ಮಡಿಕೇರಿ ಏ.8 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ಮರಗೋಡು ಫೀಡರ್ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವ ಹಿನ್ನೆಲೆ ಏ.10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮರಗೋಡು, ಹಾಕತ್ತೂರು, ಅರಪಟ್ಟು, ಪಾರಾಣೆ, ಕಾಂತೂರು, ಕೊಣಂಜಗೇರಿ, ಎಂ. ಬಾಡಗ, ಹೊದ್ದೂರು, ಚೆಯಂಡಾಣೆ, ಅರಪಟ್ಟು ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಅಭಿಯಂತರರು ಚೆಸ್ಕಾಂ ಕೋರಿದ್ದಾರೆ.
ಲೇಖಕ: admin
ಸುಂಟಿಕೊಪ್ಪ ಏ.8 NEWS DESK : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಏ.9 ರಂದು ಚಂದ್ರಮಾನ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಅಂದು ದೇವಾಲಯದಲ್ಲಿ ವಿಶೇಷ ಪೂಜೆ, ಪಂಚಾಂಗ ಶ್ರವಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಹಾಪೂಜೆಯ ಬಳಿಕ ಭಕ್ತಾಧಿಗಳಿಗೆ ಅನ್ನದಾನ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಏ.29 ರಂದು ದೇವಾಲಯದ ವಾರ್ಷಿಕೋತ್ಸವ ನಡೆಯಲಿದ್ದು, ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದೆ. ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ವಾರ್ಷಿಕೋತ್ಸವ ದ ಅಂಗವಾಗಿ ವಧ್ಯಾಹ್ನ ದೇವಾಲಯದ ತಕ್ಕರ ಮನೆಯಿಂದ ಭಂಡಾರ ತಂದು ದೇವಾಲಯದಲ್ಲಿ ಹಬ್ಬದ ವಿಧಿವಿಧಾನಗಳು ನಡೆಯಲಿದೆ. ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಏ.18 ರಂದು ದೇವಾಲಯದಲ್ಲಿ ಹಬ್ಬದ ಕಟ್ಟು ಬಿಳಲಿದೆ. ಏ.26 ರಂದು ಶ್ರೀ ಬಸವೇಶ್ವರ ದೇವರ ಉತ್ಸವವು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ಏ.8 : ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ನೀರಿನ ಅಭಾವ ಉಂಟಾಗಿದೆ. ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ,ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್ಗೆಸ್ಟ್, ಹೋಮ್-ಸ್ಟೇ, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರನ್ನು ನೀಡುವಂತೆ ಸೂಚಿಸಿದೆ. ಆಹಾರ ತಯಾರಿಕಾ ಮತ್ತು ಸಂಗ್ರಹಣಾ ಸ್ಥಳಗಳಲ್ಲಿ ನೊಣಗಳು, ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಮತ್ತು ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆಯನ್ನು ಮಾಡುವಂತೆ ತಿಳಿಸಿದೆ. ಹಾಗೆಯೇ ಎಲ್ಲಾ ಆಹಾರ ಉದ್ದಿಮೆದಾರರು ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳನ್ನು…
ವಿರಾಜಪೇಟೆ ಏ.8 NEWS DESK : ಬೆಂಗಳೂರಿನ ಬಾಗಲಗುಂಟೆಯ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ವಿಶ್ವ ಕನ್ನಡ ಪ್ರಥಮ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ವಿದುಷಿ ಪ್ರೇಮಾಂಜಲಿ ಆಚಾರ್ಯರಿಗೆ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇವರು ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿಯಾಗಿದ್ದಾರೆ.
NEWS DESK : ಚೈತ್ರ ಮಾಸದ ಶುಕ್ಲ ಪಕ್ಷ ಪಾಡ್ಯಮಿಯ ಚಾಂದ್ರಮಾನ ಯುಗಾದಿ ಹಬ್ಬ. ಇದು ಉತ್ತರಾಯಣ ಪುಣ್ಯಕಾಲದಲ್ಲಿ ಹೊಸ ವರುಷದ ಪ್ರಾರಂಭದ ದಿನವಾಗಿ ಹಿಂದೂ ಜನಾಂಗ ಬಾಂದವರ ಪವಿತ್ರ ದಿನವಾಗಿದೆ. ಯುಗಾದಿಯ ಅರ್ಥ ಯುಗದ ಅಧಿ. ಯುಗಾದಿ ಎಂಬ ಪದ ಸಂಸ್ಕೃತ ಯುಗ ಮತ್ತು ಆದಿ ಎಂಬ ಎರಡು ಶಬ್ದಗಳಿಂದ ಕೂಡಿದ್ದಾಗಿದೆ. ಯುಗವೆಂದರೆ ಸೃಷ್ಟಿಯ ಕಾಲಮಾನ ಆದಿ ಎಂದರೆ ಆರಂಭ ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮ ದೇವನು ಸೃಷ್ಟಿಯನ್ನು ಸೃಷ್ಟಿಸಿದ ದಿನ. ಚೈತ್ರ ಶುದ್ಧ ಪಾಡ್ಯದಂದು ಸೂರ್ಯ ಉದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದು ಅಂದಿನಿಂದ ಕಾಲಗಣನೆಗಾಗಿ ಗ್ರಹ, ನಕ್ಷತ್ರ, ತಿಂಗಳು, ವರ್ಷ ಇವುಗಳನ್ನು ಆರಂಭಿಸಿದನೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ವೇದಗಳ ಕಾಲದಿಂದಲು ಈ ಹಬ್ಬದ ಮಹಿಮೆ ಇದೆ (ಎಲ್ಲ ಶಾಸ್ತ್ರ ಗ್ರಂಥಗಳಲ್ಲಿ ಯುಗಾದಿಯ ಕುರಿತು ಬರೆಯಲಾಗಿದೆ). ಶ್ರೀ ರಾಮನು ರಾವಣನನ್ನು ಸಂಹರಿಸಿ ಬಂದಾಗ ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ಪಟ್ಟಾಬೀಷೇಕಾವಾದ ದಿನವೆಂದು ಹೇಳಲಾಗಿದೆ. ಈ ದಿನ…
ವಿರಾಜಪೇಟೆ ಏ.8 NEWS DESK : ಬಿಟ್ಟಂಗಾಲ ಕಂಪೆನಿಮೊಟ್ಟೆ ಪ್ರಾರ್ಥನಾ ಶ್ರೀಮುತ್ತಪ್ಪ ದೇವಾಲಯದ 32ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವವು ಏ.9 ಮತ್ತು 10 ರಂದು ನಡೆಯಲಿದೆ. ಗಣಪತಿ ಹೋಮ, ಕನ್ನಂಬಾಡಿ ಅಮ್ಮನ ಪೂಜೆ, ಮುತ್ತಪ್ಪ ವೆಳ್ಳಾಟ0, ಗುಳಿಗನ್ ತೆರೆ, ವಸುರಿಮಾಲಾ ತೆರೆ ಸೇರಿದಂತೆ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಭಕ್ತಾಧಿಗಳಿಗೆ ಎರಡು ದಿನ ಅನ್ನದಾನ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಡಿಕೇರಿ ಏ.8 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ಸಮೀಪವಿರುವ ಮಧುಕೃಪದ ಆವರಣದಲ್ಲಿ “ಬಾಲಗೋಕುಲ” ಮಡಿಕೇರಿ ವತಿಯಿಂದ ಮಕ್ಕಳಿಗಾಗಿ “ವಸಂತ ಶಿಬಿರ” ಉಚಿತ ಬೇಸಿಗೆ ಶಿಬಿರ ನಡೆಯಿತು. ಶಿಬಿರದಲ್ಲಿ ವಿವಿಧ ಕ್ಷೇತ್ರಗಳ ಹಲವಾರು ನುರಿತ ವ್ಯಕ್ತಿಗಳು ಮಕ್ಕಳಿಗೆ ಅಮೃತ ವಚನ, ಶ್ಲೋಕಗಳು, ಕಬೀರನ ದೋಹಗಳು, ಗಾದೆಗಳು, ಒಗಟುಗಳು, ಮಂಕುತಿಮ್ಮನ ಕಗ್ಗ, ದೇಶಭಕ್ತಿ ಗೀತೆಗಳು, ಅಭಿನಯ ಗೀತೆಗಳು, ಮಹಾಪುರುಷರ ಕಥೆಗಳು, ದೇಶಿಯ ಆಟಗಳು, ಯೋಗಾಸನ, ಸಂಗೀತ, ಕ್ರಾಫ್ಟ್ ಮುಂತಾದವುಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಅದರೊಂದಿಗೆ ಮರೆಯಾಗುತ್ತಿರುವ ದೇಶಿಯ ಆಟಗಳನ್ನು ಮಕ್ಕಳು ಆಟವಾಡಿ ಸಂಭ್ರಮಿಸಿದರು. ಶಿಬಿರದಲ್ಲಿ ಐದರಿಂದ ಹದಿನೈದನೆಯ ವಯಸ್ಸಿನ ಐವತ್ತಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್ ಡಾಲಿ, “ಇಂದಿನ ಸಮಾಜದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿಯ ಕೊರತೆ ಬಹಳಷ್ಟು ಇದೆ. ಇದನ್ನು ಹೋಗಲಾಡಿಸಲು ಇಂದಿನ ಮಕ್ಕಳು ಮುಂದಿನ ಸಮಾಜಕ್ಕೆ ಸತ್ಕಾರ್ಯಕ್ಕಾಗಿ…
NEWS DESK : 8.04.2024 ಸೋಮವಾರದಂದು ಕಳೆದ ವರ್ಷದ ಶೋಭಕೃತ್ ಸಂವತ್ಸರಕ್ಕೆ ವಿದಾಯ ಹೇಳಿ ಹಿಂದು ಪಂಚಾಂಗದ ಪ್ರಕಾರ ಚೈತ್ರ ಮಾಸದ ಶುಕ್ಲ ಪಕ್ಷದ ವಸಂತ ಋತುವಿನ ಪ್ರಥಮ ದಿನವನ್ನು (ಪಾಡ್ಯ) ಯುಗಾದಿ ಹೊಸ ವರ್ಷವೆಂದು ಹೇಳಲಾಗುತ್ತದೆ. ಹೊಸ ಸಂವತ್ಸರ ಆರಂಭ ಎಂದು ಕರೆಯಲ್ಪಡುತ್ತದೆ. ದಿನಾಂಕ 09.04.2024 ಮಂಗಳವಾರದಂದು ಕ್ರೋಧಿನಾಮ ಸಂವತ್ಸರ ಆರಂಭವಾಗಲಿದೆ. ಈ ಕ್ರೋಧಿ ಸಂವತ್ಸರದಲ್ಲಿ ಪ್ರಾಕೃತಿಕ, ಸಾಮಾಜಿಕ, ವೈಯಕ್ತಿಕ, ದೈನಂದಿನ ಪರಿಸ್ಥಿತಿ ಹೇಗೆ ಇರುತ್ತದೆ ಎಂಬುವುದನ್ನು ಸಂಕ್ಷಿಪ್ತ ನೋಟದಲ್ಲಿ ತಿಳಿಯೋಣ. ಈ ಸಂವತ್ಸರದಲ್ಲಿ ಎರಡು ಚಂದ್ರಗ್ರಹಣ ಮತ್ತು ಎರಡು ಸೂರ್ಯಗ್ರಹಣ ಘಟಿಸಲಿದ್ದು, ಈ ನಾಲ್ಕು ಗ್ರಹಣಗಳು ಭಾರತದಲ್ಲಿ ಗೋಚರಿಸದೆ ಇರುವುದು ವಿಶೇಷವಾಗಿದೆ. ಈ ಸಂವತ್ಸರದಲ್ಲಿ ಕುಜ ರಾಜನ ಸ್ಥಾನದಲ್ಲಿದ್ದರೆ, ಶನಿ ಮಂತ್ರಿಯ ಸ್ಥಾನದಲ್ಲಿದ್ದಾರೆ. ಕುಜನ ಅವಕೃಪೆಯಿಂದ ದೊಡ್ಡ ದೊಡ್ಡ ರಾಜಕಾರಣಿಗಳ ಸಾವು, ನೋವು ನಡೆಯಲಿದೆ. ಅತಿ ವ್ಯಸನದಿಂದ ಮಾನಹಾನಿಯಾಗಲಿದೆ, ಅಧಿಕಾರ ಕಳೆದುಕೊಳ್ಳಲಿದ್ದಾರೆ, ಅಲ್ಲಲ್ಲಿ ಅಸ್ಥಿರ ರಾಜಕಾರಣ ನಡೆಯಲಿದೆ. ಶನಿಯು ಮಂತ್ರಿ ಸ್ಥಾನದಲ್ಲಿರುವುದರಿಂದ ನೌಕರ ವರ್ಗದವರಿಗೆ ತುಂಬಾ ಆಪತ್ತು ಬರಲಿದೆ.…
ಮಡಿಕೇರಿ ಏ.8 NEWS DESK : ಸೋಮವಾರಪೇಟೆ ಸಮೀಪದ ಕೊತ್ನಳಿಯ ಉದ್ಯಮಿ ಹಾಗೂ ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ತಮ್ಮ ಹುಟ್ಟುಹಬ್ಬವನ್ನ ಅನಾಥಾಶ್ರಮದ ಹಿರಿಜೀವಗಳೊಂದಿಗೆ ಆಚರಿಸಿಕೊಂಡರು. ಮಡಿಕೇರಿಯ ವಿಕಾಸ್ ಜನ ಸೇವಾ ಟ್ರಸ್ಟ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಿಕೊಂಡರು. ನಂತರ ಆಶ್ರಮದ ಹಿರಿಯರಿಗೆ ಬಟ್ಟೆ ಹಾಗೂ ಮಧ್ಯಾಹ್ನದ ಊಟವನನ್ನ ನೀಡಿ ಅವರೊಂದಿಗೆ ಊಟ ಮಾಡುವ ಮೂಲಕ ಸರಳತೆಯನ್ನ ಮೆರೆದರು. ಇದೇ ಸಂದರ್ಭ ಕೊಡಗು ರಕ್ಷಣಾ ವೇದಿಕೆಯ ಸದಸ್ಯರು ಅರಣ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅರಣ್, ಸೋಮವಾರಪೇಟೆಯ ಅಭಿವೃದ್ಧಿಗಾಗಿ ಸೋಮವಾರಪೇಟೆ ಅಭಿವೃದ್ಧಿ ಹೋರಾಟ ಸಮಿತಿಯನ್ನ ಕಟ್ಟಿಕೊಂಡು ಸಾಕಷ್ಟು ಸಮಾಜಮುಖಿ ಕೆಲಸಗಳನ್ನ ಮಾಡಿಕೊಂಡು ಬರುತ್ತಿದ್ದೇವೆ. ಈ ಭಾರಿ ಹಿರಿಯ ಜೀವಗಳೊಂದಿದೆ ಹುಟುಹಬ್ಬ ಆಚರಿಸಕೊಂಡಿರುವುದಾಗಿ ತಿಳಿಸಿದರು.
ಸುಂಟಿಕೊಪ್ಪ ಏ.8 NEWS DESK : ಹರದೂರು ಗ್ರಾಮದ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ವತಿಯಿಂದ ಆದಿನಾಗಬ್ರಹ್ಮ ಮೊಗೇರ ದೈವಗಳ ಹಾಗೂ ಕೊರಗ ತನಿಯ ದೈವ ಮತ್ತು ಮಂತ್ರವಾದಿ ಗುಳಿನಗ 84ನೇ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಆಯುಧಾ ಪೂಜೆ, ನಿತ್ಯ ಪೂಜೆ ಮತ್ತು ಭಂಡಾರ ಹೊರಡುವುದರ ಮೂಲಕ ನೇಮೋತ್ಸವಕ್ಕೆ ಚಾಲನೆ ದೊರೆಯಿತು. ನಂತರ ಮಂತ್ರವಾದಿ ಗುಳಿಗನ ನೇಮ ನಡೆಯಿತು. ರಾತ್ರಿ ಆದಿನಾಗಬ್ರಹ್ಮ ಮೊಗೇರ ದೈವಗಳ ಆದಿಮಾಯೆ ತನ್ನಿ ಮಾನಿಗ ಗರಡಿ ಇಳಿಯಿತು. ಮರುದಿನ ದೇವಾಲಯದ ಮತ್ತು ಭಕ್ತರ ಸೇರಿದಂತೆ ಮೂರು ಕೊರಗ ತನಿಯ ದೈವದ ಕಾರಣಿಕ ನೇಮೋತ್ಸವವು ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಣಿಕ ದೈವಗಳಿಗೆ ಹರಕೆ ಮತ್ತು ಕಾಣಿಕೆ ಅರ್ಪಿಸಿದರು. ಎರೆದಿದ್ದ ಭಕ್ತಾಧಿಗಳಿಗೆ ಗಂಧ ಪ್ರಸಾದ ಹಾಗೂ ಅನ್ನದಾನ ನೆರವೇರಿತು. ಸುಂಟಿಕೊಪ್ಪ, ಹರದೂರು, ಮಾದಾಪುರ, ಮಡಿಕೇರಿ, ಕುಶಾಲನಗರ, ಮೈಸೂರು, ಮಂಗಳೂರು ಸೂಳ್ಯ, ಪುತ್ತೂರು, ಸಕಲೇಶಪುರ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ನೇಮೋತ್ಸವ ವೀಕ್ಷಿಸಿದರು.






