ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಪರ ಏ.8ರಂದು ಸೋಮವಾರಪೇಟೆ ಮಂಡಲದ ವಿವಿಧ ಭಾಗಗಳಲ್ಲಿ ಬಹಿರಂಗ ಪ್ರಚಾರ ಸಭೆ ನಡೆಯಲಿದೆ ಎಂದು ಬಿಜೆಪಿ ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಹಾಗೂ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಾದಾಪುರ, 10 ಗಂಟೆಗೆ ಸುಂಟಿಕೊಪ್ಪ, 11.30 ಗಂಟೆಗೆ ಸೋಮವಾರಪೇಟೆ, ಮಧ್ಯಾಹ್ನ 2 ಗಂಟೆಗೆ ಶನಿವಾರಸಂತೆ, 3 ಗಂಟೆಗೆ ಕೊಡ್ಲಿಪೇಟೆ, ಸಂಜೆ 4 ಗಂಟೆಗೆ ಆಲೂರು ಸಿದ್ದಾಪುರ, 5 ಗಂಟೆಗೆ ಹೆಬ್ಬಾಲೆ, 6 ಗಂಟೆಗೆ ಕುಶಾಲನಗರ ಹಾಗೂ 7 ಗಂಟೆಗೆ ನೆಲ್ಯಹುದುಕೇರಿಯಲ್ಲಿ ಬಹಿರಂಗ ಪ್ರಚಾರ ಸಭೆ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅಭ್ಯರ್ಥಿ ಯದುವೀರ್ ಒಡೆಯರ್, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ ಗೌಡ, ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ,…
ಲೇಖಕ: admin
ಮಡಿಕೇರಿ ಏ.7 NEWS DESK : ಗಾಂಧೀಜಿ ಅನುಯಾಯಿಯಾಗುವುದು ಸುಲಭವಲ್ಲದ ದಿನಗಳಲ್ಲಿ ಗಾಂಧೀಜಿ ತತ್ವಾದಶ೯ಗಳನ್ನು ಜೀವನದಲ್ಲಿ ಹಾಸುಹೊಕ್ಕಾಗಿಸಿ ಸರಳವಾಗಿ ಆದಶ೯ಪ್ರಾಯವಾಗಿ ಬದುಕಿದ ಹಿರಿಮೆ ಕೂತಂಡ ಪಾವ೯ತಿ ಪೂವಯ್ಯ ಅವರಿಗೆ ಸಲ್ಲಬೇಕೆಂದು ಹಿರಿಯ ಪತ್ರಕತ೯ ಕೆ.ಬಿ.ಗಣಪತಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಭಾರತೀಯ ವಿದ್ಯಾಭವನದಲ್ಲಿ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ವತಿಯಿಂದ ಆಯೋಜಿತ ಕೂತಂಡ ಪಾವ೯ತಿ ಪೂವಯ್ಯ ಅವರ ಕುರಿತಾದ ಅವ್ವ ಪುಸ್ತಕ ಲೋಕಾಪ೯ಣೆಗೊಳಿಸಿ ಮಾತನಾಡಿದ ಕೆ.ಬಿ.ಗಣಪತಿ, ಪಂದ್ಯಂಡ ಗಣಪತಿಯವರು ಅಂದಿನ ಕಾಲದಲ್ಲಿ ಕೊಡಗಿನ ಗಾಂಧಿ ಎಂದು ಖ್ಯಾತರಾಗಿದ್ದರೆ ಕೂತಂಡ ಪೂವ೯ತಿ ಪೂವಯ್ಯ ಅವರು ಕೊಡಗಿನ ಸರೋಜಿನಿ ನಾಯ್ದು ಎಂದು ಹೆಸರುವಾಸಿಯಾಗಿದ್ದರು ಎಂದು ಸ್ಮರಿಸಿಕೊಂಡರು. ಕೂತಂಡ ಪಾವ೯ತಿ ಅವರನ್ನು ಪ್ರತ್ಯಕ್ಷ ಕಂಡವುರು ಕೆಲವೇ ಕೆಲವರಾದರೂ ಪಾವ೯ತಿ ಅವರ ಜೀವನಾದಶ೯ಗಳನ್ನು ಅರಿತವರು ಅನೇಕರಿದ್ದಾರೆ. ತನ್ನ ಬರವಣಿಗೆ ಮೂಲಕ ಕೊಡವರಂಥ ಸಣ್ಣ ಸಮುದಾಯವನ್ನು ಭಾರತಾದ್ಯಂತ ಪ್ರಚುರಪಡಿಸಿದ ಕೀತಿ೯ ಅಂದಿನ ಕಾಲದ ಅಗ್ರ ಮಹಿಳಾ ಲೇಖಕಿಯಾಗಿದ್ದ ಪಾವ೯ತಿ ಪೂವಯ್ಯನವರಿಗೆ ಸಲ್ಲುತ್ತದೆ ಎಂದು ಗಣಪತಿ ಶ್ಲಾಘಿಸಿದರು. ಕೊಡವ, ಕನ್ನಡ, ಇಂಗ್ಲೀಷ್ ಭಾಷೆಯಲ್ಲಿ…
NEWS DESK : ಶೋಭಕೃತ್ ನಾಮಸಂವತ್ಸರದ ಪಾಲ್ಗುಣ ಮಾಸದ ಕೊನೆಯ ಅಮಾವಾಸ್ಯೆಯಂದು ಅತ್ಯಂತ ಕಠೋರವಾದ ಸೂರ್ಯನ ಮೈತುಂಬಾ ಕತ್ತಲೆ ವ್ಯಾಪಿಸುವ ವರ್ಷದ ಮೊದಲ ಸೂರ್ಯಗ್ರಹಣ 2024 ಏಪ್ರಿಲ್ 8 ರಂದು ಸೋಮವಾರ ಸಂಭವಿಸಲಿದೆ. ಈ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ, ಉತ್ತರ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊ ದೇಶಗಳಲ್ಲಿ ಸ್ಪಷ್ಟವಾಗಿ ಗೋಚರಿಸಲಿದೆ. ಗ್ರಹಣ ಸಂಭವಿಸುವ ಸಮಯ ಭಾರತದ ಕಾಲಮಾನದಲ್ಲಿ ಸೋಮವಾರ ರಾತ್ರಿ 9:13 ಗಂಟೆಯಿಂದ ರಿಂದ 2.22 ವರೆಗೆ. ಭಾರತ ದೇಶದಲ್ಲಿ ಗ್ರಹಣ ಗೋಚರಿಸದೆ ಇದ್ದರೂ ಕೆಲವು ರಾಶಿ, ನಕ್ಷತ್ರಗಳ ಮೇಲೆ ಗ್ರಹಣ ಪರಿಣಾಮ ಬೀರಲಿದೆ. ಗ್ರಹಣದ ದಿನ ರೇವತಿ ನಕ್ಷತ್ರವಿದ್ದು, ರೇವತಿ ನಕ್ಷತ್ರ ಮೀನ ರಾಶಿಯವರಿಗೆ ಶನಿಬಾಧಕವು ಹೆಚ್ಚಾಗಲಿದೆ. ಬಂಧು ಕಲಹ, ಪ್ರಯಾಣದಲ್ಲಿ ಅಡೆತಡೆ, ವ್ಯವಹಾರದಲ್ಲಿ ನಷ್ಟ, ಮಾನಸಿಕ ವೇದನೆ ಆಗಲಿದೆ. ವೃಶ್ಚಿಕ ಲಗ್ನದಲ್ಲಿ ಗ್ರಹಣ ಸ್ಪರ್ಶವಾಗುವುದರಿಂದ ವೃಶ್ಚಿಕ ರಾಶಿಯವರಿಗೆ ವಿವಿಧ ಕ್ಷೇತ್ರದಲ್ಲಿ ಹಿನ್ನಡೆಯಾಗಲಿದೆ. ಮಾನಸಿಕ ವೇದನೆ ಎದುರಾಗಲಿದೆ, ಮನಸ್ತಾಪದಿಂದ ಆತ್ಮೀಯರು ದೂರವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಸಾಲಗಾರರ ಒತ್ತಡ ಹೆಚ್ಚಲಿದೆ. ಈ…
ಮಡಿಕೇರಿ ಏ.6 NEWS DESK : ರಾಜ್ಯದಲ್ಲಿ ಬಿಜೆಪಿ ಮತ್ತು ಜಾತ್ಯಾತೀತ ಜನತಾ ದಳ ಮೈತ್ರಿ ಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಕೊಡಗಿನಲ್ಲಿ ಕೂಡ ಎರಡು ಪಕ್ಷದ ಮೈತ್ರಿ ಸಭೆ ಮಡಿಕೇರಿ ಯಲ್ಲಿ ನಡೆಯಿತು. ಸಭೆ ಯಲ್ಲಿ ಮುಂದಿನ ಲೋಕ ಸಭಾ ಚುನಾವಣೆ ಯನ್ನು ಜಂಟಿ ಯಾಗಿ ಎದುರುಸುವ ತೀರ್ಮಾನ ವನ್ನು ಮಾಡಲಾಯಿತು. ಈ ನಿಟ್ಟಿನಲ್ಲಿ ಕಾರ್ಯ ತಂತ್ರ ರೂಪಿಸುವಂತೆ ಚರ್ಚೆ ನಡೆಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಾತ್ಯಾತೀತ ಜನತಾ ದಳದ ಕೋರ್ ಕಮಿಟಿ ಸದಸ್ಯರಾದ ಟಿ.ಎಲ್.ವಿಶ್ವ, ಪ್ರವೀಣ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಮಹೇಶ್ ಜೈನಿ, ವಿ.ಕೆ.ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಹಾಗೂ ಎರಡು ಪಕ್ಷದ ಪ್ರಮುಖರಾದ ಪಾಣ್ ತಲೆ ವಿಶ್ವ ನಾಥ್, ನಾಗರಾಜ್, ಅನಿತಾ ಪೂವಯ್ಯ, ಕನ್ನಿಕೆ, ಮನು ಮಂಜುನಾಥ್, ಪುಷ್ಪವತಿ, ಗೌತಮ್ , ಕವನ್ ಕಾವೇರಪ್ಪ, ಮಂಜುನಾಥ್, ಶಿವದಾಸ್, ಜಾಶಿರ್, ಸುರೇಶ್, ರವಿ ಮೊಗೇರ ಸೇರಿದಂತೆ ಎರಡು…
ಮಡಿಕೇರಿ ಏ.6 NEWS DESK : ವಿಶ್ವ ಆರೋಗ್ಯ ದಿನದ ಪ್ರಯುಕ್ತ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನಗರದ ರಾಜಸೀಟ್ ಮುಂಭಾಗದಲ್ಲಿ ಬೀದಿ ನಾಟಕ ನಡೆಯಿತು. ಈ ಬೀದಿನಾಟಕದಲ್ಲಿ ಕಡ್ಡಿಪುಡಿ ಹಾಕಿ ಗಂಟಲಿನ ಕ್ಯಾನ್ಸರ್, ಮದ್ಯಪಾನ ಮತ್ತು ಧೂಮಪಾನದಿಂದ ಹೃದಯಾಘಾತ ಹಾಗೂ ಧೂಮಪಾನದ ಹೊಗೆಯ ಪ್ರಭಾವದಲ್ಲಿರುವ, ಚಟ ಇಲ್ಲದವರಿಗೂ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಪ್ರಾಂಶುಪಾಲರಾದ ಡಾ.ನರಸಿಂಹ ರೈ, ವೈದ್ಯಕೀಯ ಅಧೀಕ್ಷಕರಾದ ಡಾ.ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ ಈ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಬೀದಿ ನಾಟಕವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೊದಲನೆಯ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು, ಕಿವಿ, ಮೂಗು ಗಂಟಲಿನ ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತ ಅವರು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೊಡಗು ವೈದ್ಯಕೀಯ…
ಮಡಿಕೇರಿ ಏ.6 NEWS DESK : ಲೋಕಸಭಾ ಚುನಾವಣೆಯ ಮತದಾನವು ಇದೇ ಏ.26ರಂದು ನಡೆಯಲಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವಿಗೆ ಪ್ರತಿ ಮತಗಟ್ಟೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬಿಎಲ್ಎ ಗಳು, ಡೆಲಿಗೇಟರ್ಗಳು, ವಲಯ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರುಗಳು ಶಕ್ತಿ ಮೀರಿ ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಕರೆ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರುಗಳ, ಬಿಎಲ್ಎ ಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಡಿಕೇರಿ ಬ್ಲಾಕಿನಲ್ಲಿ 72 ಮತಗಟ್ಟೆಗಳಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗಳಿಸಿದ ಮತಕ್ಕಿಂತ ಹೆಚ್ಚಿನ ಮತವನ್ನು ಪಡೆಯುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಹಾಗೂ ಸರ್ಕಾರ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್…
ಮಡಿಕೇರಿ ಏ.6 NEWS DESK : ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆಯಾಗಿ ಕರ್ತಂಡ ಶೈಲಾ ಕುಟ್ಟಪ್ಪ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಆದೇಶದ ಮೇರೆಗೆ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್ ಅವರು ಶೈಲಾ ಕುಟ್ಟಪ್ಪ ಅವರನ್ನು ನೇಮಕ ಮಾಡಿ ಪಕ್ಷದ ಮಹಿಳಾ ಘಟಕವನ್ನು ಸಂಘಟಿಸಲು ಸೂಚನೆ ನೀಡಿದ್ದಾರೆ.
ಮಡಿಕೇರಿ ಏ.6 NEWS DESK : ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಗಳ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ದರ್ಗಾಗಳಲ್ಲಿ ಉರೂಸ್ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಉಲ್ಭಣಗೊಳ್ಳದಂತೆ ತೆಗೆದುಕೊಳ್ಳಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳು: ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟೆಲ್ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ ಮಾಹಿತಿ ಕಲೆ ಹಾಕಿ, ಎಲ್ಲಾ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ…
ಮಡಿಕೇರಿ ಏ.6 NEWS DESK : ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ವೇವ್ (ಶಾಖದ ಹೊಡೆತ) ಸ್ಟ್ರೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಲಹೆಗಳನ್ನು ನೀಡಿದೆ. ಬೇಸಿಗೆಯಲ್ಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ಅನುಸರಿಸಬೇಕಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಹಾಗೂ ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು…
ಪುತ್ತೂರು NEWS DESK ಏ.6 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಮೇದಿನೀ ಟೆಕ್ನಾಲಜೀಸ್ ಬೆಂಗಳೂರು ಇದರ ಸಹಯೋಗದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಂಶೋಧನಾ ನಿರತರಿಗೆ ಹಾಗೂ ವೃತ್ತಿಪರರಿಗೆ ಅನುಕೂಲವಾಗುವ ರೀತಿಯಲ್ಲಿ ತಂತ್ರಜ್ಞಾನಗಳ ಬದಲಾವಣೆ, ನೂತನ ಸಾಫ್ಟ್ವೇರ್ಗಳ ಬಳಕೆಯ ಬಗ್ಗೆ ಮಾಹಿತಿ, ವೃತ್ತಿಪರರಿಗೆ ಹೊಸ ಸಾಫ್ಟ್ವೇರ್ಗಳ ಮೂಲಕ ಮಾಡೆಲ್ಗಳ ರಚನೆ, ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಗಳನ್ನು ಮಾಡುವುದಕ್ಕೆ ಸೂಕ್ತ ಮಾರ್ಗದರ್ಶನ ಇವೇ ಮುಂತಾದ ವಿಷಯಗಳ ಬಗ್ಗೆ ಪರಸ್ಪರ ಸಹಕಾರದ ಬಗ್ಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿವಿಧ ವಲಯಗಳಲ್ಲಿ ಇಂತಹ ಕೇಂದ್ರವನ್ನು ತೆರೆದಿದ್ದು ಮಂಗಳೂರು ವಲಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ತೆರೆಯಲಾಗಿದೆ. ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರ ಸಮ್ಮುಖದಲ್ಲಿ ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಹಾಗೂ ಮೇದಿನಿ ಸಂಸ್ಥೆಯ…






