ನಾಪೋಕ್ಲು ಏ.8 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಏ.9 ರಂದು ಮಕ್ಕಳಿಗೆ ಉಚಿತ ಕ್ರೀಡಾ ತರಬೇತಿ ಶಿಬಿರ ಪ್ರಾರಂಭ ಗೊಳ್ಳಲಿದೆ. ಗ್ರಾಮೀಣ ಭಾಗದ ಮಕ್ಕ ಳ ಶ್ರೇಯೋಭಿವೃದ್ಧಿಗೆಂದು ಸ್ಥಾಪಿಸಲಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕ್ರೀಡಾ ಅಕಾಡೆಮಿಯ 24 ವರ್ಷಗಳಿಂದ ನಿರಂತರವಾಗಿ ಮಕ್ಕಳಿಗೆ ಕ್ರೀಡಾ ತರಬೇತಿ ಶಿಬಿರವನ್ನು ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸುತ್ತಿದೆ. ಶಿಬಿರವು ಪ್ರತಿ ದಿನ ಬೆಳಿಗ್ಗೆ 6.30 ರಿಂದ 9 ಗಂಟೆಯವರೆಗೆ ಒಂದು ತಿಂಗಳ ಕಾಲ ಜರುಗಲಿದ್ದು, ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಲು, ಮೊಟ್ಟೆ ನೀಡಲಾಗುತ್ತಿದೆ ಎಂದು ಅಕಾಡೆಮಿ ಸ್ಥಾಪಕ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಮತ್ತು ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ನ0.9632835001 ಸಂಪರ್ಕಿಸಲು ಕೋರಿದೆ. ವರದಿ : ದುಗ್ಗಳ ಸದಾನಂದ
ಲೇಖಕ: admin
ಸುಂಟಿಕೊಪ್ಪ ಏ.8 : ಗದ್ದೆಹಳ್ಳದಲ್ಲಿ ನೆಲೆಗೊಂಡಿರುವ ಕೊಡಂಗಲ್ಲೂರ್ ಶ್ರೀ ಕುರಂಭ (ಭಗವತಿ) ದೇವಾಲಯದ ವಾರ್ಷಿಕ ಮಹಾಪೂಜೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವರ ಉತ್ಸವದ ಅಂಗವಾಗಿ ಗಣಪತಿ ಹೋಮ, ಗಣಪತಿ ಮತ್ತು ಸುಬ್ರಮಣ್ಯ ಸ್ವಾಮಿಯ ಪೂಜೆ, ಮುತ್ತಪ್ಪ ದೇವರಿಗೆ ಪೈಂಗುತ್ತಿ, ಚಾಮುಂಡೇಶ್ವರಿ ದೇವಿಗೆ ಪೂಜೆ, ಗುಳಿಗನ ಪೂಜೆ, ಭದ್ರಕಾಳಿ ದೇವಿಗೆ ಅರ್ಚನೆ, ನೈವೇದ್ಯ ಪೂಜೆ ಹಾಗೂ ದೇವಿ ದರ್ಶನ ನಡೆಯಿತಯ. ತಲಪುರಿ ಸ್ನಾನದ ನಂತರ ಮೆರವಣಿಗೆ ನಡೆಯಿತು. ಮಕ್ಕಳು ಹಣತೆ ಹಿಡಿದು ಸಾಗಿದರು. ವಸೂರಿ ಮಾಲೆ ದೇವರ ಬೆಳ್ಳಾಟಂ ನಂತರ ದೇವಿ ದರ್ಶನ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಮರುದಿನ ದೇವಿಯ ದರ್ಶನ, ದೇವಿಗೆ ಹರಕೆಯ ಅರ್ಪಣೆ ಮಾಡಲಾಯಿತು. ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ಸುಂಟಿಕೊಪ್ಪ, ಶ್ರೀದೇವಿ, ಹರದೂರು, ನಾಕೂರು, ಕಂಬಿಬಾಣೆ, ಮತ್ತಿಕಾಡು ಸೇರಿದಂತೆ ಕೇರಳ ರಾಜ್ಯದಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯದ ಮುಖ್ಯಸ್ಥರಾದ ಪಿ.ಆರ್.ಶಾಂತ ರಾಮಕೃಷ್ಣ, ಪಿ.ಆರ್.ಸುಕುಮಾರ್, ಸುನಿಲ್ ಕುಮಾರ್ ಸೇರಿದಂತೆ ಇತರರು ಇದ್ದರು.
ಮಡಿಕೇರಿ ಏ.7 NEWS DESK : ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಅಪೇಕ್ಷೆ ಮತ್ತು ಆಶೀರ್ವಾದದಿಂದ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿರುವೆ. ಕಾವೇರಿ ಉದ್ಭವಿಸುವ ಸ್ಥಳದಲ್ಲಿ ಸೇವೆಗೆ ಅವಕಾಶ ಸಿಕ್ಕಿರುವುದೇ ಸೌಭಾಗ್ಯ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ತಿಳಿಸಿದ್ದಾರೆ. ದಕ್ಷಿಣ ಕೊಡಗಿನ ಪೊನ್ನಂಪೇಟೆಯ ಬಸ್ ನಿಲ್ದಾಣದಲ್ಲಿ ಇಂದು ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾವೇರಿಯ ಉಗಮ ಸ್ಥಾನ ಮತ್ತು ವೀರ ಪರಂಪರೆಯ ನಾಡಿನಲ್ಲಿ ಸೇವೆಗೆ ಅವಕಾಶ ದೊರಕಿರುವುದು ನನ್ನ ಸೌಭಾಗ್ಯ ಎಂದರು. ಪ್ರಧಾನಮಂತ್ರಿಗಳ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರಕಿದೆ. ನಿಮ್ಮೆಲ್ಲರ ಸೇವೆಯನ್ನು ಪ್ರಾಮಾಣಿಕವಾಗಿ, ಮಾಡಲು ನಾನು ಬದ್ಧ ಎಂದು ಭರವಸೆ ನೀಡಿದರು. ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿಯವರು ಹಲವು ಯೋಜನೆಗಳ ಮೂಲಕ ದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ. ವಿಶ್ವದಲ್ಲೇ ಭಾರತವನ್ನು ಗುರುತಿಸುವ ರೀತಿಯಲ್ಲಿ ಆಡಳಿತ ನಡೆಸಿದ್ದಾರೆ. ಇದುವರೆಗೂ ಆಗದ ಹಲವು ಜನಪರ ಕಾರ್ಯಕ್ರಮಗಳು ಮೋದಿಯವರ ಅವಧಿಯಲ್ಲಿ ಶೀಘ್ರಗತಿಯಲ್ಲಿ ಆಗಿದೆ. ದೇಶದ ಉನ್ನತಿಗಾಗಿ, ದೇಶದ ಉಳಿವಿಗಾಗಿ, ಸಾಮಾಜಿಕ…
ಮಡಿಕೇರಿ ಏ.7 NEWS DESK : ಬಿಜೆಪಿ ಯುವಮೋರ್ಚಾ ಮಡಿಕೇರಿ ಗ್ರಾಮಾಂತರ ಮಂಡಲದ ಮೊದಲ ಕಾರ್ಯಕಾರಿಣಿ ಸಭೆ ಪಕ್ಷದ ಕಚೇರಿಯಲ್ಲಿಮಂಡಲ ಯುವಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಯುವಮೋರ್ಚಾದ ನೂತನ ಪದಾಧಿಕಾರಿಗಳಿಗೆ ಅದೇಶಪತ್ರವನ್ನು ವಿತರಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಯಾವ ರೀತಿಯಾಗಿ ತೊಡಗಿಸಿಕೊಳ್ಳ ಬೇಕು ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಮೋರ್ಚಾದ ಸದಸ್ಯರ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಎಲ್ಲಾ ಶಕ್ತಿಕೇಂದ್ರ ಅಥವಾ ಬೂತ್ ಮಟ್ಟದಲ್ಲಿ ಯುವಮೋರ್ಚಾದ ತಂಡಗಳ ರಚನೆಗೆ ಸೂಚಿಸಲಾಯಿತು. ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನೋದ್ ಸಂಘಟನಾತ್ಮಕ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಯುವಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಮಜೀಕೊಡಿ ಸ್ವಾಗತಿಸಿದರು, ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ದರ್ಶನ್ ದಂಬೆಕೋಡಿ ವಂದಿಸಿದರು.
ಮಡಿಕೇರಿ ಏ.7 NEWS DESK : ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏ.4ರಂದು ವ್ಯಕ್ತಿಯೋರ್ವರನ್ನು ಅಪಹರಿಸಿ ಚಿನ್ನಾಭರಣ ಮತ್ತು ನಗದು ದೋಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ. ಮೈಸೂರು ರಾಜೀವ್ ನಗರ 2ನೇ ಹಂತದ ನಿವಾಸಿ ಯಾಸಿನ್(21), ಶ್ರೀರಾಮ್ಪುರ ನಿವಾಸಿ ರುಕ್ಸಾನ(23), ಗೌಸಿಯ ನಗರ ರಿಯಾಜ್ ಜಿನ್ನಾ ಮಸೀದಿ ಸಮೀಪದ ನಿವಾಸಿ ಸಹಬಾಜ್(28), ಗೌಸಿಯ ನಗರ 10ನೇ ಕ್ರಾಸ್ ನಿವಾಸಿ ಅಬ್ದುಲ್(21) ರೇಣುಕಾ ದೇವಿ ಬ್ಲಾಕ್, 3ನೇ ಕ್ರಾಸ್, ಗೌಸಿಯ ನಗರದ ಸುಹೇಲ್ ಅಹಮ್ಮದ್(30), ಪಿರಿಯಾಪಟ್ಟಣ ನಿವಾಸಿ ಯಾಸಿನ್(23), ಗೌಸಿಯಾ ನಗರದ ಪೈಜಲ್ ಖಾನ್(23), ಮೈಸೂರು ರಾಜೀವ್ ನಗರ 3ನೇ ಹಂತದ ಮುದಾಸಿರ್(24) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ಗೌಸಿಯಾ ನಗರದ ಪಿಳ್ಳೆ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ::: ಅಪಹರಣ ಮತ್ತು ದರೋಡೆ :::…
ಮಡಿಕೇರಿ ಏ.7 NEWS DESK : ಕಾಂಗ್ರೆಸ್ ಎಲ್ಲೂ ಧರ್ಮಾಧಾರಿತ ರಾಜಕಾರಣ ಮಾಡುತ್ತಿಲ್ಲ, ಜನಸಾಮಾನ್ಯರ ಪರವಾದ ಕಾರ್ಯಕ್ರಮಗಳ ಮೂಲಕ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಿದಿದೆ. ಈ ಬಗ್ಗೆ ಜನ ಜಾಗೃತರಾಗಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕರ ನಿವಾಸದ ಆವರಣದಲ್ಲಿ ನಡೆದ ವಲಯ, ಬೂತ್ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಅಭಿವೃದ್ಧಿಪರ ಚಿಂತನೆಯ ರಾಜಕಾರಣ ಮಾಡಿದರೆ, ಬಿಜೆಪಿ ಧರ್ಮವನ್ನು ಆಧರಿಸಿ ರಾಜಕಾರಣ ಮಾಡಿ ಸಮಜದಲ್ಲಿ ಸಂಘರ್ಷವನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತದೆ ಎಂದು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದ ಐದು ಗ್ಯಾರಂಟಿಗಳನ್ನು ಜನ ಮೆಚ್ಚಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಮತದಾರರು ನಮ್ಮ ಕೈಹಿಡಿಯಲಿದ್ದಾರೆ. ಆದರೆ ಕಾಂಗ್ರೆಸ್ಸಿಗರು ಮೈಮರೆಯಬಾರದು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಗೆಲುವಿಗಾಗಿ ಪರಿಶ್ರಮ ಪಡಬೇಕು.…
ಮಡಿಕೇರಿ ಏ.7 NEWS DESK : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ತಡೆಯಲಾಗದ ಉಷ್ಣಾಂಶದಿಂದ ಜನ ತತ್ತರಿಸಿ ಹೋಗಿದ್ದು, ಇಂದು ಜಿಲ್ಲೆಯ ವಿವಿಧೆಡೆ ಸುರಿದ ಹೂಮಳೆ ಕೊಂಚ ನೆಮ್ಮದಿಯನ್ನು ತಂದಿದೆ. ಅತಿಹೆಚ್ಚು ವರ್ಷಧಾರೆಯಾಗುವ ಭಾಗಮಂಡಲದಲ್ಲಿ ವರ್ಷದ ಮೊದಲ ಮಳೆ ಇಂದು ಸುರಿಯಿತು. ಚೇರಂಬಾಣೆ, ನಾಪೋಕ್ಲು, ಎಮ್ಮೆಮಾಡು, ನೆಲಜಿ, ಕಾರುಗುಂದ, ಕಡಿಯತ್ತೂರು ಸುತ್ತಮುತ್ತಲ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ. ::: ಪೂಜೆ ::: ಕಾವೇರಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಉಷ್ಣಾಂಶ ಮಿತಿ ಮೀರುತ್ತಿರುವುದರಿಂದ ನದಿ ಮತ್ತು ಜಲಮೂಲಗಳು ಬತ್ತಿ ಹೋಗಿವೆ. ಗಿಡಮರಗಳು ಒಣಗಲು ಆರಂಭಗೊಂಡಿವೆ, ಕೃಷಿ ಫಸಲಿಗೆ ಹಾನಿಯಾಗಿದೆ. ಪರಿಸ್ಥಿತಿ ಕೈಮೀರುತ್ತಿರುವುದರಿಂದ ಕೊಡಗಿನ ಮಳೆ ದೇವರೆಂದೇ ನಂಬಿಕೊಂಡು ಬಂದಿರುವ ಪಾಡಿ ಶ್ರೀಇಗ್ಗುತ್ತಪ್ಪನಿಗೆ ಏ.8 ರಂದು ಸ್ಥಳೀಯ ಭಕ್ತಜನ ಸಂಘ ಹಾಗೂ ಭಕ್ತರು ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ, ಅಭಿಷೇಕ ಅರ್ಪಿಸಲಿದ್ದಾರೆ.
ಮಡಿಕೇರಿ ಏ.7 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಿಧಾನವಾಗಿ ಲೋಕಸಭಾ ಚುನಾವಣೆ ಕಾವೇರುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿರುವುದರಿಂದ ಎಂ.ಲಕ್ಷ್ಮಣ್ ಗೌಡ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಸ್ವತ: ಮುಖ್ಯಮಂತ್ರಿಗಳು ಏ.14 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಮತ್ತು ಸಂಜೆ 4 ಗಂಟೆಗೆ ವಿರಾಜಪೇಟೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳು ಹಾಗೂ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರುಗಳು ಹಾಜರಿರುವರು ಎಂದು ಕಾಂಗ್ರೆಸ್ ಪ್ರಮುಖರು ತಿಳಿಸಿದ್ದಾರೆ.
ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯ ಮತದಾನವು ಇದೇ ಏ.26ರಂದು ನಡೆಯಲಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವಿಗೆ ಪ್ರತಿ ಮತಗಟ್ಟೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬಿಎಲ್ಎ ಗಳು, ಡೆಲಿಗೇಟರ್ಗಳು, ವಲಯ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರುಗಳು ಶಕ್ತಿಮೀರಿ ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಕರೆ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರುಗಳ, ಬಿಎಲ್ಎ ಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮಡಿಕೇರಿ ಬ್ಲಾಕಿನಲ್ಲಿ 72 ಮತಗಟ್ಟೆಗಳಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗಳಿಸಿದ ಮತಕ್ಕಿಂತ ಹೆಚ್ಚಿನ ಮತವನ್ನು ಪಡೆಯುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಹಾಗೂ ಸರ್ಕಾರ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತಯಾಚಿಸಬೇಕೆಂದರು.…
ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದರಿಂದ ಹತಾಶೆಗೊಂಡಿರುವ ವಿರಾಜಪೇಟೆ ಕ್ಷೇತ್ರದ ಶಾಸಕರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಜನರ ಕೈಗೆ ಸಿಗುವುದಿಲ್ಲವೆಂದು ಹೇಳಿಕೆ ನೀಡುವ ಮೂಲಕ ಮತದಾರರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ರಾಜಪ್ರಭುತ್ವ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯದುವೀರ್ ಅವರು ಒಬ್ಬ ಸಾಮಾನ್ಯ ವ್ಯಕ್ತಿ ಮತ್ತು ಈಗ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಒಡೆಯರ್ ವಂಶಸ್ಥರಾಗಿ ಹಾಗೂ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರ ಸಂಕಷ್ಟದ ಬದುಕನ್ನು ಬಹಳ ಹತ್ತಿರದಿಂದ ಬಲ್ಲವರಾಗಿದ್ದಾರೆ ಎಂದು ತಿಳಿಸಿದ್ದಾರೆ. ರಾಜವಂಶಸ್ಥರು ಅರಮನೆಯಲ್ಲಿದ್ದುಕೊಂಡೇ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದ ಉದಾಹರಣೆಗಳು ಇತಿಹಾಸದ ಪುಟಗಳಲ್ಲಿದೆ. ರಾಜ್ಯದ ರೈತರು ಹಾಗೂ ಜನರಿಗಾಗಿ ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಕೆಆರ್ಎಸ್ ಅಣೆಕಟ್ಟು ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಜನರು ಇಂದಿಗೂ ಇದೆಲ್ಲವನ್ನು ಮರೆತಿಲ್ಲ,…






