ಣನ್ ಪ್ರಥಮ ಸ್ಥಾನ ಗಳಿಸಿದ್ದಾನೆ. ಈತ ಚಿಣ್ಣಪ್ಪ- ಶೋಭಾ ದಂಪತಿಯ ಪುತ್ರ. ಇದೇ ಕಾಲೇಜಿನ ಗುಡ್ಡಾಂಡ ಕಾರ್ಯಪ್ಪ ದ್ವಿತೀಯ ಪಿ.ಯು.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಕಾರ್ಯಪ್ಪ, ಮನೋಹರನ್ – ಶ್ರೀದೇವಿ ದಂಪತಿಯ ಪುತ್ರ. ಚರ್ಚಾ ಸ್ಪರ್ಧೆ ಸ್ಪರ್ಧೆಯಲ್ಲಿ ಪೊನ್ನಂಪೇಟೆ ಸಿಐಟಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪುಗ್ಗೇರ ಕ್ಷಮಾ ಕಾವೇರಮ್ಮ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಕಿಶನ್ ಪೂವಣ್ಣ – ದಿವ್ಯ ದಂಪತಿಯ ಪುತ್ರಿ. ಜನಪದ ನೃತ್ಯ ವಿಭಾಗದಲ್ಲಿ ಮಡಿಕೇರಿ…
ಲೇಖಕ: admin
ನಾಪೋಕ್ಲು ಡಿ.15 NEWS DESK : ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಡಿ.15 ರಂದು ಅರೆ ಭಾಷೆ ದಿನಾಚರಣೆ ಮೂರ್ನಾಡಿನ ಗೌಡ ಸಮಾಜದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಹಿಸಲಿದ್ದು, ಕಾರ್ಯಕ್ರಮವನ್ನು ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ.ಹರೀಶ್, ಮೂರ್ನಾಡು ಗೌಡ ಸಮಾಜದ ಮಾಜಿ ಅಧ್ಯಕ್ಷ ಚೆಟ್ಟಿಮಾಡ ಟಿ.ಕಾರ್ಯಪ್ಪ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ ಪಾಲ್ಗೊಳ್ಳಲಿದ್ದು, ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗೆ ನಮ್ಮ ಹಿರಿಯರ ಕೊಡುಗೆ ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಲಿದ್ದಾರೆ. ಕೊಡಗು ಗೌಡ ನಿವೃತ್ತ ನೌಕರರ ಸಂಘದ…
ನಾಪೋಕ್ಲು ಡಿ.12 NEWS DESK : ಚೇರಂಬಾಣೆ ಗ್ರಾಮ ಪಂಚಾಯಿತಿಯ ಕೋಪಟ್ಟಿ ಗ್ರಾಮದ ನಿವಾಸಿ ದಾಯನ ಶಿವಾಜಿ (75) ವಯೊಸಹಜವಾಗಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗೃಹದಲ್ಲಿ ಜರುಗಲಿದೆ. ಮೃತರು ತಾಯಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ದಾಯನ ಶಿವಾಜಿ ಅವರು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ವಿರಾಜಪೇಟೆ ಡಿ.12 NEWS DESK : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ. ಘಟಕ, ಮಾನವ ಹಕ್ಕುಗಳ ಸಮಿತಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ದಿನದ ಅಂಗವಾಗಿ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ.ಯವರು, ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಪ್ರೊ.ಬಸವರಾಜು ಕೆ, ಮಾನವ ಹಕ್ಕುಗಳ ಸಮಿತಿಯ ಸಂಚಾಲಕರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಿವ್ಯ ಎಂ.ಬಿ., ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಮಧುರಾ ವಿ.ಆರ್, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಗ್ರಂಥಾಲಯ ವಿಭಾಗದ ಡಾ.ರೂಪಾ, ಇ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಮಯಂತಿ ಪಿ.ಟಿ.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿರಾಜಪೇಟೆ ಡಿ.12 NEWS DESK : ರಕ್ತದಾನ ಮಾಡುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದೆ. ಅದ್ದರಿಂದ ಅರ್ಹರು ರಕ್ತದಾನ ಮಾಡಿ, ಜೀವ ಉಳಿಸಿ ಎಂದು ನಗರ ವರ್ತಕರ ಸಂಘದ ಅಧ್ಯಕ್ಷ, ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಹೇಳಿದರು. ವಿರಾಜಪೇಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ವತಿಯಿಂದ ಸಾಲುಮರದ ತಿಮ್ಮಕ್ಕ ಅವರ ಸ್ಮರಾಣಾರ್ಥ ವಿರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಸಾಲುಮರದ ತಿಮ್ಮಕ್ಕ ಅವರು ಮರಗಿಡಗಳನ್ನು ತನ್ನ ಮಕ್ಕಳಂತೆ ಸಲುಹಿದ ಮಹಾತಾಯಿ. ಅವರ ಸ್ಮರಾಣಾರ್ಥ ರಕ್ತದಾನ ಶಿಬಿರ ಆಯೋಜನೆ ಮಾಡಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಯೋಗೇಶ್ ನಾಯ್ಡು ಅವರ ಕಾರ್ಯ ಶ್ಲಾಘನೀಯ. ಅಪಘಾತ ಮತ್ತು ಇನ್ನಿತರ ಗಂಭೀರ ಸ್ವರೂಪದ ಕಾಯಿಲೆಗಳಿಗೆ ತುತ್ತಾಗಿ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚಿಗೆ ಇರುತ್ತದೆ. ಮಾನವ ರಕ್ತಕ್ಕೆ ಪರ್ಯಾಯವಾಗಿ ಇನ್ನಿತರ ಧ್ರವಗಳು ಇಲ್ಲದಿರುವುದರಿಂದ ರಕ್ತಕ್ಕೆ ರಕ್ತವೇ ಪರ್ಯಾಯವಾಗಿದೆ. ದಾನಿಗಳಿಂದ ಸಂಗ್ರಹಿಸಿದ ರಕ್ತವನ್ನು ಅವಶ್ಯಕ ರೋಗಿಗಳಿಗೆ ನೀಡಲಾಗುತ್ತದೆ.…
ನಾಪೋಕ್ಲು ಡಿ.12 NEWS DESK : ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮದ ಪ್ರೌಢಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಪಾಂಡುರಂಗ ಪ್ರಥಮ ಸ್ಥಾನವನ್ನು ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಐರಿನ್ ಉಷಾ ದ್ವಿತೀಯ ಸ್ಥಾನವನ್ನು ಪಡೆದರು. ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಮೋದ್ ಹಾಗೂ ಇಸಿಓ ಜಾನೆಟ್ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದರು. ಸಾಮಾನ್ಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಸಿ.ಎಂ.ಮುನೀರ್, ಬಿ.ಎಂ.ಮೀನಾ ಹಾಗೂ ಬಿ.ಎನ್.ಜಯಂತಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗಮಂಡಲದ ಜ್ಞಾನೋದಯ ಪ್ರೌಢಶಾಲೆಯ ಶಿಕ್ಷಕಿ ಪ್ರತಿಭಾ ಎಂ ಪ್ರಥಮ ಸ್ಥಾನ ಗಳಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಮಡಿಕೇರಿಯ ಯುರೋ ಕಿಡ್ಸ್ ಶಾಲೆಯ ಶಿಕ್ಷಕಿ ರಶ್ಮಿ ದೀಪ ಪ್ರಥಮ ಸ್ಥಾನವನ್ನು ಪುತ್ಯಪೆರಾಜೆ ಸರ್ಕಾರಿ ಹಿರಿಯ…
ನಾಪೋಕ್ಲು ಡಿ.12 NEWS DESK : ಬಲಮುರಿ ಗ್ರಾಮದ ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಕಟ್ರತನ ಲೋಕನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಮುಖ್ಯ ಅತಿಥಿಯಾಗಿ ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕರು, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೊಟ್ಟಕೇರಿಯನ ದಮೇಂದ್ರ, ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ಪೂನ್ನಚ್ಚನ ವೃಂಧಾ ಹಾಗೂ ಎಂ.ಬಿ.ಎ.ಸ್ನಾತಕೋತರ ಪದವಿಯಲ್ಲಿ ಅತ್ಯುತ್ತಮ ಇಂಟರ್ನಶಿಫ್ ಪ್ರಶಸ್ತಿ ಪಡೆದ ಕೋಟ್ಟಕೇರಿಯನ ಮೋನಿಕಾ ಅವರುಗಳನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಹಿರಿಯ ವಕೀಲರಾದ ಕೊಟ್ಟಕೇರಿಯನ ದಯಾನಂದ ಸಂಘದ ಸಮಗ್ರ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆಯನ್ನು ನೀಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಯರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿ ಮಡಕೆ ಒಡೆಯುವುದು ಹೀಗೆ ವಿವಿಧ ಕ್ರೀಡೆಗಳಲನ್ನು ಆಯೋಜಿಸಿ ವಿಜೇತರಾದವರಿಗೆ…
ಮಡಿಕೇರಿ ಡಿ.12 NEWS DESK : ಪತ್ರಕರ್ತರಲ್ಲದ ಕೆಲವರು ತಮ್ಮ ವಾಹನಗಳಲ್ಲಿ ‘ಮೀಡಿಯಾ-ಪ್ರೆಸ್’ ಫಲಕ ಅಳವಡಿಸಿಕೊಂಡು ಮಾಧ್ಯಮದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಲಿಖಿತ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದ ನಿಯೋಗ ಎಸ್.ಪಿ.ಯನ್ನು ಭೇಟಿಯಾಗಿ, ಕೊಡಗು ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ವೃತ್ತಿ ಮಾಡದಿರುವವರು ಕೂಡ ಪ್ರೆಸ್ ಹಾಗೂ ಮೀಡಿಯಾ ಸ್ಟಿಕ್ಕರ್ಗಳನ್ನು ವಾಹನದಲ್ಲಿ ಅಂಟಿಸಿಕೊಂಡು ಪತ್ರಕರ್ತರೆಂದು ಬಿಂಬಿಸಿಕೊಳ್ಳುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ. ಇದರಿಂದ ನೈಜ ಪತ್ರಕರ್ತರು ಹಾಗೂ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪತ್ರಿಕೆ ಹಾಗೂ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ಗುರುತಿನ ಚೀಟಿ ಅಥವಾ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗುರುತಿನ ಚೀಟಿ ಹೊಂದಿರುವವರನ್ನು ಹೊರತುಪಡಿಸಿ ವಾಹನಗಳಲ್ಲಿ ‘ಪ್ರೆಸ್-ಮೀಡಿಯಾ’ ಎಂಬ ಸ್ಟಿಕ್ಕರ್ ಅಂಟಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು…
ಮಡಿಕೇರಿ ಡಿ.11 NEWS DESK : ನಗರದ ಮಹದೇವಪೇಟೆಯಲ್ಲಿರುವ ಶ್ರೀರಾಜೇಶ್ವರಿ ವಿದ್ಯಾಲಯದ ವತಿಯಿಂದ ಜ.10 ಮತ್ತು 11 ರಂದು ‘’ಎಸ್ಆರ್ವಿ ಕನೆಕ್ಟ್- ಹಳೆಯ ವಿದ್ಯಾರ್ಥಿಗಳ ಕ್ರೀಡಾಕೂಟ’ ನಡೆಯಲಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಮ್ಯಾನೆಜಿಂಗ್ ಟ್ರಸ್ಟಿ ಸಚಿನ್ ವಾಸುದೇವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಗಾಂಧಿ ಮೈದಾನದಲ್ಲಿ ಶ್ರೀ ರಾಜೇಶ್ವರಿ ವಿದ್ಯಾಲಯದ 1991 ಬ್ಯಾಚ್ನಿಂದ 2024ರ ವರೆಗಿನ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಆಯೋಜಿಸಲಾಗಿದ್ದು, ವಿದ್ಯಾಲಯದ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಕ್ರಿಡೋತ್ಸವದಲ್ಲಿ ಕ್ರಿಕೆಟ್ ಹಾಗೂ ವಾಲಿಬಾಲ್ ತಂಡಗಳಿಗೆ ತಲಾ 8 ಹಾಗೂ ಫುಟ್ಬಾಲ್ಗೆ 12 ಫ್ರ್ರಾಂಚೈಸ್ಗಳಿದ್ದು, ಥ್ರೋಬಾಲ್ ಹಾಗೂ ಶಾಲಾ ಮಟ್ಟದ ಅಂಡರ್ 16 ಬಾಲಕ ಬಾಲಕಿಯರಿಗೆ 5ಎ ಸೈಡ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ. ಅಲ್ಲದೇ ಹಳೆ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ಹಳೇ ವಿದ್ಯಾರ್ಥಿ ಸಂಘದ ಖಜಾಂಚಿ ಬೊಟ್ಟೋಳಂಡ ನಿವ್ಯ ಕಾವೇರಮ್ಮ ಮಾತನಾಡಿ,…
ಮಡಿಕೇರಿ ಡಿ.11 NEWS DESK : ಕೊಡವ ಜಮ್ಮಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ ಪುಡಿಯಂಡ ದೇವಣಗೇರಿ-ಕೊಂಡಂಗೇರಿ ಕುಟುಂಬಸ್ಥರ ವತಿಯಿಂದ 2026ನೇ ಸಾಲಿನ ಏ.24 ರಿಂದ ಮೇ 1ರ ವರೆಗೆ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರಿಗೆ 3ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಪುಡಿಯಂಡ ಕುಟುಂಬದ ಅಧ್ಯಕ್ಷರಾದ ಪುಡಿಯಂಡ ಉಸ್ಮಾನ್ ತಿಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮಿಯಾಲ-ಅರಮೇರಿ ಗ್ರಾಮದಲ್ಲಿರುವ ಎಸ್.ಎಂ.ಎಸ್. ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಪರಿಷತ್ ಸದಸ್ಯರು, ಶಾಸಕರುಗಳು ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳು, ಕೊಡವ ಜಮ್ಮಾ ಮುಸ್ಲಿಂ ಸಂಘಟನೆ ಆಡಳಿತ ಮಂಡಳಿ, ಕೆ.ಎಂ.ಎ ಆಡಳಿತ ಮಂಡಳಿ, ಕುಟುಂಬದ ಎಲ್ಲಾ ತಕ್ಕ ಮುಖ್ಯಸ್ಥರುಗಳು ಹಾಗೂ ಎಲ್ಲಾ ಜನಾಂಗದ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ಜಮ್ಮಾ ಮುಸ್ಲಿಂ ಸಮುದಾಯದ ಯುವಕರ ಪ್ರತಿಭೆ ಪ್ರದರ್ಶಿಸಲು ಪಂದ್ಯಾವಳಿ ಅವಕಾಶಕಲ್ಪಿಲಿದೆ. ಇದರೊಂದಿಗೆ ಶಿಕ್ಷಣಕ್ಕೆ ಒತ್ತು ನೀಡುವುದು ನಮ್ಮ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು. ಕ್ರೀಡಾಕೂಟವು…






